ರೈಲ್ವೇ ಖಾಸಗೀಕರಣ ವಿರುದ್ಧ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

ಪುತ್ತೂರು: ದೇಶದ ಆರ್ಥಿಕತೆಯ ಜೀವಾಳ, ಜನರ ಜೀವನಾಡಿ ರೈಲ್ವೇ ಖಾಸಗೀಕರಣದ ವಿರುದ್ಧ ದೇಶದಾದ್ಯಂತ ಎಲ್ಲಾ ರೈಲ್ವೇ ನಿಲ್ದಾಣಗಳ ಎದುರು ಬೃಹತ್ ಪ್ರತಿಭಟನೆ ನಡೆಯುತ್ತಿದ್ದು, ಈ ನಿಟ್ಟಿನಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್, ದ.ಕ.ಜಿಲ್ಲಾ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ, ವಿವಿಧ ರೈತ ಸಂಘಟನೆಗಳ ಒಕ್ಕೂಟ ಹಾಗೂ ವಿದ್ಯಾರ್ಥಿ ಯುವಜನ ಮಹಿಳಾ ದಲಿತ ಆದಿವಾಸಿ ಹಾಗೂ ಜನಪರ ಸಂಘಟನೆಗಳ ವೇದಿಕೆ ಆಶ್ರಯದಲ್ಲಿ ಬೃಹತ್ ಪ್ರತಿಭಟನಾ ಸಭೆ ಶುಕ್ರವಾರ ಪುತ್ತೂರಿನ ರೈಲ್ವೇ ನಿಲ್ದಾಣದ ಮುಂಭಾಗ ನಡೆಸಲಾಯಿತು. ಪ್ರತಿಭಟನೆಯನ್ನುದ್ದೇಶಿಸಿ ಕೆಪಿಸಿಸಿ ಸಂಯೋಜಕ […]

ರೈಲ್ವೇ ಖಾಸಗೀಕರಣ ವಿರುದ್ಧ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ Read More »

ರಾಜ್ಯಮಟ್ಟದ ದಸರಾ ಸಿ.ಎಂ. ಕಪ್ – ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಪವಿತ್ರ ಜಿ. ಗೆ ಚಿನ್ನದ ಪದಕ

ಪುತ್ತೂರು: ಇಲ್ಲಿಯ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಅಂತಿಮ ವರ್ಷದ ಎಂಬಿಎ ವಿಭಾಗದ ವಿದ್ಯಾರ್ಥಿನಿ ಪವಿತ್ರ.ಜಿ ರಾಜ್ಯ ಮಟ್ಟದ ದಸರಾ ಸಿ.ಎಂ ಕಪ್ ಅತ್ಪೆಟಿಕ್ ಸ್ಪರ್ಧೆ-2023 ರಲ್ಲಿ ಟ್ರಿಪಲ್‌ಜಂಪ್ ನಲ್ಲಿ ಚಿನ್ನದ ಪದಕ ಜಯಿಸಿದ್ದಾರೆ. ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಒಲಿಂಪಿಕ್ ಅಸೋಸಿಯೇಶನ್ ಮತ್ತು ಮೈಸೂರು ಜಿಲ್ಲಾಡಳಿತದ ಸಂಯುಕ್ತ ಆಶ್ರಯದಲ್ಲಿ ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆದ ಈ ಸ್ಪರ್ಧೆಯಲ್ಲಿ 12.90 ಮೀಟರ್ ದೂರ ಜಿಗಿದು ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ.

ರಾಜ್ಯಮಟ್ಟದ ದಸರಾ ಸಿ.ಎಂ. ಕಪ್ – ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಪವಿತ್ರ ಜಿ. ಗೆ ಚಿನ್ನದ ಪದಕ Read More »

ದೀಪಾವಳಿ: ಪಟಾಕಿ ಬಳಕೆಗೆ ರಾಜ್ಯ ಸರಕಾರ ಹೊರಡಿಸಿದೆ ಮಾರ್ಗಸೂಚಿ | ಮಾರ್ಗಸೂಚಿ ಹೇಗಿವೆ ? ಇಲ್ಲಿದೆ ಡಿಟೈಲ್ಸ್

