ಬಜರಂಗದಳದ ಐವರು ಕಾರ್ಯಕರ್ತರ ಗಡಿಪಾರು ಆದೇಶ: ಅಧಿಕಾರಿಗಳಿಗೆ ಫೋನಾಯಿಸಿ ಆಕ್ರೋಶ ವ್ಯಕ್ತಪಡಿಸಿದ ಸಂಸದ ನಳಿನ್

ಪುತ್ತೂರು: ಬಜರಂಗದಳ ಕಾರ್ಯಕರ್ತರನ್ನು ಗಡಿಪಾರು ಮಾಡಲು ಮಾನದಂಡವೇನು, ಕೇವಲ ಒಂದು ಕೇಸು ಇದ್ದವರಿಗೂ ಗಡಿಪಾರು ನೋಟೀಸ್ ನೀಡಲಾಗಿದೆ. ನನ್ನನ್ನು ಗಡಿಪಾರು ಮಾಡಿ, ಕಾರ್ಯಕರ್ತರನ್ನು ಯಾಕೆ ಗಡಿಪಾರು ಮಾಡ್ತೀರಾ. ಹೀಗೆಂದು ಹೇಳಿದ್ದಾರೆ ಸಂಸದ ನಳಿನ್ ಕುಮಾರ್ ಕಟೀಲ್. ಬಜರಂಗದಳ ಐದು ಮಂದಿ ಕಾರ್ಯಕರ್ತರ ಗಡಿಪಾರಿಗೆ ಆದೇಶ ಬಂದ ಹಿನ್ನಲೆಯಲ್ಲಿ ಬಜರಂಗಳದ ಕಾರ್ಯಕರ್ತರು ಸಂಸದರನ್ನು ಭೇಟಿ ಮಾಡಿದ್ದು, ಕಾರ್ಯಕರ್ತರ ಸಮ್ಮುಖದಲ್ಲೇ ಅಧಿಕಾರಿಗಳ ಜತೆ ಫೋನ್ ಮುಖಾಂತರ ಈ ಕುರಿತು ಮಾತನಾಡಿದರು. ಆದೇಶ ಮಾಡುವ ಮೊದಲು ಸರಿಯಾಗಿ ಪರಿಶೀಲನೆ ನಡೆಸಬೇಕು. ಅದನ್ನು […]

ಬಜರಂಗದಳದ ಐವರು ಕಾರ್ಯಕರ್ತರ ಗಡಿಪಾರು ಆದೇಶ: ಅಧಿಕಾರಿಗಳಿಗೆ ಫೋನಾಯಿಸಿ ಆಕ್ರೋಶ ವ್ಯಕ್ತಪಡಿಸಿದ ಸಂಸದ ನಳಿನ್ Read More »

ಕಾರಾಗೃಹದಿಂದ ಬಿಡುಗಡೆಯಾದ ಮುರುಘಾಶ್ರೀ

ಚಿತ್ರದುರ್ಗ: ಫೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿದ್ದ ಮುರುಘಾ ಮಠದ ಶ್ರೀ ಶಿವಮೂರ್ತಿ ಮುರುಘಾ ಶರಣರು ಗುರುವಾರ ಚಿತ್ರದುರ್ಗ ಕಾರಾಗೃಹದಿಂದ ಬಿಡುಗಡೆ ಹೊಂದಿದರು. ನ್ಯಾಯಾಲಯ ನೀಡಿದ್ದ ಬಿಡುಗಡೆ ಆದೇಶವನ್ನು ಬುಧವಾರ ಚಿತ್ರದುರ್ಗ ಕಾರಾಗೃಹಕ್ಕೆ ವಕೀಲರು ತಲುಪಿಸಿದ್ದರು. ಆದರೆ ಸಮಯ ಮೀರಿದ್ದರಿಂದ, ಬುಧವಾರ ಬಿಡುಗಡೆ ಮಾಡಿರಲಿಲ್ಲ. ಹಾಗಾಗಿ ಗುರುವಾರ ಮಧ್ಯಾಹ್ನದ ಸಂದರ್ಭ ಬಿಡುಗಡೆ ಮಾಡಲಾಗಿದೆ. ಮುರುಘಾ ಶರಣರ ಪಾಸ್ ಪೋರ್ಟನ್ನು ನ್ಯಾಯಾಲಯ ವಶಕ್ಕೆ ಪಡೆದುಕೊಂಡಿದೆ. ಮಾತ್ರವಲ್ಲ ಇಬ್ಬರ ಜಾಮೀನು ಪಡೆದುಕೊಂಡಿದ್ದು, ಸಾಕ್ಷ್ಯ ನಾಶ ಮಾಡುವಂತಿಲ್ಲ ಎಂಬ ಷರತ್ತು ವಿಧಿಸಿದೆ. ಮಾತ್ರವಲ್ಲ, ಸಾಕ್ಷಿಗಳನ್ನು

