ವಿದ್ಯಾರ್ಥಿಗಳು ಜೀವನದ ಗುರಿ ತಲುಪಲು ಜಾಗೃತರಾಗಬೇಕು | | ‘ಕನಸುಗಳು- 2023’ ಉದ್ಘಾಟಿಸಿ ನರಸಿಂಹ ಪೈ

ಪುತ್ತೂರು:  ಕನಸು ಪ್ರತಿಯೊಬ್ಬರಲ್ಲೂ ಇರುತ್ತದೆ. ಆದರೆ ಅದನ್ನು ಸಾಕಾರಗೊಳಿಸುವ ದಾರಿಯನ್ನು ನಾವೇ ಕಂಡುಕೊಳ್ಳಬೇಕು. ವಿದ್ಯಾರ್ಥಿಗಳು ತಮ್ಮ ಜೀವನದ ಗುರಿಯನ್ನು ತಲುಪುವುದರ ಬಗ್ಗೆ ಸದಾ ಜಾಗೃತರಾಗಬೇಕು ಎಂದು ಯುವ ಉದ್ಯಮಿ ಹಾಗೂ ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನ ಕೋಶಾಧಿಕಾರಿ ನರಸಿಂಹ ಪೈ ಹೇಳಿದರು. ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಸಾಮಾಜಿಕ, ಸಾಂಸ್ಕೃತಿಕ ಮತ್ತು ವೈಜ್ಞಾನಿಕ ಕನಸುಗಳಿಗೆ ವೇದಿಕೆಯನ್ನು ನೀಡುವ ಕನಸುಗಳು-2023 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಅವಕಾಶ ಎಲ್ಲರಿಗೂ ಸಿಗುವುದಿಲ್ಲ, ಸಿಕ್ಕಿರುವ ಅವಕಾಶವನ್ನು ಸರಿಯಾಗಿ ಉಪಯೋಗಿಸಿಕೊಳ್ಳಬೇಕು. ಕನಸನ್ನು […]

ವಿದ್ಯಾರ್ಥಿಗಳು ಜೀವನದ ಗುರಿ ತಲುಪಲು ಜಾಗೃತರಾಗಬೇಕು | | ‘ಕನಸುಗಳು- 2023’ ಉದ್ಘಾಟಿಸಿ ನರಸಿಂಹ ಪೈ Read More »

ಮೂರು ಇಲಾಖೆಗಳ ವಿಲೀನ, 2000 ಉದ್ಯೋಗ ನಷ್ಟ!

ಬೆಂಗಳೂರು : ವಿವಿಧ ಇಲಾಖೆಗಳನ್ನು ವಿಲೀನಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಇದರ ಮೊದಲ ಹಂತವಾಗಿ ಕೃಷಿ ಇಲಾಖೆಯಲ್ಲಿ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯನ್ನು ವಿಲೀನಗೊಳಿಸುವ ಹಳೆಯ ಪ್ರಸ್ತಾವನೆಗೆ ಮತ್ತೆ ಚಾಲನೆ ನೀಡಲಾಗಿದೆ. ಈ ಕುರಿತು ಮುಂದಿನ ಸಚಿವ ಸಂಪುಟ ಉಪ ಸಮಿತಿ ಸಭೆಯು ಚರ್ಚೆ ನಡೆಸಲಿದೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ.ಕೃಷಿ ಇಲಾಖೆಯಲ್ಲಿ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯನ್ನು ವಿಲೀನಗೊಳಿಸುವ ಕುರಿತು ನವೆಂಬರ್‌ 8ರಂದು ಹೊರಡಿಸಲಾಗಿರುವ ಅರೆ ಸರ್ಕಾರಿ ಪತ್ರದಲ್ಲಿ ಈ ಕುರಿತು ಕೂಡಲೇ

ಮೂರು ಇಲಾಖೆಗಳ ವಿಲೀನ, 2000 ಉದ್ಯೋಗ ನಷ್ಟ! Read More »

ಬೆಂಗಳೂರು ಕಂಬಳಕ್ಕೆ ತಂಪೆರೆದ ವರುಣ!

