ವಿದ್ಯಾರ್ಥಿಗೆ ಥಳಿಸಿ, ಮೂತ್ರ ವಿಸರ್ಜನೆ: ನಾಲ್ವರ ಬಂಧನ

ವ್ಯಕ್ತಿಯೊಬ್ಬನಿಗೆ ಥಳಿಸಿ ಮೂತ್ರ ವಿಸರ್ಜನೆ ಮಾಡಿದ ಪ್ರಕರಣ ಸಂಬಂಧ ಒಟ್ಟು ನಾಲ್ವರನ್ನು ಬಂಧಿಸಿರುವ ಘಟನೆ ಮೀರತ್’ನಲ್ಲಿ ನಡೆದಿದೆ. ವಿಡಿಯೋ ಶೇರ್ ಮಾಡಿದ್ದಕ್ಕಾಗಿ ನಿನ್ನೆ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. ನವೆಂಬರ್ 13ರಂದು ಘಟನೆ ನಡೆದಿದ್ದು ಯುವಕರ ಗುಂಪೊಂದು ವಿದ್ಯಾರ್ಥಿಯನ್ನು ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಮನಬಂದಂತೆ ಥಳಿಸಿದ್ದಾರೆ ಆ ಬಳಿಕ ವಿದ್ಯಾರ್ಥಿಯ ಮುಖದ ಮೇಲೆ ಓರ್ವ ಮೂತ್ರ ವಿಸರ್ಜನೆ ಮಾಡಿ ಅಮಾನುಷವಾಗಿ ವರ್ತಿಸಿದ್ದಾನೆ. ಇಷ್ಟೆಲ್ಲಾ ಘಟನೆ ನಡೆದಿರುವುದನ್ನು ಗುಂಪಿನ ಓರ್ವ ಸದಸ್ಯ ಚಿತ್ರೀಕರಿಸಿದ್ದಾನೆ. ಹಲ್ಲೆ ಮಾಡಬೇಡಿ ಎಂದು […]

ವಿದ್ಯಾರ್ಥಿಗೆ ಥಳಿಸಿ, ಮೂತ್ರ ವಿಸರ್ಜನೆ: ನಾಲ್ವರ ಬಂಧನ Read More »

ಸುಳ್ಳು ಸುದ್ದಿ ತಡೆಗೆ ಮಸೂದೆ: ಮಂಡನೆಗೆ ಸಿದ್ಧತೆ

ತುಮಕೂರು: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ, ಅವಹೇಳನಕಾರಿ ಪೋಸ್ಟ್ಗಳ ಹಾಕುವುದನ್ನು ತಡೆಯುವ ಸಲುವಾಗಿ ಕಾನೂನು ಜಾರಿಗೆ ತರಲು ರಾಜ್ಯ ಸರ್ಕಾರ ಸಿದ್ಧತೆ ನಡೆಸುತ್ತಿದೆ. ಈ ಕುರಿತು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 4ರಿಂದ ಪ್ರಾರಂಭವಾಗುವ ವಿಧಾನ ಮಂಡಲದ ಚಳಿಗಾಲದ ಜಂಟಿ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸಲು ಸಿದ್ಧತೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಇದನ್ನು ತಡೆಯಲು ಮಸೂದೆಯ

ಸುಳ್ಳು ಸುದ್ದಿ ತಡೆಗೆ ಮಸೂದೆ: ಮಂಡನೆಗೆ ಸಿದ್ಧತೆ Read More »

