16-10-2023ರ ಕೃಷಿ ಮಾರುಕಟ್ಟೆ ಧಾರಣೆ

ಪುತ್ತೂರು: ವಾರಾರಂಭ ಮಾರುಕಟ್ಟೆ ತೆರೆದುಕೊಳ್ಳುತ್ತಿದ್ದಂತೆ, ರಬ್ಬರ್ ಕೃಷಿಕರಲ್ಲಿ ತುಸು ಗೆಲುವು ಕಾಣಿಸಿಕೊಂಡಿದೆ. ಕಾರಣ ಕಳೆದೆರಡು ದಿನಗಳಿಂದ ಏರಿಕೆ ಹಾದಿಯಲ್ಲಿರುವ ರಬ್ಬರ್ ಧಾರಣೆ ಮತ್ತೆ ಸಣ್ಣದಾಗಿ ಧಾರಣೆ ಏರಿಸಿಕೊಂಡಿದೆ. ಅಡಿಕೆ ಡಬ್ಬಲ್ ಚೋಲ್ ಮತ್ತದೇ ಏರಿಳಿಕೆಯ ಹಾದಿ. ಸೋಮವಾರ ಹೊಸಅಡಿಕೆ 325- 365 ರೂ., ಹಳೆ ಅಡಿಕೆ 380 -420 ರೂ. ಹಾಗೂ 420-425 ರೂ.ನಲ್ಲಿದೆ (ಗುಣಮಟ್ಟ). ಡಬ್ಬಲ್ ಚೋಲ್ 390 – 460 ರೂ. ಹಾಗೂ 460- 485 ರೂ. (ಗುಣಮಟ್ಟ)ನಲ್ಲಿದೆ. ಶನಿವಾರ ಡಬ್ಬಲ್ ಚೋಲ್ 390 […]

16-10-2023ರ ಕೃಷಿ ಮಾರುಕಟ್ಟೆ ಧಾರಣೆ Read More »

ಕೆನರಾ ಕಾಲೇಜಿಗೆ ಎನ್.ಎಸ್.ಎಸ್. ರಾಜ್ಯ ಪ್ರಶಸ್ತಿ ಪ್ರದಾನ

ಮಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ  ರಾಷ್ಟ್ರೀಯ ಸೇವಾ ಯೋಜನಾ ಕೋಶದಿಂದ ನೀಡಲ್ಪಡುವ ಎನ್ನೆಸ್ಸೆಸ್ಸ್ 2021-22ನೇ ಸಾಲಿನ ರಾಜ್ಯ ಪ್ರಶಸ್ತಿ ಮಂಗಳೂರಿನ ಕೆನರಾ ಕಾಲೇಜಿಗೆ ಲಭಿಸಿದೆ. ರಾಜ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ರಾಷ್ಟ್ರೀಯ ಸೇವಾ ಯೋಜನೆಯ ಮೂಲಕ ಸಲ್ಲಿಸಿರುವ ಅನುಪಮ ಸೇವೆಗಾಗಿ 2021-22ನೇ ಸಾಲಿನ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ರಾಷ್ಟ್ರೀಯ ಸೇವಾ ಯೋಜನೆಯ ಅತ್ಯುತ್ತಮ ಕಾರ್ಯಕ್ರಮಾಧಿಕಾರಿ ರಾಜ್ಯ ಪ್ರಶಸ್ತಿಯನ್ನು ಸಂಸ್ಥೆಯ ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಸೀಮಾ ಪ್ರಭು ಎಸ್.  ಹಾಗೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ

ಕೆನರಾ ಕಾಲೇಜಿಗೆ ಎನ್.ಎಸ್.ಎಸ್. ರಾಜ್ಯ ಪ್ರಶಸ್ತಿ ಪ್ರದಾನ Read More »

