ಅ.15 : ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಸ್ವಂತ ಕಚೇರಿ ಹಾಗೂ ವಾಣಿಜ್ಯ ಮಳಿಗೆಗಳ ಸಂಕೀರ್ಣದ ಶಂಕು ಸ್ಥಾಪನೆ

ಸವಣೂರು: ಪುತ್ತೂರಿನಲ್ಲಿ ಕಾರ್ಯಾಚರಿಸುತ್ತಿರುವ ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಸ್ವಂತ ಕಚೇರಿ ಹಾಗೂ ವಾಣಿಜ್ಯ ಮಳಿಗೆಗಳ ಸಂಕೀರ್ಣದ ಶಂಕು ಸ್ಥಾಪನಾ ಸಮಾರಂಭ ಅ.15 ಭಾನುವಾರ ಸವಣೂರು-ಸುಬ್ರಹ್ಮಣ್ಯ ರಸ್ತೆಯ ಸವಣೂರಿನಲ್ಲಿ ನಡೆಯಲಿದೆ. ಸಮಾರಂಭದಲ್ಲಿ ಶ್ರೀ ಕ್ಷೇತ್ರ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಂನ ಶ್ರೀ ಗುರುದೇವಾನಂದ ಸ್ವಾಮೀಜಿ ಶಂಕುಸ್ಥಾಪನೆ ನೆರವೇರಿಸಿ ಆಶೀರ್ವಚನ ನೀಡಲಿದ್ದಾರೆ. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಕಡಬ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್ ಎನ್., ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ […]

ಅ.15 : ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಸ್ವಂತ ಕಚೇರಿ ಹಾಗೂ ವಾಣಿಜ್ಯ ಮಳಿಗೆಗಳ ಸಂಕೀರ್ಣದ ಶಂಕು ಸ್ಥಾಪನೆ Read More »

ಮೀನಿನ ಲಾರಿಗೆ ಸ್ಕೂಟರ್ ಢಿಕ್ಕಿ; 21ರ ಹರೆಯದ ಯುವಕ ಮೃತ್ಯು

ಉಳ್ಳಾಲ: ಮೀನಿನ ಲಾರಿಗೆ ಸ್ಕೂಟರೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ರಾ.ಹೆ.66ರ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ. ಮೂಲತಃ ಉಳ್ಳಾಲ ನಿವಾಸಿ, ಕೋಟೆಕಾರ್‌ನಲ್ಲಿ ನೆಲೆಸಿರುವ ಹನೀಫ್ ಎಂಬವರ ಪುತ್ರ ಅಝ್‌ವೀನ್ (21) ಮೃತಪಟ್ಟ ಸ್ಕೂಟರ್ ಸವಾರ. ದಕ್ಕೆಗೆ ಮೀನುಗಾರಿಕೆಯ ಕೆಲಸಕ್ಕೆಂದು ಅಝ್‌ವೀನ್ ಬುಧವಾರ ಮುಂಜಾನೆ 3:30ರ ವೇಳೆಗೆ ತೊಕ್ಕೊಟ್ಟಿನಿಂದ ಮಂಗಳೂರು ಕಡೆಗೆ ಸ್ಕೂಟರ್ ನಲ್ಲಿ ಹೋಗುತ್ತಿದ್ದಾಗ ಘಟನೆ ಸಂಭವಿಸಿದರ. ನೇತ್ರಾವತಿ ಸೇತುವೆಯಲ್ಲಿ ಮೀನಿನ ವಾಹನವೊಂದರ ಚಾಲಕ ಹಠಾತ್ ಬ್ರೇಕ್ ಹಾಕಿದ ಪರಿಣಾಮ ಹಿಂದಿನಿಂದ ಸ್ಕೂಟರ್

ಮೀನಿನ ಲಾರಿಗೆ ಸ್ಕೂಟರ್ ಢಿಕ್ಕಿ; 21ರ ಹರೆಯದ ಯುವಕ ಮೃತ್ಯು Read More »

ಜಿ.ಪಂ. ಸಿಇಓ ನೇತೃತ್ವದಲ್ಲಿ ನಡೆಯಿತು ಆರ್ಯಾಪು ಗ್ರಾ.ಪಂ. ಜಮಾಬಂದಿ ಸಭೆ | ಆಸ್ತಿ ಪರಿಷ್ಕರಣೆ, ಜೆಜೆಎಂ ಯೋಜನೆ ಬಗ್ಗೆ ಮಹತ್ವದ ಚರ್ಚೆ!

