ಬೆಂಗಳೂರಿನ ಬಾರ್ಟನ್ ಸೆಂಟರ್ ಕಚೇರಿಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ, ಸನ್ಮಾನ

ಬೆಂಗಳೂರು: ಬೆಂಗಳೂರಿನ ಎಂ.ಜಿ. ರಸ್ತೆಯ ಬಾರ್ಟನ್ ಸೆಂಟರ್ ಕಚೇರಿಗೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಭೇಟಿ ನೀಡಿದರು. ಶಾಸಕ ಅಶೋಕ್ ಕುಮಾರ್ ರೈ ಅವರನ್ನು ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ ಸ್ವಾಗತಿಸಿದ್ದು, ಈ ಸಂದರ್ಭ ಸುದೀರ್ಘ ಕಾಲ ಚರ್ಚೆ ನಡೆಸಿದರು. ತಮ್ಮ ಕಚೇರಿಗೆ ಆಗಮಿಸಿದ ಶಾಸಕರನ್ನು ಬಿ. ಗುಣರಂಜನ್ ಶೆಟ್ಟಿಯವರು ಶಾಲು ಹೊದಿಸಿ ಹಾರಾರ್ಪಣೆ ಮಾಡಿ ಗೌರವಿಸಿದರು. ಈ ಸಂದರ್ಭದಲ್ಲಿ ತುಳುಕೂಟ ಬೆಂಗಳೂರು ಅಧ್ಯಕ್ಷರಾದ ಸುಂದರ್ ರಾಜ್, ಅಕ್ಷಯ್ ರೈ ದಂಬೆಕಾನ, ಮುರಳೀಧರ ರೈ ಮಠಂತಬೆಟ್ಟು, ನವೀನ್ […]

ಬೆಂಗಳೂರಿನ ಬಾರ್ಟನ್ ಸೆಂಟರ್ ಕಚೇರಿಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ, ಸನ್ಮಾನ Read More »

ಚೈತ್ರಾ ಕುಂದಾಪುರ ಆರೋಗ್ಯದ ಬಗ್ಗೆ ಹೇಳಿಕೆ ನೀಡಿದ ಡಾ. ಅಸೀಮಾ ಬಾನು

ಬೆಂಗಳೂರು: ವಂಚನೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ಚೈತ್ರಾ ಕುಂದಾಪುರ ಅವರು ಸಿಸಿಬಿ ಪೊಲೀಸರ ವಿಚಾರಣೆ ಎದುರಿಸುತ್ತಿದ್ದಾಗಲೇ ಬಾಯಲ್ಲಿ ನೊರೆ ಬಂದು ಕುಸಿದು ಬಿದ್ದಿದ್ದರು. ಹೀಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚೈತ್ರಾ ಅವರಿಗೆ ಫಿಡ್ಸ್ ಇಲ್ಲ ಎಂದು ವೈದ್ಯರು ಹೇಳಿದ್ದಾರೆ. ಚೈತ್ರಾ ಕುಂದಾಪುರ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಆಸ್ಪತ್ರೆ ವೈದ್ಯೆ ಡಾ. ಅಸೀಮಾ ಬಾನು ಅವರು, ಚೈತ್ರಾ ಕುಂದಾಪುರ ಆರೋಗ್ಯ ಸ್ಥಿರವಾಗಿದೆ. ಚೈತ್ರಾ ಕುಂದಾಪುರ ಸಿಟಿ ಸ್ಕ್ಯಾನ್, ಇಸಿಜಿ ರಿಪೋರ್ಟ್ ನಾರ್ಮಲ್ ಇದೆ. ಚೈತ್ರಾ ಕುಂದಾಪುರಗೆ

ಚೈತ್ರಾ ಕುಂದಾಪುರ ಆರೋಗ್ಯದ ಬಗ್ಗೆ ಹೇಳಿಕೆ ನೀಡಿದ ಡಾ. ಅಸೀಮಾ ಬಾನು Read More »

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟದ ಸೂತ್ರಧಾರ ಅರಾಫತ್ ಆಲಿ ದೆಹಲಿಯಲ್ಲಿ ಅರೆಸ್ಟ್‌

