ತಿಂಗಳ ಹಿಂದೆ ವಿವಾಹವಾಗಿದ್ದ ಪೊಲೀಸ್ ಕಾನ್’ಸ್ಟೇಬಲ್ ನೇಣಿಗೆ ಶರಣು!!

ಮಂಗಳೂರು: ಮಂಗಳೂರು ನಗರ ಪೊಲೀಸ್ ಸೇವೆಯಲ್ಲಿದ್ದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್‌ಟೇಬಲ್ ಓರ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸವದತ್ತಿಯ ಮಹೇಶ್ (31) ಆತ್ಮಹತ್ಯೆ ಮಾಡಿಕೊಂಡವರು. ನಗರದ ದಕ್ಷಿಣ ಸಂಚಾರಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಕೌಟುಂಬಿಕ ಕಲಹವೇ ಮಹೇಶ್ ಆತ್ಮಹತ್ಯೆಗೆ ಕಾರಣವೆಂದು ಶಂಕಿಸಲಾಗಿದೆ. ಒಂದೂವರೆ ತಿಂಗಳ ಹಿಂದೆಯಷ್ಟೇ ಮಹೇಶ್ ವಿವಾಹವಾಗಿದ್ದರು ಎನ್ನಲಾಗಿದ್ದು, ಕಪಿತಾನಿಯೋ ಬಳಿಯ ಮನೆಯೊಂದರಲ್ಲಿ ನೇಣಿಗೆ ಶರಣಾಗಿದ್ದಾರೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಿಂಗಳ ಹಿಂದೆ ವಿವಾಹವಾಗಿದ್ದ ಪೊಲೀಸ್ ಕಾನ್’ಸ್ಟೇಬಲ್ ನೇಣಿಗೆ ಶರಣು!! Read More »

ಅಜ್ಞಾತ ಸ್ಥಳದಿಂದಲೇ ನಿರೀಕ್ಷಣಾ ಜಾಮೀನಿಗೆ ಅರ್ಜಿ ಹಾಕಿದ ಹಾಲಶ್ರೀ | ಚೈತ್ರಾ ಕುಂದಾಪುರ ಬಂಧನದ ಬಳಿಕ ನಾಪತ್ತೆಯಾಗಿರುವ ಶ್ರೀ | ಅರ್ಜಿ ತಿರಸ್ಕೃತಗೊಂಡರೆ ಸ್ವಾಮೀಜಿಯ ಮುಂದಿನ ಹಾದಿಯೇನು? ಸಿಸಿಬಿ ಕಾರ್ಯವೈಖರಿ ಹೇಗಿರಲಿದೆ?

ಬೆಂಗಳೂರು: ಚೈತ್ರಾ ಕುಂದಾಪುರ ಗ್ಯಾಂಗಿನ ವಂಚನೆ ಪ್ರಕರಣದ ಮೂರನೇ ಆರೋಪಿ ಹಾಲಶ್ರೀ ಸ್ವಾಮೀಜಿ ಸಿಸಿಬಿ ಬಂಧನದಿಂದ ತಪ್ಪಿಸಿಕೊಳ್ಳಲು ಜಾಮೀನಿಗೆ ಅರ್ಜಿ ಹಾಕಿದ್ದಾರೆ. ವಿಜಯ ನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಹಿರೇಹಡಗಲಿ ಹಾಲು ಮಠ ಸಂಸ್ಥಾನದ ಹಾಲಿ ಸ್ವಾಮೀಜಿಗಳಾಗಿರುವ ಅಭಿನವ ಹಾಲಶ್ರೀ ಸ್ವಾಮೀಜಿ ಅವರು ನಿರೀಕ್ಷಣಾ ಜಾಮೀನು ಕೋರಿ 57ನೇ ಸಿಟಿ ಸಿವಿಲ್‌​​ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಹಾಲ ಶ್ರೀಗಳು ಈ ಪ್ರಕರಣದಲ್ಲಿ ಅವರ ಹೆಸರು ಕೇಳಿಬಂದ ಬೆನ್ನಲ್ಲೇ ನಾಪತ್ತೆಯಾಗಿದ್ದು, ಅಜ್ಞಾತ ಸ್ಥಳದಲ್ಲಿ ಅಡಗಿ ಕುಳಿತಿದ್ದಾರೆ ಎನ್ನಲಾಗಿದೆ.

