ಪಿಸ್ತೂಲ್ ತೋರಿಸಿ ಬೆದರಿಸಿದವರಿಂದ ಬುದ್ಧಿವಾದ ಬೇಕಿಲ್ಲ!! | ಶಾಸಕ ಅಶೋಕ್ ರೈ ಹೇಳಿಕೆಗೆ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ತಿರುಗೇಟು

ಪುತ್ತೂರು: ಬಿಜೆಪಿ ಸರಕಾರವಿದ್ದಾಗ ಹಿಂದೂ ಕಾರ್ಯಕರ್ತರ ಮೇಲೆ ಹಾಕಿದ್ದ ಪ್ರಕರಣಗಳ ಆಧಾರದಲ್ಲಿ ಗಡಿಪಾರು ಆದೇಶ ಮಾಡಲಾಗಿದೆ ಎಂಬ ಶಾಸಕ ಅಶೋಕ್ ಕುಮಾರ್ ರೈ ಅವರ ಹೇಳಿಕೆಗೆ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ತಿರುಗೇಟು ನೀಡಿದ್ದಾರೆ. ಉದ್ಯಮ ಕ್ಷೇತ್ರದಲ್ಲಿ ಕೆಲಸ ಮಾಡುವಾಗ ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿರುವ ವ್ಯಕ್ತಿಗಳು ಇಂದು ಬಿಜೆಪಿಗೆ ಬುದ್ಧಿವಾದ ಹೇಳುತ್ತಿದ್ದಾರೆ. ಅಂತಹವರಿಂದ ಬಿಜೆಪಿಗೆ ಬುದ್ಧಿವಾದ ಬೇಕಿಲ್ಲ. ಮೊದಲು ಅಂತಹ ವ್ಯಕ್ತಿಗಳನ್ನೇ ಗಡಿಪಾರು ಮಾಡಬೇಕು ಎಂದು ಸಾಜ ರಾಧಾಕೃಷ್ಣ ಆಳ್ವ ಆಗ್ರಹಿಸಿದರು. […]

ಪಿಸ್ತೂಲ್ ತೋರಿಸಿ ಬೆದರಿಸಿದವರಿಂದ ಬುದ್ಧಿವಾದ ಬೇಕಿಲ್ಲ!! | ಶಾಸಕ ಅಶೋಕ್ ರೈ ಹೇಳಿಕೆಗೆ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ತಿರುಗೇಟು Read More »

ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ವೈಟ್ ಲಿಫ್ಟರಿಗೆ ಪುತ್ತೂರಿನಲ್ಲಿ ಸ್ವಾಗತ

ಪುತ್ತೂರು: ರಾಜ್ಯ ಮಟ್ಟದ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ಪಿನಲ್ಲಿ ಚಿನ್ನದ ಪದಕ ಪಡೆದು ಪುತ್ತೂರಿಗೆ ಆಗಮಿಸಿದ ಇರ್ದೆ ಬೆಟ್ಟಂಪಾಡಿ ನಿವಾಸಿ ರಜತ್ ರೈ ಅವರಿಗೆ ಪುತ್ತೂರು ಬಸ್ ನಿಲ್ದಾಣದಲ್ಲಿ ಸ್ವಾಗತ ನೀಡಲಾಯಿತು. ಜನವರಿಯಲ್ಲಿ ಅರುಣಾಚಲ ಪ್ರದೇಶದಲ್ಲಿ ರಾಷ್ಟ್ರಮಟ್ಟದ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಡೆಯಲಿದೆ. ಇದರಲ್ಲಿ ರಜತ್ ರೈ ಭಾಗವಹಿಸಲಿದ್ದಾರೆ. ಪ್ರಮುಖರಾದ ಸಾಜಾ ರಾಧಾಕೃಷ್ಣ ಆಳ್ವ, ರಾಜೇಶ್ ಬನ್ನೂರು, ಅಜಿತ್ ರೈ ಹೊಸಮನೆ, ಸುದರ್ಶನ್ ಹೊಸಮೂಲೆ, ಅನಂತ್ ಮೊದಲಾದವರು ಉಪಸ್ಥಿತರಿದ್ದರು.

ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ವೈಟ್ ಲಿಫ್ಟರಿಗೆ ಪುತ್ತೂರಿನಲ್ಲಿ ಸ್ವಾಗತ Read More »

ಟೊಮೇಟೊ ಸಾಗಾಟದ ಟೆಂಪೋ ಪಲ್ಟಿ!!

