ನರಿಮೊಗರು ಸರಸ್ವತಿ  ವಿದ್ಯಾ ಮಂದಿರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ

ನರಿಮೊಗರು : ಜಗತ್ತು ತಾನು, ತನ್ನದು ಎಂಬ ಸ್ವಾರ್ಥದಲ್ಲಿ ಮುಳುಗಿರುವಾಗ ಪರಾರ್ಥಕ್ಕೋಸ್ಕರ ಬದುಕಿದ ಪುರುಷೋತ್ತಮ ಶ್ರೀ ಕೃಷ್ಣ ಭಗವಂತ,ಸೇವೆ ಎಂಬ ಮೌಲ್ಯವನ್ನು ಭಾರತೀಯರಲ್ಲಿ ತುಂಬಿದ. ಬೌದ್ಧಿಕ ಹಾಗೂ ಆಧ್ಯಾತ್ಮಿಕ ನಡೆಯನ್ನು ತನ್ನ ಬದುಕಿನಲ್ಲಿ ಬಾಳಿ ತೋರಿಸಿ ಆದರ್ಶವನ್ನು ತುಂಬಿದ ಎಂದು ಸರಸ್ವತಿ ವಿದ್ಯಾ ಮಂದಿರದ ಸಂಚಾಲಕ ಅವಿನಾಶ್ ಕೊಡಂಕಿರಿ ಹೇಳಿದರು. ಶಾಲೆಯಲ್ಲಿ ನಡೆದ ಶ್ರೀಕೃಷ್ಣ ಜನ್ಮಾಷ್ಟಮಿಯ ಸಂದರ್ಭದಲ್ಲಿ ಪೋಷಕರು ಹಾಗೂ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು ಭಾರತದಲ್ಲಿ ಇಂದಿಗೂ ಇತರರಿಗಾಗಿ ಮಿಡಿಯುವ ಹೃದಯಗಳಿದ್ದರೆ ಅದಕ್ಕೆ ಶ್ರೀ ಕೃಷ್ಣನ […]

ನರಿಮೊಗರು ಸರಸ್ವತಿ  ವಿದ್ಯಾ ಮಂದಿರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ Read More »

ಪ್ಲಾಸ್ಟರ್ ಓಫ್ ಪ್ಯಾರಿಸ್ , ಬಣ್ಣ ಲೇಪಿತ ಗೌರಿ -ಗಣೇಶ ವಿಗ್ರಹಗಳನ್ನು ಕೆರೆ, ನದಿ, ಕಾಲುವೆ, ಬಾವಿ ಹಾಗೂ ಇತರ ಜಲಮೂಲಗಳಲ್ಲಿ ವಿಸರ್ಜನೆ ಮಾಡುವುದು ನಿಷೇಧ | ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅಧಿಸೂಚನೆ

ಪುತ್ತೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಜಲ ಮಾಲಿನ್ಯ ( ನಿವಾರಣೆ ಮತ್ತು ನಿಯಂತ್ರಣ ) ಕಾಯಿದೆ 1974ರ ಕಲಂ 33 ಅ ರಂತೆ ಪ್ರದತ್ತವಾದ ಅಧಿಕಾರ ಚಲಾಯಿಸಿ, ಪ್ಲಾಸ್ಟರ್ ಓಫ್ ಪ್ಯಾರಿಸ್ ನಿಂದ ತಯಾರಿಸಿರುವ ಹಾಗೂ ಬಣ್ಣ ಲೇಪಿತ ಗೌರಿ -ಗಣೇಶ ವಿಗ್ರಹಗಳನ್ನು ರಾಜ್ಯದ ಕೆರೆ, ನದಿ, ಕಾಲುವೆ, ಬಾವಿ ಹಾಗೂ ಇತರ ಜಲಮೂಲಗಳಲ್ಲಿ ವಿಸರ್ಜನೆ ಮಾಡುವುದನ್ನು ನಿಷೇಧಿಸಿ ಅಧಿಸೂಚನೆಯನ್ನು ಹೋರಾಡಿಸಿರುತ್ತದೆ. ಅದರಂತೆ ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಮನೆಗಳಲ್ಲಿ, ಸಂಘ – ಸಂಸ್ಥೆಗಳ ವತಿಯಿಂದ

