ಪುತ್ತೂರಿನಲ್ಲಿ ವೈಭವದ ಶಾರದೋತ್ಸವ: ಶ್ರೀ ಶಾರದಾ ಮಾತೆಯ ವಿಗ್ರಹ ಪ್ರತಿಷ್ಠಾಪನೆ

ಪುತ್ತೂರು: ಆರು ದಿನಗಳಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾದಲ್ಲಿರುವ ಶ್ರೀ ಶಾರದಾ ಭಜನಾ ಮಂದಿರದಲ್ಲಿ ನಡೆಯುತ್ತಿರುವ ಪುತ್ತೂರು ಶಾರದೋತ್ಸವದ ಅಂಗವಾಗಿ ಶ್ರೀ ಶಾರದಾ ಮಾತೆಯ ವಿಗ್ರಹದ ಮೆರವಣಿಗೆಯೊಂದಿಗೆ ಪ್ರತಿಷ್ಠಾಪನೆ ಶುಕ್ರವಾರ ನಡೆಯಿತು. ವಿವಿಧ ವೈದಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಶಾರದೋತ್ಸವ ವಿಜೃಂಭಣೆಯಿಂದ ಜರಗುತ್ತಿದ್ದು, ಶುಕ್ರವಾರ ಶ್ರೀ ಶಾರದಾ ಮಾತೆಯ ವಿಗ್ರಹವನ್ನು ಮೆರವಣಿಗೆ ಮೂಲಕ ಕರೆತಂದು ಪ್ರತಿಷ್ಠಾಪಿಸಲಾಯಿತು. ಮಾಜಿ ಶಾಸಕ ಸಂಜೀವ ಮಠಂದೂರು ಪ್ರತಿಷ್ಠಾಪನೆ ಬಳಿಕ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಉತ್ಸವ ಸಮಿತಿ ಅಧ್ಯಕ್ಷ ರಾಜೇಶ್‍ ಬನ್ನೂರು, […]

ಪುತ್ತೂರಿನಲ್ಲಿ ವೈಭವದ ಶಾರದೋತ್ಸವ: ಶ್ರೀ ಶಾರದಾ ಮಾತೆಯ ವಿಗ್ರಹ ಪ್ರತಿಷ್ಠಾಪನೆ Read More »

ಬೈಕ್ ಚಕ್ರಕ್ಕೆ ಸಿಲುಕಿದ ಸೀರೆ:  ಮಹಿಳೆಗೆ ಗಂಭೀರ ಗಾಯ

ಸುಳ್ಯ: ಬೈಕಿನಲ್ಲಿ ತೆರಳುತ್ತಿದ್ದಾಗ ಬೈಕ್ ಚಕ್ರಕ್ಕೆ ಮಹಿಳೆಯೊಬ್ಬರ ಸೀರೆ ಸೆರಗು ಸುತ್ತಿಕೊಂಡ ಪರಿಣಾಮ ಬೈಕ್‍ನಿಂದ ಬಿದ್ದು ಗಂಭೀರ ಗಾಯಗೊಂಡ ಘಟನೆ ಜಾಲ್ಸೂರು ಗ್ರಾಮದ ಸೋಣಂಗೇರಿಯಲ್ಲಿ ಇಂದು ನಡೆದಿದೆ. ಎಲಿಮಲೆ ನಿವಾಸಿ ಶಾಂಭವಿ ಘಟನೆಯಿಂದ ಗಂಭೀರ ಗಾಯಗೊಂಡವರು ಬೈಕ್‍ನಲ್ಲಿ ಹಿಂಬದಿ ಕುಳಿತು ಸುಳ್ಯಕ್ಕೆ ಬರುತ್ತಿದ್ದ ಸಂದರ್ಭ ಅವರ ಸೀರೆ ಬೈಕ್‍ ಚಕ್ರಕ್ಕೆ ಸುತ್ತಿಕೊಂಡಿದೆ. ಬೈಕ್‍ನಿಂದ ಬಿದ್ದ ಅವರನ್ನು ಸ್ಥಳೀಯರು ಸುಳ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬಂದಿದೆ.

