ತೆಂಗಿನ ಮರದಿಂದ ಕಾಲು ಜಾರಿ ಬಿದ್ದು ರಾಮಣ್ಣ ಪೂಜಾರಿ ಮೃತ್ಯು

ಪುತ್ತೂರು: ಇರ್ದೆ ಗ್ರಾಮದ ಪದರಂಜ ಎಂಬಲ್ಲಿ ತೆಂಗಿನ ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಪದರಂಜ ನಿವಾಸಿ ರಾಮಣ್ಣ ಪೂಜಾರಿ ಮೃತಪಟ್ಟವರು. ಶನಿವಾರ ಮನೆ ಬಳಿಯ ತೆಂಗಿನ ಮರ ಹತ್ತಿದ್ದಾರೆ. ಆಕಸ್ಮಾತ್ ಮರದಿಂದ ಜಾರಿ ಕೆಳಗೆ ಬಿದ್ದು ಮೃತಪಟ್ಟರೆನ್ನಲಾಗಿದೆ. ಈ ಸಂದರ್ಭ ಮನೆಯಲ್ಲಿ ಯಾರೂ ಇರಲಿಲ್ಲ ಎಂದು ತಿಳಿದು ಬಂದಿದೆ

ತೆಂಗಿನ ಮರದಿಂದ ಕಾಲು ಜಾರಿ ಬಿದ್ದು ರಾಮಣ್ಣ ಪೂಜಾರಿ ಮೃತ್ಯು Read More »

ಪುತ್ತೂರು: ಮೂವರಿಗೆ ಮುಖ್ಯಮಂತ್ರಿ ಪರಿಹಾರ ನಿಧಿ ವಿತರಣೆ

ಪುತ್ತೂರು: ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಬಿಡುಗಡೆಗೊಂಡ ಮೊತ್ತವನ್ನು ಫಲಾನುಭವಿಗಳಿಗೆ ಶಾಸಕರ ಕಚೇರಿಯಲ್ಲಿ ವಿತರಿಸಲಾಯಿತು. ಪುತ್ತೂರು ಶಾಸಕ ಅಶೋಕ್ ರೈ ಅವರ ಶಿಫಾರಸ್ಸಿನ ಮೇರೆಗೆ ಸಿಎಂ ಹಣ ಬಿಡುಗಡೆ ಮಾಡಿದ್ದಾರೆ. ಪುರುಷೋತ್ತಮ ಬನ್ನೂರು, ಕ್ರಿಶ್ಚಿಯನ್ ಡಿಸೋಜಾ ಕೆಮ್ಮಾಯಿ ಮತ್ತು ಹಸೈನಾರ್ ಪೆರುವಾಯಿ ಅವರು ಮುಖ್ಯಮಂತ್ರಿ ಪರಿಹಾರ ನಿಧಿಯ ಮೊತ್ತವನ್ನು ಪಡೆದುಕೊಂಡರು.

ಪುತ್ತೂರು: ಮೂವರಿಗೆ ಮುಖ್ಯಮಂತ್ರಿ ಪರಿಹಾರ ನಿಧಿ ವಿತರಣೆ Read More »

ಬೆಂಗಳೂರು – ಮಂಗಳೂರು ರೈಲು ಮುರುಡೇಶ್ವರದವರೆಗೆ ವಿಸ್ತರಣೆ | ಮಂಗಳೂರು – ಕುಂದಾಪುರ ಪ್ರಯಾಣಕ್ಕೆ ಇನ್ನು ಎರಡೇ ಗಂಟೆ ಸಾಕು!!

ಮಂಗಳೂರು: ಬೆಂಗಳೂರು ಮೈಸೂರು ಮಂಗಳೂರಿಗೆ ಬರುತ್ತಿದ್ದ ನಿತ್ಯ ರೈಲನ್ನು ಮುರ್ಡೇಶ್ವರದ ವರೆಗೆ ವಿಸ್ತರಿಸಿದ್ದು, ವೇಳಾಪಟ್ಟಿಯಲ್ಲಿರುವ ವ್ಯತ್ಯಯ ಮತ್ತು ತಡವಾಗಿ ಪ್ರಯಾಣದ ಹಿನ್ನೆಲೆಯಲ್ಲಿ ಇದೀಗ ರೈಲ್ವೇ ಇಲಾಖೆ ಕ್ರಮ ಕೈಗೊಂಡಿದೆ. ಆರಂಭದಲ್ಲಿ ವರದಿಗೆ ಸ್ಪಂದಿಸಿದ ಮೈಸೂರು ಸಂಸದ ರೈಲ್ವೇ ಮಂತ್ರಿಗಳನ್ನು ಭೇಟಿ ಮಾಡಿ ಚರ್ಚಿಸಿದ್ದರು. ತಕ್ಷಣ ಸ್ಪಂದಿಸಿದ ರೈಲು ಸಚಿವರು ಕೆಲವೇ ಗಂಟೆಗಳಲ್ಲಿ ರೈಲ್ವೆ ಬೋರ್ಡ್ ನಿಂದ ದಕ್ಷಿಣ ರೈಲ್ವೆಗೆ ಮಂಗಳೂರು ಮತ್ತು ಸುರತ್ಕಲ್ ನಡುವಿನ ಪ್ರಯಾಣವನ್ನು ತಗ್ಗಿಸಲು ಆದೇಶ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದೀಗ ದಕ್ಷಿಣ