ಕಾರಾಗೃಹದಿಂದ ಬಿಡುಗಡೆಯಾದ ಮುರುಘಾಶ್ರೀ Read More »

ನ.19: ಅತ್ಯಾಧುನಿಕ ತಂತ್ರಜ್ಞಾನದ ವೈದ್ಯಕೀಯ ತಪಾಸಣೆ ಶಿಬಿರ

ಪುತ್ತೂರು: ಮಂಗಳೂರು ಹಿದಾಯ ಫೌಂಡೇಶನ್, ದೇರಳಕಟ್ಟೆ ಯೇನಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆ, ಎನ್‍ಆರ್‍ಐ ಪ್ರವಾಸಿಗಳು ಹಾಗೂ ಕಲ್ಲೇಗ ಜುಮ್ಮಾ ಮಸೀದಿ ಸಂಯುಕ್ತ ಆಶ್ರಯದಲ್ಲಿ ವೈದ್ಯಕೀಯ ತಪಾಸಣಾ ಶಿಬಿರ ಹಾಗೂ ಆರೋಗ್ಯ ಜಾಗೃತಿ ಕಾರ್ಯಕ್ರಮ ನ.19 ರಂದು ಕಲ್ಲೇಗ ಜುಮ್ಮಾ ಮಸೀದಿ ವಠಾರದಲ್ಲಿ ನಡೆಯಲಿದೆ ಎಂದು ಕಲ್ಲೇಗ ಜುಮ್ಮಾ ಮಸೀದಿ ಗೌರವಾಧ್ಯಕ್ಷ ಬಿ.ಎ.ಶಕೂರ್ ಹಾಜಿ ತಿಳಿಸಿದ್ದಾರೆ. ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶಿಬಿರದಲ್ಲಿ ಸಾಮಾನ್ಯ ಪರೀಕ್ಷೆ, ಕಣ್ಣು, ಕಿವಿ, ಮೂಗು, ಗಂಟಲು, ಹಲ್ಲು, ಎಲುಬು, ಹೆರಿಗೆ ಮತ್ತು ಪ್ರಸೂತಿ

ನ.19: ಅತ್ಯಾಧುನಿಕ ತಂತ್ರಜ್ಞಾನದ ವೈದ್ಯಕೀಯ ತಪಾಸಣೆ ಶಿಬಿರ Read More »

ಉದ್ದೇಶಿತ ಕಾಮಗಾರಿ ಪೂರ್ಣಗೊಂಡರೆ ಪುತ್ತೂರಿಗೆ ‘ವಂದೇ ಮಾತರಂ’ ರೈಲು | ವಿವೇಕಾನಂದ ಕಾಲೇಜು ರೈಲ್ವೇ ಮೇಲ್ಸೇತುವೆ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿದ ಸಂಸದ ನಳಿನ್ ಕುಮಾರ್ ಕಟೀಲ್