ಬೆಂಗಳೂರು: ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕರಾವಳಿ ಕ್ರೀಡೆ ಕಂಬಳವನ್ನು ಆಯೋಜನೆ ಮಾಡಲಾಗಿದ್ದು ಕಂಬಳಕ್ಕೆ ಮಳೆ ತಂಪೆರೆದಿದೆ. ಕಂಬಳ ಆಯೋಜನೆ ವೇಳೆ ಜಿಟಿ ಜಿಟಿ ಮಳೆಯಾಗಿತ್ತು. ಮಧ್ಯಾಹ್ನ ಏಕಾಏಕಿ ಸುರಿದ ಗಾಳಿ ಮಳೆಗೆ ಬಯಲ️ಲ್ಲಿ ನಿಂತಿದ್ದ ಜನತೆ ರಕ್ಷಣೆಗೆ ಓಡಿದರು. ಮಳೆ ಬಂದರೂ ಕಂಬಳ ಕೂಟ ಮಾತ್ರ ಸರಾಗವಾಗಿ ನಡೆಯುತ್ತಿದೆ. ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಕಂಬಳ ಪಂದ್ಯಾವಳಿಯನ್ನು ವೀಕ್ಷಿಸಲು ಲಕ್ಷಾಂತರ ಜನರು ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದಾರೆ. ಅಲ್ಲದೆ ಸಂಚಾರಿ ಪೊಲೀಸರು,

ಬೆಂಗಳೂರು ಕಂಬಳಕ್ಕೆ ತಂಪೆರೆದ ವರುಣ! Read More »

ರಾಜ್ಯದ ಶಕ್ತಿಕೇಂದ್ರದಲ್ಲಿ ಕಂಬಳದ ವೈಭವ

ಬೆಂಗಳೂರು: ಶಾಸಕ ಅಶೋಕ್‌ ಕುಮಾರ್‌ ರೈ ಅವರ ನೇತೃತ್ವದಲ್ಲಿ ಕರಾವಳಿಯ ಗ್ರಾಮೀಣ ಸೊಗಡು ಕಂಬಳ ರಾಜಧಾನಿಗೆ ತಲುಪಿದೆ. ಬೆಂಗಳೂರಿನಲ್ಲಿರುವ ಕರಾವಳಿಗರು ಹಾಗೂ ಕಂಬಳವನ್ನು ಮೊದಲ ಬಾರಿಗೆ ನೋಡುತ್ತಿರುವ ಹೊರ ಊರಿಗರಿಗೆ ಬೆಂಗಳೂರು ಕಂಬಳ ಹಬ್ಬವಾಗಿ ಮೂಡಿಬರುತ್ತಿದೆ. ಬೆಳಿಗ್ಗೆ ಅಶ್ವಿನಿ ಪುನೀತ್‌ ರಾಜ್‌ ಕುಮಾರ್‌ ಅವರು ದೀಪ ಬೆಳಗಿಸುವ ಮೂಲಕ ಕಂಬಳಕ್ಕೆ ಚಾಲನೆ ನೀಡಿದರು. ವೇದಿಕೆ ಕಾರ್ಯಕ್ರಮವನ್ನು ಮಾಜಿ ಸಿಎಂ ಯಡಿಯೂರಪ್ಪ ಉದ್ಘಾಟಿಸಿದರು. ರಾಜ ಮಹರಾಜ ಹೆಸರಿನ ಕಂಬಳ ಕರೆಗೆ ಅರ್ಚಕರು ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ಸಂಸದ ಸದಾನಂದ

ರಾಜ್ಯದ ಶಕ್ತಿಕೇಂದ್ರದಲ್ಲಿ ಕಂಬಳದ ವೈಭವ Read More »