ಬೈಕ್ ಚಕ್ರಕ್ಕೆ ಸಿಲುಕಿದ ಸೀರೆ:  ಮಹಿಳೆಗೆ ಗಂಭೀರ ಗಾಯ Read More »

ಕತ್ತರಿಸಿದ ದನದ ಕಿವಿ ಪತ್ತೆ

ವಿಟ್ಲ: ದನವೊಂದರ ಕಿವಿ ಕತ್ತರಿಸಿ ಎಸೆದು ಹೋದ ಘಟನೆ ಕೆಲಿಂಜ ಕೊಟ್ಟಾರಿಕಟ್ಟೆ ಬಸ್ ನಿಲ್ದಾಣದ ಸಮೀಪ ಬೆಳಕಿಗೆ ಬಂದಿದೆ. ವೀರಕಂಭ ಗ್ರಾಮದ ಕೊಟ್ಟಾರಿಕಟ್ಟೆ ಬಸ್ ನಿಲ್ದಾಣದಲ್ಲಿ ಇಂದು ಮುಂಜಾನೆ ಕತ್ತರಿಸಿದ ದನದ ಕಿವಿ ಪತ್ತೆಯಾಗಿದೆ. ಸ್ಥಳೀಯರು ವಿಟ್ಲ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳದಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರು ಜಮಾಯಿಸಿ ಕೃತ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಕತ್ತರಿಸಿದ ದನದ ಕಿವಿ ಪತ್ತೆ Read More »

ನೇಣು ಬಿಗಿದು ಪುಣಚದ ಶ್ರೀಕೃಷ್ಣ ಆತ್ಮಹತ್ಯೆ

ವಿಟ್ಲ: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದ ಪುಣಚದಲ್ಲಿ ನಡೆದಿದೆ. ಪುಣಚ ಚೆಕ್ಕುತ್ತಿ ನಿವಾಸಿ ಶ್ರೀಕೃಷ್ಣ (26) ಆತ್ಮಹತ್ಯೆ ಮಾಡಿಕೊಂಡವರು ಸೆಂಟ್ರಿಂಗ್ ಕೆಲಸ ಮಾಡುತ್ತಿರುವ ಶ್ರೀಕೃಷ್ಣ ಅವರ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೃತರು ತಾಯಿ, ಸಹೋದರ, ಸಹೋದರಿಯರನ್ನು ಅಗಲಿದ್ದಾರೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ನೇಣು ಬಿಗಿದು ಪುಣಚದ ಶ್ರೀಕೃಷ್ಣ ಆತ್ಮಹತ್ಯೆ Read More »

ಪಡುಕುತ್ಯಾರಿನ ಆನೆಗುಂದಿ ಮಹಾಸಂಸ್ಥಾನದಲ್ಲಿ ಆರ್ಟಿಸಾನ್ ಕಾರ್ಡ್ ಗಾಗಿ ಪ್ರಾತ್ಯಕ್ಷಿಕೆ ಪರೀಕ್ಷೆ