ನವದೆಹಲಿ: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಸಂಚು ರೂಪಿಸಿದ್ದ ಐಸಿಸ್ ಉಗ್ರ ಸಂಘಟನೆಯ ಸಂಚುಕೋರ, ಕರ್ನಾಟಕದ ಶಿವಮೊಗ್ಗ ಮೂಲದ ಅರಾಫತ್ ಅಲಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸಿದೆ. ನೈರೋಬಿಯಾದಿಂದ ದೆಹಲಿಗೆ ವಾಪಾಸ್ ಆಗುತ್ತಿದ್ದಾಗ ಎನ್​ಐಎ ಬಲೆಗೆ ಬಿದ್ದಿದ್ದಾನೆ. ಈತ ನೇರವಾಗಿ ಎಲ್ಲಿಯೂ ಉಗ್ರ ಚಟುವಟಿಕೆಯಲ್ಲಿ ಭಾಗಿಯಾಗದಿದ್ದರೂ, ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟದ , ಶಿವಮೊಗ್ಗ ಭಯೋತ್ಪಾದನೆ ಸಂಚು ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದಾನೆ. ಅಲ್ಲದೇ ಮಂಗಳೂರಿನ ಕದ್ರಿ ಮಂಜುನಾಥ ದೇಗುಲದ ಬಳಿ ಸ್ಪೋಟ ನಡೆಸುವ ಸಲುವಾಗಿ ಕುಕ್ಕರ್

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟದ ಸೂತ್ರಧಾರ ಅರಾಫತ್ ಆಲಿ ದೆಹಲಿಯಲ್ಲಿ ಅರೆಸ್ಟ್‌ Read More »

ನಿಲ್ಲಿಸಿದ್ದ ಕಾರಿನಲ್ಲಿ ಬೆಂಕಿ | ಹೆಚ್ಚಿನ ಅನಾಹುತ ತಪ್ಪಿಸಿದ ಸ್ಥಳೀಯರು

ಸುಬ್ರಹ್ಮಣ್ಯ: ನಿಲ್ಲಿಸಿದ್ದ ಕಾರಿನಲ್ಲಿ ಹಠಾತ್ತನೆ ಬೆಂಕಿ ಹತ್ತಿಕೊಂಡ ಘಟನೆ ಶುಕ್ರವಾರ ಬೆಳಿಗ್ಗೆ ಕುಕ್ಕೆ ಸುಬ್ರಹ್ಮಣ್ಯದ ಆದಿಸುಬ್ರಹ್ಮಣ್ಯ ಸರ್ಪಸಂಸ್ಕಾರ ಯಾಗ ಶಾಲಾ ಬಳಿ ನಡೆದಿದೆ. ಬೆಂಗಳೂರಿನಿಂದ ಕಾರಿನಲ್ಲಿ ಬಂದಿದ್ದ ಯಾತ್ರಾರ್ಥಿ ಕುಟುಂಬವೊಂದು ಆದಿಸುಬ್ರಹ್ಮಣ್ಯ ಸರ್ಪಸಂಸ್ಕಾರ ಯಾಗ ಶಾಲಾ ಬಳಿ ಕಾರು ನಿಲ್ಲಿಸಿ ದೇವರ ದರ್ಶನಕ್ಕೆ ತೆರಳಿತ್ತು. ಈ ಸಂದರ್ಭ ನಿಲ್ಲಿಸಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಕಂಡ ಸುಬ್ರಹ್ಮಣ್ಯದ ಗಣೇಶ್ ಭಟ್‍ ಹಾಗೂ ಮತ್ತಿತರರು ಈ ಕಾರಿನ ಹಿಂದೆ ಸಾಲು ಸಾಲಾಗಿ ನಿಂತಿದ್ದ ಕಾರಿಗೆ ಬೆಂಕಿ ತಗಲದಂತೆ ಹೆಚ್ಚಿನ

ನಿಲ್ಲಿಸಿದ್ದ ಕಾರಿನಲ್ಲಿ ಬೆಂಕಿ | ಹೆಚ್ಚಿನ ಅನಾಹುತ ತಪ್ಪಿಸಿದ ಸ್ಥಳೀಯರು Read More »

