ಅಂತಾರಾಜ್ಯ ‌ಡ್ರಗ್ಸ್ ಮಾರಾಟಗಾರರ ಬಂಧನ

ಮಂಗಳೂರು: ಅಂತರಾಜ್ಯ ಗಾಂಜಾ ಮಾರಾಟ ಜಾಲವನ್ನು ಬೇಧಿಸಿರುವ ಮಂಗಳೂರು ನಗರ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿ ಅವರಿಂದ 22 ಕೆ.ಜಿ. 250 ಗ್ರಾಂ ತೂಕದ ಗಾಂಜಾ ವಶಕ್ಕೆ ಪಡೆದಿದ್ದಾರೆ. ಪಣಂಬೂರು ಠಾಣಾ ವ್ಯಾಪ್ತಿಯ ಜೋಕಟ್ಟೆ ಕ್ರಾಸ್ ರೈಲ್ವೆ ಬ್ರಿಡ್ಜ್ ಹತ್ತಿರ ಅಕ್ರಮ ಗಾಂಜಾ ಮಾರಾಟ ನಡೆಯುತ್ತಿರುವ ಖಚಿತ ಮಾಹಿತಿಯನ್ವಯ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದು, ಆರೋಪಿಗಳನ್ನು ಬಂಧಿಸಿರುವುದಾಗಿದೆ. ಆರೋಪಿಗಷನ್ನು ಕರಣ್ ಬಾಬು ರಾಮ್ ಜಾದವ್, ಸಮೀರ್ ಶಾ, MH ಮಯ್ಯದಿ, ಇಬ್ರಾಹಿಂ ಕರೀಂ ಎಂದು ಗುರುತಿಸಲಾಗಿದೆ. ಆರೋಪಿಗಳ […]

ಅಂತಾರಾಜ್ಯ ‌ಡ್ರಗ್ಸ್ ಮಾರಾಟಗಾರರ ಬಂಧನ Read More »

ಚಿನ್ನ ಕದ್ದ ಆರೋಪ: ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಮಹಿಳೆ

ಕಾಸರಗೋಡು: ನೆರೆಮನೆಯಿಂದ ಚಿನ್ನ ಕದ್ದ ಆರೋಪ ಹೊತ್ತಿದ್ದ ಮಹಿಳೆಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ನಾಲತ್ತಡ್ಕದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಜಸೀಲಾ(24) ಎಂದು ಗುರುತಿಸಲಾಗಿದೆ. ಜಸೀಲಾ ಸಾವಿಗೂ ಮುನ್ನ ವಿಡಿಯೋ ಒಂದನ್ನು ಮಾಡಿದ್ದು, ಅದರಲ್ಲಿ ತಾನು ಯಾವ ಚಿನ್ನವನ್ನೂ ಕದ್ದಿಲ್ಲ. ನಾನೇನೂ ತಪ್ಪು ಮಾಡಿಲ್ಲ. ನಾನು ಚಿನ್ನ ಕದ್ದಿದ್ದಾಗಿ ಆರೋಪಿಸಿ ಪೊಲೀಸರು ಮನೆಯನ್ನು ಶೋಧಿಸಿದರು. ಇದರಿಂದ ನನ್ನ ಮನೆಯವರು ತೀವ್ರ ನೊಂದಿದ್ದಾರೆ. ನಾನು ಕದ್ದಿದ್ದರೆ ಅಲ್ಲವೇ ಕೊಡುವುದು. ಇಲ್ಲವಾದರೆ ಎಲ್ಲಿಂದ ತಂದು ಕೊಡಲಿ. ನಾನು ಸತ್ತರೆ

ಚಿನ್ನ ಕದ್ದ ಆರೋಪ: ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಮಹಿಳೆ Read More »

ಮಂಗಳೂರು ನಗರದಲ್ಲೂ ಚಿರತೆ ಓಡಾಟ!

