ಧರ್ಮಸ್ಥಳ ಪ್ರಕರಣ ತನಿಖೆ ಪೂರ್ಣಗೊಂಡಿಲ್ಲ : ಮೊಹಾಂತಿ ಸ್ಪಷ್ಟನೆ

ತನಿಖೆ ಇನ್ನೂ ಮುಂದುವರಿಯಲಿದೆ ಎಂದು ಎಸ್‌ಐಟಿ ಮುಖ್ಯಸ್ಥ ಬೆಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ಸರಕಾರಕ್ಕೆ ಸಲ್ಲಿಕೆ ಆಗಿರುವುದು ಈವರೆಗಿನ ವರದಿ ಮಾತ್ರ. ಚಾಜ್‌ರ್ಶೀಟ್ ಅಲ್ಲ ಎಂದು ಎಸ್‌ಐಟಿ ಮುಖ್ಯಸ್ಥ ಪ್ರಣಬ್ ಮೊಹಾಂತಿ ಸ್ಪಷ್ಟಪಡಿಸಿದ್ದಾರೆ. ಶುಕ್ರವಾರ ಬೆಂಗಳೂರಿನ ನೃಪತುಂಗ ರಸ್ತೆಯ ರಾಜ್ಯ ಪೊಲೀಸ್‌ ಪ್ರಧಾನ ಕಚೇರಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಧರ್ಮಸ್ಥಳ ಪ್ರಕರಣದಲ್ಲಿ ಅಂತಿಮ ಚಾಜ್‌ರ್ಶೀಟ್ ಸಲ್ಲಿಕೆಯಾಗಿದೆ ಅಥವಾ ಸಿದ್ಧಗೊಂಡಿದೆ ಎಂದು ಹೇಳಿದವರು ಯಾರು? ಪ್ರಕರಣ ಇನ್ನೂ ತನಿಖೆ ಹಂತದಲ್ಲಿದೆ. ಈಗ ಸಲ್ಲಿಕೆ ಆಗಿರುವುದು […]

ಧರ್ಮಸ್ಥಳ ಪ್ರಕರಣ ತನಿಖೆ ಪೂರ್ಣಗೊಂಡಿಲ್ಲ : ಮೊಹಾಂತಿ ಸ್ಪಷ್ಟನೆ Read More »

ಗುಂಪು ಮಾರಾಮಾರಿಯಲ್ಲಿ ಕಾಂಗ್ರೆಸ್‌ ನಾಯಕ ಹತ್ಯೆ

ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ದುಷ್ಕರ್ಮಿಗಳು ಬೆಂಗಳೂರು : ಎರಡು ಗುಂಪುಗಳ ಮಧ್ಯೆ ನಡೆದ ಮಾರಾಮಾರಿಯಲ್ಲಿ ಕಾಂಗ್ರೆಸ್ ಗ್ರಾಮ ಪಂಚಾಯತ್‌ ಸದಸ್ಯ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ಚರ ಮಠದ ಬಳಿ ನಡೆದಿದೆ. ಗಣೇಶ್ ಗೌಡ ಕೊಲೆಯಾದ ದುರ್ದೈವಿ. ಕೊಲೆಗೂ ಮುನ್ನ ಶುಕ್ರವಾರ ರಾತ್ರಿ 10.30ರ ವೇಳೆ ಸಖರಾಯಪಟ್ಟಣ ಬಾರ್ ಬಳಿ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿತ್ತು. ಬಾರ್ ಬಳಿ ಗಲಾಟೆ ನಡೆದ ಅರ್ಧ ಗಂಟೆ ನಂತರ ಮಠದ ಬಳಿ

ಗುಂಪು ಮಾರಾಮಾರಿಯಲ್ಲಿ ಕಾಂಗ್ರೆಸ್‌ ನಾಯಕ ಹತ್ಯೆ Read More »

