ಜಗಳ ತಾರಕಕ್ಕೇರಿ ವಿಷ ಸೇವಿಸಿದ ಗಂಡ-ಹೆಂಡತಿ :  ಹೆಂಡತಿ ಮೃತ್ಯು

ಕಡಬ: ಗಲಾಟೆ ಮಾಡಿಕೊಂಡ ಗಂಡ-ಹೆಂಡತಿ ಜಗಳ ವಿಪರೀತಕ್ಕೇರಿ ಕೊನೆಗೆ ಸಾವಿನಲ್ಲಿ ಅಂತ್ಯವಾದ ಘಟನೆ ಕಡಬ ತಾಲೂಕಿನ ಕುದ್ಮಾರು ಗ್ರಾಮದಲ್ಲಿ ಶನಿವಾರ ರಂದು ಸಂಜೆ ನಡೆದಿದೆ. ಗಂಡ-ಹೆಂಡಿರ ಗಲಾಟೆಯಲ್ಲಿ ಹೆಂಡತಿ ಕುಸುಮ (39) ಮೃತಪಟ್ಟವರು.ಕುಸುಮ ಮತ್ತು ಆಕೆಯ ಪತಿ ಸಂಜೀವರ ನಡುವೆ ಆಗಾಗ್ಗೆ ಗಲಾಟೆ ನಡೆಯುತ್ತಿತ್ತು. ಅಂತೆಯೇ ಶನಿವಾರ ಕೂಡ ಮಾತಿಗೆ ಮಾತು ಬೆಳೆದಿದೆ. ಕೋಪದ ಭರದಲ್ಲಿ ಇಬ್ಬರು ಕೂಡ ವಿಷ ಸೇವಿಸಿದ್ದಾರೆ. ಈ ವಿಚಾರ ಸ್ಥಳೀಯರಿಗೆ ತಿಳಿದು ತಕ್ಷಣ ಅವರ ಸಂಬಂಧಿಕರಿಗೆ ವಿಚಾರವನ್ನು ತಿಳಿಸಿರುತ್ತಾರೆ. ಅವರು ಬಂದು […]

ಜಗಳ ತಾರಕಕ್ಕೇರಿ ವಿಷ ಸೇವಿಸಿದ ಗಂಡ-ಹೆಂಡತಿ :  ಹೆಂಡತಿ ಮೃತ್ಯು Read More »

ದೇವಸ್ಥಾನದ ಆಡಳಿತ ಮಂಡಳಿ ಸದಸ್ಯನೆಂದು ಹೇಳಿ ವಂಚಿಸಿದ ಭೂಪ : ಬರೋಬ್ಬರಿ 30 ಲಕ್ಷ ವಂಚನೆ

ಉಡುಪಿ: ವ್ಯಕ್ತಿಯೊಬ್ಬ ತಾನು ಕೊಲ್ಲೂರು ದೇವಸ್ಥಾನದ ಆಡಳಿತ ಮಂಡಳಿ ಸದಸ್ಯನೆಂದು ಹೇಳಿಕೊಂಡು ಬೆಂಗಳೂರು ಮೂಲದ ಭಕ್ತರ ಕುಟುಂಬವೊಂದಕ್ಕೆ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡುವುದಾಗಿ ಹೇಳಿ 30.73 ಲಕ್ಷ ರೂ. ಹಣ ಪಡೆದು ವಂಚಿಸಿದ ಘಟನೆ ನಡೆದಿದೆ. ಕೊಲ್ಲೂರು ನಿವಾಸಿ ಸುಧೀರ್ ಕುಮಾರ್ ಎಂಬಾತನೇ ಕುಟುಂಬಕ್ಕೆ ವಂಚಿಸಿದ ವ್ಯಕ್ತಿ. ಬೆಂಗಳೂರಿನ ದಿಲ್ಲಾ ತನ್ನ ಗಂಡ ಮತ್ತು ಕುಟುಂಬ ಸದಸ್ಯರ ಜತೆ ಕೊಲ್ಲೂರು ದೇವಸ್ಥಾನಕ್ಕೆ ಬಂದಿದ್ದ ವೇಳೆ ತನ್ನ ಅಣ್ಣ ದಿಲೀಶ್ ಅವರಿಗೆ ಪರಿಚಯವಿದ್ದ ಸುಧೀರ್ ಕುಮಾರ್ ಎಂಬಾತ ಪರಿಚಯ

