ಬನ್ನೂರು ಕಳವು ಪ್ರಕರಣದ ಎರಡನೇ ಆರೋಪಿ ಬಂಧನ

ಪುತ್ತೂರು: ಐದು ತಿಂಗಳ ಹಿಂದೆ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. 5 ತಿಂಗಳ ಹಿಂದೆ ಬನ್ನೂರು ಆನೆಮಜಲು ನಿವಾಸಿ ಮೌನೇಶ್ ಎಂಬವರ ಮನೆಯ ಬೀಗ ಮುರಿದು ಒಳ ಪ್ರವೇಶಿಸಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಬಂಧಿಸಿದ್ದರು. ಆತನ ವಿಚಾರಣೆ ವೇಳೆ ಇನ್ನೋರ್ವ ಆರೋಪಿ ಕೃತ್ಯದಲ್ಲಿ ಭಾಗಿಯಾಗಿದ್ದಾನೆ ಎಂಬ  ಮಾಹಿತಿಯಂತೆ ಇನ್ನೋರ್ವ ಆರೋಪಿಯನ್ನು ಮೈಸೂರಿನಲ್ಲಿ ವಶಕ್ಕೆ ಪಡೆದು ಕೊಂಡಿರುವುದಾಗಿ ತಿಳಿದು ಬಂದಿದೆ.

ಬನ್ನೂರು ಕಳವು ಪ್ರಕರಣದ ಎರಡನೇ ಆರೋಪಿ ಬಂಧನ Read More »

ಕೃಷಿ ಜಮೀನು ಅತಿಕ್ರಮಣ | ಆದಿವಾಸಿ ಬುಡಕಟ್ಟು ಮಲೆಕುಡಿಯರಿಂದ ಆರೋಪ

ಸುಬ್ರಹ್ಮಣ್ಯ: ಗ್ರಾಮದ ದೇವರಗದ್ದೆ ನಿವಾಸಿ ಮಲೆಕುಡಿಯ ಜನಾಂಗದ ವ್ಯಕ್ತಿಯೊಬ್ಬರಿಗೆ ಸುಬ್ರಹ್ಮಣ್ಯ ದೇವಸ್ಥಾನದಿಂದ ನೀಡಿದ ಜಮೀನನ್ನು ತನ್ನ ಹೆಸರಿಗೆ ಆರ್ ಟಿಸಿ ಮಾಡಿಕೊಂಡಿದ್ದು, ಈ ಕುರಿತು ಭೂಮಾಪನ ಇಲಾಖೆಯಿಂದ ಸರ್ವೇ ಮಾಡಿ ಸೂಕ್ತ ನ್ಯಾಯ ನೀಡದಿರುವುದು ಖಂಡನೀಯ ಎಂದು ಬಿರ್ಸಾಮುಂಡ ಟ್ರೈಬಲ್ ಕಮ್ಯುನಿಟಿ ಡೆವಲಪ್ಮೆಂಟ್ ಟ್ರಸ್ಟ್ ನ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಭಾಸ್ಕರ್ ಬೆಂಡೋಡಿ ಆರೋಪಿಸಿದ್ದಾರೆ. ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸುಬ್ರಹ್ಮಣ್ಯ ಗ್ರಾಮದ ದೇವರಗದ್ದೆ ಸರ್ವೇ ನಂಬರ್ 101/1 ರಲ್ಲಿ ಸುಮಾರು 60 ವರ್ಷಕ್ಕೂ ಮೇಲ್ಪಟ್ಟು

ಕೃಷಿ ಜಮೀನು ಅತಿಕ್ರಮಣ | ಆದಿವಾಸಿ ಬುಡಕಟ್ಟು ಮಲೆಕುಡಿಯರಿಂದ ಆರೋಪ Read More »

