ಮುರುಘಾ ಶ್ರೀ ಬಂಧನಕ್ಕೆ ಹೈಕೋರ್ಟ್ ತಡೆ?!

ಬೆಂಗಳೂರು: 2ನೇ ಫೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾ ಶ್ರೀಗಳಿಗೆ ಬಂಧನಕ್ಕೆ ತಡೆ ನೀಡಿ ಹೈಕೋರ್ಟ್ ಆದೇಶ ನೀಡಿದೆ. ಸೋಮವಾರ ಮಧ್ಯಾಹ್ನ ಬಂಧನವಾದ ಬೆನ್ನಲ್ಲೇ, ಹೈಕೋರ್ಟ್ ಈ ಮಹತ್ವದ ಆದೇಶವನ್ನು ನೀಡಿದೆ. ಜಾಮೀನು ಮಂಜೂರು ಮಾಡಿರುವ ಕೋರ್ಟ್, ಬಂಧನ ಮಾಡದಂತೆ ಚಿತ್ರದುರ್ಗ ಕಾರಾಗೃಹಕ್ಕೆ ಆದೇಶಿಸಿದೆ. ಚಿತ್ರದುರ್ಗ ಜಿಲ್ಲಾ ನ್ಯಾಯಾಲಯದ ಆದೇಶದಂತೆ ಮುರುಘಾ ಶ್ರೀಗಳನ್ನು ಬಂಧಿಸಲಾಗಿತ್ತು. ಈ ಪ್ರಕರಣದ ಮಾಹಿತಿಯನ್ನು ಇಮೇಲ್ ಮೂಲಕ ನೀಡಲು ಆದೇಶದಲ್ಲಿ ತಿಳಿಸಲಾಗಿದೆ.

ಮುರುಘಾ ಶ್ರೀ ಬಂಧನಕ್ಕೆ ಹೈಕೋರ್ಟ್ ತಡೆ?! Read More »

ಮುರುಘಾ ಶರಣರಿಗೆ 14 ದಿನಗಳ ನ್ಯಾಯಾಂಗ ಬಂಧನ!!

ಚಿತ್ರದುರ್ಗ: ಮುರುಘಾ ಮಠದ ಡಾ. ಶ್ರೀ. ಶಿವಮೂರ್ತಿ ಮುರುಘಾ ಶರಣರಿಗೆ ಡಿಸೆಂಬರ್ 2ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಜಿಲ್ಲಾ ನ್ಯಾಯಾಲಯ ಆದೇಶಿಸಿದೆ. ಸೋಮವಾರ ಮಧ್ಯಾಹ್ನ 12 ಗಂಟೆಗೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿತ್ತು. ನ್ಯಾಯಾಲಯದ ಆದೇಶ ಹೊರಬಿದ್ದ ಬೆನ್ನಲ್ಲೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ದಾವಣಗೆರೆ ವಿರಕ್ತ ಮಠಕ್ಕೆ ತೆರಳಿ ಶ್ರೀಗಳನ್ನು ವಶಕ್ಕೆ ಪಡೆದು, ಜಿಲ್ಲಾ ನ್ಯಾಯಾಲಯಕ್ಕೆ ಕರೆತಂದು ಹಾಜರುಪಡಿಸಿದರು. ಮೊದಲ ಪೋಕ್ಸೋ ಪ್ರಕರಣದಲ್ಲಿ ಜಾಮೀನಿನ ಮೇಲೆ

ಮುರುಘಾ ಶರಣರಿಗೆ 14 ದಿನಗಳ ನ್ಯಾಯಾಂಗ ಬಂಧನ!! Read More »

