ನಗರಸಭಾ ವ್ಯಾಪ್ತಿಯಲ್ಲಿ ಬಾಕಿ ಇರುವ ಉದ್ಯಮ ಪರವಾನಿಗೆ, ತೆರಿಗೆ, ನೀರಿನ ಶುಲ್ಕ ವಸೂಲಾತಿಗೆ ತಮಟೆ ಬಡಿದು ಚಾಲನೆ | ಸಿಬ್ಬಂದಿಗಳಿಂದ ಮನೆ ಮನೆ ಭೇಟಿ ನೀಡಿ ನೋಟೀಸ್ ಮೂಲಕ ಎಚ್ಚರಿಕೆ

ಪುತ್ತೂರು: ನಗರಸಭೆ ವ್ಯಾಪ್ತಿಯಲ್ಲಿ ಕಟ್ಟಡ ತೆರಿಗೆ, ಉದ್ಯಮ ಪರವಾನಿಗೆ, ನೀರಿನ ಶುಲ್ಕ ಇತ್ಯಾದಿ ತೆರಿಗೆಗಳು ಬಾಕಿ ಇರುವ ಹಿನ್ನೆಲೆಯಲ್ಲಿ ನಗರಸಭೆಯಿಂದ 31 ವಾರ್ಡ್‌ಗಳಲ್ಲಿ 15 ದಿನಗಳ ತೆರಿಗೆ ವಸೂಲಾತಿ ಆಂದೋಲನಕ್ಕೆ ಗುರುವಾರ ಚಾಲನೆ ನೀಡಲಾಯಿತು. ನಗರಸಭೆಯ ಪ್ರತಿ ವಾರ್ಡ್‌ಗಳಿಗೂ ನಗರಸಭೆ ಸಿಬ್ಬಂದಿಗಳು ಮನೆ ಮನೆಗೆ ತೆರಳಿ ಬಾಕಿದಾರರಿಗೆ ನೋಟೀಸ್ ನೀಡಿ ಎಚ್ಚರಿಕೆ ನೀಡಲಿದ್ದಾರೆ. ನಗರಸಭೆ ಕಚೇರಿ ವಠಾರದಲ್ಲಿ ಆಂದೋಲನಕ್ಕೆ ತಮಟೆ ಬಡಿದು ಚಾಲನೆ ನೀಡಿದ ನಗರಸಭೆ ಪೌರಾಯುಕ್ತ ಮಧು ಎಸ್. ಮನೋಹರ್ ಮಾತನಾಡಿ, ನಗರಸಭೆ ಪ್ರತಿ ವಾರ್ಡ್‌ಗಳಿಗೆ […]

ನಗರಸಭಾ ವ್ಯಾಪ್ತಿಯಲ್ಲಿ ಬಾಕಿ ಇರುವ ಉದ್ಯಮ ಪರವಾನಿಗೆ, ತೆರಿಗೆ, ನೀರಿನ ಶುಲ್ಕ ವಸೂಲಾತಿಗೆ ತಮಟೆ ಬಡಿದು ಚಾಲನೆ | ಸಿಬ್ಬಂದಿಗಳಿಂದ ಮನೆ ಮನೆ ಭೇಟಿ ನೀಡಿ ನೋಟೀಸ್ ಮೂಲಕ ಎಚ್ಚರಿಕೆ Read More »

ಸುಳ್ಯ ಎಂ.ಎಸ್. ರಾಮಕೃಷ್ಣ ಕೊಲೆ ಪ್ರಕರಣದ ತೀರ್ಪು ಪ್ರಕಟ | ಡಾ. ರೇಣುಕಾ ಪ್ರಸಾದ್ ಸಹಿತ ಐವರಿಗೆ ಜೀವಾವಧಿ ಶಿಕ್ಷೆ

