ನ. 22-24: ಪುತ್ತೂರಿನಲ್ಲಿ “ಅಟ್ಟಾಮುಟ್ಟಾ ಮಕ್ಕಳ ನಾಟಕೋತ್ಸವ”

ಪುತ್ತೂರು: ಸಂಸಾರ ಜೋಡುಮಾರ್ಗ ಆಶ್ರಯದಲ್ಲಿ ರೋಟರಿ ಪುತ್ತೂರು ಎಲೈಟ್ ಸಹಭಾಗಿತ್ವದಲ್ಲಿ ನಿರತ ನಿರಂತ – ಬಹುವಚನಂ ಆಯೋಜನೆಯ ಮೂರು ದಿನಗಳ “ಅಟ್ಟಾಮುಟ್ಟಾ ಮಕ್ಕಳ ನಾಟಕೋತ್ಸವ” ನ. 22ರಿಂದ 24ರವರೆಗೆ ಪುತ್ತೂರು ಮಂಜಲ್ಪಡ್ಪು ಸುದಾನ ವಿದ್ಯಾಸಂಸ್ಥೆಗಳ ಆವರಣದಲ್ಲಿರುವ ಎಡ್ವರ್ಡ್ ಹಾಲ್ ನಲ್ಲಿ ನಡೆಯಲಿದೆ. ಮೂರು ದಿನಗಳ ಕಾಲ ಐದು ಮಕ್ಕಳ ನಾಟಕಗಳನ್ನು ಆಯೋಜಿಸಲಾಗಿದ್ದು, ಪ್ರತಿದಿನ ಸಂಜೆ 6.30ಕ್ಕೆ ನಾಟಕ ಆರಂಭಗೊಳ್ಳಲಿದೆ. ನ. 22ರ ಬುಧವಾರ ಸಂಜೆ 6.30ರಿಂದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಮಾಣಿ ಪೆರಾಜೆ ಇಲ್ಲಿಯ ವಿದ್ಯಾರ್ಥಿಗಳು […]

ನ. 22-24: ಪುತ್ತೂರಿನಲ್ಲಿ “ಅಟ್ಟಾಮುಟ್ಟಾ ಮಕ್ಕಳ ನಾಟಕೋತ್ಸವ” Read More »

ಶಾಲೆಗೆ ಬಂದು ಗಾಳಿಯಲ್ಲಿ ಗುಂಡು: ಯುವಕ ಬಂಧನ!

ಖಾಸಗಿ ಶಾಲೆಯೊಂದಕ್ಕೆ ಏರ್‌ಗನ್‌ನೊಂದಿಗೆ ಅತಿಕ್ರಮ ಪ್ರವೇಶ ಮಾಡಿದ ಯುವಕ ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ತ್ರಿಶೂರ್’ನ ನಾಯ್ಕನಾಲ್ ವಿವೇಕೋದಯಂ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆದಿದೆ. ಆರೋಪಿಯನ್ನು ತ್ರಿಶೂರ್ ಬಳಿಯ ಮುಲಾಯಂ ಮೂಲದ ಜಗನ್ (19) ಎಂದು ಗುರುತಿಸಲಾಗಿದೆ. ಬೆಳಗ್ಗೆ 10.30ರ ಸುಮಾರಿಗೆ ಘಟನೆ ನಡೆದಿದ್ದು, ಪೊಲೀಸರು ಶಾಲೆಗೆ ತೆರಳಿ ಯುವಕನನ್ನು ಬಂಧಿಸಿದ್ದಾರೆ. ಘಟನೆಯಿಂದ ವಿದ್ಯಾರ್ಥಿಗಳು ಮತ್ತು ಶಿಕ್ಷಕರಲ್ಲಿ ಆತಂಕ ಸೃಷ್ಟಿಯಾಗಿದೆ. ಈತ ಶಾಲೆಯ ಹಳೆ ವಿದ್ಯಾರ್ಥಿ. ಆತನ ಹುಚ್ಚಾಟದಿಂದ ಯಾವುದೇ ಪ್ರಾಣಹಾನಿಯಾಗಿಲ್ಲ. ಶಾಲಾ ದಿನಗಳಲ್ಲಿಯೇ ಯುವಕ ಮಾದಕ ವ್ಯಸನಿಯಾಗಿದ್ದ

