ನೀರು ಪಾಲಾದ ವ್ಯಕ್ತಿಯ ಶವ ಪತ್ತೆ
ನೆಲ್ಯಾಡಿ: ಹೊಳೆಯಲ್ಲಿ ಸ್ನಾನ ಮಾಡುತ್ತಿದ್ದಾಗ ಕಾಲು ಜಾರಿ ನೀರು ಪಾಲಾಗಿದ್ದ ಪಾಲಾಗಿದ್ದ ಸಿರಿಬಾಗಿಲು ಗ್ರಾಮದ ಬರ್ಚಿನಾಳ ನಿವಾಸಿ ಸೋಮಶೇಖರ (34) ಅವರ ಮೃತದೇಹ ಬುಧವಾರ ಪತ್ತೆಯಾಗಿದೆ. ನ.14ರಂದು ಸಂಜೆ ಗುಂಡ್ಯ ಹೊಳೆಗೆ ಸ್ನಾನಕ್ಕೆ ಹೋಗಿದ್ದ ವೇಳೆ ಸೋಮಶೇಖರ ಅವರು ಕಾಲು ಜಾರಿ ನೀರು ಪಾಲಾಗಿದ್ದರು. ಬಳಿಕ ಅವರಿಗಾಗಿ ಹುಡುಕಾಟ ನಡೆಸಲಾಗುತ್ತಿತ್ತು. ಬುಧವಾರ ಮಧ್ಯಾಹ್ನ ಮೃತದೇಹ ಪತ್ತೆಯಾಗಿದೆ. ಅಗ್ನಿಶಾಮಕ ಹಾಗೂ ಶೌರ್ಯ ವಿಪತ್ತು ತಂಡದವರು ಮೃತ ದೇಹ ಪತ್ತೆ ಹಚ್ಚಿದ್ದಾರೆ ಎಂದು ತಿಳಿದು ಬಂದಿದೆ.
ನೀರು ಪಾಲಾದ ವ್ಯಕ್ತಿಯ ಶವ ಪತ್ತೆ Read More »










