ರಾಷ್ಟ್ರಮಟ್ಟದ ಕರಾಟೆ ಪಂದ್ಯಾಟಕ್ಕೆ ನರೇಂದ್ರ ಪ.ಪೂ.ಕಾಲೇಜಿನ ವಿದ್ಯಾರ್ಥಿನಿ ಸಮೀಕ್ಷ ಆಯ್ಕೆ

ಪುತ್ತೂರು: ಪುಣಚದ ಶ್ರೀದೇವಿ ವಿದ್ಯಾ ಸಂಸ್ಥೆಯಲ್ಲಿ ನಡೆದ ವಿದ್ಯಾಭಾರತಿ ರಾಜ್ಯಮಟ್ಟದ ಕರಾಟೆ ಪಂದ್ಯಾಟದಲ್ಲಿ ನರೇಂದ್ರ ಪ.ಪೂ.ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಸಮೀಕ್ಷ ಪ್ರಥಮ ಸ್ಥಾನವನ್ನು ಪಡೆದು ಅಕ್ಟೋಬರ್ 28 ರಿಂದ 30 ರವರೆಗೆ ಮಧ್ಯಪ್ರದೇಶದ ದೇವಾಸ್ ನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಪುಣಚದ ಶ್ರೀದೇವಿ ವಿದ್ಯಾ ಸಂಸ್ಥೆಯಲ್ಲಿ ನಡೆದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನರೇಂದ್ರ ಪ.ಪೂ.ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೋಕ್ಷಿತಾ, ಶಿವಕುಮಾರ್, ದ್ವಿತೀಯ ವಿಜ್ಞಾನ ವಿಭಾಗದ ನಿಶಾಂತ್  ದ್ವಿತೀಯ ಸ್ಥಾನ ಪಡೆದಿದ್ದಾರೆ.ಜಿ […]

ರಾಷ್ಟ್ರಮಟ್ಟದ ಕರಾಟೆ ಪಂದ್ಯಾಟಕ್ಕೆ ನರೇಂದ್ರ ಪ.ಪೂ.ಕಾಲೇಜಿನ ವಿದ್ಯಾರ್ಥಿನಿ ಸಮೀಕ್ಷ ಆಯ್ಕೆ Read More »

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ “ಕಂಪೆನಿ ಕನೆಕ್ಟ್” ಕಾರ್ಯಕ್ರಮ

ಪುತ್ತೂರು: ತಂತ್ರಜ್ಞಾನ ಎಷ್ಟು ಮುಂದುವರಿದರೂ ಕಂಪೆನಿಗಳು ಬಯಸುವ ರೀತಿಯಲ್ಲಿ ನುರಿತ ತಂತ್ರಜ್ಞರು ಸಿಗುತ್ತಿಲ್ಲ ಇದಕ್ಕೆ ಶಿಕ್ಷಣ ವ್ಯವಸ್ಥೆಯ ಪಠ್ಯಕ್ರಮ ಹಾಗೂ ಕಂಪೆನಿಯ ಆವಶ್ಯಕತೆಗಳ ಮಧ್ಯೆ ಇರುವ ಅಂತರವೇ ಕಾರಣ ಎಂದು ಕಾಕುಂಜೆ ಸಾಫ್ಟ್‌ವೇರ್ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್ ಮಂಗಳೂರು ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ವ್ಯವಸ್ಥಾಪಕ ನಿರ್ದೇಶಕ ಗೋಪಾಲಕೃಷ್ಣ ಭಟ್ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ತರಬೇತಿ ಮತ್ತು ನೇಮಕಾತಿ ವಿಭಾಗದ ಆಶ್ರಯದಲ್ಲಿ ನಡೆದ ಕಂಪೆನಿ ಕನೆಕ್ಟ್-2023ಕ್ಕೆ ಚಾಲನೆ ನೀಡಿ

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ “ಕಂಪೆನಿ ಕನೆಕ್ಟ್” ಕಾರ್ಯಕ್ರಮ Read More »

ಮುಳಿಯ ಗಾನರಥ ಸೀಸನ್-1 ಗ್ರ್ಯಾಂಡ್ ಫಿನಾಲೆ: ಜೂನಿಯರ್ ವಿಭಾಗದಲ್ಲಿ ಪಲ್ಲವಿ ಆರ್.ಕೆ. ಸೀನಿಯರ್ ವಿಭಾಗದಲ್ಲಿ ಮಾಳವಿಕಗೆ ಪ್ರಶಸ್ತಿ