ಕಾಡಾನೆಗಳ ದಾಳಿಗೆ ಅಪಾರ ಕೃಷಿ ನಾಶ

ಬೆಳ್ತಂಗಡಿ: ಚಾರ್ಮಾಡಿಯ ಮುಗುಳಿದಡ್ಕ ಸೇಸಪ್ಪ ಗೌಡ ಎಂಬವರ ತೋಟಕ್ಕೆ ಕಾಡಾನೆಗಳು ದಾಳಿ ಮಾಡಿ ಅಡಿಕೆ ಹಾಗೂ ತೆಂಗಿನ ಮರಕ್ಕೆ ಹಾನಿ ಮಾಡಿದೆ. ಇತ್ತೀಚಿನ ದಿನಗಳಲ್ಲಿ ಚಾರ್ಮಾಡಿ ಪರಿಸರದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಕಳೆದ ಎರಡು ದಿನಗಳ ಹಿಂದೆ ತೋಟಕ್ಕೆ ದಾಳಿ ಮಾಡಿದೆ. ಕಾಡಾನೆಗಳು ಪರಿಸರದ ಅಲ್ಲಲ್ಲಿ ದಾಳಿ ನಡೆಸುತ್ತಿದ್ದು, ಒಂದೇ ಹಿಂಡಿನಿoದ ದಾಳಿ ನಡೆಯುತ್ತಿದೆಯೇ, ಅಥವಾ ಇನ್ನಷ್ಟು ಕಾಡಾನೆಗಳು ಈ ಭಾಗದಲ್ಲಿ ಸಂಚರಿಸುತ್ತಿವೆಯೇ ಎಂಬ ಶಂಕೆ ವ್ಯಕ್ತವಾಗಿದೆ.

ಕಾಡಾನೆಗಳ ದಾಳಿಗೆ ಅಪಾರ ಕೃಷಿ ನಾಶ Read More »

ರೈತರ ಅನುಕೂಲಕ್ಕಾಗಿ ಬೆಳೆ ಸಮೀಕ್ಷೆ ಅವಧಿ ವಿಸ್ತರಿಸಿ | ಮುಖ್ಯಮಂತ್ರಿಗಳಿಗೆ ಮನವಿ ನೀಡಿದ ಮಾಜಿ ಶಾಸಕ ಸಂಜೀವ ಮಠಂದೂರು

ಪುತ್ತೂರು: ರೈತರ ಅನುಕೂಲಕ್ಕಾಗಿ ಬೆಳೆ ಸಮೀಕ್ಷೆ ಅವಧಿ ವಿಸ್ತರಿಸುವಂತೆ ಮಾಜಿ ಶಾಸಕ ಸಂಜೀವ ಮಠಂದೂರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ. ಕಳೆದ ಐದು ವರ್ಷಗಳ ಹಿಂದೆ ಆರಂಭ ಮಾಡಿದ ಮುಂಗಾರು ಹಾಗೂ ಹಿಂಗಾರು ಬೆಳೆ ಸಮೀಕ್ಷೆಗೆ ಸರಕಾರ ನ. 15 ಕೊನೆಯ ದಿನಾಂಕ ನಿಗದಿ ಮಾಡಿದೆ. ಈ ಬಾರಿ ಮುಂಗಾರು ತಡವಾಗಿದ್ದು ಹಾಗೂ ಮಳೆ ಕೊರತೆಯಾಗಿದ್ದು ರೈತರು ಕೃಷಿ ಕಾರ್ಯವನ್ನು ತಡವಾಗಿ ಆರಂಭ ಮಾಡುವಂತೆ ಆಗಿದೆ. ರೈತರಿಗೆ ಹವಾಮಾನ ವೈಪರೀತ್ಯದಿಂದ ಅನಾನುಕೂಲ ಆಗಿದೆ. ಕಳೆದ ಮೂರು

ರೈತರ ಅನುಕೂಲಕ್ಕಾಗಿ ಬೆಳೆ ಸಮೀಕ್ಷೆ ಅವಧಿ ವಿಸ್ತರಿಸಿ | ಮುಖ್ಯಮಂತ್ರಿಗಳಿಗೆ ಮನವಿ ನೀಡಿದ ಮಾಜಿ ಶಾಸಕ ಸಂಜೀವ ಮಠಂದೂರು Read More »