ಅಜ್ಞಾತ ಸ್ಥಳದಿಂದಲೇ ನಿರೀಕ್ಷಣಾ ಜಾಮೀನಿಗೆ ಅರ್ಜಿ ಹಾಕಿದ ಹಾಲಶ್ರೀ | ಚೈತ್ರಾ ಕುಂದಾಪುರ ಬಂಧನದ ಬಳಿಕ ನಾಪತ್ತೆಯಾಗಿರುವ ಶ್ರೀ | ಅರ್ಜಿ ತಿರಸ್ಕೃತಗೊಂಡರೆ ಸ್ವಾಮೀಜಿಯ ಮುಂದಿನ ಹಾದಿಯೇನು? ಸಿಸಿಬಿ ಕಾರ್ಯವೈಖರಿ ಹೇಗಿರಲಿದೆ? Read More »

ಮಂಗಳೂರು ವಿವಿ ಮಂಗಳ ಸಭಾಂಗಣದ ಗಣೇಶ ಚತುರ್ಥಿ ಗೊಂದಲಕ್ಕೆ ಮಂಗಳ!

ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ಗಣೇಶೋತ್ಸವ ವಿವಾದ ಸುಖಾಂತ್ಯ ಕಂಡಿದೆ. ವಿವಿಯ ಮಂಗಳ ಸಭಾಂಗಣದಲ್ಲಿ ಈ ಬಾರಿಯ ಗಣೇಶ ಚತುರ್ಥಿಯನ್ನು ನಡೆಸಲು ಆಡಳಿತ ಮಂಡಳಿ ತೀರ್ಮಾನಿಸಿದೆ ಎಂದು ಕುಲಪತಿಗಳಾದ ಪ್ರೊ. ಜಯರಾಜ್ ಅಮಿನ್ ಹೇಳಿಕೆ ನೀಡಿದ್ದಾರೆ.ಈ ಹಿಂದಿನ ವರ್ಷಗಳಲ್ಲಿ ವಿಶ್ವವಿದ್ಯಾಲಯದ ಪುರುಷರ ಹಾಸ್ಟೆಲ್​ನಲ್ಲಿ ಗಣೇಶೋತ್ಸವವವನ್ನು ಆಚರಣೆ ಮಾಡಲಾಗುತ್ತಿತ್ತು. ಈ ಬಾರಿ ಮಂಗಳಾ ಸಭಾಂಗಣದಲ್ಲಿ ಗಣೇಶ ಚತುರ್ಥಿ ಆಚರಣೆ ಮಾಡಲು ಯೋಜನೆ ರೂಪಿಸಿದಾಗ ಇದಕ್ಕೆ ವಿರೋಧ ವ್ಯಕ್ತವಾಗಿ ಅವಕಾಶ ನೀಡಲ್ಲ ಎಂದು ಕುಲಪತಿಗಳು ಹೇಳಿದ್ದರು.ಇದು ತೀವ್ರ ಆಕ್ರೋಶಕ್ಕೆ ಮತ್ತು ಅಸಮಾಧಾನಕ್ಕೆ

ಮಂಗಳೂರು ವಿವಿ ಮಂಗಳ ಸಭಾಂಗಣದ ಗಣೇಶ ಚತುರ್ಥಿ ಗೊಂದಲಕ್ಕೆ ಮಂಗಳ! Read More »

ರಾಷ್ಟ್ರಪ್ರೇಮ, ಸೇವಾಭಾವನೆಯನ್ನು ಬೆಳೆಸುವುದು ಎನ್.ಎಸ್.ಎಸ್. | ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಬಿರದ ಸಮಾರೋಪದಲ್ಲಿ ವಿಜಯನಾರಾಯಣ ಕೆ.ಎಂ.