ಪುತ್ತೂರು: ಗ್ರಾಮೀಣ ಪ್ರತಿಭೆಗಳಿಗೆ ವೇದಿಕೆ ಒದಗಿಸುವ ನಿಟ್ಟಿನಲ್ಲಿ ಪುತ್ತೂರಿನ ಹೆಸರಾಂತ ಮುಳಿಯ ಜ್ಯುವೆಲ್ಸ್‌ನ ವತಿಯಿಂದ ನಡೆಸಲಾದ ಮುಳಿಯ ಗಾನರಥ ಕರೋಕೆ ಹಾಡುಗಳ ಗಾಯನ ಸ್ಪರ್ಧೆಯ ಗ್ರ್ಯಾಂಡ್‌ ಫಿನಾಲೆಯು ಇನ್ನರ್‌ವೀಲ್‌ ಕ್ಲಬ್‌ನ ಸಹಯೋಗದಲ್ಲಿ ನಡೆಯಿತು. ಜೂನಿಯರ್ ವಿಭಾಗದಲ್ಲಿ ಪಲ್ಲವಿ ಆರ್ (ಪ್ರಥಮ), ಮೃನಾಲ್ (ದ್ವಿತೀಯ), ವಿಭಾಶ್ರೀ (ತೃತೀಯ ಹಾಗೂ ಸೀನಿಯರ್ ವಿಭಾಗದಲ್ಲಿ ಮಾಳವಿಕ (ಪ್ರಥಮ), ವಿನೋದ್ ಜಾಲ್ಸೂರ್ (ದ್ವಿತೀಯ) ಹಾಗೂ ಪವಿತ್ರ ಆರ್ (ತೃತೀಯ) ಬಹುಮಾನಗಳನ್ನು ಪಡೆದರು. ಪ್ರಥಮ ಬಹುಮಾನ ಪಡೆದವರಿಗೆ ಗಾನ ಕೋಗಿಲೆ, ಚಿನ್ನದ ನಾಣ್ಯ ಹಾಗೂ

ಮುಳಿಯ ಗಾನರಥ ಸೀಸನ್-1 ಗ್ರ್ಯಾಂಡ್ ಫಿನಾಲೆ: ಜೂನಿಯರ್ ವಿಭಾಗದಲ್ಲಿ ಪಲ್ಲವಿ ಆರ್.ಕೆ. ಸೀನಿಯರ್ ವಿಭಾಗದಲ್ಲಿ ಮಾಳವಿಕಗೆ ಪ್ರಶಸ್ತಿ Read More »

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ನಲ್ಲಿ ಖಾಲಿ ಹುದ್ದೆಗಳು | ಅರ್ಜಿ  ಎಲ್ಲಿದೆ ? ಹೇಗೆ ಅರ್ಜಿ ಸಲ್ಲಿಸಬಹುದು ? ಕೊನೆಯ ದಿನಾಂಕದ ಕುರಿತು ಇಲ್ಲಿದೆ ಡಿಟೈಲ್ಸ್

ಪುತ್ತೂರು: ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ ನಲ್ಲಿ ಖಾಲಿ ಇರುವ ಈ ಕೆಳಗಿನ ಹುದ್ದೆಗಳನ್ನು ನೇರ ನೇಮಕಾತಿಯಿಂದ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕಂಪ್ಯೂಟರ್ ಪ್ರೋಗ್ರಾಮರ್ 2 ಹಾಗೂ ದ್ವಿತೀಯ ದರ್ಜೆ ಗುಮಾಸ್ತರು 123 ಹೀಗೆ ಒಟ್ಟು 124 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ದ್ವಿತೀಯ ದರ್ಜೆ ಗುಮಾಸ್ತರ ಹುದ್ದೆಗೆ ನೀಡಲಾಗಿರುವ ಮೀಸಲಾತಿ ವಿವರ ಈ ಕೆಳಗಿನಂತಿದೆ. ಪರಿಶಿಷ್ಟ ಜಾತಿ ಒಟ್ಟು 18 ಹುದ್ದೆಗಳಿದ್ದು, ಮಹಿಳೆಯರಿಗೆ 6, ಮಾಜಿ ಸೈನಿಕರು 1, ಪರಿಶಿಷ್ಟ

