ಪತ್ನಿಯ ಮೇಲೆ ಹಲ್ಲೆ ನಡೆಸಿದ ಪತಿ: ದೂರು ದಾಖಲು

ಪುತ್ತೂರು: ಪತಿಯಿಂದ ಹಲ್ಲೆಗೊಳಗಾದ ಮಹಿಳೆಯೊಬ್ಬರು ಪುತ್ತೂರಿನ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಸಂತ್ರಸ್ತ ಮಹಿಳೆ ಖಾಸಗಿ ವಿದ್ಯಾಸಂಸ್ಥೆಯಲ್ಲಿ ಉಪನ್ಯಾಸಕರಾಗಿದ್ದು, ಘಟನೆಗೆ ಸಂಬಂಧಿಸಿದ ಹಾಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಹದಿನಾರು ವರ್ಷಗಳ ಹಿಂದೆ ಮನೋಜ್ ಎಂಬವರ ಜೊತೆಗೆ ನನ್ನ ವಿವಾಹವಾಗಿದೆ. ಒಂಬತ್ತನೇ ತರಗತಿಯ ಮಗನೂ ಇದ್ದಾನೆ. ಗಂಡ ನನಗೆ ನಿರಂತರವಾಗಿ ಮಾನಸಿಕ ಕಿರುಕುಳ ನೀಡುತ್ತಿದ್ದರು. ಫೆ. 25 ರಂದು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಪತ್ನಿಯ ಮೇಲೆ ಹಲ್ಲೆ ನಡೆಸಿದ ಪತಿ: ದೂರು ದಾಖಲು Read More »

ಪಿಯುಸಿ ಪರೀಕ್ಷೆ ಆರಂಭವಾಗುವ ಹೊತ್ತಿಗೆ ಪ್ರಶ್ನೆ ಪತ್ರಿಕೆ ಸೋರಿಕೆ ಆತಂಕ

ಇನ್‌ಸ್ಟಾಗ್ರಾಂನಲ್ಲಿ ಪ್ರಶ್ನೆ ಪತ್ರಿಕೆ ಮಾರಾಟದ ಪೋಸ್ಟ್‌ ಹಾಕಿದ ಕಿಡಿಗೇಡಿ ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಶುರುವಾಗಲು ಇನ್ನೆರಡು ದಿನ ಬಾಕಿಯಿರುವಾಗಲೇ ಪ್ರಶ್ನೆ ಪತ್ರಿಕೆ ಸೋರಿಕೆ ಆತಂಕ ಮತ್ತೆ ಎದುರಾಗಿದೆ. ಫೆಬ್ರವರಿ 28ರಿಂದ ಪರೀಕ್ಷೆಗಳು ಶುರುವಾಗಲಿದ್ದು, ಇನ್‌ಸ್ಟಾಗ್ರಾಮ್‌ನಲ್ಲಿ ಪ್ರಶ್ನೆ ಪತ್ರಿಕೆ ಮಾರಾಟದ ಬಗ್ಗೆ ಪೋಸ್ಟ್ ಒಂದು ಹರಿದಾಡುತ್ತಿರುವುದು ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ತೀವ್ರ ಆತಂಕ ಮೂಡಿಸಿದೆ. ‘ಡಾ. ಕನ್ನಡಿಗ’ ಎಂಬ ಹೆಸರಿನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಕಿಡಿಗೇಡಿಯೊಬ್ಬ ಪ್ರಶ್ನೆ ಪತ್ರಿಕೆಗಳನ್ನು ಮಾರಾಟ ಮಾಡುವುದಾಗಿ ಪೋಸ್ಟ್ ಮಾಡಿದ್ದಾನೆ. ಯಾವುದಾದರೂ ಪ್ರಶ್ನೆ

ಪಿಯುಸಿ ಪರೀಕ್ಷೆ ಆರಂಭವಾಗುವ ಹೊತ್ತಿಗೆ ಪ್ರಶ್ನೆ ಪತ್ರಿಕೆ ಸೋರಿಕೆ ಆತಂಕ Read More »

