‘ಬೆಂಗಳೂರು ಕಂಬಳ’ಕ್ಕೆ ಸಿಕ್ಕಿಲ್ಲ ಅನುಮತಿ! | ಐಎಎಸ್ ಅಧಿಕಾರಿ ತುಷಾರ್ ಗಿರಿನಾಥ್ ಹೇಳಿದ್ದೇನು?

ಬೆಂಗಳೂರು: ಬಹುನಿರೀಕ್ಷಿತ ಬೆಂಗಳೂರು ಕಂಬಳಕ್ಕೆ ಇನ್ನೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅನುಮತಿ ಸಿಕ್ಕಿಲ್ಲ ಎಂದು ವರದಿಯಾಗಿದೆ. ನವಂಬರ್ ಕೊನೆ ವಾರದಲ್ಲಿ ನಡೆಯಲುದ್ದೇಶಿಸಿರುವ ಬೆಂಗಳೂರು ಕಂಬಳಕ್ಕೆ ಸಿದ್ಧತೆಗಳು ಭರದಿಂದ ಸಾಗುತ್ತಿದೆ. ಕರೆ ಮುಹೂರ್ತವೂ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕರೆ ಮುಹೂರ್ತಕ್ಕೆ ಆಗಮಿಸಿ, 1 ಕೋಟಿ ರೂ. ಅನುದಾನ ನೀಡುವ ಘೋಷಣೆ ಮಾಡಿದ್ದರು. ಇದರ ನಡುವೆ ಇದೀಗ ಅನುಮತಿ ವಿಚಾರ ವರದಿಯಾಗಿದೆ. ಬೆಂಗಳೂರಿನಲ್ಲಿ ಕಂಬಳ ನಡೆಸುವುದಾದರೆ ಬಿಬಿಎಂಪಿಯ ಅನುಮತಿ ಕಡ್ಡಾಯ. ಕಾನೂನು […]

‘ಬೆಂಗಳೂರು ಕಂಬಳ’ಕ್ಕೆ ಸಿಕ್ಕಿಲ್ಲ ಅನುಮತಿ! | ಐಎಎಸ್ ಅಧಿಕಾರಿ ತುಷಾರ್ ಗಿರಿನಾಥ್ ಹೇಳಿದ್ದೇನು? Read More »

ಹೊತ್ತಿ ಉರಿದ ಅಕ್ಕಿ ಸಾಗಾಟದ ಲಾರಿ: ಲಕ್ಷಾಂತರ ರೂ. ನಷ್ಟ

ಉಪ್ಪಿನಂಗಡಿ : ಅಕ್ಕಿ ಸಾಗಾಟ ಮಾಡುತ್ತಿದ್ದ ಲಾರಿಯೊಂದು ಬೆಂಕಿಗಾಹುತಿಯಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್‍ನಲ್ಲಿ ನಡೆದಿದೆ. ಹಾಸನ ಕಡೆಯಿಂದ ಮಂಗಳೂರಿಗೆ ಅಕ್ಕಿಸಾಗಾಟ ಮಾಡುತ್ತಿದ್ದ ಲಾರಿಯಲ್ಲಿ ಶಿರಾಡಿ ಘಾಟ್ ನ ಡಬಲ್ ಟರ್ನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಲಕ್ಷಾಂತರ ರೂ. ನಷ್ಟ ಸಂಭವಿಸಿದೆ ಎಂದು ತಿಳಿದು ಬಂದಿದೆ. ಲಾರಿಗೆ ಬೆಂಕಿ ತಗುಲಿದ ತಕ್ಷಣ ಲಾರಿ ಚಾಲಕ ಹಾಗೂ ಕ್ಲೀನರ್ ಲಾರಿಯನ್ನು ನಿಲ್ಲಿಸಿ ಕೆಳಗಿಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲಾರಿ ಹಾಗೂ ಅದರಲ್ಲಿದ್ದ ಅಕ್ಕಿ ಮೂಟೆಗಳು ಸಂಪೂರ್ಣ

ಹೊತ್ತಿ ಉರಿದ ಅಕ್ಕಿ ಸಾಗಾಟದ ಲಾರಿ: ಲಕ್ಷಾಂತರ ರೂ. ನಷ್ಟ Read More »

ಕರಾಮ ಡೇ ಟು ಡೇ ಶಾಪಿಂಗ್‍ ಸೆಂಟರ್ ನಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ | ಇಬ್ಬರು ಮೃತ್ಯು