ಬೆಂಗಳೂರು: ಮುಂಬರುವ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪಟಾಕಿ ಮಾರಾಟ ಹಾಗೂ  ಬಳಕೆಗೆ ಸಂಬಂಧಿಸಿದಂತೆ ರಾಜ್ಯ ಸರಕಾರ ಮಾರ್ಗಸೂಚಿಯನ್ನು ಇದೀಗ  ಹೊರಡಿಸಿದೆ. ಮುಖ್ಯವಾಗಿ ಪಟಾಕಿಗಳನ್ನು ಸ್ಫೋಟಿಸುವುದರಿಂದ ಉಂಟಾಗುವ ಶಬ್ದ ಮಾಲಿನ್ಯ ಮತ್ತು ವಾಯು ಮಾಲಿನ್ಯದಿಂದ ಸಾರ್ವಜನಿಕ ಆರೋಗ್ಯದ ಮೇಲೆ ತೀವ್ರ ಪರಿಣಾಮ ಉಂಟಾಗುವುದನ್ನು ತಡೆಗಟ್ಟಲು ಸರಕಾರ ಈ ಮಾರ್ಗಸೂಚಿ ಹೊರಡಿಸಿದೆ. ಮಾರ್ಗಸೂಚಿ ಹೇಗಿವೆ ? 1.ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿನ ಜಿಲ್ಲಾ ಅಗ್ನಿಶಾಮಕ ದಳದ ಅಧಿಕಾರಿ, ಸ್ಥಳೀಯ ಸಂಸ್ಥೆಯ ಮುಖ್ಯಸ್ಥರು, ಆರೋಗ್ಯಧಿಕಾರಿ, ತಹಶೀಲ್ದಾರ್, ಜಿಲ್ಲಾ ಪರಿಸರ

ದೀಪಾವಳಿ: ಪಟಾಕಿ ಬಳಕೆಗೆ ರಾಜ್ಯ ಸರಕಾರ ಹೊರಡಿಸಿದೆ ಮಾರ್ಗಸೂಚಿ | ಮಾರ್ಗಸೂಚಿ ಹೇಗಿವೆ ? ಇಲ್ಲಿದೆ ಡಿಟೈಲ್ಸ್ Read More »

ನಾಳೆ ಯಾವ್ಯಾವ ಪ್ರದೇಶದಲ್ಲಿ ಕರೆಂಟಿಲ್ಲ | ಇಲ್ಲಿದೆ ಡಿಟೈಲ್ಸ್

ಪುತ್ತೂರು: ನಿರ್ವಹಣೆ ಮತ್ತು ತುರ್ತು ಕಾಮಗಾರಿ ಹಿನ್ನಲೆಯಲ್ಲಿ 110/33/11 ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಸರಬರಾಜಾಗುವ ದರ್ಬೆ ಫೀಡರ್‌ನಲ್ಲಿ ನ.4 ಶನಿವಾರ ವಿದ್ಯುತ್ ನಿಲುಗಡೆ ಮಾಡಲಾಗುವುದು. ಪೂರ್ವಾಹ್ನ 10 ರಿಂದ ಅಪರಾಹ್ನ 5ರ ವರೆಗೆ ಈ ಕೆಳಗಿನ ಪ್ರದೇಶದಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುವುದು. 110/33/11 ಕೆವಿ ಪುತ್ತೂರು ವಿದ್ಯುತ್ ಕೇಂದ್ರ ಹೊರಡುವ ಮೇಲೆ ತಿಳಿಸಿದ ಫೀಡರ್‌ನಿಂದ ವಿದ್ಯುತ್ ಸರಬರಾಜಾಗುವ ಹಾರಾಡಿ, ಚಿಕ್ಕಪುತ್ತೂರು, ನೆಲ್ಲಿಕಟ್ಟೆ, ಕೆಎಸ್ಆರ್‌ಟಿಸಿ ಬಸ್ ಸ್ಟ್ಯಾಂಡ್, ಕಲ್ಲಾರೆ, ದರ್ಬೆ ಪರಿಸರದಲ್ಲಿ ವಿದ್ಯುತ್ ನಿಲುಗಡೆಗೊಳ್ಳಲಿದೆ. ಈ ಪ್ರದೇಶದ

ನಾಳೆ ಯಾವ್ಯಾವ ಪ್ರದೇಶದಲ್ಲಿ ಕರೆಂಟಿಲ್ಲ | ಇಲ್ಲಿದೆ ಡಿಟೈಲ್ಸ್ Read More »