ಹುತಾತ್ಮ ಯೋಧ ಕ್ಯಾಪ್ಟನ್ ಪ್ರಾಂಜಲ್ ಅಂತ್ಯಕ್ರಿಯೆ

ಬೆಂಗಳೂರು: ಜಮ್ಮುಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಬುಧವಾರ ಉಗ್ರರ ಜೊತೆಗಿನ ಗುಂಡಿನ ಕಾಳಗದಲ್ಲಿ ಹುತಾತ್ಮರಾದ ಕನ್ನಡಿಗ ಯೋಧ ಎಂ.ವಿ. ಪ್ರಾಂಜಲ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯು ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿಯ ಸೋಮಸುಂದರಪಾಳ್ಯ ಚಿತಾಗಾರದಲ್ಲಿ ನಡೆಯಿತು. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿ ಬಳಿಯ ನಂದನವನ ಲೇಔಟ್​​ನ ನಿವಾಸದಲ್ಲಿ ಅಂತಿಮ ದರ್ಶನದ ಬಳಿಕ ಸಕಲ ಸರಕಾರಿ ಗೌರವಗಳೊಂದಿಗೆ ತೆರೆದ ವಾಹನದಲ್ಲಿ ಪಾರ್ಥಿವ ಶರೀರದ ಮೆರವಣಿಗೆ ನಡೆಯಿತು. ಕಲ್ಲುಬಾಳು ರಸ್ತೆ ಮೂಲಕ ಜಿಗಣಿಯ ಒಡಿಸಿ ಸರ್ಕಲ್​,

ಹುತಾತ್ಮ ಯೋಧ ಕ್ಯಾಪ್ಟನ್ ಪ್ರಾಂಜಲ್ ಅಂತ್ಯಕ್ರಿಯೆ Read More »

ವಂಚನೆ; ಸುಬ್ರಹ್ಮಣ್ಯ ಮೂಲದ ಟಿ.ಎಸ್ ಶ್ರೀನಾಥ್’ಗೆ ಶಿಕ್ಷೆ

ಸುಬ್ರಹ್ಮಣ್ಯ; ಚೆಕ್ ಬೌನ್ಸ್ ಪ್ರಕರಣದಲ್ಲಿ ಕುಕ್ಕೆ ಸುಬ್ರಹ್ಮಣ್ಯ ಮೂಲದ ಟಿ.ಎಸ್ ಶ್ರೀನಾಥ ಎಂಬವರ ಆರೋಪವನ್ನು ಸಾಬೀತು ಮಾಡಿರುವ ಚಿಕ್ಕಮಗಳೂರು ಚಿಕ್ಕಮಗಳೂರು ಜೆಎಂಎಸಿ ನ್ಯಾಯಾಲಯ, ನಾಲ್ಕು ತಿಂಗಳ ಶಿಕ್ಷೆ ತಪ್ಪಿದಲ್ಲಿ 5 ಲಕ್ಷ 18 ಸಾವಿರ 100 ರೂ. ದಂಡ ವಿಧಿಸುವಂತೆ ಆದೇಶಿಸಿದೆ. ವ್ಯವಹಾರ ಸಂಬಂಧ ದುಡ್ಡಿಗೆ ಪ್ರತಿಯಾಗಿ ಶ್ರೀನಾಥ್ ಅವರು ಚೆಕ್ ನೀಡಿದ್ದರು. ಖಾತೆ ಬರಿದಾಗಿದ್ದು, ಚೆಕ್ ಬೌನ್ಸ್ ಆಗಿತ್ತು. ಚೆಕ್ ಪಡಕೊಂಡವರು ನ್ಯಾಯಾಲಯದ ಮೆಟ್ಟಿಲು ಹತ್ತಿದ್ದು, ಚಿಕ್ಕಮಗಳೂರು ಸಿವಿಲ್ ಜಡ್ಜ್ ಮತ್ತು ಐಎಂಎಪ್ ಸಿ ಕೋರ್ಟ್

ವಂಚನೆ; ಸುಬ್ರಹ್ಮಣ್ಯ ಮೂಲದ ಟಿ.ಎಸ್ ಶ್ರೀನಾಥ್’ಗೆ ಶಿಕ್ಷೆ Read More »

