ಹೆಂಡತಿ, ಇಬ್ಬರು ಮಕ್ಕಳ ಅಮಾನುಷವಾಗಿ ಹತ್ಯೆಗೈದು ತಾನು ಆತ್ಮಹತ್ಯೆ ಮಾಡಿಕೊಂಡ ವೈದ್ಯ!!

ವೈದ್ಯರೊಬ್ಬರು ತಮ್ಮ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಕೊಲೆ ಮಾಡಿ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ರಾಯ್ ಬರೇಲಿಯ ರೈಲ್ವೇಸ್ ಕಾಲೋನಿಯಲ್ಲಿ ನಡೆದಿದೆ. ರೈಲ್ವೇಯಲ್ಲಿ ವೈದ್ಯಕೀಯ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಕಣ್ಣಿನ ತಜ್ಞ ಡಾ.ಅರುಣ್ ಕುಮಾರ್ ಅವರನ್ನು ರಾಯ್ ಬರೇಲಿಯಲ್ಲಿರುವ ಮಾಡರ್ನ್ ರೈಲ್ ಕೋಚ್ ಫ್ಯಾಕ್ಟರಿಯಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು ಎನ್ನಲಾಗಿದೆ. ಮಿರ್ಜಾಪುರದ ನಿವಾಸಿಯಾಗಿರುವ ಡಾ. ಕುಮಾರ್ ಅವರು ತಮ್ಮ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ರಾಯ್ ಬರೇಲಿಯ ರೈಲ್ವೇ ಕ್ವಾರ್ಟರ್ಸ್‌ನಲ್ಲಿ ವಾಸವಾಗಿದ್ದರು. ಕಳೆದ […]

ಹೆಂಡತಿ, ಇಬ್ಬರು ಮಕ್ಕಳ ಅಮಾನುಷವಾಗಿ ಹತ್ಯೆಗೈದು ತಾನು ಆತ್ಮಹತ್ಯೆ ಮಾಡಿಕೊಂಡ ವೈದ್ಯ!! Read More »

ಮೋದಿಗೆ ಬೇಡಿ ಹಾಕುವೆ ಎಂದ ಪಾಕ್ ಸೈನ್ಯಾಧಿಕಾರಿಯ ಬಾಯಿಗೆ ಬೀಗ ಜಡಿದ ನೆಟ್ಟಿಗರು!

ಭಾರತ ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಬಗ್ಗೆ ನಾಲಿಗೆ ಹರಿಬಿಟ್ಟು ಮಂದಿಯ ಮುಂದೆ ಚಪ್ಪಾಳೆ ಗಿಟ್ಟಿಸಿಕೊಂಡ ಪಾಕಿಸ್ತಾನದ ಸೇನಾಧಿಕಾರಿಯೊಬ್ಬ ಆನ್‌ಲೈನ್‌ನಲ್ಲಿ ಭರ್ಜರಿ ಟ್ರೋಲ್‌ ಆಗುತ್ತಿದ್ದಾನೆ. ಪಾಕಿಸ್ತಾನದ ರಾಜಕಾರಣಿಗಳು ಹಾಗೂ ಕ್ರಿಕೆಟಿಗರು ಭಾರತದ ವಿರುದ್ಧ ಅಬ್ಬರದ ಹೇಳಿಕೆಗಳನ್ನು ನೀಡುವುದು ಸಾಮಾನ್ಯ. ಕಡೆಗೆ ತಮ್ಮ ನಾಲಿಗೆ ತಾವೇ ಕಚ್ಚಿಕೊಳ್ಳುವುದೂ ಸಾಮಾನ್ಯ. ಇದೂ ಕೂಡ ಅಂಥದೇ ಘಟನೆ. ಪಾಕಿಸ್ತಾನ ಸೇನೆಯ ಹಿರಿಯ ಅಧಿಕಾರಿಯೊಬ್ಬ ಒಂದಷ್ಟು ಜನರ ಗುಂಪಿನ ನಡುವೆ “ಭಾರತವನ್ನು ವಶಪಡಿಸಿಕೊಳ್ಳುತ್ತೇವೆ, ಪ್ರಧಾನಿ ನರೇಂದ್ರ ಮೋದಿಯನ್ನು ಬಂಧಿಸುತ್ತೇವೆ ಎಂದೆಲ್ಲಾ ಹೇಳಿದ್ದಾನೆ.

