ಡಿ.30: ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ ನಿಂದ ಜಿಲ್ಲಾ ಮಟ್ಟದ ಕ್ರೀಡಾಕೂಟ | ಸಹಕಾರ ಸಂಘಗಳು, ನವೋದಯ ಸ್ವಸಹಾಯ ಸಂಘಗಳ ಪಾಲ್ಗೊಳ್ಳುವಿಕೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍, ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಸಹಭಾಗಿತ್ವದಲ್ಲಿ ದ.ಕ. ಜಿಲ್ಲೆಯ ಎಲ್ಲಾ ಸಹಕಾರ ಸಂಘಗಳು ಹಾಗೂ ನವೋದಯ ಸ್ವಸಹಾಯ ಸಂಘಗಳ ಸದಸ್ಯರುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ ಡಿ.30 ರಂದು ಕೊಂಬೆಟ್ಟು ಸರಕಾರಿ ಪದವಿಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ತಿಳಿಸಿದ್ದಾರೆ. ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕ್ರೀಡಾಕೂಟ ಮಹಿಳೆಯರಿಗೆ ಹಾಗೂ ಪುರುಷರಿಗೆ ನಡೆಯಲಿದ್ದು, ಹಗ್ಗಜಗ್ಗಾಟ, 100 […]

ಡಿ.30: ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ ನಿಂದ ಜಿಲ್ಲಾ ಮಟ್ಟದ ಕ್ರೀಡಾಕೂಟ | ಸಹಕಾರ ಸಂಘಗಳು, ನವೋದಯ ಸ್ವಸಹಾಯ ಸಂಘಗಳ ಪಾಲ್ಗೊಳ್ಳುವಿಕೆ Read More »

ಕ್ಯಾಪ್ಟನ್ ಪ್ರಾಂಜಲ್ ಅಮರ್ ರಹೇ | ಬೆಂಗಳೂರಿನಲ್ಲಿ ಅಂತಿಮ ನಮನ

ಬೆಂಗಳೂರು: ಮಂಗಳೂರಿನ ಸುರತ್ಕಲಿನಲ್ಲಿ ಬೆಳೆದಿದ್ದ ಕ್ಯಾಪ್ಟನ್ ‍ಪ್ರಾಂಜಲ್ ಅಮರರಾಗಿದ್ದಾರೆ. ಉಗ್ರರೊಂದಿಗೆ ನಡೆದ ಕಾಳಗದಲ್ಲಿ ವೀರ ಮರಣವನ್ನಪ್ಪಿದ್ದಾರೆ. ಅವರ ಪಾರ್ಥಿವ ಶರೀರ ಬೆಂಗಳೂರಿನ ಅವರ ನಿವಾಸಕ್ಕೆ ಶುಕ್ರವಾರ ರಾತ್ರಿ ತಲುಪಿದ್ದು, ಅಂತಿಮ ನಮನ ಸಲ್ಲಿಸಲಾಗುತ್ತಿದೆ. 29 ವರ್ಷದ ಪ್ರಾಂಜಲ್ ಅವರ ಅಂತ್ಯಕ್ರಿಯೆ ಇಂದು ಅಂದರೆ ಶನಿವಾರ ಬೆಂಗಳೂರಿನಲ್ಲಿ ನಡೆಯಲಿದೆ. ಅಂತ್ಯಕ್ರಿಯೆಯ ಮುನ್ನ ನಡೆಯುವ ವಿಧಿವಿಧಾನ ನಡೆದು ಬಳಿಕ ಮೆರವಣಿಗೆಯಲ್ಲಿ ವೀರ ಯೋಧನ ಪಾರ್ಥಿವ ಶರೀರವನ್ನು 23 ಕಿಲೋ ಮೀಟರ್ ದೂರದಲ್ಲಿರುವ ಸೋಮಸುಂದರ ಪಾಳ್ಯದ ಚಿತಾಗಾರಕ್ಕೆ ಕೊಂಡೊಯ್ಯಲಾಗುವುದು ಎಂದು ತಿಳಿದುಬಂದಿದೆ.