ದೇವಸ್ಥಾನದ ಆಡಳಿತ ಮಂಡಳಿ ಸದಸ್ಯನೆಂದು ಹೇಳಿ ವಂಚಿಸಿದ ಭೂಪ : ಬರೋಬ್ಬರಿ 30 ಲಕ್ಷ ವಂಚನೆ Read More »

ಬೆಂಗಳೂರು ಕಂಬಳಕ್ಕೆ ಮುಖ್ಯಮಂತ್ರಿಗಳಿಂದ ಒಂದು ಕೋಟಿ ರೂ. ಘೋಷಣೆ

ಪುತ್ತೂರು: ಬೆಂಗಳೂರು ಅರಮನೆ ಮೈದಾನದಲ್ಲಿ ನ.24ರಿಂದ 26 ರತನಕ ನಡೆಯಲಿರುವ ಬೆಂಗಳೂರು‌ ಕಂಬಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಒಂದು ಕೋಟಿ ರೂ. ಘೋಷಣೆ ಮಾಡಿದ್ದಾರೆ ಎಂದು ಕಂಬಳ ಸಮಿತಿ ಅಧ್ಯಕ್ಷ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಪ್ರಥಮ ಬಾರಿಗೆ ಕರಾವಳಿಯ ಜನಪದ ಕ್ರೀಡೆಯಾದ ಕಂಬಳವನ್ನು ಬೆಂಗಳೂರಿನಲ್ಲಿ ಆಯೋಜನೆ ಮಾಡಲಾಗಿದೆ. ಈಗಾಗಲೇ ಕಂಬಳಕ್ಕೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಬೆಂಗಳೂರು ಕಂಬಳ ಸಮಿತಿಯ ಗೌರವಾಧ್ಯಕ್ಷರಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಕಂಬಳ ಸಮಿತಿ ನೇಮಕ ಮಾಡಿದೆ.

ಬೆಂಗಳೂರು ಕಂಬಳಕ್ಕೆ ಮುಖ್ಯಮಂತ್ರಿಗಳಿಂದ ಒಂದು ಕೋಟಿ ರೂ. ಘೋಷಣೆ Read More »

ಜನರ ಜೊತೆ ಸಹಭೋಜನಕ್ಕಾಗಿ ವಸ್ತ್ರ ವಿತರಣೆ | ವಸ್ತ್ರ ವಿತರಣೆ ಪೂರ್ವಭಾವಿ ಸಭೆಯಲ್ಲಿ ಸುಮಾ ಅಶೋಕ್ ರೈ

ಪುತ್ತೂರು: ಸುಮಾರು ಹತ್ತು ವರ್ಷಗಳಿಂದ ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಡ್ ವತಿಯಿಂದ ಪ್ರತೀ ದೀಪಾವಳಿಯಂದು ವಸ್ತ್ರ ವಿತರಣೆ ಕಾರ್ಯಕ್ರಮನಡೆಸುತ್ತಿದ್ದು ಇದು ಜನರ ಜೊತೆ ಸಹಭೋಜನ ನಡೆಸುವ ಏಕೈಕ ಉದ್ದೇಶವನ್ನು ಹೊಂದಿದ್ದು ಜನತೆಯ ಆಶೀರ್ವಾದವೇ ನಮ್ಮ ಟ್ರಸ್ಟಿಗೆ ಆಧಾರವಾಗಿದೆ ಎಂದು ಟ್ರಸ್ಟಿನಮುಖ್ಯಸ್ಥೆ ಸುಮಾ ಅಶೋಕ್ ರೈ ಹೇಳಿದರು. ನ.13ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿರುವ ವಸ್ತ್ರ ವಿತರಣಾ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಶನಿವಾರ ಅವರು ಮಾತನಾಡಿದರು. ಹಲವು ವರ್ಷಗಳಿಂದ ಕೋಡಿಂಬಾಡಿ ರೈ ಎಸ್ಟೇಟ್ ನಲ್ಲಿ ನಡೆಯುತ್ತಿದ್ದ