ಮೋದಿಗೆ ಬೇಡಿ ಹಾಕುವೆ ಎಂದ ಪಾಕ್ ಸೈನ್ಯಾಧಿಕಾರಿಯ ಬಾಯಿಗೆ ಬೀಗ ಜಡಿದ ನೆಟ್ಟಿಗರು! Read More »

ಸಂಸತ್ ಮೇಲೆ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿದ ಪನ್ನುನ್!!

ನವದೆಹಲಿ: ಖಲಿಸ್ತಾನಿ ಭಯೋತ್ಪಾದಕ ಗುರ್ಪತ್‌ವಂತ್ ಸಿಂಗ್ ಪನ್ನುನ್ ಮತ್ತೆ ಬೆದರಿಕೆ ಹಾಕುವ ಮೂಲಕ ಪ್ರಚಾರದಲ್ಲಿದ್ದಾನೆ. ಈ ಬಾರಿ ಡಿಸೆಂಬರ್ 13ರಂದು ಅಥವಾ ಅದಕ್ಕೂ ಮೊದಲು ಭಾರತೀಯ ಸಂಸತ್ತಿನ ಮೇಲೆ ದಾಳಿ ನಡೆಸುವುದಾಗಿ ಹೇಳಿರುವ ವೀಡಿಯೊವನ್ನು ಬಿಡುಗಡೆ ಮಾಡಿದ್ದಾನೆ. 2001ರಲ್ಲಿ ಸಂಸತ್ ಮೇಲೆ ದಾಳಿ ನಡೆಸಿದ ಅಪರಾಧಿ ಅಫ್ಜಲ್ ಗುರುವಿನ ಪೋಸ್ಟರ್ ಅನ್ನು ಒಳಗೊಂಡಿರುವ ವೀಡಿಯೊ ಒಂದನ್ನು ಬಿಡುಗಡೆ ಮಾಡಿದ್ದು ಅದರಲ್ಲಿ ‘ದೆಹಲಿ ಬನೇಗಾ ಖಲಿಸ್ತಾನ್’ ಎಂಬ ಶೀರ್ಷಿಕೆಯನ್ನು ಹಾಕಲಾಗಿದೆ. ವಿಡಿಯೋದಲ್ಲಿ ತನ್ನನ್ನು ಕೊಲ್ಲಲು ಭಾರತ ನಡೆಸಿದ ಸಂಚು

ಸಂಸತ್ ಮೇಲೆ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿದ ಪನ್ನುನ್!! Read More »

ಅಂಬಾರಿ ಹೊತ್ತಿದ್ದ ಅರ್ಜುನನ ಸಾವು: ಸಂಪೂರ್ಣ ತನಿಖೆಗೆ ಸೂಚನೆ

ಬೆಂಗಳೂರು: ಎಂಟು ಬಾರಿ ದಸರಾ ಅಂಬಾರಿ ಹೊತ್ತಿದ್ದ ಆನೆ ಅರ್ಜುನ ಸಾವಿಗೀಡಾಗಿರುವುದು ದುರದೃಷ್ಟಕರ. ಘಟನೆ ಬಗ್ಗೆ ಸಂಪೂರ್ಣ ತನಿಖೆ ಮಾಡುವಂತೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಡಾ: ಬಿ.ಆರ್.ಅಂಬೇಡ್ಕರ್ ಅವರ 67ನೇ ಮಹಾಪರಿನಿರ್ವಾಣದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾಧ್ಯಮದೊಂದಿಗೆ ಮಾತನಾಡಿದರು. ಅರ್ಜುನ ಆನೆ ಪ್ರಾಣ ಕಳೆದುಕೊಂಡ ಸ್ಥಳದಲ್ಲೇ ಸ್ಮಾರಕ ನಿರ್ಮಾಣ ಮಾಡಲಾಗುವುದು ಹಾಗೂ ಹೆಗ್ಗಡದೇವನ ಕೋಟೆಯಲ್ಲೂ ಸ್ಮಾರಕವಾಗಬೇಕೆಂದು ಸೂಚಿಸಿರುವುದಾಗಿ ಮುಖ್ಯಮಂತ್ರಿ ತಿಳಿಸಿದರು. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ಬಳಿಯ ದಬ್ಬಳಿಕಟ್ಟೆ ಅರಣ್ಯದಲ್ಲಿ

