ನಕಲಿ ಮತದಾರರಿಗೆ ಚುನಾವಣಾ ಆಯೋಗ ಶಾಕ್!! | ರಾಜ್ಯದಲ್ಲಿ 36 ಲಕ್ಷ ನಕಲಿ ಮತದಾರರು ಪತ್ತೆ!!

ಬೆಂಗಳೂರು: ಮತದಾರರ ಪಟ್ಟಿಯಲ್ಲಿ ಹೆಸರು ನಕಲು ಮಾಡಿರುವ 36 ಲಕ್ಷ ಮತದಾರರಿಗೆ ರಾಜ್ಯ ಚುನಾವಣಾ ಆಯೋಗವು ಭಾರತೀಯ ಅಂಚೆ ಮೂಲಕ ನೋಟಿಸ್ ನೀಡುವ ಪ್ರಕ್ರಿಯೆಯನ್ನು ಆರಂಭಿಸಿದೆ. ಹೆಚ್ಚುವರಿಯಾಗಿ, ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಗೆ ಸ್ಪೀಡ್ ಪೋಸ್ಟ್ ಮೂಲಕ 40 ಲಕ್ಷ ಚುನಾವಣಾ ಫೋಟೋ ಗುರುತಿನ ಚೀಟಿಗಳನ್ನು (ಇಪಿಐಸಿ) ರವಾನಿಸುತ್ತಿದೆ. ಇಪಿಐಸಿಗಳು ಮತ್ತು ನೋಟಿಸ್‌ಗಳ ಬುಕಿಂಗ್ ಮತ್ತು ವಿತರಣೆಗಾಗಿ ಅಂಚೆ ಇಲಾಖೆ ಮತ್ತು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗಳ ನಡುವೆ ಈ ಹಿಂದೆ ಸಹಿ ಮಾಡಿದ ತಿಳುವಳಿಕಾ ಒಪ್ಪಂದವನ್ನು ಅನುಸರಿಸುತ್ತಿದೆ. […]

ನಕಲಿ ಮತದಾರರಿಗೆ ಚುನಾವಣಾ ಆಯೋಗ ಶಾಕ್!! | ರಾಜ್ಯದಲ್ಲಿ 36 ಲಕ್ಷ ನಕಲಿ ಮತದಾರರು ಪತ್ತೆ!! Read More »

ಶ್ರೀನಿವಾಸ ಕಲ್ಯಾಣೋತ್ಸವ, ಸನಾತನ ಸಮಾಗಮದ ಕಾರ್ಯಾಲಯ, ಮಾಹಿತಿ ಕೇಂದ್ರ ಉದ್ಘಾಟನೆ | ಪುತ್ತಿಲ ಪರಿವಾರದ ವೆಬ್ ಸೈಟ್ ಗೆ ಚಾಲನೆ

ಪುತ್ತೂರು: ಪುತ್ತಿಲ ಪರಿವಾರದ ನೇತೃತ್ವದಲ್ಲಿ ನಡೆಯಲಿರುವ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಸನಾತನ ಸಮಾಗಮದ ಕಾರ್ಯಾಲಯ ಮತ್ತು ಮಾಹಿತಿ ಕೇಂದ್ರ ಡಿ. 2ರಂದು ಶ್ರೀ ಮಹಾಲಿಂಗೇಶ್ವರ ದೇವಳದ ಬ್ರಹ್ಮರಥ ಮಂದಿರದ ಮುಂಭಾಗ ಉದ್ಘಾಟನೆಗೊಂಡಿತು. ಮಾಣಿಲ ಶ್ರೀ ಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಅವರು ಕಾರ್ಯಾಲಯ ಉದ್ಘಾಟಿಸಿ, ಪುತ್ತಿಲ ಪರಿವಾರದ ವತಿಯಿಂದ  ಪ್ರಥಮ ಬಾರಿಗೆ ಡಿ. 24 ಮತ್ತು 25ರಂದು ನಡೆಯಲಿರುವ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಸನಾತನ ಸಮಾಗಮ ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.

