ಸೀರೆ ವಿತರಣೆ: ಕೊಂಬೆಟ್ಟು ಕ್ರೀಡಾಂಗಣ ವೀಕ್ಷಿಸಿದ ಶಾಸಕರು

ಪುತ್ತೂರು: ಶಾಸಕ ಅಶೋಕ್ ರೈ ನೇತೃತ್ವದಲ್ಲಿ ದೀಪಾವಳಿ ಪ್ರಯುಕ್ತ ನ. 13ರಂದು ನಡೆಯಲಿರುವ ಬೃಹತ್ ಸೀರೆ ವಿತರಣಾ ಕಾರ್ಯಕ್ರಮವು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಬಾರಿ ಸಮಾವೇಶ ನಡೆಯಲಿರುವ ಕೊಂಬೆಟ್ಟು ಕ್ರೀಡಾಂಗಣಕ್ಕೆ ಭೇಟಿ ನೀಡಿದ ಶಾಸಕರು ಸ್ಥಳ ವೀಕ್ಷಣೆ ಮಾಡಿದರು. ಸುಮಾರು 50 ಸಾವಿರಕ್ಕೂ‌ಮಿಕ್ಕಿ ಜನ ಸೇರುವ ನಿರೀಕ್ಷೆ ಇದೆ. ಸಿದ್ದತೆಗಳ ಪರಿಶೀಲನೆ ಸಂದರ್ಭ ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ,ಕೋಡಿಂಬಾಡಿ ಗ್ರಾಪಂ ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರ್, ರೈ ಟ್ರಸ್ಟ್ ನ ಮುಖ್ಯಸ್ಥ ನಿಹಾಲ್ ಶೆಟ್ಟಿ, […]

ಸೀರೆ ವಿತರಣೆ: ಕೊಂಬೆಟ್ಟು ಕ್ರೀಡಾಂಗಣ ವೀಕ್ಷಿಸಿದ ಶಾಸಕರು Read More »

ಪಿಎಂಶ್ರೀ ಶಾಲೆಗಳ ರಾಷ್ಟ್ರಮಟ್ಟದ ಕಾರ್ಯಾಗಾರ: ತಾರಾನಾಥ ಸವಣೂರು ಆಯ್ಕೆ

ಪುತ್ತೂರು: ಎನ್.ಸಿ.ಇ.ಆರ್.ಟಿ. ನವದೆಹಲಿ ವತಿಯಿಂದ ಶಿಕ್ಷಣ ಮಂತ್ರಾಲಯದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಪಿಎಂಶ್ರೀ ಶಾಲೆಗಳ ಶೈಕ್ಷಣಿಕ ಕಾರ್ಯಾಗಾರಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಿಂದ ತಾರಾನಾಥ ಸವಣೂರು ಆಯ್ಕೆಯಾಗಿದ್ದಾರೆ. ಅಕ್ಟೋಬ‌ರ್ 26 ರಿಂದ 28ರ ತನಕ ಮೂರು ದಿನಗಳ ಕಾಲ ಕಾರ್ಯಾಗಾರ ನಡೆಯಲಿದೆ. ತಾರಾನಾಥ ಸವಣೂರು ಅವರು ವೀರಮಂಗಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರು.

ಪಿಎಂಶ್ರೀ ಶಾಲೆಗಳ ರಾಷ್ಟ್ರಮಟ್ಟದ ಕಾರ್ಯಾಗಾರ: ತಾರಾನಾಥ ಸವಣೂರು ಆಯ್ಕೆ Read More »

ದೇವಸ್ಥಾನದ ಸುತ್ತ ಕೇಸರಿ ಧ್ವಜ: ಶರಣ್ ಪಂಪ್‌ವೆಲ್ ವಿರುದ್ಧ ಪ್ರಕರಣ!