ಜನವಸತಿ ಪ್ರದೇಶದಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿರುವ ಚಿರತೆಯಿಂದ ಆತಂಕ ಮಂಗಳೂರು: ನಗರದ ಮರೋಳಿ ಮತ್ತು ಶಕ್ತಿನಗರ ಪರಿಸರದಲ್ಲಿ ಚಿರತೆ ಆಗಾಗ ಕಾಣಿಸಿಕೊಳ್ಳುತ್ತಿದ್ದು, ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಭಾನುವಾರ ಬೆಳಗ್ಗೆಯೂ ಚಿರತೆ ಪ್ರತ್ಯಕ್ಷವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಫೆಬ್ರವರಿ 17ರಿಂದ ಶಕ್ತಿನಗರ, ಮರೋಳಿ ಮತ್ತು ಹತ್ತಿರದ ರೈಲ್ವೆ ಹಳಿ ಬಳಿ ಪ್ರತಿದಿನ ಚಿರತೆ ಕಾಣಿಸಿಕೊಳ್ಳುತ್ತಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಶಕ್ತಿನಗರದ ಮನೆಯೊಂದರ ಕಾಂಪೌಂಡ್ ಒಳಗೆ ಚಿರತೆಯು ಗೇಟ್ ಮೂಲಕ ಪ್ರವೇಶಿಸುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಸತಿ

ಮಂಗಳೂರು ನಗರದಲ್ಲೂ ಚಿರತೆ ಓಡಾಟ! Read More »

ಬುಲೆಟ್‌ನಲ್ಲಿ ಜಾಲಿ ರೈಡ್‌ ಮಾಡುವಾಗ ಅಪಘಾತ : ಓರ್ವ ಯುವತಿ ಸಾವು, ಇನ್ನೋರ್ವ ಗಂಭೀರ

ಹೆಲ್ಮೆಟ್‌ ಧರಿಸದೆ ಬೈಕ್‌ ಚಲಾಯಿಸುವಾಗ ಹಂಪ್‌ನಲ್ಲಿ ಪಲ್ಟಿ ಬೆಂಗಳೂರು : ಬುಲೆಟ್ ಬೈಕ್‌ನಲ್ಲಿ ಸ್ನೇಹಿತೆಯರಿಬ್ಬರು ಜಾಲಿ ರೈಡ್‌ ಮಾಡುವಾಗ ಅಪಘಾತ ಸಂಭವಿಸಿದ ಓರ್ವ ಯುವತಿ ಮೃತಪಟ್ಟು ಇನ್ನೋರ್ವ ಯುವತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನದಲ್ಲಿ ಸಂಭವಿಸಿದೆ. ಬೈಕ್‌ ವೇಗವಾಗಿ ಚಲಾಯಿಸುವಾಗ ಹಂಪ್ಸ್ ಕಾಣದೆ ಬೈಕ್‌ ಪಲ್ಟಿಯಾಗಿ ಯುವತಿಯವರು ರಸ್ತೆಗೆ ಹಾರಿ ಬಿದ್ದಿದ್ದು, ಪರಿಣಾಮ ಓರ್ವ ಯುವತಿ ಸಾವನ್ನಪ್ಪಿದ್ದಾಳೆ. ಹಾಸನ ನಗರ ಕೈಗಾರಿಕಾ ಪ್ರದೇಶದಲ್ಲಿ ಈ ಅಪಘಾತ ನಡೆದಿದ್ದು, ಇಬ್ಬರೂ ಹೆಲ್ಮೆಟ್‌ ಧರಿಸಿರಲಿಲ್ಲ ಎನ್ನಲಾಗಿದೆ. ಸತ್ಯಮಂಗಲ ಬಡಾವಣೆಯ ಪ್ರಿಯಾ

ಬುಲೆಟ್‌ನಲ್ಲಿ ಜಾಲಿ ರೈಡ್‌ ಮಾಡುವಾಗ ಅಪಘಾತ : ಓರ್ವ ಯುವತಿ ಸಾವು, ಇನ್ನೋರ್ವ ಗಂಭೀರ Read More »