ಜನರ ಜೊತೆ ಸಹಭೋಜನಕ್ಕಾಗಿ ವಸ್ತ್ರ ವಿತರಣೆ | ವಸ್ತ್ರ ವಿತರಣೆ ಪೂರ್ವಭಾವಿ ಸಭೆಯಲ್ಲಿ ಸುಮಾ ಅಶೋಕ್ ರೈ Read More »

ಪಡ್ನೂರು ಶ್ರೀ ಜನಾರ್ದನ ಯುವಕ ಮಂಡಲದ ಸುವರ್ಣ ಸಂಭ್ರಮ ‘ಪಡ್ನೂರು ಉತ್ಸವ’  ಉದ್ಘಾಟನೆ

ಪುತ್ತೂರು: ಪಡ್ನೂರು ಹಿ.ಪ್ರಾ ಶಾಲಾ ಜನಾರ್ದನ ರಂಗ ಮಂದಿರದಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ಶ್ರೀ ಜನಾರ್ದನ ಯುವಕ ಮಂಡಲದ ಸುವರ್ಣ ಮಹೋತ್ಸವ ‘ಪಡ್ನೂರು ಉತ್ಸವ’ಕ್ಕೆ ಶನಿವಾರ ಚಾಲನೆ ನೀಡಲಾಯಿತು. ಬೆಳಿಗ್ಗೆ ಗಣಹೋಮದೊಂದಿಗೆ ಸುವರ್ಣ ಸಂಭ್ರಮಕ್ಕೆ ಚಾಲನೆ ನೀಡಲಾಯಿತು. ನಂತರ ಭಾರತೆ ಮಾತೆಗೆ ದೀಪ ಬೆಳಗಿಸಿ, ಪುಷ್ಪಾರ್ಚನೆ ಸಲ್ಲಿಸಲಾಯಿತು. ಸುವರ್ಣ ಮಹೋತ್ಸವದ ಅಂಗವಾಗಿ ಆಯೋಜಿಸಲಾದ ಉಚಿತ ವೈದ್ಯಕೀಯ ಶಿಬಿರವನ್ನು ಉದ್ಘಾಟಿಸಿದ ಡಾ.ಕೃಷ್ಣ ಪ್ರಸಾದ್ ಸರ್ಪಂಗಳ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಜನಾರ್ದನ ಯುವಕ ಮಂಡಲ ಹಲವು ಕಾರ್ಯಕ್ರಮಗಳ ಮೂಲಕ

ಪಡ್ನೂರು ಶ್ರೀ ಜನಾರ್ದನ ಯುವಕ ಮಂಡಲದ ಸುವರ್ಣ ಸಂಭ್ರಮ ‘ಪಡ್ನೂರು ಉತ್ಸವ’  ಉದ್ಘಾಟನೆ Read More »

ಸತ್ಯಕ್ಕೆ ದೂರವಾದ ವರದಿ ಬಿತ್ತರ : ಕನ್ನಡ ನ್ಯೂಸ್ ಚಾನೆಲ್ ವಿರುದ್ಧ ಜಿಲ್ಲೆಯ ಸಮಸ್ತ ಒಕ್ಕಲಿಗ ಸಮುದಾಯದಿಂದ ಖಂಡನೆ | ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಗುರುದೇವ್ ಯು.ಬಿ.

