ಜಿಲ್ಲಾ ಕೇಂದ್ರ ಸಹಕಾರಿ ಸಂಘಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ | ನವೋದಯ ಸ್ವಸಹಾಯ ಸಂಘದ ಸದಸ್ಯರಿಂದ ಆಕರ್ಷಕ ಪಥಸಂಚಲನ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಸಹಭಾಗಿತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರ ಸಂಘಗಳ ಹಾಗೂ ನವೋದಯ ಸ್ವಸಹಾಯ ಸಂಘಗಳ ಸದಸ್ಯರುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ ಗುರುವಾರ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಿತು. ರಾಜ್ಯ ಅಬಕಾರಿ ಸಚಿವ ಆರ್‍.ಬಿ.ತಿಮ್ಮಾಪುರ ಕ್ರೀಡಾಜ್ಯೋತಿ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿ, ಮಹಿಳೆಯರಲ್ಲಿ ಆರ್ಥಿಕ ಸಬಲೀಕರಣದ ಜತೆ ಸ್ವಾವಲಂಬಿ ಜೀವನ ನಡೆಸಲು ಸಹಕಾರಿ ಕ್ಷೇತ್ರದ ಮೂಲಕ ಅನುವು ಮಾಡಿ ಕೊಟ್ಟಿರುವುದು ಅದ್ಭುತ […]

ಜಿಲ್ಲಾ ಕೇಂದ್ರ ಸಹಕಾರಿ ಸಂಘಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ | ನವೋದಯ ಸ್ವಸಹಾಯ ಸಂಘದ ಸದಸ್ಯರಿಂದ ಆಕರ್ಷಕ ಪಥಸಂಚಲನ Read More »

ಬೇಕಾಬಿಟ್ಟಿ ಸಿಮ್ ಖರೀದಿ ನಿಯಂತ್ರಣಕ್ಕೆ ಕೇಂದ್ರ ಸರಕಾರ ಯಾವ ನಿಯಮಗಳನ್ನು ತರಲಿದೆ | ಇಲ್ಲಿದೆ ಡಿಟೈಲ್ಸ್

ಬೇಕಾಬಿಟ್ಟಿ ಸಿಮ್ ಖರೀದಿಯನ್ನು ನಿಯಂತ್ರಿಸಲು ಕೇಂದ್ರ ಸರಕಾರ ಕಠಿಣ ನಿಯಮಗಳನ್ನು ಜ್ಯಾರಿಗೆ ತರುವ ಮಹತ್ವದ ನಿರ್ಧಾರ ಕೈಗೊಂಡಿದೆ. ಹೆಚ್ಚುತ್ತಿರುವ ಸೈಬರ್ ವಂಚನೆ ಮತ್ತು ದೇಶ ವಿರೋಧಿ ಕೃತ್ಯಗಳಿಗೆ ಕಡಿವಾಣ ಹಾಕುವ ಜತೆಗೆ ಕಾನೂನು ಬಾಹಿರ ಚಟುವಟಿಕೆಗಳಿಗೆ ದಾರಿ ಮಾಡಿಕೊಡುವ ಡೀಲರ್‍ ಗಳಿಗೆ ಬಿಸಿ ಮುಟ್ಟಿಸುವ ನಿಟ್ಟಿನಲ್ಲಿ ಸಿಮ್ ಖರೀದಿಯಲ್ಲಿ ಕಠಿಣ ನಿಯಮಗಳನ್ನು ತರಲಿದೆ. ಡಿ.1ರಿಂದ ಸಿಮ್ ಮಾರಾಟದ ನಿಯಮಗಳಲ್ಲಿ ಬದಲಾವಣೆಯಾಗಲಿದ್ದು, ಸಿಮ್‌ಗಳನ್ನು ಮಾರಾಟ ಮಾಡುವ ಎಲ್ಲ ಡೀಲರ್‌ಗಳು ಪರಿಶೀಲನೆಯನ್ನು ಹೊಂದಿರುವುದು ಕಡ್ಡಾಯವಾಗಿರುತ್ತದೆ. ಅಷ್ಟೇ ಅಲ್ಲದೆ ಡೀಲರ್‌ಗಳು ಸಿಮ್‌ಗಳನ್ನು