ಮಂಗಳೂರು : ಡಿಜಿಟಲ್‌ ಅರೆಸ್ಟ್‌ ಮಾಡಿ 41.85 ಕೋ. ರೂ. ಲಪಟಾಯಿಸಿದ ವಂಚಕ

ಮಂಗಳೂರು: ಮುಂಬೈಯ ಸಿಸಿಬಿ ಪೊಲೀಸ್ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬ ಮಂಗಳೂರಿನ ವ್ಯಕ್ತಿಯನ್ನು ಡಿಜಿಟಲ್ ಅರೆಸ್ಟ್ ಮಾಡಿ 41.85 ಲಕ್ಷ ರೂ. ಲಪಟಾಯಿಸಿರುವ ಬಗ್ಗೆ ಪ್ರಕರಣ ದಾಖಲಾಗಿದೆ ಜ.31ರಂದು ಅಪರಿಚಿತ ವ್ಯಕ್ತಿ ನವದೆಹಲಿಯಿಂದ ಕರೆ ಮಾಡಿ ತನ್ನನ್ನು ಸಿಸಿಬಿ ಪೊಲೀಸ್ ಎಂದು ಪರಿಚಯಿಸಿಕೊಂಡು, ನಿಮ್ಮ ಗುರುತಿನ ಚೀಟಿ ಉಪಯೋಗಿಸಿಕೊಂಡು ಮುಂಬೈಯ ಕೆನರಾ ಬ್ಯಾಂಕ್‌ನಲ್ಲಿ ಖಾತೆಯನ್ನು ತೆರೆಯಲಾಗಿದೆ. ಅದರಲ್ಲಿ ದೊಡ್ಡಮಟ್ಟದ ಅವ್ಯವಹಾರ ನಡೆಯುತ್ತಿದೆ. ಗುರುತಿನ ಚೀಟಿಯ ನಂಬರ್ ಉಪಯೋಗಿಸಿಕೊಂಡು ಮೊಬೈಲ್ ನಂಬರ್ ಪಡೆದುಕೊಳ್ಳಲಾಗಿದೆ. ಕೆನರಾ ಬ್ಯಾಂಕ್‌ನಲ್ಲಿ ಖಾತೆ ತೆರೆದು ಅಕ್ರಮ

ಮಂಗಳೂರು : ಡಿಜಿಟಲ್‌ ಅರೆಸ್ಟ್‌ ಮಾಡಿ 41.85 ಕೋ. ರೂ. ಲಪಟಾಯಿಸಿದ ವಂಚಕ Read More »

ದೆಹಲಿಯ 20 ಪೊಲೀಸರನ್ನು ಬಂಧಿಸಿದ ಹಿಮಾಚಲ ಪ್ರದೇಶ ಪೊಲೀಸರು!

ಅರೆಬೆತ್ತಲೆ ಪ್ರಭಟನೆ ನಡೆಸಿದ ಕಾಂಗ್ರೆಸ್‌ ಕಾರ್ಯಕರ್ತರನ್ನು ಬಂಧಿಸಲು ಹೋದಾಗ ಗಡಿಯಲ್ಲಿ ಹೈಡ್ರಾಮಾ ನವದೆಹಲಿ: ಎಐ ಶೃಂಗಸಭೆಯಲ್ಲಿ ಅರೆಬೆತ್ತಲೆ ಪ್ರತಿಭಟನೆ ಮಾಡಿದ್ದ ಕಾಂಗ್ರೆಸ್‌ ಕಾರ್ಯಕರ್ತರನ್ನು ಬಂಧಿಸಲು ಹಿಮಾಚಲ ಪ್ರದೇಶಕ್ಕೆ ಆಗಮಿಸಿದ್ದ ದಿಲ್ಲಿಯ 20 ಪೊಲೀಸ್ ಸಿಬ್ಬಂದಿಯನ್ನು ಶಿಮ್ಲಾ ಪೊಲೀಸರು ಬುಧವಾರ ತಡರಾತ್ರಿ ಬಂಧಿಸಿ ಹೈಡ್ರಾಮಾ ಸೃಷ್ಟಿಸಿದ್ದಾರೆ. ಈ ಘಟನೆ ರಾಜಕೀಯ ಮತ್ತು ಆಡಳಿತ ವಲಯದಲ್ಲಿ ಕೋಲಾಹಲ ಸೃಷ್ಟಿಸಿದೆ. ಎಐ ಇಂಪ್ಯಾಕ್ಟ್​ ಶೃಂಗಸಭೆಯಲ್ಲಿ ಶರ್ಟ್​ ಬಿಚ್ಚಿ ಪ್ರತಿಭಟನೆ ಮಾಡಿದ್ದ ಯುವ ಕಾಂಗ್ರೆಸ್ ಕಾರ್ಯಕರ್ತರ ಪೈಕಿ ಮೂವರನ್ನು ಹಿಡಿಯಲು ದೆಹಲಿ ಪೊಲೀಸರು