ಪುತ್ತೂರು: ಹಲವು ವರ್ಷಗಳ ಬೇಡಿಕೆಯಾದ ನೆಹರುನಗರ – ಹಾರಾಡಿ ಸಂಪರ್ಕ ರಸ್ತೆಯ ವಿವೇಕಾನಂದ ಕಾಲೇಜು ಬಳಿ ಇರುವ ರೈಲ್ವೇ ಮೇಲ್ಸೇತುವೆ ಅಗಲೀಕರಣ ಕಾಮಗಾರಿಗೆ ಶಿಲಾನ್ಯಾಸ ಕಾರ್ಯಕ್ರಮ ಗುರುವಾರ ನಡೆಯಿತು. ಅರ್ಚಕರು ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಪೂಜಾ ವಿಧಿವಿಧಾನ ನೆರವೇರಿಸಿದರು. ಬಳಿಕ ಸಂಸದ ನಳಿನ್ ಕುಮಾರ್ ಕಟೀಲ್ ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ನಳಿನ್ ಕುಮಾರ್ ಕಟೀಲ್, ಪುತ್ತೂರಿನಲ್ಲಿ ಮೂರು ಅಂಡರ್ ಪಾಸ್ ಅಭಿವೃದ್ಧಿಯ ಬೇಡಿಕೆಯಿತ್ತು. ಮುರ, ಎಪಿಎಂಸಿ ಹಾಗೂ ವಿವೇಕಾನಂದ ಮೇಲ್ಸೇತುವೆ. ಈ ಪೈಕಿ ಮುರ

ಉದ್ದೇಶಿತ ಕಾಮಗಾರಿ ಪೂರ್ಣಗೊಂಡರೆ ಪುತ್ತೂರಿಗೆ ‘ವಂದೇ ಮಾತರಂ’ ರೈಲು | ವಿವೇಕಾನಂದ ಕಾಲೇಜು ರೈಲ್ವೇ ಮೇಲ್ಸೇತುವೆ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿದ ಸಂಸದ ನಳಿನ್ ಕುಮಾರ್ ಕಟೀಲ್ Read More »

ಸಿಎಂ ಪುತ್ರನ ಆಡಳಿತ ದರ್ಬಾರ್!?  | “ನಾನು ಯಾವುದು ನಾಲ್ಕೈದು ಕೊಟ್ಟಿದ್ದೇನೋ ಅಷ್ಟನ್ನು ಮಾತ್ರ ಮಾಡಿ” – ಸಂಭಾಷಣೆಯ ವೀಡಿಯೋ ವೈರಲ್

ಮೈಸೂರು:  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ, ಮಾಜಿ ಶಾಸಕ ಡಾ.ಯತೀಂದ್ರ ಅವರು ಮೊಬೈಲ್’ನಲ್ಲಿ ಮಾತನಾಡಿರುವ ವೀಡಿಯೋ ಒಂದು ಇದೀಗ ಮಾಧ‍್ಯಮಗಳಲ್ಲಿ ವೈರಲ್ ಆಗಿದೆ. ಸಾರ್ವಜನಿಕ ಸಭೆಯಲ್ಲಿದ್ದ ಯತೀಂದ್ರ ಅವರು ಸಿಎಂ ಸಿದ್ದರಾಮಯ್ಯ ಅವರ ಜೊತೆ ಮಾತನಾಡುತ್ತಾ, “ಅಪ್ಪ ಹೇಳಿ” ಎಂದು ಮಾತು ಆರಂಭಿಸಿ ತಾನು ನೀಡಿದ ಲಿಸ್ಟ್​ ಬಗ್ಗೆ ಮಾತನಾಡಿದ್ದಾರೆ. ಆ ಕಡೆಯಿಂದ ವಿವೇಕಾನಂದರ ಹೆಸರು ಎತ್ತಿದ್ದು, ಇದಕ್ಕೆ ಯಾರು ಎಂದು ಯತೀಂದ್ರ ಪ್ರಶ್ನೆ ಮಾಡುತ್ತಾರೆ. ಅಲ್ಲದೆ, ಬೇರೊಂದು ಲಿಸ್ಟ್​ ನೀಡಿದ ಬಗ್ಗೆ ಅಸಮಾಧಾನಗೊಂಡ ಯತೀಂದ್ರ ಅವರು,

