ಎಸ್‌ಕೆಪಿಎ ಜಿಲ್ಲಾಧ್ಯಕ್ಷರಾಗಿ ಪದ್ಮಪ್ರಸಾದ್‌ ಜೈನ್‌

ಮಂಗಳೂರು: ದ.ಕ. ಹಾಗೂ ಉಡುಪಿ ಜಿಲ್ಲೆಯನ್ನೊಳಗೊಂಡ ಸೌತ್‌ ಕೆನರಾ ಫೋಟೋಗ್ರಾಫರ್ಸ್‌ ಅಸೋಸಿಯೇಶನ್‌ ನೂತನ ಅಧ್ಯಕ್ಷರಾಗಿ ಕಾರ್ಕಳ ಶಿಲ್ಪಾ ಡಿಜಿಟಲ್ ಸ್ಟುಡಿಯೋ ಮಾಲಕ‌ ನೆಲ್ಲಿಕಾರು ಪದ್ಮಪ್ರಸಾದ್‌ ಜೈನ್‌ ಆಯ್ಕೆಯಾಗಿದ್ದಾರೆ.  ಸೆ. 26ರಂದು ಮಂಗಳೂರು ಸೆಬಾಸ್ಟಿಯನ್‌ ಹಾಲ್‌ನಲ್ಲಿ ಎಸ್‌ಕೆಪಿಎ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ನ್ಯೂಸ್‌ ಕಾರ್ಕಳ ಸಲಹಾ ಸಮಿತಿ ಸದಸ್ಯರಾಗಿ, ಜೇಸಿಸ್‌ ಶಾಲಾ ಉಪಾಧ್ಯಕ್ಷರೂ ಆಗಿರುವ ಪದ್ಮಪ್ರಸಾದ್‌ ಜೈನ್‌ ಅವರು ಸಾಮಾಜಿಕ, ಧಾರ್ಮಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡವರು. ಓಶಿಯನಿಕ್‌ ಇನ್‌ಫ್ರಾ ಸಂಸ್ಥೆಯ ಪಾಲುದಾರರಾಗಿರುವ ಪದ್ಮಪ್ರಸಾದ್‌ ಅವರು ಯಶಸ್ವಿ ಉದ್ಯಮಿಯೂ […]

ಎಸ್‌ಕೆಪಿಎ ಜಿಲ್ಲಾಧ್ಯಕ್ಷರಾಗಿ ಪದ್ಮಪ್ರಸಾದ್‌ ಜೈನ್‌ Read More »

ಶಾಸಕಿ ಮನೆಯಿಂದಲೇ ಆರಂಭವಾದ ಕಾಲುಬಾಯಿ ಲಸಿಕಾ ಅಭಿಯಾನ

ಸುಳ್ಯ: ಕಾಲುಬಾಯಿ ಲಸಿಕಾ ಅಭಿಯಾನ ಕಾರ್ಯಕ್ರಮಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರಳ್ಯ ಅವರ ಮನೆಯಲ್ಲಿ ಚಾಲನೆ ನೀಡಲಾಯಿತು. ಕರ್ನಾಟಕ ಸರ್ಕಾರ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ಸಹಯೋಗದಲ್ಲಿ ನಡೆದ ಅಭಿಯಾನವನ್ನು ಶಾಸಕಿ ಭಾಗೀರಥಿ ಮುರುಳ್ಯ ದೀಪ ಬೆಳಗಿಸಿ ಉದ್ಘಾಟಿಸಿದರು. ವೇದಿಕೆಯಲ್ಲಿ ಹರ್ಷನ್ ಕೆ.ವಿ., ಜಾನಕಿ ಮುರುಳ್ಯ, ವಸಂತ ನಡುಬೈಲು, ಸೀತಾರಾಮ ಗೌಡ, ಭುವನೇಶ್ವರ ಗೌಡ, ವಸಂತ ಹುದೇರಿ, ನಿತಿನ್ ಪ್ರಭು, ಅಜಿತ್ ಕೆ ವಿ, ಸಿಬ್ಬಂದಿಗಳು ಹಾಗೂ

ಶಾಸಕಿ ಮನೆಯಿಂದಲೇ ಆರಂಭವಾದ ಕಾಲುಬಾಯಿ ಲಸಿಕಾ ಅಭಿಯಾನ Read More »