ಬೆಳ್ತಂಗಡಿ: ಟೊಮೇಟೊ ಸಾಗಾಟದ ಟೆಂಪೋ ಪಲ್ಟಿಯಾದ ಘಟನೆ ಸೋಮವಾರ ರಾತ್ರಿ ಚಾರ್ಮಾಡಿ ಚೆಕ್ ಪೋಸ್ಟ್ ಸಮೀಪದ ವಲಸರಿ ಎಂಬಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ರಸ್ತೆ ಬದಿಯ ಚರಂಡಿಗೆ ಪಲ್ಟಿಯಾಗಿ ಬಿದ್ದಿತು. ಚಿಕ್ಕಮಗಳೂರು ಕಡೆಯಿಂದ ಉಜಿರೆಯತ್ತ ಟೊಮೇಟೊ ಸಾಗಾಟ ಮಾಡಲಾಗುತ್ತಿತ್ತು. ವಾಹನದಲ್ಲಿದ್ದವರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಸ್ಥಳೀಯರ ಸಹಕಾರದಿಂದ ಉರುಳಿ ಬಿದ್ದ ವಾಹನವನ್ನು ತೆರವು ಮಾಡಲಾಯಿತು.

ಟೊಮೇಟೊ ಸಾಗಾಟದ ಟೆಂಪೋ ಪಲ್ಟಿ!! Read More »

ಪುತ್ತಿಲ ಪರಿವಾರದಿಂದ ಪುತ್ತೂರಿನಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ, ಬೃಹತ್ ಸಂತ ಸಮ್ಮೇಳನ: ಪೂರ್ವಭಾವಿ ಸಭೆ

ಪುತ್ತೂರು: ಪುತ್ತಿಲ ಪರಿವಾರದ ವತಿಯಿಂದ ಡಿ. 24 ಮತ್ತು 25ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಲೋಕಕಲ್ಯಾಣರ್ಥವಾಗಿ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಬೃಹತ್ ಸಂತ ಸಮ್ಮೇಳನ ನಡೆಯುವ ಬಗ್ಗೆ ಪೂರ್ವಭಾವಿ ಸಭೆ ಮುಕ್ರಂಪಾಡಿಯ ಸುಭದ್ರ ಕಲ್ಯಾಣ ಮಂಟಪದಲ್ಲಿ ನಡೆಯಿತು. ಸಭೆಯಲ್ಲಿ ಮಾತನಾಡಿದ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಡಿ. 24ರ ಸಂಜೆ ತಿರುಪತಿಯಿಂದ ಆಗಮನವಾಗುವ ದೇವರನ್ನು ಬೊಳುವಾರಿನಿಂದ ಮೆರವಣಿಗೆಯಲ್ಲಿ ತರಲಾಗುವುದು. ರಾತ್ರಿ ಪೂಜೆ ನಂತರ ಸಾಂಸ್ಕೃತಿಕ ಕಾರ್ಯಕ್ರಮ ಮರುದಿನ ಬೆಳಿಗ್ಗೆ ವಿಶೇಷ ಉದಯಾಸ್ತಮಾನ ಪೂಜೆ,

ಪುತ್ತಿಲ ಪರಿವಾರದಿಂದ ಪುತ್ತೂರಿನಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ, ಬೃಹತ್ ಸಂತ ಸಮ್ಮೇಳನ: ಪೂರ್ವಭಾವಿ ಸಭೆ Read More »

ಕಾರು-ಸ್ಕೂಟಿ ಡಿಕ್ಕಿ: ಮಹಿಳೆಗೆ ಗಾಯ

ವಿಟ್ಲ: ಕಂಬಳಬೆಟ್ಟು ಕಾರ್ಯಾಡಿ ಕ್ರಾಸ್ ಬಳಿ  ಕಾರು ಮತ್ತು ಸ್ಕೂಟಿ ಢಿಕ್ಕಿ ಹೊಡೆದು  ಮಹಿಳೆಯೋರ್ವರು ಗಾಯಗೊಂಡಿದ್ದಾರೆ. ಸ್ಕೂಟಿ ಸವಾರೆ ದಿವ್ಯಾ ಗಾಯಗೊಂಡವರು. ಕನ್ಯಾನ ನಿವಾಸಿ  ಪ್ರಕಾಶ್  ಅವರು ಪತ್ನಿ ಮತ್ತು ಮಕ್ಕಳ ಜತೆ ಕಾರಿನಲ್ಲಿ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಸ್ಕೂಟಿಯಲ್ಲಿದ್ದ ದಿವ್ಯಾ ಕಾರ್ಯಾಡಿ ಒಳರಸ್ತೆಯಿಂದ ಕಂಬಳಬೆಟ್ಟುವಿಗೆ ಬರುತ್ತಿದ್ದರು. ಅಪಘಾತದಿಂದ ಅವರು ರಸ್ತೆಗೆ ಎಸೆಯಲ್ಪಟ್ಟರು ಎಂದು ಹೇಳಲಾಗಿದೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಟ್ಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಾರು-ಸ್ಕೂಟಿ ಡಿಕ್ಕಿ: ಮಹಿಳೆಗೆ ಗಾಯ Read More »

ಹೆತ್ತವರಿಗೆ ಪುತ್ರನಿಂದ ಕತ್ತಿಯಿಂದ ಹಲ್ಲೆ!!

