ನೀರು ಪಾಲಾದ ವ್ಯಕ್ತಿಯ ಶವ ಪತ್ತೆ

ನೆಲ್ಯಾಡಿ: ಹೊಳೆಯಲ್ಲಿ ಸ್ನಾನ ಮಾಡುತ್ತಿದ್ದಾಗ ಕಾಲು ಜಾರಿ ನೀರು ಪಾಲಾಗಿದ್ದ ಪಾಲಾಗಿದ್ದ ಸಿರಿಬಾಗಿಲು ಗ್ರಾಮದ ಬರ್ಚಿನಾಳ ನಿವಾಸಿ ಸೋಮಶೇಖರ (34) ಅವರ ಮೃತದೇಹ ಬುಧವಾರ ಪತ್ತೆಯಾಗಿದೆ. ನ.14ರಂದು ಸಂಜೆ ಗುಂಡ್ಯ ಹೊಳೆಗೆ ಸ್ನಾನಕ್ಕೆ ಹೋಗಿದ್ದ ವೇಳೆ ಸೋಮಶೇಖರ ಅವರು ಕಾಲು ಜಾರಿ ನೀರು ಪಾಲಾಗಿದ್ದರು. ಬಳಿಕ ಅವರಿಗಾಗಿ ಹುಡುಕಾಟ ನಡೆಸಲಾಗುತ್ತಿತ್ತು. ಬುಧವಾರ ಮಧ್ಯಾಹ್ನ ಮೃತದೇಹ ಪತ್ತೆಯಾಗಿದೆ. ಅಗ್ನಿಶಾಮಕ ಹಾಗೂ ಶೌರ್ಯ ವಿಪತ್ತು ತಂಡದವರು ಮೃತ ದೇಹ ಪತ್ತೆ ಹಚ್ಚಿದ್ದಾರೆ ಎಂದು ತಿಳಿದು ಬಂದಿದೆ.

ನೀರು ಪಾಲಾದ ವ್ಯಕ್ತಿಯ ಶವ ಪತ್ತೆ Read More »

‘ಡಿಕೆ ಸಹೋದರರನ್ನು ಕೊಲ್ಲು’ – ಪೋಸ್ಟ್: ಬಂಧನ

ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಅವರ ಸಹೋದರ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಅವರನ್ನು ಕೊಲ್ಲುವಂತೆ ಜನರನ್ನು ಒತ್ತಾಯಿಸುವ ಸಾಮಾಜಿಕ ಮಾಧ್ಯಮ ಪೋಸ್ಟ್ ಹಾಕಿದ್ದಕ್ಕಾಗಿ ಬುಧವಾರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ರಂಜಿತ್ ಆರ್‌.ಎಂ. ಎಂದು ಗುರುತಿಸಲಾಗಿದೆ. ಈ ಸಂಬಂಧ ಬೆಂಗಳೂರಿನ ಜಯನಗರ ಬ್ಲಾಕ್‌ನ ಯುವ ಕಾಂಗ್ರೆಸ್ ಅಧ್ಯಕ್ಷ ಶರತ್ ದೂರು ದಾಖಲಿಸಿದ್ದಾರೆ. ‘ಡಿಕೆ ಸಹೋದರರನ್ನು ಕೊಲ್ಲು’ ಎಂಬ ಶೀರ್ಷಿಕೆಯೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಆರೋಪಿ ಪೋಸ್ಟ್ ಹಾಕಿದ್ದ ಎಂದು ಹೇಳಲಾಗಿದೆ.

‘ಡಿಕೆ ಸಹೋದರರನ್ನು ಕೊಲ್ಲು’ – ಪೋಸ್ಟ್: ಬಂಧನ Read More »

ಕಂದಕಕ್ಕೆ ಉರುಳಿದ ಬಸ್: 36 ಮಂದಿ ಮೃತ್ಯು

ದೋಡಾ: ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಬಸ್ ಒಂದು ಸುಮಾರು 200 ಮೀಟರ್ ಆಳದ ಕಂದಕಕ್ಕೆ ಉರುಳಿ ಬಿದ್ದಿದ್ದು, ಘಟನೆಯಲ್ಲಿ ಕನಿಷ್ಠ 36 ಮಂದಿ ಮೃತಪಟ್ಟಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಸಂಭವಿಸಿದೆ. ಕಿಶ್ತ್ವಾರದಿಂದ ಜಮ್ಮುಗೆ ಪ್ರಯಾಣಿಸುತ್ತಿದ್ದ ಬಸ್, ಅಸ್ಸಾರ್ ಪ್ರದೇಶದಲ್ಲಿನ ತೃಣಾಲ್ ಬಳಿ ಕಡಿದಾದ ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ್ದರಿಂದ ಈ ಘಟನೆ ನಡೆದಿದೆ. ಬಸ್‌ನಲ್ಲಿ 55 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಘಟನೆಯ ಕುರಿತು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಜನರಲ್ ಮನೋಜ್ ಸಿನ್ಹಾ ತೀವ್ರ