ಬರೆಪ್ಪಾಡಿ ದೇಗುಲದ ನಿಧಿ ಸಂಚಯನ ಹಿನ್ನೆಲೆ: ಪ್ರತಿನಿಧಿಗಳ ಸಭೆ

ಕಾಣಿಯೂರು: ಕುದ್ಮಾರು ಗ್ರಾಮದ ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ಮತ್ತು ಕೇಪುಳೇಶ್ವರ ದೇವಸ್ಥಾನದಲ್ಲಿ ನಿಧಿ ಸಂಚಯನದ ಕುರಿತು ಭಾನುವಾರ ಪ್ರತಿನಿಧಿಗಳ ಸಭೆ ನಡೆಯಿತು. ದೇವಸ್ಥಾನದ ಜೀರ್ಣೋದ್ದಾರ ಪ್ರಯುಕ್ತ ಜ. 7ರಂದು ನಿಧಿ ಸಂಚಯನ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ ತಾಲೂಕು, ವಲಯ ಹಾಗೂ ಗ್ರಾಮವಾರು ಪ್ರತಿನಿಧಿಗಳ ಸಭೆಯನ್ನು ನಡೆಸಿ, ಕಾರ್ಯಕ್ರಮದ ರೂಪುರೇಷೆ ಬಗ್ಗೆ ಚರ್ಚಿಸಲಾಯಿತು. ಈ ಸಂದರ್ಭ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು, ತಾಲೂಕು, ವಲಯ, ಗ್ರಾಮಾವಾರು ಪ್ರತಿನಿಧಿಗಳು ಉಪಸ್ಥಿತರಿದ್ದರು.

ಬರೆಪ್ಪಾಡಿ ದೇಗುಲದ ನಿಧಿ ಸಂಚಯನ ಹಿನ್ನೆಲೆ: ಪ್ರತಿನಿಧಿಗಳ ಸಭೆ Read More »

ಗಾರ್ಡನ್ ಮಾಡುವುದಾಗಿ ಹೇಳಿ ಸ್ಮಶಾನ ಮಾಡಿದ್ದಾರೆ: ಶಾಸಕರಿಗೆ ದೂರು

ಪುತ್ತೂರು: ಮುಂಡೂರು ಗ್ರಾಮದ ಮುಂಡೂರು ಪೇಟೆಯ ಬಳಿ ಜನವಸತಿ ಪ್ರದೇಶದಲ್ಲಿ ಸ್ಮಶಾನವನ್ನು ನಿರ್ಮಾಣ ಮಾಡಿದ್ದು ಅದನ್ನು ತೆರವು ಮಾಡುವಂತೆ ಮುಂಡೂರು ಗ್ರಾಮಸ್ಥರು ಶಾಸಕರನ್ನು ಆಗ್ರಹಿಸಿದ್ದಾರೆ. ಇಲ್ಲಿ ತುಂಬಾ ಮನೆಗಳಿವೆ, ಮನೆಗಳ ಮಧ್ಯೆ ಸ್ಮಶಾನ ನಿರ್ಮಾಣ ಮಾಡಿದ್ದಾರೆ. ನಾವು ಇಲ್ಲಿ ಗಾರ್ಡನ್ ನಿರ್ಮಾಣ ಮಾಡುತ್ತಿದ್ದೇವೆ ಎಂದು ಗ್ರಾಪಂ ನವರು ತಿಳಿಸಿದ್ದರು. ನಾವು ಅದನ್ನು ಸತ್ಯ ಎಂದು ನಂಬಿದ್ದೆವು. ಆದರೆ ಕೊನೆ ಗಳಿಗೆಯಲ್ಲಿ ಅದು ಸ್ಮಶಾನ ಎಂದು ಗೊತ್ತಾದಾಗ ನಾವು ಪ್ರತಿಭಟಿಸಿದ್ದೆವು. ಆದರೆ ಏನೂ ಪ್ರಯೋಜನವಾಗಲಿಲ್ಲ, ಜನವಸತಿ ಪ್ರದೇಶದಿಂದ ಸ್ಮಶಾನವನ್ನು

ಗಾರ್ಡನ್ ಮಾಡುವುದಾಗಿ ಹೇಳಿ ಸ್ಮಶಾನ ಮಾಡಿದ್ದಾರೆ: ಶಾಸಕರಿಗೆ ದೂರು Read More »

ಗೆಳೆಯರೊಂದಿಗೆ ಈಜಲು ತೆರಳಿದ್ದ ತಸ್ಲೀಮ್ ಶವ ಪತ್ತೆ!

