ಡಿ.10: ಉಚಿತ ವೈದ್ಯಕೀಯ ತಪಾಸಣೆ, ಚಿಕಿತ್ಸಾ ಶಿಬಿರ

ಪುತ್ತೂರು: ಪುರುಷರಕಟ್ಟೆ ಆತ್ರೇಯ ಮಲ್ಟಿಸ್ಪೆಷಾಲಿಟಿ ಕ್ಲಿನಿಕ್ ಸಂಯೋಜನೆಯಲ್ಲಿ ಬೆದ್ರಾಳ ಶ್ರೀ ನಂದಿಕೇಶ್ವರ ಭಜನಾ ಮಂದಿರ ಸಹಕಾರದೊಂದಿಗೆ ಉಚಿತ ಆರೋಗ್ಯ ವೈದ್ಯಕೀಯ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ಡಿ.10 ಭಾನುವಾರ ಶ್ರೀ ನಂದಿಕೇಶ್ವರ ಭಜನಾ ಮಂದಿರದ ಆವರಣದಲ್ಲಿ ನಡೆಯಲಿದೆ. ಬ್ರಹ್ಮಶ್ರೀ ಕೆಮ್ಮಿಂಜೆ ಕೇಶವ ತಂತ್ರಿ ಹಾಗೂ ಕೆಮ್ಮಿಂಜೆ ಸುಬ್ರಹ್ಮಣ್ಯ ತಂತ್ರಿಗಳ ಸ್ಮರಣಾರ್ಥವಾಗಿ ಬೆಳಿಗ್ಗೆ 9.30 ರಿಂದ 12.30 ರ ತನಕ ಶಿಬಿರ ನಡೆಯಲಿದೆ. ಶ್ರೀ ನಂದಿಕೇಶ್ವರ ಭಜನಾ ಮಂದಿರದ ಗೌರವಾಧ್ಯಕ್ಷ, ತಂತ್ರಿ ಬ್ರಹ್ಮಶ್ರೀ ಲಕ್ಷ್ಮೀಶ ತಂತ್ರಿ ಕೆಮ್ಮಿಂಜೆ ಶಿಬಿರ […]

ಡಿ.10: ಉಚಿತ ವೈದ್ಯಕೀಯ ತಪಾಸಣೆ, ಚಿಕಿತ್ಸಾ ಶಿಬಿರ Read More »

ಸೋನಿಯಾ ಗಾಂಧಿಗೆ 77ನೇ ಹುಟ್ಟುಹಬ್ಬ | ಪ್ರಧಾನಿ ಸೇರಿದಂತೆ ಗಣ್ಯರಿಂದ ಶುಭಾಶಯ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವರು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ 77ನೇ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ‘ಶ್ರೀಮತಿ ಸೋನಿಯಾ ಗಾಂಧಿಜಿ ಅವರಿಗೆ ಅವರ ಜನ್ಮದಿನದ ಶುಭಾಶಯಗಳು. ಅವರಿಗೆ ದೀರ್ಘ ಮತ್ತು ಆರೋಗ್ಯಕರ ಜೀವನ ದೊರಕಲಿ’ ಎಂದು ಪ್ರಧಾನಿ ಮೋದಿ ಶನಿವಾರ ಟ್ವೀಟ್ ಮಾಡಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟ್ವೀಟ್ ಮಾಡಿದ್ದು, ‘ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿಜಿ ಅವರಿಗೆ ಅವರ ಜನ್ಮದಿನದ ಶುಭಾಶಯಗಳು. ತುಳಿತಕ್ಕೊಳಗಾದ ವ್ಯಕ್ತಿಗಳ

ಸೋನಿಯಾ ಗಾಂಧಿಗೆ 77ನೇ ಹುಟ್ಟುಹಬ್ಬ | ಪ್ರಧಾನಿ ಸೇರಿದಂತೆ ಗಣ್ಯರಿಂದ ಶುಭಾಶಯ Read More »

ಮುಂಬಾಗಿಲಿಗೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿದ್ದ ಗ್ಯಾಂಗನ್ನು ಸೆರೆ ಹಿಡಿದ ಪೊಲೀಸರು!!