ಸಿಎಂ ಪುತ್ರನ ಆಡಳಿತ ದರ್ಬಾರ್!?  | “ನಾನು ಯಾವುದು ನಾಲ್ಕೈದು ಕೊಟ್ಟಿದ್ದೇನೋ ಅಷ್ಟನ್ನು ಮಾತ್ರ ಮಾಡಿ” – ಸಂಭಾಷಣೆಯ ವೀಡಿಯೋ ವೈರಲ್ Read More »

ಅನಂತಪುರದಲ್ಲಿ ನಾಳೆ ‘ಮಕರ ಸಂಭ್ರಮ’ | ಪ್ರತ್ಯಕ್ಷವಾದ ಹೊಸ ಮೊಸಳೆಗೆ ನಾಮಕರಣ, ನೈವೇದ್ಯ!!

ಕುಂಬಳೆ: ಬಬಿಯಾ ಮೊಸಳೆಯ ನಿಧನದ ಬಳಿಕ, ಇದೀಗ ಮತ್ತೊಂದು ಮೊಸಳೆ ಪ್ರತ್ಯಕ್ಷವಾಗಿರುವ ಸರೋವರ ಕ್ಷೇತ್ರ ಅನಂತಪುರದಲ್ಲಿ ನ. 17ರಂದು ಮಕರ ಸಂಭ್ರಮ ಕಾರ್ಯಕ್ರಮ ಜರಗಲಿದೆ. ಬೆಳಿಗ್ಗೆ ಗಂಟೆ 10ಕ್ಕೆ ಕ್ಷೇತ್ರದ ಸಭಾಂಗಣದಲ್ಲಿ ಮಕರ ಸಂಭ್ರಮ ಕಾರ್ಯಕ್ರಮ ಜರಗಲಿದ್ದು, ಮಧ್ಯಾಹ್ನ 2.30ಕ್ಕೆ ಭಕ್ತರ ಸಮಾಲೋಚನಾ ಸಭೆ ನಡೆಯಲಿದೆ ಎಂದು ಕ್ಷೇತ್ರದ ಕಾರ್ಯನಿರ್ವಹಣಾಧಿಕಾರಿ ಎಂ.ಪಿ. ರಾಮನಾಥ್ ಶೆಟ್ಟಿ ತಿಳಿಸಿದ್ದಾರೆ. ದೇವಸ್ಥಾನದ ಸರೋವರದಲ್ಲಿರುವ ಗುಹೆಯಲ್ಲಿ ಮೊಸಳೆ ಪ್ರತ್ಯಕ್ಷವಾದ ಬಳಿಕ ಕ್ಷೇತ್ರಕ್ಕೆ ಆಗಮಿಸುವ ಭಕ್ತರ ಸಂಖ್ಯೆ ಹೆಚ್ಚುತ್ತಿದೆ. ಅನ್ಯರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು

ಅನಂತಪುರದಲ್ಲಿ ನಾಳೆ ‘ಮಕರ ಸಂಭ್ರಮ’ | ಪ್ರತ್ಯಕ್ಷವಾದ ಹೊಸ ಮೊಸಳೆಗೆ ನಾಮಕರಣ, ನೈವೇದ್ಯ!! Read More »

ಡಿ.3: ಪುತ್ತಿಲ ಪರಿವಾರ ಆರ್ಯಾಪು ಗ್ರಾಮ ಸಮಿತಿಯಿಂದ ಸಾರ್ವಜನಿಕ ಶ್ರೀ ಲಕ್ಷ್ಮೀಪೂಜೆ | ಆಮಂತ್ರಣ ಬಿಡುಗಡೆ

