ಡಿಕೆಶಿ ಮನೆಯಲ್ಲಿ ಸಿದ್ದರಾಮಯ್ಯಗೆ ನಾಟಿಕೋಳಿ ಸಾರು, ಬಿಸಿಬಿಸಿ ಇಡ್ಲಿ ಬ್ರೇಕ್‌ಫಾಸ್ಟ್‌

ಸಿಎಂಗೆ ನಾನ್‌ವೆಜ್‌ ತಿನ್ನಿಸಿ ತಾನು ವೆಜ್‌ ಮಾತ್ರ ತಿಂದ ಡಿಕೆಶಿ ಬೆಂಗಳೂರು: ಕರ್ನಾಟಕ ಕಾಂಗ್ರೆಸ್​ನಲ್ಲಿ ಎದ್ದಿರುವ ನಾಯಕತ್ವ ಬದಲಾವಣೆ, ಅಧಿಕಾರ ಹಂಚಿಕೆ ಚರ್ಚೆಗಳಿಗೆ ತೆರೆ ಎಳೆಯುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನಡುವಣ ‘ಬ್ರೇಕ್​ಫಾಸ್ಟ್ ಮೀಟಿಂಗ್’ ಮುಂದುವರಿದಿದೆ. ಸದಾಶಿವನಗರದಲ್ಲಿರುವ ಡಿ.ಕೆ ಶಿವಕುಮಾರ್ ನಿವಾಸಕ್ಕೆ ಆಗಮಿಸಿದ ಸಿದ್ದರಾಮಯ್ಯ, ನಾಟಿಕೋಳಿ ಸಾರು, ಬಿಸಿ ಬಿಸಿ ಇಡ್ಲಿ ಸವಿದರು. ಜತೆಗೆ ಮಾತುಕತೆಯೂ ನಡೆಯಿತು. ಆದರೆ ಡಿ.ಕೆ ಶಿವಕುಮಾರ್ ಮಾತ್ರ ಉಪಾಹಾರ ಕೂಟದಲ್ಲಿ ನಾನ್‌ವೆಜ್ ಸೇವಿಸಲಿಲ್ಲ. ಕಾವೇರಿ ನಿವಾಸದಿಂದ […]

ಡಿಕೆಶಿ ಮನೆಯಲ್ಲಿ ಸಿದ್ದರಾಮಯ್ಯಗೆ ನಾಟಿಕೋಳಿ ಸಾರು, ಬಿಸಿಬಿಸಿ ಇಡ್ಲಿ ಬ್ರೇಕ್‌ಫಾಸ್ಟ್‌ Read More »

ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ ವಿಮಾ ಪರಿಹಾರ ಪಾವತಿ ವಿಳಂಬ: ಶೀಘ್ರ ಪರಿಹಾರಕ್ಕೆ ಕ್ಯಾ. ಚೌಟ ಸೂಚನೆ

ಮಂಗಳೂರು: ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ ವಿಮಾ ಪರಿಹಾರ ಪಾವತಿ ವಿಳಂಬವಾಗಿದ್ದು ಇದರಿಂದ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸಂಬಂಧಿಸಿದ ಅಧಿಕಾರಿಗಳ ಜೊತೆ ಸಭೆ ನಡೆಸಿ ಶೀಘ್ರ ವಿಮಾ ಮೊತ್ತ ಪಾವತಿಗೆ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದ್ದಾರೆ. ಕಳೆದ ವಾರ ತೋಟಗಾರಿಕಾ ಇಲಾಖೆಯ ಅಧಿಕಾರಿಗಳು, ಕೃಷಿ ಇಲಾಖೆಯ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದು, ವಿಳಂಬಕ್ಕೆ ‌ಕಾರಣ ಏನು ಎಂಬುದರ ಬಗ್ಗೆ ಪರಾಮರ್ಶಿಸಿದ್ದರು. ಹಾಗೆಯೇ ತುರ್ತಾಗಿ ವಿಮಾ

ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ ವಿಮಾ ಪರಿಹಾರ ಪಾವತಿ ವಿಳಂಬ: ಶೀಘ್ರ ಪರಿಹಾರಕ್ಕೆ ಕ್ಯಾ. ಚೌಟ ಸೂಚನೆ Read More »

ಕೇಂದ್ರ ಸರ್ಕಾರದ ವಿರುದ್ಧ ಸಿಎಂ ‌ಸಿದ್ದರಾಮಯ್ಯ ಗರಂ: ಯಾಕೆ ಗೊತ್ತಾ?

