ಬಿಡುಗಡೆ ಬೆನ್ನಲ್ಲೇ ಮುರುಘಾಶ್ರೀ ವಿರುದ್ಧ ಕೋರ್ಟ್​ನಿಂದ ಅರೆಸ್ಟ್ ವಾರಂಟ್ ಜಾರಿ!

ಚಿತ್ರದುರ್ಗ: ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಒಂದು ವರ್ಷ ಹಿಂದೆ ಜೈಲು ಪಾಲಾಗಿ ನಾಲ್ಕು ದಿನಗಳ ಹಿಂದೆ ಜಾಮೀನು ಮೇಲೆ ಹೊರಬಂದಿದ್ದ ಚಿತ್ರದುರ್ಗದ ಮರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರಿಗೆ ಮತ್ತೆ ಬಂಧನ ಭೀತಿ ಎದುರಾಗಿದೆ.  ಚಿತ್ರದುರ್ಗದ 2ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯದಿಂದ ಶರಣರ ವಿರುದ್ಧ ಅರೆಸ್ಟ್ ವಾರಂಟ್ ಜಾರಿಯಾಗಿದೆ. ಯಾವುದೇ ಕ್ಷಣದಲ್ಲಿ ಶಿವಮೂರ್ತಿ ಮುರುಘಾ ಶರಣರ ಬಂಧನವಾಗುವ ಸಾಧ್ಯತೆಯಿದೆ.  2ನೇ ಪೋಕ್ಸೋ ಕೇಸ್​ನಲ್ಲಿ ಅರೆಸ್ಟ್ ವಾರಂಟ್​​ ಜಾರಿ ಮಾಡಿದ ಕೋರ್ಟ್​​, 1ನೇ ಪೋಕ್ಸೋ ಕೇಸ್​ನಲ್ಲಿ […]

ಬಿಡುಗಡೆ ಬೆನ್ನಲ್ಲೇ ಮುರುಘಾಶ್ರೀ ವಿರುದ್ಧ ಕೋರ್ಟ್​ನಿಂದ ಅರೆಸ್ಟ್ ವಾರಂಟ್ ಜಾರಿ! Read More »

ವಿಶ್ವಕಪ್ ನಲ್ಲಿ ಭಾರತಕ್ಕೆ ಸೋಲು: ರೋಹಿತ್ ಶರ್ಮ ಭಾವುಕ ಮಾತು

ನವದೆಹಲಿ: ನಿನ್ನೆ ನಡೆದ ವಿಶ್ವಕಪ್​ ಫೈನಲ್​ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲು ಅನುಭವಿಸುವ ಮೂಲಕ ಅಸಂಖ್ಯಾತ ಭಾರತೀಯರ ಕನಸು ನುಚ್ಚು ನೂರಾಯಿತು. ಮಹತ್ವದ ಪಂದ್ಯದಲ್ಲಿ ಹೀನಾಯ ಸೋಲಿನ ಬಗ್ಗೆ ಮಾತನಾಡಿದ ರೋಹಿತ್ ಅವರು​, ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಅಂತಿಮ ಹಣಾಹಣಿಯಲ್ಲಿ ನಮ್ಮ ತಂಡ ಉತ್ತಮವಾಗಿ ಬ್ಯಾಟಿಂಗ್​ ಮಾಡಲಿಲ್ಲ ಎಂದು ಒಪ್ಪಿಕೊಂಡರು. ನಾವು ಉತ್ತಮವಾಗಿ ಆಡಲಿಲ್ಲ: ಪಂದ್ಯದ ಬಳಿಕ ನೋವಿನಿಂದಲೇ ಮಾತನಾಡಿದ ರೋಹಿತ್​, ಫೈನಲ್‌ಗೆ ಈ ಪಿಚ್​ ತುಂಬಾ ಕಷ್ಟಕರ ಆಗಿತ್ತು, ಬಹಳ ಶುಷ್ಕದಿಂದ ಕೂಡಿತ್ತು ಮತ್ತು ಟಾಸ್ ಗೆದ್ದ

ವಿಶ್ವಕಪ್ ನಲ್ಲಿ ಭಾರತಕ್ಕೆ ಸೋಲು: ರೋಹಿತ್ ಶರ್ಮ ಭಾವುಕ ಮಾತು Read More »

