ನಾರ್ಯ ಪರಿಸರದಲ್ಲಿ ಚಿರತೆ ಓಡಾಟ : ಸ್ಥಳೀಯರಲ್ಲಿ ಭೀತಿ

ಉಜಿರೆ : ಉಜಿರೆ ಸಮೀಪದ ಕನ್ಯಾಡಿ-2ಗ್ರಾಮದ ನಾರ್ಯ ಮೂರು ಮಾರ್ಗ ಎಂಬಲ್ಲಿ ಬುಧವಾರ ರಾತ್ರಿ ಚಿರತೆ ಕಂಡು ಬಂದಿದ್ದು, ಸ್ಥಳೀಯ ಜನತೆ ಭಯಭೀತರಾಗಿದ್ದಾರೆ. ರಾತ್ರಿ ಸಮಯ ಈ ರಸ್ತೆಯಲ್ಲಿ ಪಾಣೇಲಿನ ವ್ಯಕ್ತಿಗೆ ಚಿರತೆ ಕಂಡು ಬಂದಿದೆ ಎಂದು ಹೇಳಲಾಗಿದ್ದು, ಚಿರತೆಯ ಚಿತ್ರ ಸೆರೆಹಿಡಿದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ನಾರ್ಯ ಪರಿಸರದಲ್ಲಿ ಹಲವು ಮನೆಗಳು ಇದ್ದು ಇಲ್ಲಿನ ಮಂದಿ ಚಿರತೆ ಓಡಾಟದಿಂದ ಭೀತರಾಗಿದ್ದಾರೆ.  ಈ ಭಾಗದಲ್ಲಿ ಧರ್ಮಸ್ಥಳ ಮೀಸಲು ಅರಣ್ಯ ಹಾಗೂ ಬೆಳಾಲು ವ್ಯಾಪ್ತಿಯ ದಡಂತಮಲೆ ಅರಣ್ಯ ಪ್ರದೇಶ […]

ನಾರ್ಯ ಪರಿಸರದಲ್ಲಿ ಚಿರತೆ ಓಡಾಟ : ಸ್ಥಳೀಯರಲ್ಲಿ ಭೀತಿ Read More »

ನಾಳೆ: “ಪುಳಿಮುಂಚಿ” ತುಳು ಚಿತ್ರ ಕರಾವಳಿಯಾದ್ಯಂತ ತೆರೆಗೆ

ಪುತ್ತೂರು: ಬಹು ನಿರೀಕ್ಷಿತ ‘ಪುಳಿಮುಂಚಿ’ ತುಳು ಚಿತ್ರ ಅ.27ರಂದು ಪುತ್ತೂರು ಸೇರಿದಂತೆ ಕರಾವಳಿಯಾದ್ಯಂತ ತೆರೆ ಕಾಣಲಿದೆ. ಹೆಚ್.ಪಿ.ಆರ್. ಫೌಂಡೇಶನ್ ಮುಖ್ಯಸ್ಥ ಹರಿಪ್ರಸಾದ್ ರೈ ಮಠಂತಬೆಟ್ಟು ನಿರ್ಮಾಣದ ತ್ರಿಶೂಲ್ ಶೆಟ್ಟಿ ನಿರ್ದೇಶನದ ಪುಳಿಮುಂಚಿ ಚಿತ್ರಕ್ಕೆ ಕಿಶೋರ್ ಕುಮಾರ್ ಶೆಟ್ಟಿ ಸಂಗೀತ ನೀಡಿದ್ದು, ಮಯೂರ್ ಆರ್. ಶೆಟ್ಟಿ ಸಾಹಿತ್ಯ ಮತ್ತು ಛಾಯಾಗ್ರಹಣ ಮಾಡಿದ್ದಾರೆ. ಚಿತ್ರದಲ್ಲಿ ಹಾಸ್ಯದಿಗ್ಗಜರ ದಂಡೇ ಇದ್ದು ತುಳು ಚಿತ್ರಪ್ರೇಮಿಗಳಲ್ಲಿ ಪುಳಿಮುಂಚಿ ಹೊಸ ನಿರೀಕ್ಷೆ ಮೂಡಿಸಿದೆ. ವಿನೀತ್ ಕುಮಾರ್ ನಾಯಕ ನಟನಾಗಿ, ಸಮತಾ ಅಮೀನ್ ನಾಯಕಿಯಾಗಿರುವ ಈ ಚಿತ್ರದಲ್ಲಿ