ಪುತ್ತೂರು: ಪುತ್ತಿಲ ಪರಿವಾರ ಆರ್ಯಾಪು ಗ್ರಾಮ ಸಮಿತಿ ಆಯೋಜಕತ್ವದಲ್ಲಿ ಸಾರ್ವಜನಿಕ ಶ್ರೀ ಲಕ್ಷ್ಮೀ ಪೂಜೆಯ ಆಮಂತ್ರಣ ಬಿಡುಗಡೆ ಕಾಯ೯ಕ್ರಮ  ಕುಂಜೂರು ಶ್ರೀ ದುಗಾ೯ಪರಮೇಶ್ವರೀ  ದೇವಸ್ಥಾನದಲ್ಲಿ ನಡೆಯಿತು. ಡಿ.3 ರಂದು ಹಿಂದೂ ಸಮಾಜದ ಐಕ್ಯತೆಗಾಗಿ ಮತ್ತು ಲೋಕ ಕಲ್ಯಾಣಾರ್ಥವಾಗಿ ನಡೆಯುವ ಸಾರ್ವಜನಿಕ ಶ್ರೀ ಲಕ್ಷ್ಮೀ ಪೂಜೆಯ ಅಂಗವಾಗಿ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಉದ್ಘಾಟಿಸುವರು. ಪುತ್ತಿಲ ಪರಿವಾರದ ಆರ್ಯಾಪು ಗ್ರಾಮ ಸಮಿತ ಅಧ್ಯಕ್ಷ ವಿಶ್ವನಾಥ ಗೌಡ ಜಿ. ಸಂಟ್ಯಾರು ಅಧ್ಯಕ್ಷತೆ ವಹಿಸುವರು.

ಡಿ.3: ಪುತ್ತಿಲ ಪರಿವಾರ ಆರ್ಯಾಪು ಗ್ರಾಮ ಸಮಿತಿಯಿಂದ ಸಾರ್ವಜನಿಕ ಶ್ರೀ ಲಕ್ಷ್ಮೀಪೂಜೆ | ಆಮಂತ್ರಣ ಬಿಡುಗಡೆ Read More »

ಸಚಿನ್ ದಾಖಲೆ ಮುರಿದು ಸಾರ್ವಕಾಲಿಕ ಶ್ರೇಷ್ಠ ಸಾಧನೆ ಮಾಡಿದ ವಿರಾಟ್ ಕೊಹ್ಲಿ

ಮುಂಬೈ: ಇಲ್ಲಿನ ವಾಂಖೇಡೆ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ನ್ಯೂಝಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಶತಕ ದಾಖಲಿಸಿ ಏಕದಿನ ಕ್ರಿಕೆಟ್ ಮಾದರಿಯಲ್ಲಿ ಸಾರ್ವಕಾಲಿಕ ಶ್ರೇಷ್ಠ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡರು. ಬುಧವಾರ ವಿಶ್ವಕಪ್ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ವಿಕೆಟ್ ಪತನದ ಬಳಿಕ ಕ್ರೀಸಿಗೆ ಬಂದ ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಏಕದಿನ ಮಾದರಿಯಲ್ಲಿ 50ನೇ ಶತಕ ದಾಖಲಿಸುವುದರೊಂದಿಗೆ ಸಚಿನ್ ಅವರ ಹೆಸರಲ್ಲಿದ್ದ 49 ಅತೀ ಹೆಚ್ಚು

ಸಚಿನ್ ದಾಖಲೆ ಮುರಿದು ಸಾರ್ವಕಾಲಿಕ ಶ್ರೇಷ್ಠ ಸಾಧನೆ ಮಾಡಿದ ವಿರಾಟ್ ಕೊಹ್ಲಿ Read More »