ಅಂಬಾರಿ ಹೊತ್ತಿದ್ದ ಅರ್ಜುನನ ಸಾವು: ಸಂಪೂರ್ಣ ತನಿಖೆಗೆ ಸೂಚನೆ Read More »

ಫಿಲೋಮಿನಾ ಪ. ಪೂ ಕಾಲೇಜಿನ ವಿಂಧ್ಯಾಶ್ರೀ ರೈ ರಾಜ್ಯಮಟ್ಟಕ್ಕೆ ಆಯ್ಕೆ

ಪುತ್ತೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಮಂಡ್ಯ ಕೊಮ್ಮೇರಹಳ್ಳಿ ವಿಶ್ವಮಾನವ ಪ. ಪೂ ಕಾಲೇಜಿನಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಕನ್ನಡ ಚರ್ಚಾ ಸ್ಪರ್ಧೆಯಲ್ಲಿ  ಪುತ್ತೂರು ಸಂತ ಫಿಲೋಮಿನಾ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿಂಧ್ಯಾಶ್ರೀ ರೈ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅವರು ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನ ಶಿರಸಿ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯವರು ಶ್ರೀ ಮದ್ ಭಗವದ್ಗೀತಾ ಜಯಂತಿ ಪ್ರಯುಕ್ತ ನಡೆಸಿದ ಜಿಲ್ಲಾ ಮಟ್ಟದ

ಫಿಲೋಮಿನಾ ಪ. ಪೂ ಕಾಲೇಜಿನ ವಿಂಧ್ಯಾಶ್ರೀ ರೈ ರಾಜ್ಯಮಟ್ಟಕ್ಕೆ ಆಯ್ಕೆ Read More »

ಡಾ.ಬಿ.ಆರ್.ಅಂಬೇಡ್ಕರ್ ಪುಣ್ಯತಿಥಿ : ಮಹಾಪರಿನಿರ್ವಾಣ ದಿನ ಆಚರಣೆ

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಡಾ.ಬಿ. ಆರ್ ಅಂಬೇಡ್ಕರ್ ರವರ ಪುಣ್ಯತಿಥಿಯ ಪ್ರಯುಕ್ತ ಮಹಾಪರಿನಿರ್ವಾಣ ದಿನವನ್ನು ಬುಧವಾರ ಆಚರಿಸಲಾಯಿತು. ಸಂಸ್ಥೆಯ ಹಳೆಯ ವಿದ್ಯಾರ್ಥಿ, ವಕೀಲ ತೇಜಸ್ ಕೊಂಬೆಟ್ಟು ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು, ಡಾ.ಬಿ. ಆರ್ ಅಂಬೇಡ್ಕರ್ ರವರ ಜೀವನ ಶೈಲಿ, ಅವರ ರಾಷ್ಟ್ರೀಯ ಚಿಂತನೆಗಳು ಎಲ್ಲರಿಗೂ ಸ್ಪೂರ್ತಿ. ಅವರು ಉತ್ತಮ ನ್ಯಾಯವಾದಿಯೂ ಆಗಿದ್ದು ಸಮಾಜದಲ್ಲಿದ್ದ ಲಿಂಗ ತಾರತಮ್ಯದ ಕುರಿತಾಗಿ ಧ್ವನಿ ಎತ್ತಿದವರಲ್ಲಿ ಒಬ್ಬರು. ಜೊತೆಗೆ ರಾಷ್ಟ್ರ ವಿಭಜನೆಯ ಸಂದರ್ಭದಲ್ಲಿ ತಮ್ಮ ನಿಲುವನ್ನು ಪ್ರತಿಪಾದಿಸುತ್ತಾ ಹೋರಾಟ ನಡೆಸಿದವರು ಎಂದು

ಡಾ.ಬಿ.ಆರ್.ಅಂಬೇಡ್ಕರ್ ಪುಣ್ಯತಿಥಿ : ಮಹಾಪರಿನಿರ್ವಾಣ ದಿನ ಆಚರಣೆ Read More »