ಮಾಡಾವು: ಗೆಳೆಯರೊಂದಿಗೆ ಈಜಲು ತೆರಳಿದ್ದ ಯುವಕನ ಮೃತದೇಹ ಸೋಮವಾರ ಬೆಳಿಗ್ಗೆ ಹೊಳೆಯಲ್ಲಿ ಪತ್ತೆಯಾಗಿದೆ. ಮಾಡಾವು ಕಟ್ಟತ್ತಾರು ನಿವಾಸಿ ಹಂಝ ಎಂಬವರ ಪುತ್ರ ತಸ್ಲೀಮ್ (17 ವ.) ಮೃತಪಟ್ಟವರು. ತಸ್ಲೀಮ್ ಅ. 15ರಂದು ಸಂಜೆ ಗೆಳೆಯರ ಜೊತೆಗೂಡಿ ಅರಿಕ್ಕಿಲ ಸಮೀಪದ ಎರಕ್ಕಲ ಎಂಬಲ್ಲಿ ಹೊಳೆಗೆ ಈಜಲು ತೆರಳಿದ್ದ ವೇಳೆ ಘಟನೆ ಸಂಭವಿಸಿತ್ತು. ಯುವಕ ನಾಪತ್ತೆಯಾಗುತ್ತಿದ್ದಂತೆ ಸ್ನೇಹಿತರು ಮನೆಯವರಿಗೆ, ಸ್ಥಳೀಯರಿಗೆ ವಿಷಯ ತಲುಪಿಸಿದ್ದರು. ತಕ್ಷಣ ಸ್ಥಳೀಯರು ಹೊಳೆಯಲ್ಲಿ ಹುಡುಕಾಟ ನಡೆಸಿದರಾದರೂ ಮೃತದೇಹ ಪತ್ತೆಯಾಗಿರಲಿಲ್ಲ. ಬಳಿಕ ಮುಳುಗು ತಜ್ಞರು ಕಾರ್ಯಾಚರಣೆ ಮುಂದುವರಿಸಿದ್ದರು.

ಗೆಳೆಯರೊಂದಿಗೆ ಈಜಲು ತೆರಳಿದ್ದ ತಸ್ಲೀಮ್ ಶವ ಪತ್ತೆ! Read More »

ಹೊಳೆಗೆ ಈಜಲು ತೆರಳಿದ ಬಾಲಕ ನಾಪತ್ತೆ : ಹುಡುಕಾಟ

ಮಾಡಾವು : ಹೊಳೆಗೆ ಈಜಲು ತೆರಳಿದ ಬಾಲಕನೋರ್ವ ನೀರಿನಲ್ಲಿ ಮುಳುಗಿರುವ ಶಂಕೆ ವ್ಯಕ್ತವಾಗಿದ್ದು, ಹುಡುಕಾಟ ನಡೆಸಲಾಗುತ್ತಿದೆ. ಮಾಡಾವು ಕಟ್ಟತ್ತಾರು ನಿವಾಸಿ ಹಂಝ ಎಂಬವರ ಪುತ್ರ ತಸ್ಲಿಮ್ (17 ವ) ಗೆಳೆಯರ ಜೊತೆಗೂಡಿ ಅ. 15ರಂದು ಸಂಜೆ ಅರಿಕ್ಕಿಲ ಸಮೀಪದ ಎರಕ್ಕಲ ಎಂಬಲ್ಲಿನ ಹೊಳೆಗೆ ತೆರಳಿದ್ದು ಈಜುವ ವೇಳೆ ಬಾಲಕ ನೀರಿನಲ್ಲಿ ಮುಳುಗಿದ್ದಾನೆ ಎನ್ನಲಾಗಿದೆ. ಸ್ಥಳದಲ್ಲಿ ನೂರಾರು ಮಂದಿ ಸೇರಿದ್ದು ಹುಡುಕಾಟ ನಡೆಸುತ್ತಿದ್ದಾರೆ.