ಶ್ರೀನಿವಾಸ ಕಲ್ಯಾಣೋತ್ಸವ, ಸನಾತನ ಸಮಾಗಮದ ಕಾರ್ಯಾಲಯ, ಮಾಹಿತಿ ಕೇಂದ್ರ ಉದ್ಘಾಟನೆ | ಪುತ್ತಿಲ ಪರಿವಾರದ ವೆಬ್ ಸೈಟ್ ಗೆ ಚಾಲನೆ Read More »

ಕಾರು – ಬಸ್ ಭೀಕರ ಅಪಘಾತ!

ಪುತ್ತೂರು: ಕಬಕ ಸಮೀಪದ ಕೂವೆತ್ತಿಲ ಎಂಬಲ್ಲಿ ಬಸ್ ಹಾಗೂ ಇಂಡಿಕಾ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಶನಿವಾರ ಮಧ್ಯಾಹ್ನ ಘಟನೆ ನಡೆದಿದ್ದು, ಕಾರಿನ ಡೋರ್ ಮುರಿದು ಗಾಯಾಳುಗಳನ್ನು ರಕ್ಷಿಸಲಾಯಿತು. ಬಳಿಕ ಆಸ್ಪತ್ರೆಗೆ ಸಾಗಿಸಲಾಯಿತು. ಇಂಡಿಕಾ ಕಾರು ಹಾಗೂ ಕೆ.ಎಸ್.ಆರ್.ಟಿ.ಸಿ. ಬಸ್ ನಡುವೆ ಢಿಕ್ಕಿ ಸಂಭವಿಸಿದ್ದು, ಕಾರಿನಲ್ಲಿದ್ದವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ.

ಕಾರು – ಬಸ್ ಭೀಕರ ಅಪಘಾತ! Read More »

ಪುತ್ತೂರು ಗ್ರಾಮಾಂತರ ಠಾಣಾ ಎಸ್.ಐ. ಆಗಿ ನೇಮಕ

ಪುತ್ತೂರು: ಡಿ.ಸಿ.ಆರ್.ಬಿ. ಚಿಕ್ಕಮಗಳೂರು ಘಟಕದಲ್ಲಿದ್ದ ಜಂಬೂರಾಜ್ ಮಹಾಜನ್ ಅವರನ್ನು ಪುತ್ತೂರು ಗ್ರಾಮಾಂತರ ಠಾಣಾ ಪಿ.ಎಸ್.ಐ. ಆಗಿ ನೇಮಕಗೊಳಿಸಿ ಪೊಲೀಸ್ ಉಪ ಮಹಾನಿರೀಕ್ಷಕ ಚಂದ್ರಗುಪ್ತ ಆದೇಶಿಸಿದ್ದಾರೆ. ಇವರು ಈ ಹಿಂದೆ ಪುತ್ತೂರು ನಗರ ಠಾಣೆಯಲ್ಲಿ ಪಿ.ಎಸ್.ಐ. ಆಗಿ ಕರ್ತವ್ಯ ನಿರ್ವಹಿಸಿದ್ದರು. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಪಿ.ಎಸ್.ಐ. ಆಗಿದ್ದ ಧನಂಜಯ ಬಿ.ಸಿ. ಅವರು ಪಶ್ಚಿಮ ವಲಯ ಕಚೇರಿಗೆ ಸ್ಥಳಾಂತರಗೊಂಡಿದ್ದು, ತೆರವಾದ ಹುದ್ದೆಗೆ ಜಂಬೂರಾಜ್ ಮಹಾಜನ್ ವರ್ಗಾವಣೆಗೊಂಡಿದ್ದಾರೆ.

ಪುತ್ತೂರು ಗ್ರಾಮಾಂತರ ಠಾಣಾ ಎಸ್.ಐ. ಆಗಿ ನೇಮಕ Read More »

ಕಾಲೇಜುಗಳಲ್ಲಿ ಸೆಲ್ಫಿ ಪಾಯಿಂಟ್‌ ಸ್ಥಾಪನೆ!