ರಾಮಕುಂಜ ನಿವಾಸಿ ನೇಣು ಬಿಗಿದು ಆತ್ಮಹತ್ಯೆ

ಕಡಬ: ತಾಲೂಕಿನ ರಾಮಕುಂಜ ಗ್ರಾಮದ ಕಲ್ಲೇರಿ ನಿವಾಸಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ನಡೆದಿದೆ. ಚಂದಪ್ಪ ಕುಲಾಲ್‍ (52) ಆತ್ಮಹತ್ಯೆ ಮಾಡಿಕೊಂಡವರು. ಕೂಲಿ ಕಾರ್ಮಿಕರಾಗಿದ್ದ ಚಂದಪ್ಪ ಕುಲಾಲ್, ಬೆಳಿಗ್ಗೆ ತೋಟಕ್ಕೆ ಹೋದವರು ಅಡಿಕೆ ಮರಗಳ ಮಧ್ಯೆ ಕಬ್ಬಿಣದ ಸಲಾಕೆ ಕಟ್ಟಿ ಕುತ್ತಿಗೆಗೆ ಹಗ್ಗ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.

ರಾಮಕುಂಜ ನಿವಾಸಿ ನೇಣು ಬಿಗಿದು ಆತ್ಮಹತ್ಯೆ Read More »

ಹೆಚ್ಚುತ್ತಿದೆ ಭಾರತ – ಪಾಕ್ ಪ್ರೇಮ ಪ್ರಸಂಗ!! | ಕೋಲ್ಕತಾ ನಿವಾಸಿಯನ್ನು ವರಿಸಲು ಬಂದ ಕರಾಚಿಯ ಜವೇರಿಯಾ!

ಚಂಡೀಗಢ: ಭಾರತ-ಪಾಕಿಸ್ಥಾನಗಳ ನಡುವಿನ ಪ್ರೇಮಪ್ರಸಂಗಗಳು ಹೆಚ್ಚುತ್ತಿವೆ. ಕೆಲವು ತಿಂಗಳ ಹಿಂದೆ ಪಾಕಿಸ್ಥಾನಿ ಸೀಮಾ ಹೈದರ್‌ ಭಾರತಕ್ಕೆ ಆಗಮಿಸಿ, ಸಚಿನ್‌ ಮೀನಾರನ್ನು ವಿವಾಹವಾಗಿದ್ದಾರೆ. ಅದರ ಬೆನ್ನಲ್ಲೇ ರಾಜಸ್ಥಾನದ ಅಂಜು ಎಂಬಾಕೆ ಪಾಕಿಸ್ಥಾನಕ್ಕೆ ತೆರಳಿದ್ದರು. ಇದೀಗ ಕರಾಚಿಯ ಜವೇರಿಯಾ ಖಾನುಮ್‌ ವಾಘಾ-ಅಟ್ಟಾರಿ ಅಂತಾರಾಷ್ಟ್ರೀಯ ಗಡಿಯನ್ನು ದಾಟಿ ಮಂಗಳವಾರ ಭಾರತಕ್ಕೆ ಆಗಮಿಸಿದ್ದಾರೆ. ಅವರ ಉದ್ದೇಶ ಕೋಲ್ಕತಾದಲ್ಲಿರುವ ತಮ್ಮ ಪ್ರಿಯಕರ ಸಮೀರ್‌ ಖಾನ್‌ರನ್ನು ವಿವಾಹವಾಗುವುದು. ಜವೇರಿಯಾರನ್ನು ಅಮೃತಸರ ಜಿಲ್ಲೆಯ ಅಟ್ಟಾರಿಯಲ್ಲಿ ವರನ ಕಡೆಯವರು ಆತ್ಮೀಯವಾಗಿ ಬರಮಾಡಿಕೊಂಡರು. ಮುಂದಿನ ವರ್ಷ ಜನವರಿಯಲ್ಲಿ ಸಮೀರ್‌ ಖಾನ್‌ರೊಂದಿಗೆ

ಹೆಚ್ಚುತ್ತಿದೆ ಭಾರತ – ಪಾಕ್ ಪ್ರೇಮ ಪ್ರಸಂಗ!! | ಕೋಲ್ಕತಾ ನಿವಾಸಿಯನ್ನು ವರಿಸಲು ಬಂದ ಕರಾಚಿಯ ಜವೇರಿಯಾ! Read More »