ಕಾರ್ಪಾಡಿ ದೇವಳದ ಸುತ್ತುಪೌಳಿಯ ದಾರಂದ ಮುಹೂರ್ತ

ಪುತ್ತೂರು: ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಳದ ಸುತ್ತುಪೌಳಿಯ ಜೀರ್ಣೋದ್ಧಾರ ಪ್ರಯುಕ್ತ ಶಿಲೆ ಕಲ್ಲಿನ ದಾರಂದ ಮುಹೂರ್ತ ಕಾರ್ಯಕ್ರಮ  ನ.25 ರಂದು ನಡೆಯಿತು. ಬೆಳಿಗ್ಗೆ ವೇದಮೂರ್ತಿ ಸಂದೀಪ ಕಾರಂತರ ನೇತೃತ್ವದಲ್ಲಿ ದಾರಂದ ಮುಹೂರ್ತ ನೆರವೇರಿತು. ಈ ಸಂದರ್ಭದಲ್ಲಿ ಆರ್ಯಾಪು ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ಸಾಮೆತ್ತಡ್ಕ, ಪಂಚಾಯತ್ ಸದಸ್ಯರು ಜೀರ್ಣೋಧ್ದಾರ ಸಮಿತಿಯ ಹರೀಶ್ ನಾಯಕ್ ಬಳಕ್ಕ, ಡಾ ಎ.ಪಿ ಸತೀಶ್ ಮರಿಕೆ,  ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಕಾರ್ಯಾಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಪರ್ಲಡ್ಕದ ಜ್ಯೋತಿಷಿ ಜಯರಾಮ

ಕಾರ್ಪಾಡಿ ದೇವಳದ ಸುತ್ತುಪೌಳಿಯ ದಾರಂದ ಮುಹೂರ್ತ Read More »

ನ.27 ರಂದು ದ.ಕ. ಜಿಲ್ಲೆಗೆ ಬರಲಿದೆ ಅಯೋಧ್ಯೆ ರಾಮಮಂದಿರದ ಅಕ್ಷತೆ : ಮನೆ ಮನೆ ಸಂಪರ್ಕ ಅಭಿಯಾನ

ಪುತ್ತೂರು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ಮಂದಿರದಲ್ಲಿ ಜ.22 ರಂದು ನಡೆಯಲಿರುವ  ಶ್ರೀ ರಾಮನ ಪ್ರತಿಷ್ಠಾ ಮಹೋತ್ಸವದ ಅಂಗವಾಗಿ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ವತಿಯಿಂದ ದೇಶಾದ್ಯಂತ ಏಕಕಾಲದಲ್ಲಿ ನಡೆಯುವ ಅಕ್ಷತೆ ವಿತರಣಾ ಕಾರ್ಯಕ್ರಮದ ಕುರಿತು ಮನೆ ಮನೆ ಸಂಪರ್ಕ ಅಭಿಯಾನ  ಜ.1 ರಿಂದ 15 ರ ತನಕ ನಡೆಯಲಿದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಜಿಲ್ಲಾ ಸಮಿತಿ ಸಂಚಾಲಕ ಡಾ.ಕೃಷ್ಣ ಪ್ರಸನ್ನ ತಿಳಿಸಿದ್ದಾರೆ. ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಭಿಯಾನದ ಯಶಸ್ಸಿಗೆ ಈಗಾಗಲೇ

ನ.27 ರಂದು ದ.ಕ. ಜಿಲ್ಲೆಗೆ ಬರಲಿದೆ ಅಯೋಧ್ಯೆ ರಾಮಮಂದಿರದ ಅಕ್ಷತೆ : ಮನೆ ಮನೆ ಸಂಪರ್ಕ ಅಭಿಯಾನ Read More »

ಮತ್ತು ಬರಿಸುವ ಪಾನೀಯ ನೀಡಿ ಅಪಹರಣ, ಅತ್ಯಾಚಾರಕ್ಕೆ ಯತ್ನ: ದೂರು

ಪುತ್ತೂರು: ಮತ್ತು ಬರಿಸುವ ಪಾನೀಯ ಕುಡಿಸಿ ಅಪಹರಣ ಮಾಡಿ, ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಸಾಲ್ಮರದ ಗುಂಪಕಲ್ಲಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಈ ಬಗ್ಗೆ ಅಸ್ವಸ್ಥಗೊಂಡು ಬಿದ್ದಿದ್ದ ಮಹಿಳೆ ಅಪರಿಚಿತ ವ್ಯಕ್ತಿಯೊಬ್ಬನ ವಿರುದ್ಧ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ. ನ. 24ರಂದು ರಾತ್ರಿ ತನ್ನನ್ನು ಅಪರಿಚಿತ ವ್ಯಕ್ತಿಯೊಬ್ಬ ಪುತ್ತೂರು ಬಸ್‌ ನಿಲ್ದಾಣದಿಂದ ಆಟೋ ರಿಕ್ಷಾವೊಂದರಲ್ಲಿ ಕರೆದೊಯ್ದು ಮತ್ತು ಬರುವ ಪಾನೀಯ ಕುಡಿಸಿದ್ದಾರೆ. ಈ ವೇಳೆ ಪ್ರಜ್ಞೆ ತಪ್ಪಿದ ನನಗೆ ಮುಂದೇನಾಯಿತೆಂದು ಗೊತ್ತಿಲ್ಲ. ರಾತ್ರಿ ಹೊತ್ತು ನಾನು ರಸ್ತೆ ಬದಿಯಲ್ಲಿ ಬಿದ್ದಿದ್ದೆ.