ಮಂಗಳೂರು: ಜಿಲ್ಲೆಯಲ್ಲಿ ಒಕ್ಕಲಿಗ ಸಮುದಾಯ 3.75 ಲಕ್ಷಕ್ಕಿಂತ ಅಧಿಕ ಮತದಾರರನ್ನು ಹೊಂದಿದ್ದು, ಇದು ಒಕ್ಕಲಿಗ ಅಭಿವೃದ್ಧಿ ನಿಗಮಕ್ಕೆ ಆಯೋಗ ನೀಡಿದ ವರದಿ ಹಾಗೂ ಒಕ್ಕಲಿಗರ ಸಂಘವು ನೀಡಿದ ಆಂತರಿಕ ಅಂಕಿಅಂಶವಾಗಿದೆ. ಆದರೆ ಕನ್ನಡ ನ್ಯೂಸ್ ಚಾನೆಲ್ ಒಂದು ತನ್ನ ವರದಿಯಲ್ಲಿ ದ.ಕ.ಜಿಲ್ಲೆಯಲ್ಲಿ ಕೇವಲ 80 ಸಾವಿರ ಅಂತ ಬಿಂಬಿಸಿ ನಿಕೃಷ್ಟ ಮತ್ತು ತಾತ್ಸಾರ ವರದಿ ನೀಡಿರುವುದು ಸಮುದಾಯದಲ್ಲಿ ಆಕ್ರೋಶ ಮತ್ತು ತಳಮಳಕ್ಕೆ ಕಾರಣವಾಗಿದೆ. ಅಧ್ಯಯನ ಪೂರಕ, ವಸ್ತುನಿಷ್ಠ ಸಂತ್ಯಾಂಶರಹಿತ ವರದಿ ಪ್ರಕಟಿಸಿರುವುದು ಮಾಧ್ಯಮದ ಘನತೆಗೆ ತಕ್ಕುದಲ್ಲ ಎಂದು

ಸತ್ಯಕ್ಕೆ ದೂರವಾದ ವರದಿ ಬಿತ್ತರ : ಕನ್ನಡ ನ್ಯೂಸ್ ಚಾನೆಲ್ ವಿರುದ್ಧ ಜಿಲ್ಲೆಯ ಸಮಸ್ತ ಒಕ್ಕಲಿಗ ಸಮುದಾಯದಿಂದ ಖಂಡನೆ | ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಗುರುದೇವ್ ಯು.ಬಿ. Read More »

ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕತ್ತು ಹಿಸುಕಿ ಬಾವಿಗೆ ಹಾಕಿದ ಪತಿ

ಬೆಳ್ತಂಗಡಿ:  ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕಿರಾತಕ ಪತಿರಾಯನೇ ಕತ್ತು ಹಿಸುಕಿ ಬಾವಿಗೆ ಹಾಕಿ ಕೊಂದ ಅಮಾನುಷ ಘಟನೆ ಬೆಳ್ತಂಗಡಿ ತಾಲೂಕು, ಬೆಳಾಲು ಗ್ರಾಮದ ಕೆಂಪನೊಟ್ಟು ಎಂಬಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಬೆಳಾಲು ನಿವಾಸಿ ಶಶಿಕಲಾ (27) ಎಂದು  ಗುರುತಿಸಲಾಗಿದ್ದು, ಆರೋಪಿ ಕಿರಾತಕ ಪತಿಯನ್ನು ಸುಧಾಕರ ಎಂದು ಗುರುತಿಸಲಾಗಿದೆ. ಸುಧಾಕರ ಏಳು ವರ್ಷಗಳ ಹಿಂದೆ ಶಶಿಕಲಾಳನ್ನು ಪ್ರೀತಿಸಿ ಮದುವೆಯಾಗಿದ್ದು, ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕೆಂಪನೊಟ್ಟು ಎಂಬಲ್ಲಿ 6 ವರ್ಷದ ಮಗಳೊಂದಿಗೆ ವಾಸವಾಗಿದ್ದರು. ಸುಧಾಕರನಿಗೆ

ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕತ್ತು ಹಿಸುಕಿ ಬಾವಿಗೆ ಹಾಕಿದ ಪತಿ Read More »

ಇಲಿ ಜ್ವರದಿಂದ ಮಹಿಳೆ ಮೃತ್ಯು

ಉಜಿರೆ: ಇಲಿ ಜ್ವರದಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಉಜಿರೆ ಗ್ರಾಮದ ಬೆಳಾಲುನಲ್ಲಿ ನಡೆದಿದೆ. ಬೆಳಾಲು ಗ್ರಾಮದ ತುರ್ಕೆರೊಟ್ಟು ಮನೆಯ ಆಶಾ (27) ಮೃತಪಟ್ಟವರು. ಇಲಿ ಜ್ವರದಿಂದ ಬಳಲುತ್ತಿದ್ದು ಚಿಕಿತ್ಸೆ ಫಲಕಾರಿಯಾಗಿದೆ ಮಂಗಳೂರಿನ ದೇರಳಕಟ್ಟೆ ಖಾಸಗಿ ಅಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತಿ, ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.