ರಾಷ್ಟ್ರದ ಸಾಧನೆಗಳ ಕುರಿತು ಯುವಜನರಿಗಿರುವ ಮಾಹಿತಿ ಜ್ಞಾನವನ್ನು ಹೆಚ್ಚಿಸುವ ನಿಟ್ಟಿನಲ್ಲಿ ದೇಶದ ಎಲ್ಲ ವಿವಿಗಳು, ಕಾಲೇಜುಗಳ ಆವರಣಗಳಲ್ಲಿ ಭಾರತದ ಸಾಧನೆಯ ಚಿತ್ರಣಗಳಿರುವ ಸೆಲ್ಫಿ ಪಾಯಿಂಟ್‌ಗಳನ್ನು ಸ್ಥಾಪಿಸಲು ಯುಜಿಸಿ ನಿರ್ದೇಶಿಸಿದೆ. ಶಿಕ್ಷಣ ಸಚಿವಾಲಯವು ಹಂಚಿಕೊಂಡಿರುವ 3ಡಿ ಲೇಔಟ್‌ಗಳಲ್ಲಿನ ಅನುಮೋದಿತ ವಿನ್ಯಾಸಗಳಿಗೆ ಅನುಗುಣವಾಗಿ ಮಾತ್ರವೇ ಕ್ಯಾಂಪಸ್‌ನಲ್ಲಿ ಸೆಲ್ಫಿ ಪಾಯಿಂಟ್‌ಗಳನ್ನು ಸ್ಥಾಪಿಸಬೇಕಾಗಿದೆ. ಈ ಸೆಲ್ಫಿ ಪಾಯಿಂಟ್ಸ್‌ ದೇಶದ ಹೆಮ್ಮೆಯನ್ನು ಪ್ರತಿನಿಧಿಸುವುದು ಮಾತ್ರವಲ್ಲದೇ, ಜಾಗತಿಕ ಮಟ್ಟದಲ್ಲಿ ಭಾರತದ ಬೆಳವಣಿಗೆಯನ್ನು ಉತ್ತೇಜಿಸಿದ ಉಪಕ್ರಮಗಳ ಬಗ್ಗೆ ಪ್ರತಿಯೊಬ್ಬ ನಾಗರಿಕನಿಗೂ ತಿಳಿಸಲು ನೆರವಾಗಲಿದೆ ಎಂದು ತಿಳಿಸಿದೆ. ವಿದ್ಯಾರ್ಥಿಗಳು

ಕಾಲೇಜುಗಳಲ್ಲಿ ಸೆಲ್ಫಿ ಪಾಯಿಂಟ್‌ ಸ್ಥಾಪನೆ! Read More »

ಕೈಲಾಸದೊಂದಿಗೆ ಸಹಕಾರ ಒಪ್ಪಂದ: ಸರ್ಕಾರಿ ಅಧಿಕಾರಿ ವಜಾ!!

ನಿತ್ಯಾನಂದನ ಕಾಲ್ಪನಿಕ ದೇಶ ಕೈಲಾಸದ ಪ್ರತಿನಿಧಿಗಳೊಂದಿಗೆ ‘ಸಹಕಾರ ಒಡಂಬಡಿಕೆ’ಗೆ ಸಹಿ ಹಾಕಿದ್ದ ಪೆರುಗ್ವೆ ಸರ್ಕಾರಿ ಅಧಿಕಾರಿಯನ್ನು ವಜಾಗೊಳಿಸಲಾಗಿದೆ. ಅಸ್ತಿತ್ವದಲ್ಲೇ ಇರದ ನಿತ್ಯಾನಂದನ ದೇಶದ ಜತೆ ಒಡಂಬಡಿಕೆಗೆ ಸಹಿ ಹಾಕಿದ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ  ಪೆರುಗ್ವೆಯಲ್ಲಿ ದೊಡ್ಡ ಹಗರಣವನ್ನು ಹುಟ್ಟುಹಾಕಿತ್ತು ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಸರ್ಕಾರ ಅಪಹಾಸ್ಯಕ್ಕೆ ಗುರಿಯಾಗಿತ್ತು. ಆದರೆ ಯುನೈಟೆಡ್ ಸ್ಟೇಟ್ಸ್ ಆಫ್ ಕೈಲಾಸದ ಪ್ರತಿನಿಧಿಗಳು ಅಂತರರಾಷ್ಟ್ರೀಯ ನಾಯಕರನ್ನು ವಂಚಿಸಿದ್ದು ಇದೇ ಮೊದಲು ಅಲ್ಲ. ಈ ವರ್ಷದ ಆರಂಭದಲ್ಲಿ, ಅವರು ಜಿನೀವಾದಲ್ಲಿ ನಡೆದ ವಿಶ್ವಸಂಸ್ಥೆಯ ಸಮಿತಿ ಸಭೆಯಲ್ಲಿ

