ಬಂಟ್ವಾಳ : ಕೊರಗಜ್ಜ ದೈವಕ್ಕೆ ಹರಕೆ ಕೋಲ ಸಲ್ಲಿಸಿದ ನಟಿ ರಚಿತಾ ರಾಮ್‌

ಬೆಂಜನಪದವು ಕೊರಗಜ್ಜ ಸನ್ನಿಧಿಗೆ ಭೇಟಿ ಬಂಟ್ವಾಳ : ಕನ್ನಡದ ಜನಪ್ರಿಯ ನಟಿ ರಚಿತಾ ರಾಮ್ ತುಳುನಾಡಿನ‌ ಆರಾಧ್ಯ ದೈವ ಕೊರಗಜ್ಜ ದೈವಕ್ಕೆ ಹರಕೆ ಕೋಲ ಸಲ್ಲಿಸಿದ್ದಾರೆ. ಬಂಟ್ವಾಳ ತಾಲೂಕಿನ ಬೆಂಜನಪದವಿನ ಕೊರಗಜ್ಜ ಸನ್ನಿಧಿಯಲ್ಲಿ ನಟಿ ರಚಿತಾ ರಾಮ್ ತನ್ನ ಹರಕೆ ಕೋಲ ಸೇವೆ ಸಲ್ಲಿಸಿದ್ದಾರೆ. ತಾನು ಅಂದುಕೊಂಡ ಕೆಲಸಗಳು ನೆರವೇರಿದರೆ ಕೊರಗಜ್ಜ ದೈವಕ್ಕೆ ಕೋಲ ಸೇವೆ ಸಲ್ಲಿಸುವ ಹರಕೆ ಹೊತ್ತಿದ್ದ ರಚಿತಾ ರಾಮ್, ಇದೀಗ ಆ ಹರಕೆಯನ್ನು ಪೂರ್ಣಗೊಳಿಸಿದ್ದಾರೆ. ಕನ್ನಡ ಚಿತ್ರರಂಗದ ಬಹುತೇಕ ಎಲ್ಲ ಸೂಪರ್‌ಸ್ಟಾರ್ ನಟರ […]

ಬಂಟ್ವಾಳ : ಕೊರಗಜ್ಜ ದೈವಕ್ಕೆ ಹರಕೆ ಕೋಲ ಸಲ್ಲಿಸಿದ ನಟಿ ರಚಿತಾ ರಾಮ್‌ Read More »

ಹೆದ್ದಾರಿಯಲ್ಲಿ ಕಾರು ಅಡ್ಡಗಟ್ಟಿ 26 ಲ.ರೂ. ದರೋಡೆ

ಬೆಂಗಳೂರು: ಖಾಸಗಿ ಕಂಪನಿ ಉದ್ಯೋಗಿಯೊಬ್ಬರ ಕಾರನ್ನು ದುಷ್ಕರ್ಮಿಗಳ ಗ್ಯಾಂಗ್‌ ಅಡ್ಡಗಟ್ಟಿ 26 ಲಕ್ಷ ರೂ. ದರೋಡೆ ಮಾಡಿದ ಘಟನೆ ಮದ್ದೂರು ಪಟ್ಟಣದ ಹೊರ ವಲಯದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೈಸೂರಿನ ಖಾಸಗಿ ಕಂಪನಿ ಉದ್ಯೋಗಿ ಗೋವಿಂದರಾಜು ತೆರಳುತ್ತಿದ್ದ ಐ-20 ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಹಣ ದೋಚಿ ಪರಾರಿಯಾಗಿದ್ದಾರೆ. ರಾತ್ರಿ 7 ಗಂಟೆ ಸುಮಾರಿಗೆ ಬೇರೆ ಕಂಪನಿಯಿಂದ ತಮ್ಮ ಕಂಪನಿಗೆ ಹಣ ವಿತರಣೆ ಮಾಡಲು ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದರು. ಪಟ್ಟಣದ ಹೊರ ವಲಯದ ಐಶ್ವರ್ಯ ಕಾನ್ವೆಂಟ್ ಬಳಿ

ಹೆದ್ದಾರಿಯಲ್ಲಿ ಕಾರು ಅಡ್ಡಗಟ್ಟಿ 26 ಲ.ರೂ. ದರೋಡೆ Read More »