ಬೈಕ್‍ ಗೆ ಟಿಪ್ಪರ್ ಡಿಕ್ಕಿ : ಬೈಕ್ ಸವಾರ ಸಚಿನ್ ಕುಮಾರ್ ಆಚಾರ್ಯ ಸ್ಥಳದಲ್ಲೇ ಮೃತ್ಯು

ಕೈಕಂಬ: ಬೈಕ್‍ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು-ಮೂಡಬಿದ್ರೆ ರಾಷ್ಟ್ರೀಯ ಹೆದ್ದಾರಿ 169 ರ ಗಂಜಿಮಠ ಮುಚ್ಚಾರು ಕ್ರಾಸ್ ನಲ್ಲಿ ನಡೆದಿದೆ. ಗುರುಪುರ ಹೊಸಮನೆ ನಿವಾಸಿ, ಎಚ್‍ಡಿಎಫ್ ಸಿ ಉದ್ಯೋಗಿ ಸಚಿನ್ ಕುಮಾರ್ ಆಚಾರ್ಯ (33) ಮೃತಪಟ್ಟವರು. ಸಚಿನ್ ಸಂಜೆ ಕೆಲಸ ಮುಗಿಸಿ ಗುರುಪುರಕ್ಕೆ ಬೈಕ್‍ ನಲ್ಲಿ ಬರುತ್ತಿದ್ದ ಸಂದರ್ಭ ಬೈಕನ್ನು ಓವರ್ ಟೇಕ್ ಮಾಡುವ ಭರದಲ್ಲಿ ಟಿಪ್ಪರ್ ಡಿಕ್ಕಿ ಹೊಡೆದಿದೆ. ರಸ್ತೆಗೆ ಬಿದ್ದ ಸಚಿನ್ ನ ತಲೆಗೆ ಗಂಭೀರ

ಬೈಕ್‍ ಗೆ ಟಿಪ್ಪರ್ ಡಿಕ್ಕಿ : ಬೈಕ್ ಸವಾರ ಸಚಿನ್ ಕುಮಾರ್ ಆಚಾರ್ಯ ಸ್ಥಳದಲ್ಲೇ ಮೃತ್ಯು Read More »

ರಾಷ್ಟ್ರ ಭಕ್ತಿಯೊಂದಿಗೆ ಧರ್ಮ ಸಂರಕ್ಷಣೆ ಉಳಿವಿನ ಹೋರಾಟಕ್ಕೆ  ಹಿಂದೂ ಸಮಾಜ ಮುನ್ನುಗ್ಗಬೇಕಾಗಿದೆ | ಶೌರ್ಯ ಜಾಗರಣ ರಥಯಾತ್ರೆಯ ಬೃಹತ್ ಹಿಂದೂ ಶೌರ್ಯ ಸಂಗಮದಲ್ಲಿ ಸು.ರಾಮಣ್ಣ

ಪುತ್ತೂರು: ರಾಷ್ಟ್ರ ಭಕ್ತಿಯೊಂದಿಗೆ ಧರ್ಮ ಸಂರಕ್ಷಣೆ ಉಳಿವಿನ ಹೋರಾಟಕ್ಕೆ  ಹಿಂದೂ ಸಮಾಜ ಮುನ್ನುಗ್ಗಬೇಕಾಗಿದೆ. ರಾಷ್ಟ್ರೀಯ ಗ್ರಂಥ ರಾಮಾಯಣ ಆಗಿರುವ ಹಿನ್ನಲೆಯಲ್ಲಿ  ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮನ ಮಂದಿರ ರಾಷ್ಟ್ರ ಮಂದಿರವಾಗುವ ಜತೆಗೆ ರಾಷ್ಟ್ರೀಯ ತೀರ್ಥ ಕ್ಷೇತ್ರವಾಗಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಜ್ಯೇಷ್ಠ ಪ್ರಚಾರಕ್ ಸು. ರಾಮಣ್ಣ ಹೇಳಿದರು. ಅವರು ಶನಿವಾರ ಕಿಲ್ಲೆಮೈದಾನದಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ವತಿಯಿಂದ ನಡೆದ ಶೌರ್ಯ ಜಾಗರಣ ರಥಯಾತ್ರೆಯ ಅಂಗವಾಗಿ ಬೃಹತ್ ಹಿಂದೂ ಶೌರ್ಯ ಸಂಗಮದ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಿದರು.

ರಾಷ್ಟ್ರ ಭಕ್ತಿಯೊಂದಿಗೆ ಧರ್ಮ ಸಂರಕ್ಷಣೆ ಉಳಿವಿನ ಹೋರಾಟಕ್ಕೆ  ಹಿಂದೂ ಸಮಾಜ ಮುನ್ನುಗ್ಗಬೇಕಾಗಿದೆ | ಶೌರ್ಯ ಜಾಗರಣ ರಥಯಾತ್ರೆಯ ಬೃಹತ್ ಹಿಂದೂ ಶೌರ್ಯ ಸಂಗಮದಲ್ಲಿ ಸು.ರಾಮಣ್ಣ Read More »