ಬೆಂಗಳೂರು – ಮಂಗಳೂರು ರೈಲು ಮುರುಡೇಶ್ವರದವರೆಗೆ ವಿಸ್ತರಣೆ | ಮಂಗಳೂರು – ಕುಂದಾಪುರ ಪ್ರಯಾಣಕ್ಕೆ ಇನ್ನು ಎರಡೇ ಗಂಟೆ ಸಾಕು!! Read More »

ಕಾರು ಢಿಕ್ಕಿಯಾಗಿ ಆಟೋ ಚಾಲಕ ವಿನಾಯಕ ಪೈ ಮೃತ್ಯು!

ಬಂಟ್ವಾಳ: ಕಾರು ಢಿಕ್ಕಿಯಾಗಿ ರಿಕ್ಷಾ ಚಾಲಕ ಮೃತಪಟ್ಟ ಘಟನೆ ವಗ್ಗ ಸಮೀಪದ ಕಾಡಬೆಟ್ಟು ಕ್ರಾಸ್ ಎಂಬಲ್ಲಿ ನಡೆದಿದೆ. ಕೆಂಪುಗುಡ್ಡೆ ನಿವಾಸಿ ವಿನಾಯಕ ಪೈ ಮೃತಪಟ್ಟ ದುರ್ದೈವಿ. ವಿನಾಯಕ ಪೈ ತಮ್ಮ ಮನೆಯಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರಿಗೆ ಬೆಳಗ್ಗಿನ ಉಪಹಾರ ತರಲೆಂದು ವಗ್ಗದ ಹೊಟೇಲೊಂದಕ್ಕೆ ಹೋಗುವ ವೇಳೆ ಈ ಅಪಘಾತ ನಡೆದಿದೆ ಎನ್ನಲಾಗಿದೆ. ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ವ್ಯಾಗನಾರ್ ಕಾರು ರಿಕ್ಷಾಕ್ಕೆ ಡಿಕ್ಕಿಯಾದ ಪರಿಣಾಮ ವಿನಾಯಕ ಪೈ ಗಂಭೀರ ಗಾಯಗೊಂಡಿದ್ದರು. ಅವರನ್ನು ಕೂಡಲೇ ಆಸ್ಪತ್ರೆಗೆ

ಕಾರು ಢಿಕ್ಕಿಯಾಗಿ ಆಟೋ ಚಾಲಕ ವಿನಾಯಕ ಪೈ ಮೃತ್ಯು! Read More »

ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್!!

ಬೆಂಗಳೂರು: ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯ ಖಂಡಿಸಿ ಶನಿವಾರ ಮಂಡ್ಯ ಬಂದ್‌ ನಡೆದಿದೆ. ರಾಜದಾನಿಯೂ ಸೇರಿದಂತೆ ಇಡೀ ರಾಜ್ಯಕ್ಕೆ ಹೋರಾಟ ವಿಸ್ತರಿಸುತ್ತಿದೆ. ಇದರ ನಡುವೆಯೇ ನಾನಾ ಸಂಘಟನೆಗಳು ಸೇರಿ ಬೆಂಗಳೂರು ಬಂದ್ ಕರೆ ನೀಡಿವೆ. ಫ್ರೀಡಂ ಪಾರ್ಕ್ ನಲ್ಲಿ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ನೇತೃತ್ವದ ಸಭೆಯಲ್ಲಿ ಬಂದ್‌ಗೆ ನಿರ್ಧಾರ ಮಾಡಲಾಗಿದೆ. ಅಂದು ಎಲ್ಲಾ ಸಾರ್ವಜನಿಕ ಸೇವೆ ಸ್ಥಗಿತವಾಗಲಿದೆ, ಸಂಚಾರ ವ್ಯವಸ್ಥೆ ಇರುವುದಿಲ್ಲ. ಶಾಲಾ ಕಾಲೇಜ್‌, ಸರ್ಕಾರಿ ಕಚೇರಿ ಕಾರ್ಯ ಚಟುವಟಿಕೆ ಸ್ಥಗಿತವಾಗಲಿದೆ. ಬೆಂಗಳೂರಿಗೆ ಸಂಪರ್ಕ

ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್!! Read More »

ಕಡಿಯುವಾಗ ವ್ಯಕ್ತಿಯ ಮೇಲೆ ಬಿದ್ದ ಮರ: ಸಾವು

ಬೆಳ್ತಂಗಡಿ : ಮನೆಯ ಪಕ್ಕದಲ್ಲಿದ್ದ ಮರ ಕಡಿಯುವ ಸಂದರ್ಭ ಆಕಸ್ಮಿಕವಾಗಿ ಮರ ವ್ಯಕ್ತಿಯ ಮೇಲೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನೆರಿಯದಲ್ಲಿ ಸೆ. 23ರಂದು ನಡೆದಿದೆ. ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಮಂಜಲ್ಪಳಿಕೆ ನಿವಾಸಿ ರಾಮಣ್ಣ ಗೌಡ (58) ಸಾವನ್ನಪ್ಪಿದ ವ್ಯಕ್ತಿ. ತಕ್ಷಣ ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಿದರೂ ಪ್ರಯೋಜವಾಗದೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಅನಿಲ್ ಕುಮಾರ್ ಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಬೆಳ್ತಂಗಡಿ ಶವಾಗಾರಕ್ಕೆ ಸಾಗಿಸಲಾಗಿದೆ.

ಕಡಿಯುವಾಗ ವ್ಯಕ್ತಿಯ ಮೇಲೆ ಬಿದ್ದ ಮರ: ಸಾವು Read More »

ನಾಳೆ (ಸೆ.24): ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಜಪ, ಶತರುದ್ರಾಭಿಷೇಕ | ಏಕಾದಶ ಕೋಟಿ ಮಹಾಲಿಂಗೇಶ್ವರ ಜಪಯಜ್ಞ ಹಿನ್ನೆಲೆಯಲ್ಲಿ ಕಾರ್ಯಕ್ರಮ

ಪುತ್ತೂರು: ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಜಪ, ಶತರುದ್ರಾಭಿಷೇಕ ಹಾಗೂ ಧಾರ್ಮಿಕ ಕಾರ್ಯಕ್ರಮ ಸೆ.24 ಭಾನುವಾರ ನಡೆಯಲಿದೆ. ಪುತ್ತೂರಿನಾದ್ಯಂತ ಮನೆ ಮನೆಯಲ್ಲಿ ಸೆ.9 ರಿಂದ ಆರಂಭಗೊಂಡ ಏಕಾದಶ ಕೋಟಿ ಮಹಾಲಿಂಗೇಶ್ವರ ಜಪಯಜ್ಞ ನಡೆಯುತ್ತಿರುವ ಕುರಿತು ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಳೆ (ಸೆ.24): ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಜಪ, ಶತರುದ್ರಾಭಿಷೇಕ | ಏಕಾದಶ ಕೋಟಿ ಮಹಾಲಿಂಗೇಶ್ವರ ಜಪಯಜ್ಞ ಹಿನ್ನೆಲೆಯಲ್ಲಿ ಕಾರ್ಯಕ್ರಮ Read More »

ಅ. 22ರಂದು ಪುತ್ತೂರಿನಲ್ಲಿ ನಡೆಯಲಿದೆ ಪುತ್ತೂರುದ ಪಿಲಿಗೊಬ್ಬು | ರಚನೆಯಾದ ಸಮಿತಿಯಲ್ಲಿ ಯಾರೆಲ್ಲಾ ಇದ್ದಾರೆ?

ಪುತ್ತೂರು : ಪುತ್ತೂರು ವಿಜಯ ಸಾಮ್ರಾಟ್ ಆಶ್ರಯದಲ್ಲಿ ಸಹಜ್ ರೈ ಬಳಜ್ಜ ನೇತೃತ್ವದಲ್ಲಿ ‘ಪುತ್ತೂರುದ ಪಿಲಿಗೊಬ್ಬು’ ಕಾರ್ಯಕ್ರಮ ಅ. 22ರಂದು ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿದೆ. ದ.ಕ ಜಿಲ್ಲೆಯ ಆಹ್ವಾನಿತ ಹತ್ತು ತಂಡಗಳ ಪಿಲಿಗೊಬ್ಬು ಸ್ಪರ್ಧೆ ಇದಾಗಿದ್ದು, ಈ ಕುರಿತು ಪೂರ್ವಭಾವಿಯಾಗಿ ದರ್ಬೆ ಶ್ರೀರಾಮ ಸೌಧದಲ್ಲಿ ಸಮಿತಿಯನ್ನು ರಚಿಸಲಾಯಿತು. ಸಮಿತಿ ಅಧ್ಯಕ್ಷರಾಗಿ ಶ್ರೀರಾಮ ಸೌಧದ ಮಾಲಕ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್, ಕಾರ್ಯಾಧ್ಯಕ್ಷರಾಗಿ ಸುಜಿತ್ ರೈ