ಪ್ಲಾಸ್ಟರ್ ಓಫ್ ಪ್ಯಾರಿಸ್ , ಬಣ್ಣ ಲೇಪಿತ ಗೌರಿ -ಗಣೇಶ ವಿಗ್ರಹಗಳನ್ನು ಕೆರೆ, ನದಿ, ಕಾಲುವೆ, ಬಾವಿ ಹಾಗೂ ಇತರ ಜಲಮೂಲಗಳಲ್ಲಿ ವಿಸರ್ಜನೆ ಮಾಡುವುದು ನಿಷೇಧ | ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅಧಿಸೂಚನೆ Read More »

ಕ.ಸಾ.ಪ- ಪುತ್ತೂರು ವೆಬ್ಸೈಟ್ ಅನಾವರಣ : ಕನ್ನಡ ಸಂಸ್ಕೃತಿ ಇಲಾಖೆ ಸಚಿವರಿಂದ  ಲೋಕಾರ್ಪಣೆ

ಮೈಸೂರು : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕದ ನೂತನ ವೆಬ್ಸೈಟ್  www.kasapaputturu.in ಇದರ ಲೋಕಾರ್ಪಣೆಯನ್ನು  ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶ್ರೀ ಶಿವರಾಜ ಎಸ್ ತಂಗಡಗಿ ಮೈಸೂರಿನ ಜಲದರ್ಶಿನಿ ಅತಿಥಿಗೃಹ ದಲ್ಲಿ ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಸಾಹಿತ್ಯಕ್ಕೆ  ಪುತ್ತೂರಿನ ಸಾಹಿತಿಗಳ ಕೊಡುಗೆಗಳ ವಿವರವನ್ನು  ಪುತ್ತೂರು ಉಮೇಶ್ ನಾಯಕ್ ಅವರು ಮಾನ್ಯ  ಸಚಿವರಿಗೆ ತಿಳಿಸಿದರು. ಸಾಹಿತ್ಯ ಪರಿಷತ್ತಿನ ವೆಬ್ಸೈಟಿನ ವಿವರವನ್ನು  ಡಾ. ಹರ್ಷ ಕುಮಾರ್ ರೈ ಸಚಿವರಿಗೆ ವಿವರಿಸಿದರು.

ಕ.ಸಾ.ಪ- ಪುತ್ತೂರು ವೆಬ್ಸೈಟ್ ಅನಾವರಣ : ಕನ್ನಡ ಸಂಸ್ಕೃತಿ ಇಲಾಖೆ ಸಚಿವರಿಂದ  ಲೋಕಾರ್ಪಣೆ Read More »

ಗ್ರಾಪಂ ಮಾಜಿ ಸದಸ್ಯನ ಮನೆ ದರೋಡೆ | ಚಿನ್ನ, ನಗದು ದರೋಡೆ

ಪುತ್ತೂರು: ಮಾಜಿ ಸದಸ್ಯರೊಬ್ಬರ ಮನೆಗೆ ರಾತ್ರಿ ನುಗ್ಗಿ ದರೋಡೆ ಮಾಡಿದ ಘಟನೆ ಬಡಗನ್ನೂರಿನಲ್ಲಿ ನಡೆದಿದೆ. ಬಡಗನ್ನೂರು ಗ್ರಾಪಂ ಮಾಜಿ ಸದಸ್ಯ ಗುರುಪ್ರಸಾದ್ ಅವರ ಮನೆಯಲ್ಲಿ ದರೋಡೆ ನಡೆದಿದೆ. ಗುರುಪ್ರಸಾದ್, ಅವರ ತಾಯಿ, ಮನೆ ಕೆಲಸದವರು ಇರುವ ಸಂದರ್ಭ ರಾತ್ರಿ ಸುಮಾರು 2 ಗಂಟೆ ವೇಳೆಗೆ ಸುಮಾರು 10 ಮಂದಿ ದರೋಡೆಕೋರರು ಇದ್ದರು ಎನ್ನಲಾಗಿದೆ. 25 ಪವನ್ ಚಿನ್ನ, 30 ಸಾವಿರ ನಗದು ಕಳವಾಗಿದೆ ಎನ್ನಲಾಗಿದೆ. ಉನ್ನತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಗ್ರಾಪಂ ಮಾಜಿ ಸದಸ್ಯನ ಮನೆ ದರೋಡೆ | ಚಿನ್ನ, ನಗದು ದರೋಡೆ Read More »