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ನಲ್ಲಿ ಖಾಲಿ ಹುದ್ದೆಗಳು | ಅರ್ಜಿ  ಎಲ್ಲಿದೆ ? ಹೇಗೆ ಅರ್ಜಿ ಸಲ್ಲಿಸಬಹುದು ? ಕೊನೆಯ ದಿನಾಂಕದ ಕುರಿತು ಇಲ್ಲಿದೆ ಡಿಟೈಲ್ಸ್ Read More »

ದಿಲ್ದೀಪ್ ರೈ ನಿಧನ

ಪುತ್ತೂರು: ಬಡಗನ್ನೂರು ಗ್ರಾಮದ ಪೇರಾಲು ನಿವಾಸಿ ದಿಲ್ದೀಪ್‍ ರೈ ಪೆರಾಲು (60) ನಿಧನರಾಗಿದ್ದಾರೆ. ಅಲ್ಪ ಕಾಲದ ಅಸೌಖ್ಯದಿಂದಿದ್ದ ಅವರು ಸ್ವಗೃಹದಲ್ಲಿನಿಧನರಾದರು. ಮೃತರು ಸಹೋದರರು, ಕುಟುಂಬಸ್ಥರು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

ದಿಲ್ದೀಪ್ ರೈ ನಿಧನ Read More »

ನೀಟ್ ಆಕಾಂಕ್ಷಿ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆ

ರಾಜಸ್ಥಾನ: ರಾಜಸ್ಥಾನದ ಕೋಟಾದಲ್ಲಿ ಮತ್ತೆ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ. ದೇಶದ ಮಹತ್ವಾಕಾಂಕ್ಷಿ ಕೋರ್ಸ್‌ಗಳಾದ ಎಂಜಿನಿಯರ್‌, ವೈದ್ಯಕೀಯ ಪ್ರವೇಶಾತಿ ಪರೀಕ್ಷೆ ಮತ್ತು ನಾಗರಿಕ ಸೇವೆಗಳ ಪರೀಕ್ಷೆಗಳ ತರಬೇತಿಯ ಕೇಂದ್ರವಾದ ಕೋಟಾದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ  ಹೆಚ್ಚಳ ಆತಂಕಕ್ಕೆ ಕಾರಣವಾಗಿದೆ. ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ನೀಟ್‌ ಪರೀಕ್ಷೆಗೆ ಸಿದ್ದತೆ ಮಾಡಿಕೊಳ್ಳುತ್ತಿದ್ದ ಅವಿಷ್ಕರ್ ಶುಭಾಂಗಿ ಮತ್ತು ಬಿಹಾರದ ವಿದ್ಯಾರ್ಥಿ ಆದರ್ಶ್ ಆತ್ಮಹತ್ಯೆ ಮಾಡಿಕೊಂಡವರು. ಅವಿಷ್ಕರ್ ಶುಭಾಂಗಿ ಮಹಾರಾಷ್ಟ್ರ ಮೂಲದವರಾಗಿದ್ದು, ಕೋಟಾದಲ್ಲಿ ತನ್ನ ಅಜ್ಜಿಯೊಂದಿಗೆ ನೆಲೆಸಿದ್ದರು. ಪರೀಕ್ಷೆ ಬರೆದ ಬಳಿಕ ಕೋಚಿಂಗ್ ಇನ್‌ಸ್ಟಿಟ್ಯೂಟ್‌ನ

ನೀಟ್ ಆಕಾಂಕ್ಷಿ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆ Read More »

ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾನುವಾರ ಅಣ್ಣಪ್ಪ ಬೆಟ್ಟದಲ್ಲಿ ನಡೆದದ್ದು ಕೇವಲ ಪ್ರಾರ್ಥನೆ | ಇಂದು ಅಣ್ಣಪ್ಪ ಬೆಟ್ಟದಲ್ಲಿ ನಡೆದದ್ದು ಪ್ರಮಾಣ ಎಂದಾದರೆ  ಪ್ರಮಾಣ ಹಾಗೂ ಪ್ರಾರ್ಥನೆಗೆ ವ್ಯತ್ಯಾಸವಿಲ್ಲವೆ ? | ಯಾವುದೇ ಕ್ಷೇತ್ರದಲ್ಲಿ ಪ್ರಮಾಣ ಮಾಡುವುದಾದರೂ ಆ ಕ್ಷೇತ್ರದ ಮೊಕ್ತೇಸರ, ಧರ್ಮಾಧಿಕಾರಿ, ಅರ್ಚಕರ ಸಮ್ಮುಖದಲ್ಲಿ ಆಗುವುದು ನಿಜವಾದ ಪ್ರಮಾಣ  | ಅದನ್ನು ಹೊರತುಪಡಿಸಿ ಬೀದಿಯಲ್ಲಿ ಬೇಕಾಬಿಟ್ಟಿಯಾಗಿ ಪ್ರಮಾಣ ಮಾಡಲು ಸಾಧ್ಯವಿಲ್ಲ

ಧರ್ಮಸ್ಥಳ : ಹನ್ನೊಂದು ವರ್ಷಗಳ ಹಿಂದೆ ಬೆಳ್ತಂಗಡಿಯಲ್ಲಿ ನಡೆದ ಕೊಲೆ ಪ್ರಕರಣದ ನೈಜ ಆರೋಪಿಗಳ ಪತ್ತೆಗಾಗಿ ಪ್ರಕರಣದ ಮರು ತನಿಖೆಗೆ  ಆಗ್ರಹಿಸಿ ಭಾನುವಾರ ವಿಶ್ವಹಿಂದೂ ಪರಿಷತ್ ಬಜರಂಗದಳದ ನೇತೃತ್ವದಲ್ಲಿ ನಡೆದ ಪಾದಯತ್ರೆ ಬಳಿಕ ಧರ್ಮಸ್ಥಳದ ಅಣ್ಣಪ್ಪ ಬೆಟ್ಟದ ಮಂಭಾಗ ಪ್ರಮಾಣ ಮಾಡದೇ ಕೇವಲ ಪ್ರಾರ್ಥನೆ ಮಾತ್ರ ನಡೆಯಿತು. ಪ್ರಕರಣದಲ್ಲಿ ಸೌಜನ್ಯ ತಾಯಿ ಕುಸುಮಾವತಿ ಅವರು ಮೂರು ಹೆಸರುಗಳನ್ನು ಬಹಿರಂಗಪಡಿಸಿದ್ದು, ಧೀರಜ್ ಕೆಲ್ಲ, ಉದಯ್ ಜೈನ್ ಹಾಗೂ ಧೀರಜ್ ಜೈನ್ ಎಂದು ಹೇಳಿದ್ದರು. ಈ ನಿಟ್ಟಿನಲ್ಲಿ ಇಂದು ಅಣ್ಣಪ್ಪ

ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾನುವಾರ ಅಣ್ಣಪ್ಪ ಬೆಟ್ಟದಲ್ಲಿ ನಡೆದದ್ದು ಕೇವಲ ಪ್ರಾರ್ಥನೆ | ಇಂದು ಅಣ್ಣಪ್ಪ ಬೆಟ್ಟದಲ್ಲಿ ನಡೆದದ್ದು ಪ್ರಮಾಣ ಎಂದಾದರೆ  ಪ್ರಮಾಣ ಹಾಗೂ ಪ್ರಾರ್ಥನೆಗೆ ವ್ಯತ್ಯಾಸವಿಲ್ಲವೆ ? | ಯಾವುದೇ ಕ್ಷೇತ್ರದಲ್ಲಿ ಪ್ರಮಾಣ ಮಾಡುವುದಾದರೂ ಆ ಕ್ಷೇತ್ರದ ಮೊಕ್ತೇಸರ, ಧರ್ಮಾಧಿಕಾರಿ, ಅರ್ಚಕರ ಸಮ್ಮುಖದಲ್ಲಿ ಆಗುವುದು ನಿಜವಾದ ಪ್ರಮಾಣ  | ಅದನ್ನು ಹೊರತುಪಡಿಸಿ ಬೀದಿಯಲ್ಲಿ ಬೇಕಾಬಿಟ್ಟಿಯಾಗಿ ಪ್ರಮಾಣ ಮಾಡಲು ಸಾಧ್ಯವಿಲ್ಲ Read More »