ಉದ್ಯಮಿ ಸೊಸೆ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ | ವರದಕ್ಷಿಣ ಕಿರುಕುಳ ಆರೋಪದಲ್ಲಿ ಐವರ ಬಂಧನ

ಸುಳ್ಯ :ಸುಳ್ಯದ ಉದ್ಯಮಿ ಕಾಪಿಲ ಗಿರಿಯಪ್ಪ ಗೌಡರ ಸೊಸೆ ಐಶ್ವರ್ಯಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ ರಾಜೇಶ್, ಅತ್ತೆ ಸೀತಾ, ಮಾವ ಗಿರಿಯಪ್ಪ ಗೌಡ ಕಾಪಿಲ, ಮೈದುನ, ಮೈದುನನ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ 5 ವರ್ಷಗಳ ಹಿಂದೆ ರಾಜೇಶ್ ಅವರನ್ನು ಐಶ್ವರ್ಯ ಮದುವೆಯಾಗಿದ್ದರು. ಐಶ್ವರ್ಯ ಯುಎಸ್ಎ ನಲ್ಲಿ ಎಂಬಿಎ ಮಾಡಿದ್ದರು. ಪತಿ ರಾಜೇಶ್, ಡೈರಿ ರಿಚ್ ಐಸ್ ಕ್ರೀಮ್ ಕಂಪನಿ ಮಾಲೀಕರಾಗಿದ್ದಾರೆ. ಇದೇ ಕಂಪನಿಯಲ್ಲಿ ಐಶ್ವರ್ಯ ತಂದೆ ಸುಬ್ರಮಣ್ಯ ಅವರ ತಂಗಿ ಗಂಡ ರವೀಂದ್ರ ಆಡಿಟರ್

ಉದ್ಯಮಿ ಸೊಸೆ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ | ವರದಕ್ಷಿಣ ಕಿರುಕುಳ ಆರೋಪದಲ್ಲಿ ಐವರ ಬಂಧನ Read More »

ಬಡವರ ಸೇವೆಗೆಂದೇ ಟ್ರಸ್ಟ್ ಆರಂಭಿಸಲಾಗಿದೆ | ರೈ ಚಾರಿಟೇಬಲ್‌ಟ್ರಸ್ಟ್ ಫಲಾನುಭವಿಗಳ ಸಭೆಯಲ್ಲಿ ನಿಹಾಲ್ ಶೆಟ್ಟಿ

ಪುತ್ತೂರು: ಕಳೆದ ಹತ್ತು ವರ್ಷಗಳ ಹಿಂದೆ ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟನ್ನು ಸ್ತಾಪನೆ ಮಾಡಿದ್ದೇ ಬಡವರ ಸೇವೆಗಾಗಿ. ಇದರಲ್ಲಿ ಯಾವುದೇ ರಾಜಕೀಯವಿಲ್ಲ, ಅಶೋಕ್ ರೈಯವರು ಶಾಸಕರಾಗುವ ಮೊದಲೇ ಟ್ರಸ್ಟ್‌ನಿಂದ ಸಮಾಜ ಸೇವೆ ನಡೆಯುತ್ತಲೇ ಇದೆ ಎಂದು ಟ್ರಸ್ಟ್‌ನ ಪ್ರಮುಖರಾದ ನಿಹಾಲ್ ಶೆಟ್ಟಿ ಹೇಳಿದರು. ಅವರು ಬನ್ನೂರು ನವೋದಯ ಯುವಕ ಮಂಡಲದ ಸಭಾಂಗಣದಲ್ಲಿ ನಡೆದ ರೈ ಚಾರಿಟೇಬಲ್ ಟ್ರಸ್ಟ್ ಫಲಾನುಭವಿಗಳ ಸಭೆಯಲ್ಲಿ ಮಾತನಾಡಿದರು. ಕಳೆದ ಹತ್ತು ವರ್ಷಗಳಿಂದ ವಿವಿಧ ಸೇವೆಗಳನ್ನು ಟ್ರಸ್ಟ್ ನೀಡುತ್ತಾ ಬಂದಿದೆ. ಬಡ

ಬಡವರ ಸೇವೆಗೆಂದೇ ಟ್ರಸ್ಟ್ ಆರಂಭಿಸಲಾಗಿದೆ | ರೈ ಚಾರಿಟೇಬಲ್‌ಟ್ರಸ್ಟ್ ಫಲಾನುಭವಿಗಳ ಸಭೆಯಲ್ಲಿ ನಿಹಾಲ್ ಶೆಟ್ಟಿ Read More »