ಅ. 22ರಂದು ಪುತ್ತೂರುದ ಪಿಲಿರಂಗ್ ಸೀಸನ್-2 | ಆಮಂತ್ರಣ ಪತ್ರ ಬಿಡುಗಡೆ

ಪುತ್ತೂರು: ಅ. 22ರಂದು ಪುತ್ತೂರು ಕಿಲ್ಲೆ ಮೈದಾನದಲ್ಲಿ ನಡೆಯುವ ಪುತ್ತೂರುದ ಪಿಲಿರಂಗ್ ಸೀಸ್-2 ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ಹಾಗೂ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳಿಯ ಕೇಶವ ಪ್ರಸಾದ್ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಪುತ್ತೂರುದ ಪಿಲಿರಂಗ್ ಸೀಸನ್-2 ಸಮಿತಿಯ ವಿವಿಧ ಪದಾಧಿಕಾರಿಗಳಾದ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಎನ್. ಚಂದ್ರಹಾಸ ಶೆಟ್ಟಿ, ಪಂಜಿಗುಡ್ಡೆ ಈಶ್ವರ ಭಟ್,

ಅ. 22ರಂದು ಪುತ್ತೂರುದ ಪಿಲಿರಂಗ್ ಸೀಸನ್-2 | ಆಮಂತ್ರಣ ಪತ್ರ ಬಿಡುಗಡೆ Read More »

ರಾಹುಲ್ ಗಾಂಧಿ, ಸಿದ್ದರಾಮಯ್ಯ ಅವರಿಗೆ ಆಶೀರ್ವಾದ ನೀಡಲು ನಿರಾಕರಿಸಿದರೇ ಶೃಂಗೇರಿ ಜಗದ್ಗುರು?? ಆಶೀರ್ವಾದ ನಿರಾಕರಿಸಲು ಕಾರಣ ನೀಡಿದ ಮಹಾಸ್ವಾಮೀಜಿ!!

ಶೃಂಗೇರಿ: ಶೃಂಗೇರಿ ಮಠಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ ಹಾಗೂ ರಾಜ್ಯದ ಸಿಎಂ ಸಿದ್ಧರಾಮಯ್ಯ ಅವರಿಗೆ ಶೃಂಗೇರಿ ಪೀಠದ ಜಗದ್ಗುರು ಶ್ರೀ ಭಾರತೀ ತೀರ್ಥ ಮಹಾಸ್ವಾಮೀಜಿ ಅವರು ಆಶೀರ್ವಾದ ಮಾಡಲು ನಿರಾಕರಿಸಿದ್ದು, ಈ ಕುರಿತಾದ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಸಂದರ್ಭದಲ್ಲಿ ನಡೆದ ಸಭೆಯಲ್ಲಿ ಜಗದ್ಗುರುಗಳು, “ನೀವು ಮಠಕ್ಕೆ ಬಂದಿದ್ದೀರಿ, ಧನ್ಯವಾದಗಳು. ಆದರೆ, ನೀವು ಏನು ಮಾಡುತ್ತಿದ್ದೀರಿ ಎಂದು ನಿಮಗೆ ತಿಳಿದಿಲ್ಲ, ನಾವು ನಿಮ್ಮನ್ನು ಆಶೀರ್ವದಿಸಲು ಸಾಧ್ಯವಿಲ್ಲ” ಎಂದು ಹೇಳಿದರು ಎಂದು ಹೇಳಲಾಗುತ್ತಿದೆ. ಸಭೆಯಲ್ಲಿ

ರಾಹುಲ್ ಗಾಂಧಿ, ಸಿದ್ದರಾಮಯ್ಯ ಅವರಿಗೆ ಆಶೀರ್ವಾದ ನೀಡಲು ನಿರಾಕರಿಸಿದರೇ ಶೃಂಗೇರಿ ಜಗದ್ಗುರು?? ಆಶೀರ್ವಾದ ನಿರಾಕರಿಸಲು ಕಾರಣ ನೀಡಿದ ಮಹಾಸ್ವಾಮೀಜಿ!! Read More »

