ಬಿಗ್ ಬಾಸ್ ವೇದಿಕೆಯಲ್ಲೂ ಹೆಜ್ಜೆ ಮೂಡಿಸಿದ್ದ `ಪಿಲಿಏಸ’ದ ಆಮಂತ್ರಣ ಪತ್ರ ಬಿಡುಗಡೆ | ಹೀಗೆ ನಡೆಯಲಿದೆ ಕಲ್ಲೇಗ ಟೈಗರ್ಸ್ ತಂಡದ ಹುಲಿ ಇಳಿಯುವ ಕಾರ್ಯಕ್ರಮ

ಪುತ್ತೂರು: ಪಿಲಿಏಸ ಕಾರ್ಯಕ್ರಮದ ಆಮಂತ್ರಣ ಪತ್ರವನ್ನು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಿಡುಗಡೆ ಮಾಡಲಾಯಿತು. ಶ್ರೀ ಮಹಾಲಿಂಗೇಶ್ವರ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿ, ಬಳಿಕ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು. ಹಿಂದಿನ ವರ್ಷ ಪಿಲಿಗೊಬ್ಬು ಎಂಬ ಹೆಸರಿನಲ್ಲಿ ಹೊಸ ಇತಿಹಾಸ ಬರೆದಿದ್ದು, ಸುಮಾರು 60 ಮಂದಿ ಹುಲಿ ವೇಷ ಹಾಕಿದ್ದರು. ಮಾತ್ರವಲ್ಲ ಬಿಗ್ ಬಾಸ್ ವೇದಿಕೆಯಲ್ಲೂ ಹೆಜ್ಜೆ ಹಾಕಿ, ರಾಜ್ಯದ ಜನತೆಗೆ ಕರಾವಳಿ ಸಂಸ್ಕೃತಿಯ ಸೊಗಡನ್ನು ಪರಿಚಯಿಸಿದ್ದರು. ಇದೀಗ ಮತ್ತೊಮ್ಮೆ ನವರಾತ್ರಿ ಹಬ್ಬ ಬಂದಿದ್ದು, ಕಲ್ಲೇಗ ಟೈಗರ್ಸ್ […]

ಬಿಗ್ ಬಾಸ್ ವೇದಿಕೆಯಲ್ಲೂ ಹೆಜ್ಜೆ ಮೂಡಿಸಿದ್ದ `ಪಿಲಿಏಸ’ದ ಆಮಂತ್ರಣ ಪತ್ರ ಬಿಡುಗಡೆ | ಹೀಗೆ ನಡೆಯಲಿದೆ ಕಲ್ಲೇಗ ಟೈಗರ್ಸ್ ತಂಡದ ಹುಲಿ ಇಳಿಯುವ ಕಾರ್ಯಕ್ರಮ Read More »

ಪರ – ವಿರೋಧಕ್ಕೆ ಬೀದಿದೀಪ ಬಲಿ!! | ಬೀದಿ ದೀಪಕ್ಕಾಗಿ ನಗರಸಭೆ ಮಾಜಿ ಅಧ್ಯಕ್ಷೆ ಜಯಂತಿ ಬಲ್ನಾಡು ಒತ್ತಾಯ

ಪುತ್ತೂರು: ನಗರಸಭೆಯ 31 ವಾರ್ಡ್ ಸಂಖ್ಯೆ ಬಲ್ನಾಡು ಗ್ರಾಮದ ಉಜ್ರುಪಾದೆ ಎಂಬಲ್ಲಿ ಹೈಮಾಸ್ಟ್ ದೀಪ ಅಳವಡಿಸುವಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಯ ಪರ ವಿರೋಧಗಳು ಮುಂದುವರಿದಿದ್ದು, ಇದೀಗ ನಗರಸಭೆ ಮಾಜಿ ಅಧ್ಯಕ್ಷೆ ಜಯಂತಿ ಬಲ್ನಾಡು ಹೈಮಾಸ್ಟ್ ದೀಪವನ್ನು ಅಗತ್ಯತೆ ಇರುವಲ್ಲಿ ಅಳವಡಿಸುವಂತೆ ನಗರಸಭೆಗೆ ಮನವಿ ಮಾಡಿದ್ದಾರೆ. ಪ್ರಸ್ತುತ ಉಜ್ರುಪಾದೆ ಜಂಕ್ಷನ್‌ನಲ್ಲಿ ಹೈ ಮಾಸ್ಟ್ ದೀಪ ಅಳವಡಿಸುವ ಕೆಲಸ ನಡೆಯುತ್ತಿದೆ. ಆದರೆ ಅಗತ್ಯತೆ ಇರುವಲ್ಲಿ ಅಳವಡಿಸದೇ ಇರುವುದರಿಂದ ಊಟಕ್ಕಿಲ್ಲದ ಉಪ್ಪಿನಕಾಯಿಯಂತೆ ಆಗಿದೆ ಎಂದು ನಗರ ಕಾಂಗ್ರೆಸ್ ಅಧ್ಯಕ್ಷ, ನಗರಸಭೆ ಮಾಜಿ