ಬೇಕಾಬಿಟ್ಟಿ ಸಿಮ್ ಖರೀದಿ ನಿಯಂತ್ರಣಕ್ಕೆ ಕೇಂದ್ರ ಸರಕಾರ ಯಾವ ನಿಯಮಗಳನ್ನು ತರಲಿದೆ | ಇಲ್ಲಿದೆ ಡಿಟೈಲ್ಸ್ Read More »

ಪಾರ್ಕಿಂಗ್ ಮಾಡಿದ್ದ ಬೈಕ್‍ ಕಳವು

ಬೆಳ್ತಂಗಡಿ: ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನವನ್ನು ಕಳವು ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದ ಬಳಿ ನಡೆದಿದೆ. ಚಿಕ್ಕಮಗಳೂರು ಕುರುಬರ ಬೂದಿಹಾಳ ಗ್ರಾಮ ನಿವಾಸಿ ಕೆ ಟಿ ಕೃಷ್ಣಶೆಟ್ಟಿ (54) ಎಂಬವರ ಬೈಕ್ ಕಳವಾಗಿದ್ದು, ತನ್ನ ಬೈಕ್‌ನ್ನು ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಬಳಿ ನಿಲ್ಲಿಸಿದ್ದರು. ಸ್ನಾನ ಮಾಡಲು ನದಿಗೆ ತೆರಳಿದ್ದು, ಸ್ನಾನ ಮುಗಿಸಿ ಪಾರ್ಕಿಂಗ್ ಸ್ಥಳಕ್ಕೆ ಬಂದಾಗ ಮೋಟಾರ್ ಸೈಕಲ್ ಅನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರು ನೀಡಿದ್ದಾರೆ.

ಪಾರ್ಕಿಂಗ್ ಮಾಡಿದ್ದ ಬೈಕ್‍ ಕಳವು Read More »

ಡಿ.27 : ಅಯ್ಯಪ್ಪ ದೀಪೋತ್ಸವ : ವಿವಿಧ ಸಮಿತಿ ರಚನೆ

ಪುತ್ತೂರು: ಡಿ.27 ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿರುವ ಅಯ್ಯಪ್ಪ ದೀಪೋತ್ಸವ ಅಚಾರಣೆಯ ಸಮಿತಿ ರಚಿಸಲಾಯಿತು. ಸಮಿತಿ ಅಧ್ಯಕ್ಷರಾಗಿ ಮಾಜಿ ಶಾಸಕ ಸಂಜೀವ ಮಠಂದೂರು, ಕಾರ್ಯಾಧ್ಯಕ್ಷರಾಗಿ ಸುಧಾಕರ ಶೆಟ್ಟಿ, ಸಂಚಾಲಕರಾಗಿ ಮುರಳಿ ಕೃಷ್ಣ ಹಸಂತಡ್ಕ, ಪ್ರಧಾನ ಕಾರ್ಯದರ್ಶಿಯಾಗಿ  ರಾಧಾಕೃಷ್ಣ ಗೌಡ ನಂದಿಲ, ಮನೋಜ್ ಚಿಕ್ಕಪುತ್ತೂರು, ಜತೆ ಕಾರ್ಯದರ್ಶಿಯಾಗಿ ಮನ್ಮಥ ಶೆಟ್ಟಿ, ಉಪಧ್ಯಾಕ್ಷರಾಗಿ ರಾಮಣ್ಣ ಗುರುಸ್ವಾಮಿ, ಸತೀಶ್ ನಾಯಕ್, ದೇವನಂದ, ಗೌರವ ಅಧ್ಯಕ್ಷರಾಗಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಅವರನ್ನು ಆಯ್ಕೆ ಮಾಡಲಾಯಿತು.

