ಸಾಧನೆಗೆ ಕೌಶಲ್ಯದ ಜತೆಗೆ ಶಕ್ತಿ ಮುಖ್ಯ | ಜಿಲ್ಲಾ ಮಟ್ಟದ ಕ್ರೀಡಾಪಟುಗಳಿಗೆ ಸಮವಸ್ತ್ರ ವಿತರಿಸಿ ಶಾಸಕ ಅಶೋಕ್ ಕುಮಾರ್ ರೈ
ಪುತ್ತೂರು: ಯಾವುದೇ ಸಾಧನೆಗೆ ಕೌಶಲ್ಯ, ಟ್ಯಾಲೆಂಟ್ ಜತೆಗೆ ಶಕ್ತಿ ಮುಖ್ಯ. ಈ ನಿಟ್ಟಿನಲ್ಲಿ ನಾಳೆ ನಡೆಯಲಿರುವ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಪುತ್ತೂರಿನ ಕ್ರೀಡಾಪಟುಗಳು ಪುತ್ತೂರಿನ ಕೀರ್ತಿಗೆ ಹಿರಿಮೆ ತರುವಂತಾಗಬೇಕು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಭಾನುವಾರ ಪುತ್ತೂರು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಪಂಚಾಯಿತಿ ವತಿಯಿಂದ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಸಮವಸ್ತ್ರ ವಿತರಿಸಿ ಮಾತನಾಡಿದರು. ಕ್ರೀಡಾಕೂಟ ಸೇರಿದಂತೆ ಇನ್ನಿತರ ಯಾವುದೇ ಕಾರ್ಯಕ್ರಮವಿರಲಿ ಎಲ್ಲರೂ ಒಟ್ಟಾಗಿ ಕೆಲಸ ಮಾಡಿದರೆ ಮಾತ್ರ ಗೌರವ […]