ಪರ – ವಿರೋಧಕ್ಕೆ ಬೀದಿದೀಪ ಬಲಿ!! | ಬೀದಿ ದೀಪಕ್ಕಾಗಿ ನಗರಸಭೆ ಮಾಜಿ ಅಧ್ಯಕ್ಷೆ ಜಯಂತಿ ಬಲ್ನಾಡು ಒತ್ತಾಯ Read More »

ಪುತ್ತೂರಿನಲ್ಲಿ ನಡೆಯಲಿದೆ ಅದ್ದೂರಿಯ ‘ಪುತ್ತೂರು ಶಾರದೋತ್ಸವ’ | ಶಾರದೆ ವಿಗ್ರಹ ರಚನೆಗೆ ನೆರವೇರಿತು ಮುಹೂರ್ತ

ಪುತ್ತೂರು: ಪುತ್ತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ ಭಕ್ತರ ಸಹಕಾರದೊಂದಿಗೆ ಈ ಬಾರಿ ನಡೆಯಲಿರುವ “ಪುತ್ತೂರು ಶಾರದೋತ್ಸವದ” ಶಾರದೆ ವಿಗ್ರಹ ರಚನೆಗೆ ಮುಹೂರ್ತ ಗುರುವಾರ ಪ್ರಭು ಸ್ಟುಡಿಯೋ ಮಾಲಕ ಶ್ರೀನಿವಾಸ ಪ್ರಭುರವರ ನಿವಾಸದ ಬಳಿ ನಡೆಯಿತು. ಈ ಬಾರಿ ಶ್ರೀ ಶಾರದೆ ಪ್ರತಿಷ್ಠೆ, ಶೋಭಾಯಾತ್ರೆಯೊಂದಿಗೆ ಅದ್ದೂರಿಯಾಗಿ ನಡೆಯಲಿದ್ದು, ಸಮಿತಿ ಪದಾಧಿಕಾರಿಗಳು ಮಹಾಲಿಂಗೇಶ್ವರ ದೇವರ ಸನ್ನಿಧಿ ಹಾಗೂ ಶಾರದಾ ಭಜನಾ ಮಂದಿರದಲ್ಲಿ ಪ್ರಾರ್ಥಿಸಿ ಬಳಿಕ ಉಳ್ಳಾಲ್ತಿ ಕಟ್ಟೆ ಬಳಿ ಇರುವ ಶ್ರೀನಿವಾಸ ಪ್ರಭು ಅವರ ನಿವಾಸದಲ್ಲಿ ವಿಗ್ರಹ ಮುಹೂರ್ತ

ಪುತ್ತೂರಿನಲ್ಲಿ ನಡೆಯಲಿದೆ ಅದ್ದೂರಿಯ ‘ಪುತ್ತೂರು ಶಾರದೋತ್ಸವ’ | ಶಾರದೆ ವಿಗ್ರಹ ರಚನೆಗೆ ನೆರವೇರಿತು ಮುಹೂರ್ತ Read More »

ಕಸಾಪ ಪುತ್ತೂರು ಘಟಕದಿಂದ ಸ್ವಚ್ಛತಾ ಸೈನಿಕರಿಗೆ ಗೌರವ

ಪುತ್ತೂರು: ಪೌರಕಾರ್ಮಿಕರ ದಿನಾಚರಣೆ ಅಂಗವಾಗಿ ನಗರದ ಗಾಂಧಿ ಕಟ್ಟೆಯಿಂದ ನಡೆದ ಕಾಲ್ನಡಿಗೆ ಜಾಥಾದಲ್ಲಿ ನಗರದ ಸುಮಾರು 60 ಸ್ವಚ್ಛತಾ ಸೈನಿಕರನ್ನು ಗೌರವಿಸಲಾಯಿತು. ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕನ್ನಡ ಶಾಲು ಹಾಗೂ ಕನ್ನಡ ಪುಸ್ತಕವನ್ನು ನೀಡಿ ಪುಷ್ಪ ಸಿಂಚನ ಮಾಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ನಗರಸಭೆ ಪೌರಾಯುಕ್ತ ಮಧು ಎಸ್. ಮನೋಹರ್, ಕಸಾಪ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್, ನಗರಸಭೆ ಸಿಬ್ಬಂದಿಗಳು, ಪೌರ ಕಾರ್ಮಿಕರು ಉಪಸ್ಥಿತರಿದ್ದರು.