ಬೆಂಗಳೂರು: ಮಹಿಳೆಯರು ಮತ್ತು ಬಡವರ ಪರ ಕಾಳಜಿ ವಹಿಸಿ ಹಲವಾರು ಯೋಜನೆಗಳನ್ನು ಜಾರಿಗೆ ತಂದದ್ದು ‌ನಮ್ಮ ಕಾಂಗ್ರೆಸ್ ಸರ್ಕಾರ. ಆದರೂ ಜನರು ಮೋದಿ ಮೋದಿ ಎಂದೇ ಕೂಗುತ್ತಾರೆ ಎಂದು ಸಿಎಂ ‌ಸಿದ್ದರಾಮಯ್ಯ ಅವರು ಅಸಮಾಧಾನ ಹೊರಹಾಕಿದ್ದಾರೆ. ಗಾಂಧಿ ಗ್ರಾಮ ಪುರಸ್ಕಾರಕ್ಕೆ ‌ಚಾಲನೆ ನೀಡಿ ಮಾತನಾಡಿದ ಅವರು, ಜಲ ಜೀವನ್ ಮಿಷನ್ ಯೋಜನೆಗೆ ಕೇಂದ್ರ ಸರ್ಕಾರ ಏನನ್ನೂ ನೀಡಿಲ್ಲ. ನಾವೇ ಹೆಚ್ಚು ಅನುದಾನ ನೀಡಿದವರು. ಸಾರ್ವಜನಿಕರು ಅವರ ಮೇಲೆ ಒತ್ತಡ ಹಾಕುವುದೇ ಇಲ್ಲ. ಕಬ್ಬಿಗೆ ಎಫ್‌ಆರ್‌ಪಿ, ಸಕ್ಕರೆಗೆ ಎಂಎಸ್‌ಪಿ,

ಕೇಂದ್ರ ಸರ್ಕಾರದ ವಿರುದ್ಧ ಸಿಎಂ ‌ಸಿದ್ದರಾಮಯ್ಯ ಗರಂ: ಯಾಕೆ ಗೊತ್ತಾ? Read More »

ಮೊಬೈಲ್‌ಗಳಲ್ಲಿ ಸಂಚಾರ್‌ ಸಾಥಿ ಆ್ಯಪ್ ಕಡ್ಡಾಯ

ಮೊಬೈಲ್‌ ಕಳ್ಳತನವಾದರೆ, ಕಳೆದುಹೋದರೆ ಪತ್ತೆಹಚ್ಚಲು ನೆರವಾಗುವ ಆ್ಯಪ್ ನವದೆಹಲಿ: ಭಾರತದಲ್ಲಿ ಮಾರಾಟವಾಗುವ ಎಲ್ಲ ಹೊಸ ಮೊಬೈಲ್ ಫೋನ್‌ಗಳಲ್ಲಿ ಸಂಚಾರ್ ಸಾಥಿ ಅಪ್ಲಿಕೇಶನ್‌ಗಳನ್ನು ಕಡ್ಡಾಯವಾಗಿ ಇನ್‌ಸ್ಟಾಲ್‌ ಮಾಡಬೇಕೆಂದು ದೂರಸಂಪರ್ಕ ಇಲಾಖೆ ಮೊಬೈಲ್‌ ಹ್ಯಾಂಡ್‌ಸೆಟ್‌ ತಯಾರಕರಿಗೆ ಸೂಚಿಸಿದೆ. ಆ್ಯಪ್ ಇನ್‌ಸ್ಟಾಲ್ ಮಾಡಲು 90 ದಿನಗಳ ಗಡುವು ನೀಡಲಾಗಿದ್ದು ಅದನ್ನು ಅನ್‌ ಇನ್‌ಸ್ಟಾಲ್ ಮಾಡುವ ಆಯ್ಕೆ ನೀಡಬಾರದು. ಈಗಾಗಲೇ ಬಳಕೆಯಲ್ಲಿರುವ ಮೊಬೈಲ್‌ಗಳಿಗೆ ಸಾಫ್ಟ್‌ವೇರ್ ಅಪ್‌ಡೇಟ್‌ ನೀಡುವಾಗ ಈ ಆ್ಯಪ್ ಲಭ್ಯವಾಗುವಂತೆ ಮಾಡಬೇಕು ಎಂದು ಸೂಚಿಸಿದೆ. ಕೇಂದ್ರ ಸರ್ಕಾರ ಈ ಆದೇಶವನ್ನು ಸ್ಮಾರ್ಟ್‌ಫೋನ್