ಪುತ್ತೂರು: ನನ್ನ ಒಂದು ಕಣ್ಣು ಸದಾ ಬಡವರ ಮೇಲಿರುತ್ತದೆ | ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಸಿಕ ಸಭೆಯಲ್ಲಿ ಅಶೋಕ್ ರೈ

ಪುತ್ತೂರು: ಬಡವರ ಸೇವೆ ಮಾಡಲು ಉತ್ತಮ ಅವಕಾಶ ಸಿಕ್ಕಿದೆ. ಪ್ರತಿಯೊಂದು ಕಡೆಗಳಲ್ಲೂ ಬಡವರಿಗೆ ನಾವು ಸಹಾಯ ಮಾಡುವ ಮೂಲಕ ಪಕ್ಷವನ್ನು ಬೆಳಸಬೇಕು. ನನ್ನ ಒಂದು ಕಣ್ಣು ಸದಾ ಬಡವರ ಮೇಲೆಯೇ ಇರುತ್ತದೆ ಎಂದು  ಶಾಸಕ ಅಶೋಕ್ ರೈ ಹೇಳಿದರು. ಅವರು ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಮಾಸಿಕ ಸಭೆಯಲ್ಲಿ ಮಾತನಾಡಿದರು. ಸರಕಾರದ ಐದು ಗ್ಯಾರಂಟಿ ಯೋಜನೆ ಕಾಂಗ್ರೆಸ್ ನ ಯೋಜನೆ ಎಂದು ಮನವರಿಕೆ ಮಾಡಿಕೊಡುವ ಕೆಲಸವನ್ನು ಪಕ್ಷದ ಪ್ರತಿಯೊಬ್ಬರೂ ಮಾಡಬೇಕು. ಹಾಗದಲ್ಲಿ ಮಾತ್ರ

ಪುತ್ತೂರು: ನನ್ನ ಒಂದು ಕಣ್ಣು ಸದಾ ಬಡವರ ಮೇಲಿರುತ್ತದೆ | ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಸಿಕ ಸಭೆಯಲ್ಲಿ ಅಶೋಕ್ ರೈ Read More »

ವಿಶ್ವ ಹಿಂದೂ ಪರಿಷತ್, ಬಜರಂಗದಳ 60ನೇ ವರ್ಷಕ್ಕೆ ಪಾದಾರ್ಪಣೆ | ಪುತ್ತೂರಿನಲ್ಲಿ ಶೌರ್ಯ ಜಾಗರಣ ರಥಯಾತ್ರೆ, ಬೃಹತ್ ಹಿಂದೂ ಶೌರ್ಯ ಸಂಗಮ

ಪುತ್ತೂರು: ವಿಶ್ವ ಹಿಂದೂ ಪರಿಷತ್, ಬಜರಂಗದಳ 60ನೇ ವರ್ಷಕ್ಕೆ ಪಾದಾರ್ಪಣೆ ಅಂಗವಾಗಿ ಶೌರ್ಯ ಜಾಗರಣ ರಥಯಾತ್ರೆ ಹಾಗೂ ಬೃಹತ್ ಹಿಂದೂ ಶೌರ್ಯ ಸಂಗಮ ಶನಿವಾರ ಸಂಜೆ ಪುತ್ತೂರಿನಲ್ಲಿ ನಡೆಯಿತು. ಸನಾತನ ಧರ್ಮವನ್ನು ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸುವ, ಸಮಸ್ತ ಹಿಂದೂಗಳನ್ನು ಜಾಗೃತಗೊಳಿಸುವ ನಿಟ್ಟಿನಲ್ಲಿ 1964 ರಲ್ಲಿ ಸ್ಥಾಪನೆಗೊಂಡ ವಿಶ್ವ ಹಿಂದೂ ಪರಿಷತ್  ಧರ್ಮೋ ರಕ್ಷತಿ ರಕ್ಷಿತಃ ಎಂಬ ಧ್ಯೇಯವಾಕ್ಯದೊಂದಿಗೆ ೬೦ ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದ್ದು, ಸೆ.25 ರಂದು ಚಿತ್ರದುರ್ಗದಿಂದ ಹೊರಟ ರಥಯಾತ್ರೆ ಅ.7 ಶನಿವಾರ  ಸುಬ್ರಹ್ಮಣ್ಯ,