ಕ್ಯಾಪ್ಟನ್ ಪ್ರಾಂಜಲ್ ಅಮರ್ ರಹೇ | ಬೆಂಗಳೂರಿನಲ್ಲಿ ಅಂತಿಮ ನಮನ Read More »

ಕಡಬ ಒಕ್ಕಲಿಗ ಸೇವಾ ಸಂಘದ ಸಮುದಾಯ ಭವನ ಶಿಲಾನ್ಯಾಸದ ಹಿನ್ನೆಲೆಯಲ್ಲಿ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಭೇಟಿ

ಕಡಬ: ಇಲ್ಲಿನ ಒಕ್ಕಲಿಗ ಸೇವಾ ಸಂಘದ ಪದಗ್ರಹಣ ಹಾಗೂ ಸಮುದಾಯ ಭವನದ ಶಿಲಾನ್ಯಾಸ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಿಗ್ಗೆ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರನ್ನು ಬೆಂಗಳೂರಿನ ಬಿಜಿಎಸ್ ಗ್ಲೋಬಲ್ ಹಾಸ್ಪಿಟಲ್ ಮತ್ತು ರೀಸರ್ಚ್ ಸೆಂಟರಿನಲ್ಲಿ ಭೇಟಿ ಮಾಡಲಾಯಿತು. ಈ ಸಂದರ್ಭ ಕಾರ್ಯಕ್ರಮದ ರೂಪುರೇಷೆ, ತಯಾರಿ ಬಗ್ಗೆ ಮಾಹಿತಿ ಪಡೆದುಕೊಂಡ ಮಹಾಸ್ವಾಮೀಜಿ, ಸಲಹೆ, ಮಾರ್ಗದರ್ಶನ ನೀಡಿದರು. ಬಳಿಕ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ವಿಪಕ್ಷ ನಾಯಕ ಆರ್. ಅಶೋಕ್,

ಕಡಬ ಒಕ್ಕಲಿಗ ಸೇವಾ ಸಂಘದ ಸಮುದಾಯ ಭವನ ಶಿಲಾನ್ಯಾಸದ ಹಿನ್ನೆಲೆಯಲ್ಲಿ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಭೇಟಿ Read More »

ಗಾಜಾದಲ್ಲಿ ಸಾಮೂಹಿಕ ಅಂತ್ಯಕ್ರಿಯೆ!! | ಮೃತಪಟ್ಟವರಲ್ಲಿ 5850 ಮಕ್ಕಳು!!

ಗಾಜಾ: ಅಕ್ಟೋಬರ್ 7ರಿಂದ ನಡೆಯುತ್ತಿರುವ ಇಸ್ರೇಲಿ ಆಕ್ರಮಣದಿಂದ ಗಾಜಾದಲ್ಲಿ ಮೃತಪಟ್ಟವರ ಸಂಖ್ಯೆ 14,854 ಕ್ಕೆ ಏರಿದೆ. ಇದರಲ್ಲಿ 5,850 ಮಕ್ಕಳು ಸೇರಿದ್ದಾರೆ ಎಂದು ಗಾಜಾಪಟ್ಟಿಯಲ್ಲಿರುವ ಹಮಾಸ್ ಅಧಿಕಾರಿಗಳನ್ನು ಉಲ್ಲೇಖಿಸಿ ಸಿಎನ್ಎನ್ ವರದಿ ಮಾಡಿದೆ. ದಾಳಿಯಲ್ಲಿ ಮೃತಪಟ್ಟವರನ್ನು ಸಾಮೂಹಿಕವಾಗಿ ಅಂತ್ಯಕ್ರಿಯೆ ಮಾಡಲಾಗುತ್ತಿದೆ.  ಇಸ್ರೇಲ್‌ ನಡೆಸುತ್ತಿರುವ ವಾಯು ಮತ್ತು ಭೂ ದಾಳಿಯಿಂದಾಗಿ ಪ್ರಸ್ತುತ ಅಂಕಿಅಂಶಗಳನ್ನು ಪಡೆಯುವುದು ಸವಾಲಿನ ಕೆಲಸವಾಗಿದೆ. ರಮಲ್ಲಾದಲ್ಲಿರುವ ಪ್ಯಾಲೇಸ್ಟಿನಿಯನ್ ಆರೋಗ್ಯ ಸಚಿವಾಲಯ ಸೋಮವಾರ 12,700 ಮಂಗಳವಾರ 13,000ಕ್ಕೂ ಹೆಚ್ಚು ಸಾವು ನೋವುಗಳನ್ನು ವರದಿ ಮಾಡಿತ್ತು. ಗಾಜಾ ಪಟ್ಟಿಯ ಮೂಲಗಳಿಂದ ಡೇಟಾವನ್ನು