ದೆಹಲಿಯ 20 ಪೊಲೀಸರನ್ನು ಬಂಧಿಸಿದ ಹಿಮಾಚಲ ಪ್ರದೇಶ ಪೊಲೀಸರು! Read More »

ಮಹಿಳೆಗೆ ಕಿರುಕುಳ : ಬ್ಯಾಂಕ್‌ ಮ್ಯಾನೇಜರ್‌ ವಿರುದ್ಧ ಕೇಸ್‌

ಉಡುಪಿ: ರಾಷ್ಟ್ರೀಯಕೃತ ಬ್ಯಾಂಕ್ ಒಂದರ ಆದಿ ಉಡುಪಿ ಶಾಖೆಯ ಮ್ಯಾನೇಜರ್ ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಮ್ಯಾನೇಜರ್‌ ವಿರುದ್ಧ ಪ್ರಕರಣ ದಾಖಲಾಗಿದೆ. ಜ್ಯೋತಿ ಎಂಬ ಮಹಿಳೆ ನೀಡಿದ ದೂರಿನ ಮೇರೆಗೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಫೆಬ್ರವರಿ 19ರಂದು ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) 2023ರ ಸೆಕ್ಷನ್ 74ರ ಅಡಿಯಲ್ಲಿ ಕೇಸ್‌ ದಾಖಲಿಸಿಕೊಳ್ಳಲಾಗಿದೆ. ಈ ಘಟನೆ ಫೆ.7ರಂದು ಸಂಜೆ ಸುಮಾರು 5.30ಕ್ಕೆ ನಡೆದಿದೆ. ಸಾಲದ ವಿಷಯದ ಬಗ್ಗೆ ಚರ್ಚಿಸಬೇಕೆಂದು ಹೇಳಿ ಮ್ಯಾನೇಜರ್ ತಮ್ಮನ್ನು

ಮಹಿಳೆಗೆ ಕಿರುಕುಳ : ಬ್ಯಾಂಕ್‌ ಮ್ಯಾನೇಜರ್‌ ವಿರುದ್ಧ ಕೇಸ್‌ Read More »

ಉದ್ಯೋಗ ನೆಪದಲ್ಲಿ ವಂಚನೆ : ಖಾಸಗಿ ಸಂಸ್ಥೆ ವಿರುದ್ಧ ದೂರು ದಾಖಲಿಸಿದ ಕಾಲೇಜು ವಿದ್ಯಾರ್ಥಿಗಳು

ಮೂರು ದಿನದ ತರಬೇತಿಗೆ 2 ಸಾವಿರ ರೂ. ಪಡೆದು ಬ್ರೈನ್‌ವಾಶ್‌ ಮಾಡಿದ ಆರೋಪ ಮಂಗಳೂರು : ನಗರದಲ್ಲಿ ಕಾರ್ಯಾಚರಿಸುತ್ತಿರುವ Vexon ಎಂಬ ಖಾಸಗಿ ಸಂಸ್ಥೆ ತರಬೇತಿ ಮತ್ತು ಉದ್ಯೋಗದ ಆಮಿಷವೊಡ್ಡಿ ಕಾಲೇಜು ವಿದ್ಯಾರ್ಥಿಗಳನ್ನು ವಂಚಿಸುತ್ತಿದೆ ಎಂದು ಆರೋಪಿಸಿ ಸ್ವಸ್ತಿಕ ನ್ಯಾಷನಲ್ ಬಿಸಿನೆಸ್ ಸ್ಕೂಲ್‌ನ ವಿದ್ಯಾರ್ಥಿಗಳು ದೂರು ದಾಖಲಿಸಿದ್ದಾರೆ. ಕುದ್ರೋಳಿಯ ಶ್ರೇಯಸ್ ಸ್ವೀಟ್ಸ್ ಎದುರು ಕಾರ್ಯಾಚರಿಸುತ್ತಿರುವ ಈ ಸಂಸ್ಥೆಯು ವಿದ್ಯಾರ್ಥಿಗಳಿಗೆ ವಂಚಿಸುತ್ತಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಸಂಸ್ಥೆಯು ತರಬೇತಿಯ ಹೆಸರಿನಲ್ಲಿ ಪ್ರತಿ ವಿದ್ಯಾರ್ಥಿಯಿಂದ 2,000 ರೂಪಾಯಿ ಸಂಗ್ರಹಿಸುತ್ತದೆ ಮತ್ತು