ಗಡಿಪಾರು ಆಗಲಿರುವ ಯುವಕರ ಮೇಲೆ ಕೇಸು ಹಾಕಿದ್ದೇ ಬಿಜೆಪಿ ಸರಕಾರ: ಅಶೋಕ್ ರೈ

ಪುತ್ತೂರು: ಮತೀಯ ಗಲಭೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಪುತ್ತೂರಿನ ಕೆಲವು ಯುವಕರ ಮೇಲೆ ಗಡಿಪಾರು ನೋಟೀಸ್ ಜಾರಿಯಾಗಿದೆ. ಬಿಜೆಪಿ ಸರಕಾರವೇ ಈ ಯುವಕರ ಮೇಲೆ ಕೇಸು ಮಾಡಿಸಿದ್ದು, ಈಗ ಬಿಜೆಪಿಯವರು ಯುವಕರ ಪರ ಪ್ರತಿಭಟನೆಯ ನಾಟಕವಾಡುತ್ತಿದ್ದಾರೆ. ಜನ ಎಲ್ಲವನ್ನೂ ಗಮನಿಸುತ್ತಿದ್ದಾರೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಮಾಧ್ಯಮದ ಜೊತೆ ಮಾತನಾಡಿದ ಅವರು ಈ ವಿಚಾರದಲ್ಲಿ ಬಿಜೆಪಿ ನಾಯಕರು ಆತ್ಮ ವಿಮರ್ಶೆ ಮಾಡಿಕೊಳ್ಳುವುದು ಉತ್ತಮ. ಯುವಕರನ್ನು ಬಳಕೆ ಮಾಡಿ ಅವರ ಮೇಲೆ ಕೇಸು ಹಾಕಿಸಿ ಅವರನ್ನು

ಗಡಿಪಾರು ಆಗಲಿರುವ ಯುವಕರ ಮೇಲೆ ಕೇಸು ಹಾಕಿದ್ದೇ ಬಿಜೆಪಿ ಸರಕಾರ: ಅಶೋಕ್ ರೈ Read More »

ವಿದ್ಯುತ್ ತಂತಿ ತುಳಿದು ತಾಯಿ-ಮಗು ಸಜೀವ ದಹನ!! | 5 ಬೆಸ್ಕಾಂ ಅಧಿಕಾರಿಗಳಿಗೆ ಜಾಮೀನು!!

ಬೆಂಗಳೂರು: ವಿದ್ಯುತ್ ತಂತಿ ತುಳಿದು ತಾಯಿ ಮತ್ತು ಮಗು ಸಾವಿಗೀಡಾದ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂಯ ಐವರು ಅಧಿಕಾರಿಗಳನ್ನು ಠಾಣಾ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಸೋಮವಾರ ಮೂಲಗಳು ತಿಳಿಸಿವೆ. ಬೆಸ್ಕಾಂ ಕಚೇರಿಯಿಂದ 100 ಮೀಟರ್ ದೂರದಲ್ಲಿರುವ ವೈಟ್‌ಫೀಲ್ಡ್ ಮುಖ್ಯರಸ್ತೆಯ ಹೋಪ್ ಫಾರ್ಮ್ ಜಂಕ್ಷನ್ ಬಳಿ ಭಾನುವಾರ ಫುಟ್‌ಪಾತ್‌ನಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಸೌಂದರ್ಯ (23) ಮತ್ತು ಅವರ ಒಂಬತ್ತು ತಿಂಗಳ ಮಗು ಸಜೀವ ದಹನವಾಗಿದ್ದರು.

ವಿದ್ಯುತ್ ತಂತಿ ತುಳಿದು ತಾಯಿ-ಮಗು ಸಜೀವ ದಹನ!! | 5 ಬೆಸ್ಕಾಂ ಅಧಿಕಾರಿಗಳಿಗೆ ಜಾಮೀನು!! Read More »