ದೇವಸ್ಥಾನದಂತಿರುವ ಸಮಾಜದಲ್ಲಿ ಪ್ರತಿಯೊಬ್ಬರೂ ಕರ್ತವ್ಯಮುಖರಾಗಿ

ಕಡಬ: ಸಮಾಜ ದೇವಸ್ಥಾನದಂತೆ. ಇಲ್ಲಿ ಪ್ರತಿಯೊಬ್ಬರಿಗೂ ಕರ್ತವ್ಯ ಇದೆ. ಆ ಕರ್ತವ್ಯವನ್ನು ಸರಿಯಾಗಿ ನಿರ್ವಹಿಸಿಕೊಂಡು ಹೋಗಬೇಕಾದ ಜವಾಬ್ದಾರಿ ನಮ್ಮ ಮೇಲಿದೆ ಎಂದು ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಹೇಳಿದರು. ಕಡಬ ಒಕ್ಕಲಿಗ ಗೌಡ ಸಮುದಾಯ ಭವನ ಶಿಲಾನ್ಯಾಸ ಸಮಾರಂಭಕ್ಕೆ ಪೂರ್ವಭಾವಿಯಾಗಿ ಭಾನುವಾರ ವಿಜ್ಞಾಪನಾ ಪತ್ರವನ್ನು ಬಿಡುಗಡೆಗೊಳಿಸಿ, ಸಮುದಾಯದ ಜನಸಂಖ್ಯಾ ಸಮೀಕ್ಷೆ ಹಾಗೂ ಭವನ ನಿರ್ಮಾಣ ಸಹಾಯಾರ್ಥ ದೇಣಿಗೆ ಸಂಗ್ರಹಕ್ಕೆ ಚಾಲನೆ ನೀಡಿ ಆಶೀರ್ವಚನ ನೀಡಿದರು. ಹಿರಿಯರ ಮಾರ್ಗದರ್ಶನದೊಂದಿಗೆ ಪರಿಶ್ರಮದಿಂದ ಸಮಾಜವನ್ನು ಕಟ್ಟಿ

ದೇವಸ್ಥಾನದಂತಿರುವ ಸಮಾಜದಲ್ಲಿ ಪ್ರತಿಯೊಬ್ಬರೂ ಕರ್ತವ್ಯಮುಖರಾಗಿ Read More »

ಕರ್ನಾಟಕ ಸಹಾಯಸ್ತ ಲೋಕ ಸೇವಾ ಚಾರಿಟೇಬಲ್ ಟ್ರಸ್ಟ್ ನಿಂದ ಸಹಾಯಧನ ವಿತರಣೆ

ಪುತ್ತೂರು: ಮೈರ ಶ್ರೀ ರಾಮಾಂಜನೇಯ ಗೆಳೆಯರ ಬಳಗದ ಆಶ್ರಯದಲ್ಲಿ ನಡೆದ ಕಕ್ಕೆಪದವು ಸತ್ಯ ಧರ್ಮ ಕಂಬಳೋತ್ಸವದಲ್ಲಿ ವಿಶೇಷ ವೇಶ ಧರಿಸಿ ಭವತಿ ಭಿಕ್ಷಾಂದೇಹಿ ಸೇವಾ ಕಾರ್ಯದ ಮೂಲಕ ನಿಧಿ ಸಂಗ್ರಹ ಮಾಡಲಾಯಿತು. ಟ್ರಾಕಿಯೋಸೋಪಿಜಿಲ್ ಪಿಸ್ಟುಲಾ ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಮಂಗಳೂರು ತಾಲೂಕಿನ ದೇರೆಬೈಲು ಕೊಂಚಾಡಿಯ ಗಣೇಶ್ ನಿರುಪಮಾ ದಂಪತಿಯ ಮೂರು ತಿಂಗಳ ನವಜಾತು ಶಿಶುವಿನ ಚಿಕಿತ್ಸೆಗೆ ಸಂಗ್ರಹವಾದ 21,800 ರೂಪಾಯಿಯನ್ನು ಕಕ್ಕೆಪದವು ಮೈರಾ ಶ್ರೀ ರಾಮಾಂಜನೇಯ ಭಜನಾ ಮಂದಿರದಲ್ಲಿ ಶ್ರೀ ರಾಮಾಂಜನೇಯ ಗೆಳೆಯರ ಬಳಗದ ಪದಾಧಿಕಾರಿಗಳ

ಕರ್ನಾಟಕ ಸಹಾಯಸ್ತ ಲೋಕ ಸೇವಾ ಚಾರಿಟೇಬಲ್ ಟ್ರಸ್ಟ್ ನಿಂದ ಸಹಾಯಧನ ವಿತರಣೆ Read More »