ಅಕ್ಷಯ ಕಾಲೇಜಿನ ಎನ್‌ಎಸ್‌ಎಸ್ ಸೇವಾ ಶಿಬಿರ

ಸಂಪ್ಯ: ಅಕ್ಷಯ ಕಾಲೇಜು ಪುತ್ತೂರು ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ ಇದರ ನೇತೃತ್ವದಲ್ಲಿ ‘ನನ್ನ ಭಾರತಕ್ಕಾಗಿ ಯುವ ಜನತೆ, ಡಿಜಿಟಲ್ ಸಾಕ್ಷರತೆಗಾಗಿ ಯುವಜನತೆ’ ಎಂಬ ಶಿರೋನಾಮೆಯೊಂದಿಗೆ ವಾರ್ಷಿಕ ವಿಶೇಷ ಶಿಬಿರ 2025-26 ಪ್ರಾರಂಭ ಗೊಂಡಿತು. ಶಿಬಿರವನ್ನು ಶ್ರೀ ರಾಮಚಂದ್ರ ಪದವಿಪೂರ್ವ ವಿದ್ಯಾಲಯ ಅಯೋಧ್ಯಾ ನಗರ ಪೆರ್ನೆ ಇಲ್ಲಿ ಆಯೋಜಿಸಲಾಯಿತು. ಹರೀಶ್ ಭಂಡಾರಿ ಟಿ, ವಕೀಲರು ಉಚ್ಚನ್ಯಾಯಾಲಯ, ಬೆಂಗಳೂರು ಸಂಚಾಲಕರು ಶ್ರೀ ರಾಮಚಂದ್ರ ವಿದ್ಯಾಲಯ ಅಯೋಧ್ಯಾ ನಗರ ಪೆರ್ನೆ ಇವರು ಉದ್ಘಾಟಿಸಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಜಯಂತ ನಡುಬೈಲು

ಅಕ್ಷಯ ಕಾಲೇಜಿನ ಎನ್‌ಎಸ್‌ಎಸ್ ಸೇವಾ ಶಿಬಿರ Read More »

ಸ್ನೇಹಮಯಿ ಕೃಷ್ಣ ವಿರುದ್ಧ ಇನ್ನೊಂದು ಕೇಸ್‌

ದೂರು ನೀಡಿದ ಎರಡು ತಿಂಗಳ ಬಳಿಕ ಎಫ್‌ಐಆರ್‌ ದಾಖಲು ಬೆಂಗಳೂರು: ಮುಡಾ ಹಗರಣದ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಿಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.ಪವಿತ್ರ ಎಂಬ ಮಹಿಳೆ ಕೊಟ್ಟ ದೂರಿನ ಆಧಾರದ ಮೇಲೆ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಬೆದರಿಕೆ ಹಾಗೂ ಪ್ರೊ.ಮೈಲಾರಪ್ಪ ವಿರುದ್ಧ ಕೊಟ್ಟಿರುವ ಕೇಸ್ ವಾಪಸ್ ಪಡೆದುಕೊಳ್ಳುವಂತೆ ಬೆದರಿಕೆ ಹಾಗೂ ಒತ್ತಡ ಹಾಕುತ್ತಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಮಹಿಳೆ ಕೊಟ್ಟ ದೂರಿನ ಆಧಾರದ ಮೇಲೆ ಸ್ನೇಹಮಯಿ ಕೃಷ್ಣ ಅವರನ್ನು ಎ1 ಆರೋಪಿಯನ್ನಾಗಿ

ಸ್ನೇಹಮಯಿ ಕೃಷ್ಣ ವಿರುದ್ಧ ಇನ್ನೊಂದು ಕೇಸ್‌ Read More »