ವಿಹಿಂಪ, ಬಜರಂಗದಳದ ನೇತೃತ್ವದಲ್ಲಿ ಪಾದಯಾತ್ರೆ | ಸೌಜನ್ಯ ಕೊಲೆ ಆರೋಪಿಗಳು ನಾವಲ್ಲ ಎಂದು ಅಣ್ಣ ಬೆಟ್ಟದಲ್ಲಿ ಧೀರಜ್ ಜೈನ್, ಉದಯ್‍ ಜೈನ್, ಧೀರಜ್ ಕೆಲ್ಲ ಪ್ರಮಾಣ| ನೈಜ ಆರೋಪಿಗಳಿಗೆ ಶಿಕ್ಷೆಯಾಗುವಂತೆ ಪ್ರಾರ್ಥಿಸಿದ ಸೌಜನ್ಯ ತಾಯಿ ಕುಸುಮಾವತಿ

ಧರ್ಮಸ್ಥಳ : ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆ ಈಗಾಗಲೇ ಧರ್ಮಸ್ಥಳ ಅಣ್ಣಪ್ಪ ಸ್ವಾಮಿ ಬೆಟ್ಟದ ಬಳಿ ತಲುಪಿದ್ದು, ಸಹಸ್ರಾರು ಸಂಖ್ಯೆಯಲ್ಲಿ ಜನ ಸೇರಿದ್ದಾರೆ. ನೇತ್ರಾವತಿ ಸ್ನಾನಘಟ್ಟದಿಂದ ಧರ್ಮಸ್ಥಳದಲ್ಲಿರುವ ಅಣ್ಣಪ್ಪ ಸ್ವಾಮಿ ಬೆಟ್ಟದ ವರೆಗೆ ನಡೆದ ಪಾದಯಾತ್ರೆಯಲ್ಲಿ ಸೌಜನ್ಯಳ ತಾಯಿ ಕುಸುಮಾವತಿ ಜತೆ ವಿಹಿಂಪ, ಬಜರಂಗದಳ ಕಾರ್ಯಕರ್ತರು ಪಾಲ್ಗೊಂಡಿದ್ದರು. ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದು, ಜಿಲ್ಲಾ ಎಸ್‍ ಪಿ ರಿಷ್ಯಂತ್ ಅವರೇ ಬಂದೋಬಸ್ತಿನ ಉಸ್ತುವಾರಿ ವಹಿಸಿದ್ದಾರೆ. ಧರ್ಮಸ್ಥಳ ಸುತ್ತಮುತ್ತಲಿನ ಜನ ಬೃಹತ್ ಸಂಖ್ಯೆಯಲ್ಲಿ

ವಿಹಿಂಪ, ಬಜರಂಗದಳದ ನೇತೃತ್ವದಲ್ಲಿ ಪಾದಯಾತ್ರೆ | ಸೌಜನ್ಯ ಕೊಲೆ ಆರೋಪಿಗಳು ನಾವಲ್ಲ ಎಂದು ಅಣ್ಣ ಬೆಟ್ಟದಲ್ಲಿ ಧೀರಜ್ ಜೈನ್, ಉದಯ್‍ ಜೈನ್, ಧೀರಜ್ ಕೆಲ್ಲ ಪ್ರಮಾಣ| ನೈಜ ಆರೋಪಿಗಳಿಗೆ ಶಿಕ್ಷೆಯಾಗುವಂತೆ ಪ್ರಾರ್ಥಿಸಿದ ಸೌಜನ್ಯ ತಾಯಿ ಕುಸುಮಾವತಿ Read More »

ನ್ಯಾಯಾಂಗ ಹುದ್ದೆ ಅತ್ಯಂತ ಶ್ರೇಷ್ಠವಾದದ್ದು: ನ್ಯಾ. ವಿಶ್ವಜಿತ್ ಶೆಟ್ಟಿ | ವಿವೇಕಾನಂದ ಕಾನೂನು ಮಹಾವಿದ್ಯಾಲಯದ 35ನೇ ವಾರ್ಷಿಕೋತ್ಸವ