ಮನೆಯಂಗಳಕ್ಕೆ ಪ್ರವೇಶಿಸಿದ ನಾಲ್ಕೈದು ಮಂದಿಯ ಗುಂಪು ಮನೆಯ ಬಾಗಿಲಿಗೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಮೀಟರ್ ಬಡ್ಡಿ ವಸೂಲಿಗಾರ ಸುಮಿತ್ ಆಳ್ವ ಅಲಿಯಾಸ್ ಸುಮ್ಮಿ, ಮಹಮ್ಮದ್ ಜುನೈದ್, ಸೀಯಾನ್ ಮತ್ತು ಮಹಮ್ಮದ್ ತೌಫೀಕ್ ನನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಗೇಟ್ ಮುರಿದು ಮುಂಬಾಗಿಲಿಗೆ

ಮುಂಬಾಗಿಲಿಗೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿದ್ದ ಗ್ಯಾಂಗನ್ನು ಸೆರೆ ಹಿಡಿದ ಪೊಲೀಸರು!! Read More »

ಉರ್ದು ಶಾಲೆ ನಡೆಸುತ್ತಿದ್ದ ಶಂಕಿತ ಐಸಿಸ್ ಉಗ್ರ ಸೆರೆ!

ಕರ್ನಾಟಕ ಸೇರಿದಂತೆ ದೇಶದ 44 ಕಡೆಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಶನಿವಾರ ದಾಳಿ ನಡೆಸಿದ್ದು, ಬೆಂಗಳೂರಿನಲ್ಲಿ ಶಂಕಿತ ಐಸಿಸ್‌ ಉಗ್ರನೊಬ್ಬನನ್ನು ಬಂಧಿಸಿದೆ. ಬೆಂಗಳೂರಿನ ಪುಲಿಕೇಶಿನಗರ ವ್ಯಾಪ್ತಿಯಲ್ಲಿ ವಾಸವಾಗಿದ್ದ ಆಲಿ ಅಬ್ಬಾಸ್ ಪೇಟಿವಾಲ ಎಂಬಾತನನ್ನು ಎನ್‌ಐಎ ವಶಕ್ಕೆ ಪಡೆದಿದೆ. ಮೂಲತಃ ಮುಂಬೈ ಮೂಲದ ಆಲಿ ಅಬ್ಬಾಸ್ ಪೇಟಿವಾಲ, ಪುಲಿಕೇಶಿನಗರ ವ್ಯಾಪ್ತಿಯಲ್ಲಿ ಉರ್ದು ಶಾಲೆ ನಡೆಸುತ್ತಿದ್ದ ಎಂದು ಗೊತ್ತಾಗಿದೆ. ಎನ್‌ಐಎ ಈತನನ್ನು ವಶಕ್ಕೆ ಪಡೆದು ಕರೆದೊಯ್ದಿದ್ದು, ಹೆಚ್ಚಿನ ವಿವರಗಳು ದೊರೆಯಬೇಕಿದೆ. ದೇಶಾದ್ಯಂತ ಭಯೋತ್ಪಾದಕ ದಾಳಿ ನಡೆಸಲು ಜಾಗತಿಕ ಭಯೋತ್ಪಾದಕ ಗುಂಪು

ಉರ್ದು ಶಾಲೆ ನಡೆಸುತ್ತಿದ್ದ ಶಂಕಿತ ಐಸಿಸ್ ಉಗ್ರ ಸೆರೆ! Read More »

‘ಮೂರು ಮುತ್ತು’ ನಾಟಕ ಖ್ಯಾತಿಯ ಅಶೋಕ್ ಶಾನುಭಾಗ್ ನಿಧನ!

ರೂಪಕಲಾ ನಾಟಕ ತಂಡದ ಮೂರು ಮುತ್ತು ಖ್ಯಾತಿಯ ಅಶೋಕ್ ಶಾನುಭಾಗ್ ಅವರು ಅನಾರೋಗ್ಯದಿಂದ ಶುಕ್ರವಾರ ರಾತ್ರಿ ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಇವರು `ಮೂರು ಮುತ್ತು’, `ಅವನಲ್ಲ ಇವನು’, `ಪಾಪ ಪಾಂಡು’, `ಅಳುವುದೋ ನಗುವುದೋ’, `ರಾಮ ಕೃಷ್ಣ ಗೋವಿಂದ’ ಸೇರಿದಂತೆ ಇನ್ನು ಹಲವಾರು ನಾಟಕಗಳಲ್ಲಿ ಹಾಸ್ಯ ಪಾತ್ರದಿಂದ ಮಿಂಚಿದ್ದರು. ಕೆಲ ಸಮಯದಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ. ಮೃತರ ಅಂತ್ಯ ಸಂಸ್ಕಾರ ಶನಿವಾರ ಕುಂದಾಪುರದಲ್ಲಿ ನಡೆಯಲಿದೆ.

‘ಮೂರು ಮುತ್ತು’ ನಾಟಕ ಖ್ಯಾತಿಯ ಅಶೋಕ್ ಶಾನುಭಾಗ್ ನಿಧನ! Read More »

ತುಳು ಸಿನಿಮಾಗಳಲ್ಲೂ ಮಿಂಚಿದ್ದ ಲೀಲಾವತಿ!