ನಾಳೆ: “ಪುಳಿಮುಂಚಿ” ತುಳು ಚಿತ್ರ ಕರಾವಳಿಯಾದ್ಯಂತ ತೆರೆಗೆ Read More »

ನಿರ್ಮಾಣ ಹಂತದ ಮನೆಯ ಮೇಲ್ಛಾವಣಿಯಿಂದ ಬಿದ್ದು ಕಾರ್ಮಿಕರೊಬ್ಬರು ಮೃತ್ಯು : ಗುತ್ತಿಗೆದಾರ ಗಂಭೀರ ಗಾಯ

ಅರಿಯಡ್ಕ:ನಿರ್ಮಾಣ ಹಂತದ ಮನೆಯ ಸಿಟೌಟ್‌ನ ಮೇಲ್ಬಾವಣಿ ಕುಸಿದ ಪರಿಣಾಮ ಕಾರ್ಮಿಕರೊಬ್ಬರು ಮೃತಪಟ್ಟು, ಗುತ್ತಿಗೆದಾರ ಗಂಭೀರ ಗಾಯಗೊಂಡಿರುವ ಘಟನೆ ಅರಿಯಡ್ಕ ಗ್ರಾಮದ ಪಾದಲಾಡಿ ಎಂಬಲ್ಲಿ ನಡೆದಿದೆ. ಅರಿಯಡ್ಕ ಗ್ರಾಮದ ಕೌಡಿಚ್ಚಾರ್ ನಿವಾಸಿ ಶೇಖರ್ ಕುಲಾಲ್(45) ಮೃತಪಟ್ಟವರು. ಶೇಖರ್ ಕುಲಾಲ್ ಅರಿಯಡ್ಕ ಗ್ರಾಮದ ಪಾದಲಾಡಿ ಎಂಬಲ್ಲಿ ಕಮಲ ಎಂಬವರ ಮನೆಗೆ ಸೆಂಟ್ರಿಂಗ್ ಕೆಲಸಕ್ಕೆ ತೆರಳಿದ್ದರು. ಮನೆಯ ಸಿಟೌಟ್‌ನ ಮೇಲ್ಟಾವಣಿಯ ಸೆಂಟ್ರಿಂಗ್ ಕೆಲಸ ಮಾಡುತ್ತಿರುವ ಸಂದರ್ಭ ಮೇಲ್ಟಾವಣೆ ಕುಸಿದು ಬಿದ್ದು ಶೇಖರ್ ಕುಲಾಲ್ ಹಾಗೂ ಜೊತೆಗೆ ಕೆಲಸ ಮಾಡಿಕೊಂಡಿದ್ದ ಗುತ್ತಿಗೆದಾರ ಸಂಜೀವ

ನಿರ್ಮಾಣ ಹಂತದ ಮನೆಯ ಮೇಲ್ಛಾವಣಿಯಿಂದ ಬಿದ್ದು ಕಾರ್ಮಿಕರೊಬ್ಬರು ಮೃತ್ಯು : ಗುತ್ತಿಗೆದಾರ ಗಂಭೀರ ಗಾಯ Read More »

ಜ.22: ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ : ಪ್ರಧಾನಿ ಮೋದಿಗೆ ಆಹ್ವಾನ