ದ.ಕ. ಜಿಲ್ಲೆಗೆ ಆಗಮಿಸಿದ ಬಿಜೆಪಿ ರಾಜ್ಯ ಪ್ರಮುಖರು | ಮುಂದಿನ ಚುನಾವಣೆ ಕಾರ್ಯಚಟುವಟಿಕೆ ಹಿನ್ನೆಲೆಯಲ್ಲಿ ಸಭೆ

ಮಂಗಳೂರು: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಂದಿನ ಕಾರ್ಯ ಚಟುವಟಿಕೆಗಳ ಕುರಿತು ಚರ್ಚಿಸುವ ನಿಟ್ಟಿನಲ್ಲಿ ರಾಜ್ಯದ ತಂಡ ಶುಕ್ರವಾರ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿ ಜಿಲ್ಲೆಯ ಪ್ರಮುಖರ ಸಮ್ಮುಖದಲ್ಲಿ ಸಭೆ ನಡೆಸಿತು. ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ದ.ಕ. ಜಿಲ್ಲಾ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಸಭಾ ಮಾಜಿ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ, ಮಾಜಿ ಸಚಿವ ಸುನಿಲ್ ಕುಮಾರ್, ವಿಭಾಗ ಪ್ರಭಾರಿ

ದ.ಕ. ಜಿಲ್ಲೆಗೆ ಆಗಮಿಸಿದ ಬಿಜೆಪಿ ರಾಜ್ಯ ಪ್ರಮುಖರು | ಮುಂದಿನ ಚುನಾವಣೆ ಕಾರ್ಯಚಟುವಟಿಕೆ ಹಿನ್ನೆಲೆಯಲ್ಲಿ ಸಭೆ Read More »

ಮುರಳ್ಯ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

ಸುಳ್ಯ: ಮುರುಳ್ಯ ಅಲೆಕ್ಕಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ 38ನೇ ವಾರ್ಷಿಕ ಸಾಮಾನ್ಯ ಸಭೆ ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ಶಾಸಕಿ ಭಾಗೀರಥಿ ಮುರುಳ್ಯ ಸಭಾ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭ ಶಾಸಕರನ್ನು ಸನ್ಮಾನಿಸಿ ಗೌರವಿಸಲಾಯಿತು. ವೇದಿಕೆಯಲ್ಲಿ ಅಶೋಕ್ ಕುಮಾರ್ ರೈ, ನಿತ್ಯಾನಂದ ಮುಂಡೋಡಿ, ಸತೀಶ್ ರಾವ್, ಹರೀಶ್, ಡಿ.ಟಿ. ಜನಾರ್ದನ, ಬಾಲಕೃಷ್ಣ ಗೌಡ ಹಾಗೂ ಮುರುಳ್ಯ ಹಾಲು ಉತ್ಪಾದಕರ ಸಹಕಾರಿ ಸಂಘದ ಆಡಳಿತ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಮುರಳ್ಯ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ Read More »

ಮಂಗಳೂರು – ಸುಬ್ರಹ್ಮಣ್ಯ ನಡುವೆ ಬೆಳಿಗ್ಗೆ, ಸಂಜೆ ರೈಲು ಪ್ರಾರಂಭಿಸಿ | ಸಂಸದರನ್ನು ಒತ್ತಾಯಿಸಿದ ಮಾಜಿ ಶಾಸಕ ಸಂಜೀವ ಮಠಂದೂರು

