ಭಾರತದ ಚಂದ್ರಯಾನ 3 ಯಶಸ್ವಿ |  ಕುಂಬ್ರದಲ್ಲಿ ಬಿಜೆಪಿ ವತಿಯಿಂದ ಹರ್ಷಾಚರಣೆ

ಪುತ್ತೂರು: ಭಾರತದ ಇಸ್ರೋ ವಿಜ್ಞಾನ ಸಂಸ್ಥೆಯು ನಡೆಸಿದ ಚಂದ್ರಯಾನ 3 ಯಶಸ್ವಿಯಾದ ಹಿನ್ನೆಲೆಯಲ್ಲಿ ಕುಂಬ್ರದಲ್ಲಿ ಬಿಜೆಪಿ ವತಿಯಿಂದ ಹರ್ಷ ಆಚರಿಸಲಾಯಿತು. ಪಟಾಕಿ ಸಿಡಿಸಿ, ಭಾರತ ಮಾತೆಗೆ, ದೇಶದ ಪ್ರಧಾನಿ ನರೇಂದ್ರ ಮೋದಿ ಯವರಿಗೆ ಮತ್ತು ಇಸ್ರೋ ವಿಜ್ಞಾನಿಗಳಿಗೆ ಜೈಕಾರ ಹಾಕಿ ಹರ್ಷ ಆಚರಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರು ರಾಧಾಕೃಷ್ಣ ರೈ , ಜಿಲ್ಲಾ ಎಸ್.ಟಿ ಮೋರ್ಛ ಪ್ರ.ಕಾ ಹರೀಶ್ ಬಿಜತ್ರೆ , ಪುತ್ತೂರು ಗ್ರಾ.ಮಂ.ಪ್ರ.ಕಾರ್ಯದರ್ಶಿ ನಿತೀಶ್ ಕುಮಾರ್ ಶಾಂತಿವನ , ಪುತ್ತೂರು ಬಿಜೆಪಿ […]

ಭಾರತದ ಚಂದ್ರಯಾನ 3 ಯಶಸ್ವಿ |  ಕುಂಬ್ರದಲ್ಲಿ ಬಿಜೆಪಿ ವತಿಯಿಂದ ಹರ್ಷಾಚರಣೆ Read More »

ದಕ್ಷಿಣ ಧ್ರುವದಲ್ಲಿ ಸಾಫ್ಟ್ ಲ್ಯಾಂಡ್ ಆದ ಚಂದ್ರಯಾನ-3 ವಿಕ್ರಮ್ ಲ್ಯಾಂಡರ್

ಇಸ್ರೋ : ಭಾರತದ ಮಹತ್ವಾಕಾಂಕ್ಷೆಯ ಯೋಜನೆಯಾದ ಚಂದ್ರಯಾನ-3 ವಿಕ್ರಮ್ ಲ್ಯಾಂಡರ್ ದಕ್ಷಿಣ ಧ್ರುವದಲ್ಲಿ ಲ್ಯಾಂಡ್ ಆಗುವ ಮೂಲಕ ಯಶಸ್ವಿಯಾಗಿದೆ. ಈ ಕುರಿತು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಘೋಷಿಸಿದೆ. ಬುಧವಾರ ಸಂಜೆ ಸುಮಾರು 6.04 ರ ಹೊತ್ತಿಗೆ ಯಶಸ್ವಿಯಾಗಿ ಸಾಫ್ಟ್ ಲ್ಯಾಂಡ್ ಆಗಿದೆ. ಚಂದ್ರಯಾನ-3 ಯೋಜನೆ ಯಶಸ್ಸು ಕುರಿತು ಪ್ರಧಾನಿ ಮೋದಿ ಮಾತನಾಡಿ, ಇಂತಹಾ ಐತಿಹಾಸಿಕ ಕ್ಷಣಗಳನ್ನು ನೋಡಿದಾಗ ತುಂಬಾ ಹೆಮ್ಮೆಯಾಗುತ್ತಿದೆ. ಇದು ನವ ಭಾರತದ ಉದಯ ಎಂದು ಕೊಂಡಾಡಿದರು.