ಕಾರು ಅಪಘಾತದಲ್ಲಿ ಇನ್‌ಸ್ಪೆಕ್ಟರ್‌ ಸಜೀವ ದಹನ

ಡಿವೈಡರ್‌ಗೆ ಡಿಕ್ಕಿಯಾದ ಕಾರಿಗೆ ಬೆಂಕಿ ಹತ್ತಿಕೊಂಡು ದುರಂತ ಬೆಂಗಳೂರು : ಧಾರವಾಡದಲ್ಲಿ ಶುಕ್ರವಾರ ಕಾರು ಡಿವೈಡರ್​ಗೆ ಡಿಕ್ಕಿಯಾಗಿ ನಡುರಸ್ತೆಯಲ್ಲೇ ಹೊತ್ತಿ ಉರಿದಿದ ಭೀಕರ ಅಪಘಾತದಲ್ಲಿ ಲೋಕಾಯುಕ್ತ ಇನ್ಸ್​​ಪೆಕ್ಟರ್ ಒಬ್ಬರು ಸಜೀವ ದಹನವಾಗಿದ್ದಾರೆ. ಧಾರವಾಡ ಜಿಲ್ಲೆ ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಹಾವೇರಿ ಲೋಕಾಯುಕ್ತ ಇನ್‌ಸ್ಪೆಕ್ಟರ್​​​ ಪಂಚಾಕ್ಷರಿ ಸಾಲಿಮಠ ಕಾರಿನೊಳಗೆ ಸುಟ್ಟು ಕರಕಲಾಗಿದ್ದಾರೆ. ಸಾಲಿಮಠ ಅವರು ಇಂದು ಐ20 ಕಾರಿನಲ್ಲಿ ಗದಗ ಕಡೆ ಹೊರಟ್ಟಿದ್ದರು. ಈ ವೇಳೆ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ

ಕಾರು ಅಪಘಾತದಲ್ಲಿ ಇನ್‌ಸ್ಪೆಕ್ಟರ್‌ ಸಜೀವ ದಹನ Read More »

ಡಿಕೆಶಿಗೂ ಇದೆ ನ್ಯಾಶನಲ್‌ ಹೆರಾಲ್ಡ್‌ ಹಗರಣದ ನಂಟು : ನೋಟಿಸ್‌ ಜಾರಿ

ಹಗರಣದ ಪ್ರಮುಖ ಮಾಹಿತಿ ಡಿಕೆಶಿ ಬಳಿ ಇರುವ ಅನುಮಾನ ಬೆಂಗಳೂರು : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ಕಾಂಗ್ರೆಸ್​ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ಧ ಹೊಸ ಎಫ್​ಐಆರ್ ದಾಖಲಿಸಿದ ಬೆನ್ನಲ್ಲೇ ಇದೇ ಪ್ರಕರಣಕ್ಕೆ ಸಂಬಂಧಿಸಿ ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೂ ನೋಟಿಸ್​ ಜಾರಿ ಮಾಡಿ ಡಿಸೆಂಬರ್ 19ರೊಳಗೆ ದೆಹಲಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಈ ಪ್ರಕರಣದ ಪ್ರಮುಖ ಮಾಹಿತಿ ಡಿಕೆಶಿ ಬಳಿ ಇದೆ ಎಂದು ದೆಹಲಿ ಪೊಲೀಸರು ನಂಬಿದ್ದಾರೆ.