ಮಂಗಳೂರು: ಮಂಗಳಾದೇವಿ ದೇವಸ್ಥಾನದ ಸುತ್ತ ಕೇಸರಿ ಧ್ವಜ ಅಳವಡಿಸಿದ್ದಕ್ಕಾಗಿ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್’ವೆಲ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಚಟುವಟಿಕೆಯಲ್ಲಿ ತೊಡಗಿರುವ ಆರೋಪದ ಮೇಲೆ ಮಂಗಳೂರು ನಗರ ಪೊಲೀಸರು ಶರಣ್ ಪಂಪ್’ವೆಲ್ ಹಾಗೂ ಇತರರ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಂಗಳೂರು ಮಂಗಳಾದೇವಿ ದೇವಸ್ಥಾನದ ಸುತ್ತಮುತ್ತಲಿನ ಹಿಂದೂಗಳು ನಡೆಸುತ್ತಿದ್ದ ಅಂಗಡಿಗಳ ಮೇಲೆ ಕೇಸರಿ ಧ್ವಜ ಅಳವಡಿಸಿದ್ದರು. ಈ ಕ್ರಮ ಧಾರ್ಮಿಕ ವೈಷಮ್ಯವನ್ನು ಕೆರಳಿಸುವ ಸಾಮರ್ಥ್ಯ ಹೊಂದಿವೆ ಎಂದು ಪೊಲೀಸ್ ಕಮೀಷನರ್

ದೇವಸ್ಥಾನದ ಸುತ್ತ ಕೇಸರಿ ಧ್ವಜ: ಶರಣ್ ಪಂಪ್‌ವೆಲ್ ವಿರುದ್ಧ ಪ್ರಕರಣ! Read More »

ಹುಟ್ಟೂರ ದೇವರಿಗೆ ವಜ್ರದ ಸರ ಅರ್ಪಿಸಿದ ಶಾಸಕ ಅಶೋಕ್ ರೈ

ಪುತ್ತೂರು: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ನವರಾತ್ರಿ ಪ್ರಯುಕ್ತ ಕೋಡಿಂಬಾಡಿ ಶ್ರೀ ಮಹಿಷಮರ್ಧಿನಿ ದೇವಸ್ಥಾನದಲ್ಲಿ ಚಂಡಿಕಾ ಹೋಮ ಮತ್ತು ತುಲಾಭಾರ ಸೇವೆ ಸಲ್ಲಿಸಿದರು. ಇದೇ ಸಂರ್ಭ ಸೇವಾ ರೂಪದಲ್ಲಿ ತನ್ನ ಹುಟ್ಟೂರ ಆರಾಧ್ಯ ದೇವರಾದ ಮಹಿಷ‌ಮರ್ಧಿನಿಗೆ ವಜ್ರದ ಸರವನ್ನು ಸೇವಾರೂಪದಲ್ಲಿ ಸಮರ್ಪಿಸಿದರು. ಬೆಳಿಗ್ಗೆ ದೇವಳದಲ್ಲಿ ಚಂಡಿಕಾಹೋಮ, ವಿಶೇಷ ಪೂಜೆ ಮತ್ತು ತುಲಾಭಾರ ಸೇವೆಯನ್ನು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮದ ಭಕ್ತಾದಿಗಳು ಶಾಸಕರ ಕುಟುಂಬಸ್ಥರು ಭಾಗವಹಿಸಿದ್ದರು. ಪೂಜೆಯ ಬಳಿಕ ಅನ್ನದಾನ ನಡೆಯಿತು.

ಹುಟ್ಟೂರ ದೇವರಿಗೆ ವಜ್ರದ ಸರ ಅರ್ಪಿಸಿದ ಶಾಸಕ ಅಶೋಕ್ ರೈ Read More »

ಎಚ್.ಡಿ. ಕುಮಾರಸ್ವಾಮಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಪಟ್ಟ ಕಟ್ಟಿದ ದೇವೇಗೌಡ!