ಕಸಾಪ ಪುತ್ತೂರು ಘಟಕದಿಂದ ಸ್ವಚ್ಛತಾ ಸೈನಿಕರಿಗೆ ಗೌರವ Read More »

ಭಾರತದ ಹಸಿರು ಕ್ರಾಂತಿಯ ಹರಿಕಾರ ಇನ್ನಿಲ್ಲ!!

ನವದೆಹಲಿ: ಭಾರತದ ಖ್ಯಾತ ಕೃಷಿ ವಿಜ್ಞಾನಿ ಮತ್ತು ಭಾರತದ ಹಸಿರು ಕ್ರಾಂತಿಯ ಹರಿಕಾರ ಎಂ.ಎಸ್. ಸ್ವಾಮಿನಾಥನ್ ಅವರು ಗುರುವಾರ ನಿಧನ ಹೊಂದಿದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ಗುರುವಾರ ಬೆಳಿಗ್ಗೆ 11.15ಕ್ಕೆ ಸುಮಾರಿಗೆ ಚೆನ್ನೈನಲ್ಲಿರುವ ತಮ್ಮ ಮನೆಯಲ್ಲಿ ನಿಧನರಾಗಿದ್ದಾರೆ ಎಂಬ ವಿಚಾರವನ್ನು ಅವರ ಕುಟುಂಬ ಮೂಲ ಖಚಿತಪಡಿಸಿದೆ. 1960 ಮತ್ತು 1970 ರ ದಶಕದಲ್ಲಿ ಸ್ವಾಮಿನಾಥನ್ ಅವರ ಅದ್ಭುತ ಕೆಲಸವು ಭಾರತೀಯ ಕೃಷಿಯಲ್ಲಿ ಕ್ರಾಂತಿಯನ್ನುಂಟು ಮಾಡಿತು. ವಿಶ್ವಸಂಸ್ಥೆಯ ಪರಿಸರ ಕಾರ್ಯಕ್ರಮದಿಂದ “ಆರ್ಥಿಕ ಪರಿಸರ ವಿಜ್ಞಾನದ ಪಿತಾಮಹ” ಎಂದು

ಭಾರತದ ಹಸಿರು ಕ್ರಾಂತಿಯ ಹರಿಕಾರ ಇನ್ನಿಲ್ಲ!! Read More »

ಶಾಲಾ, ಕಾಲೇಜು ರಜೆ ನಿರ್ಧಾರ ಜಿಲ್ಲಾಧಿಕಾರಿಗಳಿಗೆ ಬಿಟ್ಟದ್ದು! | ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಮಹತ್ವದ ಆದೇಶ ನೀಡಿದ ಸರಕಾರ

ಬೆಂಗಳೂರು: ನಾಳೆ ನಡೆಯುವ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಆಯಾ ಜಿಲ್ಲೆಗಳ ಪರಿಸ್ಥಿತಿಯನ್ನು ಅವಲೋಕಿಸಿಕೊಂಡು ಶಾಲಾ – ಕಾಲೇಜುಗಳಿಗೆ ರಜೆ ನೀಡುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ. ಈ ಬಗ್ಗೆ ಆದೇಶ ಹೊರಡಿಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆ, ಪರಿಸ್ಥಿತಿಯನ್ನು ಗಮನಿಸಿಕೊಂಡು ಸೆ. 29ರಂದು ನಡೆಯುವ ಕರ್ನಾಟಕ ಬಂದ್’ಗೆ ರಜೆಯನ್ನು ನೀಡುವಂತೆ ಸೂಚಿಸಿದೆ. ಖಾಸಗಿ ಶಾಲೆಗಳ ಒಕ್ಕೂಟ ಕರ್ನಾಟಕ ಬಂದ್‌ಗೆ ನೈತಿಕ ಬೆಂಬಲ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕ ಬಂದ್ ಯಶಸ್ವಿಯಾಗುವ ಲಕ್ಷಣಗಳಿವೆ. ಜಿಲ್ಲಾಧಿಕಾರಿಗಳು ರಜೆ ನೀಡುವ ನಿರ್ಧಾರ ತೆಗೆದುಕೊಳ್ಳುವಂತೆ ಖಾಸಗಿ ಶಾಲೆ