ಎನ್.ಇ.ಪಿ. ರದ್ದು ನಿರ್ಧಾರ ವಿರೋಧಿಸಿ ಎಬಿವಿಪಿಯಿಂದ ಸಹಿ ಸಂಗ್ರಹ

ಪುತ್ತೂರು: ಎನ್.ಇ.ಪಿ.ಯನ್ನು ರದ್ದುಗೊಳಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಎಬಿವಿಪಿ ಪುತ್ತೂರು ಘಟಕದ ವತಿಯಿಂದ ಸಹಿಸಂಗ್ರಹ ಅಭಿಯಾನ ನಡೆಯಿತು. ಸಹಿ ಸಂಗ್ರಹ ಅಭಿಯಾನಕ್ಕೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ಕ್ಯಾಂಪಸ್ ಅಧಿಕಾರಿ ಲಕ್ಷ್ಮಿ ಪ್ರಸಾದ್ ಚಾಲನೆ ನೀಡಿದರು. ಎಬಿವಿಪಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶ್ರೀರಾಮ, ನಗರ ಸಹ ಕಾರ್ಯದರ್ಶಿ ಭುವನ್, ವಿವೇಕಾನಂದ ಪದವಿ ಕಾಲೇಜು ಕಾರ್ಯದರ್ಶಿ ಸುಪ್ರೀತ್ ಅಮೈ, ಮನೀಶ್, ಸುಬ್ರಮಣಿ, ಶ್ರೇಯಸ್, ಭರತ್, ಅಚಲ್, ಆದರ್ಶ ಮೊದಲಾದವರು ಉಪಸ್ಥಿತರಿದ್ದರು.

ಎನ್.ಇ.ಪಿ. ರದ್ದು ನಿರ್ಧಾರ ವಿರೋಧಿಸಿ ಎಬಿವಿಪಿಯಿಂದ ಸಹಿ ಸಂಗ್ರಹ Read More »

ವಿದೇಶದಲ್ಲಿ ಬಂಧಿಯಾಗಿದ್ದ ಕಡಬದ ಯುವಕ ಬಿಡುಗಡೆ; ಇಂದು ಮಂಗಳೂರಿಗೆ!

ಕಡಬ: ಸೌದಿ ಅರೇಬಿಯಾದ ರಿಯಾದ್‌ನ ಜೈಲಿನಲ್ಲಿ ಬ್ಯಾಂಕ್‌ ಖಾತೆ ಹ್ಯಾಕರ್‌ಗಳ ಸುಳಿಗೆ ಸಿಲುಕಿ ವಂಚನೆ ಆರೋಪಕ್ಕೆ ಒಳಗಾಗಿ ಕಳೆದ 11 ತಿಂಗಳಿನಿಂದ ಬಂಧಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರು ಗ್ರಾಮದ ಮೂಜೂರು ನಿವಾಸಿ ಚಂದ್ರಶೇಖರ್‌ ಕೊನೆಗೂ ಬಂಧನ ಮುಕ್ತರಾಗಿ ಇಂದು ಊರಿಗೆ ಆಗಮಿಸಲಿದ್ದಾರೆ. ಸೌದಿಯ ರಿಯಾದ್‌ನಿಂದ ಅಲ್ಲಿನ ಪೊಲೀಸರು ಚಂದ್ರಶೇಖರ್‌ ಅವರನ್ನು ಇಂದು ವಿಮಾನದಲ್ಲಿ ಮುಂಬಯಿಗೆ ಕಳುಹಿಸಿಕೊಡಲಿದ್ದು, ಅಲ್ಲಿಂದ ಅವರು ಬಹುತೇಕ ಸಂಜೆ ಸುಮಾರು ಏಳು ಗಂಟೆ ವೇಳೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ

ವಿದೇಶದಲ್ಲಿ ಬಂಧಿಯಾಗಿದ್ದ ಕಡಬದ ಯುವಕ ಬಿಡುಗಡೆ; ಇಂದು ಮಂಗಳೂರಿಗೆ! Read More »

ಮೈತ್ರಿ ಮುಟ್ಟಿನ ಕಪ್ ವಿತರಣೆ

ಪುತ್ತೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದ.ಕ., ತಾಲೂಕು ಆರೋಗ್ಯಾಧಿಕಾರಿ ಕಚೇರಿ, ಕೊಂಬೆಟ್ಟು ಪ.ಪೂ. ಕಾಲೇಜು ಸಹಯೋಗದೊಂದಿಗೆ ಮೈತ್ರಿ ಮುಟ್ಟಿನ ಕಪ್ ವಿತರಣಾ ಕಾರ್ಯಕ್ರಮ ಸೋಮವಾರ ಕೊಂಬೆಟ್ಟು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ಶಾಲಾ ವಿದ್ಯಾರ್ಥಿಗಳಿಗೆ ಮುಟ್ಟಿನ ಕಪ್ ವಿತರಣೆ ಮಾಡಿ, ಸುರಕ್ಷತೆ ಮತ್ತು ಸ್ವಚ್ಛತಾ ದೃಷ್ಟಿಯಿಂದ ಆರೋಗ್ಯದ ಕಡೆ ಸರಕಾರ ಹೆಚ್ಚಿನ ಗಮನ ನೀಡುತ್ತಿದ್ದು, ಈ ನಿಟ್ಟಿನಲ್ಲಿ ಕಪ್ ವಿತರಣೆ ಆಗುತ್ತಿದೆ. ಈ ಹಿಂದೆ ಸ್ಯಾನಿಟರಿ ಕಿಟ್ ನೀಡಲಾಗುತ್ತಿತ್ತು. ಅದರಲ್ಲಿ