ಜೂ.1ರಂದು ರಾಜ್ಯಾದ್ಯಂತ ಶಾಲಾ ಪ್ರಾರಂಭೋತ್ಸವ : ಮಧು ಬಂಗಾರಪ್ಪ

ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಪ್ರಾರಂಭೋತ್ಸವಕ್ಕೆ ಚಾಲನೆ ಬೆಂಗಳೂರು: ಜೂ.1ರಂದು ರಾಜ್ಯಾದ್ಯಂತ ಎಲ್ಲ ಶಾಲೆಗಳಲ್ಲಿ ಪ್ರಾರಂಭೋತ್ಸವ ವಿಜೃಂಭಣೆಯಿಂದ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ವಿದ್ಯಾರ್ಥಿಗಳನ್ನು ಶಾಲೆಗೆ ಸ್ವಾಗತಿಸಲಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಮುಖ್ಯಮಂತ್ರಿಗಳು ರಾಜ್ಯಾದ್ಯಂತ ಎಲ್ಲ ಶಾಲೆಗಳಲ್ಲಿ ಏಕಕಾಲದಲ್ಲಿ ನಡೆಯುವ ‘ಮಹಾ ಪೋಷಕ-ಶಿಕ್ಷಕರ ಸಭೆ’ಯನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ವಿದ್ಯಾರ್ಥಿಗಳು ಹಾಗೂ ಪೋಷಕರೊಂದಿಗೆ ನೇರ ಸಂವಾದ ನಡೆಸಲಿದ್ದಾರೆ. ಹೊಸ ಶೈಕ್ಷಣಿಕ ವರ್ಷದ ಸಿದ್ಧತೆಗಳ ಕುರಿತು ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ 46,000 ಸರ್ಕಾರಿ ಶಾಲೆಗಳ

ಜೂ.1ರಂದು ರಾಜ್ಯಾದ್ಯಂತ ಶಾಲಾ ಪ್ರಾರಂಭೋತ್ಸವ : ಮಧು ಬಂಗಾರಪ್ಪ Read More »

ಲಿಫ್ಟ್‌ ನಡುವೆ ಸಿಲುಕಿ ಯುವಕ ದಾರುಣ ಸಾವು

ಕೆಟ್ಟು ನಿಂತ ಲಿಫ್ಟ್‌ ಹಠಾತ್‌ ಚಲಿಸಿ ಸಂಭವಿಸಿದ ದುರಂತ ಮಂಗಳೂರು : ನಗರದ ಕುಂಟಿಕಾನದ ಮಾರ್ಟ್‌ವೊಂದರಲ್ಲಿ ಶನಿವಾರ ಸಂಜೆ ಸಂಭವಿಸಿದ ಲಿಫ್ಟ್ ಅವಘಡದಲ್ಲಿ ಯುವಕನೊಬ್ಬ ಮೃತಪಟ್ಟಿದ್ದಾರೆ. ಬೆಳಾಲು ಗ್ರಾಮದ ಪೂಂಜಕೆರೆ ನಿವಾಸಿ ನೌಫಾಲ್ (28) ಮೃತಪಟ್ಟ ಯುವಕ. ಶನಿವಾರ ಸಂಜೆ ನೌಫಾಲ್ ಕೆಲಸದಲ್ಲಿ ನಿರತರಾಗಿದ್ದ ವೇಳೆ ಲಿಫ್ಟ್‌ನಲ್ಲಿ ಅವಘಡ ಸಂಭವಿಸಿದೆ. ತಕ್ಷಣ ಇತರರು ಈತನನ್ನು ಅಪಾಯದಿಂದ ಪಾರು ಮಾಡಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ ಎನ್ನಲಾಗಿದೆ. ಮೃತ ನೌಫಾಲ್ ಅವಿವಾಹಿತ ಎಂದು ತಿಳಿದುಬಂದಿದೆ. ನೌಫಾಲ್‌ ಕಾರ್ಯನಿಮಿತ್ತ ಲಿಫ್ಟ್‌ನಲ್ಲಿ ಮೇಲಕ್ಕೆ ಹೋಗುತ್ತಿರುವಾಗ

