ನರಿಮೊಗರು ಶಾಲೆಯಲ್ಲಿ ಸ್ವಚ್ಛತಾ ಹಿ ಸೇವಾ-ಸ್ವಚ್ಛತೆಯೇ ಸೇವೆ ಅಭಿಯಾನದಲ್ಲಿ ಪ್ರತಿಜ್ಞಾ ವಿಧಿ

ಮುಕ್ವೆ: ನರಿಮೊಗರು ಶಾಲೆಯಲ್ಲಿ ಬುಧವಾರ ಹಮ್ಮಿಕೊಂಡ ಸ್ವಚ್ಛತಾ ಹಿ ಸೇವಾ, ಸ್ವಚ್ಛತೆಯೇ ಸೇವೆ ಅಭಿಯಾನ -2023ರಲ್ಲಿ ಪ್ರತಿಜ್ಞಾ ವಿಧಿ ಕಾರ್ಯಕ್ರಮ ನೆರವೇರಿಸಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹರಿಣಿ ಪಂಜಳ, ಉಪಾಧ್ಯಕ್ಷ ಉಮೇಶ್ ಇಂದಿರಾನಗರ, ಎಸ್ ಡಿ ಎಂ ಸಿ ಅಧ್ಯಕ್ಷ ಕೃಷ್ಣರಾಜ ಜೈನ್, ಸಲೀಂ ಮಾಯಂಗಳ, ಸೌಮ್ಯ ರಮೇಶ್, ಗ್ರಾಮ ಪಂಚಾಯಿತಿ ನಿಕಟ ಪೂರ್ವ ಉಪಾಧ್ಯಕ್ಷ ಸುಧಾಕರ ಕುಲಾಲ್, ಸದಸ್ಯರಾದ ಪುಷ್ಪಾವತಿ, ಗಣೇಶ್, ಜಯಲಕ್ಷ್ಮಿ, ಆಶಾ ಕಾರ್ಯಕರ್ತೆ ವಾಣಿ, ಸ್ವಚ್ಛತಾ ಸಿಬ್ಬಂದಿಗಳಾದ ಸುಜಾತಾ, ನಮಿತಾ, ಶಾಲಾ ಶಿಕ್ಷಕರಾದ […]

ನರಿಮೊಗರು ಶಾಲೆಯಲ್ಲಿ ಸ್ವಚ್ಛತಾ ಹಿ ಸೇವಾ-ಸ್ವಚ್ಛತೆಯೇ ಸೇವೆ ಅಭಿಯಾನದಲ್ಲಿ ಪ್ರತಿಜ್ಞಾ ವಿಧಿ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ತರಬೇತಿ

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಸಮಾಜಶಾಸ್ತ್ರ ವಿಭಾಗ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಘಟಕದ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಕ್ರಮ ಬುಧವಾರ ನಡೆಯಿತು. ಮಂಗಳೂರು ಸರ್ವಜ್ಞ ಅಕಾಡೆಮಿ ನಿರ್ದೇಶಕ ಸುರೇಶ್ ಎಂ.ಎಸ್. ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ದಿನೇಶ ಪಿ.ಟಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕಿ ಆರತಿ ಕೆ. ಉಪಸ್ಥಿತರಿದ್ದರು. ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ, ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಘಟಕದ ಸಂಯೋಜಕ ಮನೋಹರ ಪ್ರಾಸ್ತಾವಿಕವಾಗಿ ಮಾತನಾಡಿದರು. ದೀಕ್ಷಿತ್ ಸ್ವಾಗತಿಸಿದರು. ವಿದ್ಯಾರ್ಥಿ ವಿಜ್ಞೇಶ್

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ತರಬೇತಿ Read More »

ಶ್ರೀ ದೇವಿ ಮಹಾತ್ಮೆ ತುಳುವಿನಲ್ಲಿ `ಸಿರಿ ದೇವಿ ಮೈಮೆ ‘!! | ಮೊದಲ ಪ್ರದರ್ಶನಕ್ಕೂ ಸ್ಥಳ, ದಿನಾಂಕ ನಿಗದಿ