ಬೆಳ್ಳಾರೆ : ತಂದೆ-ತಾಯಿಯ ಮೇಲೆ ಮಗನೇ ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ಬೆಳ್ಳಾರೆ ಸಮೀಪದ ಕಲ್ಲಗುಡ್ಡೆ ಕೊಡಿಯಾಲದಲ್ಲಿ ನಡೆದಿದೆ. ಬೆಳ್ಳಾರೆ ಸಮೀಪದ ಕಲ್ಲಗುಡ್ಡೆ ಕೊಡಿಯಾಳ ನಿವಾಸಿಗಳಾದ ಮಂಜುನಾಥ್, ಧರ್ಮಾವತಿ ಗಾಯಗೊಂಡ ದಂಪತಿಗಳು ಎಂದು ಗುರುತಿಸಲಾಗಿದೆ. ಪುತ್ರ ದೇವಿಪ್ರಸಾದ್ ಕತ್ತಿಯಿಂದ ಕಡಿದ ವ್ಯಕ್ತಿ. ಜಾಗದ ವಿಚಾರವಾಗಿ ಮನೆಯಲ್ಲಿ ಜಗಳ ನಡೆದಿದ್ದು, ಈ ವೇಳೆ ಮಗ ತಂದೆ-ತಾಯಿ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ್ದು, ಗಂಭೀರ ಗಾಯಗೊಂಡ ಅವರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.ಆರೋಪಿಯ ಬಂಧನಕ್ಕಾಗಿ ಪೊಲೀಸರು ಬಲೆ

ಹೆತ್ತವರಿಗೆ ಪುತ್ರನಿಂದ ಕತ್ತಿಯಿಂದ ಹಲ್ಲೆ!! Read More »

ಹೆತ್ತವರ ಮೇಲೆ ಪುತ್ರನಿಂದ ಹಲ್ಲೆ!!

ಬೆಳ್ಳಾರೆ : ತಂದೆ-ತಾಯಿಯ ಮೇಲೆ ಮಗನೇ ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ಬೆಳ್ಳಾರೆ ಸಮೀಪದ ಕಲ್ಲಗುಡ್ಡೆ ಕೊಡಿಯಾಲದಲ್ಲಿ ನಡೆದಿದೆ. ಬೆಳ್ಳಾರೆ ಸಮೀಪದ ಕಲ್ಲಗುಡ್ಡೆ ಕೊಡಿಯಾಳ ನಿವಾಸಿಗಳಾದ ಮಂಜುನಾಥ್, ಧರ್ಮವತಿ ಗಾಯಗೊಂಡ ದಂಪತಿ ಎಂದು ಗುರುತಿಸಲಾಗಿದೆ. ಪುತ್ರ ದೇವಿಪ್ರಸಾದ್‌ ಕತ್ತಿಯಿಂದ ಹಲ್ಲೆ ಮಾಡಿದ ವ್ಯಕ್ತಿ. ಜಾಗದ ವಿಚಾರವಾಗಿ ಮನೆಯಲ್ಲಿ ಜಗಳ ನಡೆದಿದ್ದು, ಈ ವೇಳೆ ಮಗ ತಂದೆ-ತಾಯಿ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ್ದು, ಗಂಭೀರ ಗಾಯಗೊಂಡ ಅವರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ಆರೋಪಿಯ ಬಂಧನಕ್ಕಾಗಿ

ಹೆತ್ತವರ ಮೇಲೆ ಪುತ್ರನಿಂದ ಹಲ್ಲೆ!! Read More »

ಪುತ್ತೂರು ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ‘ಕಲಾ ಸಂಗಮ-2023’

ಪುತ್ತೂರು: ದ.ಕ.ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕೆಯ್ಯೂರು ಕರ್ನಾಟಕ ಪಬ್ಲಿಕ್ ಸ್ಕೂಲ್ ಸಂಯುಕ್ತ ಆಶ್ರಯದಲ್ಲಿ ಪುತ್ತೂರು ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ‘ಕಲಾ ಸಂಗಮ-2023’ ಕೆಪಿಎಸ್ ಕೆಯ್ಯೂರಿನಲ್ಲಿ ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ದೀಪ ಬೆಳಗಿಸಿ ಉದ್ಘಾಟಿಸಿ, ಸರಕಾರಿ ಶಾಲೆಗಳನ್ನು ಉಳಿಸಬೇಕಾದರೆ ಪೋಷಕರು ಮಕ್ಕಳನ್ನು ಸರಕಾರಿ ಶಾಲೆಗೆ ಕಳುಹಿಸಬೇಕು. ಆದರೆ ಸರಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯ ಮತ್ತು ಶಿಕ್ಷಕರ ಕೊರತೆಯ ಕಾರಣಕ್ಕೆ ಹಲವು ಮಂದಿ ಪೋಷಕರು ತಮ್ಮ