ಪುತ್ತೂರು: ಕಹಿ ಅನುಭವಗಳನ್ನು ಮರೆತು, ಸಿಹಿ ಅನುಭವಗಳನ್ನು ಮೆಲುಕು ಹಾಕುತ್ತಾ ಸಾಗುವುದೇ ಜೀವನ. ಅಂತಹ ಸಿಹಿ-ಕಹಿ ಅನುಭವ‌ಗಳ ಸಮ್ಮಿಲನವೇ ಎನ್‌.ಎಸ್‌.ಎಸ್‌ನ ವಾರ್ಷಿಕ ವಿಶೇಷ ಶಿಬಿರ ಎಂದು ನ್ಯಾಯವಾದಿ ಅಶೋಕ್ ಅರಿಗ ಬಾರಿಕೆ ಹೇಳಿದರು. ಅವರು ವಿವೇಕಾನಂದ ಕಾನೂನು ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಸಮಾರೋಪ ಭಾಷಣ ಮಾಡಿದರು. ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಗಳಿಂದ ಗ್ರಾಮ ಜಾಗೃತಿ ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಸಾಮಾಜಿಕ ಜವಾಬ್ದಾರಿಯನ್ನು ಅರಿಯುವುದರ ಜೊತೆಗೆ ಗ್ರಾಮದ ಜನರಲ್ಲಿ

ರಾಷ್ಟ್ರಪ್ರೇಮ, ಸೇವಾಭಾವನೆಯನ್ನು ಬೆಳೆಸುವುದು ಎನ್.ಎಸ್.ಎಸ್. | ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಬಿರದ ಸಮಾರೋಪದಲ್ಲಿ ವಿಜಯನಾರಾಯಣ ಕೆ.ಎಂ. Read More »

ಮೂರ್ಛೆ ಹೋದ ಚೈತ್ರಾ, ಆಸ್ಪತ್ರೆಯ ಐಸಿಯುಗೆ ಶಿಫ್ಟ್!

ಬೆಂಗಳೂರು: ಸಿಸಿಬಿ ಪೊಲೀಸರ ವಶದಲ್ಲಿರುವ ಚೈತ್ರಾ ಕುಂದಾಪುರ ಅಸ್ವಸ್ಥಗೊಂಡಿದ್ದು, ಸದ್ಯ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಉದ್ಯಮಿ ಗೋವಿಂದ ಪೂಜಾರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಎರಡು ದಿನಗಳ ಹಿಂದೆ ಬಂಧನಕ್ಕೊಳಗಾಗಿದ್ದರು. ವಿಚಾರಣೆ ಎದುರಿಸುತ್ತಿರುವ ಚೈತ್ರಾ ಕುಂದಾಪುರ ಅವರನ್ನು ಮಹಿಳಾ ಸಾಂತ್ವನ ಕೇಂದ್ರದಿಂದ ಸಿಸಿಬಿ ಕಚೇರಿ ಬಳಿ ಕರೆ ತರಲಾಗಿತ್ತು. ಆದರೆ ಸಿಸಿಬಿ ಕಚೇರಿ ಬಳಿ ತಲುಪುತ್ತಿದ್ದಂತೆಯೇ ಚೈತ್ರಾ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಈ ವೇಳೆ ಅವರ ಬಾಯಿಂದ ನೊರೆಯೂ ಬಂದಿದ್ದು, ಅವರನ್ನು ಕೂಡಲೇ

ಮೂರ್ಛೆ ಹೋದ ಚೈತ್ರಾ, ಆಸ್ಪತ್ರೆಯ ಐಸಿಯುಗೆ ಶಿಫ್ಟ್! Read More »