ಸೆ. 28ರಂದು ಬೃಹತ್ ಮಿಲಾದ್ ಸಮಾವೇಶ, ವಾಹನ ರ್ಯಾಲಿ, ಬುರ್ದಾ ಮಜ್ಲಿಸ್

ಪುತ್ತೂರು: ದ.ಕ. ಜಿಲ್ಲಾ ಯುವಜನ ಪರಿಷತ್ ಪುತ್ತೂರು ತಾಲೂಕು ಹಾಗೂ ಈದ್ ಮಿಲಾದ್ ಸಮಿತಿ ವತಿಯಿಂದ 31ನೇ ವರ್ಷದ ಬೃಹತ್ ಮಿಲಾದ್ ಸಮಾವೇಶ ಹಾಗೂ ಬುರ್ದಾ ಮಜ್ಲಿಸ್ ಸೆ. 28 ಗುರುವಾರ ಸಂಜೆ 7 ಗಂಟೆಗೆ ನಗರದ ಕಿಲ್ಲೆ ಮೈದಾನದಲ್ಲಿ ನಡೆಯಲಿದೆ ಎಂದು ಜಿಲ್ಲಾ ಯುವಜನ ಪರಿಷತ್ ತಾಲೂಕು ಅಧ್ಯಕ್ಷ ಅಶ್ರಫ್ ಕಲ್ಲೇಗ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ಸಮಾವೇಶದ ಅಂಗವಾಗಿ ಸಂಜೆ 4ಕ್ಕೆ ಕಬಕ ವೃತ್ತದಲ್ಲಿ ಬೃಹತ್ ವಾಹನ ರ್ಯಾಲಿಗೆ ಕಬಕ ಟೈಲರ್ ಇಸ್ಮಾಯಿಲ್

ಸೆ. 28ರಂದು ಬೃಹತ್ ಮಿಲಾದ್ ಸಮಾವೇಶ, ವಾಹನ ರ್ಯಾಲಿ, ಬುರ್ದಾ ಮಜ್ಲಿಸ್ Read More »

ಕಾವೇರಿ ನೀರಿಗಾಗಿ ಬೆಂಗಳೂರು ಬಂದ್ | ಫ್ರೀಡಂ ಪಾರ್ಕಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ ರೈತ!!

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳು ಇಂದು ಬೆಂಗಳೂರು ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಬೆಳಗ್ಗೆ ಆರು ಗಂಟೆಯಿಂದಲೂ ಅಂಗಡಿ ಮುಂಗಟ್ಟುಗಳು ಮುಚ್ಚಿದ್ದು, ವ್ಯಾಪಾರ ವಹಿವಾಟು ಬಹುತೇಕ ಸ್ಥಗಿತಗೊಂಡಿದೆ. ಇದರ ನಡುವೆ ರೈತರೊಬ್ಬರು ಫ್ರೀಡಂ ಪಾರ್ಕಿನಲ್ಲಿ ಆತ್ಮಹತ್ಯೆಗೂ ಯತ್ನಿಸಿದ ಘಟನೆ ನಡೆಯಿತು. ಮರಕ್ಕೆ ನೇಣು ಹಾಕಿಕೊಳ್ಳಲು ಯತ್ನಿಸುತ್ತಿದ್ದಾಗ ಪೊಲೀಸರು ತಡೆದಿದ್ದಾರೆ. ವಿವಿಧೆಡೆ ಪ್ರತಿಭಟನೆಗಳು ನಡೆಯುತ್ತಿದ್ದು, ವಿಭಿನ್ನ ರೀತಿಯ ಪ್ರದರ್ಶನಗಳನ್ನು ಜನರು ಮುಂದಿಟ್ಟಿದ್ದಾರೆ. ಕೆಲವರು ಹೆಣದ ರೀತಿಯಲ್ಲೇ ಮಲಗಿ, ಇನ್ನೂ ಕೆಲವರು ರಸ್ತೆಯಲ್ಲಿ ಉರುಳಾಡುತ್ತಾ

ಕಾವೇರಿ ನೀರಿಗಾಗಿ ಬೆಂಗಳೂರು ಬಂದ್ | ಫ್ರೀಡಂ ಪಾರ್ಕಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ ರೈತ!! Read More »

ಅಂತರ್ ಜಿಲ್ಲಾ ಮಟ್ಟದ ಭಜನಾ ಸ್ಪರ್ಧೆ | ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕರ ತಂಡ ಭಾಗಿ