ಮೊಬೈಲ್‌ಗಳಲ್ಲಿ ಸಂಚಾರ್‌ ಸಾಥಿ ಆ್ಯಪ್ ಕಡ್ಡಾಯ Read More »

ಇನ್ನು ನೋಂದಣಿ, ಕರಾರುಗಳಿಗೆ ಡಿಜಿಟಲ್‌ ಇ-ಸ್ಟ್ಯಾಂಪ್‌ ವ್ಯವಸ್ಥೆ

ಛಾಪಾ ವ್ಯವಸ್ಥೆಯಲ್ಲಿ ದೊಡ್ಡ ಬದಲಾವಣೆ ಮಾಡಿದ ಸರ್ಕಾರ ಬೆಂಗಳೂರು : ಆಸ್ತಿ ನೋಂದಣಿ, ಒಪ್ಪಂದದಂಥ ಪ್ರಮುಖ ಕಾರ್ಯಗಳಿಗೆ ಬಳಕೆಯಾಗುವ ಛಾಪಾ ಕಾಗದ ವ್ಯವಸ್ಥೆಗೆ ಸರ್ಕಾರ ಆಮೂಲಾಗ್ರ ಬದಲಾವಣೆ ಮಾಡಿದೆ. ಈಗ ಇ-ಸ್ಟ್ಯಾಂಪಿಂಗ್‌ ವ್ಯವಸ್ಥೆ ಬದಲಾಗಿ ಡಿಜಿಟಲ್‌ ಇ-ಸ್ಟ್ಯಾಂಪ್‌ ವ್ಯವಸ್ಥೆ ತಂದಿದೆ. ಕಳೆದ ಅಕ್ಟೋಬರ್‌ನಿಂದಲೇ ಕರ್ನಾಟಕದಲ್ಲಿ ಅಧಿಕೃತವಾಗಿ ಡಿಜಿಟಲ್ ಮಾದರಿಯ ಇ-ಸ್ಟಾಂಪ್ ಜಾರಿಗೆ ಬಂದಿದೆ. ಇ-ಸ್ಟ್ಯಾಂಪ್ ಬದಲು ಇನ್ಮುಂದೆ ಡಿಜಿಟಲ್ ಇ-ಸ್ಟ್ಯಾಂಪ್ ಬಳಕೆಗೆ ಸೂಚಿಸಲಾಗಿದೆ. ಆದರೆ ಜನರಲ್ಲಿ ಅರಿವು ಮೂಡುವವರೆಗೆ ಹಳೆಯ ಇ-ಸ್ಟ್ಯಾಂಪ್ ಬಳಕೆಯಲ್ಲಿರುತ್ತೆ. ಈ ಬಗ್ಗೆ ಸ್ವತಃ

