ಕುಂಡಡ್ಕ : ಮೂರನೇ ವರ್ಷದ ರಕ್ಷಾಬಂಧನ ಆಚರಣೆ | ರಾಷ್ಟ್ರೀಯತೆಯ ವಿಚಾರದಲ್ಲಿ ನಾವೆಲ್ಲರೂ ಒಂದಾಗಬೇಕು : ರಜನೀಶ್ ಪಿ
ಮುಕ್ಕೂರು : ದೇಶ, ಧರ್ಮ, ರಾಷ್ಟ್ರೀಯತೆಯ ವಿಚಾರದಲ್ಲಿ ಪಕ್ಷ, ಜಾತಿ ಮೀರಿ ನಾವೆಲ್ಲರೂ ಒಂದಾಗಬೇಕು. ಹಿಂದೂ ಸಮಾಜವನ್ನು ವಿಭಜಿಸುವ ಹುನ್ನಾರಗಳಿಗೆ ಅವಕಾಶ ಕಲ್ಪಿಸದೆ, ನಾವು ಜಾಗೃತ ಸಮಾಜದ ಮೂಲಕ ಭಾರತೀಯ ಸಂಸ್ಕೃತಿ, ಸಂಸ್ಕಾರದ ರಕ್ಷಕರಾಗಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತ ರಜನೀಶ್ ಪಿ ಹೇಳಿದರು. ಕುಂಡಡ್ಕ-ಮುಕ್ಕೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಹಾಗೂ ನೇಸರ ಯುವಕ ಮಂಡಲದ ಜಂಟಿ ಆಶ್ರಯದಲ್ಲಿ ಕುಂಡಡ್ಕ ಕಮಲ ಅವರ ನಿವಾಸದಲ್ಲಿ ನಡೆದ ಮೂರನೇ ವರ್ಷದ ರಕ್ಷಾಬಂಧನ ಆಚರಣೆಯಲ್ಲಿ ರಕ್ಷಾ […]