ನ. 30: ಕನಕದಾಸ ಜಯಂತಿ ‘ದಾಸ ಸಾಹಿತ್ಯ-ಒಳನೋಟಗಳು’ ಒಂದು ದಿನದ ವಿಚಾರ ಸಂಕಿರಣ

ಪುತ್ತೂರು: ವಿವೇಕಾನಂದ ಸ್ವಾಯತ್ತ ಮಹಾವಿದ್ಯಾಲಯ, ಕಾಲೇಜಿನ ಕನ್ನಡ, ಸಂಸ್ಕೃತ ಹಾಗೂ ಲಲಿತಕಲಾ ಸಂಘ ಮತ್ತು ಐಕ್ಯೂಎಸಿ ಹಾಗೂ ಅಖಿಲ ಭಾರತೀಯ ಸಾಹಿತ್ಯ ಪರಿಷತ್ ತಾಲೂಕು ಸಮಿತಿ ಸಹಯೋಗದಲ್ಲಿ ಕನಕದಾಸ ಜಯಂತಿ ‘ದಾಸ ಸಾಹಿತ್ಯ-ಒಳನೋಟಗಳು’ ಒಂದು ದಿನದ ವಿಚಾರ ಸಂಕಿರಣ ನ. 30ರಂದು ಕಾಲೇಜಿನ ಸುವರ್ಣ ಮಹೋತ್ಸವ ಸಭಾಭವನದಲ್ಲಿ ನಡೆಯಲಿದೆ ಎಂದು ಅಖಿಲ ಭಾರತೀಯ ಸಾಹಿತ್ಯ ಪರಿಷತ್ ತಾಲೂಕು ಸಮಿತಿ ಅಧ್ಯಕ್ಷ ಡಾ.ಗಣರಾಜ ಕುಂಬ್ಳೆ ತಿಳಿಸಿದರು. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಿಗ್ಗೆ 9.30ಕ್ಕೆ ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜು

ನ. 30: ಕನಕದಾಸ ಜಯಂತಿ ‘ದಾಸ ಸಾಹಿತ್ಯ-ಒಳನೋಟಗಳು’ ಒಂದು ದಿನದ ವಿಚಾರ ಸಂಕಿರಣ Read More »

ಪುತ್ತೂರು ಪ್ರವೇಶಿಸಿದ ಅಯೋಧ್ಯೆ ಶ್ರೀರಾಮ ಜನ್ಮಭೂಮಿ ಮಂದಿರದ ಅಕ್ಷತೆ

ಪುತ್ತೂರು: ಅಯೋಧ್ಯೆಯಿಂದ ಅಕ್ಷತೆ ಹೊತ್ತ ರಥ ಪುತ್ತೂರನ್ನು ಸೋಮವಾರ ಪ್ರವೇಶಿಸಿತು. ಅಯೋಧ್ಯೆ ಶ್ರೀರಾಮ ಜನ್ಮಭೂಮಿ ಮಂದಿರದಲ್ಲಿ ಜ. 22ರಂದು ನಡೆಯಲಿರುವ ಶ್ರೀ ರಾಮನ ಪ್ರತಿಷ್ಠಾ ಮಹೋತ್ಸವದ ಅಂಗವಾಗಿ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ವತಿಯಿಂದ ದೇಶಾದ್ಯಂತ ಏಕಕಾಲದಲ್ಲಿ ನಡೆಯುವ ಅಕ್ಷತೆ ವಿತರಣೆ ಕಾರ್ಯಕ್ರಮದ ಅಂಗವಾಗಿ ರಥ ಹೊರಟಿದೆ.ರಥ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿ ಮೂಲಕ ಆಗಮಿಸಿತು. ಈ ಸಂದರ್ಭದಲ್ಲಿ ಅಕ್ಷತೆ ಹೊತ್ತ ರಥವನ್ನು ಕಳಶ ಹಿಡಿದ ಮಹಿಳೆಯರು ಚೆಂಡೆ, ವಾದ್ಯಗಳ ಮೂಲಕ ಸ್ವಾಗತಿಸಿದರು. ಬಳಿಕ

ಪುತ್ತೂರು ಪ್ರವೇಶಿಸಿದ ಅಯೋಧ್ಯೆ ಶ್ರೀರಾಮ ಜನ್ಮಭೂಮಿ ಮಂದಿರದ ಅಕ್ಷತೆ Read More »