ಕೈಲಾಸದೊಂದಿಗೆ ಸಹಕಾರ ಒಪ್ಪಂದ: ಸರ್ಕಾರಿ ಅಧಿಕಾರಿ ವಜಾ!! Read More »

ಡಿ.4ಕ್ಕೆ ಸಂಸತ್ತಿನ ಚಳಿಗಾಲ ಅಧಿವೇಶನ ಆರಂಭ

ನವದೆಹಲಿ: ಕೇಂದ್ರ ಸರ್ಕಾರ ಶನಿವಾರ ಸರ್ವಪಕ್ಷ ಸಭೆ ಕರೆದಿದೆ. ನಾಡಿದ್ದು ಸೋಮವಾರ ಡಿಸೆಂಬರ್ 4ರಂದು ಸಂಸತ್ತಿನ ಚಳಿಗಾಲ ಅಧಿವೇಶನ ಆರಂಭವಾಗುತ್ತಿದ್ದು ಅದಕ್ಕೂ ಮುನ್ನ ಸರ್ವಪಕ್ಷ ಸಭೆ ಕರೆಯಲಾಗಿದೆ. ಚಳಿಗಾಲ ಅಧಿವೇಶನ ಡಿಸೆಂಬರ್ 22ಕ್ಕೆ ಮುಕ್ತಾಯವಾಗಲಿದೆ. ನಾಳೆ ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಟವಾಗಲಿದ್ದು, ಹೀಗಾಗಿ ಇಂದು ಸರ್ವಪಕ್ಷ ಸಭೆ ನಡೆಯುತ್ತಿದೆ. ಕೇಂದ್ರ ಸರ್ಕಾರದ ಪರವಾಗಿ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಸರ್ವಪಕ್ಷ ಸಭೆ ಕರೆದಿದ್ದಾರೆ.  ಸಭೆಯಲ್ಲಿ ಕೇಂದ್ರ ನಾಯಕರು ಭಾಗವಹಿಸುವ ನಿರೀಕ್ಷೆಯಿದೆ. ಪ್ರಸ್ತುತ, 37 ಮಸೂದೆಗಳು ಸಂಸತ್ತಿನಲ್ಲಿ ಬಾಕಿ

ಡಿ.4ಕ್ಕೆ ಸಂಸತ್ತಿನ ಚಳಿಗಾಲ ಅಧಿವೇಶನ ಆರಂಭ Read More »

ಹಡಗಿಗೆ ಮಹಿಳಾ ಕಮಾಂಡಿಗ್‌ ಆಫೀಸರ್‌!!

ಭಾರತೀಯ ನೌಕಾಪಡೆ ಮೊದಲ ಬಾರಿಗೆ ಸೇನೆಯ ಹಡಗೊಂದಕ್ಕೆ ಮಹಿಳಾ ಕಮಾಂಡಿಂಗ್‌ ಆಫೀಸರ್‌ ಅವರನ್ನು ನೇಮಿಸಿದೆ. ಎಲ್ಲ ಜವಾಬ್ದಾರಿಗಳು, ಶ್ರೇಣಿಗಳಲ್ಲೂ ಮಹಿಳೆಯರಿಗೆ ಸಮಾನ ಆದ್ಯತೆ ಎಂಬ ನೆಲೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಪ್ರಸ್ತುತ ನೌಕಾಪಡೆಯಲ್ಲಿ ಮಹಿಳಾ ಅಗ್ನಿವೀರರ ಸಂಖ್ಯೆ 1000 ದಾಟಿದೆ. ಈ ಸಂಖ್ಯೆ ನಮ್ಮ ಉದ್ದೇಶವನ್ನು ಸ್ಪಷ್ಟವಾಗಿಸುತ್ತದೆ ಎಂದು ನೌಕಾಪಡೆ ಮುಖ್ಯಸ್ಥ ಅಡ್ಮಿರಲ್‌ ಆರ್‌. ಹರಿಕುಮಾರ್‌ ಹೇಳಿದ್ದಾರೆ. ನಮ್ಮ ಹಡಗುಗಳು, ಸಬ್‌ಮರಿನ್‌ಗಳು, ಯುದ್ಧವಿಮಾನಗಳು ವ್ಯೂಹಾತ್ಮಕವಾಗಿ ಮಹತ್ವದ್ದಾಗಿರುವ ಸ್ಥಳಗಳಲ್ಲಿ ಉತ್ಸಾಹದಿಂದ ಕಾರ್ಯಾಚರಣೆ ನಡೆಸುತ್ತಿವೆ. ಮುಖ್ಯವಾಗಿ ಚೀನಾದ ಹಸ್ತಕ್ಷೇಪ ಹೆಚ್ಚಾಗಿರುವ

