ಇಂದು ಕೇಂದ್ರ ಸಚಿವ ಸಂಪುಟದ ಮಹತ್ವದ ಸಭೆ

ತೈಲ ಬೆಲೆ ಏರಿಕೆ, ಹಣದುಬ್ಬರದ ಕುರಿತು ಪ್ರಮುಖ ನಿರ್ಧಾರ ಕೈಗೊಳ್ಳುವ ಸಾಧ್ಯತೆ ದೆಹಲಿಯಲ್ಲಿ ಇಂದು ಪಿಎಂ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವ ಸಂಪುಟದ ಮಹತ್ವದ ಸಭೆ; ಪಶ್ಚಿಮ ಏಷ್ಯಾ ಸಂಘರ್ಷ ಮತ್ತು ಸಂಪುಟ ಪುನಾರಚನೆ ಕುರಿತು ಚರ್ಚೆ ಸಾಧ್ಯತೆ ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಗುರುವಾರ ಸಂಜೆ 4 ಗಂಟೆಗೆ ದೆಹಲಿಯ ‘ಸೇವಾ ತೀರ್ಥ’ದಲ್ಲಿ ಕೇಂದ್ರ ಸಚಿವ ಸಂಪುಟದ ಮಹತ್ವದ ಸಭೆ ನಡೆಸಲಿದ್ದಾರೆ. ಸರ್ಕಾರದೊಳಗೆ ರಾಜಕೀಯ ಮತ್ತು ಆರ್ಥಿಕ ವಿಷಯಗಳ ಕುರಿತು ತೀವ್ರ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ […]

ಇಂದು ಕೇಂದ್ರ ಸಚಿವ ಸಂಪುಟದ ಮಹತ್ವದ ಸಭೆ Read More »

ಮೀನುಗಾರಿಕೆ ದೋಣಿ ಮುಳುಗಡೆ : 6 ಮೀನುಗಾರರ ರಕ್ಷಣೆ

ಉಡುಪಿ : ಮಲ್ಪೆ ಮೀನುಗಾರಿಕೆ ಬಂದರಿನಿಂದ ತೆರಳಿದ ಆಳಸಮುದ್ರ ಬೋಟೊಂದು ಮಂಗಳವಾರ ರಾತ್ರಿ ಕೋಡಿಬೆಂಗ್ರೆ ಸಮೀಪದ ಮುಳುಗಡೆಗೊಂಡಿದ್ದು ಅದರಲ್ಲಿದ್ದ 6 ಮಂದಿ ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ. ಬೋಟಿನ ತಾಂಡೇಲ ಉತ್ತರ ಕನ್ನಡ ಜಿಲ್ಲೆಯ ರಾಘವೇಂದ್ರ, ಕಾರ್ಮಿಕರಾದ ರೋಹಿದಾಸ್ ಮೊಗೇರ, ಶಾಮ ಸುಂದರ್‌ ಮಲೀಕ್, ಉಜ್ವಲ್ ಮಲೀಕ್, ಸತ್ಯಜಿತ್ ಮಲೀಕ್, ತ್ರಿಲೇಶ್ ಭಾಸ್ಕರ್ ರಕ್ಷಿಸಲ್ಪಟ್ಟ ಮೀನುಗಾರರು ಎಂದು ಗುರುತಿಸಲಾಗಿದೆ. ಕಿದಿಯೂರು ಪಡುಕರೆಯ ಸಂದೀಪ್ ಕುಮಾರ್ ಎಂಬವರಿಗೆ ಸೇರಿದ ಸಾಯಿದತ್ತ ಆಳಸಮುದ್ರ ಬೋಟು ಮೇ 17ರಂದು ರಾತ್ರಿ 10.30ಕ್ಕೆ ಮಲ್ಪೆ

ಮೀನುಗಾರಿಕೆ ದೋಣಿ ಮುಳುಗಡೆ : 6 ಮೀನುಗಾರರ ರಕ್ಷಣೆ Read More »