ನ. 25: ಗ್ರಾಮ ಸಾಹಿತ್ಯ ದಶ ಸಂಭ್ರಮ

ಪುತ್ತೂರು: ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನೇತೃತ್ವದಲ್ಲಿ ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ ಎಂಬ ಘೋಷ ವಾಕ್ಯದೊಂದಿಗೆ ಗ್ರಾಮ ಸಾಹಿತ್ಯ ದಶ ಸಂಭ್ರಮ ಕಾರ್ಯಕ್ರಮ ನ. 25ರಂದು ಬಜತ್ತೂರು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ. ಪುತ್ತೂರು ಶಿಕ್ಷಣ ಇಲಾಖೆ, ಬಜತ್ತೂರು ಗ್ರಾಮ ಪಂಚಾಯಿತಿ ಸಹಕಾರದೊಂದಿಗೆ ಚಿಗುರೆಲೆ ಸಾಹಿತ್ಯ ಬಳಗದ ಸಂಯೋಜನೆಯೊಂದಿಗೆ ಮಿತ್ರಂಪಾಡಿ ಜಯರಾಮ ರೈ ಅವರ ಪೋಷಕತ್ವದಲ್ಲಿ ನಡೆಯುವ ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಗಂಗಾಧರ ಪಿ.ಎನ್. ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ವಿಮಲಾ

ನ. 25: ಗ್ರಾಮ ಸಾಹಿತ್ಯ ದಶ ಸಂಭ್ರಮ Read More »

ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಪುತ್ತೂರು: ಸುಳ್ಯದ ಹಿರಿಯರ ಕ್ರೀಡಾ ಸಂಘದ ನೇತೃತ್ವದಲ್ಲಿ ಪಂಜ ಶ್ರೀ ಕೋಟಿ ಚೆನ್ನಯ ಕ್ರೀಡಾಂಗಣದಲ್ಲಿ ನಡೆದ ಸುಳ್ಯ, ಕಡಬ ಹಾಗೂ ಪುತ್ತೂರು ತಾಲೂಕು 10ನೇ ಹಿರಿಯರ ಕ್ರೀಡಾಕೂಟದಲ್ಲಿ ದರ್ಬೆತ್ತಡ್ಕದ ವೆಂಕಟೇಶ್ ಪ್ರಸಾದ್ ಪಾಲ್ಗೊಂಡು ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಉದ್ದ ಜಿಗಿತ, ಜಾವೆಲಿನ್ ಮತ್ತು ಡಿಸ್ಕಸ್ ತ್ರೋಗಳಲ್ಲಿ ದ್ವಿತೀಯ  ಸ್ಥಾನ ಪಡೆದು ಜನವರಿ 13 ಮತ್ತು 14ರಂದು ಮಂಗಳೂರಿನ ಮಂಗಳಾ ಸ್ಟೇಡಿಯಂನಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಅವರು ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ

ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ Read More »

ನವೀಕರಣಗೊಂಡ ಶ್ರೀ ಮಹಾಲಿಂಗೇಶ್ವರ ಸಭಾಭವನ ಇಂದು ಸಮರ್ಪಣೆ | ಹೀಗಿರಲಿದೆ ಸಮರ್ಪಣಾ ಕಾರ್ಯಕ್ರಮ

ಪುತ್ತೂರು: ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವೀಕರಣಗೊಂಡ ಶ್ರೀ ಮಹಾಲಿಂಗೇಶ್ವರ ಸಭಾಭವನ ಸಮರ್ಪಣೆ ಸಮಾರಂಭ ಇಂದು (ನ. 20) ನಡೆಯಲಿದೆ. ಬೆಳಿಗ್ಗೆ ಶ್ರೀ ರುದ್ರ ಹವನ ಸಹಿತ ಗಣಪತಿ ಹವನ ನಡೆದು 11 ಗಂಟೆಗೆ ಪೂರ್ಣಾಹುತಿಗೊಳ್ಳಲಿದೆ. ಬಳಿಕ ದೇವಸ್ಥಾನ ವಠಾರದಲ್ಲಿ ಪುನರುತ್ಥಾನದ ವಿವಿಧ ಕಾರ್ಯಗಳ ಕುರಿತು ನಿಧಿ ಸಂಚಯನ ಕಾರ್ಯಕ್ರಮ ನಡೆಯಲಿದೆ. ಸಮಾರಂಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಶಾಸಕ ಸಂಜೀವ ಮಠಂದೂರು, ಸಹಾಯಕ ಆಯುಕ್ತ ಗಿರೀಶ್ ನಂದನ್,

