ಅನುಮತಿ ಇಲ್ಲದೆ ವಿಡಿಯೋ ಚಿತ್ರೀಕರಿಸಿ ಹಂಚಿದ ಆರೋಪಿಗ‌ಳ ವಿರುದ್ಧ ದೂರು ದಾಖಲು

ಕಡಬ: ಅನುಮತಿ ಪಡೆಯದೆ ವ್ಯಕ್ತಿಯೊಬ್ಬರ ಖಾಸಗಿ ವಿಚಾರಗಳನ್ನು ಚಿತ್ರೀಕರಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿ ಅವಮಾನಿಸಿದ ಇಬ್ಬರು ಆರೋಪಿಗಳ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತೂರು ಗ್ರಾಮದ ನೆಲ್ಲಿಕಟ್ಟೆ ನಿವಾಸಿ ಪೂರ್ಣಜ್ಯೋತಿ ಅವರು ನೀಡಿದ ದೂರಿನನ್ವಯ ಪ್ರಕರಣ ದಾಖಲಾಗಿದೆ. ಪೂರ್ಣಜ್ಯೋತಿ ಅವರ ಮಗ ಪ್ರಭಾಕರ್ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭದ್ರತಾ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಎ. 3 ರಂದು ರಾತ್ರಿ ಸುಮಾರು 10 ಗಂಟೆ ಸುಮಾರಿಗೆ ಗಂಗಾಪ್ರಸನ್ನ ಎಂಬವರು ಪೂರ್ಣಜ್ಯೋತಿ ಅವರ ಮನೆಗೆ ಅಕ್ರಮವಾಗಿ ಪ್ರವೇಶಿಸಿ ಜಗಳ […]

ಅನುಮತಿ ಇಲ್ಲದೆ ವಿಡಿಯೋ ಚಿತ್ರೀಕರಿಸಿ ಹಂಚಿದ ಆರೋಪಿಗ‌ಳ ವಿರುದ್ಧ ದೂರು ದಾಖಲು Read More »

ಕೊಲೆ ಪ್ರಕರಣದ ಅಪರಾಧಿಗೆ ಜೀವಾವಧಿ ಶಿಕ್ಷೆ

ಉಳ್ಳಾಲದ ಮುಕ್ಕಚ್ಚೇರಿಯಲ್ಲಿ ನಡೆದಿದ್ದ ಕೊಲೆ ಮಂಗಳೂರು : ಉಳ್ಳಾಲದ ಮುಕ್ಕಚ್ಚೇರಿಯಲ್ಲಿ 2017ರ ಅಕ್ಟೋಬರ್ 4ರಂದು ನಡೆದಿದ್ದ ಝಬೇರ್ ಎಂಬವರ ಕೊಲೆ ಮತ್ತು ಇಲ್ಯಾಸ್ ಎಂಬವರ ಕೊಲೆಯತ್ನ ಪ್ರಕರಣ ಅಪರಾಧಿ ಅಬ್ದುಲ್ ರಹ್ಮಾನ್ ಸುಹೇಲ್‌ಗೆ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. 2017ರ ಅಕ್ಟೋಬರ್ 4ರಂದು ರಾತ್ರಿ ಜುಬೇರ್ ಮತ್ತು ಇಲ್ಯಾಸ್ ಮಾತನಾಡುತ್ತಿದ್ದಾಗ ಮಾರಕಾಸ್ತ್ರಗಳೊಂದಿಗೆ ಬಂದ ತಂಡವೊಂದು ಅವರ ಮೇಲೆ ದಾಳಿ ನಡೆಸಿತ್ತು. ಈ ವೇಳೆ ಜುಬೇರ್ ಕೊಲೆಯಾಗಿದ್ದರು. ಮಧ್ಯಪ್ರವೇಶಿಸಲು

ಕೊಲೆ ಪ್ರಕರಣದ ಅಪರಾಧಿಗೆ ಜೀವಾವಧಿ ಶಿಕ್ಷೆ Read More »