1.66 ಕೋಟಿ ರೂ. ಒಡವೆ ಕದ್ದು ಪ್ರಿಯಕರನೊಂದಿಗೆ ಪರಾರಿಯಾಗಿದ್ದ ಯುವತಿ ಬಂಧನ

ಬಾತ್‌ರೂಂಗೆ ಹೋದಾಗ ಒಡವೆ ಸಮೇತ ಪರಾರಿಯಾಗಿದ್ದ ಪ್ರಿಯಕರನೂ ಅರೆಸ್ಟ್‌ ಅಹಮದಾಬಾದ್: ಪ್ರಿಯಕರನ ಜೊತೆ ಓಡಿಹೋಗಲು ತಾನು ಕೆಲಸ ಮಾಡುತ್ತಿದ್ದ ಚಿನ್ನದ ಶೋರೂಂನಲ್ಲೇ ಯುವತಿಯೊಬ್ಬಳು ಬರೋಬ್ಬರಿ 1.66 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕದ್ದು ಪರಾರಿಯಾದ ಘಟನೆ ಅಹಮದಾಬಾದ್‌ನ ನಿಕೋಲ್ ಪ್ರದೇಶದಲ್ಲಿ ನಡೆದಿದೆ. ಮೇ 11ರಂದು ನಡೆದಿದ್ದ ಈ ಹೈಡ್ರಾಮಾ ಕಳ್ಳತನ ಪ್ರಕರಣದ ಆರೋಪಿ ಕರಾವಳಿ ಮೂಲದ ಹರ್ಷಿದಾ ಶೆಟ್ಟಿ ಹಾಗೂ ಆಕೆಯ ಪ್ರಿಯಕರನನ್ನು ಅಹಮದಾಬಾದ್ ಕ್ರೈಂ ಬ್ರಾಂಚ್ ಪೊಲೀಸರು ಬಂಧಿಸಿದ್ದಾರೆ. ಸಿಸಿಟಿವಿಯಲ್ಲಿ ಸೆರೆಯಾಯ್ತು ಯುವತಿಯ ಕರಾಮತ್ತು ನಿಕೋಲ್

1.66 ಕೋಟಿ ರೂ. ಒಡವೆ ಕದ್ದು ಪ್ರಿಯಕರನೊಂದಿಗೆ ಪರಾರಿಯಾಗಿದ್ದ ಯುವತಿ ಬಂಧನ Read More »

ಯುವತಿ ಮೇಲೆ ಇಟ್ಟಿಗೆಯಿಂದ ಹಲ್ಲೆ ಮಾಡಿ ಚಿನ್ನಾಭರಣ ದರೋಡೆ ಪ್ರಕರಣ : ಆರೋಪಿ ಮಹಿಳೆ ಸೆರೆ

ಹಣಕ್ಕಾಗಿ ಪಕ್ಕದ ರೂಮ್‌ನ ಸ್ನೇಹಿತೆಯಿಂದಲೇ ಮಾರಕ ಕೃತ್ಯ ಉಡುಪಿ : ಹಣಕಾಸಿನ ತೊಂದರೆಯಿಂದ ಪಾರಾಗಲು ಪಕ್ಕದ ರೂಮಿನಲ್ಲಿದ್ದ ಯುವತಿಯ ತಲೆಗೆ ಕಾಂಕ್ರೀಟ್‌ ಕಲ್ಲಿನಿಂದ ಜಜ್ಜಿ ಕೊಲೆಗೆ ಯತ್ನಿಸಿ ಚಿನ್ನಾಭರಣ ದೋಚಿದ್ದ ಆರೋಪಿ ಮಹಿಳೆಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಾವಿಕೇರಿ ಗ್ರಾಮದ ಕೇಣಿ ಪೋಸ್ಟ್ ನಿವಾಸಿ ಸುಷ್ಮಾ ಅಣ್ಣಪ್ಪ ನಾಯಕ್ (31) ಎಂದು ಗುರುತಿಸಲಾಗಿದೆ. ದೂರುದಾರೆ ಮೇಘಾ ಗೌಡ ತನ್ನ ಸ್ನೇಹಿತರಾದ ನಾಗರತ್ನ, ಗಗನ ಮತ್ತು ಯೋಗಿತಾ ಅವರೊಂದಿಗೆ ಶಾಂತಿನಗರದ

ಯುವತಿ ಮೇಲೆ ಇಟ್ಟಿಗೆಯಿಂದ ಹಲ್ಲೆ ಮಾಡಿ ಚಿನ್ನಾಭರಣ ದರೋಡೆ ಪ್ರಕರಣ : ಆರೋಪಿ ಮಹಿಳೆ ಸೆರೆ Read More »