ಪುತ್ತೂರು: ಬೆಳಿಗ್ಗೆ ಹಾಗೂ ಸಂಜೆ ಮಂಗಳೂರಿನಿಂದ ಸುಬ್ರಹ್ಮಣ್ಯಕ್ಕೆ ರೈಲು ಸಂಚಾರ ಒದಗಿಸಲು ಕ್ರಮ ಕೈಗೊಳ್ಳುವಂತೆ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಮನವಿ ಮಾಡಿದ್ದಾರೆ. 1979-80ರಲ್ಲಿ ಹಾಸನ ಮಂಗಳೂರು ರೈಲ್ವೇ ಲೈನ್ ಪ್ರಾರಂಭವಾದ ನಂತರ ಪ್ರತಿ ದಿನ ರಾತ್ರಿ ಬೆಂಗಳೂರಿನಿಂದ ಹೊರಟ ಎಕ್ಸ್ ಪ್ರೆಸ್ ರೈಲು ಸುಬ್ರಹ್ಮಣ್ಯಕ್ಕೆ ಬೆಳಿಗ್ಗೆ ಗಂಟೆ 6.30ರ ಸುಮಾರಿಗೆ ತಲುಪಿ, ನಂತರ ಮಂಗಳೂರು ಕಡೆ ಹೋಗುವಾಗ ಎಲ್ಲಾ ಗ್ರಾಮೀಣ ಸ್ಟೇಷನ್‌ಗಳಾದ ಬಜಕರೆ, ಕೋಡಿಂಬಾಳ, ಎಡಮಂಗಲ, ಕಾಣಿಯೂರು,

ಮಂಗಳೂರು – ಸುಬ್ರಹ್ಮಣ್ಯ ನಡುವೆ ಬೆಳಿಗ್ಗೆ, ಸಂಜೆ ರೈಲು ಪ್ರಾರಂಭಿಸಿ | ಸಂಸದರನ್ನು ಒತ್ತಾಯಿಸಿದ ಮಾಜಿ ಶಾಸಕ ಸಂಜೀವ ಮಠಂದೂರು Read More »

ಸಂವಿಧಾನ ದಿನಾಚರಣೆಯ ಮೂಲಕ ಯುವ ಜನರಿಗೆ ಅರಿವು ಮೂಡಿಸುವ ಕಾರ್ಯವಾಗಿದೆ | ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಡಾ.ಗಿರೀಶ್ ನಂದನ್

ಪುತ್ತೂರು: ತಾಲೂಕು ಆಡಳಿತದ ವತಿಯಿಂದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಶುಕ್ರವಾರ ಆಚರಿಸಲಾಯಿತು. ಸಹಾಯಕ ಆಯುಕ್ತ ಗಿರೀಶ್ ನಂದನ್‌ ಅವರು ಭಾರತ ಸಂವಿಧಾನ ಪೀಠಿಕೆಯ ಜಾಗತಿಕ ವಾಚನ ಬೋಧಿಸಿ ಮಾತನಾಡಿ, ಭಾರತದ ಸಂವಿಧಾನ ವಿಶ್ವದ ಅತೀ ದೊಡ್ಡ ಹಾಗೂ ಪ್ರಾಮುಖ್ಯತೆ ಪಡೆದ ಸಂವಿಧಾನವಾಗಿದ್ದು, ಸಂವಿಧಾನ ದಿನಾಚರಣೆಯ ಮೂಲಕ ಯುವ ಜನತೆಗೆ ಅರಿವು ಮೂಡಿಸುವ ಕಾರ್ಯಕ್ರಮವಾಗಿದೆ. ನಮ್ಮ ಸಂವಿಧಾನದಲ್ಲಿ ಸಮಾನತೆಯ ಪಾಠವಿದೆ. ಮೂಲಭೂತ ಹಕ್ಕುಗಳು ಜೊತೆಗೆ ಕರ್ತವ್ಯಗಳನ್ನು ತಿಳಿಸಲಾಗಿದೆ. ಸಂವಿಧಾನದಲ್ಲಿ ಸೂಚಿಸಿದ, ಮೂಲಭೂತವಾಗಿರುವ ಕರ್ತವ್ಯಗಳನ್ನು ನಿಭಾಯಿಸಿದಾಗ ಹಕ್ಕುಗಳನ್ನು ಪಡೆಯಲು ಅರ್ಹರಾಗಿರುತ್ತಾರೆ.

ಸಂವಿಧಾನ ದಿನಾಚರಣೆಯ ಮೂಲಕ ಯುವ ಜನರಿಗೆ ಅರಿವು ಮೂಡಿಸುವ ಕಾರ್ಯವಾಗಿದೆ | ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಡಾ.ಗಿರೀಶ್ ನಂದನ್ Read More »

error: Content is protected !!
Scroll to Top