ಹೊಳೆಗೆ ಈಜಲು ತೆರಳಿದ ಬಾಲಕ ನಾಪತ್ತೆ : ಹುಡುಕಾಟ Read More »

ಉಚಿತ ನೇತ್ರ ತಪಾಸಣೆ, ಚಿಕಿತ್ಸಾ ಶಿಬಿರ

ಪುತ್ತೂರು: ಬೇಲೂರಿನ ನಾಟ್ಯ ಮಯೂರಿ ಲಾಲಿತ್ಯ ಕುಮಾರ್ ಹುಟ್ಟುಹಬ್ಬದ ಅಂಗವಾಗಿ ಉಚಿತ ನೇತ್ರ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ಸುಧಾನ ವಸತಿ ಶಾಲೆಯ ಎಡ್ವರ್ಡ್ ಹಾಲ್ ನಲ್ಲಿ ಭಾನುವಾರ ನಡೆಯಿತು. ಶ್ರೀ ಕೃಷ್ಣ ಯುವಕ ಮಂಡಲ, ಸಹಾಯಹಸ್ತ ಲೋಕಸೇವಾ ಚಾರಿಟೇಬಲ್ ಟ್ರಸ್ಟ್ ಹಾಗೂ ಹೊಸ ಬೆಳಕು ಬಡವರ ಆಶಾಕಿರಣ ಸೇವಾ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ಅನೇಕ ಸಂಘ ಸಂಸ್ಥೆಗಳ ಸಹಕಾರದಲ್ಲಿ ಪ್ರಸಾದ್ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯ ನುರಿತ ವೈದ್ಯರ ತಂಡ ಶಿಬಿರ ನಡೆಸಿಕೊಟ್ಟರು. ಪುತ್ತೂರಿನ ವೈದ್ಯ

ಉಚಿತ ನೇತ್ರ ತಪಾಸಣೆ, ಚಿಕಿತ್ಸಾ ಶಿಬಿರ Read More »

ಪುತ್ತೂರು ದಸರಾ ಮಹೋತ್ಸವಕ್ಕೆ ಚಾಲನೆ

ಪುತ್ತೂರು: ಪುತ್ತೂರು ದಸರಾ ನವದುರ್ಗಾರಾಧನಾ ಸಮಿತಿ ವತಿಯಿಂದ ಪ್ರತಿವರ್ಷ ನಡೆಯುವ “ಪುತ್ತೂರು ದಸರಾ ಮಹೋತ್ಸವ”ಕ್ಕೆ ಸಂಪ್ಯ ಉದಯಗಿರಿ ಶ್ರೀ ವಿಷ್ಣುಮೂರ್ತಿ-ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ಭಾನುವಾರ ಚಾಲನೆ ನೀಡಲಾಯಿತು. 21ನೇ ವರ್ಷದ ಮಹೋತ್ಸವ ಇದಾಗಿದ್ದು, ಕ್ಷೇತ್ರದ ತಂತ್ರಿ ಕುಕ್ಕಾಡಿ ಪ್ರೀತಂ ಪುತ್ತೂರಾಯ ಅವರ ನೇತೃತ್ವದಲ್ಲಿ ಬೆಳಗ್ಗೆ ಗಣಪತಿ ಸಹಿತ ನವದುರ್ಗೆಯರ ಪ್ರತಿಷ್ಠೆ ನಡೆಯಿತು. ಬಳಿಕ ಆರ್ಯಾಪು ಗ್ರಾಪಂ ಅಧ್ಯಕ್ಷೆ ಗೀತಾ ದೀಪ ಬೆಳಗಿಸಿ ಮಹೋತ್ಸವಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ತಾಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ, ನಗರಸಭೆ ಸದಸ್ಯ