ಮೈತ್ರಿ ಮುಟ್ಟಿನ ಕಪ್ ವಿತರಣೆ Read More »

ಪುತ್ತೂರಿಗೆ ಟೂರಿಸಂ ಮಾನ್ಯತೆಗೆ ಪ್ರಯತ್ನ | ನವೀಕೃತ ಶ್ರೀ ಮಹಾಲಿಂಗೇಶ್ವರ ಸಭಾಭವನ ಸಮರ್ಪಣೆ ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ಕುಮಾರ್ ರೈ | ಗೋಲೋಕ ಉತ್ಸವ ಕುರಿತು ಯೋಜನೆ: ಕೇಶವ ಪ್ರಸಾದ್ ಮುಳಿಯ

ಪುತ್ತೂರು: ಕರಾವಳಿ ಭಾಗ ಧಾರ್ಮಿಕತೆಗೆ ಹೆಚ್ಚಿನ ಆದ್ಯತೆ ನೀಡಿದೆ. ಈ ನಿಟ್ಟಿನಲ್ಲಿ ಪುತ್ತೂರನ್ನು ಟೂರಿಸಂ ಪ್ರದೇಶ ಆಗುವ ನಿಟ್ಟಿನಲ್ಲಿ ಮಾನ್ಯತೆ ನೀಡಿ ದೇವಸ್ಥಾನದ ಅಭಿವೃದ್ಧಿ ಕಾರ್ಯಗಳನ್ನು ಮಾಸ್ಟರ್ ಪ್ಲಾನ್ ಸಹಿತ ಮಾಡಲಾಗುವುದು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ನವೀಕೃತಗೊಂಡಿರುವ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶ್ರೀ ಮಹಾಲಿಂಗೇಶ್ವರ ಸಭಾಭವನದ ಸಮರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಈಗಾಗಲೇ ಅಭಿವೃದ್ಧಿ ಕಾರ್ಯಕ್ರಮಗಳಲ್ಲೊಂದಾದ ಸಭಾಭವನ ಸಮರ್ಪಣೆ ಕಾರ್ಯ ನಡೆದಿದೆ. ಮುಂದಿನ ದಿನಗಳಲ್ಲಿ ಕೆರೆಯಲ್ಲಿ ಕಾರಂಜಿ, ಕೆರೆಯ

ಪುತ್ತೂರಿಗೆ ಟೂರಿಸಂ ಮಾನ್ಯತೆಗೆ ಪ್ರಯತ್ನ | ನವೀಕೃತ ಶ್ರೀ ಮಹಾಲಿಂಗೇಶ್ವರ ಸಭಾಭವನ ಸಮರ್ಪಣೆ ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ಕುಮಾರ್ ರೈ | ಗೋಲೋಕ ಉತ್ಸವ ಕುರಿತು ಯೋಜನೆ: ಕೇಶವ ಪ್ರಸಾದ್ ಮುಳಿಯ Read More »