ಲಿಫ್ಟ್‌ ನಡುವೆ ಸಿಲುಕಿ ಯುವಕ ದಾರುಣ ಸಾವು Read More »

ಕೇರಳಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 27 ಜಾನುವಾರುಗಳ ರಕ್ಷಣೆ

ಲಾರಿಯಲ್ಲಿ ಹಿಂಸಾತ್ಮಕವಾಗಿ ತುಂಬಿಸಿ ಸಾಗಿಸುತ್ತಿದ್ದ ನಾಲ್ವರು ಅರೆಸ್ಟ್‌ ಮಂಗಳೂರು: ಹಾವೇರಿಯಿಂದ ಕೇರಳದ ಕಣ್ಣೂರಿನ ತಳಿಪರಂಬಕ್ಕೆ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಕಂಕನಾಡಿ ನಗರ ಪೊಲೀಸರು ಪತ್ತೆಹಚ್ಚಿ ನಾಲ್ವರು ಆರೋಪಿಗಳನ್ನು ಬಂಧಿಸಿ 27 ಕೋಣಗಳನ್ನು ರಕ್ಷಿಸಿದ್ದಾರೆ. ಶನಿವಾರ ಬೆಳಗ್ಗೆ 6 ಗಂಟೆಗೆ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜಪ್ಪಿನಮೊಗೇರು ಇಂಡಿಯಾನ ಹಾಲ್ ಎದುರು ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಮಂಗಳೂರು ಹೈವೆ ಪೆಟ್ರೋಲ್ ಪೊಲೀಸರು ಹಾಗೂ ಮಾರ್ನಿಂಗ್ ಗಸ್ತು ಕರ್ತವ್ಯದಲ್ಲಿದ್ದ ಕಂಕನಾಡಿ ನಗರ ಪೊಲೀಸರು ಈಚರ್

ಕೇರಳಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 27 ಜಾನುವಾರುಗಳ ರಕ್ಷಣೆ Read More »

ದೇವಸ್ಥಾನಕ್ಕೆ ಬಡಿದ ಸಿಡಿಲು : ಅಪಾರ ಹಾನಿ

ನಾಲ್ಕು ವರ್ಷದ ಹಿಂದೆಯಷ್ಟೇ ಬ್ರಹ್ಮಕಲಶವಾಗಿದ್ದ ದೇಗುಲ ಬಂಟ್ವಾಳ: ದೇವಸ್ಥಾನಕ್ಕೆ ಸಿಡಿಲು ಬಡಿದು ಕೋಟ್ಯಾಂತರ ರೂ. ನಷ್ಟ ಸಂಭವಿಸಿದ ಘಟನೆ ಬಂಟ್ವಾಳ ತಾಲೂಕಿನ ಮಣಿ ನಾಲ್ಕೂರು ಗ್ರಾಮದ ಇಳಿಯೂರು ಎಂಬಲ್ಲಿ ಶನಿವಾರ ಸಂಜೆ ವೇಳೆ ನಡೆದಿದೆ. ಮಣಿನಾಲ್ಕೂರು ಗ್ರಾಮದಲ್ಲಿರುವ ಇಳಿಯೂರು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದ ಗರ್ಭಗುಡಿಯ ಗೋಪುರಕ್ಕೆ ಸಿಡಿಲು ಬಡಿದು ಸುಮಾರು 1 ಕೋಟಿಯಷ್ಟು ನಷ್ಟ ಉಂಟಾಗಿದೆ ಎಂದು ಹೇಳಲಾಗಿದೆ. ಸಂಜೆ ಸುಮಾರು 4.30ರ ವೇಳೆಗೆ ಸುರಿದ ಗಾಳಿ ಮಳೆಯ ನಡುವೆ ಸಿಡಿಲು ಬಡಿದಿದೆ. ಸಿಡಿಲಿನ ಬಡಿತಕ್ಕೆ

ದೇವಸ್ಥಾನಕ್ಕೆ ಬಡಿದ ಸಿಡಿಲು : ಅಪಾರ ಹಾನಿ Read More »

