ಮಾಜಿ ಶಾಸಕರ ಆರೋಗ್ಯ ವಿಚಾರಿಸಿದ ಹಾಲಿ ಶಾಸಕ!

ಪುತ್ತೂರು: ಮಾಜಿ ಶಾಸಕ ಸಂಜೀವ ಮಠಂದೂರುರವರು ಹಾವು ಕಡಿತಕ್ಕೊಳಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು ವಿಚಾರ ಗೊತ್ತಾದ ತಕ್ಷಣವೇ ಶಾಸಕ ಅಶೋಕ್ ರೈಯವರು ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಮುಂಬೈ ಪ್ರವಾಸದಲ್ಲಿರುವ ಶಾಸಕ ಅಶೋಕ್ ರೈಯವರು  ಆಸ್ಪತ್ರೆಯಲ್ಲಿರುವ ಮಾಜಿ ಶಾಸಕರ ಪುತ್ರನ ಮೊಬೈಲ್ ಗೆ ಕರೆ ಮಾಡಿ ಮಠಂದೂರು ಜೊತೆ ಮಾತನಾಡಿದರು. ಆಸ್ಪತ್ರೆಯಲ್ಲಿ ದಾಖಲಾಗಿರುವ ಸಂಜೀವ ಮಠಂದೂರು ಅವರು ಚೇತರಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಮಾಜಿ ಶಾಸಕರ ಆರೋಗ್ಯ ವಿಚಾರಿಸಿದ ಹಾಲಿ ಶಾಸಕ! Read More »

ಸಂಜೀವ ಮಠಂದೂರು ಭೇಟಿಯಾದ ಪುತ್ತಿಲ

ಪುತ್ತೂರು: ಹಾವು ಕಡಿತಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಶಾಸಕ ಸಂಜೀವ ಮಠಂದೂರು ಅವರನ್ನು ಭೇಟಿಯಾಗಿರುವ ಅರುಣ್ ಕುಮಾರ್ ಪುತ್ತಿಲ ಅವರು ಆರೋಗ್ಯ ವಿಚಾರಿಸಿದರು. ಗುರುವಾರ ಸಂಜೆ ವಾಕಿಂಗ್ ಮಾಡುತ್ತಿದ್ದ ವೇಳೆ ಸಂಜೀವ ಮಠಂದೂರು ಅವರಿಗೆ ವಿಷದ ಹಾವು ಕಚ್ಚಿತ್ತು. ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದು, ಅಪಾಯದಿಂದ ಪಾರಾಗಿದ್ದರು. ಶುಕ್ರವಾರ ಬೆಳಿಗ್ಗೆ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದರು. ಇದೀಗ ಅರುಣ್ ಕುಮಾರ್ ಪುತ್ತಿಲ ಅವರು ಕಾರ್ಯಕರ್ತರೊಂದಿಗೆ ಆಸ್ಪತ್ರೆಗೆ ಭೇಟಿ ನೀಡಿದರು. ಬಿಜೆಪಿ ಮಂಡಲ

ಸಂಜೀವ ಮಠಂದೂರು ಭೇಟಿಯಾದ ಪುತ್ತಿಲ Read More »

ಝೀ ಕನ್ನಡ ಡ್ರಾಮಾ ಜ್ಯೂನಿಯರ್ ಸೀಸನ್ 5 ರ ಮೆಗಾ ಆಡಿಷನ್‍ ಗೆ ರಾಮಕುಂಜದ ಆತ್ಮಿ ಗೌಡ ಎಸ್. ಆಯ್ಕೆ

ಪುತ್ತೂರು: ಝೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಡ್ರಾಮಾ ಜ್ಯೂನಿಯರ್ ಸೀಸನ್ 5 ರ ಮೆಗಾ ಆಡಿಷನ್‍ ಗೆ ರಾಮಕುಂಜ ಗ್ರಾಮದ ನಾಲ್ಕು ವರ್ಷದ ಆತ್ಮಿ ಗೌಡ  ಎಸ್‍. ಆಯ್ಕೆಯಾಗಿದ್ದಾರೆ. ಮೆಗಾ ಆಡಿಷನ್ ನ.18 ಹಾಗೂ 19 ರಂದು ರಾತ್ರಿ 9 ಗಂಟೆಗೆ ಪ್ರಸಾರಗೊಳ್ಳಲಿದೆ. ರಾಜ್ಯಾದ್ಯಂತ ನಡೆಸಿದ ಮೊದಲ ಹಂತದ ಆಡಿಷನ್‍ ನಲ್ಲಿ ಸುಮಾರು 30 ಸಾವಿರ ಪ್ರತಿಭೆಗಳು ಭಾಗವಹಿಸಿದ್ದು, ಆತ್ಮಿ ಗೌಡ ಎಸ್‍ ಮುಂದಿನ ಹಂತದ ಮೆಗಾ ಆಡಿಷನ್‍ ಗೆ ಆಯ್ಕೆಯಾಗಿದ್ದಾರೆ. ಆತ್ಮಿ ಗೌಡ ಈ ಹಿಂದೆ

