ಸಮಾಜಕ್ಕೆ ನೀಡಿದ ಕೊಡುಗೆಗಳಿಂದ ಕಾರಂತರು ವಿಶ್ವಮಾನ್ಯ | ಡಾ. ಶಿವರಾಮ ಕಾರಂತರ 122ನೇ ಜನ್ಮದಿನಾಚರಣೆ, ಬಾಲವನ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಶಾಸಕ ಅಶೋಕ್ ರೈ

ಪುತ್ತೂರು: ಯಾವುದೇ ವಿಚಾರದಲ್ಲಿ ಆಸಕ್ತಿ ಬಂದಾಗ ಮಾತ್ರ ಅದರ ಮೌಲ್ಯ ತಿಳಿದುಕೊಳ್ಳಲು ಸಾಧ್ಯ. ಈ ನಿಟ್ಟಿನಲ್ಲಿ ಡಾ. ಶಿವರಾಮ ಕಾರಂತರ ವಿಚಾರಧಾರೆಗಳು ಮೌಲ್ಯಯುತವಾಗಿದ್ದು, ಸಮಾಜಕ್ಕೆ ಹಲವಾರು ಕೊಡುಗೆಗಳನ್ನು ನೀಡುವ ಮೂಲಕ ವಿಶ್ವಮಾನ್ಯರಾಗಿದ್ದಾರೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪರ್ಲಡ್ಕ ಡಾ.ಶಿವರಾಮ ಕಾರಂತರ ಬಾಲವನ ಹಾಗೂ ಪುತ್ತೂರು ಸಹಾಯಕ ಆಯುಕ್ತರ ಕಚೇರಿ ಸಂಯುಕ್ತ ಆಶ್ರಯದಲ್ಲಿ ಪರ್ಲಡ್ಕ ಡಾ.ಶಿವರಾಮ ಕಾರಂತ ಬಾಲವನದಲ್ಲಿ ಮಂಗಳವಾರ ನಡೆದ ಡಾ.ಶಿವರಾಮ ಕಾರಂತರ 122ನೇ ಜನ್ಮದಿನೋತ್ಸವ, ಬಾಲವನ […]

ಸಮಾಜಕ್ಕೆ ನೀಡಿದ ಕೊಡುಗೆಗಳಿಂದ ಕಾರಂತರು ವಿಶ್ವಮಾನ್ಯ | ಡಾ. ಶಿವರಾಮ ಕಾರಂತರ 122ನೇ ಜನ್ಮದಿನಾಚರಣೆ, ಬಾಲವನ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಶಾಸಕ ಅಶೋಕ್ ರೈ Read More »

400 ಕೆ.ವಿ. ಕಾಮಗಾರಿ ವಿರೋಧಿಸಿ ಪ್ರತಿಭಟನೆ: ಸ್ಥಳಕ್ಕೆ ಭೇಟಿ ನೀಡಿ ರೈತರಿಗೆ ಧೈರ್ಯ ತುಂಬಿದ ಅರುಣ್ ಕುಮಾರ್ ಪುತ್ತಿಲ

ವಿಟ್ಲ: 400 ಕೆ.ವಿ. ಹೈಟೆನ್ಷನ್ ಮಾರ್ಗದ ಕಾಮಗಾರಿಗೆ ಮುಂದಾಗುತ್ತಿದ್ದ ಘಟನೆಯನ್ನು ಪುಣಚ ಗ್ರಾಮಸ್ಥರು ವಿರೋಧಿಸಿದ್ದು, ಸ್ಥಳಕ್ಕೆ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿದರು. ಅಧಿಕಾರಿಗಳ ಜೊತೆ ಮಾತನಾಡಿದ ಅರುಣ್ ಕುಮಾರ್ ಪುತ್ತಿಲ ಅವರು, ಯಾವುದೇ ಕಾರಣಕ್ಕೂ 400 ಕೆ.ವಿ. ಯೋಜನೆ ಅನುಷ್ಠಾನಕ್ಕೆ ಬಿಡುವುದಿಲ್ಲ. ಆದರೆ ಶಾಂತಿ – ಸುವ್ಯವಸ್ಥೆಗೆ ಧಕ್ಕೆ ಆಗದಂತೆ ನೋಡಿಕೊಳ್ಳಬೇಕು ಎಂದರು. ರೈತರ ಜೊತೆ ಮಾತಕತೆ ನಡೆಸಿದ ಪುತ್ತಿಲ ಅವರು, ಯಾವಾಗಲೂ ರೈತರ ಜೊತೆ ನಾನಿದ್ದೇನೆ ಎಂದು ಭರವಸೆ ತುಂಬಿದರು. 400