ದುಬೈ : ಕೊಲ್ಲಿ ರಾಷ್ಟ್ರ ದುಬೈ ಅಲ್ ಕರಾಮದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಭಾರತೀಯರು ಸಾವನ್ನಪ್ಪಿದ್ದು, 8 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಕರಾಮ ‘ಡೇ ಟು ಡೇ’ ಶಾಪಿಂಗ್ ಸೆಂಟರ್ ಬಳಿಯ ಬಿನ್ಹೈದರ್ ಬಿಲ್ಡಿಂಗ್‌ನಲ್ಲಿ ಈ ದುರ್ಘಟನೆ ಸಂಭವಿಸಿದೆ. ಕೇರಳ ಮಲಪ್ಪುರಂ ಮೂಲದ ಯಾಕೂಬ್ ಅಬ್ದುಲ್ಲಾ ಮತ್ತು ತಲಶ್ಶೇರಿ ಟೆಂಪಲ್ ಗೇಟ್‌ನಲ್ಲಿರುವ ನಿಟ್ಟೂರು ಮನೆಯ ನಿದಿನ್ ದಾಸ್ ಸಾವನ್ನಪ್ಪಿದವರು. ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ 8 ಜನರ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಗುರುವಾರ ಸಂಜೆ ಈ

ಕರಾಮ ಡೇ ಟು ಡೇ ಶಾಪಿಂಗ್‍ ಸೆಂಟರ್ ನಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ | ಇಬ್ಬರು ಮೃತ್ಯು Read More »

ಕಾಣಿಯೂರು ಮಠದ ಗದ್ದೆಯಲ್ಲಿ ‘ಕೆಸರ್’ಡ್ ಒಂಜಿ ದಿನ’ ಕ್ರೀಡಾಕೂಟ

ಬೆಳಂದೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳಂದೂರು ಇಲ್ಲಿನ ಆಂತರಿಕ ಗುಣಮಟ್ಟ ಭರವಸಾ ಕೋಶ ಹಾಗೂ ಎನ್ಎಸ್ಎಸ್ ಸಹಯೋಗದಲ್ಲಿ ವಿದ್ಯಾರ್ಥಿಗಳಿಗಾಗಿ ‘ಕೆಸರ್’ಡ್ ಒಂಜಿ ದಿನ’ ವಿಶಿಷ್ಟ ಕ್ರೀಡಾಕೂಟವನ್ನು ಕಾಣಿಯೂರು ಮಠದ ಗದ್ದೆಯಲ್ಲಿ ಏರ್ಪಡಿಸಲಾಯಿತು. ಜಿಲ್ಲಾ ಯುವಜನ‌ ಒಕ್ಕೂಟದ ನಿರ್ದೇಶಕ ರಾಕೇಶ್ ರೈ ಕೆಡಂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಆಧುನಿಕ ಕಾಲಘಟ್ಟದಲ್ಲಿ ಕೃಷಿ, ಕೃಷಿಕರ ಮಹತ್ವ ಅರಿಯುವ ಅಗತ್ಯವಿದೆ. ಇರುವ ಒಂದು ಭೂಮಿ ಹಾಗೂ ನೈಸರ್ಗಿಕ ಸಂಪನ್ಮೂಲಗಳನ್ನು ರಕ್ಷಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ ಎಂದರು. ಕಾಲೇಜಿನ ಪ್ರಾಂಶುಪಾಲ ಡಾ.ಶಂಕರ ಭಟ್

ಕಾಣಿಯೂರು ಮಠದ ಗದ್ದೆಯಲ್ಲಿ ‘ಕೆಸರ್’ಡ್ ಒಂಜಿ ದಿನ’ ಕ್ರೀಡಾಕೂಟ Read More »

ಹೈಟೆನ್ಷನ್ ವಿದ್ಯುತ್ ಕಂಬದಲ್ಲಿ ಹಸಿರು ಬಳ್ಳಿಗಳ ಟೆನ್ಷನ್!! | ಅವಘಡ ಸಂಭವಿಸುವ ಮೊದಲೇ ಎಚ್ಚೆತ್ತುಕೊಳ್ಳಬೇಕಿದೆ ಆಡಳಿತ