ಪಡುಕುತ್ಯಾರು: ಕರ ಕುಶಲ ಕಲೆ ಅಭಿವೃದ್ಧಿ ಇಲಾಖೆಯಿಂದ ಕೇಂದ್ರ ಸರಕಾರದ ಸವಲತ್ತುಗಳನ್ನು ಪಡೆಯಲು ಆರ್ಟಿಸಾನ್ ಕಾರ್ಡ್ ಅತೀ ಅಗತ್ಯವಾಗಿದ್ದು, ಕುಶಲಕರ್ಮಿಗಳ ಹೆಸರಿನಲ್ಲಿ ಹಲವಾರು ಮಂದಿ ಅರ್ಜಿ ಸಲ್ಲಿಸುತ್ತಿದ್ದಾರೆ. ಅವುಗಳ ವಸ್ತುನಿಷ್ಠತೆ, ನಿಖರತೆ ಪರಿಶೀಲಿಸಲು ಇತ್ತೀಚಿನ ದಿನಗಳಿಂದ ಪ್ರಾತ್ಯಕ್ಷಿಕ ಪರೀಕ್ಷೆಗಳನ್ನು ಇಲಾಖೆ ಕೈಗೊಳ್ಳುತ್ತಿದೆ ಎಂದು ಮಂಗಳೂರು ವಿಭಾಗದ ಹ್ಯಾಂಡಿಕ್ರಾಫ್ಟ್ ಸರ್ವೀಸ್ ಸೆಂಟರ್ ಸಹಾಯಕ ನಿರ್ದೇಶಕಿ ವೀಣಾ ಹೇಳಿದರು.ಅವರು ಪಡುಕುತ್ಯಾರಿನ ಶ್ರೀಮತ್ ಜಗದ್ಗುರು ಆನೆಗುಂದಿ ಮಹಾ ಸಂಸ್ಥಾನ ಸರಸ್ವತಿ ಸತ್ಸಂಗ ಮಂದಿರದಲ್ಲಿ ಆರ್ಟಿಸಾನ್ ಕಾರ್ಡ್ ಗಾಗಿ ನಡೆದ ವೃತ್ತಿ ಕೌಶಲ್ಯ

ಪಡುಕುತ್ಯಾರಿನ ಆನೆಗುಂದಿ ಮಹಾಸಂಸ್ಥಾನದಲ್ಲಿ ಆರ್ಟಿಸಾನ್ ಕಾರ್ಡ್ ಗಾಗಿ ಪ್ರಾತ್ಯಕ್ಷಿಕೆ ಪರೀಕ್ಷೆ Read More »

ನಿವೃತ್ತ ಕೆಎಸ್‍ ಆರ್ ಟಿ ಸಿ ಉದ್ಯೋಗಿ ಕೆ.ಸಿ.ಜನಾರ್ದನ್ ನಂಬಿಯಾರ್ ನಿಧನ

ಪುತ್ತೂರು :- ಬ್ಲಾಕ್ ಕಾಂಗ್ರೆಸ್ ಹಿರಿಯ ಸದಸ್ಯ, ಮುರ  ನಿವಾಸಿ ಕೆ.ಸಿ.ಜನಾರ್ದನ್ ನಂಬಿಯಾರ್ (75) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಶುಕ್ರವಾರ ನಿಧನರಾದರು. ನಿವೃತ್ತ ಕೆಎಸ್‍ಆರ್‍ಟಿಸಿ ಉದ್ಯೋಗಿಯಾಗಿರುವ ಅವರು ಬ್ಲಾಕ್ ಕಾಂಗ್ರೆಸ್ ಸಕ್ರೀಯ ಸದಸ್ಯರಾಗಿದ್ದರು. ಅಲ್ಲದೆ ಹಿರಿಯ ನಾಗರಿಕ ಕಾರ್ಡ್ ವಿತರಣೆ, ಮುಂತಾದ ಸೌಲಭ್ಯಗಳನ್ನು ಒದಗಿಸುವ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಮೃತರು ಪುತ್ರ ರೂಪೇಶ್, ಪುತ್ರಿ ರೇಶ್ಮಾ ಅವರನ್ನು ಅಗಲಿದ್ದಾರೆ.

ನಿವೃತ್ತ ಕೆಎಸ್‍ ಆರ್ ಟಿ ಸಿ ಉದ್ಯೋಗಿ ಕೆ.ಸಿ.ಜನಾರ್ದನ್ ನಂಬಿಯಾರ್ ನಿಧನ Read More »

ಬೀಚ್ ಗೆ ತೆರಳಿದ್ದ ವಿಟ್ಲದ ವಿದ್ಯಾರ್ಥಿನಿ ನಿಶಾ ಮೃತ್ಯು!