ಪುತ್ತೂರು ದಸರಾ ಮಹೋತ್ಸವಕ್ಕೆ ಚಾಲನೆ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರುತ್ಥಾನ: ಮಹಾಸಭೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಹಿನ್ನಲೆಯಲ್ಲಿ ಈಗಾಗಲೇ 25 ಕೋಟಿ ರೂ. ಅನುದಾನಕ್ಕಾಗಿ ಪ್ರಸ್ತಾವನೆಯನ್ನು ಸರಕಾರಕ್ಕೆ ಸಲ್ಲಿಸಲಾಗಿದ್ದು, ಇದು ಸರಕಾರದ ಮಟ್ಟದಲ್ಲಿದೆ. 4.66 ಕೋಟಿ ರೂ.ವನ್ನು ಭಕ್ತರಿಂದ ಸಂಗ್ರಹಕ್ಕಾಗಿ ಸರಕಾರ ಒಪ್ಪಿಗೆ ನೀಡಿದೆ. ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದರು. ಅವರು ಭಾನುವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಪುನರುತ್ಥಾನ ಕಾರ್ಯದ ಅಂಗವಾಗಿ ಅನ್ನಛತ್ರ ನಿರ್ಮಾಣ ಮತ್ತು ಪುಷ್ಕರಣಿ ಪುನರುತ್ಥಾನ ನಿಧಿ ಸಂಚಯನದ ಕುರಿತು ಭಕ್ತರ ಮಹಾಸಭೆಯನ್ನು ಉದ್ಘಾಟಿಸಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರುತ್ಥಾನ: ಮಹಾಸಭೆ Read More »

ವಿದ್ಯಾಮಾತಾ ಅಕಾಡೆಮಿಯಲ್ಲಿ ನವೋದಯ ಪರೀಕ್ಷೆ: ಒಂದು ವಾರದ ವಿಶೇಷ ತರಬೇತಿ

ಪುತ್ತೂರು: ಇಲ್ಲಿಯ ಎಪಿಎಂಸಿ ರಸ್ತೆಯಲ್ಲಿರುವ ಹಿಂದೂಸ್ತಾನ್ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ನವೋದಯ ಮತ್ತು ಸೈನಿಕ ಶಾಲಾ ಪ್ರವೇಶಕ್ಕೆ ಒಂದು ವಾರದ ವಿಶೇಷ ತರಬೇತಿ ತರಗತಿಯನ್ನು ಅ.16 ರಿಂದ 21ರ ವರೆಗೆ ಆಯೋಜಿಸಲಾಗಿದೆ. ಈ ತರಗತಿಗಳ ಸದುಪಯೋಗಪಡಿಸಿ ಕೊಳ್ಳಲು ಬಯಸುವ ವಿದ್ಯಾರ್ಥಿಗಳು ಬೆಳಿಗ್ಗೆ 9.30ಕ್ಕೆ ಪುತ್ತೂರಿನ ವಿದ್ಯಾಮಾತಾ ಅಕಾಡೆಮಿಯಲ್ಲಿ ಹಾಜರಿರಬೇಕು. ಹೆಚ್ಚಿನ ಮಾಹಿತಿಗಾಗಿ 9148935808 / 96204 68869 ಸಂಪರ್ಕಿಸಬಹುದು.

ವಿದ್ಯಾಮಾತಾ ಅಕಾಡೆಮಿಯಲ್ಲಿ ನವೋದಯ ಪರೀಕ್ಷೆ: ಒಂದು ವಾರದ ವಿಶೇಷ ತರಬೇತಿ Read More »

error: Content is protected !!
Scroll to Top