ಮಂಗಳೂರು: ತುಳುವೆರೆ ಆಯನೊ ಕೂಟದ ವತಿಯಿಂದ ಪ್ರಥಮ ಬಾರಿಗೆ ತುಳು ಭಾಷೆಯಲ್ಲಿ ಭಾಗವತಿಕೆ ಸಹಿತ ಶ್ರೀದೇವಿ ಮಹಾತ್ಮೆ ಯಕ್ಷಗಾನವು ‘ಸಿರಿ ದೇವಿ ಮೈಮೆ’ ಎಂಬ ಹೆಸರಿನಲ್ಲಿ ಸೆ. 30ರಂದು ನಗರದ ಪುರಭವನದಲ್ಲಿ ಪ್ರದರ್ಶನಗೊಳ್ಳಲಿದೆ ಎಂದು ಕೂಟದ ಅಧ್ಯಕ್ಷೆ ಶಮಿನಾ ಆಳ್ವ ತಿಳಿಸಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಅಪರಾಹ್ನ 2 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಕೂಟದ 2023-24ನೇ ಸಾಲಿನ ಕಾರ್ಯಕಾರಿ ಸಮಿತಿಯ ಪದಗ್ರಹಣ ನಡೆಯಲಿದೆ. ಕಾರ್ಯಕ್ರಮದಲ್ಲಿ

ಶ್ರೀ ದೇವಿ ಮಹಾತ್ಮೆ ತುಳುವಿನಲ್ಲಿ `ಸಿರಿ ದೇವಿ ಮೈಮೆ ‘!! | ಮೊದಲ ಪ್ರದರ್ಶನಕ್ಕೂ ಸ್ಥಳ, ದಿನಾಂಕ ನಿಗದಿ Read More »

ಚುನಾವಣಾಧಿಕಾರಿ ಕಾರು ತಡೆದು ದಾಖಲೆಗಳನ್ನು ದೋಚಿದ ದುಷ್ಕರ್ಮಿಗಳು!!

ರಾಮನಗರ: ಹಾಲು ಉತ್ಪಾದಕ ಸಂಘದ ಚುನಾವಣೆ ನಡೆಸಲು ಬರುತ್ತಿದ್ದ ಚುನಾವಣಾಧಿಕಾರಿಗಳ ಕಾರನ್ನು ತಡೆದು ದಾಖಲೆಗಳನ್ನು ದೋಚಿದ ಘಟನೆ ಹೊಸಪಾಳ್ಯ ಹಾಗೂ ಕೆಂಚನಹಳ್ಳಿಯಲ್ಲಿ ಬುಧವಾರ ನಡೆದಿದೆ. ರಾಮನಗರ ಜಿಲ್ಲೆ ಮಾಗಡಿ ತಾಲೂಕು ತಿಪ್ಪಸಂದ್ರ ಹೋಬಳಿಯ ಹುಳ್ಳೇನಹಳ್ಳಿ ಹಾಲು ಉತ್ಪಾದಕ ಸಂಘದ ಚುನಾವಣೆ ನಡೆಸಲು ದಿನಾಂಕ ನಿಗದಿಯಾಗಿತ್ತು. ಅದರಂತೆ ಬುಧವಾರ ಅಧಿಕಾರಿಗಳು ಕಾರಿನಲ್ಲಿ ಬರುತ್ತಿದ್ದ ವೇಳೆ ಚುನಾವಣಾಧಿಕಾರಿಗಳ ಕಾರನ್ನು ಹೊಸಪಾಳ್ಯ ಹಾಗೂ ಕೆಂಚನಹಳ್ಳಿ ರಸ್ತೆ ಮಧ್ಯದಲ್ಲೇ ಅಡ್ಡಕಟ್ಟಿದ ತಂಡ ಚುನಾವಣಾಧಿಕಾರಿಗಳ ಬಳಿ ಇದ್ದ ಮೊಬೈಲ್ ಹಾಗೂ ಚುನಾವಣೆಗೆ ಸಂಬಂಧಪಟ್ಟ ನಾಮಪತ್ರ

ಚುನಾವಣಾಧಿಕಾರಿ ಕಾರು ತಡೆದು ದಾಖಲೆಗಳನ್ನು ದೋಚಿದ ದುಷ್ಕರ್ಮಿಗಳು!! Read More »

ಅಚ್ಚೇದಿನ್ ಬರುವುದಾಗಿ ಹೇಳಿದ್ದ ಬಿಜೆಪಿ, ಜನರ ಖಾತೆಗೆ ನಯಾ ಪೈಸೆ ಹಣ ಹಾಕಿಲ್ಲವೆಂದ ಅಶೋಕ್ ರೈ | ಕೊಳ್ತಿಗೆ ವಲಯ ಕಾಂಗ್ರೆಸ್‌ಕಾರ್ಯಕರ್ತರ ಸಭೆಯಲ್ಲಿ ಶಾಸಕರಿಗೆ ಸನ್ಮಾನ | ಕಾವು ಹೇಮನಾಥ ಶೆಟ್ಟಿ ಅವರಿಗೆ ಅರಣ್ಯ ನಿಗಮ ನೀಡಲು ಆಗ್ರಹ