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಎಚ್.ಡಿ. ಕುಮಾರಸ್ವಾಮಿ ಅವರ ಹೆಸರನ್ನು ಘೋಷಣೆ ಮಾಡಲಾಗಿದೆ. ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರು ಈ ಘೋಷಣೆ ಹೊರಡಿಸಿದ್ದು, ಎಚ್.ಡಿ. ಕುಮಾರಸ್ವಾಮಿ ಅವರನ್ನು ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಿ ಘೋಷಣೆ ಹೊರಡಿಸಿದ್ದಾರೆ. ಪಕ್ಷದ ಸಂವಿಧಾನದಂತೆ ಈ ಆಯ್ಕೆ ಪ್ರಕ್ರಿಯೆ ನಡೆಸಲಾಗಿದೆ. ರಾಜ್ಯದ ಎಲ್ಲಾ ಘಟಕಗಳನ್ನು ವಿಸರ್ಜಿಸಲಾಗಿದೆ ಎಂದು ಹೇಳಿದ್ದಾರೆ. ಸಿ.ಎಂ. ಇಬ್ರಾಹಿಂ ಅವರನ್ನು ಉಚ್ಚಾಟನೆ ಮಾಡಲಾಗಿದೆಯೇ ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ಅಡ್ಡಾಡುತ್ತಿದೆ. ಆದರೆ ಸಿ.ಎಂ. ಇಬ್ರಾಹಿಂ ಅವರ ಬಗ್ಗೆ ಯಾವುದೇ ನಿರ್ಧಾರವನ್ನು

ಎಚ್.ಡಿ. ಕುಮಾರಸ್ವಾಮಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಪಟ್ಟ ಕಟ್ಟಿದ ದೇವೇಗೌಡ! Read More »

ಸಮುದ್ರ ಬೀಚ್‌ನಲ್ಲಿ ಜೋಡಿ ಮೃತದೇಹ ಪತ್ತೆ!

ಮಂಗಳೂರು: ಇಲ್ಲಿನ ಪಣಂಬೂರು ಬೀಚ್‌ನಲ್ಲಿ ಬೆಂಗಳೂರಿನ ಜೋಡಿ ಶವ ಗುರುವಾರ ಬೆಳಿಗ್ಗೆ ಪತ್ತೆಯಾಗಿದೆ. ಮೃತರನ್ನು ಲಕ್ಷ್ಮಿ(40) ಮತ್ತು ಬೋರಲಿಂಗಯ್ಯ (45) ಎಂದು ಗುರುತ್ತಿಸಲಾಗಿದ್ದು, ಇವರಿಬ್ಬರೂ ಬೆಂಗಳೂರು ಮೂಲದವರು. ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆ ಪ್ರಕರಣ ಎಂದು ಶಂಕಿಸಲಾಗಿದೆ. ಬುಧವಾರ ಬೆಂಗಳೂರಿನಿಂದ ಆಗಮಿಸಿದ್ದ ಈ ಜೋಡಿ, ಗುರುವಾರ ಮುಂಜಾನೆ 5 ಗಂಟೆ ಸುಮಾರಿಗೆ ಪಣಂಬೂರಿಗೆ ಬಂದು ಸಮುದ್ರಕ್ಕೆ ಧುಮುಕಿದ್ದರು ಎನ್ನಲಾಗಿದೆ. ಸಮುದ್ರಕ್ಕೆ ಹಾರುವ ಮುಂಚೆ ತಮ್ಮ ಮೊಬೈಲ್ ಮತ್ತಿತರ ಸೊತ್ತುಗಳನ್ನು ತೀರದಲ್ಲೇ ಬಿಟ್ಟಿದ್ದರಿಂದ ಪೊಲೀಸರು ಸಂಬಂಧಿಕರನ್ನು ಸಂಪರ್ಕಿಸಿ ಮಾಹಿತಿ ನೀಡಿದರು.