400 ಕೆ.ವಿ. ಕಾಮಗಾರಿ ವಿರೋಧಿಸಿ ಪ್ರತಿಭಟನೆ: ಸ್ಥಳಕ್ಕೆ ಭೇಟಿ ನೀಡಿ ರೈತರಿಗೆ ಧೈರ್ಯ ತುಂಬಿದ ಅರುಣ್ ಕುಮಾರ್ ಪುತ್ತಿಲ Read More »

400 ಕೆ.ವಿ. ಹೈಟೆನ್ಷನ್ ಕಾಮಗಾರಿ ಆರಂಭ ಯತ್ನ: ಪ್ರತಿಭಟನೆ | ಸ್ಥಳಕ್ಕಾಗಮಿಸಿದ ಮಾಜಿ ಶಾಸಕ ಸಂಜೀವ ಮಠಂದೂರು | ಮುಂದೇನಾಯ್ತು… ಇಲ್ಲಿದೆ ವರದಿ

ವಿಟ್ಲ: ನಂದಿಕೂರಿನಿಂದ ಕಾಸರಗೋಡಿಗೆ ಹೋಗುವ 400 ಕೆ.ವಿ. ಹೈ ಟೆನ್ಶನ್ ಮಾರ್ಗವನ್ನು ಪುಣಚ ಗ್ರಾಮದ ಬೈರಿಕಟ್ಟೆಯಿಂದ ಕಾಮಗಾರಿ ಆರಂಭ ಮಾಡಲು ಯತ್ನಿಸಿದಾಗ ಪರಿಸರದ ರೈತರು ಪ್ರತಿಭಟಿಸಿದ ಘಟನೆ ಮಂಗಳವಾರ ನಡೆಯಿತು. ತಕ್ಷಣ ಸ್ಥಳಕ್ಕಾಗಮಿಸಿದ ಮಾಜಿ ಶಾಸಕ ಸಂಜೀವ ಮಠಂದೂರು ಅವರು, ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಿ ತಕ್ಷಣ ಕಾಮಗಾರಿ ನಿಲ್ಲಿಸುವಂತೆ ಸೂಚಿಸಿದರು. ಮಾತ್ರವಲ್ಲ, ರೈತರ ಸಭೆ ಕರೆದು ಮಾತುಕತೆ ನಡೆಸುವಂತೆ ತಿಳಿಸಿದರು. ಸ್ಪಂದಿಸಿದ ಜಿಲ್ಲಾಧಿಕಾರಿ, ಕಾಮಗಾರಿಯನ್ನು ತಕ್ಷಣ ನಿಲ್ಲಿಸುವಂತೆ ತಹಸೀಲ್ದಾರ್ ಸೂಚಿಸಿದರು. ಪುತ್ತೂರು ಮಂಡಲ ಬಿಜೆಪಿ ಉಪಾಧ್ಯಕ್ಷ ಹರಿಪ್ರಸಾದ್ ಯಾದವ್,ವಿಟ್ಲ

400 ಕೆ.ವಿ. ಹೈಟೆನ್ಷನ್ ಕಾಮಗಾರಿ ಆರಂಭ ಯತ್ನ: ಪ್ರತಿಭಟನೆ | ಸ್ಥಳಕ್ಕಾಗಮಿಸಿದ ಮಾಜಿ ಶಾಸಕ ಸಂಜೀವ ಮಠಂದೂರು | ಮುಂದೇನಾಯ್ತು… ಇಲ್ಲಿದೆ ವರದಿ Read More »

