ಪುತ್ತೂರಿನ ಯುವಕ ಅಮೆರಿಕದಲ್ಲಿ ನಡೆದ ಅಪಘಾತದಲ್ಲಿ ಮೃತ್ಯು | ಮೃತದೇಹ ಭಾರತಕ್ಕೆ ತರಲು ಅಗತ್ಯ ಕ್ರಮ ಕೈಗೊಳ್ಳಲು ಶಾಸಕ ಸಂಜೀವ ಮಠಂದೂರು ಒತ್ತಾಯ
ಪುತ್ತೂರು: ಬನ್ನೂರು ಆರ್.ಟಿ.ಓ. ಕಚೇರಿ ಬಳಿಯ ನಿವಾಸಿ ಸುಬ್ರಹ್ಮಣ್ಯ ಟಿ.ಎ. ಅವರು ಅಮೆರಿಕಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಮೃತದೇಹವನ್ನು ಭಾರತಕ್ಕೆ ತರುವ ನಿಟ್ಟಿನಲ್ಲಿ ಸರಕಾರ ಸೂಕ್ತ ಸೂಚನೆ ನೀಡುವಂತೆ ಶಾಸಕ ಸಂಜೀವ ಮಠಂದೂರು ಅವರು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಯನ್ನು ಒತ್ತಾಯಿಸಿದ್ದಾರೆ. ಪುತ್ತೂರು ನಗರಸಭೆ ವ್ಯಾಪ್ತಿಗೆ ಒಳಪಟ್ಟ ಬನ್ನೂರು ಸಮೀಪದ ನಿವಾಸಿ ಟಿ. ಅನಂತಕೃಷ್ಣ ಭಟ್ ಅವರ ಪುತ್ರ ಸುಬ್ರಹ್ಮಣ್ಯ ಟಿ.ಎ. (30 ವ.) ಮೃತಪಟ್ಟ ಯುವಕ. ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕದಲ್ಲಿ ನಡೆದ […]