ಮತ್ತು ಬರಿಸುವ ಪಾನೀಯ ನೀಡಿ ಅಪಹರಣ, ಅತ್ಯಾಚಾರಕ್ಕೆ ಯತ್ನ: ದೂರು Read More »

ಸಜಂಕಾಡಿ ಸ.ಹಿ.ಪ್ರಾ ಶಾಲೆಯಲ್ಲಿ ಮೇಳೈಸಿದ ಮೆಟ್ರಿಕ್ ಮೇಳ | ಮೆಟ್ರಿಕ್ ಮೇಳಗಳು ಮಕ್ಕಳಲ್ಲಿ ವ್ಯವಹಾರ ಜ್ಞಾನ ಹೆಚ್ಚಿಸಲು ಸಹಕಾರಿಯಾಗುತ್ತದೆ: ಸಾವಿತ್ರಿ ಕೆ

ಪುತ್ತೂರು: ವಿದ್ಯಾರ್ಥಿಗಳಲ್ಲಿ ವ್ಯವಹಾರಿಕ ಜ್ಞಾನವನ್ನು ವೃದ್ಧಿಸುವ ಸಲುವಾಗಿ ಹಮ್ಮಿಕೊಳ್ಳಲಾಗುವ ಮೆಟ್ರಿಕ್ ಮೇಳ  ಸ.ಹಿರಿಯ ಪ್ರಾಥಮಿಕ ಶಾಲೆ ಸಜಂಕಾಡಿಯಲ್ಲಿ ನಡೆಯಿತು. ವಿದ್ಯಾರ್ಥಿಗಳು ಬಗೆಬಗೆಯ ಸೊಪ್ಪು, ತರಕಾರಿ, ವಿವಿಧ ಬಗೆಯ ತಿನಿಸುಗಳನ್ನು ವ್ಯವಸ್ಥಿತವಾಗಿ ಜೋಡಿಸಿ ಮಾರಾಟದಲ್ಲಿ ತೊಡಗಿ ಸಂಭ್ರಮಿಸಿದರು . ಮುಖ್ಯ ಅತಿಥಿಯಾಗಿ ನಿವೃತ್ತ  ಶಿಕ್ಷಕಿ  ಸಾವಿತ್ರಿ ಕೆ ಮಾತನಾಡಿ, ಮೆಟ್ರಿಕ್ ಮೇಳಗಳು ಮಕ್ಕಳಲ್ಲಿ ವ್ಯವಹಾರ ಜ್ಞಾನ ಹೆಚ್ಚಿಸಿ ಕ್ರಿಯಾಶೀಲ ರಾಗುವಂತೆ ಮಾಡುತ್ತವೆ ಎಂದರು ಬಡಗನ್ನೂರು ಗ್ರಾಮ ಪಂಚಾಯಿತಿ ಸದಸ್ಯ ರವಿರಾಜ್ ರೈ ಸಜಂಕಾಡಿ ಮೆಟ್ರಿಕ್ ಮೇಳ ಉದ್ಘಾಟಿಸಿ ಶುಭ

ಸಜಂಕಾಡಿ ಸ.ಹಿ.ಪ್ರಾ ಶಾಲೆಯಲ್ಲಿ ಮೇಳೈಸಿದ ಮೆಟ್ರಿಕ್ ಮೇಳ | ಮೆಟ್ರಿಕ್ ಮೇಳಗಳು ಮಕ್ಕಳಲ್ಲಿ ವ್ಯವಹಾರ ಜ್ಞಾನ ಹೆಚ್ಚಿಸಲು ಸಹಕಾರಿಯಾಗುತ್ತದೆ: ಸಾವಿತ್ರಿ ಕೆ Read More »

error: Content is protected !!
Scroll to Top