ಡಿಕೆಶಿಗೂ ಇದೆ ನ್ಯಾಶನಲ್‌ ಹೆರಾಲ್ಡ್‌ ಹಗರಣದ ನಂಟು : ನೋಟಿಸ್‌ ಜಾರಿ Read More »

ಬಾಲಕಿ ನೇಣು ಬಿಗಿದು ಆತ್ಮಹತ್ಯೆ

ಉಳ್ಳಾಲ: ಹದಿನಾರು ವರ್ಷದ ಹುಡುಗಿಯೊಬ್ಬಳು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಾವೂರು ಇನೋಳಿ ಎಂಬಲ್ಲಿ ನಡೆದಿದೆ. ಮೃತಳನ್ನು ಇನೋಳಿ ಕಾನ ನಿವಾಸಿ ಝೈನಾಜ್ ಎಂದು ಗುರುತಿಸಲಾಗಿದೆ. ಮೃತ ಬಾಲಕಿ SSLC ಓದಿನ ಬಳಿಕ ಬ್ಯೂಟಿಷಿಯನ್ ಕೋರ್ಸ್‌ಗೆ ‌ಸೇರಿಕೊಂಡಿದ್ದಳು. ಆದರೆ ಗುರುವಾರ ಅನಾರೋಗ್ಯದ ಕಾರಣ ಹೇಳಿ ಮನೆಯಲ್ಲೇ ಉಳಿದುಕೊಂಡಿದ್ದಳು. ತನ್ನ ಅಜ್ಜಿ ಹಾಗೂ ತಾಯಿ ಮನೆಯಲ್ಲಿಲ್ಲದ ‌ಸಮಯ ನೋಡಿ ಈಕೆ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕೊಣಾಜೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಾಲಕಿ ನೇಣು ಬಿಗಿದು ಆತ್ಮಹತ್ಯೆ Read More »

ಜಗಳ ವಿಕೋಪಕ್ಕೆ ತಿರುಗಿ ಪತ್ನಿಯನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಪತಿ

ಬೆಂಗಳೂರು: ಹಗ್ಗವನ್ನು ಪತ್ನಿಯ ಕತ್ತಿಗೆ ‌ಸುತ್ತಿ ಕೊಲೆಗೈದು, ಬಳಿಕ ತಾನೂ ಅದೇ ಹಗ್ಗದಿಂದ ಪತಿಯೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಬ್ರಹ್ಮಣ್ಯಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೇಬಿ (60) ಎಂಬವರೇ ಕೊಲೆಯಾದ ದುರ್ದೈವಿ. ಇವರ ಪತಿ ವೆಂಕಟೇಶನ್ (65) ಎಂಬವರೇ ಕೊಲೆ ನಡೆಸಿದ್ದು, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವೆಂಕಟೇಶನ್ ಅವರು ಬಿಎಂ‌ಟಿಸಿ ಚಾಲಕನಾಗಿ ಕೆಲಸ ಮಾಡಿದ್ದು, ಸದ್ಯ ನಿವೃತ್ತಿ ಹೊಂದಿದ್ದರು. ಪತ್ನಿ ಸ್ಟ್ರೋಕ್ ಕಾರಣದಿಂದ ಹಾಸಿಗೆ ಹಿಡಿದಿದ್ದರು. ಈ ದಂಪತಿಯ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು. ಇವರಿಗೆ

ಜಗಳ ವಿಕೋಪಕ್ಕೆ ತಿರುಗಿ ಪತ್ನಿಯನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಪತಿ Read More »