ಮಹಾರಾಷ್ಟ್ರದ ಸಚಿವ ನಿತೇಶ್‌ ರಾಣೆಗೆ ಜೈಲು ಶಿಕ್ಷೆ

ಈ ಒಂದು ಪ್ರತಿಭಟನೆ ಮುಳುವಾಯಿತು ಮುಂಬೈ: ಮಹಾರಾಷ್ಟ್ರದ ಮೀನುಗಾರಿಕೆ ಮತ್ತು ಬಂದರು ಅಭಿವೃದ್ಧಿ ಸಚಿವ ನಿತೇಶ್ ನಾರಾಯಣ ರಾಣೆ ಅವರಿಗೆ ಸ್ಥಳೀಯ ಕೋರ್ಟ್‌ 1 ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಇಂಜಿನಿಯರ್‌ ಮೇಲೆ ಕೆಸರು ಸುರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಂಧುದುರ್ಗದ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ನಿತೇಶ್ ರಾಣೆ ಅವರನ್ನು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 504 (ಸಾರ್ವಜನಿಕ ಶಾಂತಿಗೆ ಭಂಗ ತರುವ ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ದೋಷಿ ಎಂದು ಘೋಷಿಸಿದೆ. ನ್ಯಾಯಾಲಯ ಒಂದು

ಮಹಾರಾಷ್ಟ್ರದ ಸಚಿವ ನಿತೇಶ್‌ ರಾಣೆಗೆ ಜೈಲು ಶಿಕ್ಷೆ Read More »

ಉಡುಪಿ ವಾಣಿಜ್ಯ ಮಳಿಗೆ ಬೆಂಕಿ ಅವಘಡದಲ್ಲಿ 2.5 ಕೋ. ರೂ. ಸೊತ್ತು ನಾಶ

ಸಿಟಿ ಬಸ್‌ಸ್ಟ್ಯಾಂಡ್‌ ಪಕ್ಕದಲ್ಲೇ ಹೊತ್ತಿ ಉರಿದ ಕಟ್ಟಡ ಉಡುಪಿ : ನಗರದ ಸಿಟಿ ಬಸ್ ನಿಲ್ದಾಣದ ಸಮೀಪವಿರುವ ವಾಣಿಜ್ಯ ಮಳಿಗೆಯೊಂದರಲ್ಲಿ ಭಾನುವಾರ ಸಂಜೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಸುಮಾರು 2.5 ಕೋಟಿ ರೂಪಾಯಿ ಮೌಲ್ಯದ ಆಸ್ತಿಪಾಸ್ತಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಮೂಲತಃ ರಾಜಸ್ಥಾನದವರಾದ ಉದ್ಯಮಿ ಭೀಮಾ ಎಂಬುವರಿಗೆ ಸೇರಿದ ಪ್ಲಾಸ್ಟಿಕ್ ವಸ್ತುಗಳ ಗೋದಾಮಿನಲ್ಲಿ ಭಾನುವಾರ ಸಂಜೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ಈ ಬೆಂಕಿ ಅವಘಡದಲ್ಲಿ ಅವರಿಗೆ ಸೇರಿದ ಪ್ಲಾಸ್ಟಿಕ್ ಮಳಿಗೆ

ಉಡುಪಿ ವಾಣಿಜ್ಯ ಮಳಿಗೆ ಬೆಂಕಿ ಅವಘಡದಲ್ಲಿ 2.5 ಕೋ. ರೂ. ಸೊತ್ತು ನಾಶ Read More »