ವಿಟ್ಲ: ಬೀಚಿಗೆ ತೆರಳಿದ್ದ ವಿದ್ಯಾರ್ಥಿಗಳಲ್ಲಿ ಓರ್ವ ವಿದ್ಯಾರ್ಥಿನಿ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಸುರತ್ಕಲ್ ಸಮೀಪದ ಚಿತ್ರಾಪುರ ಬೀಚಿನಲ್ಲಿ ನಡೆದಿದೆ. ಮೃತರನ್ನು ನೇಪಾಳ ಮೂಲದ ವಿಟ್ಲದಲ್ಲಿದ್ದ ನಿಶಾ (15) ಎಂದು ಗುರುತಿಸಲಾಗಿದೆ. ವಿಟ್ಲ ಮೂಲದ ದಿಗಂತ (15), ದಿವ್ಯರಾಜ್ (15), ತೇಜಸ್ (14), ಕೀರ್ತನ್ (16), ಅಶ್ಮಿತಾ (15), ನಿಶಾ (15) ಇವರೆಲ್ಲರೂ ಕುಳಾಯಿ ಚಿತ್ರಾಪುರ ಬೀಚ್ ಗೆ ನೀರಲ್ಲಿ ಆಟ ಆಡಲು ತೆರಳಿದ್ದರು. ಆಡವಾಡುತ್ತಿದ್ದಾಗ ನೀರಿನ ಅಲೆಯ ರಭಸಕ್ಕೆ ಮುಳುಗಿದ್ದು, ಹತ್ತಿರದ ಮೀನುಗಾರರು ಮತ್ತು ಸ್ಥಳೀಯರು

ಬೀಚ್ ಗೆ ತೆರಳಿದ್ದ ವಿಟ್ಲದ ವಿದ್ಯಾರ್ಥಿನಿ ನಿಶಾ ಮೃತ್ಯು! Read More »

ದಯಾ ನಾಯಕ್ ತಂಡದ ಭರ್ಜರಿ ಕಾರ್ಯಾಚರಣೆ!!

ಮುಂಬಯಿ: ಕೈಂ ಬ್ರಾಂಚ್‌ನ ಬಾಂದ್ರಾ 9ರ ಘಟಕದ ಅಧಿಕಾರಿಗಳ ತಂಡದ ಸೀನಿಯರ್ ಇನ್ಸ್‌ಪೆಕ್ಟರ್ ದಯಾ ನಾಯಕ್ ಅವರ ನೇತೃತ್ವದಲ್ಲಿ ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸುಮಾರು 16 ಕೋಟಿ ರೂ. ಮೌಲ್ಯದ 5.089 ಕೆಜಿ ಎಂಡಿ (ಮೆಫೆಡೋನ್) ಡ್ರಗ್ಸ್‌ನ್ನು ವಶಪಡಿಸಿಕೊಂಡು ಇಬ್ಬರನ್ನು ಬಂಧಿಸಿದೆ. ಖಾರ್ ಪಶ್ಚಿಮದ ಖಾರ್ದಂಡದ ಕಾರ್ಟರ್ ರೋಡ್‌ನ ಖಲಾ ಮೈದಾನ ಸಮೀಪದ ಸ್ಮಶಾನದ ಬಳಿ ಈ ಕಾರ್ಯಾಚರಣೆ ನಡೆಸಲಾಯಿತು. ಬಂಧಿತ ಆರೋಪಿಗಳನ್ನು ರಾಹುಲ್ ಕಿಸಾನ್ ಗವಾಲಿ ಮತ್ತು ಅತುಲ್ ಕಿಸಾನ್ ಗವಾಲಿ (32)

ದಯಾ ನಾಯಕ್ ತಂಡದ ಭರ್ಜರಿ ಕಾರ್ಯಾಚರಣೆ!! Read More »

ಬಾಯೊಳಗೆ, ತಲೆಕೂದಲಲ್ಲಿ ಪತ್ತೆಯಾಯ್ತು ಅಕ್ರಮ ಚಿನ್ನ!