ಪುತ್ತೂರು: ನಾವು ಅಧಿಕಾರಕ್ಕೆ ಬಂದರೆ ದೇಶದಲ್ಲಿ ಅಚ್ಚೇದಿನ್ ಕೊಡುತ್ತೇವೆ, ಜನರಿಗೆ ನೆಮ್ಮದಿಯ ಜೀವನ ಕೊಡುತ್ತೇವೆ ಎಂದು ಅಧಿಕಾರಕ್ಕೆ ಬಂದ ಬಿಜೆಪಿ ಜನರ ಖಾತೆಗೆ ನಯಾ ಪೈಸೆ ನೀಡಿಲ್ಲ. ನೆಮ್ಮದಿಯ ಜೀವನವನ್ನೂ ನೀಡಿಲ್ಲ ಎಂದು ಶಾಸಕ ಅಶೋಕ್ ರೈ ಆರೋಪಿಸಿದರು. ಕೊಳ್ತಿಗೆ ವಲಯ ಕಾಂಗ್ರೆಸ್ ವತಿಯಿಂದ ಕೊಳ್ತಿಗೆ ಅಂಬೇಡ್ಕರ್ ಭವನದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು. ಚುನಾವಣೆ ಸಂದರ್ಭದಲ್ಲಿ ರಾಜ್ಯದ ಜನತೆಗೆ ಕೊಟ್ಟಿದ್ದ ಗ್ಯಾರಂಟಿಯನ್ನು ಕಾಂಗ್ರೆಸ್ ಈಡೇರಿಸಿದೆ. ಜನರ ಖಾತೆಗೆ ಹಣವನ್ನು ನೀಡಿದ್ದೇವೆ, ಅಕ್ಕಿಯನ್ನು ನೀಡಿದ್ದೇವೆ,

ಅಚ್ಚೇದಿನ್ ಬರುವುದಾಗಿ ಹೇಳಿದ್ದ ಬಿಜೆಪಿ, ಜನರ ಖಾತೆಗೆ ನಯಾ ಪೈಸೆ ಹಣ ಹಾಕಿಲ್ಲವೆಂದ ಅಶೋಕ್ ರೈ | ಕೊಳ್ತಿಗೆ ವಲಯ ಕಾಂಗ್ರೆಸ್‌ಕಾರ್ಯಕರ್ತರ ಸಭೆಯಲ್ಲಿ ಶಾಸಕರಿಗೆ ಸನ್ಮಾನ | ಕಾವು ಹೇಮನಾಥ ಶೆಟ್ಟಿ ಅವರಿಗೆ ಅರಣ್ಯ ನಿಗಮ ನೀಡಲು ಆಗ್ರಹ Read More »

ಒಂದೂವರೆ ವರ್ಷದ ಮಗುವಿನ ಕ್ರೂರ ಹತ್ಯೆಗೆ ಯತ್ನ! | ಮಂಗಳೂರು ಪೊಲೀಸ್ ಠಾಣೆ ಮುಂಭಾಗವೇ ತಂದೆಯಿಂದ ಕೃತ್ಯ!!

ಮಂಗಳೂರು: ಇಲ್ಲಿನ ಪೊಲೀಸ್ ಠಾಣೆಯೊಂದರ ಮುಂಭಾಗವೇ ಒಂದೂವರೆ ವರ್ಷದ ಎಳೆ ಮಗುವಿನ ಕುತ್ತಿಗೆ ಹಿಡಿದು, ಎತ್ತಿ ನೆಲಕ್ಕೆಸೆದು ಕೊಲೆ ಮಾಡಲು ಯತ್ನಿಸಿದ ಘಟನೆ ನಡೆದಿದೆ. ಆರೋಪಿಯನ್ನು ವ್ಯಾಸನಗರದ ನಿವಾಸಿ ಮಹೇಶ್ ಎಂದು ಗುರುತಿಸಲಾಗಿದೆ. ಕಿರುಕುಳದಿಂದ ಬೇಸತ್ತ ಆರೋಪಿ ಮಹೇಶ್’ನ ಪತ್ನಿ ಪೊಲೀಸ್ ಠಾಣೆಗೆ ದೂರು ನೀಡಲು ಬಂದಿದ್ದ ವೇಳೆ ಘಟನೆ ನಡೆದಿದೆ ಎಂದು ಹೇಳಲಾಗಿದೆ. ತನ್ನ ಪತಿ ಮಹೇಶ್ ಎಂಬಾತ ತನ್ನ ಇಬ್ಬರು ಮಕ್ಕಳನ್ನು ಹಾಗೂ ತನ್ನನ್ನು ಬೆಂಕಿ ಹಾಕಿ ಸುಟ್ಟು ಹಾಕುತ್ತೇನೆ ಎಂದು ಬೆದರಿಕೆ ಹಾಕಿ,