ಬಜರಂಗದಳ ಕಾರ್ಯಕರ್ತರಿಗೆ ಗಡಿಪಾರು ಆದೇಶದ ವಿರುದ್ಧ ಬೃಹತ್‍ ಪ್ರತಿಭಟನೆ

ಪುತ್ತೂರು: ಬಜರಂಗದಳ ಕಾರ್ಯಕರ್ತರ ಮೇಲೆ ಗಡಿಪಾರು ನೋಟೀಸ್ ಜಾರಿ ಮಾಡಿ ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಹತ್ತಿಕ್ಕುವ ಹಿಂದೂ ವಿರೋಧಿ ಆಡಳಿತ ವ್ಯವಸ್ಥೆಯ ವಿರುದ್ಧ ವಿಶ್ವ ಹಿಂದೂ ಪರಿಷತ್ ಬಜರಂಗದಳದ ವತಿಯಿಂದ ಬೃಹತ್ ಪ್ರತಿಭಟನೆ ಸೋಮವಾರ ಆಡಳಿತ ಸೌಧದ ಎದುರಿರುವ ಜೈ ಜವಾನ್ ಸ್ಮಾರಕದ ಬಳಿ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಬಜರಂಗದಳ ದಕ್ಷಿಣ ಪ್ರಾಂತ ಸಂಯೋಜಕ ಸುನೀಲ್ ಕೆ.ಆರ್. ಮಾತನಾಡಿ, ದೇಶದ ಪರವಾಗಿ ಕೆಲಸ ಮಾಡುತ್ತಿರುವ, ದೇಶದ ಸಾಂಸ್ಕೃತಿಕತೆಯ ಪ್ರತೀಕವಾದ ಗೋವಿನ ರಕ್ಷಣೆ, ಹಿಂದೂ ಹೆಣ್ಣು ಮಕ್ಕಳ ರಕ್ಷೆಯಲ್ಲಿ ತೊಡಗಿಕೊಂಡಿರುವ

ಬಜರಂಗದಳ ಕಾರ್ಯಕರ್ತರಿಗೆ ಗಡಿಪಾರು ಆದೇಶದ ವಿರುದ್ಧ ಬೃಹತ್‍ ಪ್ರತಿಭಟನೆ Read More »

ಭಾರತ ಮೂಲದ ಹಡಗು ಕೆಂಪು ಸಮುದ್ರದಲ್ಲಿ ಅಪಹರಣ!!

ನವದೆಹಲಿ: ಟರ್ಕಿಯಿಂದ ಭಾರತಕ್ಕೆ ಹೊರಟಿದ್ದ ಸರಕು ಸಾಗಣೆ ಹಡಗನ್ನು ಯೆಮೆನ್‌ನ ಹೌತಿ ಬಂಡುಕೋರರು ಕೆಂಪು ಸಮುದ್ರದಲ್ಲಿ ಅಪಹರಿಸಿದ್ದಾರೆ ಎಂದು ಇಸ್ರೇಲ್ ಹೇಳಿದೆ. ಟರ್ಕಿಯಿಂದ ಭಾರತಕ್ಕೆ ಹೊರಟಿದ್ದ ಸರಕು ಸಾಗಣೆ ಹಡಗನ್ನು ಯೆಮೆನ್‌ನ ಹೌತಿ ಬಂಡುಕೋರರು ಕೆಂಪು ಸಮುದ್ರದಲ್ಲಿ ಅಪಹರಿಸಿದ್ದು, ಹಡಗಿನಲ್ಲಿ ವಿವಿಧ ರಾಷ್ಟ್ರಗಳಿಗೆ ಸೇರಿದ ಸುಮಾರು 25 ಸಿಬ್ಬಂದಿ ಇದ್ದಾರೆ. ಇಸ್ರೇಲ್‌ ಹಡಗನ್ನು ಹೈಜಾಕ್ ಮಾಡಿರುವುದಾಗಿ ಹೌತಿಗಳು ಹೇಳಿದ್ದರು. ಆದರೆ ಹೌತಿಗಳ ಹೇಳಿಕೆಯನ್ನು ನಿರಾಕರಿಸಿರುವ ಇಸ್ರೇಲ್ ಸರ್ಕಾರ, ಅಪಹರಣಕ್ಕೊಳಗಾದ ಗ್ಯಾಲಕ್ಸಿ ಲೀಡರ್ ಹಡಗಿನಲ್ಲಿ ಯಾವುದೇ ಭಾರತೀಯರು ಇಲ್ಲ. ಅಲ್ಲದೆ

ಭಾರತ ಮೂಲದ ಹಡಗು ಕೆಂಪು ಸಮುದ್ರದಲ್ಲಿ ಅಪಹರಣ!! Read More »

error: Content is protected !!
Scroll to Top