ಸಂಪ್ಯ: ಆರ್ಯಾಪು ಗ್ರಾಮ ಪಂಚಾಯತ್ 2022-23ನೇ ಸಾಲಿನ ಜಮಾಬಂದಿ ಸಭೆ ಬುಧವಾರ ಗ್ರಾ.ಪಂ.ನ ನೇತಾಜಿ ಸುಭಾಸ್ ಚಂದ್ರ ಬೋಸ್ ಸಭಾಂಗಣದಲ್ಲಿ ನಡೆಯಿತು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ. ಅವರ ನೇತೃತ್ವದಲ್ಲಿ ಜಮಾಬಂದಿ ನಡೆಯಿತು. ಈ ಸಂದರ್ಭ ಮಾತನಾಡಿದ ಅವರು, ಗ್ರಾಮ ಪಂಚಾಯತ್’ನ ಸ್ವಂತ ಆದಾಯದ ಮೂಲವಾದ ಆಸ್ತಿ ತೆರಿಗೆಗಳನ್ನು ಕಡ್ಡಾಯವಾಗಿ 2 ವರ್ಷಕ್ಕೊಮ್ಮೆ ಪರಿಷ್ಕರಣೆ ಮಾಡಬೇಕು. ಇದರಿಂದ ಸಂಪನ್ಮೂಲ ವೃದ್ಧಿಯಾಗುತ್ತದೆ ಎಂದು ಸಲಹೆ ನೀಡಿದರು. ಇದಕ್ಕೆ ಪ್ರತಿಕ್ರಿಯೆಯಾಗಿ, ಪ್ರತಿ 2 ವರ್ಷಕ್ಕೊಮ್ಮೆ ಆಸ್ತಿ

ಜಿ.ಪಂ. ಸಿಇಓ ನೇತೃತ್ವದಲ್ಲಿ ನಡೆಯಿತು ಆರ್ಯಾಪು ಗ್ರಾ.ಪಂ. ಜಮಾಬಂದಿ ಸಭೆ | ಆಸ್ತಿ ಪರಿಷ್ಕರಣೆ, ಜೆಜೆಎಂ ಯೋಜನೆ ಬಗ್ಗೆ ಮಹತ್ವದ ಚರ್ಚೆ! Read More »

ಪಠಾಣ್ ಕೋಟ್ ದಾಳಿಯ ಮಾಸ್ಟರ್ ಮೈಂಡ್ ಪಾಕಿನಲ್ಲಿ ಹತ್ಯೆ!

ನವದೆಹಲಿ: ಪಠಾಣ್ ಕೋಟ್ ದಾಳಿಯ ಮಾಸ್ಟರ್ ಮೈಂಡ್ ಮತ್ತು ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬನಾದ ಶಾಹಿದ್ ಲತೀಫ್’ನನ್ನು ಪಾಕಿಸ್ತಾನದ ಸಿಯಾಲ್ಕೋಟ್’ನಲ್ಲಿ ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಕೊಂದಿದ್ದಾರೆ. ಶಾಹಿದ್ ಲತೀಫ್ ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ (ಜೆಇಎಂ)ನ ಪ್ರಮುಖ ಸದಸ್ಯ. ಭಾರತದಲ್ಲಿ 16 ವರ್ಷಗಳ ಜೈಲು ಶಿಕ್ಷೆ ಅನುಭವಿಸಿದ ನಂತರ ಲತೀಫ್ ನನ್ನು 2010ರಲ್ಲಿ ವಾಘಾ ಮೂಲಕ ಗಡಿಪಾರು ಮಾಡಲಾಯಿತು. 1994ರ ನವೆಂಬರ್ 12ರಂದು ಆತನನ್ನು ಬಂಧಿಸಲಾಗಿತ್ತು. ಲತೀಫ್ ನನ್ನು ಭಾರತ ಸರ್ಕಾರವು ಭಯೋತ್ಪಾದಕ ಎಂದು ಪಟ್ಟಿ ಮಾಡಿದೆ

ಪಠಾಣ್ ಕೋಟ್ ದಾಳಿಯ ಮಾಸ್ಟರ್ ಮೈಂಡ್ ಪಾಕಿನಲ್ಲಿ ಹತ್ಯೆ! Read More »