ಡಿ.27 : ಅಯ್ಯಪ್ಪ ದೀಪೋತ್ಸವ : ವಿವಿಧ ಸಮಿತಿ ರಚನೆ Read More »

ಮಕ್ಕಳಿಗೆ ಮನೆಯಲ್ಲೂ ಗುಣಮಟ್ಟದ ಶಿಕ್ಷಣ ಸಿಗಬೇಕು | ಅಂಬಿಕಾ ವಿದ್ಯಾಲಯದ ಪ್ರತಿಭೋತ್ಸವ ಉದ್ಘಾಟಿಸಿ ಶಾಸಕ ಅಶೋಕ್ ರೈ

ಪುತ್ತೂರು: ಶಾಲೆಯಲ್ಲಿ ಎಲ್ಲವನ್ನೂ ಕಲಿಸುವುದಿಲ್ಲ ಒಬ್ಬ ವ್ಯಕ್ತಿಗೆ ಬೇಕಾದ 40% ವಿದ್ಯೆ ಮಾತ್ರ ಶಾಲೆಯಲ್ಲಿ ದೊರೆಯುತ್ತದೆ ಉಳಿದ ಶಿಕ್ಷಣ ಮನೆಯಲ್ಲಿ ಸಿಗುತ್ತದೆ. ಅದು ಗುಣಮಟ್ಟದಿಂದ ಕೂಡಿರಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಬಪ್ಪಳಿಗೆ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ಹತ್ತನೆಯ ವರ್ಷಾಚರಣೆ ದಶಾಂಬಿಕೋತ್ಸವದ ಅಂಗವಾಗಿ ಆಯೋಜಿಸಲಾದ ಪ್ರತಿಭಾ ತರಂಗಿಣಿ-2023-24 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಉನ್ನತ ಶಿಕ್ಷಣದ‌ ಕನಸು ಕಾಣಬೇಕು. ಕನಸು ನನಸು‌ಮಾಡಲೂ ಪ್ರಯತ್ನ ಅತೀ ಅಗತ್ಯವಾಗಿದೆ ಎಂದು ಹೇಳಿದರು. ಕೇವಲ‌ ಇಂಜಿನಿಯರ್, ಡಾಕ್ಟರ್ ಕಡೆ

ಮಕ್ಕಳಿಗೆ ಮನೆಯಲ್ಲೂ ಗುಣಮಟ್ಟದ ಶಿಕ್ಷಣ ಸಿಗಬೇಕು | ಅಂಬಿಕಾ ವಿದ್ಯಾಲಯದ ಪ್ರತಿಭೋತ್ಸವ ಉದ್ಘಾಟಿಸಿ ಶಾಸಕ ಅಶೋಕ್ ರೈ Read More »