ನವದೆಹಲಿ: ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮಂದಿರದಲ್ಲಿ ಜ.22 ರಂದು ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಯಾಗಲಿದ್ದು, ಪ್ರತಿಷ್ಠಾಪನೆಯಲ್ಲಿ ಭಾಗವಹಿಸಲು ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಮಂತ್ರಣ ನೀಡಲಾಯಿತು. ಈ ಬಗ್ಗೆ ಸ್ವತಃ ಪ್ರಧಾನಿಗಳು ಟ್ವಿಟ್ ಮಾಡಿದ್ದು, ತಮ್ಮ ಜೀವಮಾನದಲ್ಲಿ ಐತಿಹಾಸಿಕ ಘಟನೆಗೆ ಸಾಕ್ಷಿಯಾಗಲಿರುವುದಕ್ಕೆ ಧನ್ಯನಾಗಿದ್ದೇನೆ ಎಂದು ಹೇಳಿದ್ದಾರೆ. ತಮಗೆ ಆಮಂತ್ರಣ ನೀಡಿದ್ದನ್ನು ಉಲ್ಲೇಖಿಸಿರುವ ಪ್ರಧಾನಿ ನರೇಂದ್ರ ಮೋದಿ, ಜೈ ಸಿಯಾರಾಮ್! ಇಂದು ಅತ್ಯಂತ ಭಾವನಾತ್ಮಕ ದಿನವಾಗಿದೆ ಎಂದು ಹೇಳಿದ್ದಾರೆ. ಪ್ರಧಾನಿಗೆ ಆಮಂತ್ರಣ ನೀಡಿದ ತೀರ್ಥ ಕ್ಷೇತ್ರ

ಜ.22: ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ : ಪ್ರಧಾನಿ ಮೋದಿಗೆ ಆಹ್ವಾನ Read More »

ವಿಶ್ವ ಬಂಟರ ಸಮ್ಮೇಳನದಲ್ಲಿ ಮಲ್ಲಿಕಾ ಜೆ. ರೈ ಪುತ್ತೂರು ಅವರಿಂದ ಕವನ ವಾಚನ

ಪುತ್ತೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಅ.28 ಹಾಗೂ 29 ರಂದು ಉಡುಪಿ ಬಂಟರ ಸಂಘದ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ನಡೆಯಲಿರುವ ವಿಶ್ವ ಬಂಟರ ಸಮ್ಮೇಳನದಲ್ಲಿ ತುಳು, ಕನ್ನಡ ಸಾಹಿತಿ, ಕವಯಿತ್ರಿ ಹಾಗೂ ಅಂಕಣಗಾರರಾಗಿರುವ ಮಲ್ಲಿಕಾ ಜೆ.ರೈ ಪುತ್ತೂರು ತಮ್ಮ ಕವನ ವಾಚನ ಮಾಡಲಿದ್ದಾರೆ. ವಿಶ್ವ ಬಂಟರ ಸಮ್ಮೇಳನದ ಅಂಗವಾಗಿ ಕವಿ ಸಮಯ-ಕಾವ್ಯ ನಮನ – ಚಿತ್ರ ಚಿತ್ತಾರ ಕವಿಗೋಷ್ಠಿ ಹಮ್ಮಿಕೊಳ್ಳಲಾಗಿದ್ದು ತಮ್ಮ ಕವನ ಪ್ರಸ್ತುತ ಪಡಿಸಲಿದ್ದಾರೆ. ಮಲ್ಲಿಕಾ ಜೆ ರೈಯವರು ಪ್ರಸ್ತುತ ಪುತ್ತೂರು

ವಿಶ್ವ ಬಂಟರ ಸಮ್ಮೇಳನದಲ್ಲಿ ಮಲ್ಲಿಕಾ ಜೆ. ರೈ ಪುತ್ತೂರು ಅವರಿಂದ ಕವನ ವಾಚನ Read More »