ಕಾರಿನ ಗಾಜು ಪುಡಿ ಮಾಡಿ ಕಳ್ಳತನ: ಬಂಧನ

ಸುಬ್ರಹ್ಮಣ್ಯ: ಕಾರಿನ ಗಾಜು ಒಡೆದು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಸುಬ್ರಹ್ಮಣ್ಯ ಪೊಲೀಸರು ಬಂಧಿಸಿದ್ದಾರೆ.ಪ್ರಭಾಕರ ಹೊನ್ನವಳ್ಳಿ ಬಂಧಿತ ಆರೋಪಿ. ಕಳ್ಳತನ ಬೆಳಕಿಗೆ ಬರುತ್ತಿದ್ದಂತೆ ಸುಬ್ರಹ್ಮಣ್ಯ ಪೊಲೀಸ್ ಠಾಣಾಧಿಕಾರಿ ಕಾರ್ತಿಕ್ ಹಾಗೂ ಮುರಳೀಧರ ನಾಯಕ್, ಕರುಣಾಕರ, ಮಹೇಶ್, ಕುಮಾರ್, ಆನಂದ್, ವಿಠ್ಠಲ್ ಬಸವರಾಜ್, ರೋಹಿತ್, ಕೃಷ್ಣ ಸೇರಿದಂತೆ ಎರಡು ತಂಡವನ್ನು ರಚಿಸಿ ಪತ್ತೆಕಾರ್ಯದಲ್ಲಿ ತೊಡಗಿದ್ದರು. ಸುಬ್ರಹ್ಮಣ್ಯ ರೈಲ್ವೇ ನಿಲ್ದಾಣದಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂದಿದ್ದ ಭಕ್ತಾಧಿಯೋರ್ವರ ಕಾರಿನ ಗಾಜು

ಕಾರಿನ ಗಾಜು ಪುಡಿ ಮಾಡಿ ಕಳ್ಳತನ: ಬಂಧನ Read More »

ಬೆಂಗಳೂರು ಕಂಬಳಕ್ಕೆ ನೆರವೇರಿತು ಕರೆಪೂಜೆ

ಬೆಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಕಂಬಳ ಸಮಿತಿ , ಬೆಂಗಳೂರು ತುಳು ಕೂಟ ಹಾಗೂ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಸರ್ವ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ನ. 25ರಂದು ನಡೆಯಲಿರುವ ಬೆಂಗಳೂರು ಕಂಬಳಕ್ಕೆ ಕರೆಪೂಜೆ ಬುಧವಾರ ನಡೆಯಿತು. ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಸೇರಿದಂತೆ ಗಣ್ಯರು ಕರೆಪೂಜೆ ನೆರವೇರಿಸಿದರು. ಪ್ರಮುಖರಾದ ಗುಣರಂಜನ್ ಶೆಟ್ಟಿ, ಮಾಜಿ

ಬೆಂಗಳೂರು ಕಂಬಳಕ್ಕೆ ನೆರವೇರಿತು ಕರೆಪೂಜೆ Read More »

ಭರವಸೆ ಈಡೇರಿಸದಿದ್ದರೆ ರೈತ ಹೋರಾಟ ಅನಿವಾರ್ಯ: ಸಂಜೀವ ಮಠಂದೂರು

ಪುತ್ತೂರು: ಒಂದೆಡೆ ಬರ, ಇನ್ನೊಂದೆಡೆ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ರೈತರಿಗೆ ರಾಜ್ಯ ಸರಕಾರ ನೀಡಿರುವ ಭರವಸೆಗಳು ಹುಸಿಯಾಗಿರುವುದರ ಜತೆಗೆ ರೈತರಿಗೆ ಪಂಗನಾಮ ಹಾಕುವ ಕೆಲಸ ಮಾಡುತ್ತಿದೆ ಎಂದು ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಆರೋಪಿಸಿದ್ದಾರೆ. ಬುಧವಾರ ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿದ ಅವರು, ರೈತರಿಗೆ ನೀಡುತ್ತಿರುವ ಬಡ್ಡಿರಹಿತ ಸಾಲವನ್ನು 3 ಲಕ್ಷ ರೂ.ನಿಂದ 5 ಲಕ್ಷ ರೂ.ಗೆ ಏರಿಕೆ ಹಾಗೂ ಶೇ. 3ರ ಬಡ್ಡಿದರದಲ್ಲಿ ನೀಡುವ ಸಾಲ 10 ಲಕ್ಷ ರೂ.ನಿಂದ 15 ಲಕ್ಷ ರೂ.ಗೆ ಏರಿಕೆ

ಭರವಸೆ ಈಡೇರಿಸದಿದ್ದರೆ ರೈತ ಹೋರಾಟ ಅನಿವಾರ್ಯ: ಸಂಜೀವ ಮಠಂದೂರು Read More »

ಅ. 15ರಿಂದ 26: ‘ಪುತ್ತೂರು ದಸರಾ ಮಹೋತ್ಸವ’