ಕಂದಕಕ್ಕೆ ಉರುಳಿದ ಬಸ್: 36 ಮಂದಿ ಮೃತ್ಯು Read More »

ಮಾಧ್ಯಮದಲ್ಲಿ ಶುದ್ಧ ಕನ್ನಡ ಬಳಕೆ ಹಾಗೂ ರಾಷ್ಟ್ರದ ಬಗೆಗಿನ ಕಾರ್ಯಕ್ರಮಕ್ಕಾಗಿ ಒತ್ತಾಯ | ಅಂಬಿಕಾ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ಪತ್ರಿಕಾಗೋಷ್ಠಿಯಲ್ಲಿ ಆಗ್ರಹ

ಪುತ್ತೂರು: ಖಾಸಗಿ ದೂರದರ್ಶನ ಮಾಧ್ಯಮ ಹಾಗೂ ಬಾನುಲಿ ಕೇಂದ್ರಗಳಲ್ಲಿ ಶುದ್ಧ ಕನ್ನಡವನ್ನೇ ಬಳಸುವಂತೆ ಹಾಗೂ ಎಲ್ಲಾ ದೂರದರ್ಶನ ವಾಹಿನಿಗಳಲ್ಲಿ ಕಡ್ಡಾಯವಾಗಿ ದಿನಕ್ಕೆ ಒಂದು ತಾಸಿನಷ್ಟು ಹೊತ್ತು ದೇಶದ ಉತ್ಕೃಷ್ಟತೆಯ ಬಗ್ಗೆ ಕಾರ್ಯಕ್ರಮ ನೀಡುವಂತೆ ಸರಕಾರ ಸೂಕ್ತ ನಿರ್ದೇಶ ನೀಡುವಂತೆ ಬಪ್ಪಳಿಗೆ ಅಂಬಿಕಾ ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷ ನವನೀತ್ ತಿಳಿಸಿದ್ದಾರೆ. ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,, ಈ ಕುರಿತು ಪುತ್ತೂರು ಶಾಸಕರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ನೀಡಲಾಗುವುದು ಎಂದು ಅವರು ತಿಳಿಸಿದರು. ಕನ್ನಡದ ಬೆಳವಣಿಗೆಗೆ ಸರ್ಕಾರಾದಿಯಾಗಿ ಕನ್ನಡ

ಮಾಧ್ಯಮದಲ್ಲಿ ಶುದ್ಧ ಕನ್ನಡ ಬಳಕೆ ಹಾಗೂ ರಾಷ್ಟ್ರದ ಬಗೆಗಿನ ಕಾರ್ಯಕ್ರಮಕ್ಕಾಗಿ ಒತ್ತಾಯ | ಅಂಬಿಕಾ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ಪತ್ರಿಕಾಗೋಷ್ಠಿಯಲ್ಲಿ ಆಗ್ರಹ Read More »

ನ.17: ದ.ಕ.ಜಿಲ್ಲಾ ಜಮಾಅತೆ ಇಸ್ಲಾಮೀ ಹಿಂದ್ ವತಿಯಿಂದ ‘ಸೀರತ್ ಸಮಾವೇಶ’

ಪುತ್ತೂರು: ದ.ಕ.ಜಿಲ್ಲೆ ಜಮಾಅತೆ ಇಸ್ಲಾಮೀ ಹಿಂದ್ ವತಿಯಿಂದ ಸಾರ್ವಜನಿಕ ಸೀರತ್ ಸಮಾವೇಶ ನ.17 ರಂದು ಸಂಜೆ 6.30 ಕ್ಕೆ ಪುತ್ತೂರು ಪುರಭವನದಲ್ಲಿ ನಡೆಯಲಿದೆ ಎಂದು ಜಮಾಅತೆ ಇಸ್ಲಾಮೀ ಹಿಂದ್ ಮಂಗಳೂರು ವಲಯ ಉಪಸಂಚಾಲಕ ಅಮೀನ್ ಅಹ್ಸನ್ ಹೇಳಿದರು. ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಸಮಾವೇಶ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಶಾಸಕ ಅಶೋಕ್ ಕುಮಾರ್ ರೈ, ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್, ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಡಾ.ಸಿ.ಎಸ್.ದ್ವಾರಕನಾಥ್,