ಸುಳ್ಯ ಎನ್ ಎಂ ಸಿಯಲ್ಲಿ ಎನ್ ಸಿ ಸಿ  ವತಿಯಿಂದ ಶಿಕ್ಷಕರ ದಿನಾಚರಣೆ – ಸಾಧಕರಿಗೆ ಸನ್ಮಾನ

ಸುಳ್ಯ: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಎನ್‌ಸಿಸಿ ವತಿಯಿಂದ ಸಾಧಕ ಶಿಕ್ಷಕರನ್ನು ಗೌರವಿಸುವ ಮೂಲಕ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು. ಮೈಸೂರು ಮುಕ್ತ ವಿಶ್ವ ವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದ ಡಾ. ಮಮತಾ ಕೆ ಹಾಗೂ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾದ ಡಾ. ಅನುರಾಧಾ ಕುರುಂಜಿ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್  ಎಂ ಎಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಆಧುನಿಕ ಯುಗದಲ್ಲಿ ಶಿಕ್ಷಕರು ದಿನದಿಂದ ದಿನಕ್ಕೆ ಹೊಸತನಕ್ಕೆ ತೆರೆದುಕೊಳ್ಳಬೇಕು. ಶಿಕ್ಷಕರು

ಸುಳ್ಯ ಎನ್ ಎಂ ಸಿಯಲ್ಲಿ ಎನ್ ಸಿ ಸಿ  ವತಿಯಿಂದ ಶಿಕ್ಷಕರ ದಿನಾಚರಣೆ – ಸಾಧಕರಿಗೆ ಸನ್ಮಾನ Read More »

ಸೆ.13-14 : ಸೌಜನ್ಯ ಅತ್ಯಾಚಾರ, ಕೊಲೆ ಆರೋಪಿಗಳನ್ನು ಪತ್ತೆಹಚ್ಚಿ ಕಾನೂನು ರೀತಿಯ ಶಿಕ್ಷೆಗೊಳಪಡಿಸಬೇಕೆಂದು ಆಗ್ರಹ | ಜಿಲ್ಲಾ ಒಕ್ಕಲಿಗರ ಹೋರಾಟ ಸಮಿತಿ ವತಿಯಿಂದ ಧರಣಿ ಸತ್ಯಾಗ್ರಹ

ಮಂಗಳೂರು : ಮಂಗಳೂರು ಜಿಲ್ಲಾ ಒಕ್ಕಲಿಗರ ಹೋರಾಟ ಸಮಿತಿ ವತಿಯಿಂದ ಕುಮಾರಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಪತ್ತೆಹಚ್ಚಬೇಕು ಮತ್ತು ತನಿಖಾಧಿಕಾರಿ ಹಾಗೂ ವೈದ್ಯರನ್ನು ತನಿಖೆಗೊಳಪಡಿಸಿ ತಪ್ಪಿತಸ್ಥ ಆರೋಪಿಗಳನ್ನು ಕಾನೂನು ಪ್ರಕಾರ ಶಿಕ್ಷಕಿಸಬೇಕೆಂದು ಆಗ್ರಹಿಸಿ ಜಿಲ್ಲಾ ಮಟ್ಟದ ಧರಣಿ ಸತ್ಯಾಗ್ರಹ ಸೆ.12 ಹಾಗೂ 13 ರಂದು ಮಂಗಳೂರು ಕ್ಲಾಕ್ ಟವರ್ ಬಳಿ ಇರುವ ತಾಲೂಕು ಕಚೇರಿ ಬಳಿ ನಡೆಯಲಿದೆ. ಎರಡು ದಿನಗಳ ಕಾಲ ನಡೆಯುವ ಧರಣಿ ಸತ್ಯಾಗ್ರಹ ಬೆಳಿಗ್ಗೆ 10 ರಿಂದ ಸಂಜೆ 5 ರ

ಸೆ.13-14 : ಸೌಜನ್ಯ ಅತ್ಯಾಚಾರ, ಕೊಲೆ ಆರೋಪಿಗಳನ್ನು ಪತ್ತೆಹಚ್ಚಿ ಕಾನೂನು ರೀತಿಯ ಶಿಕ್ಷೆಗೊಳಪಡಿಸಬೇಕೆಂದು ಆಗ್ರಹ | ಜಿಲ್ಲಾ ಒಕ್ಕಲಿಗರ ಹೋರಾಟ ಸಮಿತಿ ವತಿಯಿಂದ ಧರಣಿ ಸತ್ಯಾಗ್ರಹ Read More »