ಕೇಂದ್ರ ಸಚಿವನ ಪುತ್ರ ಪೋಕ್ಸೊ ಕೇಸಿನಲ್ಲಿ ಅರೆಸ್ಟ್‌

17 ವರ್ಷದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಕೇಸ್‌ ಹೈದರಾಬಾದ್​​: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಹಾಗೂ ಬಿಜೆಪಿ ಸಂಸದ ಬಂಡಿ ಸಂಜಯ್ ಕುಮಾರ್ ಪುತ್ರ ಭಗೀರಥ್ ಸಾಯಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧನದಿಂದ ಮಧ್ಯಂತರ ರಕ್ಷಣೆ ನೀಡಲು ತೆಲಂಗಾಣ ಹೈಕೋರ್ಟ್​​ ನಿರಾಕರಿಸಿದ ಕೆಲವೇ ಗಂಟೆಗಳಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುತ್ರನನ್ನು ತನಿಖೆಗೆ ಪೊಲೀಸರಿಗೆ ಒಪ್ಪಿಸಿದ್ದಾಗಿ ಬಂಡಿ ಸಂಜಯ್ ಕುಮಾರ್ ತಿಳಿಸಿದ್ದು, 17 ವರ್ಷದ ಬಾಲಕಿಗೆ ಕಿರುಕುಳ ಮತ್ತು

ಕೇಂದ್ರ ಸಚಿವನ ಪುತ್ರ ಪೋಕ್ಸೊ ಕೇಸಿನಲ್ಲಿ ಅರೆಸ್ಟ್‌ Read More »

ಬಾರ್ಯ ಶ್ರೀ ವಿಷ್ಣುಮೂರ್ತಿ ಕ್ಷೇತ್ರದಲ್ಲಿ ಸೀಯಾಳ ಅಭಿಷೇಕ

ಉಪ್ಪಿನಂಗಡಿ ಸಮೀಪದ ಬಾರ್ಯ ಶ್ರೀ ವಿಷ್ಣುಮೂರ್ತಿ ಕ್ಷೇತ್ರದಲ್ಲಿ ವರುಣ ಕೃಪೆಗಾಗಿ ಸಾಮೂಹಿಕ ಸೀಯಾಳ ಅಭಿಷೇಕವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ಮಾರ್ಗದರ್ಶನದಂತೆ ನಡೆಯಿತು. ಕ್ಷೇತ್ರದ ಆಡಳಿತ ಸೇವಾ ಟ್ರಸ್ಟಿನ ಉಪಾಧ್ಯಕ್ಷ ನಾರಾಯಣಗೌಡ, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪೈ, ಟ್ರಸ್ಟಿಗಳಾದ ರಾಮಣ್ಣಗೌಡ, ಉಮೇಶ್ ಗಿರಿಗುಡ್ಡೆ, ವಿಜಯಲಕ್ಷ್ಮಿ ರೈ, ವಿಶ್ವನಾಥ ಗೌಡ ಆಲಡ್ಕ, ಮೋನಪ್ಪ ಗೌಡ ಮತ್ತು ಭಗವದ್ಭಕ್ತರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ದೇವಳದ ಪ್ರಧಾನ ಅರ್ಚಕ ಗುರುಪ್ರಸಾದ್ ನೂರಿತ್ತಾಯ ಸೀಯಾಳ ಅಭಿಷೇಕ ಸಮರ್ಪಿಸಿದರು, ಸೇವಾ ಟ್ರಸ್ಟಿನ ಅಧ್ಯಕ್ಷ ಭಾಸ್ಕರ್ ಬಾರ್ಯ

ಬಾರ್ಯ ಶ್ರೀ ವಿಷ್ಣುಮೂರ್ತಿ ಕ್ಷೇತ್ರದಲ್ಲಿ ಸೀಯಾಳ ಅಭಿಷೇಕ Read More »