ಶಾಲೆಗೆ ಬಂದು ಗಾಳಿಯಲ್ಲಿ ಗುಂಡು: ಯುವಕ ಬಂಧನ! Read More »

ತಾಲೂಕು ಮಟ್ಟದ ಛದ್ಮವೇಷ ಸ್ಪರ್ಧೆ: ವಿದ್ಯಾರಶ್ಮಿ ಯ ತನಯ್ ಡಿ.ಕೆ ಪ್ರಥಮ

ಪುತ್ತೂರು: ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯ ಛದ್ಮವೇಷ ಸ್ಪರ್ಧಾ ವಿಭಾಗದಲ್ಲಿ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ 1ನೇ ತರಗತಿಯ ತನಯ್ ಡಿ.ಕೆ. ಪ್ರಥಮ ಸ್ಥಾನಿಯಾಗಿದ್ದಾರೆ. ಇವರಿಗೆ ಸಂಸ್ಥೆಯ ಚಿತ್ರಕಲಾ ಶಿಕ್ಷಕ ಧನಂಜಯ ಮರ್ಕಂಜ ತರಬೇತಿ ನೀಡಿದ್ದರು. ವಿದ್ಯಾರ್ಥಿ ಮತ್ತು ಶಿಕ್ಷಕರನ್ನು ಸಂಚಾಲಕ ಸವಣೂರು ಸೀತಾರಾಮ ರೈ, ಆಡಳಿತಾಧಿಕಾರಿ ಅಶ್ವಿನ್ ಎಲ್. ಶೆಟ್ಟಿ ಮತ್ತು ಪ್ರಾಂಶುಪಾಲ ಸೀತಾರಾಮ ಕೇವಳ ಅಭಿನಂದಿಸಿದ್ದಾರೆ. ತನಯ್ ಡಿ.ಕೆ. ಅವರು ಧನಂಜಯ ಮರ್ಕಂಜ ಮತ್ತು ಚೇತನಾ ಎಸ್. ಕೊಚ್ಚಿ ಮರ್ಕಂಜ – ಸುಳ್ಯ ದಂಪತಿ ಪುತ್ರ.

ತಾಲೂಕು ಮಟ್ಟದ ಛದ್ಮವೇಷ ಸ್ಪರ್ಧೆ: ವಿದ್ಯಾರಶ್ಮಿ ಯ ತನಯ್ ಡಿ.ಕೆ ಪ್ರಥಮ Read More »

ಯಕ್ಷಗುರು, ಸಂಘಟಕ, ಅಧ್ಯಾಪಕ, ವೈದ್ಯ, ಕೈರಂಗಳ ನಾರಾಯಣ ಹೊಳ್ಳ ನಿಧನ

ಮಂಗಳೂರು: ಯಕ್ಷಗುರು, ಸಂಘಟಕ, ಕಲಾವಿದ, ಅಧ್ಯಾಪಕ, ವೈದ್ಯ, ಕೈರಂಗಳ ನಾರಾಯಣ ಹೊಳ್ಳ ಅವರು ನ. 21ರ ಮಂಗಳ ನಿಧನರಾದರು. ಮೂಲತಃ ಕಾಸರಗೋಡು ಜಿಲ್ಲೆಯ ಕೋಳ್ಯೂರಿನವರಾದ ನಾರಾಯಣ ಹೊಳ್ಳರು ಮುಂದೆ ಕೈರಂಗಳ ನಾರಾಯಣ ಹೊಳ್ಳ ಎಂದೇ ಪ್ರಸಿದ್ಧರಾದವರು. ಉಳ್ಳಾಲ ತಾಲೂಕಿನ ಕೈರಂಗಳದಲ್ಲಿ 1954ರಲ್ಲಿ ಗೋಪಾಲಕೃಷ್ಣ ಯಕ್ಷಗಾನ ಸಂಘವನ್ನು ಸ್ಥಾಪಿಸಿ ದಶಕಗಳ ಕಾಲ ಹಲವಾರು ಯಕ್ಷ ಪ್ರತಿಭೆಗಳ ಬೆಳವಣಿಗೆಗೆ ನೆರಳಾದವರು. ಕೈರಂಗಳ ಶಾಲೆಯಲ್ಲಿ ಅಧ್ಯಾಪಕರಾಗಿದ್ದ ನಾರಾಯಣ ಹೊಳ್ಳರು, ಹೋಮಿಯೋಪತಿ ಚಿಕಿತ್ಸಾ ಪದ್ಧತಿಯನ್ನು ಖಾಸಗಿಯಾಗಿ ಚಿಕಿತ್ಸೆ ನೀಡುತ್ತಿದ್ದ ವೈದ್ಯರೂ ಹೌದು. ಯಕ್ಷಗಾನದ