ಕ್ರೀಡಾ ಮನೋಭಾವ ವ್ಯಕ್ತಿಯ ವ್ಯಕ್ತಿತ್ವ ಅರಳಿಸುತ್ತದೆ | ಜಿಲ್ಲಾ ಪ್ರೌಢ ವಿಭಾಗದ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಡಾ. ಕೃಷ್ಣ ಭಟ್ ಕೊಂಕೋಡಿ | ಬಾಲಕರ ವಿಭಾಗದಲ್ಲಿ ಶ್ರೀ ರಾಮಕುಂಜೆಶ್ವರ ಪ್ರೌಢಶಾಲೆ ಪ್ರಥಮ, ಬಾಲಕಿಯರ ವಿಭಾಗದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ಪ್ರಥಮ

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಛೇರಿ, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಹಾಗೂ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಸಹಯೋಗದಲ್ಲಿ ಪ್ರೌಢಶಾಲಾ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ  ಒಳಾಂಗಣ ಕ್ರೀಡಾಂಗಣದಲ್ಲಿ ಜರುಗಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೃಷ್ಣ ಭಟ್ ಕೊಂಕೋಡಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಅನ್ಯಾನ್ಯ ಕಾರ್ಯಕ್ರಮಗಳಿಗೆ ವಿವೇಕಾನಂದ ವಿದ್ಯಾಸಂಸ್ಥೆಗಳ ಸಹಾಯ ಸದಾ ಇದ್ದು ಇಂದು ನಡೆಯುತ್ತಿರುವ ಪಂದ್ಯಾಟವು

ಕ್ರೀಡಾ ಮನೋಭಾವ ವ್ಯಕ್ತಿಯ ವ್ಯಕ್ತಿತ್ವ ಅರಳಿಸುತ್ತದೆ | ಜಿಲ್ಲಾ ಪ್ರೌಢ ವಿಭಾಗದ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಡಾ. ಕೃಷ್ಣ ಭಟ್ ಕೊಂಕೋಡಿ | ಬಾಲಕರ ವಿಭಾಗದಲ್ಲಿ ಶ್ರೀ ರಾಮಕುಂಜೆಶ್ವರ ಪ್ರೌಢಶಾಲೆ ಪ್ರಥಮ, ಬಾಲಕಿಯರ ವಿಭಾಗದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ಪ್ರಥಮ Read More »

ಅಕ್ರಮ ಸಕ್ರಮಕ್ಕೆ ಪಡೆದಿದ್ದ ಲಂಚದ ಹಣ ವಾಪಾಸ್ | ಶಾಸಕರು ನೀಡಿದ ಗಡುವಿನೊಳಗೆ ಹಣ ವಾಪಸ್ ಮಾಡಿದ ಉಗ್ರಾಣಿ…!

ಪುತ್ತೂರು; ಅಕ್ರಮ ಸಕ್ರಮ ಕಡತವನ್ನು ವಿಲೇವಾರಿ ಮಾಡಲು ಮಹಿಳೆಯೊಬ್ಬರಿಂದ ಪಡೆದಿದ್ದ ಲಂಚದ ಹಣವನ್ನು ಉಗ್ರಾಣಿಯೊಬ್ಬರು ಅವರಿಗೆ ನೀಡಿದ ಗಡುವಿನೊಳಗೆ ಮರಳಿಸಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಅಷ್ಟಮಿ ಕಾರ್ಯಕ್ರಮದ ಪ್ರಯುಕ್ತ ಶಾಸಕರಾದ ಅಶೋಕ್ ರೈಯವರು ಕುಂಡಡ್ಕ ದೇವಸ್ಥಾನಕ್ಕೆ ಕಾರ್ಯಕ್ರಮಕ್ಕೆ ತೆರಳಿದ್ದರು. ಅಲ್ಲಿಗೆ ಬಂದಿದ್ದ ಕುಳ ಗ್ರಾಮದ ಮಹಿಳೆ ಚಂದ್ರಾವತಿ ಎಂಬವರು ಶಾಸಕರ ಬಳಿ ಬಂದು ನನ್ನ ಅಕ್ರಮ ಸಕ್ರಮ ಕಡತವನ್ನು ವಿಲೇವಾರಿ ಮಾಡಿಲ್ಲ. ನನಗೆ ಅಕ್ರಮ ಸಕ್ರಮ ಮಂಜೂರು ಮಾಡಿಲ್ಲ. ನಾನು ಉಗ್ರಾಣಿಗೆ 30 ಸಾವಿರ ರೂ.