ಹಾರ್ಮುಜ್‌ನಲ್ಲಿ ಭಾರತಕ್ಕೆ ತೊಂದರೆಯಾಗುವುದಿಲ್ಲ : ಇರಾನ್‌ ಭರವಸೆ

ವಿದೇಶಾಂಗ ಸಚಿವರಾದ ಸಚಿವ ಎಸ್ ಜೈಶಂಕರ್-ಸೈಯದ್ ಅಬ್ಬಾಸ್ ಆರಾಘ್ಚಿ ಭೇಟಿ ನವದೆಹಲಿ: ಹಾರ್ಮುಜ್ ಜಲಸಂಧಿಯಲ್ಲಿ ಭಾರತಕ್ಕೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಇರಾನ್ ವಿದೇಶಾಂಗ ಸಚಿವ ಸೈಯದ್ ಅಬ್ಬಾಸ್ ಆರಾಘ್ಚಿ ಭರವಸೆ ನೀಡಿದ್ದಾರೆ. ದೆಹಲಿಯಲ್ಲಿ ನಡೆಯುತ್ತಿರುವ ಬ್ರಿಕ್ಸ್ ರಾಷ್ಟ್ರಗಳ ವಿದೇಶಾಂಗ ಸಚಿವರ ಶೃಂಗ ಸಭೆಯಲ್ಲಿ ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರನ್ನು ಭೇಟಿ ಮಾಡಿದ ಇರಾನ್ ವಿದೇಶಾಂಗ ಸಚಿವ ಸೈಯದ್ ಅಬ್ಬಾಸ್ ಆರಾಘ್ಚಿ ಮಹತ್ವದ ಮಾತುಕತೆ ನಡೆಸಿದರು. ಈ ವೇಳೆ ಸ್ನೇಹಪರ ರಾಷ್ಟ್ರಗಳು ವ್ಯಾಪಾರ ಮತ್ತು ಸಾಗಾಣಿಕೆ

ಹಾರ್ಮುಜ್‌ನಲ್ಲಿ ಭಾರತಕ್ಕೆ ತೊಂದರೆಯಾಗುವುದಿಲ್ಲ : ಇರಾನ್‌ ಭರವಸೆ Read More »

ಬೆಳ್ತಂಗಡಿ: ಪೊಲೀಸ್‌ ಸಿಬ್ಬಂದಿ ಮನೆಯಲ್ಲಿ 14 ಲ.ರೂ. ಮೌಲ್ಯದ ನಗ-ನಗದು ಕಳ್ಳತನ

ಪೊಲೀಸ್‌ ಸಿಬ್ಬಂದಿ ಮನೆಯಲ್ಲಿರುವಾಗಲೇ ಕೈ ಚಳಕ ತೋರಿಸಿದ ಕಳ್ಳರು ಬೆಳ್ತಂಗಡಿ: ಪದ್ಮುಂಜದ ಗಾಡಕೋಡಿ ಎಂಬಲ್ಲಿ ಬೆಳ್ತಂಗಡಿ ಪೋಲೀಸ್ ಸಿಬ್ಬಂದಿ ಕರುಣಾಕರ ಗೌಡ ಎಂಬವರ ಮನೆಯಲ್ಲಿ ಮೇ 15ರಂದು ರಾತ್ರಿ ಕಳವಾಗಿದ್ದು ಈ ಬಗ್ಗೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಸುಮಾರು 13 ಲಕ್ಷ ರೂಪಾಯಿ ವೆಚ್ಚದ ಚಿನ್ನಾಭರಣ ಒಂದು ಲಕ್ಷ ರೂಪಾಯಿ ನಗದು ಕಳುವಾಗಿದೆ ಎಂದು ದೂರು ನೀಡಿಲಾಗಿದೆ . ಮನೆಯ ಒಡೆಯ ಕರುಣಾಕರ ಮನೆಯಲ್ಲಿ ಒಬ್ಬರೇ ಇದ್ದು ಪತ್ನಿ ಮಕ್ಕಳು ಬೆಂಗಳೂರಿನಲ್ಲಿ ಇದ್ದರು ಎಂದು ತಿಳಿದುಬಂದಿದೆ.

ಬೆಳ್ತಂಗಡಿ: ಪೊಲೀಸ್‌ ಸಿಬ್ಬಂದಿ ಮನೆಯಲ್ಲಿ 14 ಲ.ರೂ. ಮೌಲ್ಯದ ನಗ-ನಗದು ಕಳ್ಳತನ Read More »

error: Content is protected !!
Scroll to Top