ಕುಲ್ಕುಂದ ಜಾನುವಾರು ಜಾತ್ರೆ: ಗೋಪೂಜೆ

ಸುಬ್ರಹ್ಮಣ್ಯ: ಕಾರ್ತಿಕ ಹುಣ್ಣಿಮೆ ದಿನ ಕುಲ್ಕುಂದ ಜಾನುವಾರು ಜಾತ್ರೆಯ ಪ್ರಯುಕ್ತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಹಕಾರದೊಂದಿಗೆ ಕುಲ್ಕುಂದ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಗೋ ಪೂಜೆ ಸಾಂಕೇತಿಕವಾಗಿ ನಡೆಯಿತು. ದೇವಸ್ಥಾನದ ಅರ್ಚಕರು ವಿಧಿ ವಿಧಾನದೊಂದಿಗೆ ಗೋಪೂಜೆ ನೆರವೇರಿಸಿದರು. ಬಸವೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಗಿರಿಧರ ಸ್ಕಂದ, ಬಸವೇಶ್ವರ ದೇವಸ್ಥಾನದ ಅರ್ಚಕ ಗಣೇಶ್ ದೀಕ್ಷಿತ್, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕ, ವ್ಯವಸ್ಥಾಪನ ಸಮಿತಿ ಸದಸ್ಯ ವನಜ ಭಟ್, ಶೋಭಾ ಗಿರಿಧರ, ಮನೋಜ್, ಶ್ರೀಕುಮಾರ್, ರವಿ ಶೆಟ್ಟಿ

ಕುಲ್ಕುಂದ ಜಾನುವಾರು ಜಾತ್ರೆ: ಗೋಪೂಜೆ Read More »

ಡಿ. 31ರಂದು ಸರಳ ಸಾಮೂಹಿಕ ವಿವಾಹ | ಹೀಗೆ ಅರ್ಜಿ ಸಲ್ಲಿಸಿ

ಸುಬ್ರಹ್ಮಣ್ಯ: ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿರುವ ನಾಗಾರಾಧನೆಯ ಪುಣ್ಯ ತಾಣ, ರಾಜ್ಯದ ನಂಬರ್ ವನ್ ಆದಾಯದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರಕಾರದ ಆದೇಶದ ಪ್ರಕಾರ ಜ. 31ರಂದು ಸರಳ ಸಾಮೂಹಿಕ ವಿವಾಹ ಮಾಂಗಲ್ಯ ಭಾಗ್ಯ ನಡೆಯಲಿದೆ. ಡಿ. 31 ವಧು-ವರರು ನಿಗದಿ ದಾಖಲೆಗಳೊಂದಿಗೆ ಶ್ರೀ ದೇವಳಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ. ಆದ್ದರಿಂದ ಪುಣ್ಯ ಕ್ಷೇತ್ರದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯನ ಸನ್ನಿಧಿಯಲ್ಲಿ ಸರಳ ಸಾಮೂಹಿಕ ವಿವಾಹವಾಗಲು ಅಪೇಕ್ಷಿಸುವವರು ಶೀಘ್ರವೇ ಶ್ರೀ ದೇವಳದ ಕಚೇರಿಯಿಂದ

ಡಿ. 31ರಂದು ಸರಳ ಸಾಮೂಹಿಕ ವಿವಾಹ | ಹೀಗೆ ಅರ್ಜಿ ಸಲ್ಲಿಸಿ Read More »

ನಾಳೆ (ನ. 28): ಮುಕ್ರಂಪಾಡಿ ಎಸ್.ಆರ್.ಕೆ. ಲ್ಯಾಡರ್ಸ್ ನ ಬೆಳ್ಳಿಹಬ್ಬ ಸಂಭ್ರಮ – ರಕ್ತದಾನ ಶಿಬಿರ