ಪುತ್ತೂರು: ಪುತ್ತೂರು ದಸರಾ ನವದುರ್ಗಾರಾಧನಾ ಸಮಿತಿ ವತಿಯಿಂದ 21ನೇ ವರ್ಷದ ‘ಪುತ್ತೂರು ದಸರಾ ಮಹೋತ್ಸವ’ ಅ. 15ರಿಂದ 26ರ ತನಕ ಸಂಪ್ಯ ಉದಯಗಿರಿ ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ವಿವಿಧ ವೈದಿಕ, ಧಾರ್ಮಿಕ ಸಭಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಸಮಿತಿ ಸಂಚಾಲಕ ಕುಕ್ಕಾಡಿ ತಂತ್ರಿ ಪ್ರೀತಂ ಪುತ್ತೂರಾಯ ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅ. 15ರಂದು ಬೆಳಿಗ್ಗೆ 10ಕ್ಕೆ ಗಣಪತಿ ಹಾಗೂ ನವದುರ್ಗೆಯರ ಪ್ರತಿಷ್ಠೆ ನಡೆದು, ಬಳಿಕ ಕಾರ್ಯಕ್ರಮಗಳಿಗೆ ಆರ್ಯಾಪು ಗ್ರಾಪಂ ಅಧ್ಯಕ್ಷೆ ಗೀತಾ ದೀಪ

ಅ. 15ರಿಂದ 26: ‘ಪುತ್ತೂರು ದಸರಾ ಮಹೋತ್ಸವ’ Read More »

ಅನಿರೀಕ್ಷಿತವಾಗಿ ಪತ್ತೆಯಾಯ್ತು ಕಳವಾಗಿದ್ದ ಬೈಕ್…!!

ಮಂಗಳೂರು: ಸುಮಾರು ಒಂದು ವರ್ಷ ಒಂಬತ್ತು ತಿಂಗಳ ಹಿಂದೆ ಕಳವಾಗಿದ್ದ ಬೈಕೊಂದು ಮತ್ತೆ ಅದರ ಮಾಲಕನಿಗೇ ಕಾಣಸಿಗುವ ಮೂಲಕ ಅವರ ಮುಖದಲ್ಲಿ ಹರ್ಷಕ್ಕೆ ಕಾರಣವಾಗಿದೆ. ಮಂಗಳೂರಿನ ಹಸುರು ದಳ ಎನ್‌ಜಿಒ ಸಂಸ್ಥೆಯ ಸದಸ್ಯರಾಗಿರುವ ನಾಗರಾಜ್‌ ಬಜಾಲ್‌ ಅವರೇ ಪತ್ತೆಯಾದ ಬೈಕ್‌ನ ಮಾಲಕ. 2022ರ ಮಾರ್ಚ್‌ನಲ್ಲಿ ಹಂಪನಕಟ್ಟೆಯ ರೂಪಾ ಹೊಟೇಲ್‌ ಬಳಿ ಪಾರ್ಕ್‌ ಮಾಡಿದ್ದ ಅವರ ಬಜಾಜ್‌ ಅವೆಂಜರ್‌ ಬೈಕ್‌ ಕಳುವಾಗಿತ್ತು. ಈ ಬಗ್ಗೆ ಬಂದರು ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸಿಸಿ ಕೆಮರಾ ಪರಿಶೀಲಿಸಿದಾಗ ಯುವಕನೊಬ್ಬ ಬೈಕ್‌ ಕಳವು

ಅನಿರೀಕ್ಷಿತವಾಗಿ ಪತ್ತೆಯಾಯ್ತು ಕಳವಾಗಿದ್ದ ಬೈಕ್…!! Read More »

ಇಂದಿನ ಕೃಷಿ ಮಾರುಕಟ್ಟೆ ಧಾರಣೆ

ಪುತ್ತೂರು: ಬುಧವಾರ (11-10-2023)ದ ಕೃಷಿ ಮಾರುಕಟ್ಟೆ ಧಾರಣೆ ಈ ರೀತಿ ಇದೆ. ಹೊಸಅಡಿಕೆ 325- 365 ರೂ.. ಹಳೆ ಅಡಿಕೆ 380 -435 ರೂ. ಹಾಗೂ 435-440 ರೂ. (ಗುಣಮಟ್ಟ), ಡಬ್ಬಲ್ ಚೋಲ್ 390 – 475 ರೂ. ಹಾಗೂ 475- 485 ರೂ. (ಗುಣಮಟ್ಟ) ಕಾಳು ಮೆಣಸು ಕೆ.ಜಿ.ಗೆ 315 – 585 ರೂ., ಒಣ ಕೊಕ್ಕೊ 215- 235 ರೂ., ಹಸಿ ಕೊಕ್ಕೊ 53- 58 ರೂ., ಕೊಬ್ಬರಿ 70-73 ರೂ. ರಬ್ಬರ್ ಆರ್.ಎಸ್.ಎಸ್4

ಇಂದಿನ ಕೃಷಿ ಮಾರುಕಟ್ಟೆ ಧಾರಣೆ Read More »

error: Content is protected !!
Scroll to Top