ಇನ್ನು ನೋಂದಣಿ, ಕರಾರುಗಳಿಗೆ ಡಿಜಿಟಲ್‌ ಇ-ಸ್ಟ್ಯಾಂಪ್‌ ವ್ಯವಸ್ಥೆ Read More »

ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರಿಗೆ ಆಗಮನ

ನಾರಾಯಣ ಗುರು-ಮಹಾತ್ಮ ಗಾಂಧಿ ಸಂವಾದ ಶತಮಾನೋತ್ಸವ ಕಾರ್ಯಕ್ರಮ ಉದ್ಘಾಟನೆ ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 3ರಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಮಂಗಳೂರಿಗೆ ಆಗಮಿಸಲಿದ್ದಾರೆ. ಡಿ.3ರಂದು ಬೆಳಗ್ಗೆ 11 ಗಂಟೆಗೆ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ 11.40ಕ್ಕೆ ಕೊಣಾಜೆ ಮಂಗಳಗಂಗೋತ್ರಿಯಲ್ಲಿ ಶಿವಗಿರಿ ಮಠ ವರ್ಕಲ ಶ್ರೀ ನಾರಾಯಣ ಗುರು ಅಧ್ಯಯನ ಪೀಠ, ಮಂಗಳೂರು ವಿಶ್ವವಿದ್ಯಾಲಯದ ಆಶ್ರಯದಲ್ಲಿ ಆಯೋಜಿಸಿರುವ ಶತಮಾನದ ಪ್ರಸ್ತಾನ ಶ್ರೀ ನಾರಾಯಣ ಗುರು-ಮಹಾತ್ಮ ಗಾಂಧಿ ಐತಿಹಾಸಿಕ ಸಂವಾದ ಶತಮಾನೋತ್ಸವ,

ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರಿಗೆ ಆಗಮನ Read More »

ಪುತ್ತೂರು : ನಾಪತ್ತೆಯಾಗಿದ್ದ ಯುವಕ ಮೃತದೇಹ ಪತ್ತೆ

ಪುತ್ತೂರು: ಭಾನುವಾರ ನಾಪತ್ತೆಯಾಗಿದ್ದ ನಗರದ ಪಡೀಲ್‌ನ ಚಿಕನ್ ಅಂಗದಿಯ ನೌಕರ ಬದ್ರುದ್ದೀನ್ ಡಿ.ಕೆ (29) ಎಂಬವರ ಮೃತದೇಹ ಸೇಡಿಯಾಪು ಬಳಿಯ ಕಾಡಿನಲ್ಲಿ ಸೋಮವಾರ ಪತ್ತೆಯಾಗಿದೆ. ಆರ್ಥಿಕ ಸಮಸ್ಯೆಯಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕಿಸಲಾಗಿದೆ. ಕಾಣೆಯಾದ ಒಂದು ದಿನದ ನಂತರ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಬದ್ರುದ್ದೀನ್ ಅವಿವಾಹಿತರಾಗಿದ್ದು, ತಾಯಿ, ಅಣ್ಣ, ಅಕ್ಕ, ತಮ್ಮ ಹಾಗೂ ತಂಗಿಯನ್ನು ಅಗಲಿದ್ದಾರೆ. ಪುತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ.

ಪುತ್ತೂರು : ನಾಪತ್ತೆಯಾಗಿದ್ದ ಯುವಕ ಮೃತದೇಹ ಪತ್ತೆ Read More »