ಪುತ್ತೂರು: ಪುತ್ತೂರಿನ ಹೊರವಲಯದ ಮುಕ್ರಂಪಾಡಿಯಲ್ಲಿ ಕಳೆದ 25 ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಎಸ್.ಆರ್.ಕೆ. ಲ್ಯಾಡರ್ಸ್ ನ ಬೆಳ್ಳಿಹಬ್ಬ ಸಂಭ್ರಮ, ಲೋಗೋ ಅನಾವರಣ ಹಾಗೂ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನ. 28 ಮಂಗಳವಾರ ಎಸ್.ಆರ್.ಕೆ. ಲ್ಯಾಡರ್ಸ್ ಆವರಣದಲ್ಲಿ ನಡೆಯಲಿದೆ. ಬೆಳಿಗ್ಗೆ 9 ಗಂಟೆಗೆ ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದು, ಪುತ್ತೂರು ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ರಾಜಾರಾಮ್ ಅವರು ಲೋಗೋ ಅನಾವರಣ ಮಾಡುವರು. ಮುಖ್ಯ ಅತಿಥಿಗಳಾಗಿ ಪುತ್ತೂರು ರೋಟರಿ ಕ್ಲಬ್ ಅಧ್ಯಕ್ಷ

ನಾಳೆ (ನ. 28): ಮುಕ್ರಂಪಾಡಿ ಎಸ್.ಆರ್.ಕೆ. ಲ್ಯಾಡರ್ಸ್ ನ ಬೆಳ್ಳಿಹಬ್ಬ ಸಂಭ್ರಮ – ರಕ್ತದಾನ ಶಿಬಿರ Read More »

ಸಮುದ್ರದಲ್ಲಿ ಮೀನಿನ ಕೊರತೆ: ಹಿಂದೆಂದೂ ಕೇಳರಿಯದ ಮತ್ಸ್ಯಕ್ಷಾಮ!! ಮತ್ಸ್ಯ ಸಂತತಿ ಕುಂಠಿತವಾಗಲು ಕಾರಣವೇನು?

ಮಂಗಳೂರು: ಈಗಲೇ ಶೇ. 80ರಷ್ಟು ಬೋಟುಗಳು ಸಮುದ್ರ ದಡದಲ್ಲಿ ಲಂಗರು ಹಾಕುವ ಸ್ಥಿತಿ ನಿರ್ಮಾಣವಾಗಿದೆ. ಸಮುದ್ರದಲ್ಲಿ ಹಿಂದೆಂದೂ ಕಂಡು ಕೇಳರಿಯದ ಮತ್ಸ್ಯಕ್ಷಾಮ ಉಂಟಾಗಿರುವುದೇ ಇದಕ್ಕೆ ಕಾರಣ. ಸಮುದ್ರದಲ್ಲಿ ಮೀನಿನ ಬರ ಎದುರಾಗಿದೆ. ತೀವ್ರ ಮೀನಿನ ಕೊರತೆಯಿಂದಾಗಿ ಮೀನುಗಾರರು ಕಂಗಾಲಾಗಿದ್ದಾರೆ. ಮೀನುಗಾರಿಕೆ ಆರಂಭವಾಗಿ ಮೂರು ತಿಂಗಳಾಗಿದೆಯಷ್ಟೆ. ಅಷ್ಟರಲ್ಲಿ ಕರಾವಳಿಯ ಸಮುದ್ರದಲ್ಲಿ ಮತ್ಸ್ಯಕ್ಷಾಮದ ಭೀತಿ ಎದುರಾಗಿದ್ದು, ಮೀನುಗಾರಿಕೆಯ ಖರ್ಚುವೆಚ್ಚ ಸರಿದೂಗಿಸಲು ಸಾಧ್ಯವಾಗದೆ ಬೋಟುಗಳು ಅವಧಿಗೆ ಮುನ್ನವೇ ಕಡಲ ಕಿನಾರೆಯಲ್ಲಿ ಲಂಗರು ಹಾಕಲು ಆರಂಭಿಸಿವೆ. ಕಳೆದೊಂದು ತಿಂಗಳಿನಿಂದ ಪರ್ಸಿನ್ ಬೋಟ್‌ಗಳು ಸಮುದ್ರಕ್ಕಿಳಿಯುತ್ತಿಲ್ಲ.

ಸಮುದ್ರದಲ್ಲಿ ಮೀನಿನ ಕೊರತೆ: ಹಿಂದೆಂದೂ ಕೇಳರಿಯದ ಮತ್ಸ್ಯಕ್ಷಾಮ!! ಮತ್ಸ್ಯ ಸಂತತಿ ಕುಂಠಿತವಾಗಲು ಕಾರಣವೇನು? Read More »

error: Content is protected !!
Scroll to Top