ಬೆಳ್ಳಾರೆ ಮಸೂದ್ ಕೊಲೆ ಪ್ರಕರಣ | ಜೈಲಿನಲ್ಲಿದ್ದ ಇಬ್ಬರು ಆರೋಪಿಗಳಿಗೆ ಹೈಕೋರ್ಟ್‍ ನಿಂದ ಜಾಮೀನು

ಮಂಗಳೂರು: ಸುಳ್ಯದ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಮಸೂದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಜೈಲು ಸೇರಿದ್ದ ಇಬ್ಬರು ಆರೋಪಿಗಳಿಗೆ ಹೈಕೋರ್ಟ್‌ ಜಾಮೀನು ನೀಡಿದೆ. 2022 ರ ಜುಲೈಯಲ್ಲಿ ಬೆಳ್ಳಾರೆ ಸಮೀಪದ ಕಳೆಂಜ ಎಂಬಲ್ಲಿ ಮಸೂದ್ ಕೊಲೆ ಕೃತ್ಯ ನಡೆದಿತ್ತು. ಎಂಟು ಆರೋಪಿಗಳ ಪೈಕಿ ಅಭಿಲಾಷ್ ಮತ್ತು ಸುನಿಲ್ ಇವರಿಗೆ ಈಗ ಜಾಮೀನು ಲಭಿಸಿದೆ. ಆರು ಮಂದಿಗೆ ಈ ಮೊದಲೇ ಜಾಮೀನು ಸಿಕ್ಕಿತ್ತು. ಜಾಮೀನು ಅರ್ಜಿಯನ್ನು ಪರಿಗಣಿಸಿದ ಕರ್ನಾಟಕದ ಉಚ್ಚ ನ್ಯಾಯಾಲಯದ ಏಕಸದಸ್ಯ ಪೀಠದ ಜಸ್ಟಿಸ್ ವಿಶ್ವಜೀತ್ ಎಸ್ ಶೆಟ್ಟಿ,

ಬೆಳ್ಳಾರೆ ಮಸೂದ್ ಕೊಲೆ ಪ್ರಕರಣ | ಜೈಲಿನಲ್ಲಿದ್ದ ಇಬ್ಬರು ಆರೋಪಿಗಳಿಗೆ ಹೈಕೋರ್ಟ್‍ ನಿಂದ ಜಾಮೀನು Read More »

ನಾಡು ನುಡಿಯ ಅಭಿಮಾನ ಹೊಂದುವುದು ಮನದಾಳದ ಸಂಕಲ್ಪವಾಗಲಿ | ಎಸ್‌ಎಸ್‌ಪಿಯು ಕಾಲೇಜಿನ ಕನ್ನಡ ರಾಜ್ಯೋತ್ಸವ ದಿನಾಚರಣೆಯಲ್ಲಿ ಸೋಮಶೇಖರ್ ನಾಯಕ್

ಸುಬ್ರಹ್ಮಣ್ಯ: ಸ್ಪರ್ಧಾತ್ಮಕ ಜಗತ್ತಿನಲ್ಲಿ ಬಹು ಭಾಷೆಗಳಲ್ಲಿ ಪರಿಣಿತರಾದರೆ ಮಾತ್ರ ಯಶ ಗಳಿಸಲು ಸಾಧ್ಯ. ನಾವು ನಮ್ಮ ನಾಡಭಾಷೆಯ ಬಗ್ಗೆ ಪ್ರೀತಿಯನ್ನು ಬೆಳೆಸಿಕೊಳ್ಳಬೇಕು. ಕನ್ನಡವನ್ನು ಪ್ರೀತಿಸುತ್ತಾ ಇತರ ಭಾಷೆಗಳ ಮೇಲೆ ಅಭಿಮಾನ ಹೊಂದಬೇಕು. ನಾಡು ನುಡಿಯ ಮೇಲೆ ಅಭಿಮಾನ ಹೊಂದುವುದು ಮನದಾಳದ ಸಂಕಲ್ಪವಾಗಬೇಕು ಎಂದು ಎಸ್ ಎಸ್‌ಪಿಯು ಕಾಲೇಜಿನ ಪ್ರಾಂಶುಪಾಲ ಸೋಮಶೇಖರ ನಾಯಕ್ ಹೇಳಿದರು. ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾದ ಆಡಳಿತಕ್ಕೊಳಪಟ್ಟ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಕನ್ನಡ ರಾಜ್ಯೋತ್ಸವ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಅವರು

ನಾಡು ನುಡಿಯ ಅಭಿಮಾನ ಹೊಂದುವುದು ಮನದಾಳದ ಸಂಕಲ್ಪವಾಗಲಿ | ಎಸ್‌ಎಸ್‌ಪಿಯು ಕಾಲೇಜಿನ ಕನ್ನಡ ರಾಜ್ಯೋತ್ಸವ ದಿನಾಚರಣೆಯಲ್ಲಿ ಸೋಮಶೇಖರ್ ನಾಯಕ್ Read More »

ಪ್ರವಾಸಿ ಕಾರು ತಂಗುದಾಣ ಉದ್ಘಾಟನೆ

ಪುತ್ತೂರು: ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಸಮೀಪ ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಪ್ರಾಯೋಜಿತ ಪ್ರವಾಸಿ ಕಾರು ತಂಗುದಾಣವನ್ನು ಉದ್ಘಾಟಿಸಲಾಯಿತು. ರೋಟರಿ ಸಹಾಯಕ ಗವರ್ನರ್ ಪುರಂದರ ರೈ ತಂಗುದಾಣವನ್ನು ಉದ್ಘಾಟಿಸಿದರು. ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಅಧ್ಯಕ್ಷ ಡಾ. ರಾಜೇಶ್ ಬೆಜ್ಜಂಗಳ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಜಿಲ್ಲಾ ಯೋಜನೆಯಾದ ರಸ್ತೆ ಸುರಕ್ಷತೆ ಕುರಿತಾದ ಮಾಹಿತಿ ಪತ್ರ ಮತ್ತು ಸ್ಟಿಕ್ಕರನ್ನು ಕೆ ಎಸ್ ಆರ್ ಟಿಸಿ ಸಂಚಾರ ನಿಯಂತ್ರಣ ಅಧಿಕಾರಿ ಅಬ್ಬಾಸ್ ಬಿಡಗಡೆ ಗೊಳಿಸಿದರು.

ಪ್ರವಾಸಿ ಕಾರು ತಂಗುದಾಣ ಉದ್ಘಾಟನೆ Read More »

ಕಾಲೇಜು ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಮಾನ್ಯ ಆತ್ಮಹತ್ಯೆ

ಹಾಸನ: ವಿದ್ಯಾರ್ಥಿನಿಯೋರ್ವಳು ಕಾಲೇಜಿನ ಐದನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನದಲ್ಲಿ ನಡೆದಿದೆ. ಚೆನ್ನರಾಯಪಟ್ಟಣ ತಾಲೂಕಿನ ದಂಡಿಗನಹಳ್ಳಿ ಹೋಬಳಿಯ ಹೊನ್ನಶೆಟ್ಟಿ ಹಳ್ಳಿಯ ಮಾನ್ಯ (19) ಈ ಕೃತ್ಯ ಎಸಗಿದವರು. ಹಾಸನದ ಹೊವಲಯದ ಕಾಲೇಜೊಂದರಲ್ಲಿ ಪ್ರಥಮ ವರ್ಷದ ಎಲೆಕ್ಟ್ರಾನಿಕ್ಸ್ & ಕಮ್ಯೂನಿಕೇಷನ್ ಎಂಜಿನಿಯರಿಂಗ್ ಓದುತ್ತಿದ್ದ ಮಾನ್ಯ ಮೊದಲ ಪರೀಕ್ಷೆ ಬರೆದಿದ್ದು, ಪರೀಕ್ಷೆಯಲ್ಲಿ ನಕಲು ಮಾಡಿದ ಹಿನ್ನಲೆಯಲ್ಲಿ ಕಾಲೇಜು ಪ್ರಾಂಶುಪಾಲರಿಗೆ ಕ್ಷಮಾಪಣೆ ಪತ್ರ ಬರೆದುಕೊಡುವಂತೆ ಉಪನ್ಯಾಸಕರೊಬ್ಬರು ಹೇಳಿದ್ದರು. ಈ ಬೆನ್ನಲ್ಲೇ ಮಾನ್ಯ ಕಾಲೇಜಿನ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ

ಕಾಲೇಜು ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಮಾನ್ಯ ಆತ್ಮಹತ್ಯೆ Read More »

error: Content is protected !!
Scroll to Top