ಸಮುದ್ರ ಬೀಚ್‌ನಲ್ಲಿ ಜೋಡಿ ಮೃತದೇಹ ಪತ್ತೆ! Read More »

19-10-2023ರ ಕೃಷಿ ಮಾರುಕಟ್ಟೆ ಧಾರಣೆ

ಪುತ್ತೂರು: ಏರಿಕೆ ಹಾದಿಯಲ್ಲಿ ಕ್ರಮಿಸುತ್ತಿರುವ ರಬ್ಬರ್ ಧಾರಣೆ, ರೈತರಲ್ಲಿ ಹೊಸ ಭರವಸೆಯನ್ನು ಮೂಡಿಸಬಹುದೇ ಎನ್ನುವ ಕುತೂಹಲ ಸಹಜವಾಗಿಯೇ ಮೂಡಿದೆ. ರಬ್ಬರ್ ಆರ್.ಎಸ್.ಎಸ್.4 ಗ್ರೇಡ್ 150ರ ಗಡಿ ತಲುಪಿದ್ದು, ಉಳಿದ ಗ್ರೇಡ್’ಗಳು ಹಿಂದೆಯೇ ಇವೆ. ಗುರುವಾರ ಹೊಸ ಅಡಿಕೆ 325- 365 ರೂ., ಹಳೆ ಅಡಿಕೆ 380 -422 ರೂ. ಹಾಗೂ 423-425 ರೂ.ನಲ್ಲಿದೆ (ಗುಣಮಟ್ಟ). ಡಬ್ಬಲ್ ಚೋಲ್ 390 – 460 ರೂ. ಹಾಗೂ 460- 485 ರೂ. (ಗುಣಮಟ್ಟ)ನಲ್ಲಿದೆ. ಕಾಳು ಮೆಣಸು ಕೆ.ಜಿ.ಗೆ 315 –

19-10-2023ರ ಕೃಷಿ ಮಾರುಕಟ್ಟೆ ಧಾರಣೆ Read More »

ಪಿಲಿಗೊಬ್ಬು 2023ಕ್ಕೆ ರಾಜ್ ಬಿ. ಶೆಟ್ಟಿ, ದಿಗಂತ್ ಸೇರಿದಂತೆ ತಾರಾ ಮೆರುಗು | ಪಿಲಿಗೊಬ್ಬು, ಫುಡ್ ಫೆಸ್ಟ್ ವೈಭವವನ್ನು ಬಣ್ಣಿಸಿದ ಸಹಜ್ ರೈ, ಪುತ್ತೂರು ಉಮೇಶ್ ನಾಯಕ್

ಪುತ್ತೂರು: ವಿಜಯ ಸಾಮ್ರಾಟ್ ನೇತೃತ್ವದಲ್ಲಿ ಪುತ್ತೂರುದ ಪಿಲಿಗೊಬ್ಬು 2023 ಹಾಗೂ ಫುಡ್ ಫೆಸ್ಟ್ ಅಕ್ಟೋಬರ್ 22ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಆಯೋಜಿಸಲಾಗಿದೆ ಎಂದು ಪುತ್ತೂರು ಪಿಲಿಗೊಬ್ಬು ಗೌರವಾಧ್ಯಕ್ಷ ಸಹಜ್ ರೈ ಬಳಜ್ಜ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತುಳು ನಾಡಿನ ಧಾರ್ಮಿಕ ಹಿನ್ನೆಲೆ ಇರುವ ಜಾನಪದ ಕಲೆ. ಈ ಕಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಪುತ್ತೂರುದ ಪಿಲಿಗೊಬ್ಬು ಹಾಗೂ ಫುಡ್ ಫೆಸ್ಟ್  ಅಥವಾ ಹುಲಿ ವೇಷ ಕುಣಿತ ಸ್ಪರ್ಧೆ ಹಾಗೂ ಅಹಾರ ಮೇಳ,

ಪಿಲಿಗೊಬ್ಬು 2023ಕ್ಕೆ ರಾಜ್ ಬಿ. ಶೆಟ್ಟಿ, ದಿಗಂತ್ ಸೇರಿದಂತೆ ತಾರಾ ಮೆರುಗು | ಪಿಲಿಗೊಬ್ಬು, ಫುಡ್ ಫೆಸ್ಟ್ ವೈಭವವನ್ನು ಬಣ್ಣಿಸಿದ ಸಹಜ್ ರೈ, ಪುತ್ತೂರು ಉಮೇಶ್ ನಾಯಕ್ Read More »