ನರಿಮೊಗರು ಸರಸ್ವತಿ ವಿದ್ಯಾ ಮಂದಿರದಲ್ಲಿ ವೀರ ಯೋಧನಿಗೆ ನಮನ

ಪುತ್ತೂರು: ನರಿಮೊಗರು ಸರಸ್ವತಿ ವಿದ್ಯಾ ಮಂದಿರ, ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ರಾಷ್ಟ್ರಪತಿ ಪುರಷ್ಕೃತ ಸ್ಕೌಟ್ಸ್ ವೀರ ಯೋಧ ಕ್ಯಾ.ಎಂ.ವಿ.ಪ್ರಾಂಜಲ್ ಅವರಿಗೆ ನಮನ ಕಾರ್ಯಕ್ರಮ ಬುಧವಾರ ನಡೆಯಿತು. ಸಂಸ್ಥೆಯ ಸಂಚಾಲಕ ಅವಿನಾಶ್ ಕೊಡಂಕಿರಿ ಭಾರತ ಮಾತೆಯ ಮಡಿಲಿಗೆ ತನ್ನ ಪ್ರಾಣವನ್ನು ಅರ್ಪಿಸಿ ವೀರ ಮರಣವನ್ನು ಹೊಂದಿದ ಯೋಧನಿಗೆ ದೀಪ ಬೆಳಗಿಸಿ ಪುಷ್ಪಾರ್ಚನೆಯನ್ನು ಮಾಡಿ ನುಡಿ ನಮನ ಸಲ್ಲಿಸಿದರು. ಬಳಿಕ ಎಲ್ಲಾ ವಿದ್ಯಾರ್ಥಿಗಳಿಂದ ಮೌನ ಪ್ರಾರ್ಥನೆ ನೆರವೇರಿತು. ಈ ಸಂದರ್ಭದಲ್ಲಿ ಸ್ಕೌಟ್ಸ್, ಗೈಡ್ಸ್

ನರಿಮೊಗರು ಸರಸ್ವತಿ ವಿದ್ಯಾ ಮಂದಿರದಲ್ಲಿ ವೀರ ಯೋಧನಿಗೆ ನಮನ Read More »

ಮದ್ಯ ಕುಡಿಸಿ ಮಹಿಳೆಯ ಅತ್ಯಾಚಾರಗೈದಾತನ ಬಂಧನ

ಪುತ್ತೂರು: ಮಹಿಳೆಗೆ ಮದ್ಯ ಕುಡಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ ಘಟನೆಗೆ ಸಂಬಂಧಿಸಿ ಆರೋಪಿಯೊಬ್ಬನ್ನು ನಗರ ಪೊಲೀಸರು ಬಂಧಿಸಿದ್ದಾರೆ. ಆರ್ಯಾಪು ಗ್ರಾಮದ ಸಂಶುದ್ದೀನ್ (23) ಬಂಧಿತ ವ್ಯಕ್ತಿ ಎನ್ನಲಾಗಿದೆ. ನ.24 ರಂದು ರಾತ್ರಿ ಸಮಯ ಹಾಸನ ತಾಲೂಕು ಚೆನ್ನರಾಯಪಟ್ಟಣದ ನಿವಾಸಿ ಸಂತ್ರಸ್ಥ ಮಹಿಳೆ ಪುತ್ತೂರಿನ ಬಸ್‌ ನಿಲ್ದಾಣದ ಬಳಿ ನಿಂತಿದ್ದ ವೇಳೆ ಅಲ್ಲಿಗೆ ಬಂದ ಆರೋಪಿ ಮಹಿಳೆಯೊಂದಿಗೆ ಮಾತನಾಡಿ ಆಕೆಯ ಜೊತೆಗೆ ಸಲುಗೆ ಬಳಸಿಕೊಂಡು ನಂತರ ಮದ್ಯ ಕುಡಿಸಿದ್ದಾನೆ. ಬಳಿಕ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ

ಮದ್ಯ ಕುಡಿಸಿ ಮಹಿಳೆಯ ಅತ್ಯಾಚಾರಗೈದಾತನ ಬಂಧನ Read More »

ಅಂತರ್ ಜಿಲ್ಲಾ ಕಳ್ಳನ ಬಂಧನ !