ತಾಯಿ, ಮಕ್ಕಳ ಹತ್ಯೆಗೆ  3 ಕಾರಣ ಕೊಟ್ಟ ಆರೋಪಿ: ಎಸ್ಪಿ ಡಾ. ಅರುಣ್

ಉಡುಪಿ: ನೇಜಾರಿನಲ್ಲಿ ನಡೆದ ತಾಯಿ, ಮಕ್ಕಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರಿಂದ ಬಂಧನಕ್ಕೊಳಗಾದ ಆರೋಪಿ ಪ್ರವೀಣ್ ಚೌಗಲೆ (39) ತಾನೇ ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಈ ಹಿನ್ನಲೆಯಲ್ಲಿ ಆತನ ಬಂಧನವಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ತಿಳಿಸಿದ್ದಾರೆ. ಉಡುಪಿ ಎಸ್ಪಿ ಕಚೇರಿಯಲ್ಲಿ ಮಾಹಿತಿ ನೀಡಿದ ಅವರು, ತಾಂತ್ರಿಕ ಹಾಗೂ ಇತರ ಸಾಕ್ಷ್ಯಾಧಾರಗಳಿಂದ ಈತನೆ ಕೊಲೆ ಮಾಡಿರುವುದು ದೃಢಪಟ್ಟಿದೆ. ಕೃತ್ಯಕ್ಕೆ ಬಳಸಿದ ಆಯುಧವನ್ನು ಇನ್ನಷ್ಟೇ ವಶಪಡಿಸಿಕೊಳ್ಳಬೇಕಾಗಿದೆ ಎಂದರು. ಮಂಗಳೂರು ಏರ್ ಇಂಡಿಯಾದಲ್ಲಿ ಕ್ಯಾಬಿನ್ ಕ್ರೂ ಮೆಂಬರ್

ತಾಯಿ, ಮಕ್ಕಳ ಹತ್ಯೆಗೆ  3 ಕಾರಣ ಕೊಟ್ಟ ಆರೋಪಿ: ಎಸ್ಪಿ ಡಾ. ಅರುಣ್ Read More »

ಕುಪ್ಪೆಪದವು ರಾಮ್ ಸೇನಾ ವಾಯುಪುತ್ರ ಘಟಕದಿಂದ ಸಾರ್ವಜನಿಕ ಗೋ ಪೂಜೆ

ಕುಪ್ಪೆಪದವು: ಕುಪ್ಪೆಪದವು ರಾಮ್ ಸೇನಾ ವಾಯುಪುತ್ರ ಘಟಕದ ವತಿಯಿಂದ 4ನೇ ವರ್ಷದ ಸಾರ್ವಜನಿಕ ಗೋ ಪೂಜೆ ಕಾಪಿಕಾಡ್ ಅಯ್ಯಪ್ಪ ಮಂದಿರದಲ್ಲಿ ನಡೆಯಿತು. ಕಾಯಕ್ರಮದ ಅಂಗವಾಗಿ ಇರುವೈಲ್ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಮತ್ತು ಕುಪ್ಪೆಪದವು ಕಲ್ಲಾಡಿ ವೀರ ಶಿವಾಜಿ ಭಜನಾ ಮಂಡಳಿ ತಂಡದಿಂದ ಭಜನಾ ಕಾರ್ಯಕ್ರಮ ನಡೆಯಿತು ಈ ಸಂದರ್ಭದಲ್ಲಿ ರಾಮ್ ಸೇನಾ ವಾಯುಪುತ್ರ ಘಟಕದ ಸರ್ವ ಕಾರ್ಯಕರ್ತರು ಉಪಸ್ಥಿತರಿದ್ದರು.

ಕುಪ್ಪೆಪದವು ರಾಮ್ ಸೇನಾ ವಾಯುಪುತ್ರ ಘಟಕದಿಂದ ಸಾರ್ವಜನಿಕ ಗೋ ಪೂಜೆ Read More »

error: Content is protected !!
Scroll to Top