ಪ್ಲಾಸ್ಟಿಕ್‌ ಗೋದಾಮಿನಲ್ಲಿ ಭೀಕರ ಬೆಂಕಿ ಅವಘಡ : 50 ಯುವತಿಯರು ಅದೃಷ್ಟವಶಾತ್‌ ಪಾರು

ಮಹಡಿಯಿಂದ ಜಿಗಿದು ಪ್ರಾಣ ಉಳಿಸಿಕೊಂಡ ಪಿಜಿಯಲ್ಲಿದ್ದ ಯುವತಿಯರು ಬೆಂಗಳೂರು: ರಾಜಧಾನಿಯ ನಂದಿನಿ ಲೇಔಟ್‌ನಲ್ಲಿ ತಡರಾತ್ರಿ ಸಂಭವಿಸಿದ ಭೀಕರ ಅಗ್ನಿಅವಘಡದಲ್ಲಿ ಪ್ಲಾಸ್ಟಿಕ್ ಗೋಡೌನ್‌ವೊಂದು ಸಂಪೂರ್ಣ ಭಸ್ಮವಾಗಿದ್ದು, ಬೆಂಕಿಯ ಕೆನ್ನಾಲಿಗೆ ಪಕ್ಕದ ಲೇಡಿಸ್ ಪಿಜಿಗೂ ಹಬ್ಬಿದ ಪರಿಣಾಮ ಯುವತಿಯರು ಪ್ರಾಣಾಪಾಯದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ನಂದಿನಿ ಲೇಔಟ್ ವ್ಯಾಪ್ತಿಯ ಪ್ಲಾಸ್ಟಿಕ್ ಗೋಡೌನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪ್ಲಾಸ್ಟಿಕ್ ವಸ್ತುಗಳಿದ್ದ ಕಾರಣ ಬೆಂಕಿ ಕ್ಷಣಾರ್ಧದಲ್ಲಿ ಅಕ್ಕಪಕ್ಕದ ಮನೆಗಳಿಗೆ ವ್ಯಾಪಿಸಿದೆ. ಬೆಂಕಿಯ ತೀವ್ರತೆಗೆ ಮನೆಯ ಮುಂಭಾಗದ ಮರಗಳು ಹಾಗೂ ಕಬ್ಬಿಣದ ಗೇಟ್‌ಗಳು ಕೂಡ ಹೊತ್ತಿ

ಪ್ಲಾಸ್ಟಿಕ್‌ ಗೋದಾಮಿನಲ್ಲಿ ಭೀಕರ ಬೆಂಕಿ ಅವಘಡ : 50 ಯುವತಿಯರು ಅದೃಷ್ಟವಶಾತ್‌ ಪಾರು Read More »

ರೈಲು ಹಳಿಯಲ್ಲಿ ಸ್ಫೋಟ : ಛಿದ್ರಗೊಂಡ ಮೃತದೇಹ ಪತ್ತೆ

ವಿಧ್ವಂಸಕ ಕೃತ್ಯ ಎಸಗಿರುವ ಶಂಕೆ ಚಂಡಿಗಢ : ಪಂಜಾಬ್‌ನ ಪಟಿಯಾಲದಲ್ಲಿ ಸೋಮವಾರ ತಡರಾತ್ರಿ ರೈಲು ಹಳಿಯಲ್ಲಿ ಸ್ಫೋಟ ಸಂಭವಿಸಿ ಹಳಿ ಹಾನಿಗೊಳಗಾಗಿದೆ. ಶಂಭು-ಅಂಬಾಲ ರೈಲು ಹಳಿಯಲ್ಲಿ ಸ್ಫೋಟದ ಸ್ಥಳದ ಬಳಿ ಒಂದು ಛಿದ್ರಗೊಂಡ ಮೃತದೇಹ ಪತ್ತೆಯಾಗಿದ್ದು, ತನಿಖೆ ಆರಂಭಿಸಲಾಗಿದೆ. ಈ ಸ್ಫೊಟದಿಂದಲೇ ವ್ಯಕ್ತರಿ ಛಿದ್ರವಾಗಿರಬೇಕೆಂದು ಸಂಶಯಿಸಲಾಗಿದೆ. ಆದರೆ ಸ್ಫೋಟಕ್ಕೆ ಕಾರಣವೇನೆಂದು ಸ್ಪಷ್ಟವಾಗಿಲ್ಲ. ಪೊಲೀಸರ ಪ್ರಕಾರ ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ಸರಕು ರೈಲುಗಳಿಗೆ ಮೀಸಲಾಗಿರುವ ರೈಲ್ವೆ ಹಳಿಯ ಬಳಿ ಸ್ಫೋಟ ಸಂಭವಿಸಿದೆ. ಸ್ಫೋಟದ ನಂತರ ಪೊಲೀಸ್

ರೈಲು ಹಳಿಯಲ್ಲಿ ಸ್ಫೋಟ : ಛಿದ್ರಗೊಂಡ ಮೃತದೇಹ ಪತ್ತೆ Read More »