ಮಂಗಳೂರು: ದುಬೈನಿಂದ ಮಂಗಳೂರಿಗೆ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಇಬ್ಬರಿಂದ ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಸುಮಾರು 11 ಲಕ್ಷ ರೂ. ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ದುಬೈನಿಂದ ಮಂಗಳೂರಿಗೆ ಏರ್ ಇಂಡಿಯಾ ವಿಮಾನದ ಮೂಲಕ ಆಗಮಿಸಿದ ಓರ್ವ ಪುರುಷ ಹಾಗೂ ಮಹಿಳೆಯನ್ನು ತಪಾಸಣೆ ನಡೆಸಿದ ವೇಳೆ ಅಕ್ರಮವಾಗಿ ಚಿನ್ನ ಸಾಗಿಸುತ್ತಿರುವುದು ಪತ್ತೆಯಾಗಿದೆ. ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಯಾಣಿಕರನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದಾಗ ಓರ್ವ ಪ್ರಯಾಣಿಕ ಮುಖಕ್ಕೆ ಮಾಸ್ಕ್ ಧರಿಸಿದ್ದು, ಆತನನ್ನು

ಬಾಯೊಳಗೆ, ತಲೆಕೂದಲಲ್ಲಿ ಪತ್ತೆಯಾಯ್ತು ಅಕ್ರಮ ಚಿನ್ನ! Read More »

42 ಕೋಟಿ ರೂ. ಹಿಂದಿನ ‘ಕೈ’ ಪತ್ತೆಗೆ ಸಿಬಿಐ ತನಿಖೆ ಅಗತ್ಯ: ಡಿ.ವಿ.ಎಸ್. ಆಗ್ರಹ

ಬೆಂಗಳೂರು: ಗುತ್ತಿಗೆದಾರರ ಮನೆಯಲ್ಲಿ ಸಿಕ್ಕಿದ 42 ಕೋಟಿ ರೂ. ಹಣದ ಪರದೇ ಕೆ ಪೀಛೇ ಇರುವ ಕೈಗಳನ್ನು ಪತ್ತೆ ಹಚ್ಚಲು ಸಿಬಿಐ ತನಿಖೆ ಅಗತ್ಯ. ಈ ನಿಟ್ಟಿನಲ್ಲಿ ಸಿಬಿಐ ಸ್ವಯಂಪ್ರೇರಿತ ತನಿಖೆ ನಡೆಸಬೇಕು ಎಂದು ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ಸಚಿವ ಡಿ.ವಿ. ಸದಾನಂದ ಗೌಡ ಆಗ್ರಹಿಸಿದರು. ಬಿಜೆಪಿ ವತಿಯಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಭ್ರಷ್ಟಾಚಾರ, ಲೂಟಿ ಕಾಂಗ್ರೆಸಿನ ರಕ್ತದಲ್ಲಿದೆ. ರಾಜ್ಯದ ಅಭಿವೃದ್ಧಿಗೆ ಕಾಂಗ್ರೆಸ್ ಅನ್ಯಾಯ ಮಾಡುತ್ತಿದೆ. ಅಂಬಿಕಾಪತಿಗೆ 42

42 ಕೋಟಿ ರೂ. ಹಿಂದಿನ ‘ಕೈ’ ಪತ್ತೆಗೆ ಸಿಬಿಐ ತನಿಖೆ ಅಗತ್ಯ: ಡಿ.ವಿ.ಎಸ್. ಆಗ್ರಹ Read More »

error: Content is protected !!
Scroll to Top