ಶಾಲಾ, ಕಾಲೇಜು ರಜೆ ನಿರ್ಧಾರ ಜಿಲ್ಲಾಧಿಕಾರಿಗಳಿಗೆ ಬಿಟ್ಟದ್ದು! | ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಮಹತ್ವದ ಆದೇಶ ನೀಡಿದ ಸರಕಾರ Read More »

ಪೌರ ಕಾರ್ಮಿಕ ದಿನ ಆಚರಣೆಯಿಂದ ಮನೋಬಲ ಹೆಚ್ಚಿಸುವ ಕಾರ್ಯ | ಪೌರ ಕಾರ್ಮಿಕರ ದಿನಾಚರಣೆ ಉದ್ಘಾಟಿಸಿ ಸಹಾಯಕ ಆಯುಕ್ತ ಗಿರೀಶ್ ನಂದನ್

ಪುತ್ತೂರು: ನಗರಸಭೆ ಪೌರ ಕಾರ್ಮಿಕರ ದಿನ ಆಚರಣೆ ಮಾಡುವ ಮೂಲಕ ಪೌರಕಾರ್ಮಿಕರ ಮನೋಬಲವನ್ನು ಹೆಚ್ಚಿಸುವ ಕಾರ್ಯ ಮಾಡಿದೆ ಎಂದು ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್ ಹೇಳಿದರು.  ಗುರುವಾರ ನಗರಸಭೆ ವತಿಯಿಂದ ಪುರಭವನದಲ್ಲಿ ನಡೆದ ಪೌರ ಕಾರ್ಮಿಕರ ದಿನಾಚರಣೆ, ವಿಶೇಷ ಭತ್ತೆ ವಿತರಣೆ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಗರಸಭಾ ವ್ಯಾಪ್ತಿಯ ಪ್ರತಿ ಮನೆಗಳ ಪರಿಸರ ಸ್ವಚ್ಛತೆಯಲ್ಲಿ ಪೌರ ಕಾರ್ಮಿಕರ ಕೊಡುಗೆ ಅಪಾರ ಎಂದ ಅವರು, ವಿಶೇಷವಾಗಿ ನಗರಸಭೆ ವ್ಯಾಪ್ತಿಯ ಪ್ರತೀ ವಾರ್ಡಿನ ಮಣ್ಣು

ಪೌರ ಕಾರ್ಮಿಕ ದಿನ ಆಚರಣೆಯಿಂದ ಮನೋಬಲ ಹೆಚ್ಚಿಸುವ ಕಾರ್ಯ | ಪೌರ ಕಾರ್ಮಿಕರ ದಿನಾಚರಣೆ ಉದ್ಘಾಟಿಸಿ ಸಹಾಯಕ ಆಯುಕ್ತ ಗಿರೀಶ್ ನಂದನ್ Read More »

ಅ. 6-7: ಪುತ್ತೂರು ಶೈಕ್ಷಣಿಕ ವಲಯದ ಪ್ರಾಥಮಿಕ, ಪ್ರೌಢಶಾಲಾ ಕ್ರೀಡಾಕೂಟ ‘ಕ್ರೀಡೋತ್ಸವ-2023’

ಉಪ್ಪಿನಂಗಡಿ: ಪುತ್ತೂರು ಶೈಕ್ಷಣಿಕ ವಲಯದ 2023-24ನೇ ಸಾಲಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕರ ಹಾಗೂ ಬಾಲಕಿಯರ ಕ್ರೀಡಾಕೂಟ ‘ಕ್ರೀಡೋತ್ಸವ-2023’ ಅ. 6ರಂದು ಸರ್ವೋದಯ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಉಪ್ಪಿನಂಗಡಿ ಪೆರಿಯಡ್ಕ ಸರ್ವೋದಯ ಪ್ರೌಢಶಾಲೆ ಆಶ್ರಯದಲ್ಲಿ ಕ್ರೀಡೋತ್ಸವ ಹಮ್ಮಿಕೊಳ್ಳಲಾಗಿದೆ. ಅ. 6ರಂದು ಬೆಳಿಗ್ಗೆ 9ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಅ. 7ರಂದು ಶನಿವಾರ ಅಪರಾಹ್ನ 3ರಿಂದ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಅ. 6-7: ಪುತ್ತೂರು ಶೈಕ್ಷಣಿಕ ವಲಯದ ಪ್ರಾಥಮಿಕ, ಪ್ರೌಢಶಾಲಾ ಕ್ರೀಡಾಕೂಟ ‘ಕ್ರೀಡೋತ್ಸವ-2023’ Read More »