ಪುತ್ತೂರು: ಕಲ್ಮಡ್ಕದ ಕಲಾಗ್ರಾಮ ಆಯೋಜಿಸಿದ ಅಂತರ್ಜಿಲ್ಲಾ ಮಟ್ಟದ ಭಜನಾ ಸ್ಪರ್ಧೆ “ಭಜನಾ ಸಮರ್ಥ- 2023″ರಲ್ಲಿ ವಿವೇಕಾನಂದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕರ ತಂಡ ಪಾಲ್ಗೊಂಡಿದೆ. ವೆಂಕಟೇಶ್ ಪ್ರಸಾದ್, ಶರ್ಮಿಳಾ, ಶೋಭಾ ಜೆ. ರೈ, ಜ್ಯೋತಿ ದಿವಾಕರ್, ವೀಣಾ ಕುಮಾರಿ, ರೇಷ್ಮಾ, ಕವಿತಾ ಸತೀಶ್, ಜ್ಯೋತಿಲಕ್ಷ್ಮಿ, ಯಶಸ್ವಿನಿ ಟಿ. ಅವರನ್ನು ಒಳಗೊಂಡ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕರು ತಂಡದಲ್ಲಿದ್ದರು.

ಅಂತರ್ ಜಿಲ್ಲಾ ಮಟ್ಟದ ಭಜನಾ ಸ್ಪರ್ಧೆ | ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕರ ತಂಡ ಭಾಗಿ Read More »

ಭಾರತೀಯರ ಸಂಶೋಧನೆ ಜಗತ್ತಿನ ಹಿತಕ್ಕಾಗಿ : ವಿಶ್ವ ಫಾರ್ಮಸಿಸ್ಟ್ ದಿನ ಕಾರ್ಯಕ್ರಮದಲ್ಲಿ ಡಾ.ಪ್ರಭಾಕರ್ ಭಟ್ ಕಲ್ಲಡ್ಕ

ಪುತ್ತೂರು: ಔಷಧೀಯ ಕ್ಷೇತ್ರದಲ್ಲಿ ಸಂಶೋಧನೆಗೆ ಬಹಳ ಮಹತ್ವವಿದೆ. ಕುತೂಹಲ ಯಾವಾಗ ಮೂಡುತ್ತದೆಯೋ ಅಲ್ಲಿ ಸಂಶೋಧನೆಗೆ ಮುಂದಾಗುತ್ತಾರೆ. ನಮ್ಮಲ್ಲಿ ಕುತೂಹಲ, ಆಸಕ್ತಿ, ಹಂಬಲ ಇದ್ದಾಗ ನಾವು ಎತ್ತರಕ್ಕೆ ಬೆಳೆಯಲು ಸಾಧ್ಯ. ಇದರಿಂದ ವಿದ್ಯಾರ್ಥಿಗಳು ಬೆಳೆಯುತ್ತಾ ಸಮಾಜವನ್ನು ಬೆಳೆಸಿ ಅದರೊಂದಿಗೆ ದೇಶವು ಬೆಳೆಯುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಯೋಚಿಸಬೇಕು ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ್ ಭಟ್ ಕಲ್ಲಡ್ಕ ಹೇಳಿದರು. ಪುತ್ತೂರು ವಿವೇಕಾನಂದ ಇನ್ ಸ್ಟಿಟ್ಯೂಟ್ ಆಪ್ ಫಾರ್ಮಾಸ್ಯುಟಿಕಲ್ ಸೈನ್ಸಸ್ ನಲ್ಲಿ ನಡೆದ ಮಾಹಿತಿಕಾರ್ಯಾಗಾರ ಮತ್ತು ವಿಶ್ವ ಫಾರ್ಮಸಿಸ್ಟ್

ಭಾರತೀಯರ ಸಂಶೋಧನೆ ಜಗತ್ತಿನ ಹಿತಕ್ಕಾಗಿ : ವಿಶ್ವ ಫಾರ್ಮಸಿಸ್ಟ್ ದಿನ ಕಾರ್ಯಕ್ರಮದಲ್ಲಿ ಡಾ.ಪ್ರಭಾಕರ್ ಭಟ್ ಕಲ್ಲಡ್ಕ Read More »