ಒಂದೂವರೆ ವರ್ಷದ ಮಗುವಿನ ಕ್ರೂರ ಹತ್ಯೆಗೆ ಯತ್ನ! | ಮಂಗಳೂರು ಪೊಲೀಸ್ ಠಾಣೆ ಮುಂಭಾಗವೇ ತಂದೆಯಿಂದ ಕೃತ್ಯ!! Read More »

ಪಡುವನ್ನೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹೊಸ ಸಂಘ ಉದ್ಘಾಟನೆ

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅರಿಯಡ್ಕ ವಲಯದ ಪಡುವನ್ನೂರು ಕಾರ್ಯಕ್ಷೇತ್ರದಲ್ಲಿ ಹೊಸ ಸಂಘದ ಉದ್ಘಾಟನಾ ಸಮಾರಂಭ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಯೋಜನೆಯ ದ.ಕ. ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್, 1982ರಲ್ಲಿ ಯೋಜನೆಯು ಆರಂಭಗೊಂಡಿದ್ದು, ಆ ದಿನಗಳಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ 5-6 ಸಂಘ ಮಾತ್ರ ಕಾರ್ಯಾಚರಿಸುತ್ತಿತ್ತು. ಪ್ರಸ್ತುತ ರಾಜ್ಯಾದ್ಯಂತ ಐದೂವರೆ ಲಕ್ಷ ಸಂಘ ಹುಟ್ಟಿಕೊಂಡು ಸುಮಾರು 50 ಲಕ್ಷ ಜನ ಸಂಘದಲ್ಲಿ ಸಕ್ರಿಯರಾಗಿದ್ದಾರೆ. ಈ ಮೂಲಕ ಪೂಜ್ಯರು ಜನರ ಬದುಕನ್ನು ಹಸನಾಗುವಂತೆ ಮಾಡಿದ್ದಾರೆ ಎಂದ

ಪಡುವನ್ನೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹೊಸ ಸಂಘ ಉದ್ಘಾಟನೆ Read More »

ಕನ್ನಡ ಎಂ.ಎ. ವಿದ್ಯಾಭ್ಯಾಸಕ್ಕೆ ಕಸಾಪ ಪುತ್ತೂರು ಘಟಕದ ಸಹಾಯಹಸ್ತ | ವಿದ್ಯಾರ್ಥಿಗಳಿಗಾಗಿ ತಂದಿರುವ ಹೊಸ ಯೋಜನೆಯ ಬಗ್ಗೆ ಇಲ್ಲಿದೆ ಮಾಹಿತಿ

ಪುತ್ತೂರು: ಕನ್ನಡ ಐಚ್ಛಿಕ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆಯುವವರಿಗೆ ನೆರವಾಗಲು ಕನ್ನಡ ಸಾಹಿತ್ಯ ಪರಿಷತ್’ನ ಪುತ್ತೂರು ಘಟಕ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಪ್ರಸ್ತುತ ಪದವಿ ವ್ಯಾಸಂಗ ಪೂರೈಸಿ ಆರ್ಥಿಕ ಸಮಸ್ಯೆಯಿಂದ ಉನ್ನತ ವ್ಯಾಸಂಗ ಮಾಡಲು ಅವಕಾಶ ವಂಚಿತ ವಿದ್ಯಾರ್ಥಿಗಳು ಅಥವಾ ಆಸಕ್ತ ವಿದ್ಯಾರ್ಥಿಗಳಿಗಾಗಿ ದಿನನಿತ್ಯದ ತರಗತಿಗಳಿಗೆ ಹಾಜರಾಗಿ ಕನ್ನಡದಲ್ಲಿ ಎಂ.ಎ. ಮಾಡಲು ಪುತ್ತೂರು ತಾಲೂಕಿನಲ್ಲಿರುವ ವಿದ್ಯಾ ಸಂಸ್ಥೆಯೊಂದರಲ್ಲಿ ಅವಕಾಶ ಕಲ್ಪಿಸಲಾಗಿದೆ. ಆರ್ಥಿಕವಾಗಿ ಸಮಸ್ಯೆ ಇರುವ ಬಡ ವಿದ್ಯಾರ್ಥಿಗಳಿಗೆ ದಾನಿಗಳ ಸಹಕಾರದಿಂದ ವಿದ್ಯಾರ್ಥಿ ವೇತನದ ವ್ಯವಸ್ಥೆ ಮಾಡಲಾಗಿದೆ. ಸಂಖ್ಯೆ