ಗಾಜಾದಲ್ಲಿ ಸಾಮೂಹಿಕ ಅಂತ್ಯಕ್ರಿಯೆ!! | ಮೃತಪಟ್ಟವರಲ್ಲಿ 5850 ಮಕ್ಕಳು!! Read More »

ವಿಶ್ವಕಪ್​ ಟ್ರೋಫಿ ಮೇಲೆ ಕಾಲಿಟ್ಟ ಮಿಚೆಲ್​ ಮಾರ್ಷ್ ವಿರುದ್ಧ ಎಫ್​ಐಆರ್​!

ಉತ್ತರ ಪ್ರದೇಶ: ಏಕದಿನ ವಿಶ್ವಕಪ್​ ಟ್ರೋಫಿ ಮೇಲೆ ಕಾಲಿಟ್ಟು ವಿಶ್ರಾಂತಿ ಪಡೆದಿದ್ದ ಆಸ್ಟ್ರೇಲಿಯಾದ ಮಿಚೆಲ್​ ಮಾರ್ಷ್ ವಿರುದ್ಧ ಭಾರತದಲ್ಲಿ ಎಫ್‌ಐಆರ್ ದಾಖಲಾಗಿದೆ. ಉತ್ತರ ಪ್ರದೇಶದ ಅಲಿಘರ್‌ನ ಆರ್‌ಟಿಐ ಕಾರ್ಯಕರ್ತ ಪಂಡಿತ್ ಕೇಶವ್ ನೀಡಿದ ದೂರಿನ ಮೇರೆಗೆ ದೆಹಲಿ ಗೇಟ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಾರ್ಷ್​ ಅವರು ವಿಶ್ವಕಪ್‌ ಗೆದ್ದ ಬಳಿಕ ಡ್ರೆಸ್ಸಿಂಗ್​ ರೂಮ್​ನಲ್ಲಿ ಟ್ರೋಫಿ ಮೇಲೆ ತಮ್ಮ ಕಾಲುಗಳನ್ನು ಇಟ್ಟು ವಿಶ್ರಾಂತಿ ಪಡೆಯುವ ಶೈಲಿಯಲ್ಲಿ ಕುಳಿತ ಫೋಟೊವೊಂದು ವೈರಲ್​ ಆಗಿತ್ತು. ಈ ಫೋಟೊ ಕಂಡ ಅನೇಕ ಭಾರತೀಯ ಕ್ರಿಕೆಟ್​

ವಿಶ್ವಕಪ್​ ಟ್ರೋಫಿ ಮೇಲೆ ಕಾಲಿಟ್ಟ ಮಿಚೆಲ್​ ಮಾರ್ಷ್ ವಿರುದ್ಧ ಎಫ್​ಐಆರ್​! Read More »

ರಾಜ್ಯಮಟ್ಟದ ಕಬಡ್ಡಿ: ರಾಮಕುಂಜೇಶ್ವರ ಪ್ರೌಢಶಾಲೆ ದ್ವಿತೀಯ | ಪ್ರೌಢಶಾಲೆಯ ನಾಲ್ವರು ರಾಷ್ಟ್ರಮಟ್ಟಕ್ಕೆ ಆಯ್ಕೆ

ರಾಮಕುಂಜ: ಆದಿಚುಂಚನಗಿರಿಯಲ್ಲಿ ನಡೆದ ರಾಜ್ಯಮಟ್ಟದ 17ರ ವಯೋಮಾನದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ‍್ಯಮ ಪ್ರೌಢಶಾಲೆ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಕಾರ್ತಿಕ್ ಬೆಸ್ಟ್ ರೈಡರ್ ಆಗಿ ಹೊರಹೊಮ್ಮಿದ್ದು, ಕಾರ್ತಿಕ್, ಶ್ರೇಯಸ್ ಹಿತೇಶ್, ಸತ್ಯ ನಾಲ್ವರು ರಾಷ್ಟ್ರಮಟ್ಟದ ಕಬಡ್ಡಿ ತಂಡಕ್ಕೆ ಆಯ್ಕೆಯಾಗಿದ್ದಾರೆ. ನಿವೃತ್ತ ಯುವಜನ ಕ್ರೀಡಾಧಿಕಾರಿ ಮಾಧವ್ ಬಿ.ಕೆ., ಕೋಚ್ ಜಸ್ವಂತ್ ಗೌಡ, ದೈಹಿಕ ಶಿಕ್ಷಣ ಶಿಕ್ಷಕಿ ಪ್ರಫುಲ್ಲ ರೈ ತರಬೇತಿ ನೀಡಿದ್ದಾರೆ. ತಂಡವನ್ನು ಶಾಲಾ ಆಡಳಿತ ಮಂಡಳಿ, ಮುಖ್ಯಗುರುಗಳು, ಶಿಕ್ಷಕರು ಅಭಿನಂದಿಸಿದ್ದಾರೆ.