ಯಕ್ಷಗುರು, ಸಂಘಟಕ, ಅಧ್ಯಾಪಕ, ವೈದ್ಯ, ಕೈರಂಗಳ ನಾರಾಯಣ ಹೊಳ್ಳ ನಿಧನ Read More »

ಬೆಂಗಳೂರಿನ ಕೊಡಗು ಮತ್ತು ದ.ಕ. ಗೌಡ ಸಮಾಜದ ನೂತನ ಆಡಳಿತ ಮಂಡಳಿ ಪುನರ್ ರಚನೆ

ಬೆಂಗಳೂರು: ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ ಬೆಂಗಳೂರು ಇದರ 2023 -25ನೇ ಸಾಲಿನ ನೂತನ ಆಡಳಿತ ಮಂಡಳಿಯ ಪುನರ್ ರಚನೆ ನ. 19ರಂದು ಬೆಂಗಳೂರಿನ ಲಗ್ಗೆರೆಯಲ್ಲಿರುವ ನಮ್ಮನೆ ಆಡಳಿತ ಮಂಡಳಿಯ ಸಭಾಂಗಣದಲ್ಲಿ ನಡೆಯಿತು. ನಿರ್ದೇಶಕರುಗಳ ಆಡಳಿತ ಮಂಡಳಿ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು. ಸಮಾಜದ ನೂತನ ಅಧ್ಯಕ್ಷರಾಗಿ ಪಳಂಗಪ್ಪ ಪಾಣತ್ತಲೆ, ಉಪಾಧ್ಯಕ್ಷರಾಗಿ ನಾಗೇಶ್ ಕುಮಾರ್ ಕಲ್ಲುಮುಟ್ಲು, ಗೌರವ ಕಾರ್ಯದರ್ಶಿಯಾಗಿ ಸೋಮಣ್ಣ ಕುಂಭಗೌಡನ, ಖಜಾಂಜಿಯಾಗಿ ರಾಧಾಕೃಷ್ಣ ಗುತ್ತಿಗಾರುಮೂಲೆ, ಜಂಟಿ ಕಾರ್ಯದರ್ಶಿಗಳಾಗಿ ನಾಗೇಶ್ ಉಳುವಾರು ಬಂಟೋಡಿ

ಬೆಂಗಳೂರಿನ ಕೊಡಗು ಮತ್ತು ದ.ಕ. ಗೌಡ ಸಮಾಜದ ನೂತನ ಆಡಳಿತ ಮಂಡಳಿ ಪುನರ್ ರಚನೆ Read More »

ಲಷ್ಕರ್‌ ಎ ತೊಯ್ಬಾ ಭಯೋತ್ಪಾದಕ ಸಂಘಟನೆ: ಇಸ್ರೇಲ್‌ ಘೋಷಣೆ

ಮುಂಬೈ ಭಯೋತ್ಪಾದಕ ದಾಳಿ(26/11)ಯ 15ನೇ ವರ್ಷಾಚರಣೆಗೂ ಮುನ್ನವೇ ಮಹತ್ವದ ಬೆಳವಣಿಗೆ ಎಂಬಂತೆ ಪಾಕಿಸ್ತಾನ ಮೂಲದ ಲಷ್ಕರ್‌ ಎ ತೊಯ್ಬಾ ಭಯೋತ್ಪಾದಕ ಸಂಘಟನೆ ಎಂದು ಇಸ್ರೇಲ್ ಅಧಿಕೃತವಾಗಿ ಘೋಷಿಸಿದೆ ಎಂದು ವರದಿಯಾಗಿದೆ. ಇದೊಂದು ಮಾರಣಾಂತಿಕ ಹಾಗೂ ಖಂಡನಾರ್ಹ ಭಯೋತ್ಪಾದಕ ಸಂಘಟನೆಯಾಗಿದೆ ಎಂದು ತಿಳಿಸಿರುವ ಇಸ್ರೇಲ್‌, ಲಷ್ಕರ್‌ ಇ ತೊಯ್ಬಾ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ನಿರ್ಧರಿಸಲಾಗಿದೆ ಎಂದು ಹೇಳಿದೆ. ಆದರೆ ಈ ಬಗ್ಗೆ ಭಾರತದಿಂದ ಯಾವುದೇ ಮನವಿ ಬಂದಿಲ್ಲ ಎಂದು ಸ್ಪಷ್ಟಪಡಿಸಿದೆ. ಭಾರತ ಸರ್ಕಾರ ಯಾವುದೇ ವಿನಂತಿ ಮಾಡದಿದ್ದರೂ