ಝೀ ಕನ್ನಡ ಡ್ರಾಮಾ ಜ್ಯೂನಿಯರ್ ಸೀಸನ್ 5 ರ ಮೆಗಾ ಆಡಿಷನ್‍ ಗೆ ರಾಮಕುಂಜದ ಆತ್ಮಿ ಗೌಡ ಎಸ್. ಆಯ್ಕೆ Read More »

ದಂಡ ಕಟ್ಟಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ!!

ಬೆಂಗಳೂರು: ದೀಪಾವಳಿ ಹಬ್ಬದ ನಿಮಿತ್ತ ತಮ್ಮ ಮನೆಗೆ ದೀಪಾಲಂಕಾರ ಮಾಡಲು ವಿದ್ಯುತ್ ಕಂಬದಿಂದ ಅಕ್ರಮವಾಗಿ ವಿದ್ಯುತ್ ಎಳೆದ ಆರೋಪದ ಮೇಲೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಬೆಸ್ಕಾಂ ವಿಧಿಸಿದ್ದ ದಂಡವನ್ನು ಪಾವತಿಸಿರುವ ಬಗ್ಗೆ ವರದಿಯಾಗಿದೆ. ಹೆಚ್.ಡಿ.‌ ಕುಮಾರಸ್ವಾಮಿ ಅವರು ಬೆಸ್ಕಾಂಗೆ 68,526 ರೂ. ದಂಡದ ಮೊತ್ತವನ್ನು ಪಾವತಿಸಿದ್ದಾರೆ ಎಂದು ಎಂದು ತಿಳಿದು ಬಂದಿದೆ. ಕುಮಾರಸ್ವಾಮಿ ಅವರ ಮನೆಯನ್ನು ಪರಿಶೀಲಿಸಿದ ಬೆಸ್ಕಾಂ ಅಧಿಕಾರಿಗಳು ಏಳು ದಿನಗಳೊಳಗೆ ದಂಡ ಪಾವತಿಸುವಂತೆ ಸೂಚಿಸಿದ್ದರು. ಜಯನಗರದಲ್ಲಿರುವ ಬೆಸ್ಕಾಂ ವಿಜಿಲೆನ್ಸ್ ಕಚೇರಿಯಲ್ಲಿ ಮಂಗಳವಾರ

ದಂಡ ಕಟ್ಟಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ!! Read More »

ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ ಟ್ಯೂಷನ್ ಕ್ಲಾಸ್ ಉದ್ಘಾಟನೆ

ಪೆರ್ನೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ತಾಲೂಕಿನ ಪೆರ್ನೆ ವಲಯದ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ ಟ್ಯೂಷನ್ ಕ್ಲಾಸ್ ನ ಉದ್ಘಾಟನಾ ಸಮಾರಂಭವು ಪೆರ್ನೆ ಅಯೋಧ್ಯಾನಗರದ ಶ್ರೀ ರಾಮಚಂದ್ರ ಪ್ರೌಢ ಶಾಲೆಯಲ್ಲಿ ನಡೆಯಿತು. ಪೆರ್ನೆ ಬಿ ಒಕ್ಕೂಟದ ಅಧ್ಯಕ್ಷೆ ಯಶೋಧಾ ಕ್ಲಾಸ್ ಉದ್ಘಾಟಿಸಿದರು. ಶಾಲಾ ಮುಖ್ಯ ಶಿಕ್ಷಕ ಚಂದ್ರಹಾಸ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶ್ರೀ ರಾಮಚಂದ್ರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಶೇಖರ್ ರೈ ಶುಭ ಹಾರೈಸಿದರು. ವಲಯದ ಮೇಲ್ವಿಚಾರಕಿ ಶಾರದಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಜ್ಞಾನ

ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ ಟ್ಯೂಷನ್ ಕ್ಲಾಸ್ ಉದ್ಘಾಟನೆ Read More »

ವಿಷ ಸೇವಿಸಿ ಆತ್ಮಹತ್ಯೆ!