ಪೇಜಾವರ ಶ್ರೀ ಜೊತೆ ಮೈಸೂರಿನ ಬಿಬಿ ಕೇರಿಯಲ್ಲಿ ಮನೆ ಮನೆ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ಅಯೋಧ್ಯೆಯ ರಾಮಜನ್ಮ ಭೂಮಿ ಟ್ರಸ್ಟ್ ಸಮಿತಿಯ ಸದಸ್ಯ ಪೇಜಾವರ ಅಧೋಕ್ಷಜ ಮಠದ ಪೀಠಾಧಿಪತಿ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜೀಯವರ 36ನೇ ಚಾತುರ್ಮಾಸ್ಯ ಮೈಸೂರಿನ ಸರಸ್ವತಿಪುರಂನಲ್ಲಿರುವ ಶ್ರೀಕೃಷ್ಣಧಾಮದಲ್ಲಿ ಜರಗುತಿದ್ದು, ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಮಠಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಸ್ವಾಮೀಜಿಯವರು ಮೈಸೂರಿನ ಬಿ ಬಿ ಕೇರಿಗೆ ಸೌಹಾರ್ದ ಭೇಟಿ ನೀಡಿದರು. ಸ್ವಾಮೀಜಿ ಜೊತೆ ಅರುಣ್ ಪುತ್ತಿಲ ಅವರು ಜೊತೆಗಿದ್ದರು.ಕಾಲೊನಿಯಲ್ಲಿ ಸ್ವಾಮೀಜಿ ಪಾದಯಾತ್ರೆ ನಡೆಸಿ, ಅಲ್ಲಿನ ನಿವಾಸಿಗಳ ಮನೆಗಳಿಗೂ ಭೇಟಿ ನೀಡಿದರು.

ಪೇಜಾವರ ಶ್ರೀ ಜೊತೆ ಮೈಸೂರಿನ ಬಿಬಿ ಕೇರಿಯಲ್ಲಿ ಮನೆ ಮನೆ ಭೇಟಿ ಮಾಡಿದ ಅರುಣ್ ಕುಮಾರ್ ಪುತ್ತಿಲ Read More »

ಶಾಲಾ ಬಸ್-ರಿಕ್ಷಾ ಡಿಕ್ಕಿ : ಐವರು ಸ್ಥಳದಲ್ಲೇ ಮೃತ್ಯು

ಕಾಸರಗೋಡು: ಶಾಲಾ ಬಸ್ ಹಾಗೂ ಆಟೋ ರಿಕ್ಷಾ ಪರಸ್ಪರ ಡಿಕ್ಕಿ ಹೊಡೆದುಕೊಂಡು ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಐದು ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ ದಾರುಣ ಘಟನೆ ಸೆ.25 ರಂದು ಸಂಜೆ 5 ಗಂಟೆಗೆ ಬದಿಯಡ್ಕ ಸಮೀಪದ ಪಳ್ಳತ್ತಡ್ಕದಲ್ಲಿ ನಡೆದಿದೆ‌ ಪೆರ್ಲ ಭಾಗದಿಂದ ಚಲಿಸುತ್ತಿದ್ದ ಮಾನ್ಯದ ಆಂಗ್ಲ ಮಾಧ್ಯಮ ಶಾಲೆಗೆ ಸೇರಿದ ಬಸ್ ಮತ್ತು ಮೊಗ್ರಲ್ ಪುತ್ತೂರು ಮೂಲದ ರಿಕ್ಷಾ ಅಪಘಾತಕ್ಕಿಡಾಗಿರುವುದಾಗಿ ತಿಳಿದು ಬಂದಿದೆ.  ರಿಕ್ಷಾದಲ್ಲಿ ಸಂಚರಿಸುತ್ತಿದ್ದ ಡ್ರೈವರ್ ಸಹಿತ ಓರ್ವ ಪುರುಷ ಹಾಗೂ ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ. ಮಕ್ಕಳನ್ನು ಪೆರ್ಲ

ಶಾಲಾ ಬಸ್-ರಿಕ್ಷಾ ಡಿಕ್ಕಿ : ಐವರು ಸ್ಥಳದಲ್ಲೇ ಮೃತ್ಯು Read More »

error: Content is protected !!
Scroll to Top