ಲಷ್ಕರ್‌ ಎ ತೊಯ್ಬಾ ಭಯೋತ್ಪಾದಕ ಸಂಘಟನೆ: ಇಸ್ರೇಲ್‌ ಘೋಷಣೆ Read More »

ಚಿರತೆಯ ಗುಂಡಿಕ್ಕಿ ಹತ್ಯೆ: ಇಬ್ಬರ ಬಂಧನ!

ಚಿರತೆಯನ್ನು ಗುಂಡಿಕ್ಕಿ ಕೊಂದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದ್ದು, ಪೊಲೀಸರು ಚಿರತೆಯ ಅವಶೇಷಗಳನ್ನು ವಶಪಡಿಸಿಕೊಂಡಿದ್ದಾರೆ. ಶಂಕಿತ ಆರೋಪಿಗಳಾದ ಚಾಮರಾಜನಗರದ ಶಾಂತರಾಜು ಮತ್ತು ಅರ್ಜುನ್‌ ಎಂಬುವವರಿಂದ ಎರಡು ಕಂಟ್ರಿ ಪಿಸ್ತೂಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊಳ್ಳೇಗಾಲ ಗ್ರಾಮಾಂತರ ಠಾಣೆಯ ಪೊಲೀಸ್ ತಂಡವು ಆರೋಪಿಗಳನ್ನು ಬಂಧಿಸಿದೆ. ಖಚಿತ ಮಾಹಿತಿ ಮೇರೆಗೆ ಚಿಕ್ಕಲ್ಲೂರು ಬಳಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಅವರನ್ನು ಬಂಧಿಸಲಾಗಿದೆ. ಈ ವೇಳೆ ಪರಿಶೀಲಿಸಿದಾಗ ಅವರ ಬಳಿ ಎರಡು ದೇಶೀ ನಿರ್ಮಿತ ಪಿಸ್ತೂಲ್‌ಗಳು ಪತ್ತೆಯಾಗಿವೆ ಎಂದು ಹಿರಿಯ ಪೊಲೀಸ್

ಚಿರತೆಯ ಗುಂಡಿಕ್ಕಿ ಹತ್ಯೆ: ಇಬ್ಬರ ಬಂಧನ! Read More »

ಸುಬ್ರಹ್ಮಣ್ಯದಲ್ಲಿ ನೃತ್ಯೋಪಾಸನಾ ತಂಡದಿಂದ ನೃತ್ಯೋಹಂ ನೃತ್ಯ ವೈಭವ

ಸುಬ್ರಹ್ಮಣ್ಯ: ಪುತ್ತೂರು ನೃತ್ಯೋಪಾಸನಾ ಕಲಾ ಕೇಂದ್ರದ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದಲ್ಲಿ ಸುಬ್ರಹ್ಮಣ್ಯ ಶಾಖೆಯ ಕಲಾತಂಡದಿಂದ ನೃತ್ಯೋಹಂ ಭರತನಾಟ್ಯ ಶನಿವಾರ ಕುಕ್ಕೆ ಸುಬ್ರಹ್ಮಣ್ಯ ವನದುರ್ಗಾದೇವಿ ಸಭಾಂಗಣದಲ್ಲಿ ನಡೆಯಿತು. ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ಶ್ರೀ ಸುಬ್ರಹ್ಮಣ್ಯ ಮಠದ ಸುದರ್ಶನ ಜೋಯಿಸರು, ಸನಾತನ ಸಾಂಸ್ಕೃತಿಕ ಕಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಶಾಸ್ತ್ರೀಯ ಕಾರ್ಯಕ್ರಮಗಳು ಅನಿವಾರ್ಯ. ಪ್ರಸ್ತುತ ಪಾಶ್ಚಾತ್ಯ  ನೃತ್ಯ ಹಾಗೂ ಸೀರಿಯಲ್’ಗಳ ಭರಾಟೆಯ ನಡುವೆ ಇಂತಹ ಕಾರ್ಯಕ್ರಮಗಳು ಇನ್ನೂ ಹೆಚ್ಚು ನಡೆಯಬೇಕು ಎಂದು ಆಶಿಸಿದರು. ಇದೇ ಸಂದರ್ಭ