ಸುಳ್ಯ: ವ್ಯಕ್ತಿಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕಿನ ಚೆಂಬು ಗ್ರಾಮದ ದೊಡ್ಡಜೆಯಲ್ಲಿ ನಡೆದಿದೆ. ಚೆಂಬು ಗ್ರಾಮದ ದೊಡ್ಡಜೆ ಉದಯ (38) ಆತ್ಮಹತ್ಯೆ ಮಾಡಿಕೊಂಡವರು. ರಾತ್ರಿ ಮನೆಯಲ್ಲಿ ವಿಷ ಸೇವಿಸಿದ್ದರು. ಮನೆಯವರು ಕೂಡಲೇ ಅವರನ್ನು ಸುಳ್ಯದ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ವಿಷ ಸೇವಿಸಿ ಆತ್ಮಹತ್ಯೆ! Read More »

ಸಂಪರ್ಕ ರಸ್ತೆಗೆ ದಿ. ಸುಧಾಕರ ಶೆಟ್ಟಿ ಹೆಸರಿಡಲು ಅಖಿಲ ಕರ್ನಾಟಕ ಹಿರಿಯ ಸೇವಾ ಪ್ರತಿಷ್ಠಾನ ಮನವಿ

ಪುತ್ತೂರು: ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಮೆಲ್ಕಾರ್ ಬಂಟ್ವಾಳ ಕೇಂದ್ರ ಸಮಿತಿ ಮತ್ತು ಪುತ್ತೂರು ತಾಲೂಕು ಘಟಕದ ವತಿಯಿಂದ ಪುತ್ತೂರು ಕೆಎಸ್‍ ಆರ್‍ ಟಿಸಿ ಬಸ್ ನಿಲ್ದಾಣದಿಂದ ಖಾಸಗಿ ಬಸ್ ನಿಲ್ದಾಣದ ಸಂಪರ್ಕ ರಸ್ತೆಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ, ಸಾಮಾಜಿಕ ಮುಂದಾಳು ದಿ.ಸುಧಾಕರ ಶೆಟ್ಟಿ ಅವರ ಹೆಸರು ಇಡುವಂತೆ ಪುತ್ತೂರು ಸಹಾಯಕ ಆಯುಕ್ತರು ಹಾಗೂ ನಗರಸಭೆ ಪೌರಾಯುಕ್ತರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಷ್ಠಾನದ ಅಧ್ಯಕ್ಷ ಕಯ್ಯಾರು ನಾರಾಯಣ ಭಟ್ ನೇತೃತ್ವದಲ್ಲಿ

ಸಂಪರ್ಕ ರಸ್ತೆಗೆ ದಿ. ಸುಧಾಕರ ಶೆಟ್ಟಿ ಹೆಸರಿಡಲು ಅಖಿಲ ಕರ್ನಾಟಕ ಹಿರಿಯ ಸೇವಾ ಪ್ರತಿಷ್ಠಾನ ಮನವಿ Read More »

ಆಸ್ಪತ್ರೆಗೆ ಭೇಟಿ ನೀಡಿ ಸಂಜೀವ ಮಠಂದೂರು ಆರೋಗ್ಯ ವಿಚಾರಿಸಿದ ಸಂಸದ ನಳಿನ್ ಕುಮಾರ್ ಕಟೀಲ್

ಪುತ್ತೂರು: ಹಾವು ಕಡಿತಕ್ಕೊಳಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಶಾಸಕ ಸಂಜೀವ ಮಠಂದೂರು ಅವರನ್ನು ಸಂಸದ ನಳಿನ್ ಕುಮಾರ್ ಕಟೀಲ್ ಶುಕ್ರವಾರ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಗುರುವಾರ ಸಂಜೆ ಮನೆಯಲ್ಲಿ ವಾಕಿಂಗ್ ಮಾಡುತ್ತಿದ್ದ ವೇಳೆ ವಿಷಪೂರಿತ ಹಾವು ಕಡಿದಿತ್ತು. ಈ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ಸಂದರ್ಭದಲ್ಲಿ ಮುರಳಿಕೃಷ್ಣ ಹಸಂತಡ್ಕ, ಚನಿಲ ತಿಮ್ಮಪ್ಪ ಶೆಟ್ಟಿ, ಆರ್.ಸಿ ನಾರಾಯಣ್, ಅರುಣ್ ವಿಟ್ಲ, ಸೀತಾರಾಮ ರೈ ಕೆದಂಬಾಡಿಗುತ್ತು ಸಹಿತ ಹಲವರು ಉಪಸ್ಥಿತರಿದ್ದರು.