ಪುತ್ತೂರು ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ‘ಕಲಾ ಸಂಗಮ-2023’ Read More »

ತಾಲೂಕು ಮಟ್ಟದ ಛದ್ಮವೇಷ ಸ್ಪರ್ಧೆ | ಜೀವಿತಾ ಎಲ್.ಎಲ್. ಜಿಲ್ಲಾ ಮಟ್ಟಕ್ಕೆ ಆಯ್ಕೆ

ಸವಣೂರು: ಪುತ್ತೂರು ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯ ಛದ್ಮವೇಷ ಸ್ಪರ್ಧಾ ವಿಭಾಗದಲ್ಲಿ 9ನೆ ತರಗತಿಯ ಜೀವಿತಾ ಎಲ್. ಎಲ್. ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸವಣೂರು ವಿದ್ಯಾರಶ್ಮಿ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿಯಾಗಿರುವ ಜೀವಿತಾ ಎಲ್.ಎಲ್. ಹಾಸನ ಲಕ್ಕುಂದದ ಲೋಹಿತಾಶ್ವ ಎಲ್. ಡಿ. ಮತ್ತು ಹರ್ಷಿತಾ ಎನ್. ಪಿ. ದಂಪತಿ ಪುತ್ರಿ. ಇವರಿಗೆ ಸಂಸ್ಥೆಯ ಚಿತ್ರಕಲಾ ಶಿಕ್ಷಕ ಧನಂಜಯ ಮರ್ಕಂಜ ತರಬೇತಿ ನೀಡಿದ್ದರು. ವಿದ್ಯಾರ್ಥಿ ಮತ್ತು ಶಿಕ್ಷಕರನ್ನು ಸಂಚಾಲಕ ಸವಣೂರು ಸೀತಾರಾಮ ರೈ, ಆಡಳಿತಾಧಿಕಾರಿ

ತಾಲೂಕು ಮಟ್ಟದ ಛದ್ಮವೇಷ ಸ್ಪರ್ಧೆ | ಜೀವಿತಾ ಎಲ್.ಎಲ್. ಜಿಲ್ಲಾ ಮಟ್ಟಕ್ಕೆ ಆಯ್ಕೆ Read More »

ಪುತ್ತೂರು ಆಗಮಿಸಿದ ನೂತನ 6 ಕೆ.ಎಸ್.ಆರ್.ಟಿ.ಸಿ. ಬಸ್ ಗೆ ಹಸಿರು ಧ್ವಜ ತೋರಿಸಿದ ಶಾಸಕ ಅಶೋಕ್ ರೈ

ಪುತ್ತೂರು: ಕೆಎಸ್‌ಆರ್‌ಟಿಯ ಪುತ್ತೂರು ಘಟಕಕ್ಕೆ ನೂತನವಾಗಿ ಆಗಮಿಸಿದ ಆರು ಬಸ್‌ಗಳಿಗೆ ಸೋಮವಾರ ಚಾಲನೆ ನೀಡಲಾಯಿತು. ಶಾಸಕ ಅಶೋಕ್ ಕುಮಾರ್ ರೈ ಹಸಿರು ಧ್ವಜ ಪ್ರದರ್ಶಿಸುವ ಮೂಲಕ ಚಾಲನೆ ನೀಡಿ, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಸಾರಿಗೆ ಸಚಿವರೊಂದಿಗೆ ಚರ್ಚಿಸಿದಾಗ 25-30 ಜೊಸ ಬಸ್‌ಗಳನ್ನು ನೀಡುವುದಾಗಿ ತಿಳಿಸಿದ್ದಾರೆ. ಈ ಪೈಕಿ ಎರಡು ಪಲ್ಲಕಿ ಬಸ್ ಹಾಗೂ 8 ಕರ್ನಾಟಕ ಸಾರಿಗೆ ಬಸ್‌ಗಳು ಬಂದಿವೆ. ಸ್ಥಳೀಯವಾಗಿ ಸಂಚರಿಸಲು ತಾತ್ಕಾಲಿಕವಾಗಿ ಆರು ಬಸ್‌ಗಳನ್ನು

ಪುತ್ತೂರು ಆಗಮಿಸಿದ ನೂತನ 6 ಕೆ.ಎಸ್.ಆರ್.ಟಿ.ಸಿ. ಬಸ್ ಗೆ ಹಸಿರು ಧ್ವಜ ತೋರಿಸಿದ ಶಾಸಕ ಅಶೋಕ್ ರೈ Read More »

error: Content is protected !!
Scroll to Top