ಮಸಾಲೆ ಪೌಡರ್‌ಗಳಲ್ಲೂ ರಾಸಾಯನಿಕ ಅಂಶ ಇರುವ ದೂರು

ಅರಿಶಿಣ ಪುಡಿಗೆ ರಾಸಾಯನಿಕ ಅಂಶ ಸೇರಿಸುವ ಸಂಶಯ ಬೆಂಗಳೂರು: ಗೋಬಿ ಮಂಚೂರಿ, ಕೇಕ್‌, ಸಮೋಸ ಬಳಿಕ ಈಗ ಆಹಾರ ತಯಾರಿಸುವ ಮಸಾಲೆ ಪದಾರ್ಥಗಳಲ್ಲೂ ರಾಸಾಯನಿಕ ಅಂಶ ಪತ್ತೆಯಾಗಿದೆ. ಅರಿಶಿಣ ಪುಡಿಯಲ್ಲಿ ಕಲಬೆರಕೆ ಕುರಿತು ದೂರು ದಾಖಲಾಗುತ್ತಿದೆ. ಈ ಹಿನ್ನೆಲೆ ರಾಜ್ಯಾದ್ಯಂತ ಮಸಾಲೆ ಪೌಡರ್, ಅರಿಶಿಣ ಪುಡಿ ಟೆಸ್ಟ್‌ಗೆ ಸರ್ಕಾರ ಆದೇಶಿಸಿದೆ. ಅರಿಶಿಣ ಪುಡಿ ಮತ್ತು ಬೇರುಗಳಲ್ಲಿ ಸೀಸದ ಅಂಶ ಕಲಬೆರಕೆ ಮಾಡುತ್ತಿದ್ದಾರೆ ಎಂದು ಆಹಾರ ಸುರಕ್ಷತೆ ಮತ್ತು ಔಷಧಿ ನಿಯಂತ್ರಣ ಇಲಾಖೆಗೆ ದೂರು ದಾಖಲಾಗಿದೆ. ಅರಿಶಿಣಪುಡಿ ಮತ್ತು

ಮಸಾಲೆ ಪೌಡರ್‌ಗಳಲ್ಲೂ ರಾಸಾಯನಿಕ ಅಂಶ ಇರುವ ದೂರು Read More »

ಸಹೋದರಿ ಮೃತಪಟ್ಟಿರುವುದನ್ನು ಸಾಬೀತುಪಡಿಸಲು ಅಸ್ಥಿಪಂಜರವನ್ನೇ ಬ್ಯಾಂಕಿಗೆ ತಂದ ವ್ಯಕ್ತಿ!

ಉರಿಬಿಸಿಲಿನಲ್ಲಿ ಅಸ್ಥಿಪಂಜರವನ್ನು ಹೊತ್ತುಕೊಂಡು 3 ಕಿ.ಮೀ. ನಡೆದ ಆದಿವಾಸಿ ಜನಾಂಗದ ವ್ಯಕ್ತಿ ಭುವನೇಶ್ವರ: ಸಹೋದರಿ ಮೃತಪಟ್ಟಿರುವುದನ್ನು ಸಾಬೀತುಪಡಿಸಲು ಆಕೆಯ ಅಸ್ಥಿಪಂಜರವನ್ನೇ ವ್ಯಕ್ತಿಯೊಬ್ಬರು ಉರಿ ಬಿಸಿಲಿನಲ್ಲಿ 3 ಕಿಲೋಮೀಟರ್‌ ದೂರ ಹೊತ್ತುಕೊಂಡು ಬ್ಯಾಂಕಿಗೆ ತಂದ ವಿಲಕ್ಷಣ ಘಟನೆಯೊಂದು ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ ಸಂಭವಿಸಿದೆ. ಕಿಯೋಂಜಾರ್ ಜಿಲ್ಲೆಯ ಡಯಾನಾಲಿ ಗ್ರಾಮದ ಜಿತು ಮುಂಡಾ ಎಂಬವರ ಸಹೋದರಿ ಕಾಕ್ರಾ ಮುಂಡಾ ಎರಡು ತಿಂಗಳ ಹಿಂದೆ ನಿಧನರಾಗಿದ್ದರು. ಕಾಕ್ರಾ ಅವರ ಪತಿ ಮತ್ತು ಮಗು ಮೊದಲೇ ಮೃತಪಟ್ಟಿದ್ದರಿಂದ ಜಿತು ಅವರೇ ಬದುಕುಳಿದರುವ ಏಕೈಕ

ಸಹೋದರಿ ಮೃತಪಟ್ಟಿರುವುದನ್ನು ಸಾಬೀತುಪಡಿಸಲು ಅಸ್ಥಿಪಂಜರವನ್ನೇ ಬ್ಯಾಂಕಿಗೆ ತಂದ ವ್ಯಕ್ತಿ! Read More »