ಡ್ರಗ್ಸ್‌ ಜಾಲದ ದೊರೆ ಎಲ್‌ ಮೆಂಚೊನ್ನು ಹತ್ಯೆ ಮಾಡಿದ ಮೆಕ್ಸಿಕೊ ಸೇನೆ

ಜಗತ್ತಿನ ಅತಿ ಪ್ರಬಲ ಡ್ರಗ್ಸ್‌ ಜಾಲದ ಮುಖಂಡ ಎಲ್‌ ಮೆಂಚೊ ಮೆಕ್ಸಿಕೊ: ಮೆಕ್ಸಿಕೊದ ಅತಿದೊಡ್ಡ ಮಾದಕವಸ್ತು ಜಾಲದ ದೊರೆ ನೆಮೆಸಿಯೊ ಎಲ್ ಮೆಂಚೊ ಒಸೆಗುರಾ ಎಂಬಾತನನ್ನು ಮೆಕ್ಸಿಕೊದ ಸೇನೆ ಹತ್ಯೆ ಮಾಡಿದೆ. ಆ ಬಳಿಕ ಮೆಕ್ಸಿಕೊ ನಗರದಲ್ಲಿ ಎಲ್‌ ಮೆಂಚೊನ ಗ್ಯಾಂಗಿನವರು ವ್ಯಾಪಕ ಹಿಂಚಾಚಾರ ಪ್ರಾರಂಭಿಸಿದ್ದು, ವಾಹನ, ಅಂಗಡಿ ಮುಂಗಟ್ಟುಗಳಿಗೆ ಬೆಂಕಿ ಹಚ್ಚಿದ್ದಾರೆ. ಜಲಿಸ್ಕೊ ​​ನ್ಯೂ ಜನರೇಷನ್ ಕಾರ್ಟೆಲ್‌ ಎಂಬ ಮಾದಕವಸ್ತು ಜಾಲದ ನಾಯಕ 59 ವರ್ಷದ ಎಲ್ ಮೆಂಚೊ ಜಲಿಸ್ಕೊ ​​ರಾಜ್ಯದ ಟಪಲ್ಪಾ ಪಟ್ಟಣದಲ್ಲಿ ಸೈನಿಕರೊಂದಿಗಿನ

ಡ್ರಗ್ಸ್‌ ಜಾಲದ ದೊರೆ ಎಲ್‌ ಮೆಂಚೊನ್ನು ಹತ್ಯೆ ಮಾಡಿದ ಮೆಕ್ಸಿಕೊ ಸೇನೆ Read More »

ರೈತರ ಮೇಲೆ ಲಾಠಿ ಚಾರ್ಜ್‌ ಖಂಡಿಸಿ ಇಂದು ಶೃಂಗೇರಿ ಬಂದ್‌

ಕಾಡಾನೆ ದಾಳಿಯ ವಿರುದ್ಧ ಪ್ರತಿಭಟಿಸುತ್ತಿದ್ದವರ ಮೇಲೆ ಲಾಠಿ ಚಾರ್ಜ್‌ ಚಿಕ್ಕಮಗಳೂರು: ಕಾಡಾನೆ ದಾಳಿಗೆ ಮಹಿಳೆ ಬಲಿಯಾಗಿದ್ದ ಪ್ರಕರಣ ಸಂಬಂಧ ಸರ್ಕಾರ, ಅರಣ್ಯ ಇಲಾಖೆ ವಿರುದ್ಧ ನಡೆಸಿದ ಪ್ರತಿಭಟನೆ ವೇಳೆ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಮಾಡಿರುವುದನ್ನು ಖಂಡಿಸಿ ಇಂದು (ಫೆ.23) ಶೃಂಗೇರಿ, ಎನ್.ಆರ್.ಪುರ, ಕೊಪ್ಪ, ಖಾಂಡ್ಯ ಹೋಬಳಿ ಬಂದ್‌ಗೆ ಕರೆ ನೀಡಲಾಗಿದೆ. ರೈತ ಸಂಘಟನೆಗಳು ಬೆಳಗ್ಗೆ 8ರಿಂದ ಸಂಜೆ 5ರತನಕ ಬಂದ್‌ಗೆ ಕರೆ ನೀಡಿದ್ದು, ನಾಗರಿಕ ಹಿತ ರಕ್ಷಣಾ ವೇದಿಕೆ, ರೈತ ಒಕ್ಕೂಟ, ಆಟೋ ಚಾಲಕ-ಮಾಲೀಕರ ಸಂಘ,

ರೈತರ ಮೇಲೆ ಲಾಠಿ ಚಾರ್ಜ್‌ ಖಂಡಿಸಿ ಇಂದು ಶೃಂಗೇರಿ ಬಂದ್‌ Read More »

ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

ಬಂಗಾಲದ ರಾಜಕೀಯ ಚಾಣಕ್ಯ ಎಂಬ ಹಿರಿಮೆ ಹೊಂದಿದ್ದ ನಾಯಕ ಕೋಲ್ಕತ್ತಾ: ಮಾಜಿ ರೈಲ್ವೆ ಸಚಿವ ಮತ್ತು ಒಂದು ಕಾಲದಲ್ಲಿ ತೃಣಮೂಲ ಕಾಂಗ್ರೆಸ್‌ನ ಎರಡನೇ ಕಮಾಂಡರ್ ಆಗಿದ್ದ ಮುಕುಲ್ ರಾಯ್ 71ನೇ ವಯಸ್ಸಿನಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ರಾಯ್ ಅವರನ್ನು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಮಧ್ಯರಾತ್ರಿ 1.30ರ ಸುಮಾರಿಗೆ ಕೊನೆಯುಸಿರೆಳೆದರು. ನಿನ್ನೆ ರಾತ್ರಿ ಸುಮಾರು 1.30ರ ಸುಮಾರಿಗೆ ಅವರಿಗೆ ತೀವ್ರ ಹೃದಯಾಘಾತವಾಯಿತು. ವೈದ್ಯರ ಪ್ರಯತ್ನಗಳ ಹೊರತಾಗಿಯೂ ಅವರು ಬದುಕುಳಿಯಲು ಸಾಧ್ಯವಾಗಲಿಲ್ಲ ಎಂದು ಅವರ ಮಗ ಸುಭ್ರಾಂಗ್ಶು

ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ Read More »

ಬಾಗಲಕೋಟೆಯಲ್ಲಿ ಫೆ.26ರಂದು ಮತ್ತೆ ಶಿವಾಜಿ ಜಯಂತಿ ಆಚರಣೆ

ಕಲ್ಲು ತೂರಾಟದಿಂದ ಬೂದಿ ಮುಚ್ಚಿದ ಕೆಂಡದಂತಿರುವ ಬಾಗಲಕೋಟೆ ಬಾಗಲಕೋಟೆ: ಶಿವಾಜಿ ಜಯಂತಿಯ ಮೆರವಣಿಗೆಮೇಲೆ ಮಸೀದಿಯಿಂದ ಕಲ್ಲು ಮತ್ತು ಚಪ್ಪಲಿ ತೂರಿದ ಘಟನೆಯ ಬಳಿಕ ಪ್ರಕ್ಷುಬ್ಧಗೊಂಡಿರುವ ಬಾಗಲಕೋಟೆಯಲ್ಲಿ ಮತ್ತೊಮ್ಮೆ ಶಿವಾಜಿ ಜಯಂತಿ ನಡೆಸಲು ನಿರ್ಧರಿಸಲಾಗಿದೆ. ಕಲ್ಲು ತೂರಾಟ ನಡೆದಿದ್ದ ಬಾಗಲಕೋಟೆಯ ಕಿಲ್ಲಾ ಓಣಿ ಸಹಜ ಸ್ಥಿತಿಗೆ ಬಂದಿದೆ. ಕೊತ್ತಲೇಶ್ವರ ದೇವಸ್ಥಾನ ಹಾಗೂ ಪಂಕಾ ಮಸೀದಿ ಆವರಣದಲ್ಲಿ ಎಂದಿನಂತೆ ವ್ಯಾಪಾರ ವಹಿವಾಟು ಆರಂಭವಾಗಿದೆ. ಈ ಬೆನ್ನಲ್ಲೇ ಹಿಂದೂ ಸರ್ವ ಸಮಾಜದ ಮುಖಂಡರು ಭಾನುವಾರ ನಡೆಸಿದ ಸಭೆಯಲ್ಲಿ ಮತ್ತೊಮ್ಮೆ ಶಿವಾಜಿ ಜಯಂತಿ

ಬಾಗಲಕೋಟೆಯಲ್ಲಿ ಫೆ.26ರಂದು ಮತ್ತೆ ಶಿವಾಜಿ ಜಯಂತಿ ಆಚರಣೆ Read More »

error: Content is protected !!
Scroll to Top