ವಿಶ್ವ ಹಿಂದೂ ಪರಿಷತ್, ಬಜರಂಗದಳ 60ನೇ ವರ್ಷಕ್ಕೆ ಪಾದಾರ್ಪಣೆ | ಪುತ್ತೂರಿನಲ್ಲಿ ಶೌರ್ಯ ಜಾಗರಣ ರಥಯಾತ್ರೆ, ಬೃಹತ್ ಹಿಂದೂ ಶೌರ್ಯ ಸಂಗಮ Read More »

ಕೊಣಾಜೆ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಆತಂಕದಲ್ಲಿ ನಾಗರಿಕರು

ಕೊಣಾಜೆ: ಕೊಣಾಜೆ ಸಮೀಪದ ನಡುಪದವಿನ ಪರಿಸರದಲ್ಲಿ ಗುರುವಾರ ರಾತ್ರಿ ಚಿರತೆಯೊಂದು ಪ್ರತ್ಯಕ್ಷಗೊಂಡ ಬಗ್ಗೆ ವರದಿಯಾಗಿದ್ದು, ಈ ಭಾಗದ ನಾಗರಿಕರು ಆತಂಕಗೊಂಡಿದ್ದಾರೆ. ನಡುಪದವು ಮಸೀದಿ ಸಮೀಪ ಚಿರತೆಯೊಂದು ರಸ್ತೆಯ ಒಂದು ಬದಿಯಿಂದ‌ ಮತ್ತೊಂದು ಭಾಗಕ್ಕೆ ಜಿಗಿದು ಓಡಿರುವುದನ್ನು‌ ಆಸೀಫ್ ಎನ್ನುವವರು ನೋಡಿದ್ದು ಬಳಿಕ ಪರಿಸರದವರಲ್ಲಿ ತಿಳಿಸಿದ್ದರು. ನಂತರ ಸುಮಾರು 9.30ರ ವೇಳೆಗೆ ನಡುಪದವು ಬಾಡಿಗೆ ಮನೆಯಲ್ಲಿ ವಾಸವಾಗಿರುವ ಕಾಲೇಜೊಂದರ ಪ್ರಾಧ್ಯಾಪಕ ಚೇತನ್ ಎನ್ನುವವರು ಊಟ ಮುಗಿಸಿ ವಾಕಿಂಗ್ ಹೋಗುತ್ತಿದ್ದ ವೇಳೆ ಇಲ್ಲೇ ಸಮೀಪದ ರಸ್ತೆಯಲ್ಲಿ ಸ್ಕೂಟರೊಂದು ಬರುತ್ತಿದ್ದಾಗ ಅದರ

ಕೊಣಾಜೆ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಆತಂಕದಲ್ಲಿ ನಾಗರಿಕರು Read More »

ಬೆಂಗಳೂರು: ಹೊತ್ತಿ ಉರಿದ ಪಟಾಕಿ ಅಂಗಡಿಗಳು, 3 ಸಾವು

ಬೆಂಗಳೂರು: ಪಟಾಕಿ ಅನ್’ಲೋಡ್ ಮಾಡುತ್ತಿದ್ದ ವೇಳೆ ಪಟಾಕಿ ಅಂಗಡಿಗಳಿಗೆ ಬೆಂಕಿ ಹೊತ್ತಿಕೊಂಡು, 3 ಸಾವನ್ನಪ್ಪಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ವರದಿಯಾಗಿದೆ. ನವೀನ್ ಎಂಬುವವರಿಗೆ ಸೇರಿದ ಪಟಾಕಿ ಅಂಗಡಿಯಲ್ಲಿ ಈ ಅವಘಡ ಸಂಭವಿಸಿದೆ. ಲಾರಿಯಿಂದ ಪಟಾಕಿ ಅನ್ ಲೋಡ್ ಮಾಡುವಾಗ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಈ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆ ಅಕ್ಕಪಕ್ಕದ ಅಂಗಡಿಗಳಿಗೂ ವ್ಯಾಪಿಸಿದ್ದು, 4-5 ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಅಂಗಡಿಯ ಎದುರು ನಿಲ್ಲಿಸಿದ್ದ 3 ಬೈಕ್’ಗಳು

ಬೆಂಗಳೂರು: ಹೊತ್ತಿ ಉರಿದ ಪಟಾಕಿ ಅಂಗಡಿಗಳು, 3 ಸಾವು Read More »