ಮಣಿಪುರ ಹಿಂಸಾಚಾರ ಪೀಡಿತ ಜಿಲ್ಲೆಗಳಲ್ಲಿ ಬೃಹತ್ ಪ್ರತಿಭಟನೆ  | ಭದ್ರತಾ ಪಡೆಗಳಿಂದ ರಬ್ಬರ್ ಬುಲ್ಲೆಟ್ ಸಿಡಿತ | ಹಲವರಿಗೆ ಗಾಯ

ಮಣಿಪುರ : ಮಣಿಪುರದ ಹಿಂಸಾಚಾರ ಪೀಡಿತ ಜಿಲ್ಲೆಗಳಲ್ಲಿ ಭದ್ರತಾ ಪಡೆಗಳು ಹಾಕಿದ್ದ ಬ್ಯಾರಿಕೇಡ್‌ಗಳತ್ತ  ಪ್ರತಿಭಟನಾಕಾರರು ಬೃಹತ್ ಮೆರವಣಿಗೆ ನಡೆಸಿದ್ದು, ಭದ್ರತಾ ಪಡೆಗಳು ಅಶ್ರುವಾಯು ಮತ್ತು ರಬ್ಬರ್ ಬುಲೆಟ್‌ಗಳನ್ನು ಸಿಡಿಸಿದ್ದಾರೆ. ಈ ವೇಳೆ  ಹಲವರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಣಿಪುರ ಮೈತೈ ಸಮುದಾಯದ ಜನರು ಇರುವ ಪ್ರದೇಶದಲ್ಲಿ ಜನರು ಕರ್ಪ್ಯೂ ಉಲ್ಲಂಘಿಸಿ ಮನೆಯಿಂದ ಹೊರಗೆ ಬಂದಿದ್ದಾರೆ. ಮೈತೈ ನಾಗರಿಕ ಸಮಾಜ ಸಂಸ್ಥೆಯ ಭಾಗವಾಗಿರುವ ಸಮನ್ವಯ ಸಮಿತಿಯು ಪ್ರತಿಭಟನೆಗೆ ಕರೆ ನೀಡಿತ್ತು. ಮಣಿಪುರದ ಬಿಕ್ಕಟ್ಟನ್ನು ಇನ್ನಷ್ಟು ಹದಗೆಡಿಸದಂತೆ ಸರ್ಕಾರ

ಮಣಿಪುರ ಹಿಂಸಾಚಾರ ಪೀಡಿತ ಜಿಲ್ಲೆಗಳಲ್ಲಿ ಬೃಹತ್ ಪ್ರತಿಭಟನೆ  | ಭದ್ರತಾ ಪಡೆಗಳಿಂದ ರಬ್ಬರ್ ಬುಲ್ಲೆಟ್ ಸಿಡಿತ | ಹಲವರಿಗೆ ಗಾಯ Read More »

ಹಿರಿಯ ರಂಗಕರ್ಮಿ ಮಂಜು ವಿಟ್ಲ ನಿಧನ

ವಿಟ್ಲ : ಹಿರಿಯ ರಂಗಕರ್ಮಿ ಮಂಜು ವಿಟ್ಲ ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನಲ್ಲಿರುವ ಪುತ್ರಿಯ ಮನೆಯಲ್ಲಿ ಸೆ.6 ರಂದು ನಿಧನರಾಗಿದ್ದಾರೆ. ಮಂಜು ವಿಟ್ಲರವರು ಧಾರ್ಮಿಕ,ಶೈಕ್ಷಣಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದರು. ಹಿರಿಯ ತರಬೇತುದಾರರಾಗಿ, ಚಿತ್ರಕಲಾವಿದರಾಗಿ, ಕಾರ್ಯಕ್ರಮ ನಿರೂಪಕರಾಗಿ, ಸಂಪನ್ಮೂಲ ವ್ಯಕ್ತಿಯಾಗಿ ಅಪಾರ ಜನಮನ್ನಣೆ ಗಳಿಸಿದ್ದರು. ಮೃತರು ಪುತ್ರಿ, ಸಹೋದರ, ಸಹೋದರಿಯರು, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಹಿರಿಯ ರಂಗಕರ್ಮಿ ಮಂಜು ವಿಟ್ಲ ನಿಧನ Read More »