ಚೆಲ್ಯಡ್ಕ ಮುಳುಗು ಸೇತುವೆ ಅಪ್ರೋಚ್ ಸ್ಲ್ಯಾಬ್ ಕುಸಿತ : ವಾಹನ ಸವಾರರಿಗೆ ಬದಲಿ ವ್ಯವಸ್ಥೆ

ಪುತ್ತೂರು: ತಾಲೂಕಿನ ಮುಳುಗು ಸೇತುವೆಗಳಲ್ಲಿ ಒಂದಾದ ಚೆಲ್ಯಡ್ಕ ಮುಳುಗು ಸೇತುವೆಯ ಅಪ್ರೋಚ್ ಸ್ಲ್ಯಾಬ್ ಕುಸಿದು ಬಿದ್ದಿದ್ದು, ಈ ಹಿನ್ನಲೆಯಲ್ಲಿ ಕಾಮಗಾರಿ ಆರಂಭಿಸಬೇಕಾಗಿರುವುದರಿಂದ ಅ.27 ರಿಂದ ನ.6ರ ವರೆಗೆ ವಾಹನಗಳು ಬದಲಿ ರಸ್ತೆಯಲ್ಲಿ ಸಂಚರಿಸುವಂತೆ ಲೋಕೋಪಯೋಗಿ ಇಲಾಖೆ ಸೂಚಿಸಿದೆ. ಆರ್ಯಾಪು ಗ್ರಾಮದ ಒಳತ್ತಡ್ಕ-ದೇವಸ್ಯದಿಂದ ಬೆಟ್ಟಂಪಾಡಿ-ಪಾಣಾಜೆ ಕಡೆಗೆ ಹೋಗುವ ವಾಹನಗಳು ಈ ಮಾರ್ಗವಾಗಿ ಚಲಿಸುವುದನ್ನು ಸ್ಥಗಿತಗೊಳಿಸಬೇಕಾಗಿದೆ. ಬದಲಿ ರಸ್ತೆಯಾಗಿ ದೇವಸ್ಯ-ಬೈರೋಡಿ-ಕಾಪಿಕಾಡು-ಕೈಕಾರ ಮಾರ್ಗವಾಗಿ ವಾಹನಗಳು ಚಲಿಸುವಂತೆ ಸೂಚನೆ ನೀಡಲಾಗಿದೆ. ಸಾರ್ವಜನಿಕರು ಸಹಕರಿಸಬೇಕೆಂದು ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚೆಲ್ಯಡ್ಕ ಮುಳುಗು ಸೇತುವೆ ಅಪ್ರೋಚ್ ಸ್ಲ್ಯಾಬ್ ಕುಸಿತ : ವಾಹನ ಸವಾರರಿಗೆ ಬದಲಿ ವ್ಯವಸ್ಥೆ Read More »

ಚಂದ್ರಗ್ರಹಣ : ಕುಕ್ಕೆ ಕ್ಷೇತ್ರದಲ್ಲಿ ದರ್ಶನ ಸಮಯದಲ್ಲಿ ಬದಲಾವಣೆ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅ.28ರಂದು ಶನಿವಾರ ಚಂದ್ರಗ್ರಹಣ ಇರುವುದರಿಂದ ಶ್ರೀ ದೇವಳದ ಪ್ರಧಾನ ಅರ್ಚಕರ ನಿರ್ದೇಶನದಂತೆ ಭಕ್ತಾಧಿಗಳಿಗೆ ಶ್ರೀ ದೇವರ ದರ್ಶನದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಅ.28ರಂದು ಶನಿವಾರ ರಾತ್ರಿ ಮಹಾಪೂಜೆ ಸಾಯಂಕಾಲ ಗಂಟೆ 6.30ಕ್ಕೆ ಮುಕ್ತಾಯಗೊಳ್ಳಲಿದೆ. ಆ ಬಳಿಕ ಶ್ರೀ ದೇವರ ದರುಶನಕ್ಕೆ ಅವಕಾಶ ಇರುವುದಿಲ್ಲ. ಅಲ್ಲದೆ ಈ ದಿನ ಸಾಯಂಕಾಲ ಸಂಜೆಯ ಆಶ್ಲೇಷ ಬಲಿ ಸೇವೆ ನೆರವೇರುವುದಿಲ್ಲ. ರಾತ್ರಿ ಪ್ರಸಾದ ಬೋಜನ ಪ್ರಸಾದ ವಿತರಣೆ ಇರುವುದಿಲ್ಲ ಎಂದು ಶ್ರೀ ದೇವಳದ