ರೈಲ್ವೆ ಹೆಡ್ ಟಿಇಟಿ ರಾಘವೇಂದ್ರ ಶೆಟ್ಟಿ ಅವರ ಸಮಯಪ್ರಜ್ಞೆಯಿಂದ ಮತ್ತೆ ಮನೆ ಸೇರಿದ ವಿದ್ಯಾರ್ಥಿ

ಉಡುಪಿ: ನಗರದ ಬೋರ್ಡಿಂಗ್ ಹಾಸ್ಟೆಲ್ ‌ನಿಂದ ಕಾಣೆಯಾಗಿದ್ದ 13 ವರ್ಷದ ಹುಡುಗನನ್ನು ಮಂಗಳೂರು ಎಕ್ಸ್‌ಪ್ರೆಸ್‌ ರೈಲಿನಲ್ಲಿ ರೈಲ್ವೆ ಮಂಗಳೂರು ವಿಭಾಗದ ಮುಖ್ಯ ಟಿಇಟಿ ರಾಘವೇಂದ್ರ ಶೆಟ್ಟಿ ಅವರು ಸುರಕ್ಷಿತವಾಗಿ ರಕ್ಷಿಸಿದ ಘಟನೆ ನಡೆದಿದೆ. ರೈಲಿನಲ್ಲಿ ಬಾಲಕ ಒಬ್ಬನೇ ಪ್ರಯಾಣ ನಡೆಸುತ್ತಿದ್ದು, ಆತನ ನಡೆಯಲ್ಲಿ ಸಂದೇಹ ಕಂಡುಬಂದಿದೆ. ಹಾಗಾಗಿ ರಾಘವೇಂದ್ರ ಶೆಟ್ಟಿ ಅವರು ಬಾಲಕನ ಬ್ಯಾಗ್ ಪರಿಶೀಲನೆ ಮಾಡಿದ್ದಾರೆ. ಅದರಲ್ಲಿ ಆತನ ಶಾಲೆಯ ಐಡಿ ಕಾರ್ಡ್ ದೊರೆತಿದೆ. ತಕ್ಷಣವೇ ಶಾಲೆಯ ಅಧಿಕಾರಿಗಳನ್ನು ಸಂಪರ್ಕಿಸಿದ ಅವರು ಬಾಲಕನ ಬಗ್ಗೆ ವಿಚಾರಿಸಿದ್ದು,

ರೈಲ್ವೆ ಹೆಡ್ ಟಿಇಟಿ ರಾಘವೇಂದ್ರ ಶೆಟ್ಟಿ ಅವರ ಸಮಯಪ್ರಜ್ಞೆಯಿಂದ ಮತ್ತೆ ಮನೆ ಸೇರಿದ ವಿದ್ಯಾರ್ಥಿ Read More »

ಒಂಟಿ ಮಹಿಳೆಯಿದ್ದ ಮನೆಗೆ ನುಗ್ಗಿ ನಗದು, ಚಿನ್ನಾಭರಣ ದೋಚಿದ ಖದೀಮರು

ಮಂಗಳೂರು: ದರೋಡೆಕೋರರು ಮನೆಗೆ ನುಗ್ಗಿ ಮಹಿಳೆಯನ್ನು ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳ್ಳತನ ನಡೆಸಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಂತ್ರಸ್ಥ ಮಹಿಳೆ ಜಲಜಾ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದೆ. ಜಲಜಾ ಅವರು ಒಂಟಿಯಾಗಿ ವಾಸಿಸುತ್ತಿದ್ದು, ಡಿ. 3 ರ ಮಧ್ಯಾಹ್ನದ ವೇಳೆ ಇಬ್ಬರು ಯುವಕರು ನೀರು ಕೇಳುವ ನೆಪದಲ್ಲಿ ಅವರ ಮನೆಯ ಬಾಗಿಲು ಬಡಿದಿದ್ದಾರೆ. ಆಗ ಜಲಜ ಅವರು ನೀನು ಹೊರಗಡೆ ಇರುವುದಾಗಿ ತಿಳಿಸಿದ್ದಾರೆ. ಕೆಲವು ಹೊತ್ತಲ್ಲೇ ಒಬ್ಬ

ಒಂಟಿ ಮಹಿಳೆಯಿದ್ದ ಮನೆಗೆ ನುಗ್ಗಿ ನಗದು, ಚಿನ್ನಾಭರಣ ದೋಚಿದ ಖದೀಮರು Read More »