ಅ. 22ರಂದು ಪುತ್ತೂರಿನಲ್ಲಿ ನಡೆಯಲಿದೆ ಪುತ್ತೂರುದ ಪಿಲಿಗೊಬ್ಬು | ರಚನೆಯಾದ ಸಮಿತಿಯಲ್ಲಿ ಯಾರೆಲ್ಲಾ ಇದ್ದಾರೆ? Read More »

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ಶ್ರೀ ಗಣೇಶೋತ್ಸವ ಜಲಸ್ತಂಭನದೊಂದಿಗೆ ಸಂಪನ್ನ| ಜನಮನ ಸೂರೆಗೊಂಡ ಆಕರ್ಷಕ ಸ್ತಬ್ಧಚಿತ್ರ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ನಾಲ್ಕು ದಿನಗಳ ಕಾಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆದ ಸಾರ್ವಜನಿಕ ಶ್ರೀ ಗಣೇಶೋತ್ಸವ ಶುಕ್ರವಾರ ರಾತ್ರಿ ವೈಭವದ ಶೋಭಾಯಾತ್ರೆಯೊಂದಿಗೆ ಸಂಪನ್ನಗೊಂಡಿತು. ಶುಕ್ರವಾರ ಸಂಜೆ ಶ್ರೀ ಮಹಾಗಣಪತಿಗೆ ಮಹಾಪೂಜೆ ಬಳಿಕ ದೇವಸ್ಥಾನದ ವಠಾರದಲ್ಲಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ ಗುರು ತಂತ್ರಿ ಶ್ರೀ ಗಣೇಶನಿಗೆ ಮಂಗಳಾರತಿ ಬೆಳಗಿ, ತೆಂಗಿನ ಕಾಯಿ ಒಡೆದು ಶೋಭಾಯಾತ್ರೆಗೆ ಚಾಲನೆ ನೀಡಿದರು. ಬಳಿಕ ವೇದಿಕೆ ಬಳಿ ಶ್ರೀ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ಶ್ರೀ ಗಣೇಶೋತ್ಸವ ಜಲಸ್ತಂಭನದೊಂದಿಗೆ ಸಂಪನ್ನ| ಜನಮನ ಸೂರೆಗೊಂಡ ಆಕರ್ಷಕ ಸ್ತಬ್ಧಚಿತ್ರ Read More »

ಪುತ್ತೂರು ತಾಲೂಕು ದಸರಾ ಕ್ರೀಡಾ ಕೂಟಕ್ಕೆ ಚಾಲನೆ | ದೇಶದಲ್ಲಿ ಕ್ರೀಡೆಗೆ ಸರಿಯಾದ ಮಾನ್ಯತೆ ಸಿಗುತ್ತಿಲ್ಲ: ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ತಾಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಶನಿವಾರ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಚಾಲನೆ ನೀಡಲಾಯಿತು. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ದೀಪ ಬೆಳಗಿಸಿ ಚಾಲನೆ ನೀಡಿ, ಇತರ ದೇಶಗಳಿಗೆ ಹೋಲಿಸಿದರೆ ನಮ್ಮ ದೇಶದಲ್ಲಿ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವವರ ಸಂಖ್ಯೆ ಕಡಿಮೆ. ಇದಕ್ಕೆ ಸರಕಾರದಿಂದ ಸರಿಯಾದ ಮಾನ್ಯತೆ ಸಿಗದೇ ಇರುವುದೇ ಕಾರಣ. ಈ ನಿಟ್ಟಿನಲ್ಲಿ ಸರಕಾರ ಕ್ರಮ ಕೈಗೊಳ್ಳಬೇಕು ಎಂದ ಅವರು, ಹಿಂದೆ ಕ್ರೀಡೆಯಲ್ಲಿ ಶಾಲಾ ಮಟ್ಟದಲ್ಲಿ ಮಾತ್ರ ಭಾಗವಹಿಸುವ ಅವಕಾಶವಿದ್ದು, ಪ್ರಸ್ತುತ ಸರಕಾರದಿಂದ ನಡೆಯುವ ಬೇರೆ ಬೇರೆ

ಪುತ್ತೂರು ತಾಲೂಕು ದಸರಾ ಕ್ರೀಡಾ ಕೂಟಕ್ಕೆ ಚಾಲನೆ | ದೇಶದಲ್ಲಿ ಕ್ರೀಡೆಗೆ ಸರಿಯಾದ ಮಾನ್ಯತೆ ಸಿಗುತ್ತಿಲ್ಲ: ಶಾಸಕ ಅಶೋಕ್ ಕುಮಾರ್ ರೈ Read More »

error: Content is protected !!
Scroll to Top