ಇಲಿ ಜ್ವರದಿಂದ ಮಹಿಳೆ ಮೃತ್ಯು Read More »

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರಿಂದ ರಾಜೀವಗಾಂಧಿ ಗ್ರಾಮೀಣ ವಸತಿ ನಿಗಮದ ವ್ಯವಸ್ಥಾಪಕರಿಗೆ ಮನವಿ

ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಸುಳ್ಯ ಹಾಗೂ ಕಡಬ ತಾಲೂಕು ವ್ಯಾಪ್ತಿಯಲ್ಲಿ ವಿವಿಧ ವಸತಿ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳ ಸಹಾಯಧನವನ್ನು ನಿಗಮದಿಂದ ತಡೆಹಿಡಿಯಲಾಗಿದ್ದು, ಸಮಸ್ಯೆ ಬಗೆಹರಿಸಿ ಅನುದಾನ ಬಿಡುಗಡೆಗೊಳಿಸುವಂತೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ರಾಜೀವಗಾಂಧಿ ಗ್ರಾಮೀಣ ವಸತಿ ನಿಗಮದ ವ್ಯವಸ್ಥಾಪಕರಿಗೆ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ವ್ಯವಸ್ಥಾಪಕರನ್ನು ಭೇಟಿ ಮಾಡಿದ ಅವರು, ಈ ಕುರಿತು ಸಮಸ್ಯೆ ಬಗೆಹರಿಸಿ ಅನುದಾನ ಬಿಡುಗಡೆಗೊಳಿಸುವಂತೆ ಹಲವಾರು ಬಾರಿ ಮನವಿ ಮಾಡಲಾಗಿದೆ. ಆದರೂ ತಾಂತ್ರಿಕ ಕಾರಣಗಳಿಂದಾಗಿ ನಿಗಮದ ವತಿಯಿಂದ ಸಮಸ್ಯೆ ಈ

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರಿಂದ ರಾಜೀವಗಾಂಧಿ ಗ್ರಾಮೀಣ ವಸತಿ ನಿಗಮದ ವ್ಯವಸ್ಥಾಪಕರಿಗೆ ಮನವಿ Read More »

ವೈದ್ಯಾಧಿಕಾರಿ ಹಾಗೂ ಡಯಾಲಿಸಿಸ್ ಟೆಕ್ನಿಷಿಯನ್ ನೇಮಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರಿಂದ ಮನವಿ

ಸುಳ್ಯ: ಸುಳ್ಯ ವಿಧಾಸಭಾ ಕ್ಷೇತ್ರದ ಬೆಳ್ಳಾರೆಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವೈದ್ಯಾಧಿಕಾರಿ ನೇಮಕದ ಜತೆ ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಡಯಾಲಿಸಿಸ್ ಟೆಕ್ನಿಷಿಯನ್ ಒದಗಿಸಿಕೊಡಬೇಕೆಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸಚಿವರನ್ನು ಭೇಟಿ ಮಾಡಿದ ಶಾಸಕಿ, ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿ ಇಲ್ಲದಿರುವ ಕಾರಣ ಗ್ರಾಮೀಣ ಜನರಿಗೆ ಆರೋಗ್ಯ ಸೇವೆ ಪಡೆಯಲು ತೊಂದರೆ ಪಡುವಂತಾಗಿದೆ. ಅಲ್ಲದೆ ಕಡಬ ಸಮುದಾಯ ಆರೋಗ್ಯ

ವೈದ್ಯಾಧಿಕಾರಿ ಹಾಗೂ ಡಯಾಲಿಸಿಸ್ ಟೆಕ್ನಿಷಿಯನ್ ನೇಮಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರಿಂದ ಮನವಿ Read More »

error: Content is protected !!
Scroll to Top