ಚಂದ್ರಗ್ರಹಣ : ಕುಕ್ಕೆ ಕ್ಷೇತ್ರದಲ್ಲಿ ದರ್ಶನ ಸಮಯದಲ್ಲಿ ಬದಲಾವಣೆ Read More »

ವೇಷ ಧರಿಸಿ ಧನಸಂಗ್ರಹ : ಮಾನವೀಯತೆ ಮೆರೆದ ಯುವಕರು

ಸುಳ್ಯ: ಕಳೆದ ಮೂವತ್ತು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಚಾಂದಿನಿ ಅವರ ಚಿಕಿತ್ಸೆಗಾಗಿ ಸುಳ್ಯದ ಯುವಕರು ಸೇರಿಕೊಂಡು ನವರಾತ್ರಿ ಸಮಯದಲ್ಲಿ ವಿವಿಧ ವೇಷ ಧರಿಸಿ ಪುತ್ತೂರಿನಿಂದ ಸುಳ್ಯದವರೆಗೆ ರಸ್ತೆ ಬದಿ ಧನಸಂಗ್ರಹ ಮಾಡಿ ಹೀಗೊಂದು ಮಾನವೀಯತೆ ಮೆರೆದಿದ್ದಾರೆ. ಕನಕಮಜಲಿನ ಶ್ರೀ ಆತ್ಮಾರಾಮ ಭಜನಾ ಮಂದಿರದಿಂದ ವೇಷ ಧರಿಸಿ ಜೀಪಿನಲ್ಲಿ ಹೊರಟ ಸ್ವಸ್ತಿಕ್ ನರಿಯೂರು, ಸ್ವಪ್ನಿತ್ ನರಿಯೂರು, ನವೀನ್ ಅಡ್ಯಾರು, ತುಷಾರ್ ಕಣಜಾಲು ಹಾಗೂ ಪುನೀತ್ ಸಂಕೇಶ ಎಂಬ ಯುವಕರ ತಂಡ ಚಂಡ ಮುಂಡ, ಋಷಿ, ಹಿಡಿಂಬೆ ಹಾಗೂ ಬೇತಾಳ

ವೇಷ ಧರಿಸಿ ಧನಸಂಗ್ರಹ : ಮಾನವೀಯತೆ ಮೆರೆದ ಯುವಕರು Read More »