ಹಡಗಿಗೆ ಮಹಿಳಾ ಕಮಾಂಡಿಗ್‌ ಆಫೀಸರ್‌!! Read More »

ಅಡಿಕೆ ಎಲೆಚುಕ್ಕಿ ರೋಗದ ಸಂಶೋಧನೆ!

ಅಡಿಕೆ ಬೆಳೆಗೆ ತಗುಲಿರುವ ಎಲೆಚುಕ್ಕಿ ರೋಗಕ್ಕೆ ವಿಜ್ಞಾನಿಗಳನ್ನು ಕಳುಹಿಸಿ ಸಂಶೋಧನೆ ಮಾಡಿಸಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು. ತೀರ್ಥಹಳ್ಳಿ ತಾಲೂಕುಗಳ ಬರಗಾಲ ಮತ್ತು ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಅಡಿಕೆಗೆ ತಗುಲಿರುವ ಎಲೆಚುಕ್ಕಿ ರೋಗದ ಬಗ್ಗೆ ಶಾಸಕ ಆರಗ ಜ್ಞಾನೇಂದ್ರ ಪ್ರಸ್ತಾಪಿಸಿದರು. ಪ್ರತಿಕ್ರಿಯಿಸಿದ ಮಧು ಬಂಗಾರಪ್ಪ, ಎಲೆಚುಕ್ಕಿ ರೋಗ ಈಗಾಗಲೇ ವ್ಯಾಪಕವಾಗಿ ಹರಡಿದೆ. ರೈತರ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಇದರ ಬಗ್ಗೆ ಸಂಶೋಧನೆ ನಡೆಸಿದ ಬಳಿಕವಷ್ಟೇ ಸೂಕ್ತ ಪರಿಹಾರ ಕಂಡುಕೊಳ್ಳಲು ಸಾಧ್ಯ

ಅಡಿಕೆ ಎಲೆಚುಕ್ಕಿ ರೋಗದ ಸಂಶೋಧನೆ! Read More »

ನೀರಿನಲ್ಲಿ ಮುಳುಗಿ ಮೃತ್ಯು ! ಮೃತದೇಹ ಪತ್ತೆ

ಸುಳ್ಯ: ಸ್ನಾನಕ್ಕೆ ಇಳಿದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಆರಂಬೂರು ಬಳಿಯ ಪಯಸ್ವಿನಿ ನದಿಯಲ್ಲಿ ಇಂದು ನಡೆದಿದೆ. ಮಡಿಕೇರಿ ಮದೆನಾಡು ಮೂಲದ ವೆಂಕಟರಮಣ ಮೃತಪಟ್ಟವರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಪೊಲೀಸರು ಆಗಮಿಸಿ ಮೃತದೇಹ ಹುಡುಕಾಟದಲ್ಲಿ ತೊಡಗಿಕೊಂಡಿದ್ದರು. ಇದೀಗ ಬಂದ ಮಾಹಿತಿಯಂತೆ, ಪೈಚಾರ್ ಮುಳುಗು ತಜ್ಞರು ಆಗಮಿಸಿ ಮೃತದೇಹವನ್ನು ಹೊರ ತೆಗೆದಿದ್ದಾರೆ ಎಂದು ಹೇಳಲಾಗಿದೆ.

ನೀರಿನಲ್ಲಿ ಮುಳುಗಿ ಮೃತ್ಯು ! ಮೃತದೇಹ ಪತ್ತೆ Read More »

error: Content is protected !!
Scroll to Top