ಮಂಗಳೂರು: ಸುಳ್ಯದ ಕೆವಿಜಿ ಪಾಲಿಟೆಕ್ನಿಟ್ ಪ್ರಾಂಶುಪಾಲರಾಗಿದ್ದ ಎಂ.ಎಸ್. ರಾಮಕೃಷ್ಣ ಅವರ ಕೊಲೆ ಪ್ರಕರಣದಲ್ಲಿ ಕುರುಂಜಿ ವೆಂಕಟರಮಣ ಗೌಡರ ಪುತ್ರ ಡಾ| ರೇಣುಕಾ ಪ್ರಸಾದ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಹೈಕೋರ್ಟ್ ಆದೇಶಿಸಿದೆ. ಮಂಗಳೂರಿನ ಜಿಲ್ಲಾ ನ್ಯಾಯಾಲಯದಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಹೈ ಕೋರ್ಟ್ ನ್ಯಾಯಧೀಶರಾದ ಶ್ರೀನಿವಾಸ್ ಹರೀಶ್ ಕುಮಾರ್ ಮತ್ತು ಬಸವರಾಜ ಅವರನ್ನೊಳಗೊಂಡ ವಿಭಾಗೀಯ ಪೀಠ ಶಿಕ್ಷೆ ಪ್ರಮಾಣ ಪ್ರಕಟ ಮಾಡಿದೆ. ಕೆಲ ದಿನಗಳ ಹಿಂದೆ ರೇಣುಕಾ ಪ್ರಸಾದ್ ಸೇರಿ ಆರು ಮಂದಿ ದೋಷಿಗಳೆಂದು ಹೈಕೋರ್ಟ್ ತೀರ್ಪು

ಸುಳ್ಯ ಎಂ.ಎಸ್. ರಾಮಕೃಷ್ಣ ಕೊಲೆ ಪ್ರಕರಣದ ತೀರ್ಪು ಪ್ರಕಟ | ಡಾ. ರೇಣುಕಾ ಪ್ರಸಾದ್ ಸಹಿತ ಐವರಿಗೆ ಜೀವಾವಧಿ ಶಿಕ್ಷೆ Read More »

ಪುತ್ತೂರು ದೇವಳ ಮುಂಭಾಗ ಶವ ಪತ್ತೆ!!

ಪುತ್ತೂರು: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗ ವ್ಯಕ್ತಿಯೋರ್ವರ ಶವ ಪತ್ತೆಯಾಗಿದೆ. ಮೃತರನ್ನು ಬಸವರಾಜ ಕಲ್ಲಪ್ಪ ಜಂಲಾಳಿ ಎಂದು ಗುರುತಿಸಿದ್ದು, ಇವರಿಗೆ ಸುಮಾರು 60 ವರ್ಷ ಆಗಿರಬಹುದೆಂದು ಅಂದಾಜಿಸಲಾಗಿದೆ. ಗದಗ ಮೂಲದ ಬಸವರಾಜ ಅವರು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ರೈಲ್ವೇ ನಿಲ್ದಾಣಗಳಲ್ಲಿ ಭಿಕ್ಷೆ ಬೇಡುತ್ತಿರುವುದನ್ನು ಕಂಡವರಿದ್ದಾರೆ. ಸಾವಿಗೆ ಕಾರಣ ತಿಳಿದುಬಂದಿಲ್ಲ.

ಪುತ್ತೂರು ದೇವಳ ಮುಂಭಾಗ ಶವ ಪತ್ತೆ!! Read More »

ಮಾಯಿಲಪ್ಪ ನಿಧನ

ಪುತ್ತೂರು: ಪುಣಚ ಶ್ರೀ ದೇವಿ ವಿದ್ಯಾಕೇಂದ್ರದ ನಿವೃತ್ತ ಅಟೆಂಡರ್, ಬಂಟ್ವಾಳ ನಿವಾಸಿ ಮಾಯಿಲಪ್ಪ ಅವರು ಅಲ್ಪಕಾಲದ ಅಸೌಖ್ಯದಿಂದ ಗುರುವಾರ ನಿಧನರಾದರು. ಮೂಲತಃ ಸುಳ್ಯದ ಹಾಸನಡ್ಕ ನಿವಾಸಿಯಾಗಿರುವ ಮಾಯಿಲಪ್ಪ ಅವರು, ಬಂಟ್ವಾಳದಲ್ಲಿ ವಾಸ್ತವ್ಯ ಹೊಂದಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ. ಮೃತರು ಪತ್ನಿ ಮತ್ತು ಬಂಧುಬಳಗವನ್ನು ಅಗಲಿದ್ದಾರೆ.

ಮಾಯಿಲಪ್ಪ ನಿಧನ Read More »

ಪತ್ನಿ, ಪುತ್ರಿಯರ ಗುಂಡಿಕ್ಕಿ ಹತ್ಯೆಗೈದ ಪೊಲೀಸ್ ಆತ್ಮಹತ್ಯೆ!