ಅಕ್ರಮ ಸಕ್ರಮಕ್ಕೆ ಪಡೆದಿದ್ದ ಲಂಚದ ಹಣ ವಾಪಾಸ್ | ಶಾಸಕರು ನೀಡಿದ ಗಡುವಿನೊಳಗೆ ಹಣ ವಾಪಸ್ ಮಾಡಿದ ಉಗ್ರಾಣಿ…! Read More »

ಪುತ್ತೂರು ತಾಲೂಕು ಅಕ್ರಮ ಸಕ್ರಮ ಸಮಿತಿ ರಚನೆ | ಶಾಸಕ ಅಶೋಕ್ ರೈ ಅಧ್ಯಕ್ಷತೆಯ ಸಮಿತಿಯಲ್ಲಿ ಯಾರ್ಯಾರಿದ್ದಾರೆ?

ಪುತ್ತೂರು : ಸರ್ಕಾರದ ಮುಂದಿನ ಆದೇಶ ಬರುವವರೆಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯ ಸದಸ್ಯರನ್ನು ನೇಮಕ ಮಾಡಲಾಗಿದೆ.ಸಮಿತಿಯ ಅಧ್ಯಕ್ಷರಾಗಿ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ, ಸದಸ್ಯರಾಗಿ ಎಂ. ಮಹಮ್ಮದ್ ಬಡಗನ್ನೂರು, ರೇಖಾ ಆಳ್ವ, ಹಾಗೂ ರಾಮಣ್ಣ ಪಿಲಿಂಜ ನೇಮಕಗೊಂಡಿದ್ದಾರೆ.ಸಮಿತಿಯ ಸದಸ್ಯ ಕಾರ್ಯದರ್ಶಿಯಾಗಿ ಸಂಬಂಧಪಟ್ಟ ತಾಲೂಕಿನ ತಹಶೀಲ್ದಾರರನ್ನು ನೇಮಕ ಮಾಡುವಂತೆ ಆದೇಶದಲ್ಲಿ ತಿಳಿಸಲಾಗಿದೆ. ಹಾಗಾಗಿ ತಹಸೀಲ್ದಾರ್ ಅವರೇ ಸದಸ್ಯ ಕಾರ್ಯದರ್ಶಿ ಆಗಿರುವರು.

ಪುತ್ತೂರು ತಾಲೂಕು ಅಕ್ರಮ ಸಕ್ರಮ ಸಮಿತಿ ರಚನೆ | ಶಾಸಕ ಅಶೋಕ್ ರೈ ಅಧ್ಯಕ್ಷತೆಯ ಸಮಿತಿಯಲ್ಲಿ ಯಾರ್ಯಾರಿದ್ದಾರೆ? Read More »

ದೇವಸ್ಥಾನಗಳ ಫಾಸಲೆಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಶೀಘ್ರ ಬ್ರೇಕ್! | ಭಕ್ತರ ಭಾವನೆಗಳಿಗೆ ಗೌರವ ನೀಡಲು ರಾಜ್ಯ ಸರಕಾರ ನೀಡಿರುವ ಆದೇಶದ ವಿವರ ಇಲ್ಲಿದೆ…