ಮಂಗಳೂರು: ತುಳುವಿನ 8 ಸಿನಿಮಾಗಳಲ್ಲಿ ಅಭಿನಯಿಸಿರುವ ನಟಿ ಲೀಲಾವತಿ ಅವರು, ತುಳು ಸಿನಿಮಾಗಳ ನಿರ್ಮಾಣಕ್ಕೂ ಸಹಾಯ ಹಸ್ತ ಚಾಚಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಮೂಲದವರಾಗಿರುವ ಅವರು, ಕಂಕನಾಡಿಯ ಸೈಂಟ್ ಜೋಸೆಫ್ ಎಲಿಮೆಂಟರಿ ಸ್ಕೂಲಿನಲ್ಲಿ 2ನೇ ತರಗತಿ ಕಲಿತವರು. ಆಗ ಲೀಲಾ ಕಿರಣ್ ಎಂಬ ಹೆಸರಿನಿಂದ ಕರೆಸಿಕೊಂಡಿದ್ದ ಅವರು, ಬಳಿಕ ಲೀಲಾವತಿಯಾಗಿ ಕರುನಾಡಿನ ಕಣ್ಮಣಿಯಾಗಿ ಬೆಳೆದರು. ತುಳು ಭಾಷೆಯ 2ನೇ ಸಿನಿಮಾ 1971ರಲ್ಲಿ ತೆರೆಕಂಡ `ದಾರೆದ ಬುಡೆದಿ’, 1972ರಲ್ಲಿ ತೆರೆಕಂಡ `ಪಗೆತ ಪುಗೆ’ ಹಾಗೂ `ಬಿಸತ್ತಿ ಬಾಬು’,

ತುಳು ಸಿನಿಮಾಗಳಲ್ಲೂ ಮಿಂಚಿದ್ದ ಲೀಲಾವತಿ! Read More »

ರವೀಂದ್ರ ಕಲಾಕ್ಷೇತ್ರದಲ್ಲಿ ನಟಿ ಲೀಲಾವತಿ ಅಂತಿಮ ದರ್ಶನಕ್ಕೆ ವ್ಯವಸ್ಥೆ | ಮಧ್ಯಾಹ್ನದ ಬಳಿಕ ಅಂತ್ಯಕ್ರಿಯೆ

ಬೆಂಗಳೂರು: ವಯೋಸಹಜ ಅನಾರೋಗ್ಯದಿಂದ ನಿಧನರಾಗಿರುವ ನಟಿ ಲೀಲಾವತಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಶಿವಶಂಕರ್ ಮಾಹಿತಿ ನೀಡಿದ್ದಾರೆ. ಬೆಳಿಗ್ಗೆ 5:30 ಕ್ಕೆ ನೆಲಮಂಗಲದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿದ್ದು, ಬಳಿಕ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆಯಾಗಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.  ನಟಿ ಲೀಲಾವತಿ ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಡಿ. 8ರಂದು ಸಂಜೆ ಕೊನೆಯುಸಿರೆಳೆದರು. ನೆಲಮಂಗಲದ ಜ್ಯೂನಿಯರ್ ಕಾಲೇಜು ಎದುರಿನ ಅಂಬೇಡ್ಕರ್ ಮೈದಾನದಲ್ಲಿ ಪಾರ್ಥಿವ

ರವೀಂದ್ರ ಕಲಾಕ್ಷೇತ್ರದಲ್ಲಿ ನಟಿ ಲೀಲಾವತಿ ಅಂತಿಮ ದರ್ಶನಕ್ಕೆ ವ್ಯವಸ್ಥೆ | ಮಧ್ಯಾಹ್ನದ ಬಳಿಕ ಅಂತ್ಯಕ್ರಿಯೆ Read More »

ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾದವರಿಗೆ ಅಭಿನಂದನೆ

ಪುತ್ತೂರು: ದರ್ಬೆ ಲಿಟ್ಲ್ ಫ್ಲವರ್ ಶಾಲೆಯ ಬಾಲಕಿಯರ ಕಬಡ್ಡಿ ತಂಡ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದು, ಶಾಲೆಯಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಿತು. ಬೆಥನಿ ಸಂಸ್ಥೆಯ ಮಂಗಳೂರು ಪ್ರಾಂತ್ಯದ ಮುಖ್ಯಸ್ಥರ ಸಲಹೆಗಾರ್ತಿ, ವಂ. ರೋಶಲ್ ಬಿ.ಎಸ್. ಅಧ್ಯಕ್ಷೆತೆ ವಹಿಸಿ ತಂಡವನ್ನು ಅಭಿನಂದಿಸಿದರು. ಮುಖ್ಯ ಅತಿಥಿಗಳಾಗಿ ಬೆಥನಿ ಸಂಸ್ಥೆಯ ಮಂಗಳೂರು ಪ್ರಾಂತ್ಯದ ಲೆಕ್ಕ ಪರಿಶೋಧಕಿ ವಂ. ಸಿಬಿಲ್ ಬಿ.ಎಸ್., ಶಾಲಾ ಸಂಚಾಲಕಿ ವಂ. ಪ್ರಶಾಂತಿ ಬಿ.ಎಸ್., ಕಾರ್ಯಕ್ರಮ ಪ್ರಾಯೋಜಕರಾದ ಸುನೀತಾ ದಲ್ಮೆದಾ, ಡಾ. ಶ್ರೀಪ್ರಕಾಶ್, ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷ ರಾಮಚಂದ್ರ

ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾದವರಿಗೆ ಅಭಿನಂದನೆ Read More »

ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ ಕನ್ನಡ ಭಾಷಾ ರಸಪ್ರಶ್ನೆ

ಪುತ್ತೂರು: ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ವೀರಮಂಗಲ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಜಂಟಿ ಆಶ್ರಯದಲ್ಲಿ ಭಾರತೀಯ ಭಾಷಾ ಉತ್ಸವದ ಅಂಗವಾಗಿ ಕನ್ನಡ ಭಾಷಾ ರಸಪ್ರಶ್ನೆ ಕಾರ್ಯಕ್ರಮ ವೀರಮಂಗಲ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ರಂಗ ಕಲಾವಿದ  ರಂಗಯ್ಯ ಬಳ್ಳಾಲ್ ಕೆದಂಬಾಡಿ ಬೀಡು ಅವರು ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಏರ್ಪಡಿಸಿದ್ದರು. ಒಂದನೇ ತರಗತಿಯಿಂದ 7ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ರಸಪ್ರಶ್ನೆ ಏರ್ಪಡಿಸಿ, ಬಹುಮಾನ ಹಾಗೂ ಪ್ರಮಾಣ ಪತ್ರ ವಿತರಿಸಲಾಯಿತು.

ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ ಕನ್ನಡ ಭಾಷಾ ರಸಪ್ರಶ್ನೆ Read More »

ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ಸದಸ್ಯರ ಮಹಾ ಒಕ್ಕೂಟದ ಜಿಲ್ಲಾಧ್ಯಕ್ಷರಾಗಿ ಹರೀಶ್ ಉಬರಡ್ಕ

ಪುತ್ತೂರು: ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ಸದಸ್ಯರ ಮಹಾ ಒಕ್ಕೂಟದ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾಗಿ ಸುಳ್ಯ ತಾಲೂಕಿನ ಉಬರಡ್ಕ ಮಿತ್ತೂರು ಗ್ರಾಮ ಪಂಚಾಯಿತಿ ಸದಸ್ಯ ಹರೀಶ್ ಉಬರಡ್ಕ ನೇಮಕಗೊಂಡಿದ್ದಾರೆ. ಮಹಾ ಒಕ್ಕೂಟದ ರಾಜ್ಯಾಧ್ಯಕ್ಷರಾದ ಕಾಡಶೆಟ್ಟಿಹಳ್ಳಿ ಸತೀಶ್ ಅವರು ಈ ನೇಮಕ ಮಾಡಿದ್ದಾರೆ. ಹರೀಶ್ ಉಬರಡ್ಕ ಅವರು ನಾಲ್ಕು ಬಾರಿ ಉಬರಡ್ಕ ಗ್ರಾಪಂನ ಅಧ್ಯಕ್ಷರಾಗಿ, ಸದಸ್ಯರಾಗಿ, ಸಹಕಾರಿ ಸಂಘದ ನಿರ್ದೇಶಕರಾಗಿ, ಸುಳ್ಯ ತಾಲೂಕು ಸಹಕಾರಿ ಯೂನಿಯನ್ ಅಧ್ಯಕ್ಷರಾಗಿ, ವಿವಿಧ ಸಂಘ – ಸಂಸ್ಥೆಗಳಲ್ಲಿ ಸಕ್ರೀಯವಾಗಿ ಗುರುತಿಸಿಕೊಂಡಿದ್ದಾರೆ. ಬೆಂಗಳೂರಿನ

ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ಸದಸ್ಯರ ಮಹಾ ಒಕ್ಕೂಟದ ಜಿಲ್ಲಾಧ್ಯಕ್ಷರಾಗಿ ಹರೀಶ್ ಉಬರಡ್ಕ Read More »

error: Content is protected !!
Scroll to Top