35 ಕೋ.ರೂ. ಡ್ರಗ್ಸ್‌ ವಶ : ಎಂಟು ಆರೋಪಿಗಳು ಸೆರೆ

ದೆಹಲಿಯಿಂದ ಬೆಂಗಳೂರಿಗೆ ತಂದು ಮಾರಾಟ ಮಾಡುತ್ತಿದ್ದ ದುಷ್ಕರ್ಮಿಗಳು ಬೆಂಗಳೂರು: ಹೆಬ್ಬಾಳ ಪೊಲೀಸರು ದೆಹಲಿ ಮೂಲದ ಬೃಹತ್ ಡ್ರಗ್ಸ್‌ ಜಾಲವೊಂದನ್ನ ಭೇದಿಸಿ ಎಂಟು ಆರೋಪಿಗಳನ್ನು ಬಂಧಿಸಿ ಬರೋಬ್ಬರಿ 35 ಕೋಟಿ ರೂ. ಮೌಲ್ಯದ ಮಾದಕ ವಸ್ತುವನ್ನು ಜಪ್ತಿ ಮಾಡಿದ್ದಾರೆ. ದೆಹಲಿಯಿಂದ ಬೆಂಗಳೂರಿಗೆ ಮಾದಕ ವಸ್ತುಗಳನ್ನು ತಂದು ಮಾರಾಟ ಮಾಡುತ್ತಿದ್ದ ಗ್ಯಾಂಗ್‌ ಪೊಲೀಸರ ಬಲೆಗೆ ಬಿದ್ದಿದೆ. ಪೊಲೀಸರು ಒಟ್ಟು ಎಂಟು ಆರೋಪಿಗಳನ್ನು ಅರೆಸ್ಟ್ ಮಾಡಿ, ಒಂದೇ ಗ್ಯಾಂಗ್‌ನಿಂದ ಸುಮಾರು 35 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ. ಮಾದಕ

35 ಕೋ.ರೂ. ಡ್ರಗ್ಸ್‌ ವಶ : ಎಂಟು ಆರೋಪಿಗಳು ಸೆರೆ Read More »

ನದಿ, ಸಮುದ್ರ, ಜಲಪಾತಗಳಿಗೆ ವಿದ್ಯಾರ್ಥಿಗಳ ಪ್ರವಾಸ ನಿಷೇಧ!

ಪದವಿ ಕಾಲೇಜುಗಳ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ಮಾರ್ಗಸೂಚಿ ಬೆಂಗಳೂರು: ಇನ್ನು ಮುಂದೆ ಯಾವುದೇ ಶೈಕ್ಷಣಿಕ ಪ್ರವಾಸಕ್ಕೂ ಶಿಕ್ಷಣ ಇಲಾಖೆಯ ಪೂರ್ವಾನುಮತಿ ಕಡ್ಡಾಯ. ಒಂದು ದಿನದ ಸ್ಥಳೀಯ ಪ್ರವಾಸವಾಗಲಿ, ನಾಲ್ಕೈದು ದಿನಗಳ ದೂರದ ಪ್ರವಾಸವಾಗಲಿ, ಅನುಮತಿ ಪಡೆಯದೆ ಪ್ರವಾಸಕ್ಕೆ ತೆರಳಲು ಅವಕಾಶ ಇರುವುದಿಲ್ಲ. ಪ್ರವಾಸ ಆರಂಭಿಸುವ ಮೊದಲು ಸಮೀಪದ ಪೊಲೀಸ್ ಠಾಣೆಗೆ ಸಂಪೂರ್ಣ ಮಾಹಿತಿ ನೀಡಬೇಕು ಎಂಬ ಸೂಚನೆಯನ್ನು ಶಿಕ್ಷಣ ಇಲಾಖೆ ರಾಜ್ಯದ ಎಲ್ಲ ಪದವಿ ಕಾಲೇಜುಗಳಿಗೆ ನೀಡಿದೆ. ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳ ಶೈಕ್ಷಣಿಕ ಪ್ರವಾಸಗಳಿಗೆ

ನದಿ, ಸಮುದ್ರ, ಜಲಪಾತಗಳಿಗೆ ವಿದ್ಯಾರ್ಥಿಗಳ ಪ್ರವಾಸ ನಿಷೇಧ! Read More »