ಆಸ್ಪತ್ರೆಗೆ ಭೇಟಿ ನೀಡಿ ಸಂಜೀವ ಮಠಂದೂರು ಆರೋಗ್ಯ ವಿಚಾರಿಸಿದ ಸಂಸದ ನಳಿನ್ ಕುಮಾರ್ ಕಟೀಲ್ Read More »

ಮಕ್ಕಳ ಸಾಹಿತ್ಯ ಸಮ್ಮೇಳನ: ಗೋಷ್ಠಿಗಳಿಗೆ ಅರ್ಜಿ ಆಹ್ವಾನ

ಪುತ್ತೂರು: ತಾಲೂಕು ಮಕ್ಕಳ ಸಾಹಿತ್ಯ ಸಮ್ಮೇಳನ ಡಿಸೆಂಬರ್ 20ರಂದು ಬಪ್ಪಳಿಗೆ ಅಂಬಿಕಾ ಕೇಂದ್ರೀಯ ವಿದ್ಯಾಲಯದ ಸಹಯೋಗದಲ್ಲಿ ನಡೆಯಲಿದ್ದು, ಸಮ್ಮೇಳನದಲ್ಲಿ ಪುತ್ತೂರು ತಾಲೂಕಿನಲ್ಲಿ ಅಧ್ಯಯನ ಮಾಡುತ್ತಿರುವ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಲು ಅವಕಾಶವಿದೆ. ಸಾಹಿತ್ಯ ಸಮ್ಮೇಳನದಲ್ಲಿ ಕವಿಗೋಷ್ಠಿ ಮಾತ್ರವಲ್ಲದೆ ಪ್ರಸ್ತುತ ಶಿಕ್ಷಣ ವ್ಯವಸ್ಥೆ, ಆಧುನಿಕ ತಂತ್ರಜ್ಞಾನದ ಬಳಕೆ, ನಾನು ಮೆಚ್ಚುವ ಶಿಕ್ಷಕ, ರಾಷ್ಟ್ರ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ ಇತ್ಯಾದಿ ವಿಷಯಗಳಲ್ಲಿ ವಿಚಾರಗೋಷ್ಠಿ ಹಾಗೂ ಚರ್ಚಾ ಕೂಟಗಳು ನಡೆಯಲಿವೆ. ಸಾಹಿತ್ಯ ಲೋಕಕ್ಕೆ ಉತ್ತಮ ಸಾಹಿತಿಗಳನ್ನು ಹಾಗೂ

ಮಕ್ಕಳ ಸಾಹಿತ್ಯ ಸಮ್ಮೇಳನ: ಗೋಷ್ಠಿಗಳಿಗೆ ಅರ್ಜಿ ಆಹ್ವಾನ Read More »

ಅಮಲಿನ ನಶೆಯಲ್ಲಿ ಪೊಲೀಸ್ ಸಿಬ್ಬಂದಿಗೆ ಹಲ್ಲೆ: ಪ್ರಕರಣ ದಾಖಲು

ಪುತ್ತೂರು: ಅಮಲು ಪದಾರ್ಥದ ನಶೆಯಲ್ಲಿದ್ದ ವ್ಯಕ್ತಿಯೋರ್ವ ಪೊಲೀಸ್ ಸಿಬ್ಬಂದಿಗೆ ಹಲ್ಲೆ ನಡೆಸಿದ ಘಟನೆ ಪುತ್ತೂರು ತಾಲೂಕು ಆಡಳಿತ ಸೌಧದ ಸಮೀಪ ಗುರುವಾರ ಸಂಜೆ ನಡೆದಿದೆ. ಇದೀಗ ಶಿವಪ್ರಸಾದ್ ನೀಡಿದ ದೂರಿನಂತೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಹರೀಶ್ ಎಂದು ಗುರುತಿಸಲಾಗಿದೆ. ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಸಂಚಾರ ಠಾಣೆಯ ಸಿಬ್ಬಂದಿ ಶಿವಪ್ರಸಾದ್, ಇಲಾಖಾ ವಾಹನ ಚಾಲಕ ಹನುಮಂತ ಅವರು ಹೊಯ್ಸಳ ವಾಹನದಲ್ಲಿ ಸ್ಥಳಕ್ಕೆ ತೆರಳಿದ್ದರು. ಆರೋಪಿಯು ಪೊಲೀಸ್ ಸಿಬ್ಬಂದಿಗೆ ಅವಾಚ್ಯವಾಗಿ ನಿಂದಿಸಿದ್ದಲ್ಲದೇ, ಮುಷ್ಟಿ ಗಾತ್ರದ ಜಲ್ಲಿ ಕಲ್ಲಿನಿಂದ

ಅಮಲಿನ ನಶೆಯಲ್ಲಿ ಪೊಲೀಸ್ ಸಿಬ್ಬಂದಿಗೆ ಹಲ್ಲೆ: ಪ್ರಕರಣ ದಾಖಲು Read More »

error: Content is protected !!
Scroll to Top