ಯುವಕನ ಆತ್ಮಹತ್ಯೆ ಪ್ರಕರಣದಲ್ಲಿ ಅನುಮಾನ : ಮರು ತನಿಖೆಗೆ ತಾಯಿ ಒತ್ತಾಯ

ಪ್ರೀತಿಸುತ್ತಿದ್ದ ಹುಡುಗಿಯ ಮನೆಯವರು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ದೂರು ಬಂಟ್ವಾಳ : ಕೆಲ ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿರುವ ರಮಾನಂದ ಎಂಬ ಯುವಕನ ಸಾವಿನ ಬಗ್ಗೆ ತಾಯಿ ಅನುಮಾನ ವ್ಯಕ್ತಪಡಿಸಿದ್ದು, ಮರು ತನಿಖೆ ಆಗ್ರಹಿಸಿ ದೂರು ನೀಡಿದ್ದಾರೆ. ಇದು ಆತ್ಮಹತ್ಯೆ ಅಲ್ಲ ವ್ಯವಸ್ಥಿತ ಕೊಲೆಯಾಗಿರುವ ಬಗ್ಗೆ ಸಂಶಯವಿದ್ದು, ಈ ಬಗ್ಗೆ ಸೂಕ್ತವಾದ ತನಿಖೆ ನಡೆಸಿ ನ್ಯಾಯ ಒದಗಿಸಿ ಕೊಡಿ ಎಂದು ತಾಯಿ ಜಾನಕಿ ಅವರು ವಾಮಂಜೂರು ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬಂಟ್ವಾಳದ ಬರಿಮಾರು

ಯುವಕನ ಆತ್ಮಹತ್ಯೆ ಪ್ರಕರಣದಲ್ಲಿ ಅನುಮಾನ : ಮರು ತನಿಖೆಗೆ ತಾಯಿ ಒತ್ತಾಯ Read More »

ವಿದೇಶಗಳಿಂದ ಅಡಿಕೆ ಆಮದು ನಿಯಂತ್ರಿಸಲು ಕ್ಯಾ. ಬ್ರಿಜೇಶ್‌ ಚೌಟ ಆಗ್ರಹ

ಸಂಸತ್‌ ಅಧಿವೇಶನದಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತು ಗಮನ ಸೆಳೆದ ಸಂಸದ ಮಂಗಳೂರು : ಭೂತಾನ್, ಮಯನ್ಮಾರ್ ಮತ್ತು ಶ್ರೀಲಂಕಾದಂತಹ ದೇಶಗಳಿಂದ ಭಾರತಕ್ಕೆ ದೊಡ್ಡ ಪ್ರಮಾಣದಲ್ಲಿ ಅಡಿಕೆ ಆಮದು ಆಗುತ್ತಿರುವುದರಿಂದ ನಮ್ಮ ಬೆಳೆಗಾರರಿಗೆ ಎದುರಾಗಿರುವ ಗಂಭೀರ ಪರಿಣಾಮಗಳ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಸಂಸತ್‌ ಅಧಿವೇಶನದಲ್ಲಿ ಮಾತನಾಡಿದ್ದಾರೆ. ಲೋಕಸಭೆಯಲ್ಲಿ ಈ ತುರ್ತು ವಿಚಾರವನ್ನು ಪ್ರಸ್ತಾಪಿಸಿದ ಸಂಸದ ಕ್ಯಾ.ಚೌಟ ಅವರು ನೆರೆಯ ಸಣ್ಣ ದೇಶಗಳಿಂದ ಸುಂಕ ಮುಕ್ತ ಅಡಿಕೆ ಆಮದು ನೀತಿಯಿಂದಾಗಿ ಕರ್ನಾಟಕ ಸೇರಿ ನಮ್ಮ

ವಿದೇಶಗಳಿಂದ ಅಡಿಕೆ ಆಮದು ನಿಯಂತ್ರಿಸಲು ಕ್ಯಾ. ಬ್ರಿಜೇಶ್‌ ಚೌಟ ಆಗ್ರಹ Read More »

ಯುವಕ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ಮಾಡನ್ನೂರು ಕಾಲೊನಿಯಲ್ಲಿ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ಯುವಕನನ್ನು ದಿ. ಶೀನಪ್ಪ ಎಂಬವರ ಪುತ್ರ 22 ವರ್ಷದ ಲೋಕೇಶ್ ಎಂದು ಗುರುತಿಸಲಾಗಿದೆ.

ಯುವಕ ನೇಣು ಬಿಗಿದು ಆತ್ಮಹತ್ಯೆ Read More »

error: Content is protected !!
Scroll to Top