ಪ್ಯಾಲೆಸ್ತೀನ್ ಮೇಲೆ ವಾಯುದಾಳಿ ಆರಂಭಿಸಿದ ಇಸ್ರೇಲ್ | ‘ಐರನ್ ಸ್ವೋರ್ಡ್ಸ್’ ತಿರುಗೇಟಿಗೆ ಇಟ್ಟಿರುವ ಹೆಸರು

ಜೆರುಸಲೇಂ: ಹಮಾಸ್ ರಾಕೆಟ್ ದಾಳಿ ಆರಂಭಿಸಿದ ಕೆಲವೇ ಹೊತ್ತಿನಲ್ಲಿ ಇಸ್ರೇಲ್ ತಿರುಗೇಟು ನೀಡಲು ಸಿದ್ಧವಾಗಿದೆ. ಪ್ಯಾಲೆಸ್ತೇನೆ ಮೇಲೆ ಯುದ್ಧ ಸಾರಿದ್ದೇವೆ ಹಾಗೂ ಗೆದ್ದೇ ತೀರುತ್ತೇವೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸಂದೇಶ ರವಾನಿಸಿದ್ದಾರೆ. ಗಾಜಾಪಟ್ಟಿಯಲ್ಲಿರುವ ಹಮಾಸ್‌ ಕಟ್ಟಡಗಳ ಮೇಲೆ ಇಸ್ರೇಲ್‌ನ ರಾಕೆಟ್‌ಗಳು ದಾಳಿ ನಡೆಸಿವೆ. ಸುಮಾರು 12ಕ್ಕೂ ಅಧಿಕ ರಾಕೆಟ್‌ಗಳ ಮೂಲಕ ಹಮಾಸ್‌’ಗೆ ಇಸ್ರೇಲ್‌ ತಕ್ಕ ಪಾಠ ಕಲಿಸಿದೆ. ಹಮಾಸ್‌ ಕಟ್ಟಡಗಳ ಮೇಲೆ ರಾಕೆಟ್‌ಗಳು ದಾಳಿ ನಡೆಸುವ, ಅವುಗಳನ್ನು ಉಡಾಯಿಸುವ ವಿಡಿಯೊಗಳು ಲಭ್ಯವಾಗಿವೆ. ಇಸ್ರೇಲ್‌ ಹೇಗೆ

ಪ್ಯಾಲೆಸ್ತೀನ್ ಮೇಲೆ ವಾಯುದಾಳಿ ಆರಂಭಿಸಿದ ಇಸ್ರೇಲ್ | ‘ಐರನ್ ಸ್ವೋರ್ಡ್ಸ್’ ತಿರುಗೇಟಿಗೆ ಇಟ್ಟಿರುವ ಹೆಸರು Read More »

ಉಪ್ಪಿನಂಗಡಿಯಲ್ಲಿ ಶೌರ್ಯ ಜಾಗರಣಾ ರಥಕ್ಕೆ ಸ್ವಾಗತ

ಪುತ್ತೂರು: ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್’ನ 60ನೇ ವರ್ಷದ ಅಂಗವಾಗಿ ತಾಲೂಕಿಗೆ ಆಗಮಿಸಿದ ಶೌರ್ಯ ಜಾಗರಣಾ ರಥಕ್ಕೆ ಉಪ್ಪಿನಂಗಡಿಯಲ್ಲಿ ಸ್ವಾಗತ ಕೋರಲಾಯಿತು. ಬಜರಂಗದಳ, ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ರಥಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ತಾಲೂಕಿಗೆ ಬರ ಮಾಡಿಕೊಂಡರು. ಉಪ್ಪಿನಂಗಡಿಯಿಂದ ಪುತ್ತೂರಿಗೆ ಆಗಮಿಸುವ ರಥಕ್ಕೆ ಬೊಳುವಾರಿನಲ್ಲಿ ಸ್ವಾಗತಿಸಲಾಗುವುದು. ಬಳಿಕ ಕಿಲ್ಲೆ ಮೈದಾನದವರೆಗೆ ಶೋಭಾಯಾತ್ರೆ ನಡೆದು, ಹಿಂದೂ ಶೌರ್ಯ ಸಂಗಮ ನಡೆಯಲಿದೆ.

ಉಪ್ಪಿನಂಗಡಿಯಲ್ಲಿ ಶೌರ್ಯ ಜಾಗರಣಾ ರಥಕ್ಕೆ ಸ್ವಾಗತ Read More »

error: Content is protected !!
Scroll to Top