ಯುದ್ಧಪೀಡಿತ ಇಸ್ರೇಲ್’ನಲ್ಲಿದ್ದಾರೆ 12 ಸಾವಿರ ಕನ್ನಡಿಗರು: ರಕ್ಷಣೆಗಾಗಿ ಹೀಗಿದೆ ವ್ಯವಸ್ಥೆ

ಕಾರವಾರ: ಯುದ್ಧ ಪೀಡಿತ ಇಸ್ರೇಲ್‌ನ ವಿವಿಧ ನಗರಗಳಲ್ಲಿ 12,000ಕ್ಕೂ ಹೆಚ್ಚು ಕನ್ನಡಿಗರಿದ್ದು, ಎಲ್ಲರೂ ಸುರಕ್ಷಿತರಾಗಿದ್ದಾರೆಂದು ತಿಳಿದುಬಂದಿದೆ. ಇಸ್ರೇಲ್’ನಲ್ಲಿ ಸಿಲುಕಿರುವ ಕನ್ನಡಿಗರಿಗೆ ಭಾರತ ಮತ್ತು ಇಸ್ರೇಲಿ ಸರ್ಕಾರಗಳು ಬೆಂಬಲ ನೀಡುತ್ತಿದ್ದು, ಭಾರತೀಯ ರಾಯಭಾರ ಕಚೇರಿ ಟೋಲ್-ಫ್ರೀ ಸಂಖ್ಯೆಯನ್ನೂ ನೀಡಿದೆ. ಯಾವುದೇ ತುರ್ತು ಸಂದರ್ಭದಲ್ಲಿ ಈ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ. ಸುರಕ್ಷಿತ ಸ್ಥಳದಲ್ಲಿರುವ ಎಲ್ಲರೂ ತಮ್ಮ ತಮ್ಮ ಮನೆಗಳಿಗೆ ಕರೆ ಮಾಡಿ ತಾವು ಸುರಕ್ಷಿತರಾಗಿರುವ ಬಗ್ಗೆ ಸಂಬಂಧಿಕರಿಗೆ ಮಾಹಿತಿ ನೀಡಿದ್ದಾರೆಂದು ತಿಳಿದುಬಂದಿದೆ. ಟೆಲ್ ಅವೀವ್’ನಲ್ಲಿರುವ ಕನ್ನಡಿಗ ದೀಪಕ್ ಪಿಂಟೋ ಅವರು ದೂರವಾಣಿ

ಯುದ್ಧಪೀಡಿತ ಇಸ್ರೇಲ್’ನಲ್ಲಿದ್ದಾರೆ 12 ಸಾವಿರ ಕನ್ನಡಿಗರು: ರಕ್ಷಣೆಗಾಗಿ ಹೀಗಿದೆ ವ್ಯವಸ್ಥೆ Read More »

ಬೋಟ್’ಗೆ ಆಕಸ್ಮಿಕ ಬೆಂಕಿ: ಕಾರ್ಯಾಚರಣೆಯಿಂದ ತಪ್ಪಿದ ಅನಾಹುತ!

ಮಂಗಳೂರು: ಮೀನುಗಾರಿಕಾ ಬೋಟ್’ಗೆ ಬೆಂಕಿ ತಗುಲಿದ ಘಟನೆ ಮಂಗಳೂರಿನ ಧಕ್ಕೆಯಲ್ಲಿ ಅ. 10ರ ಮುಂಜಾನೆ ನಡೆದಿದೆ. ಬೆಳಿಗ್ಗೆ ಸುಮಾರು 5 ಗಂಟೆ ವೇಳೆಗೆ ಘಟನೆ ಸಂಭವಿಸಿದ್ದು, ಆಕಸ್ಮಿಕವಾಗಿ ಘಟನೆ ನಡೆದಿದೆ ಎನ್ನಲಾಗಿದೆ. ಪಾಂಡೇಶ್ವರ ಅಗ್ನಿಶಾಮಕ ದಳ ಹಾಗೂ ಕದ್ರಿ ಅಗ್ನಿಶಾಮಕ ದಳದ ಕಾರ್ಯಾಚರಣೆಯಿಂದಾಗಿ ಪಕ್ಕದ ಇತರೆ ಬೋಟ್’ಗಳಿಗೆ ಬೆಂಕಿ ಹರಡುವುದು ತಪ್ಪಿದೆ.