ಬೆಳ್ತಂಗಡಿ : ತಾಲೂಕಿನ ಗುರುವಾಯನಕೆರೆ ಜಂಕ್ಷನ್’ನಿಂದ ಉಪ್ಪಿನಂಗಡಿಯ ಕಡೆಗೆ ಕವಲೊಡೆಯುವ ರಸ್ತೆ ಮಾರ್ಗದಲ್ಲಿ ಸುಮಾರು 1.8 ಕಿ. ಮೀ. ದೂರ ಕ್ರಮಿಸಿದಾಗ ಸಿಗುವ ಪುಟ್ಟ ಊರು ಪಣೆಜಾಲು. ಅಲ್ಲಿನ ಮುಖ್ಯ ರಸ್ತೆಯ ಪಕ್ಕದಲ್ಲಿ ಹಾದು ಹೋಗುತ್ತಿರುವ ಹೈ ವೋಲ್ಟೇಜ್ ವಿದ್ಯುತ್ ಪ್ರಸರಣ ಮಾರ್ಗದ ಐದಾರು ಭಾರೀ ಗಾತ್ರದ ತಂತಿಗಳನ್ನು ಹೊತ್ತು ನಿಂತಿದೆ ಒಂದು ಅಲಕ್ಷಿತ ಬಡಪಾಯಿ ವಿದ್ಯುತ್ ಕಂಬ. ಹಸಿರುವಾದ ಹೆಚ್ಚುತ್ತಿರುವ ಈ ದಿನಮಾನಗಳಿಗೆ ಪೂರಕವೋ ಎಂಬಂತೆ ಮೈತುಂಬಾ ಹಸಿರು ಬಳ್ಳಿಗಳಿಂದ ಆಚ್ಛಾದಿತವಾಗಿ ನಿಂತಿದೆ ಒಂದು ಸೊರಗಿದ

ಹೈಟೆನ್ಷನ್ ವಿದ್ಯುತ್ ಕಂಬದಲ್ಲಿ ಹಸಿರು ಬಳ್ಳಿಗಳ ಟೆನ್ಷನ್!! | ಅವಘಡ ಸಂಭವಿಸುವ ಮೊದಲೇ ಎಚ್ಚೆತ್ತುಕೊಳ್ಳಬೇಕಿದೆ ಆಡಳಿತ Read More »

ಸುಬ್ರಹ್ಮಣ್ಯದಲ್ಲಿ ‘ಪೂರ್ವಿ ಸಾಮಾನ್ಯ ಸೇವಾ ಕೇಂದ್ರ’ ಶುಭಾರಂಭ

ಸುಬ್ರಹ್ಮಣ್ಯ: ಸರಕಾರಿ ಸೇವೆ ಸಹಿತಿ ಹಲವು ಸೇವೆಗಳನ್ನು ಕ್ಲಪ್ತ ಸಮಯದಲ್ಲಿ ಒದಗಿಸಲಿರುವ ‘ಪೂರ್ವಿ ಸಾಮಾನ್ಯ ಸೇವಾ ಕೇಂದ್ರ’ ಸುಬ್ರಹ್ಮಣ್ಯದ ಕಾಶಿಕಟ್ಟೆ ಬಳಿಯ ಗ್ರಾಮ ಪಂಚಾಯಿತಿ ಕಟ್ಟಡದಲ್ಲಿ ಶುಕ್ರವಾರ ಶುಭಾರಂಭಗೊಂಡಿತು. ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಜಾತ ಕಲ್ಲಾಜೆ ಸೇವಾ ಕೇಂದ್ರವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಎಚ್.ಎಲ್. ವೆಂಕಟೇಶ್ ಮಾತನಾಡಿ, ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿ ಹಾಗೂ ಸಂಜೀವಿನಿ ಒಕ್ಕೂಟದ ಒಡಂಬಡಿಕೆಯಿಂದ ಸೇವೆ ಸಲ್ಲಿಸಲಿರುವ ಕೇಂದ್ರ ಸರಕಾರದ ಮಹತ್ವದ ಯೋಜನೆ ಇದಾಗಿದೆ. ಮಹಿಳೆಯರು

ಸುಬ್ರಹ್ಮಣ್ಯದಲ್ಲಿ ‘ಪೂರ್ವಿ ಸಾಮಾನ್ಯ ಸೇವಾ ಕೇಂದ್ರ’ ಶುಭಾರಂಭ Read More »

ಯೋಗಾಸನದಲ್ಲಿ ಶ್ರೀಮಾ ಕೆ.ಎಚ್. ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆ

ಪುತ್ತೂರು: ಚಿತ್ರದುರ್ಗದ ಹಿರೆಕೇರಿ ವಿದ್ಯಾಸಂಸ್ಥೆಯಲ್ಲಿ ಶುಕ್ರವಾರ ನಡೆದ ರಾಜ್ಯಮಟ್ಟದ ಯೋಗ ಸ್ಪರ್ಧೆಯಲ್ಲಿ ಶ್ರೀಮಾ ಕೆ.ಎಚ್. ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟದ ಯೋಗ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಕಾಣಿಯೂರು ಪ್ರಗತಿ ಆಂಗ್ಲ ಮಾಧ್ಯಮ ಶಾಲೆಯ 7ನೇ ವಿದ್ಯಾರ್ಥಿನಿಯಾಗಿರುವ ಶ್ರೀಮಾ ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ಹುದೇರಿಮನೆ ಕುಶಾಲಪ್ಪ ಗೌಡ ಹಾಗೂ ಸುಜಿತಾ ದಂಪತಿ ಪುತ್ರಿ. ಅವರಿಗೆ ಶಿಕ್ಷಕರಾದ ಶಶಿಕಲಾ ಹಾಗೂ ಸಂತೋಷ್ ಮುಂಡಕಜೆ ತರಬೇತಿ ನೀಡಿದ್ದು, ಮಧ್ಯಪ್ರದೇಶದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಯೋಗಾಸನದಲ್ಲಿ ಶ್ರೀಮಾ ಕೆ.ಎಚ್. ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆ Read More »

ಗಾಝಾದಲ್ಲಿ ಆಸ್ಪತ್ರೆ ಮೇಲೆ ಇಸ್ರೇಲ್ ದಾಳಿ | ಭಾರತ ಮೂಲದ ಉಡುಪು ತಯಾರಿಕಾ ಕಂಪೆನಿ ವ್ಯಾಪಾರ ಕಡಿದುಕೊಳ್ಳಲು ನಿರ್ಧಾರ

ಹೊಸದಿಲ್ಲಿ: ಗಾಝಾದಲ್ಲಿಯ ಆಸ್ಪತ್ರೆಯ ಮೇಲೆ ಬಾಂಬ್‌ ದಾಳಿಯನ್ನು ಪ್ರತಿಭಟಿಸಿ ಇಸ್ರೇಲಿ ಪೋಲಿಸ್ – ಸಮವಸ್ತ್ರಗಳನ್ನು ಪೂರೈಸುವ ಭಾರತದ ಉಡುಪು ತಯಾರಿಕೆ ಕಂಪನಿಯೊಂದು ಅದರೊಂದಿಗೆ ವ್ಯಾಪಾರ ಕಡಿದುಕೊಳ್ಳಲು ನಿರ್ಧರಿಸಿದೆ. ಕೇರಳದ ಕಣ್ಣೂರಿನಲ್ಲಿರುವ ಮರಿಯನ್ ಅಪರೆಲ್ ಪ್ರೈ.ಲಿ. 2015ರಿಂದಲೂ ಇಸ್ರೇಲಿ ಪೋಲಿಸ್‌ ಪಡೆಗಾಗಿ ವಾರ್ಷಿಕ ಒಂದು ಲಕ್ಷ ಸಮವಸ್ತ್ರಗಳನ್ನು ತಯಾರಿಸುತ್ತಿತ್ತು. ಪ್ರಸ್ತುತ ನಡೆಯುತ್ತಿರುವ ಯುದ್ಧದ ಸಂದರ್ಭದಲ್ಲೂ ಸಮವಸ್ತ್ರ ಒದಗಿಸುತ್ತಿತ್ತು. ಇಸ್ರೇಲ್‌ನಿಂದ ಬಲವಂತದಿಂದ ಸ್ಥಳಾಂತರಗೊಳಿಸಲ್ಪಟ್ಟ ಸಾವಿರಾರು ಜನರಿಗೆ ಆಶ್ರಯವನ್ನು ಒದಗಿಸಿದ್ದ ಗಾಝಾ ನಗರದ ಹೃದಯಭಾಗದಲ್ಲಿರುವ ಅಲ್ ಅಹ್ ಅರಬ್ ಹಾಸ್ಪಿಟಲ್ ಮೇಲೆ

ಗಾಝಾದಲ್ಲಿ ಆಸ್ಪತ್ರೆ ಮೇಲೆ ಇಸ್ರೇಲ್ ದಾಳಿ | ಭಾರತ ಮೂಲದ ಉಡುಪು ತಯಾರಿಕಾ ಕಂಪೆನಿ ವ್ಯಾಪಾರ ಕಡಿದುಕೊಳ್ಳಲು ನಿರ್ಧಾರ Read More »