ಕಡಪಾ: ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಗುಂಡಿಕ್ಕಿ ಕೊಂದ 55 ವರ್ಷದ ಆಂಧ್ರ ಪ್ರದೇಶದ ಪೊಲೀಸ್  ಹೆಡ್ ಕಾನ್ ಸ್ಟೆಬಲ್ ಒಬ್ಬರು ಬಳಿಕ ತಾನೂ ಕೂಡ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ. ವೈಯಕ್ತಿಕ ಕಾರಣಗಳಿಂದಾಗಿ ನಡೆದಿರುವ ಘಟನೆಯು ಗುರುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಮನೆಯಿಂದ ಸೂಸೈಡ್ ನೋಟ್ ವಶಕ್ಕೆ ಪಡೆಯಲಾಗಿದೆ. ಕಡಪಾ ಪಟ್ಟಣ ಪೊಲೀಸ್ ಠಾಣೆಯಲ್ಲಿ ರೈಟರ್ ಆಗಿ ಕೆಲಸ ಮಾಡುತ್ತಿದ್ದ ವೆಂಕಟೇಶ್ವರಲು, ಬುಧವಾರ ರಾತ್ರಿ 11 ಗಂಟೆಯವರೆಗೂ ಕೆಲಸ ಮಾಡಿ ಠಾಣೆಯಿಂದ

ಪತ್ನಿ, ಪುತ್ರಿಯರ ಗುಂಡಿಕ್ಕಿ ಹತ್ಯೆಗೈದ ಪೊಲೀಸ್ ಆತ್ಮಹತ್ಯೆ! Read More »

ಸಾಕುಪ್ರಾಣಿಗಳ ಬಂಧನ, ಮಾಲಕರಿಗೆ ಶಿಕ್ಷೆ: ಎಚ್ಚರಿಕೆ! | ಸಾರ್ವಜನಿಕ ಸ್ಥಳದಲ್ಲಿ ಸಾಕುಪ್ರಾಣಿ ಬಿಟ್ಟರೆ ಶಿಕ್ಷೆ ಗ್ಯಾರೆಂಟಿ!!

ಕಡಬ: ಸಾಕುಪ್ರಾಣಿಗಳನ್ನು ಸಾರ್ವಜನಿಕ ಸ್ಥಳದಲ್ಲಿ ಬಿಟ್ಟಿದ್ದೇ ಆದರೆ, ಆ ಸಾಕುಪ್ರಾಣಿಗಳನ್ನು ಬಂಧಿಸಲಾಗುವುದು. ಮಾತ್ರವಲ್ಲ, ಅದರ ಮಾಲಕರಿಗೆ ದಂಡ ವಿಧಿಸಲಾಗುವುದು. ಹೀಗೆಂದು ಕಡಬ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಫಕೀರ ಮೂಲ್ಯ ಅವರು ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಸಾಕುಪ್ರಾಣಿಗಳನ್ನು ಸಾರ್ವಜನಿಕ ಪ್ರದೇಶದಲ್ಲಿ ಬಿಡುವುದರಿಂದ ನೂರಾರು ಸಮಸ್ಯೆಗಳು ಕಾಣಿಸಿಕೊಂಡಿದೆ. ಸಾರ್ವಜನಿಕರಿಗೆ ತೊಂದರೆ ಆಗುವ ಜೊತೆಗೆ, ಅಪಘಾತಗಳು ಸಂಭವಿಸುವ ಸಾಧ್ಯತೆಯೂ ಇದೆ. ಕೃಷಿ ಹಾನಿ ಆದ ಬಗ್ಗೆಯೂ ವರದಿಯಾಗಿದೆ. ಆದ್ದರಿಂದ ಸಾರ್ವಜನಿಕ ಸ್ಥಳದಲ್ಲಿ ಸಾಕುಪ್ರಾಣಿಗಳನ್ನು ಬಿಡದಂತೆ ಪಟ್ಟಣ ಪಂಚಾಯತ್ ಎಚ್ಚರಿಕೆಯ ಸಂದೇಶ ರವಾನಿಸಿದೆ.