ರಾಜ್ಯಮಟ್ಟದ ಕಬಡ್ಡಿ: ರಾಮಕುಂಜೇಶ್ವರ ಪ್ರೌಢಶಾಲೆ ದ್ವಿತೀಯ | ಪ್ರೌಢಶಾಲೆಯ ನಾಲ್ವರು ರಾಷ್ಟ್ರಮಟ್ಟಕ್ಕೆ ಆಯ್ಕೆ Read More »

ಕೆದಿಲ ವಿದ್ಯಾರ್ಥಿಗಳ ಕೈಯಲ್ಲಿ ಕೊಡಲಿ ರೂಪದ ಪೆನ್ಸಿಲ್: ಕ್ರಮಕ್ಕೆ ಒತ್ತಾಯ!

ಕೆದಿಲ: ಪ್ರಾಥಮಿಕ ಶಾಲಾ ಮಕ್ಕಳ ಕೈಯಲ್ಲಿ ಕೊಡಲಿ ರೂಪದ ಪೆನ್ಸಿಲ್ ಪತ್ತೆಯಾಗಿದ್ದು, ಮಾರಾಟ ಮಾಡುವ ವ್ಯಕ್ತಿಗಳ ವಿರುದ್ದ ಕ್ರಮಕೈಗೊಳ್ಳುವಂತೆ ಪೋಷಕರು ಒತ್ತಾಯ ಮಾಡಿದ ಘಟನೆ ಕೆದಿಲ ಗ್ರಾಮದ ಗಡಿಯಾರ ಎಂಬಲ್ಲಿ ನಡೆದಿದೆ. ಗಡಿಯಾರ ಸರಕಾರಿ ಪ್ರಾಥಮಿಕ ಶಾಲೆಯ ಮಕ್ಕಳ ಕೈಯಲ್ಲಿ ಈ ಪೆನ್ಸಿಲ್ ಕಂಡು ಬಂದಿದ್ದು, ಪೋಷಕರು ಈ ಪೆನ್ಸಿಲ್ ನ ವಿರುದ್ದ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಸರಕಾರಿ ಶಾಲೆಗಳಿಗೆ ಭೇಟಿ ನೀಡುವ ಈ ಮಾರಾಟಗಾರರು ಮಕ್ಕಳಿಗೆ ಬೇಕಾಗುವ ಪೆನ್ಸಿಲ್ ನ ಆರ್ಡರ್ ಪಡೆದುಕೊಂಡು ಹೋಗುತ್ತಾರೆ. ಅದರ ಬೆಲೆಯನ್ನು

ಕೆದಿಲ ವಿದ್ಯಾರ್ಥಿಗಳ ಕೈಯಲ್ಲಿ ಕೊಡಲಿ ರೂಪದ ಪೆನ್ಸಿಲ್: ಕ್ರಮಕ್ಕೆ ಒತ್ತಾಯ! Read More »