ಜನನಿ ರೈತ ಉತ್ಪಾದಕರ ಕಂಪನಿಯ ವಾರ್ಷಿಕ ಸಾಮಾನ್ಯ ಸಭೆ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ

ಪುತ್ತೂರು: ಕೇಂದ್ರ ಸರಕಾರದ ನಬಾರ್ಡ್ ಪ್ರಾಯೋಜಕತ್ವ ದಲ್ಲಿ ಕೆಮ್ಮಿಂಜೆ ಗ್ರಾಮದ ನೈತಾಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪುತ್ತೂರು ಜನನಿ ರೈತ ಉತ್ಪಾದಕರ ಕಂಪೆನಿ ನಿಯಮಿತದ ವಾರ್ಷಿಕ ಸಾಮಾನ್ಯ ಸಭೆ ಸೆ. 30ರಂದು ನಡೆಯಲಿದ್ದು, ಈ ಕುರಿತು ಪೂರ್ವಭಾವಿ ಸಭೆ ಕಚೇರಿಯಲ್ಲಿ ನಡೆಯಿತು. ಸಭೆ ಬೆಳಿಗ್ಗೆ 10.30ಕ್ಕೆ ಕಂಪನಿ ಕಚೇರಿಯ ವಠಾರದಲ್ಲಿ ನಡೆಯಲಿದ್ದು, ಸಭೆ ಯಶಸ್ವಿಗಾಗಿ ಚರ್ಚಿಸಲಾಯಿತು. ಸಭೆಯಲ್ಲಿ ಕಂಪೆನಿಯ ಆಡಳಿತ ನಿರ್ದೇಶಕ ಅರುಣ್ ಕುಮಾರ್ ಪುತ್ತಿಲ, ಸಿಬ್ಬಂದಿಗಳು ಉಪಸ್ಥಿತರಿದ್ದರು.

ಜನನಿ ರೈತ ಉತ್ಪಾದಕರ ಕಂಪನಿಯ ವಾರ್ಷಿಕ ಸಾಮಾನ್ಯ ಸಭೆ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ Read More »

ಕೆವಿಜಿ ಪ್ರಾಂಶುಪಾಲ ಕೊಲೆ ಪ್ರಕರಣ: 6 ಮಂದಿ ಅಪರಾಧಿಗಳು

ಬೆಂಗಳೂರು: ಕರಾವಳಿಯನ್ನು ಬೆಚ್ಚಿಬೀಳಿಸಿದ್ದ 12 ವರ್ಷದ ಹಿಂದಿನ ಕೊಲೆ ಪ್ರಕರಣಕ್ಕೆ ಮತ್ತೆ ಜೀವ ಲಭಿಸಿದ್ದು, ಪ್ರಕರಣದ ಆರೋಪಿಗಳನ್ನು ದೋಷಮುಕ್ತಗೊಳಿಸಿದ್ದ ಕೆಳಗಿನ ನ್ಯಾಯಾಲಯದ ತೀರ್ಪನ್ನು ಹೈಕೋರ್ಟ್‌ ರದ್ದುಮಾಡಿದೆ. ಸುಳ್ಯದ ಕೆವಿಜಿ ಪಾಲಿಟೆಕ್ನಿಕ್‌ ಕಾಲೇಜಿನ ಪ್ರಾಂಶುಪಾಲ ಎ.ಎಸ್‌. ರಾಮಕೃಷ್ಣ ಕೊಲೆ ಪ್ರಕರಣದ ಆರೋಪಿಗಳಾದ ಡಾ. ರೇಣುಕಾ ಪ್ರಸಾದ್‌ ಸೇರಿದಂತೆ 7 ಮಂದಿಯನ್ನು ಖುಲಾಸೆಗೊಳಿಸಿ ಅಧೀನ ನ್ಯಾಯಾಲಯ ನೀಡಿದ್ದ ತೀರ್ಪನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿ 6 ಮಂದಿಯನ್ನು ದೋಷಿಗಳಾಗಿ ತೀರ್ಮಾನಿದೆ. ರೇಣುಕಾ ಪ್ರಸಾದ್‌ ಸೇರಿದಂತೆ 7 ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿ ಪುತ್ತೂರಿನ

ಕೆವಿಜಿ ಪ್ರಾಂಶುಪಾಲ ಕೊಲೆ ಪ್ರಕರಣ: 6 ಮಂದಿ ಅಪರಾಧಿಗಳು Read More »

error: Content is protected !!
Scroll to Top