ಬೋಟ್’ಗೆ ಆಕಸ್ಮಿಕ ಬೆಂಕಿ: ಕಾರ್ಯಾಚರಣೆಯಿಂದ ತಪ್ಪಿದ ಅನಾಹುತ! Read More »

ಇಂದಿನ ಕೃಷಿ ಮಾರುಕಟ್ಟೆ ಧಾರಣೆ

ಪುತ್ತೂರು: ಮಂಗಳವಾರ (10-10-2023)ದ ಕೃಷಿ ಮಾರುಕಟ್ಟೆ ಧಾರಣೆ ಈ ರೀತಿ ಇದೆ. ಹೊಸಅಡಿಕೆ 325- 365 ರೂ.. ಹಳೆ ಅಡಿಕೆ 380 -447 ರೂ. ಹಾಗೂ 448-450 ರೂ. (ಗುಣಮಟ್ಟ), ಡಬ್ಬಲ್ ಚೋಲ್ 390 – 480 ರೂ. ಹಾಗೂ 481- 485 ರೂ. (ಗುಣಮಟ್ಟ). ಕಾಳು ಮೆಣಸು ಕೆ.ಜಿ.ಗೆ 315 – 585 ರೂ., ಒಣ ಕೊಕ್ಕೊ 215- 235 ರೂ., ಹಸಿ ಕೊಕ್ಕೊ 53- 58 ರೂ., ಕೊಬ್ಬರಿ 70-73 ರೂ. ರಬ್ಬರ್ ಆರ್.ಎಸ್.ಎಸ್4

ಇಂದಿನ ಕೃಷಿ ಮಾರುಕಟ್ಟೆ ಧಾರಣೆ Read More »

ವಿಶ್ವಕರ್ಮ ಕುಲಶಾಸ್ತ್ರೀಯ ಅಧ್ಯಯನದ ಸಮಾಲೋಚನಾ ಸಭೆ | ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ಆರೋಗ್ಯ, ರಾಜಕೀಯ ಸ್ಥಿತಿ ದಾಖಲು

ಬೆಳ್ತಂಗಡಿ: ಕರ್ನಾಟಕ ಸರಕಾರದ ಆದೇಶದ ಅನ್ವಯ ವಿಶ್ವಕರ್ಮ ಮತ್ತು ಅದರ ಉಪಜಾತಿಗಳ ಕುಲಶಾಸ್ತ್ರೀಯ ಅಧ್ಯಯನದ ಸಮಾಲೋಚನಾ ಸಭೆ ಬೆಳ್ತಂಗಡಿ ಶ್ರೀ ವಿಶ್ವಕರ್ಮಭ್ಯುದಯ ಸಭಾ ಭವನದಲ್ಲಿ ಜರಗಿತು. ಮೈಸೂರು ವಿಶ್ವವಿದ್ಯಾಲಯದ ನೀತಿ ಅಧ್ಯಯನ ಕೇಂದ್ರದ ಸಹಾಯಕ ಸಂಶೋಧಕ ಡಾ.ಮಹಾದೇವ ಮತ್ತು ಡಾ. ಕೃಷ್ಣಮೂರ್ತಿ ಅವರು ಅಧ್ಯಯನದ ಉದ್ದೇಶ ಮತ್ತು ಸ್ವರೂಪದ ಬಗ್ಗೆ ಮಾಹಿತಿ ನೀಡಿ, ವಿಶ್ವಕರ್ಮ ಸಮುದಾಯದ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ಆರೋಗ್ಯ ಮತ್ತು ರಾಜಕೀಯ ಸ್ಥಿತಿಗಳ ಹೇಳಿಕೆಗಳನ್ನು ದಾಖಲೀಕರಣ ಮಾಡಿಕೊಂಡರು. ವೈಯಕ್ತಿಕ ಪ್ರಶ್ನಾವಳಿ ಮತ್ತು ಸೂಕ್ತ

ವಿಶ್ವಕರ್ಮ ಕುಲಶಾಸ್ತ್ರೀಯ ಅಧ್ಯಯನದ ಸಮಾಲೋಚನಾ ಸಭೆ | ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ಆರೋಗ್ಯ, ರಾಜಕೀಯ ಸ್ಥಿತಿ ದಾಖಲು Read More »

ಕೊಡಗು-ದಕ್ಷಿಣ ಕನ್ನಡ ಗೌಡ ಸಮಾಜದ ಅಧ್ಯಕ್ಷರಾಗಿ ರವೀಂದ್ರನಾಥ್ ಕೇವಳ, ಉಪಾಧ್ಯಕ್ಷರಾಗಿ ಪಾಣತ್ತಲೆ ಪಳಂಗಪ್ಪಂ ಆಯ್ಕೆ