ಸಾಕುಪ್ರಾಣಿಗಳ ಬಂಧನ, ಮಾಲಕರಿಗೆ ಶಿಕ್ಷೆ: ಎಚ್ಚರಿಕೆ! | ಸಾರ್ವಜನಿಕ ಸ್ಥಳದಲ್ಲಿ ಸಾಕುಪ್ರಾಣಿ ಬಿಟ್ಟರೆ ಶಿಕ್ಷೆ ಗ್ಯಾರೆಂಟಿ!! Read More »

ಕೊನೆಗೂ ಕ್ರಮಕ್ಕೆ ಮುಂದಾದ ಕೆನಡಾ, ಒಬ್ಬನ ಬಂಧನ! | ಭಾರತದ ಬಿಗಿಪಟ್ಟಿಗೆ ತಲೆಬಾಗಿದ ಕೆನಡಾ!

ಒಟ್ಟಾವ: ಖಲಿಸ್ತಾನಿಗಳ ವಿಚಾರದಲ್ಲಿ ಬಿಗಿ ಪಟ್ಟು ಹಿಡಿದಿರುವ ಭಾರತದ ಮುಂದೆ ತಲೆಬಾಗಿರುವ ಕೆನಡಾ, ಕೊನೆಗೂ ಕ್ರಮಕ್ಕೆ ಮುಂದಾಗಿದೆ. ದೇವಾಲಯಗಳನ್ನು ಅಪವಿತ್ರಗೊಳಿಸಿದ ಪ್ರಕರಣದಲ್ಲಿ ಒಬ್ಬ ವ್ಯಕ್ತಿಯನ್ನು ಕೆನಡಾ ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್ 12ರಂದು, ಸರ್ರೆಯ ಲಕ್ಷ್ಮೀನಾರಾಯಣ ಮಂದಿರದ ಮುಂಭಾಗದ ಗೇಟ್ ಮತ್ತು ಡೋರ್‌ಗಳ ಮೇಲೆ ಖಲಿಸ್ತಾನಿ ಕಿಡಿಗೇಡಿಗಳು ಖಲಿಸ್ತಾನ್ ಪರ, ಹಿಂದೂ ವಿರೋಧಿ ಹಾಗೂ ಭಾರತ ವಿರೋಧಿ ಬರಹಗಳನ್ನು ಬರೆದು ಆವರಣವನ್ನು ಅಪವಿತ್ರಗೊಳಿಸಿದ್ದರು. ಆ ಬಳಿಕ ಕೆನಡಾದ ಪೊಲೀಸರು ಮಾಡಿದ ಮೊದಲ ಬಂಧನ ಇದಾಗಿದೆ. ಆಗಸ್ಟ್ 12 ಮತ್ತು

ಕೊನೆಗೂ ಕ್ರಮಕ್ಕೆ ಮುಂದಾದ ಕೆನಡಾ, ಒಬ್ಬನ ಬಂಧನ! | ಭಾರತದ ಬಿಗಿಪಟ್ಟಿಗೆ ತಲೆಬಾಗಿದ ಕೆನಡಾ! Read More »

ಅಕ್ಷಯ ಕಾಲೇಜಿನಲ್ಲಿ ಫ್ಯಾಷನ್ ಡಿಸೈನ್ ಸಂಘ ಉದ್ಘಾಟನೆ

ಪುತ್ತೂರು: ಅಕ್ಷಯ ಎಜುಕೇಷನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಫ್ಯಾಷನ್ ಡಿಸೈನ್ ವಿಭಾಗ ಮತ್ತು ಐಕ್ಯುಎಸಿ ಸಹಯೋಗದೊಂದಿಗೆ FACERA ಫ್ಯಾಷನ್ ಡಿಸೈನ್ ಅಸೋಸಿಯೇಷನ್ ಉದ್ಘಾಟನಾ ಸಮಾರಂಭ ನಡೆಯಿತು. ಮಂಗಳೂರು ಪಾಥ್ ವೇ ಎಂಟರ್’ಪ್ರೈಸಸ್ ಮಾಲಕ ದೀಪಕ್ ಗಂಗೂಲಿ ಅವರು FACERA ಫ್ಯಾಷನ್ ಡಿಸೈನ್ ಸಂಘವನ್ನು ಉದ್ಘಾಟಿಸಿ, ಪ್ರಸ್ತುತ ಕಾಲಘಟ್ಟದಲ್ಲಿ ಫ್ಯಾಷನ್ ಎಂಬುದು ಅತೀ ಮುಖ್ಯ. ಅದೇ ರೀತಿ ಈ ಕ್ಷೇತ್ರದಲ್ಲಿ ಉತ್ತಮ ಭವಿಷ್ಯ ಇದೆ ಎಂದು ಶುಭ ಹಾರೈಸಿದರು. Vanzova Facito ಸೀಸನ್ – 1 ಫ್ಯಾಷನ್ ಶೋವನ್ನು