ಸುಬ್ರಹ್ಮಣ್ಯದಲ್ಲಿ ನೃತ್ಯೋಪಾಸನಾ ತಂಡದಿಂದ ನೃತ್ಯೋಹಂ ನೃತ್ಯ ವೈಭವ Read More »

ಶಾಸಕ ಶ್ರೀಮಂತರ್ ಗೌಡ ಅವರಿಗೆ ಕಡಬ ಒಕ್ಕಲಿಗ ಗೌಡ ಸಮುದಾಯ ಭವನ ಶಿಲಾನ್ಯಾಸದ ಆಮಂತ್ರಣ

ಕಡಬ: ಇಲ್ಲಿನ ಒಕ್ಕಲಿಗ ಗೌಡ ಸೇವಾ ಸಂಘದ ಪದಗ್ರಹಣ ಹಾಗೂ ಸಮುದಾಯ ಭವನದ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸುವಂತೆ ಶಾಸಕ ಶ್ರೀಮಂತರ್ ಗೌಡ ಅವರನ್ನು ಅವರ ಸೋಮವಾರಪೇಟೆಯ ಮನೆಯಲ್ಲಿ ಭೇಟಿಯಾಗಿ ಆಮಂತ್ರಣ ನೀಡಲಾಯಿತು. ಸಂಘ ಕೈಗೊಂಡ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಶ್ರೀಮಂತರ್ ಗೌಡ ಅವರು, ಮುಂದಿನ ಕೆಲಸಗಳಿಗೆ ಸಂಪೂರ್ಣ ಸಹಕಾರ ಹಾಗೂ ಬೆಂಬಲದ ಭರವಸೆ ನೀಡಿದರು. ಈ ಸಂದರ್ಭ ಕಡಬ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಸುರೇಶ್ ಬೈಲು, ಮಂಗಳೂರು ತಾಲೂಕು ಯುವ ಒಕ್ಕಲಿಗ

ಶಾಸಕ ಶ್ರೀಮಂತರ್ ಗೌಡ ಅವರಿಗೆ ಕಡಬ ಒಕ್ಕಲಿಗ ಗೌಡ ಸಮುದಾಯ ಭವನ ಶಿಲಾನ್ಯಾಸದ ಆಮಂತ್ರಣ Read More »

ಹೆತ್ತವರಿಗೆ ಕತ್ತಿಯಿಂದ ಹಲ್ಲೆಗೈದ ಮಗನ ಬಂಧನ!!

ಬೆಳ್ಳಾರೆ: ತಂದೆ-ತಾಯಿಯ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ ಆರೋಪಿ ಮಗನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಜಾಗದ ವಿಚಾರಕ್ಕಾಗಿ ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಕಲ್ಲಗದ್ದೆ ನಿವಾಸಿಗಳಾದ ಮಂಜುನಾಥ್ ಆಚಾರ್, ಧರ್ಮಾವತಿ ಅವರ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ್ದ ಎನ್ನಲಾಗಿದೆ. ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗಂಭೀರ ಗಾಯಗೊಂಡ ಮಂಜುನಾಥ್ ಆಚಾರ್ –ಧರ್ಮಾವತಿ ಅವರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

ಹೆತ್ತವರಿಗೆ ಕತ್ತಿಯಿಂದ ಹಲ್ಲೆಗೈದ ಮಗನ ಬಂಧನ!! Read More »

error: Content is protected !!
Scroll to Top