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದ 35ನೇ ವಾರ್ಷಿಕೋತ್ಸವ ನಡೆಯಿತು.  ಮುಖ್ಯ ಅತಿಥಿಯಾಗಿ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಸವಣೂರು ವಿಶ್ವಜಿತ್ ಶೆಟ್ಟಿ, ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಸಾಧಕ ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಣೆ ಮಾಡಿ ಮಾತನಾಡಿ, ಭಾರತೀಯ ಸಂವಿಧಾನದಲ್ಲಿನ್ಯಾಯಾಂಗಕ್ಕೆ ಅತ್ಯಮೂಲ್ಯ ಸ್ಥಾನವಿದೆ. ದೇಶದ ಅಭಿವೃದ್ಧಿಯಲ್ಲಿನ್ಯಾಯಾಂಗ ವ್ಯವಸ್ಥೆ ಪರಿಣಾಮಕಾರಿಯಾಗಿದ್ದು, ಇಡೀ ವಿಶ್ವದಲ್ಲಿಯೇ ಭಾರತೀಯ ನ್ಯಾಯಾಂಗ ವ್ಯವಸ್ಥೆ ಸರ್ವ ಶ್ರೇಷ್ಠ ಹಾಗೂ ಸದೃಢವಾಗಿದೆ. ಕಾನೂನು ವಿದ್ಯಾರ್ಥಿಗಳಿಗೆ ಇದನ್ನು ಅರ್ಥ ಮಾಡಿಕೊಂಡು ಆ ವ್ಯವಸ್ಥೆಯೊಳಗೆ ಜ್ಞಾನವಂತರಾಗಿ ಬರಬೇಕು ಎಂದರು. ವಿವಿಧ ಹಂತಗಳ ನ್ಯಾಯಾಲಯದ ಕಾರ್ಯಕಲಾಪಗಳನ್ನು

ನ್ಯಾಯಾಂಗ ಹುದ್ದೆ ಅತ್ಯಂತ ಶ್ರೇಷ್ಠವಾದದ್ದು: ನ್ಯಾ. ವಿಶ್ವಜಿತ್ ಶೆಟ್ಟಿ | ವಿವೇಕಾನಂದ ಕಾನೂನು ಮಹಾವಿದ್ಯಾಲಯದ 35ನೇ ವಾರ್ಷಿಕೋತ್ಸವ Read More »

ಬೆಳ್ತಂಗಡಿಯಲ್ಲಿ ಸೌಜನ್ಯ ಕೊಲೆ ಆರೋಪಿಗಳ ಪತ್ತೆಗೆ ಮರು ತನಿಖೆಗೆ ಆಗ್ರಹಿಸಿ ಪ್ರತಿಭಟನೆ | ಬೃಹತ್ ಸಂಖ್ಯೆಯಲ್ಲಿ ಸೇರಿದ ಜನ | ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವ

ಬೆಳ್ತಂಗಡಿ : ಹನ್ನೊಂದು ವರ್ಷಗಳ ಹಿಂದೆ ಬೆಳ್ತಂಗಡಿಯಲ್ಲಿ ನಡೆದ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಬೆಳ್ತಂಗಡಿ ತಾಲೂಕು ಕಚೇರಿ ಎದುರು ಆ.27 ಭಾನುವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಬೃಹತ್ ಸಂಖ್ಯೆಯಲ್ಲಿ ಜನ ಪಾಲ್ಗೊಳ್ಳುತ್ತಿದ್ದಾರೆ. ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ದ.ಕ. ಹಾಗೂ ಉಡುಪಿ ಜಿಲ್ಲಾ ಶಾಸಕರಿಂದ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನೆಯಲ್ಲಿ ಬೃಹತ್ ಸಂಖ್ಯೆಯಲ್ಲಿ ಜನ ಭಾಗಿಯಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಸೌಜನ್ಯ ಗೆ ನ್ಯಾಯ ದೊರಕಬೇಕು ಎಂಬ ನಿಟ್ಟಿನಲ್ಲಿ ಬಜರಂಗದಳ, ವಿಶ್ವಹಿಂದೂ

ಬೆಳ್ತಂಗಡಿಯಲ್ಲಿ ಸೌಜನ್ಯ ಕೊಲೆ ಆರೋಪಿಗಳ ಪತ್ತೆಗೆ ಮರು ತನಿಖೆಗೆ ಆಗ್ರಹಿಸಿ ಪ್ರತಿಭಟನೆ | ಬೃಹತ್ ಸಂಖ್ಯೆಯಲ್ಲಿ ಸೇರಿದ ಜನ | ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವ Read More »

error: Content is protected !!
Scroll to Top