ಕಣ್ಣೂರಿನಲ್ಲಿ ರೈಲಿನಿಂದ ಬಿದ್ದು ಕಡಬದ ಯುವಕ ಸುರೇಶ್ ಮೃತ್ಯು

ಕಡಬ: ಕಡಬ ಮೂಲಕ ಯುವಕನೋರ್ವ ಕಣ್ಣೂರಿನಲ್ಲಿ ರೈಲಿನಿಂದ ಬಿದ್ದು ಮೃತಪಟ್ಟ ಘಟನೆ ಇಂದು ಸಂಭವಿಸಿದೆ. ಕಡಬ ತಾಲೂಕಿನ ಮರ್ದಾಳ ಬಂಟ್ರ ಗ್ರಾಮದ ನೀರಾಜೆ ನಿವಾಸಿ ಸುರೇಶ್ (34) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಸುರೇಶ್ ಕೇರಳದಲ್ಲಿ ಟಿಂಬರ್ ಕೆಲಸ ಮಾಡುತ್ತಿದ್ದು, ಗುರುವಾರ ರಾತ್ರಿ ರೈಲಿನಲ್ಲಿ ಊರಿಗೆ ಬರುತ್ತಿದ್ದರು. ಬರುವ ಮೊದಲು ತನ್ನ ಮನೆಯವರಿಗೆ ಕರೆ ಮಾಡಿ ತಿಳಿಸಿದ್ದರು. ಇಂದು ಮುಂಜಾನೆ ಮನೆಯವರು ಸುರೇಶ್ ಅವರ ಮೊಬೈಲ್‍ ಗೆ ಕರೆ ಮಾಡಿದಾಗ ಆಸ್ಪತ್ರೆಯ ಸಿಬ್ಬಂದಿಯೊಬ್ಬರು ಮೃತಪಟ್ಟಿರುವ ವಿಚಾರ ತಿಳಿಸಿದ್ದಾರೆ.

ಕಣ್ಣೂರಿನಲ್ಲಿ ರೈಲಿನಿಂದ ಬಿದ್ದು ಕಡಬದ ಯುವಕ ಸುರೇಶ್ ಮೃತ್ಯು Read More »

ಇಸ್ರೇಲ್ ಪರ ಪೋಸ್ಟ್ : ಮಂಗಳೂರಿನ ವೈದ್ಯರೊಬ್ಬರು ಬೆಹ್ರೈನ್ ನಲ್ಲಿ ಕೆಲಸದಿಂದ ವಜಾ, ಬಂಧನ

ಮಂಗಳೂರು : ಇಸ್ರೇಲ್ ಪರ ಪೋಸ್ಟ್ ಹಾಕಿರುವ ಕಾರಣಕ್ಕೆ ಭಾರತದ ವೈದ್ಯರೊಬ್ಬರನ್ನು ಕೆಲಸದಿಂದ ವಜಾ ಮಾಡಿದ್ದಲ್ಲದೆ ಬೆಹ್ರೈನ್  ಪೊಲೀಸರು ಬಂಧಿಸಿದ್ದಾರೆ. ಬೆಣೈನಲ್ಲಿ ಹತ್ತು ವರ್ಷಗಳಿಂದ ವೈದ್ಯರಾಗಿರುವ, ಮಂಗಳೂರು ಮೂಲದ ವೈದ್ಯ ಡಾ.ಸುನಿಲ್ ರಾವ್ ಬಂಧಿತ ವೈದ್ಯರಾಗಿದ್ದಾರೆ. ಇಸ್ರೇಲ್ ದೇಶದ ಪರವಾಗಿ ಡಾ.ಸುನಿಲ್ ರಾವ್ ಹಾಕಿದ್ದ ಟ್ವಿಟರ್ ಪೋಸ್ಟ್ ಜಾಲತಾಣದಲ್ಲಿ ವೈರಲ್ ಆಗಿತ್ತು. ಕೆಲವರು ಈ ಪೋಸ್ಟ್ ನ್ನು ಬೆಹ್ರೈನ್ ಆಡಳಿತಕ್ಕೆ ಟ್ಯಾಗ್ ಮಾಡಿ, ಕ್ರಮಕ್ಕೆ ಆಗ್ರಹ ಮಾಡಿದ್ದರು. ಪ್ಯಾಲೆಸ್ತೀನ್ ವಿರೋಧಿಸಿ ಪೋಸ್ಟ್ ಹಾಕಿದ್ದಾರೆಂದು ಆಡಳಿತದ ಗಮನಕ್ಕೆ ತಂದಿದ್ದರು.

ಇಸ್ರೇಲ್ ಪರ ಪೋಸ್ಟ್ : ಮಂಗಳೂರಿನ ವೈದ್ಯರೊಬ್ಬರು ಬೆಹ್ರೈನ್ ನಲ್ಲಿ ಕೆಲಸದಿಂದ ವಜಾ, ಬಂಧನ Read More »

error: Content is protected !!
Scroll to Top