ನ.17: ದ.ಕ.ಜಿಲ್ಲಾ ಜಮಾಅತೆ ಇಸ್ಲಾಮೀ ಹಿಂದ್ ವತಿಯಿಂದ ‘ಸೀರತ್ ಸಮಾವೇಶ’ Read More »

ನಾಳೆ : ವಿವೇಕಾನಂದ ಕಾಲೇಜು ಸಂಪರ್ಕ ರಸ್ತೆಯ ರೈಲ್ವೇ ಮೇಲ್ಸೇತುವೆ ಕಾಮಗಾರಿಗೆ ಶಿಲಾನ್ಯಾಸ

ಪುತ್ತೂರು: ನೆಹರುನಗರದ ವಿವೇಕಾನಂದ ಕಾಲೇಜು ಸಂಪರ್ಕ ರಸ್ತೆಯಲ್ಲಿರುವ ರೈಲ್ವೇ ಮೇಲ್ಸೇತುವೆ ಕಾಮಗಾರಿಗೆ ಶಿಲಾನ್ಯಾಸ ಕಾರ್ಯಕ್ರಮ ನ.16 ರಂದು ನಡೆಯಲಿದೆ. ಈಗಾಗಲೇ ಈ ಕಾಮಗಾರಿಗೆ ಸರಕಾರದಿಂದ ಅನುದಾನ ಬಿಡುಗಡೆಗೊಂಡಿದ್ದು, ಶಿಲಾನ್ಯಾಸ ಕಾರ್ಯಕ್ರಮವನ್ನು ಸಂಸದ ನಳಿನ್ ಕುಮಾರ್ ಕಟೀಲ್ ನೆರವೇರಿಸುವರು. ಕಾರ್ಯಕ್ರಮದಲ್ಲಿ ಹಲವಾರು ಗಣ್ಯರು ಪಾಲ್ಗೊಳ್ಳಲಿದ್ದಾರೆ. ಈಗಾಗಲೇ ಸಂಸದರು ಕಾಮಗಾರಿ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಾಳೆ : ವಿವೇಕಾನಂದ ಕಾಲೇಜು ಸಂಪರ್ಕ ರಸ್ತೆಯ ರೈಲ್ವೇ ಮೇಲ್ಸೇತುವೆ ಕಾಮಗಾರಿಗೆ ಶಿಲಾನ್ಯಾಸ Read More »

ಬಿಜೆಪಿ ರಾಜ್ಯಾಧ್ಯಕ್ಷ ಅಧಿಕಾರ ಹಸ್ತಾಂತರಿಸಿದ ನಳಿನ್ ಕುಮಾರ್ ಕಟೀಲ್

ಬೆಂಗಳೂರು: ಗಣಹೋಮ, ದುರ್ಗಾಹೋಮದ ಬಳಿಕ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಅಧಿಕಾರ ಸ್ವೀಕರಿಸಿದ್ದಾರೆ. ರಾಜ್ಯಾಧ್ಯಕ್ಷರಾಗಿದ್ದ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ಅಧಿಕಾರ ಹಸ್ತಾಂತರ ಮಾಡಿದರು. ಈ ಸಂದರ್ಭ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಆರಗ ಜ್ಞಾನೇಂದ್ರ, ಸಂಸದರಾದ ರಾಘವೇಂದ್ರ, ತೇಜಸ್ವಿ ಸೂರ್ಯ, ಅಶೋಕ್, ಗೋವಿಂದ ಕಾರಜೋಳ ಮೊದಲಾದವರು ಉಪಸ್ಥಿತರಿದ್ದರು. ಈ ಸಂದರ್ಭ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿರುವ ನಳಿನ್ ಕುಮಾರ್ ಕಟೀಲ್ ಅವರು, ದೇಶದ ಅತಿದೊಡ್ಡ ಪಕ್ಷದ

ಬಿಜೆಪಿ ರಾಜ್ಯಾಧ್ಯಕ್ಷ ಅಧಿಕಾರ ಹಸ್ತಾಂತರಿಸಿದ ನಳಿನ್ ಕುಮಾರ್ ಕಟೀಲ್ Read More »

ಕೊಲ್ಯ ನಿವಾಸಿ ಧರ್ಮಾವತಿ ಆಚಾರ್ಯ ನಿಧನ

ಪುತ್ತೂರು: ಸಂಪ್ಯ ಕೊಲ್ಯ ನಿವಾಸಿ ದಿವಂಗತ ನಾರಾಯಣ ಆಚಾರ್ಯ ಅವರ ಪತ್ನಿ ಧರ್ಮಾವತಿ ಆಚಾರ್ಯ (76 ವ.) ಅವರು ಅಸೌಖ್ಯದಿಂದ ನ. 15ರ ಬುಧವಾರ ಬೆಳಿಗ್ಗೆ ಪುತ್ತೂರು ಆಸ್ಪತ್ರೆಯಲ್ಲಿ ನಿಧನರಾದರು. ಅಸೌಖ್ಯದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೃತರು ಪುತ್ರರಾದ ವೆಂಕಟೇಶ್, ಉದಯ, ಪುತ್ರಿಯರಾದ ಆಶಾಲತಾ, ವಾಗೀಶ್ವರಿ, ಸೊಸೆ ಭಾರತೀ ಅವರನ್ನು ಅಗಲಿದ್ದಾರೆ.