ನವೀಕರಣಗೊಂಡ ಶ್ರೀ ಮಹಾಲಿಂಗೇಶ್ವರ ಸಭಾಭವನ ಇಂದು ಸಮರ್ಪಣೆ | ಹೀಗಿರಲಿದೆ ಸಮರ್ಪಣಾ ಕಾರ್ಯಕ್ರಮ Read More »

ಸೇವಾ ಸೌರಭ ಕಾರ್ಯಕರ್ತರಿಗೆ ಅಭಿನಂದನೆ

ಪುತ್ತೂರು: ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಡೆದ ವಸ್ತ್ರ ವಿತರಣಾ ಹಾಗೂ ಸಜಭೋಜನ ಕಾರ್ಯಕ್ರಮ ಯಶಸ್ವಿಯಾಗಲು ಟ್ರಸ್ಟಿನ ಸದಸ್ಯರು ಹಾಗೂ ಕಾರ್ಯಕರ್ತರ ಶ್ರಮವೇ ಕಾರಣ ಎಂದು ಟ್ರಸ್ಟ್ ಅಧ್ಯಕ್ಷ,  ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಭಾನುವಾರ ಶಾಸಕರ ಕಚೇರಿ ಸಭಾಂಗಣದಲ್ಲಿ ನಡೆದ ಅಭಿನಂದನಾ ಸಭೆಯಲ್ಲಿ ಮಾತನಾಡಿದರು. ಕಾರ್ಯಕರ್ತರು ಪ್ರತೀ ಗ್ರಾಮಕ್ಕೆ ತೆರಳಿ ಕಾರ್ಯಕ್ರಮಕ್ಕೆ ಆಹ್ವಾನ ನೀಡಿರುವುದು, ವೇದಿಕೆ ವ್ಯವಸ್ಥೆ, ಸಭಾಂಗಣ, ಊಟೋಪಚಾರದ ವ್ಯವಸ್ಥೆ ಎಲ್ಲವೂ ಅಚ್ಚುಕಟ್ಟಾಗಿ ನಡೆದಿದ್ದು ಇದಕ್ಕೆ ಕಾರಣಕರ್ತರಾದ

ಸೇವಾ ಸೌರಭ ಕಾರ್ಯಕರ್ತರಿಗೆ ಅಭಿನಂದನೆ Read More »

ದ್ವಿಚಕ್ರ ವಾಹನಗಳೆರಡು ಮುಖಾಮುಖಿ ಡಿಕ್ಕಿ

ವಿಟ್ಲ: ದ್ವಿಚಕ್ರಗಳೆರಡು ಡಿಕ್ಕಿ ಹೊಡೆದುಕೊಂಡ ಪರಿಣಾಮ ಮೂವರು ಗಾಯಗೊಂಡ ಘಟನೆ ಕಂಬಳಬೆಟ್ಟು ಸಮೀಪ ನಡೆದಿದೆ. ಮೂವರ ಪೈಕಿ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ದ್ವಿಚಕ್ರ ವಾಹನಗಳೆರಡು ಮುಖಾಮುಖಿ ಡಿಕ್ಕಿ Read More »

ಉಡುಪಿ, ದ.ಕ. ಜಿಲ್ಲೆ ಸಹಿತ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಪಿಎಂ ವಿಶ್ವಕರ್ಮ ಯೋಜನೆ ವಿಸ್ತರಣೆ