ಸಿ ಶ್ರೇಣಿ ದೇವಾಲಯಗಳಿಗೂ ಗೃಹಜ್ಯೋತಿ ಯೋಜನೆ ವಿಸ್ತರಣೆ | ಚಿಂತನೆ ನಡೆಸಿದ ಸರಕಾರ

ಬೆಂಗಳೂರು: ಗೃಹಜ್ಯೋತಿ ಯೋಜನೆಯಡಿ ಇದೀಗ ಸರಕಾರ ಧಾರ್ಮಿಕದತ್ತಿ ಇಲಾಖೆ ವ್ಯಾಪ್ತಿಯ ಸಿ ಶ್ರೇಣಿ ದೇವಸ್ಥಾನಗಳಿಗೂ ಗೃಹಜ್ಯೋತಿ ಯೋಜನೆಯನ್ನು ಕಲ್ಪಿಸಲು ಮುಂದಾಗಿದೆ. ಈಗಾಗಲೇ ಮನೆಗಳಿಗೆ ಉಚಿತ ವಿದ್ಯುತ್ ನೀಡುತ್ತಿದ್ದು, ಗೃಹಜ್ಯೋತಿ ಯೋಜನೆಯಡಿ ಮನೆಗಳಿಗೆ ಮಾಸಿಕ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ಸೌಲಭ್ಯ ನೀಡುತ್ತಿರುವಂತೆ ಸಿ ದರ್ಜೆ ದೇವಸ್ಥಾನಗಳಿಗೂ ಉಚಿತ ವಿದ್ಯುತ್ ಪೂರೈಕೆ ಮಾಡಲು ಸರಕಾರ ಚಿಂತನೆ ನಡೆಸಿದೆ. ಶೀಘ್ರವೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಅನುಮೋದನೆ ಪಡೆಯಲು ಯೋಜನೆ ರೂಪಿಸಲಾಗಿದೆ. ಒಂದರಿಂದ ಐದು ಲಕ್ಷ ರೂಪಾಯಿ ಆದಾಯ ಹೊಂದಿದ

ಸಿ ಶ್ರೇಣಿ ದೇವಾಲಯಗಳಿಗೂ ಗೃಹಜ್ಯೋತಿ ಯೋಜನೆ ವಿಸ್ತರಣೆ | ಚಿಂತನೆ ನಡೆಸಿದ ಸರಕಾರ Read More »

ತಮಿಳುನಾಡು ಮೂಲದ ಸೈಟ್ ಇಂಜಿನಿಯರ್ ಸಂಶಯಾಸ್ಪದ ರೀತಿಯಲ್ಲಿ ಮೃತ್ಯು

ಉಪ್ಪಿನಂಗಡಿ: ಕೆಎನ್‍ಆರ್ ಸಂಸ್ಥೆಯಲ್ಲಿ ಸೈಟ್ ಇಂಜಿನಿಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ತಮಿಳುನಾಡು ಮೂಲದ ವ್ಯಕ್ತಿಯೊಬ್ಬರು ಸಂಶಯಾಸ್ಪದವಾಗಿ ಮೃತಪಟ್ಟ ಘಟನೆ ಪರ್ನೆಯಲ್ಲಿ ನಡೆದಿದೆ. ತಮಿಳುನಾಡು ಮೂಲದ ಅನೂಫ್ (47) ಮೃತಪಟ್ಟವರು. ಅನೂಫ್ ಅವರು ರಾಷ್ಟ್ರೀಯ ಹೆದ್ದಾರಿ ವಿಸ್ತರಣಾ ಕಾಮಗಾರಿ ಗುತ್ತಿಗೆ ವಹಿಸಿಕೊಂಡಿರುವ ಕೆಎನ್‍ಆರ್ ಸಂಸ್ಥೆಯಲ್ಲಿ ಸೈಟ್ ಇಂಜಿನಿಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದು, ಅ.21 ರಂದು ಉಪ್ಪಿನಂಗಡಿ ಪ್ರದೇಶದಲ್ಲಿ ಕೆಲಸ ನಿರ್ವಹಿಸಲು ವರ್ಗಾವಣೆಯಾಗಿ ಬಂದಿದ್ದರು. ಪೆರ್ನೆಯ ಮುಸ್ತಾಫ ಎಂಬವರ ಮಾಲಕತ್ವದ ಮನೆಯಲ್ಲಿ ವಾಸ್ತವ್ಯ ಹೂಡಿದ್ದರು. ಅ.22 ರಂದು ಸಹೋದ್ಯೋಗಿಯೊಬ್ಬರು ಮನೆಗೆ

ತಮಿಳುನಾಡು ಮೂಲದ ಸೈಟ್ ಇಂಜಿನಿಯರ್ ಸಂಶಯಾಸ್ಪದ ರೀತಿಯಲ್ಲಿ ಮೃತ್ಯು Read More »

error: Content is protected !!
Scroll to Top