ಹೈಕೋರ್ಟ್‌ ವೀಡಿಯೊ ಕಾನ್ಫರೆನ್ಸ್‌ನಲ್ಲಿ ಅಶ್ಲೀಲ ಚಿತ್ರ ಪ್ರದರ್ಶನ!! | ಕೋರ್ಟ್‌ಗಳ ವಿಡಿಯೊ ಕಾನ್ಫರೆನ್ಸ್‌, ಲೈವ್‌ ಸ್ಟ್ರೀಮಿಂಗಿಗೆ ನಿರ್ಬಂಧ

ಬೆಂಗಳೂರು: ಕರ್ನಾಟಕ ಹೈಕೋರ್ಟ್‌ನ ವಿವಿಧ ಕೋರ್ಟ್‌ ಹಾಲ್ ಗಳ ವೀಡಿಯೊ ಕಾನ್ಫರೆನ್ಸ್‌ ವಿಚಾರಣೆ ವೇಳೆ ಅಶ್ಲೀಲ ಚಿತ್ರ ಪ್ರದರ್ಶಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಅನಾಮಿಕರ ವಿರುದ್ಧ ಮಂಗಳವಾರ ಎಫ್‌ಐಆರ್‌ ದಾಖಲಾಗಿದೆ. ಹೈಕೋರ್ಟ್‌ ಕಂಪ್ಯೂಟರ್ಸ್‌ ರಿಜಿಸ್ಟ್ರಾರ್‌ ಕಚೇರಿಯ ಎನ್‌. ಸುರೇಶ್‌ ಅವರು ನೀಡಿದ ದೂರಿನ ಅನ್ವಯ ಅನಾಮಿಕರ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯಿದೆ ಸೆಕ್ಷನ್‌ಗಳಾದ 67 ಮತ್ತು 67(ಎ) ಅಡಿ ಕೇಂದ್ರೀಯ ಸೈಬರ್ ಅಪರಾಧ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ದೂರಿನ ಸಾರಾಂಶ: ಕರ್ನಾಟಕ ಹೈಕೋರ್ಟ್‌ನ 6, 12, 18,

ಹೈಕೋರ್ಟ್‌ ವೀಡಿಯೊ ಕಾನ್ಫರೆನ್ಸ್‌ನಲ್ಲಿ ಅಶ್ಲೀಲ ಚಿತ್ರ ಪ್ರದರ್ಶನ!! | ಕೋರ್ಟ್‌ಗಳ ವಿಡಿಯೊ ಕಾನ್ಫರೆನ್ಸ್‌, ಲೈವ್‌ ಸ್ಟ್ರೀಮಿಂಗಿಗೆ ನಿರ್ಬಂಧ Read More »

ಕೆಂಪುಹೊಳೆಯಲ್ಲಿ ಅಪಘಾತ: ಇಬ್ಬರು ಮೃತ್ಯು

ಶಿರಾಡಿ: ಇಲ್ಲಿನ ಕೆಂಪುಹೊಳೆ ಸಮೀಪ ಮಿನಿ ಲಾರಿಯೊಂದಕ್ಕೆ ವಾಹನವೊಂದು ಡಿಕ್ಕಿ ಹೊಡೆದು, ಪರಾರಿಯಾಗಿರುವ ಘಟನೆ ಸಂಭವಿಸಿದೆ. ಮಿನಿಲಾರಿಯಲ್ಲಿದ್ದ ಚಾಲಕ ಸಹಿತ ಇಬ್ಬರು ಮೃತಪಟ್ಟಿದ್ದಾರೆ. ಮಿನಿ ಲಾರಿ ಸಂಪೂರ್ಣ ನಜ್ಜುಗುಜ್ಜಾಗಿದೆ. ಡಿಕ್ಕಿ ಹೊಡೆದಿರುವ ವಾಹನವನ್ನು ಘನ ವಾಹನವಾಗಿರಬಹುದೆಂದು ಶಂಕಿಸಲಾಗಿದೆ. ಹಾಸನ ಭಾಗದಿಂದ ಮಂಗಳೂರಿಗೆ ಬರುತ್ತಿದ್ದ ಮಿನಿಲಾರಿಗೆ ಘನ ವಾಹನ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ. ಸಕಲೇಶಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೆಂಪುಹೊಳೆಯಲ್ಲಿ ಅಪಘಾತ: ಇಬ್ಬರು ಮೃತ್ಯು Read More »

error: Content is protected !!
Scroll to Top