ಮಂಗಳೂರು: ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪಿಎಂ ವಿಶ್ವಕರ್ಮ ಯೋಜನೆಯನ್ನು ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಾಗಿದೆ. ಮೊದಲ ಹಂತದಲ್ಲಿ 18 ಜಿಲ್ಲೆಗಳನ್ನು ಮಾತ್ರ ಆಯ್ಕೆ ಮಾಡಲಾಗಿತ್ತು. ಇದೀಗ ಉಳಿದ 13 ಜಿಲ್ಲೆಗಳನ್ನು ಯೋಜನೆಯೊಳಗೆ ತರಲಾಗಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಸಹಿತ ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಧಾರವಾಡ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ವಿಜಯನಗರ ಜಿಲ್ಲೆಗಳನ್ನು ಎರಡನೇ ಹಂತದಲ್ಲಿ ಸೇರಿಸಿಕೊಳ್ಳಲಾಗಿದೆ. ಎಲ್ಲಾ ಕುಶಲ ಕರ್ಮಿಗಳಿಗೂ ಅವಕಾಶ ಮಾಡಿಕೊಡುವ

ಉಡುಪಿ, ದ.ಕ. ಜಿಲ್ಲೆ ಸಹಿತ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಪಿಎಂ ವಿಶ್ವಕರ್ಮ ಯೋಜನೆ ವಿಸ್ತರಣೆ Read More »

ವ್ಯಕ್ತಿಯ ಮೃತದೇಹ ಪತ್ತೆ

ಉಪ್ಪಿನಂಗಡಿ: 34ನೇ ನೆಕ್ಕಿಲಾಡಿ ಯ ರಾಷ್ಟ್ರೀಯ ಹೆದ್ದಾರಿ ಬಳಿ ಅಪರಿಚಿತ ವ್ಯಕ್ತಿಯ ಮೃತದೇಹ ಇಂದು ಪತ್ತೆಯಾಗಿದೆ. ಆಂಧ್ರ ಮೂಲಕ ಶೇಖ್ ಖಾನ್ ಮೃತವ್ಯಕ್ತಿ ಎನ್ನಲಾಗಿದೆ. ಯಾವುದೋ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದ್ದು, ಹಿಟ್ & ರನ್ ಶಂಕೆ ವ್ಯಕ್ತವಾಗಿದೆ. ಉಪ್ಪಿನಂಗಡಿ ಹಾಗೂ ಪುತ್ತೂರು ಸಂಚಾರಿ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

ವ್ಯಕ್ತಿಯ ಮೃತದೇಹ ಪತ್ತೆ Read More »

ಅಕ್ಷಯ ಕಾಲೇಜಿನಲ್ಲಿ ಪಿಯು ವಿಭಾಗದ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ ‘ಅಟೆರ್ನಸ್ 2k23″

ಪುತ್ತೂರು: ಸಂಪ್ಯದಲ್ಲಿ ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ದಕ್ಷಿಣ ಕನ್ನಡ, ಕಾಸರಗೋಡು, ಕೊಡಗು ಜಿಲ್ಲೆಗಳ ಪಿಯು ವಿಭಾಗದ ಅಂತರ್ ಕಾಲೇಜ್ ಸಾಂಸ್ಕೃತಿಕ ಸ್ಪರ್ಧೆ ‘ಅಟೆರ್ನಸ್ 2k23″   ಕಾಲೇಜು ಸಭಾಂಗಣದಲ್ಲಿ ನಡೆಯಿತು. ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಂ ರೆIಅಶೋಕ್ ರಾಯನ್ ಕ್ರಾಸ್ತ ಕಾರ್ಯಕ್ರಮ ಉದ್ಘಾಟಿಸಿ, ಗ್ರಾಮೀಣ ಪ್ರದೇಶದಲ್ಲಿ ವೃತ್ತಿಪರ ಶಿಕ್ಷಣಕ್ಕೆ ಇಂದಿನ ಆಧುನಿಕ ಜಗತ್ತಿನಲ್ಲಿ ಬಹಳ ಪ್ರಾಮುಖ್ಯತೆಯಿದ್ದು ಬೇಡಿಕೆಯೂ ಇದೆ. ಈ ನಿಟ್ಟಿನಲ್ಲಿ ಇಲ್ಲಿನ ಅಕ್ಷಯ ಕಾಲೇಜಿನಲ್ಲಿ ವೃತ್ತಿಪರ

ಅಕ್ಷಯ ಕಾಲೇಜಿನಲ್ಲಿ ಪಿಯು ವಿಭಾಗದ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ ‘ಅಟೆರ್ನಸ್ 2k23″ Read More »

error: Content is protected !!
Scroll to Top