ಉದಯನಿಧಿ ಸ್ಟಾಲಿನ್, ಜಿ.ಪರಮೇಶ್ವರ ಅವರಿಂದ ಹಿಂದೂ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ | ಕೌಂಟರ್ ನೀಡಿದ ರಾಜ್ಯ ಬಿಜೆಪಿ

ಬೆಂಗಳೂರು: ಇತ್ತೀಚೆಗೆ ಸನಾತನ ಧರ್ಮದ ಕುರಿತು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇದರ ಬೆನ್ನಲ್ಲೇ, ತುಮಕೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರು ಹಿಂದೂ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಅವರು ಹಿಂದೂ ಧರ್ಮ ಹುಟ್ಟಿದ್ದು ಯಾವಾಗ, ಯಾರು ಹುಟ್ಟಿಸಿದರು ಎಂಬುದೇ ಪ್ರಶ್ನೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದೀಗ ಈ ಹೇಳಿಕೆಗೆ ಎಕ್ಸ್(ಟ್ವಿಟ್ಟರ್) ನಲ್ಲಿ ಟ್ವಿಟ್ ಮಾಡುವ ಮೂಲಕ ರಾಜ್ಯ ಬಿಜೆಪಿ ಪ್ರತ್ಯುತ್ತರ ನೀಡಿದ್ದು, “ಯಾರಿಗಾದರೂ ಅವರ ಮುತ್ತಾತ,

ಉದಯನಿಧಿ ಸ್ಟಾಲಿನ್, ಜಿ.ಪರಮೇಶ್ವರ ಅವರಿಂದ ಹಿಂದೂ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ | ಕೌಂಟರ್ ನೀಡಿದ ರಾಜ್ಯ ಬಿಜೆಪಿ Read More »

ಸೆ.18 ರಿಂದ 22 ರ ತನಕ ಸಂಸತ್ ಅಧಿವೇಶನ : ಸೆ.19 ರ ಗಣೇಶ ಚತುರ್ಥಿಯಂದು ಸಂಸತ್ತಿನ ಹೊಸ ಕಟ್ಟಡದಲ್ಲಿ ನಡೆಯಲಿರುವ ಅಧಿವೇಶನ

ದೆಹಲಿ : ಸೆ.18 ರಂದು ಸಂಸತ್ತಿನ ವಿಶೇಷ ಅಧಿವೇಶನ ಆರಂಭಗೊಳ್ಳಲಿದ್ದು, ಮೊದಲ ದಿನದ ಅಧಿವೇಶನ ಹಳೆಯ ಸಂಸತ್ತಿನ ಕಟ್ಟಡದಲ್ಲಿ ನಡೆಯಲಿದೆ. ಸೆ.19ರಂದು ಗಣೇಶ ಚತುರ್ಥಿ ದಿನ ಅಧಿವೇಶನ ಸಂಸತ್ತಿನ ಹೊಸ ಕಟ್ಟಡಕ್ಕೆ ಸ್ಥಳಾಂತರವಾಗಲಿದೆ ಎಂದು ಎಎನ್‌ಐ ತಿಳಿಸಿದೆ. ಸಂಸತ್ತಿನ ಐದು ದಿನಗಳ ವಿಶೇಷ ಅಧಿವೇಶನ ಸೆ.18ರಿಂದ 22ರವರೆಗೆ ನಡೆಯಲಿದೆ. ಅಧಿವೇಶನದಲ್ಲಿ ‘ಇಂಡಿಯಾ’ವನ್ನು ‘ಭಾರತ’ ಎಂದು ಬದಲಾಯಿಸಲು ಸಂಸತ್ತಿನಲ್ಲಿ ನಿರ್ಣಯ ತರುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಸಂಸತ್ತಿನ ವಿಶೇಷ ಅಧಿವೇಶನವನ್ನು ಸರಕಾರ ಕರೆದ ಬಗ್ಗೆ ಪ್ರತಿಕ್ರಿಯಿಸಿದ

ಸೆ.18 ರಿಂದ 22 ರ ತನಕ ಸಂಸತ್ ಅಧಿವೇಶನ : ಸೆ.19 ರ ಗಣೇಶ ಚತುರ್ಥಿಯಂದು ಸಂಸತ್ತಿನ ಹೊಸ ಕಟ್ಟಡದಲ್ಲಿ ನಡೆಯಲಿರುವ ಅಧಿವೇಶನ Read More »

error: Content is protected !!
Scroll to Top