ಕ್ಯಾಪ್ಟನ್ ಪ್ರಾಂಜಲ್ ಪಾರ್ಥಿವ ಶರೀರ ಬೆಂಗಳೂರಿಗೆ : ಮಾಹಿತಿ ನೀಡಿದ ರಕ್ಷಣಾ ಮೂಲಗಳು

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರೊಂದಿಗಿನ ಎನ್‌ಕೌಂಟರ್‌ನಲ್ಲಿ ಹುತಾತ್ಮರಾದ ಕ್ಯಾಪ್ಟನ್ ಎಂವಿ ಪ್ರಾಂಜಲ್ ಅವರ ಪಾರ್ಥಿವ ಶರೀರ ಶುಕ್ರವಾರ ರಾತ್ರಿ ಬೆಂಗಳೂರಿಗೆ ಆಗಮಿಸಲಿದೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ. ಬುಧವಾರ ರಜೌರಿ ಸೆಕ್ಟರ್‌ನಲ್ಲಿ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ 63ನೇ ರಾಷ್ಟ್ರೀಯ ರೈಫಲ್ಸ್‌ನ 29 ವರ್ಷದ ಯೋಧ ಪ್ರಾಂಜಲ್ ಅವರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. “ಕ್ಯಾಪ್ಟನ್ ಪ್ರಾಂಜಲ್ ಅವರ ಪಾರ್ಥಿವ ಶರೀರ ಇಂದು ರಾತ್ರಿ 8 ಗಂಟೆಗೆ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ. ನಂತರ ಅವರ ಪಾರ್ಥಿವ ಶರೀರವನ್ನು

ಕ್ಯಾಪ್ಟನ್ ಪ್ರಾಂಜಲ್ ಪಾರ್ಥಿವ ಶರೀರ ಬೆಂಗಳೂರಿಗೆ : ಮಾಹಿತಿ ನೀಡಿದ ರಕ್ಷಣಾ ಮೂಲಗಳು Read More »

ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ಕಾರ್ಪಾಡಿ ದೇವಸ್ಥಾನಕ್ಕೆ ಭೇಟಿ

ಪುತ್ತೂರು: ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ಅವರು ಬುಧವಾರ ಬೆಳಿಗ್ಗೆ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಳಕ್ಕೆ ಶುಕ್ರವಾರ ಭೇಟಿ ನೀಡಿ ಜೀರ್ಣೋದ್ಧಾರ ಕಾರ್ಯ ವೀಕ್ಷಿಸಿ ದೇವರ ಪ್ರಸಾದ ಸ್ವೀಕರಿಸಿದರು. ದೇವಳದ ಜೀರ್ಣೋದ್ಧಾರ ಕಾರ್ಯಕ್ಕೆ ಮುಜರಾಯಿ , ಧಾರ್ಮಿಕ ದತ್ತಿ ಇಲಾಖೆಯಿಂದ ಅನುದಾನ ಒದಗಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹಾಗೂ ಜೀರ್ಣೋದ್ಧಾರ ಸಮಿತಿ ಕೋಶಾಧಿಕಾರಿ ಸುಧಾಕರ ರಾವ್ ಆರ್ಯಾಪು, ವ್ಯವಸ್ಥಾಪನಾ

ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ಕಾರ್ಪಾಡಿ ದೇವಸ್ಥಾನಕ್ಕೆ ಭೇಟಿ Read More »

ಬೆಳ್ಳಾರೆಯಲ್ಲಿ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಾಲಯ ನಿರ್ಮಾಣ | ಶಿಲಾಕಲ್ಲು ಮೆರವಣಿಗೆಗೆ ಚಾಲನೆ

ಪುತ್ತೂರು: ಬೆಳ್ಳಾರೆಯಲ್ಲಿ ನಿರ್ಮಾಣವಾಗಲಿರುವ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಾಲಯಕ್ಕೆ ಕಾರ್ಕಳದಿಂದ ಆಗಮಿಸಿದ ಶಿಲಾಕಲ್ಲುಗಳಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ಪೂಜೆಯ ಮೂಲಕ ಶಿಲಾಕಲ್ಲು ಮೆರವಣಿಗೆಗೆ ಚಾಲನೆ ನೀಡಲಾಯಿತು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ತೆಂಗಿನ ಕಾಯಿ ಒಡೆದು ಶಿಲಾಕಲ್ಲು ಮೆರವಣಿಗೆಗೆ ಚಾಲನೆ ನೀಡಿದರು. ಈ ಸಂದರ್ಭ ಮಾಜಿ ಸಚಿವ ಎಸ್. ಅಂಗಾರ, ಹಿಂದು ಧಾರ್ಮಿಕ ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ, ಗೌರಿಪುರಂ ದೇವಾಲಯದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ

ಬೆಳ್ಳಾರೆಯಲ್ಲಿ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಾಲಯ ನಿರ್ಮಾಣ | ಶಿಲಾಕಲ್ಲು ಮೆರವಣಿಗೆಗೆ ಚಾಲನೆ Read More »

error: Content is protected !!
Scroll to Top