ಉದ್ಯೋಗ ನೆಪದಲ್ಲಿ ವಂಚನೆ : ಖಾಸಗಿ ಸಂಸ್ಥೆ ವಿರುದ್ಧ ದೂರು ದಾಖಲಿಸಿದ ಕಾಲೇಜು ವಿದ್ಯಾರ್ಥಿಗಳು Read More »

ಟಿ20 ಸೂಪರ್‌ 8 : ಇಂದು ಭಾರತ-ಜಿಂಬಾಬ್ವೆ ಮುಖಾಮುಖಿ

ಉಭಯ ತಂಡಗಳಿಗೂ ನಿರ್ಣಾಯಕ ಪಂದ್ಯ; ಟೀಂ ಇಂಡಿಯಾ ಮೇಲೆ ಭಾರಿ ಒತ್ತಡ ಚೆನ್ನೈ : ಟಿ20 ವಿಶ್ವಕಪ್‌ ಮೊದಲ ಸೂಪರ್-8 ಪಂದ್ಯದಲ್ಲಿ ಇಂದು ಭಾರತ ಮತ್ತು ಜಿಂಬಾಬ್ವೆ ಚೆನ್ನೈಯಲ್ಲಿ ಮುಖಾಮುಖಿಯಾಗಲಿವೆ. ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಹೀನಾಯ ಸೋಲು ಅನುಭವಿಸಿದ್ದು, ಈ ಸೋಲಿನಿಂದ ಟೀಂ ಇಂಡಿಯಾ ತನ್ನ ಸೆಮಿಫೈನಲ್ ಹಾದಿಯನ್ನು ದುರ್ಗಮ ಮಾಡಿಕೊಂಡಿದೆ. ಟೀಂ ಇಂಡಿಯಾ ಸೆಮಿಫೈನಲ್‌ಗೇರಬೇಕೆಂದರೆ ಉಳಿದಿರುವ ಎರಡೂ ಪಂದ್ಯಗಳನ್ನು ಏಕಪಕ್ಷೀಯವಾಗಿ ಗೆಲ್ಲಬೇಕಿದೆ. ಅಂದರೆ ಬರೀ ಗೆದ್ದರೆ ಮಾತ್ರ ಸಾಲದು, ಭಾರಿ ಅಂತರದ ಗೆಲುವು

ಟಿ20 ಸೂಪರ್‌ 8 : ಇಂದು ಭಾರತ-ಜಿಂಬಾಬ್ವೆ ಮುಖಾಮುಖಿ Read More »

ಶ್ರೀಕೃಷ್ಣಗಾರುಡಿ ತಾಳಮದ್ದಳೆ

ಶ್ರೀ ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಕಲಾ ಟ್ರಸ್ಟಿನ ವತಿಯಿಂದ ದಿನಾಂಕ 24 .2.2026 ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ದಿನದ ಪ್ರಯುಕ್ತಶ್ರೀ ಮಹಾಭಾರತ ಸರಣಿಯ 108ನೇ ( *ಅಷ್ಟೋತ್ತರ ಶತ) ಕಾರ್ಯಕ್ರಮವಾಗಿ ಶ್ರೀ ಬಲಿಪ ನಾರಾಯಣ ಭಾಗವತ ವಿರಚಿತ ಶ್ರೀ ಕೃಷ್ಣ ಗಾರುಡಿ ತಾಳಮದ್ದಳೆ ಜರಗಿತು. ಅರ್ಥಧಾರಿ ಗಳಾಗಿ : ಅಂಬಾ ಪ್ರಸಾದ್ ಪಾತಾಳ (ಧರ್ಮರಾಯ 1), ದಿವಾಕರ ಆಚಾರ್ಯ ಗೇರುಕಟ್ಟೆ (ಧರ್ಮರಾಯ 2)ಮಹಾಲಿಂಗೇಶ್ವರ ಭಟ್ ಪೆರಿಯಡ್ಕ, (ನಾರದ)ಗುಡ್ಡಪ್ಪ ಬಲ್ಯ(ಅರ್ಜುನ 2), ಶ್ರೀಧರ್ ಎಸ್ಪಿ ಸುರತ್ಕಲ್(ಭೀಮ