ಮೇ 23ಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನವೀನ್‌ ಕರ್ನಾಟಕ ಭೇಟಿ

ರಾಜ್ಯಾಧ್ಯಕ್ಷರ ಆಯ್ಕೆ, ಕೋರ್‌ ಕಮಿಟಿ ಪುನಾರಚನೆ ಕುರಿತು ಚರ್ಚೆ ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಮೇ 23 ಮತ್ತು 24ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ರಾಷ್ಟ್ರೀಯ ಅಧ್ಯಕ್ಷರಾದ ಬಳಿಕ ನಿತಿನ್‌ ನವೀನ್‌ ಅವರ ಮೊದಲ ಅಧಿಕೃತ ಕರ್ನಾಟಕ ಭೇಟಿ ಇದಾಗಿರುತ್ತದೆ. ಅವರು ರಾಜ್ಯದ ಪ್ರಮುಖ ನಾಯಕರೊಂದಿಗೆ ಸರಣಿ ಸಭೆಗಳನ್ನು ನಡೆಸಿ, ಮುಂಬರುವ ಚುನಾವಣೆಗಳನ್ನು ಎದುರಿಸಲು ನಾಯಕರಿಗೆ ಮತ್ತು ಕಾರ್ಯಕರ್ತರಿಗೆ ಹೊಸ ‘ಟಾಸ್ಕ್’ ನೀಡಲಿದ್ದಾರೆ ಎನ್ನಲಾಗಿದೆ. ದೇಶದಲ್ಲಿ ಐದು ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟಗೊಂಡು ಸರ್ಕಾರ

ಮೇ 23ಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನವೀನ್‌ ಕರ್ನಾಟಕ ಭೇಟಿ Read More »

ಶ್ರೀ ಕಾಳಿಕಾಂಬ ಯಕ್ಷಕಲಾ ಟ್ರಸ್ಟ್ ರಿ .ಸಭೆ

ಉಪ್ಪಿನಂಗಡಿ ಶ್ರೀ ಕಾಳಿಕಾಂಬಾ ಯಕ್ಷಕಲಾ ಟ್ರಸ್ಟ್ ನ ಸಭೆಯು ಶ್ರೀಸಹಸ್ರಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಜರಗಿತು. ಅಧ್ಯಕ್ಷತೆ ವಹಿಸಿದ್ದ ಟ್ರಸ್ಟ್ ಅಧ್ಯಕ್ಷ ದಿವಾಕರ ಆಚಾರ್ಯ ಗೇರುಕಟ್ಟೆ ಮಾತನಾಡಿ 1974ರಲ್ಲಿ ಸ್ಥಾಪನೆಯಾಗಿ 2000 ನಲ್ಲಿ ರಜತ ಮಹೋತ್ಸವ ಆಚರಿಸಲಾಗಿದೆ. ಸುವರ್ಣಮಹೊತ್ಸವದ ನಿಮಿತ್ತ ಐವತ್ತು ತಾಳಮದ್ದಳೆಗಳ ಶ್ರೀ ಮಹಾಭಾರತ ಸರಣಿಯನ್ನು2 ವರ್ಷಗಳ ಹಿಂದೆ ಆರಂಭಿಸಲಾಗಿದ್ದು ಈ ವರೆಗೆ 115 ತಾಳಮದ್ದಳೆಗಳನ್ನು ನಡೆಸಿರುವುದೊಂದು ಯಕ್ಷಗಾನ ಕ್ಷೇತ್ರದ ಇತಿಹಾಸದಲ್ಲಿ ದಾಖಲೆಯಾಗಿದೆ . 2026ರ ಸೆಪ್ಟೆಂಬರ್ ತಿಂಗಳಲ್ಲಿ ಸುವರ್ಣ ವರ್ಷದ ಸಮಾರೋಪ ನಡೆಸಲಾಗುವುದೆಂದು ತಿಳಿಸಿದರು. ಈ

ಶ್ರೀ ಕಾಳಿಕಾಂಬ ಯಕ್ಷಕಲಾ ಟ್ರಸ್ಟ್ ರಿ .ಸಭೆ Read More »