ಅಕ್ಷಯ ಕಾಲೇಜಿನಲ್ಲಿ ಫ್ಯಾಷನ್ ಡಿಸೈನ್ ಸಂಘ ಉದ್ಘಾಟನೆ Read More »

ಅ. 15ರಿಂದ 24: ಶ್ರೀ ಮಹಾಮಾಯಾ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

ಪುತ್ತೂರು: ಪುತ್ತೂರು ನಗರದ ಶ್ರೀ ಮಹಾಮಾಯಾ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವ ಅ.15 ರಿಂದ 24ರ ವರೆಗೆ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ. ಮಹೋತ್ಸವದ ಅಂಗವಾಗಿ ಪ್ರತಿದಿನ ಮಧ್ಯಾಹ್ನ 1.30 ಕ್ಕೆ ಮಹಾಪೂಜೆ, ರಾತ್ರಿ 9 ರಿಂದ ದುರ್ಗಾನಮಸ್ಕಾರ ಪೂಜೆ ಹಾಗೂ 9.30 ಕ್ಕೆ ರಾತ್ರಿ ಪೂಜೆ ನಡೆಯಲಿದೆ. ಅ.22 ರಂದು ದುರ್ಗಾಷ್ಟಮಿ, 23 ರಂದು ಮಹಾನವಮಿ ಚಂಡಿಕಾಯಾಗ, ಮಹಾಪೂಜೆ, ಅನ್ನಸಂತರ್ಪಣೆ ಜರಗಲಿದೆ ಎಂದು ದೇವಸ್ಥಾನ ಪ್ರಕಟಣೆಯಲ್ಲಿ ತಿಳಿಸಿದೆ.

ಅ. 15ರಿಂದ 24: ಶ್ರೀ ಮಹಾಮಾಯಾ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ Read More »

ನಾಪತ್ತೆಯಾಗಿದ್ದ ವ್ಯಕ್ತಿ ಅಸ್ವಸ್ಥರಾಗಿ ಪತ್ತೆ; ಮಂಗಳೂರಿನ ಆಸ್ಪತ್ರೆಯಲ್ಲಿ ಮೃತ್ಯು

ಕಡಬ: ನಾಪತ್ತೆಯಾಗಿದ್ದ ಕಡಬ ತಾಲೂಕಿನ ಹಳೆನೇರೆಂಕಿ ಗ್ರಾಮದ ಆರಾಟಿಗೆ ನಿವಾಸಿ ಹರೀಶ್ ಯಾನೆ ನಾಣ್ಯಪ್ಪ ಪೂಜಾರಿ(65) ಅ.4ರಂದು ಮಧ್ಯಾಹ್ನ ಬಿ.ಸಿ.ರೋಡ್‌ನ ಬಸ್‌ನಿಲ್ದಾಣದಲ್ಲಿ ಅಸ್ವಸ್ಥರಾಗಿ ಪತ್ತೆಯಾಗಿದ್ದು, ಚಿಕಿತ್ಸೆಗಾಗಿ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಯಲ್ಲಿ ದಾಖಲಿಸಿದ್ದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಹಳೆನೇರೆಂಕಿಯಲ್ಲಿ ದಿನಸಿ ಅಂಗಡಿ ಹೊಂದಿದ್ದ ಹರೀಶ್ ಯಾನೆ ನಾಣ್ಯಪ್ಪ ಪೂಜಾರಿ ಕಳೆದ ಹಲವು ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅ.3ರಂದು ಮಧ್ಯಾಹ್ನ ಮೊಬೈಲ್ ಅಂಗಡಿಯಲ್ಲೇ ಬಿಟ್ಟು ತೆರಳಿದ್ದ ಅವರು ರಾತ್ರಿಯಾದರೂ ಮನೆಗೆ ಬಂದಿರಲಿಲ್ಲ. ಈ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ಹಾಗೂ ಇತರೆಡೆ ಹುಡುಕಾಟ

ನಾಪತ್ತೆಯಾಗಿದ್ದ ವ್ಯಕ್ತಿ ಅಸ್ವಸ್ಥರಾಗಿ ಪತ್ತೆ; ಮಂಗಳೂರಿನ ಆಸ್ಪತ್ರೆಯಲ್ಲಿ ಮೃತ್ಯು Read More »

error: Content is protected !!
Scroll to Top