ಬೆಂಗಳೂರು: ದೈವ ಭಕ್ತರ ಭಾವನೆಗಳನ್ನು ಗೌರವಿಸುವ ನಿಟ್ಟಿನಲ್ಲಿ ಮುಜರಾಯಿ ಇಲಾಖೆಗೊಳಪಟ್ಟ ದೇವಸ್ಥಾನಗಳ 100 ಮೀಟರ್ ವ್ಯಾಪ್ತಿಯಲ್ಲಿ ಗುಟ್ಕಾ, ಸಿಗರೇಟ್ ಸೇರಿದಂತೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡದಂತೆ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈ ಮೂಲಕ ಮುಜರಾಯಿ ಇಲಾಖೆಯ ಮಹತ್ವದ ನಿರ್ಣಯ ಇದಾಗಿದ್ದು, ಮನುಷ್ಯನಿಗೆ ಆಧ್ಯಾತ್ಮಿಕ ಅನುಭೂತಿ ನೀಡುವ ದೇವಾಲಯಗಳು ಸ್ವಚ್ಛತೆಯಿಂದ ಕೂಡಿರಬೇಕು ಎಂಬ ನಿರ್ಧಾರ ತಳೆದು ಈ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಶೀಘ್ರ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಬ್ರೇಕ್‍ ಬೀಳಲಿದೆ. ಮುಜರಾಯಿ ಇಲಾಖೆಯ ದೇವಾಲಯಗಳ ಸುತ್ತಮುತ್ತ 100

ದೇವಸ್ಥಾನಗಳ ಫಾಸಲೆಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಶೀಘ್ರ ಬ್ರೇಕ್! | ಭಕ್ತರ ಭಾವನೆಗಳಿಗೆ ಗೌರವ ನೀಡಲು ರಾಜ್ಯ ಸರಕಾರ ನೀಡಿರುವ ಆದೇಶದ ವಿವರ ಇಲ್ಲಿದೆ… Read More »

ಭೀಕರ ದುರಂತ: ಶಾಲಾ ಮಕ್ಕಳಿದ್ದ ದೋಣಿ ಮುಳುಗಡೆ! | 34 ಮಕ್ಕಳ ಪೈಕಿ ನೀರುಪಾಲಾದವರೆಷ್ಟು?

ಮುಜಾಫರ್‌ಪುರ: ಬಿಹಾರದ ಮುಜಾಫರ್‌ಪುರದಲ್ಲಿ ಗುರುವಾರ ಬೆಳಗ್ಗೆ ಶಾಲಾ ಮಕ್ಕಳಿದ್ದ ದೋಣಿ ಬಾಗಮತಿ ನದಿಯಲ್ಲಿ ಮುಳುಗಿದೆ. 18 ಮಕ್ಕಳು ನೀರುಪಾಲಾಗಿದ್ದಾರೆ ಎಂದು ಶಂಕಿಸಲಾಗಿದೆ. ದೋಣಿಯಲ್ಲಿ ಸುಮಾರು 34 ಮಕ್ಕಳು ಇದ್ದರು ಎನ್ನಲಾಗಿದೆ. ಸ್ಥಳೀಯರ ನೆರವಿನಿಂದ ಸುಮಾರು 20 ಮಕ್ಕಳನ್ನು ರಕ್ಷಿಸಲಾಗಿದೆ ಎಂದು ತಿಳಿದುಬಂದಿದೆ. ಆದರೆ ನಿಖರ ಅಂಕಿಅಂಶಗಳು ದೊರೆತಿಲ್ಲ. ಹೀಗಾಗಿ ಸುಮಾರು 18 ಮಂದಿ ಮಕ್ಕಳು ನೀರುಪಾಲಾಗಿದ್ದಾರೆ ಎಂದು ಶಂಕಿಸಲಾಗಿದೆ. ಈ ಮಕ್ಕಳು ಸ್ಥಳೀಯ ಗ್ರಾಮದಿಂದ ನದಿಯಾಚೆಗಿನ ಶಾಲೆಗೆ ತೆರಳುತ್ತಿದ್ದರು. ಬೆನಿಯಾಬಾದ್ ಒಪಿ ಪ್ರದೇಶದ ಭಟ್ಗಾಮಾ ಗ್ರಾಮದ ಮಧುರಪಟ್ಟಿ

ಭೀಕರ ದುರಂತ: ಶಾಲಾ ಮಕ್ಕಳಿದ್ದ ದೋಣಿ ಮುಳುಗಡೆ! | 34 ಮಕ್ಕಳ ಪೈಕಿ ನೀರುಪಾಲಾದವರೆಷ್ಟು? Read More »

error: Content is protected !!
Scroll to Top