ಅ. 22ರಂದು ಪುತ್ತೂರ್ದ ಪಿಲಿರಂಗ್ ಸೀಸನ್ 2 | ತುಳು ಧ್ವಜಾರೋಹಣ, ಬಹುಮಾನ, ಕಾರ್ಯಕ್ರಮದ ರೂಪುರೇಷೆ ವಿವರಿಸಿದ ಮಾಜಿ ಶಾಸಕಿ

ಪುತ್ತೂರು: ಸಾಂಸ್ಕೃತಿಕ ಕಲೆ ನಮ್ಮ ಊರಿಗೂ ಬರಲಿ ಎಂಬ ಉದ್ದೇಶದಿಂದ ಆರಂಭಗೊಂಡಿರುವ ಪುತ್ತೂರ್ದ ಪಿಲಿರಂಗ್ ಸೀಸನ್ 2 ಅಕ್ಟೋಬರ್ 22ರಂದು ಪುತ್ತೂರು ಕಿಲ್ಲೆ ಮೈದಾನದಲ್ಲಿ ನಡೆಯಲಿದೆ ಎಂದು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪುತ್ತೂರಿಗೆ ಹೆಸರು ಬರಬೇಕು ಎಂಬ ನಿಟ್ಟಿನಲ್ಲಿ ಪಿಲಿರಂಗ್ ಆರಂಭ ಮಾಡಿದ್ದೇವೆ. ಈ ವರ್ಷ ಬೆಳಿಗ್ಗೆ 11ಕ್ಕೆ ಗಣಹೋಮ ನಡೆಯಲಿದೆ. ಬಳಿಕ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಅವರು ತುಳು

ಅ. 22ರಂದು ಪುತ್ತೂರ್ದ ಪಿಲಿರಂಗ್ ಸೀಸನ್ 2 | ತುಳು ಧ್ವಜಾರೋಹಣ, ಬಹುಮಾನ, ಕಾರ್ಯಕ್ರಮದ ರೂಪುರೇಷೆ ವಿವರಿಸಿದ ಮಾಜಿ ಶಾಸಕಿ Read More »

ನಟಿ ರಾಧಿಕಾ ಮನೆಯ ಕೆಲಸದಾಳು ನಾಪತ್ತೆ!

ವಿಟ್ಲ: ಚಲನಚಿತ್ರ ನಟಿ ರಾಧಿಕಾ ಅವರ ಅಮ್ಟೂರು ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೋರ್ವಳು ಕಾಣೆಯಾಗಿರುವ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು‌ ದಾಖಲಾಗಿದೆ. ಮೂಲತಃ ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮಾದನಗಿರಿ ನಿವಾಸಿ ಮಹಾದೇವ ಮಾರಿಪಟಗಾರ್ ಅವರ ಪತ್ನಿ ನಾಗರತ್ನ (33) ಕಾಣೆಯಾದ ಮಹಿಳೆ. ‌ತಾಲೂಕಿನ‌ ಅಮ್ಟೂರು ಗ್ರಾಮದ ರಾಯಪ್ಪನಕೋಡಿ ಎಂಬಲ್ಲಿ ಚಲನ ಚಿತ್ರ ನಟಿ ರಾಧಿಕ ಅವರ ಎಸ್ಟೇಟ್‌ ನಲ್ಲಿ ಕಳೆದ ಆರು ತಿಂಗಳ ಹಿಂದೆ ಕೆಲಸಕ್ಕೆ ಸೇರಿದ ನಾಗರತ್ನ ಇದೀಗ ಕಾಣೆಯಾಗಿದ್ದಾರೆ. ನಾಗರತ್ನ

ನಟಿ ರಾಧಿಕಾ ಮನೆಯ ಕೆಲಸದಾಳು ನಾಪತ್ತೆ! Read More »

error: Content is protected !!
Scroll to Top