ಪಾಳು ಬಾವಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಬೆಳ್ತಂಗಡಿ: ಅಪರಿಚಿತ ವ್ಯಕ್ತಿಯ ಶವವೊಂದು ಪಾಳು ಬಾವಿಯಲ್ಲಿ ಪತ್ತೆಯಾದ ಘಟನೆ ವಾಮದಪದವಿನಲ್ಲಿ ನಡೆದಿದೆ. ಜನವಸತಿ ಇಲ್ಲದ ಪ್ರದೇಶದಲ್ಲಿ ಈ ಪಾಳು ಬಾವಿ ಇದ್ದು, ಇದರಲ್ಲಿ ಅಪರಿಚಿತ ವ್ಯಕ್ತಿಯ ಮೃತ ದೇಹ ಪತ್ತೆಯಾಗಿರುವುದಾಗಿದೆ. ಕಾಪಿಕಾಡ್ ‌ನಿವಾಸಿ ಮನ್ವಿತ್ ಎಂಬವರ ತಂದೆಗೆ ಸೇರಿದ ನಿವೇಶನ ಇದಾಗಿದ್ದು, ಇಲ್ಲಿ ಅಳತೆ ನಡೆಸುವ ಹಿನ್ನೆಲೆಯಲ್ಲಿ ಸ್ವಚ್ಛತಾ ‌ಕಾರ್ಯವನ್ನು ಕೆಲಸದಾಳುಗಳಿಂದ ಮಾಡಿಸುತ್ತಿದ್ದರು. ಈ ಸಂದರ್ಭದಲ್ಲಿ ಮೃತದೇಹ ಪತ್ತೆಯಾಗಿರುವುದಾಗಿದೆ. ಸುಮಾರು 50 – 60 ವರ್ಷದ ವ್ಯಕ್ತಿಯ ಮೃತದೇಹ ಇದಾಗಿದ್ದು, ಪುಂಜಾಲಕಟ್ಟೆ ಠಾಣೆಯಲ್ಲಿ ಈ ಸಂಬಂಧ

ಪಾಳು ಬಾವಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ Read More »

ಮಂಗಳೂರು : ಕಾರಿಗೆ ಡಿಕ್ಕಿ ಹೊಡೆದು ಮನೆ ಮೇಲೆ ಉರುಳಿ ಬಿದ್ದ ಕ್ರೇನ್‌

ಮೂಡುಬಿದಿರೆ: ಬೃಹತ್ ಕ್ರೇನ್‌ ಕಾರಿಗೆ ಡಿಕ್ಕಿ ಹೊಡೆದು ಬಳಿಕ ಮನೆ ಮೇಲೆ ಉರುಳಿ ಬಿದ್ದ ಪರಿಣಾಮ ಮನೆ ಜಖಂಗೊಂಡ ಘಟನೆ ಮೂಡುಬಿದಿರೆಯ ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮೊರಂತಬೆಟ್ಟು ಬಳಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ. ಮೂಲ್ಕಿ- ಮೂಡುಬಿದಿರೆ ರಾಜ್ಯ ಹೆದ್ದಾರಿಯಲ್ಲಿ ಕಲ್ಲಮುಂಡ್ಕೂರಿನ ಮೊರಂತಬೆಟ್ಡುವಿನ ತಿರುವಿನಲ್ಲಿ ಈ ಘಟನೆ ನಡೆದಿದೆ. ಅತಿವೇಗದಲ್ಲಿ ಸಂಚರಿಸುತ್ತಿದ್ದ ಕ್ರೇನ್ ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದಿದೆ. ಇದರಿಂದ ಮನೆಗೆ ಹಾನಿ ಸಂಭವಿಸಿದೆ. ಅವಘಡದ ವೇಳೆ ಮನೆಮಂದಿ ಮನೆಯ ಇನ್ನೊಂದು ಪಾರ್ಶ್ವದಲ್ಲಿದ್ದ ಕಾರಣ

ಮಂಗಳೂರು : ಕಾರಿಗೆ ಡಿಕ್ಕಿ ಹೊಡೆದು ಮನೆ ಮೇಲೆ ಉರುಳಿ ಬಿದ್ದ ಕ್ರೇನ್‌ Read More »

error: Content is protected !!
Scroll to Top