ಕೊಲ್ಯ ನಿವಾಸಿ ಧರ್ಮಾವತಿ ಆಚಾರ್ಯ ನಿಧನ Read More »

ಬಿಜೆಪಿ 11ನೇ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಪದಗ್ರಹಣ | ಹೋಮ ಸಂಕಲ್ಪದ ಉಸ್ತುವಾರಿ ವಹಿಸಿಕೊಂಡ ಕರಾವಳಿ ಶಾಸಕ

ಬೆಂಗಳೂರು: ರಾಜ್ಯ ಬಿಜೆಪಿಯ 11 ನೇ ರಾಜ್ಯಾಧ್ಯಕ್ಷರಾಗಿ ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಪದಗ್ರಹಣದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿರುವ ಬಿಜೆಪಿ ರಾಜ್ಯ ಕಚೇರಿಯಲ್ಲಿ ಮಂಗಳವಾರ ಬೆಳಿಗ್ಗೆ ದುರ್ಗಾ ಹೋಮ ಹಾಗೂ ಗಣಪತಿ ಹೋಮ ನಡೆಯಿತು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಹೋಮ ಕಾರ್ಯದ ಸಂಕಲ್ಪದಲ್ಲಿ ಭಾಗಿಯಾಗಿದ್ದು, ಅವರಿಗೆ ಪೂಜಾ ಕಾರ್ಯಕ್ರಮಗಳ ಉಸ್ತುವಾರಿ ವಹಿಸಲಾಗಿತ್ತು. ವಿಜಯೇಂದ್ರ ಪದಗ್ರಹಣದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಕಚೇರಿಯನ್ನು ವಿದ್ಯುತ್ ದೀಪಗಳು ಮತ್ತು ತೋರಣಗಳಿಂದ ಅಲಂಕರಿಸಲಾಗಿತ್ತು.

ಬಿಜೆಪಿ 11ನೇ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಪದಗ್ರಹಣ | ಹೋಮ ಸಂಕಲ್ಪದ ಉಸ್ತುವಾರಿ ವಹಿಸಿಕೊಂಡ ಕರಾವಳಿ ಶಾಸಕ Read More »

ಬಾಲಕಿ ಮೇಲೆ ಅತ್ಯಾಚಾರ

ಬೆಳ್ಳಾರೆ: ಮೂತ್ರ ವಿಸರ್ಜನೆಗೆ ತೆರಳಿದ್ದ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಘಟನೆ ಕಡಬ ತಾಲೂಕಿನ ಕಾಣಿಯೂರಿನಲ್ಲಿ ನಡೆದಿದೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ನಾಗೇಶ (24) ಈ ಕೃತ್ಯ ಎಸಗಿ ಬಂಧಿತನಾದ ಆರೋಪಿ. ಮಹಾರಾಷ್ಟ್ರದ ಕೂಲಿ ಕಾರ್ಮಿರರೋರ್ವರ ಏಳು ವರ್ಷದ ಮಗಳು ಮೂತ್ರ ವಿಸರ್ಜನೆಗೆ ತೆರಳಿದ್ದ ವೇಳೆ ಅತ್ಯಾಚಾರ ನಡೆಸಿದ್ದಾನೆ ಎನ್ನಲಾಗಿದೆ. ಅತ್ಯಾಚಾರದ ಬಳಿಕ ಬಾಲಕಿಗೆ ರಕ್ತಸ್ರಾವವಾಗಿ ತೀವ್ರವಾಗಿ ಅಸ್ವಸ್ಥಗೊಂಡಿದ್ದಾಳೆ. ಈ ವೇಳೆ ಪ್ರಕರಣ ಬಯಲಾಗಿದೆ. ಈ ಕುರಿತು ಬಾಲಕಿಯ ಪೋಷಕರು ಬೆಳ್ಳಾರೆ ಠಾಣೆಗೆ

ಬಾಲಕಿ ಮೇಲೆ ಅತ್ಯಾಚಾರ Read More »

error: Content is protected !!
Scroll to Top