ಉಡುಪಿ: ಹಲವು ತಾಲೂಕುಗಳಲ್ಲಿ ಕಳ್ಳತನ ಪ್ರಕರಣ ಹೊಂದಿದ್ದ ಅಂತ‌ರ್ ಜಿಲ್ಲಾ ಕಳ್ಳನೋರ್ವನನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಮಲ್ಲಾರು ಗ್ರಾಮದ ತೌಸೀಫ್ ಅಹಮದ್ (34) ಬಂಧಿತ ಆರೋಪಿ. ಬಡಗುಬೆಟ್ಟು ಗ್ರಾಮದ ಶ್ರೀಮತಿ ಎಂಬವರ ಮನೆಗೆ ಕಳ್ಳರು ನುಗ್ಗಿ 188 ಗ್ರಾಂ ತೂಕದ ಚಿನ್ನಾಭರಣ ಹಾಗೂ 15,500ರೂ. ನಗದು ಕಳವು ಮಾಡಿದ್ದರು. ಮನೆಯವರು ದೂರು ನೀಡಿದ ಹಿನ್ನಲೆಯಲ್ಲಿ ಉಡುಪಿ ಠಾಣಾ ಪೊಲೀಸ್ ನಿರೀಕ್ಷಕ ಮಂಜಪ್ಪಡಿ.ಆರ್, ಎಸ್‍ ಐ ಗಳಾದ ಈರಣ್ಣ ಶಿರಗುಂಪಿ, ಭರತೇಶ್ ಕಂಕಣವಾಡಿ, ಪುನೀತ್ ಕುಮಾ‌ರ್ ಮತ್ತು ಸಿಬ್ಬಂದಿಗಳ

ಅಂತರ್ ಜಿಲ್ಲಾ ಕಳ್ಳನ ಬಂಧನ ! Read More »

ಕಾಣಿಯೂರು ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡೋತ್ಸವ

ಕಾಣಿಯೂರು: ಕಾಣಿಯೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ ನಡೆಯಿತು. ಕಾಣಿಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕ ಪುಂಡಲಿಕ ಪೂಜಾರ ಕ್ರೀಡಾಕೂಟ ಉದ್ಘಾಟಿಸಿ ಶುಭಹಾರೈಸಿದರು. ಕಾಲೇಜಿನ ಪ್ರಾಚಾರ್ಯರಾದ ಜಯಂತಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕರಾದ ಸುಧಾಕರ್ ಎಸ್. ಸ್ವಾಗತಿಸಿ, ಶಶಿಕಲಾ ಕೆ. ವಂದಿಸಿದರು. ಸಂಧ್ಯಾ ಜೆ. ರೈ ಕಾರ್ಯಕ್ರಮ ನಿರೂಪಿಸಿದರು.

ಕಾಣಿಯೂರು ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡೋತ್ಸವ Read More »

ಸಿಡಿಲು ಬಡಿದು ಸಹೋದರರಿಬ್ಬರು ಮೃತ್ಯು

ಭತ್ತ ಕಾಯಲು ಗದ್ದೆಗೆ ತೆರಳಿದ್ದ ಸಹೋದರರಿಬ್ಬರು ಸಿಡಿಲು ಬಡಿದು ಮೃತಪಟ್ಟ ಘಟನೆ ಶಿವಮೊಗ್ಗದ ಭದ್ರಾವತಿಯ ಹುಣಸೆಕಟ್ಟೆ ಜಂಕ್ಷನ್‌ನಲ್ಲಿ ನಡೆದಿದೆ. ಬೀರು (32) ಹಾಗೂ ಸುರೇಶ್ (30) ಸಿಡಿಲು ಬಡಿತದಿಂದ ಮೃತಪಟ್ಟವರು ಎನ್ನಲಾಗಿದೆ. ಇಬ್ಬರೂ ಮಂಗಳವಾರ ರಾತ್ರಿ ಕಟಾವಾಗಿದ್ದ ಭತ್ತದ ಗದ್ದೆಗೆ ಭತ್ತ ಕಾಯಲು ತೆರಳಿದ್ದರು. ಈ ವೇಳೆ ಸಿಡಿಲು ಬಡಿದು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮೃತರ ಶವವನ್ನು ಭದ್ರಾವತಿಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಆಸ್ಪತ್ರೆಯ ಮುಂಭಾಗ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಭದ್ರಾವತಿ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ

ಸಿಡಿಲು ಬಡಿದು ಸಹೋದರರಿಬ್ಬರು ಮೃತ್ಯು Read More »

error: Content is protected !!
Scroll to Top