ಶಿಬಾಜೆ ಕೊಲೆ ಪ್ರಕರಣ : ಮಂಪರು ಪರೀಕ್ಷೆಗೆ ಆರೋಪಿಗಳ ನಕಾರ

2022ರಲ್ಲಿ ಶೀಬಾಜೆಯ ತೋಟದಲ್ಲಿ ನಡೆದಿದ್ದ ಶ್ರೀಧರ ಕೊಲೆ ಕೇಸ್‌ ಬೆಳ್ತಂಗಡಿ: ಶಿಬಾಜೆ ಗ್ರಾಮದಲ್ಲಿ 2022ರ ಡಿಸೆಂಬರ್ 18ರಂದು ನಡೆದ ಶ್ರೀಧರ ಕೊಲೆ ಪ್ರಕರಣದ ಆರೋಪಿಗಳು ಮಂಪರು ಪರೀಕ್ಷಗೊಳಪಡಲು ನಿರಾಕರಿಸಿದ್ದಾರೆ ಎಂದು ತಿಳಿದುಬಂದಿದೆ. ಹೆಚ್ಚಿನ ತನಿಖೆಗಾಗಿ ಸರ್ಕಾರ ಈ ಪ್ರಕರಣವನ್ನು ಎಸ್‌ಐಟಿಗೆ ನೀಡಿದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ವೇಳೆ ಆರೋಪಿಗಳು ಮಂಪರು ಪರೀಕ್ಷೆ ಮತ್ತು ಬ್ರೈನ್ ಮ್ಯಾಪಿಂಗ್‌ಗೆ ಆರಂಭದಲ್ಲಿ ಒಪ್ಪಿಗೆ ಸೂಚಿಸಿ ಬಳಿಕ ನ್ಯಾಯಾಲಯದ ಮುಂದೆ ನಿರಾಕರಿಸಿರುವ ಬಗ್ಗೆ ವರದಿಯಾಗಿದೆ. ಶ್ರೀಧರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ

ಶಿಬಾಜೆ ಕೊಲೆ ಪ್ರಕರಣ : ಮಂಪರು ಪರೀಕ್ಷೆಗೆ ಆರೋಪಿಗಳ ನಕಾರ Read More »

ಕಾಣೆಯಾಗಿದ್ದ ಯುವಕ ಎರಡು ದಿನಗಳ ಬಳಿಕ ನಿತ್ರಾಣ ಸ್ಥಿತಿಯಲ್ಲಿ ಪತ್ತೆ

ರೆಖ್ಯದಿಂದ ಕಾಣೆಯಾಗಿದ್ದ ನೆಲ್ಯಾಡಿ ಪಾಲೆತ್ತಾಡಿಯ ಯುವಕ ಬೆಳ್ತಂಗಡಿ: ರೆಖ್ಯ ಗ್ರಾಮದ ದೇವಸ ಎಂಬಲ್ಲಿಗೆ ಸಂಬಂಧಿಕರ ಮನೆಗೆ ಆಗಮಿಸಿದ್ದ ನೆಲ್ಯಾಡಿ ಪಾಲೆತ್ತಾಡಿ ನಿವಾಸಿ ಅಶ್ವಿತ್ ಕುಮಾರ್ (37) ಎಂಬ ಯುವಕ ಮೇ 17 ರಂದು ಸಂಜೆ 4.15ರ ಬಳಿಕ ಕಣ್ಮರೆಯಾಗಿದ್ದರು. ಶೌರ್ಯ ವಿಪತ್ತು ನಿರ್ವಹಣಾ ತಂಡದವರು ಹಾಗೂ ಸ್ಥಳೀಯರು‌ ನಡೆಸಿದ ನಿರಂತರ ಹುಡುಕಾಟದ ಬಳಿಕ ಶಿರಾಡಿ ಗ್ರಾಮದ ಕುಕ್ಕುಂಜ ಸಮೀಪದ ಉದನೆ ಹೊಳೆಯ ಸಮೀಪದಲ್ಲಿ ಮಂಗಳವಾರ ಮಧ್ಯಾಹ್ನ ವೇಳೆಗೆ ನಿತ್ರಾಣವಾಗಿ ಕುಳಿತಿದ್ದ ಸ್ಥಿತಿಯಲ್ಲಿ ಅಶ್ವಿತ್ ಕುಮಾರ್ ಅವರನ್ನು ಪತ್ತೆಹಚ್ಚಿದ್ದಾರೆ.

ಕಾಣೆಯಾಗಿದ್ದ ಯುವಕ ಎರಡು ದಿನಗಳ ಬಳಿಕ ನಿತ್ರಾಣ ಸ್ಥಿತಿಯಲ್ಲಿ ಪತ್ತೆ Read More »

error: Content is protected !!
Scroll to Top