ಕನ್ನಡ ಎಂ.ಎ. ವಿದ್ಯಾಭ್ಯಾಸಕ್ಕೆ ಕಸಾಪ ಪುತ್ತೂರು ಘಟಕದ ಸಹಾಯಹಸ್ತ | ವಿದ್ಯಾರ್ಥಿಗಳಿಗಾಗಿ ತಂದಿರುವ ಹೊಸ ಯೋಜನೆಯ ಬಗ್ಗೆ ಇಲ್ಲಿದೆ ಮಾಹಿತಿ Read More »

ಶತಾಯುಷಿ ಪೊಡಿ ನಿಧನ

ಕುಂಬ್ರ: ಒಳಮೊಗ್ರು ಗ್ರಾಮದ ಕುಂಬ್ರ ನಿವಾಸಿ ಶತಾಯುಷಿ ಪೊಡಿ (105) ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ ರಾತ್ರಿ ಸ್ವಗೃಹದಲ್ಲಿ ನಿಧನರಾದರು. ಮೃತರು ಮೂವರು ಪುತ್ರರು, ಮೂವರು ಪುತ್ರಿಯರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಮೃತರ ಮನೆಗೆ ಅನೇಕ ಗಣ್ಯರು ಆಗಮಿಸಿ ಸಂತಾಪ ಸೂಚಿಸಿದ್ದಾರೆ.

ಶತಾಯುಷಿ ಪೊಡಿ ನಿಧನ Read More »

ಧರ್ಮದ ನೆಲೆಯಲ್ಲಿ ಯೋಗ ಜಗತ್ತಿಗೇ ಪೂರಕ | ಆನಂದೋತ್ಸವ ಶಿಬಿರದಲ್ಲಿ  ಡಾ.ಎಚ್.ಮಾಧವ ಭಟ್

ಪುತ್ತೂರು: ಯೋಗ ಭಾರತದಲ್ಲಿ ಸಹಜವಾಗಿ ಹುಟ್ಟಿಬಂದ ಅಮೋಘ ಸಂಗತಿ. ಆದರೆ ಸುಲಭಸಾಧ್ಯವಾದ ವಿಷಯಗಳ ಬಗ್ಗೆ ಅನೇಕರಿಗೆ ನಿರ್ಲಕ್ಷ್ಯ ಹುಟ್ಟಿಕೊಳ್ಳುತ್ತದೆ. ಆದ್ದರಿಂದಲೇ ಇತ್ತೀಚೆಗಿನವರೆಗೆ ಯೋಗವನ್ನು ಗಂಭೀರವಾಗಿ ಪರಿಗಣಿಸುವ ಮನೋಭಾವ ಕಂಡುಬರುತ್ತಿರಲಿಲ್ಲ. ಈಗೀಗ ಯೋಗಾಭ್ಯಾಸದ ಮಹತ್ವವನ್ನು ಜನ ಅರಿಯಲಾರಂಭಿಸಿದ್ದಾರೆ ಎಂಬುದು ಆಶಾದಾಯಕ ಬೆಳವಣಿಗೆ ಎಂದು ವಿಶ್ರಾಂತ ಪ್ರಾಚಾರ್ಯ, ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಡಾ. ಎಚ್. ಮಾಧವ ಭಟ್ ಹೇಳಿದರು. ಅಂಬಿಕಾ ಮಹಾವಿದ್ಯಾಲಯದ ತತ್ತ್ವಶಾಸ್ತ್ರ ವಿಭಾಗದ ವತಿಯಿಂದ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ನೇತೃತ್ವದಲ್ಲಿ ಆಯೋಜಿಸಲಾದ

ಧರ್ಮದ ನೆಲೆಯಲ್ಲಿ ಯೋಗ ಜಗತ್ತಿಗೇ ಪೂರಕ | ಆನಂದೋತ್ಸವ ಶಿಬಿರದಲ್ಲಿ  ಡಾ.ಎಚ್.ಮಾಧವ ಭಟ್ Read More »

error: Content is protected !!
Scroll to Top