ಶ್ರೀಕೃಷ್ಣಗಾರುಡಿ ತಾಳಮದ್ದಳೆ Read More »

ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು

ಹಾಸನ: ಹಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿ ಮಹಿಳೆ ಮೃತಪಟ್ಚ ಘಟನೆ ನಡೆದಿದ್ದು, ವೈದ್ಯರ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿಮ್ಸ್ ಆಸ್ಪತ್ರೆಗೆ ಹೆರಿಗೆಗಾಗಿ ಹನುಮನಹಳ್ಳಿ ನಿವಾಸಿ ಶೃತಿ ಎಂಬವರನ್ನು ದಾಖಲು ಮಾಡಲಾಗಿತ್ತು. ಅವರಿಗೆ ಭಾನುವಾರ ಮಗು ಜನಿಸಿದೆ. ಆದರೆ ಆ ಬಳಿಕ ಅವರ ಆರೋಗ್ಯ ಕ್ಷೀಣಿಸಲು ಆರಂಭವಾಗಿದೆ. ಆದರೆ ಭಾನುವಾರವಾದ ಕಾರಣ ತಜ್ಞ ವೈದ್ಯರು ಅಲಭ್ಯರಾದ ಕಾರಣ ಚಿಕಿತ್ಸೆ ವಿಳಂಬವಾಗಿ ಅವರು ಸಾವನ್ನಪ್ಪಿದ್ದಾರೆ. ಮೊದಲಿಗೆ ಶೃತಿ ಅವರು ಆರೋಗ್ಯವಾಗಿದ್ದಾರೆ ಎಂದು ತಿಳಿಸಿ, ಆ

ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು Read More »

ತೋಟಕ್ಕೆ ನೀರು ಹಾಯಿಸಲು ಹೋದ ರೈತನ ಮೇಲೆ ಕಾಡುಕೋಣ ದಾಳಿ

ಚಿಕ್ಕಮಗಳೂರು: ಕೃಷಿಕರೊಬ್ಬರು ತೋಟಕ್ಕೆ ಹೋಗಿದ್ದ ಸಂದರ್ಭದಲ್ಲಿ ಅವರ ಮೇಲೆ ಕಾಡುಕೋಣ ದಾಳಿ ಮಾಡಿರುವ ಘಟನೆ ಕೊಪ್ಪ ತಾಲೂಕಿನ ಮುಂಡೋಳು ಗ್ರಾಮದಲ್ಲಿ ಇಂದು ಮುಂಜಾನೆ ನಡೆದಿದೆ. ಗಾಯಾಳುವನ್ನು ‌ಶಿವಪ್ಪ ಗೌಡ(65) ಎಂದು ಗುರುತಿಸಲಾಗಿದೆ. ಇಂದು ಮುಂಜಾನೆ ತೋಟಕ್ಕೆ ನೀರು ಹಾಯಿಸುವ ಸಲುವಾಗಿ ಮೋಟಾರ್ ಸ್ವಿಚ್ ಆನ್ ಮಾಡಲು ಹೋಗಿದ್ದು, ಈ ವೇಳೆ ಕಾಡುಕೋಣ ಹಿಂದಿನಿಂದ ಬಂದು ದಾಳಿ ಮಾಡಿದೆ. ಅವರ ತೊಡೆ ಮತ್ತು ಬೆನ್ನಿಗೆ ಗಾಯಗಳಾಗಿ ಕುಸಿದು ಬಿದ್ದಿದ್ದಾರೆ. ಸ್ಥಳೀಯರು ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೆಚ್ಚಿನ ಪ್ರಮಾಣದ

ತೋಟಕ್ಕೆ ನೀರು ಹಾಯಿಸಲು ಹೋದ ರೈತನ ಮೇಲೆ ಕಾಡುಕೋಣ ದಾಳಿ Read More »

error: Content is protected !!
Scroll to Top