ಬೆಂಗಳೂರು: ಕೊಡಗು ಹಾಗೂ ದಕ್ಷಿಣ ಕನ್ನಡ ಗೌಡ ಸಮಾಜದ 2023-25 ನೇ ಸಾಲಿನ ಅಧ್ಯಕ್ಷರಾಗಿ ರವೀಂದ್ರನಾಥ್ ಕೇವಳ ಹಾಗೂ ಉಪಾಧ್ಯಕ್ಷರಾಗಿ ಪಾಣತ್ತಲೆ ಪಳಂಗಪ್ಪಂನವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬೆಂಗಳೂರಿನಲ್ಲಿ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು. ಗೌರವ ಕಾರ್ಯದರ್ಶಿಗಳಾಗಿ ನಾಗೇಶ್ ಕುಮಾರ್ ಕಲ್ಲುಮುಟ್ಲು, ಖಜಾಂಜಿಯಾಗಿ ಕುಂಭಗೌಡನ ಸೋಮಣ್ಣ, ಜಂಟಿ ಕಾರ್ಯದರ್ಶಿಯಾಗಿ ನಾಗೇಶ್ ಬಂಟೋಡಿ ಉಳುವಾರನ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕೊಡಗು-ದಕ್ಷಿಣ ಕನ್ನಡ ಗೌಡ ಸಮಾಜದ ಅಧ್ಯಕ್ಷರಾಗಿ ರವೀಂದ್ರನಾಥ್ ಕೇವಳ, ಉಪಾಧ್ಯಕ್ಷರಾಗಿ ಪಾಣತ್ತಲೆ ಪಳಂಗಪ್ಪಂ ಆಯ್ಕೆ Read More »

ವಿದ್ಯಾಭಾರತಿ ಕ್ರೀಡಾಕೂಟ : ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರು: ವಿದ್ಯಾಭಾರತಿ ವತಿಯಿಂದ ತೆಲಂಗಾಣ ಹೈದರಾಬಾದ್ ಶ್ರೀ ಸರಸ್ವತಿ ವಿದ್ಯಾ ಪೀಠಂ ಶಾರದಾ ಧಾಮದಲ್ಲಿ ನಡೆದ ದಕ್ಷಿಣ  ಮಧ್ಯ ಕ್ಷೇತ್ರೀಯ ಕ್ರೀಡಾಕೂಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲಾ ವಿದ್ಯಾರ್ಥಿಗಳಾದ ಕೀರ್ತಿ  ಎತ್ತರ ಜಿಗಿತ (ಪ್ರಥಮ) ಗುಣಶ್ರೀ 80ಮೀ ಹರ್ಡಲ್ಸ್ (ಪ್ರಥಮ), ವಿಕೃತಿ ಕುಮಾರಿ ನಡಿಗೆಯಲ್ಲಿ ದ್ವಿತೀಯ ಹಾಗೂ 14 ರ ವಯೋಮಾನದ ಬಾಲಕಿಯರ  4*100  ಮೀ ರಿಲೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ದಾಮೋದರ್,

ವಿದ್ಯಾಭಾರತಿ ಕ್ರೀಡಾಕೂಟ : ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ Read More »

ಕಾಲೇಜು ವಿದ್ಯಾರ್ಥಿ ವೀಕ್ಷಿತ್ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ಇಲ್ಲಿಯ ಕಾಲೇಜೊಂದರ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನಗರದ ಖಾಸಗಿ ಕಾಲೋಜೊಂದರ ವಿದ್ಯಾರ್ಥಿ, ಕುರಿಯ ಪಡ್ಪು ನಿವಾಸಿ ವೀಕ್ಷಿತ್ (17) ಮೃತಪಟ್ಟ ವಿದ್ಯಾರ್ಥಿ. ಘಟನೆ ನಡೆಯುತ್ತಿದ್ದಂತೆ ಸ್ಥಳೀಯ ಬಿಜೆಪಿ ಮುಖಂಡ ಬೂಡಿಯಾರ್ ರಾಧಾಕೃಷ್ಣ ರೈ ಸ್ಥಳಕ್ಕೆ ಭೇಟಿ ನೀಡಿ ಗ್ರಾಮಾಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ಕಾರಣಗಳು ತಿಳಿದು ಬಂದಿಲ್ಲ. ವೀಕ್ಷಿತ್ ತಂದೆ, ತಾಯಿ, ಸಹೋದರ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಕಾಲೇಜು ವಿದ್ಯಾರ್ಥಿ ವೀಕ್ಷಿತ್ ನೇಣು ಬಿಗಿದು ಆತ್ಮಹತ್ಯೆ Read More »

error: Content is protected !!
Scroll to Top