ಕಡಬ: ಕುಮಾರಧಾರಾ ನದಿಯಲ್ಲಿ ಮುಳುಗಿ ಯುವಕ ಸಾವು

ಸ್ನಾನಕ್ಕಾಗಿ ನದಿಗಿಳಿದು ನಾಪತ್ತೆಯಾಗಿದ್ದ ಯುವಕ ಕಡಬ: ಕುಮಾರಧಾರಾ ನದಿಗೆ ಸ್ನಾನಕ್ಕೆ ಇಳಿದಿದ್ದ ಯುವಕನೋರ್ವ ನೀರಿನ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಘಟನೆ ಸೋಮವಾರ ಸಂಜೆ ಸಂಭವಿಸಿದ್ದು, ಯುವಕ ಮೃತದೇಹ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಮೃತ ಯುವಕನನ್ನು ಮರ್ಧಾಳ ನಿವಾಸಿ ಮಂಜು ಎಂಬವರ ಪುತ್ರ ರಕ್ಷಿತ್ (26) ಎಂದು ಗುರುತಿಸಲಾಗಿದೆ. ರಕ್ಷಿತ್ ಸೋಮವಾರ ಸಂಜೆ ತನ್ನ ಸ್ನೇಹಿತರೊಂದಿಗೆ ಐತ್ತೂರು ಗ್ರಾಮದ ಅರಬ್ಬಿ ತೋಡು ಎಂಬಲ್ಲಿ ಸ್ನಾನಕ್ಕಾಗಿ ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಈಜಲು ತಿಳಿದಿದ್ದರೂ ನೀರಿನ ಸೆಳೆತಕ್ಕೆ ಸಿಲುಕಿದ

ಕಡಬ: ಕುಮಾರಧಾರಾ ನದಿಯಲ್ಲಿ ಮುಳುಗಿ ಯುವಕ ಸಾವು Read More »

ಬ್ರಹ್ಮರಕೂಟ್ಲು ಟೋಲ್‌ಗೇಟ್‌ ಮುಚ್ಚಲು ಆಗ್ರಹಿಸಿ ಇಂದು ಜನಾಂದೋಲನ ನಡಿಗೆ

ಬಿ.ಸಿ.ರೋಡ್‌ ನಾರಾಯಣಗುರು ವೃತ್ತದಿಂದ ಬ್ರಹ್ಮರಕೂಟ್ಲು ಟೋಲ್‌ಗೇಟ್‌ವರೆಗೆ ನಡಿಗೆ ಮಂಗಳೂರು: ಇಲ್ಲಿನ ಬ್ರಹ್ಮರಕೊಟ್ಲು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸವಾರರಿಗೆ ಕನಿಷ್ಠ ಮೂಲ ಸೌಕರ್ಯವನ್ನೂ ನೀಡದೆ 23 ವರ್ಷಗಳಿಂದ ಕಾನೂನುಬಾಹಿರವಾಗಿ ಸುಂಕ ವಸೂಲಿ ಮಾಡುತ್ತಿರುವ ಟೋಲ್‌ಗೇಟ್ ಮುಚ್ಚಲು ಆಗ್ರಹಿಸಿ ಇಂದು ಬೃಹತ್‌ ಜನಾಂದೋಲನ ನಡಿಗೆ ನಡೆಯಲಿದೆ. ಮಾಜಿ ಸಚಿವ ಹಾಗೂ ಟೋಲ್‌ಗೇಟ್ ತೆರವು ಹೋರಾಟ ಸಮಿತಿ ಗೌರವಾಧ್ಯಕ್ಷ ಬಿ.ರಮಾನಾಥ ರೈ ನೇತೃತ್ವದಲ್ಲಿ ಹೋರಾಟ ನಡೆಯಲಿದೆ. ಗುರುಪುರ ಬ್ಲಾಕ್‌ ಕಾಂಗ್ರೆಸ್‌ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಬಿ.ಸಿ.

ಬ್ರಹ್ಮರಕೂಟ್ಲು ಟೋಲ್‌ಗೇಟ್‌ ಮುಚ್ಚಲು ಆಗ್ರಹಿಸಿ ಇಂದು ಜನಾಂದೋಲನ ನಡಿಗೆ Read More »

error: Content is protected !!
Scroll to Top