ದಕ್ಷಿಣ ಧ್ರುವದಲ್ಲಿ ಸಾಫ್ಟ್ ಲ್ಯಾಂಡ್ ಆದ ಚಂದ್ರಯಾನ-3 ವಿಕ್ರಮ್ ಲ್ಯಾಂಡರ್ Read More »

ಮುಂದಿನ ಒಂದೂವರೆ ತಿಂಗಳಲ್ಲಿ 94ಸಿ, 94ಸಿಸಿ ಎಲ್ಲಾ ಕಡತಗಳು ವಿಲೇವಾರಿಯಾಗಬೇಕು : ಕಂದಾಯ ಅಧಿಕಾರಿಗಳಿಗೆ ಶಾಸಕರ ಸೂಚನೆ | ತಾಲೂಕು ಮಟ್ಟದ ಕಂದಾಯ ಅಧಿಕಾರಿಗಳ ಸಭೆ

ಪುತ್ತೂರು : ತಾಲೂಕಿನಲ್ಲಿ 94ಸಿ, 94ಸಿಸಿ, ಅಕ್ರಮ-ಸಕ್ರಮ ಕಡತಗಳು ಬಹುತೇಕ ವಿಲೇವಾರಿಗೆ ಬಾಕಿಯಿದ್ದು, ಮುಂದಿನ ಒಂದೂವರೆ ತಿಂಗಳಲ್ಲಿ ಎಲ್ಲಾ ಕಡತಗಳ ವಿಲೇವಾರಿಯಾಗಬೇಕು ಎಂದು ಕಂದಾಯ ಅಧಿಕಾರಿಗಳಿಗೆ ಕಡಕ್ ಸೂಚನೆ ನೀಡಿದ್ದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ. ಬುಧವಾರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕಿನ ಕಂದಾಯ ಇಲಾಖಾ ಅಧಿಕಾರಿಗಳ ಸಭೆಯಲ್ಲಿ ಅವರು ಈ ಸೂಚನೆ ನೀಡಿದರು. ಕಂದಾಯ ಇಲಾಖೆಯಲ್ಲಿ ಹತ್ತಾರು ಸಮಸ್ಯೆಗಳಿದ್ದು, ಅವುಗಳನ್ನು ಶೀಘ್ರ ಸರಿಪಡಿಸಬೇಕಾಗಿದೆ ಎಂದು ತಿಳಿಸಿದರು. ತಾಲೂಕಿನಲ್ಲಿ ಸುಮಾರು 2438 94 ಸಿ ಹಾಗೂ

ಮುಂದಿನ ಒಂದೂವರೆ ತಿಂಗಳಲ್ಲಿ 94ಸಿ, 94ಸಿಸಿ ಎಲ್ಲಾ ಕಡತಗಳು ವಿಲೇವಾರಿಯಾಗಬೇಕು : ಕಂದಾಯ ಅಧಿಕಾರಿಗಳಿಗೆ ಶಾಸಕರ ಸೂಚನೆ | ತಾಲೂಕು ಮಟ್ಟದ ಕಂದಾಯ ಅಧಿಕಾರಿಗಳ ಸಭೆ Read More »

ಆಲಂಕಾರು ಶ್ರೀ ಭಾರತಿ ವಿದ್ಯಾಸಂಸ್ಥೆಯ ಬಾಲಕಿಯರ ಕಬಡ್ಡಿ ತಂಡ ದಕ್ಷಿಣ ಭಾರತ ಮಟ್ಟಕ್ಕೆ ಆಯ್ಕೆ

ಆಲಂಕಾರು:   ಆಲಂಕಾರು ಶ್ರೀ ಭಾರತಿ  ವಿದ್ಯಾ ಸಂಸ್ಥೆಗಳ ಬಾಲಕಿಯರ ತಂಡ ವಿದ್ಯಾಭಾರತಿ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ 14ನೇ ವಯೋಮಾನದ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ವಿದ್ಯಾಭಾರತಿ ದ.ಕ ಜಿಲ್ಲೆ ಇದರ ಆಶ್ರಯದಲ್ಲಿ ಮಂಗಳೂರು ಶಕ್ತಿನಗರ ಶಕ್ತಿ ವಿದ್ಯಾಸಂಸ್ಥೆಯಲ್ಲಿ ನಡೆದ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ದಕ್ಷಿಣ ಭಾರತ ಮಟ್ಟಕ್ಕೆ ಆಯ್ಕೆಯಾಗಿದೆ. ಆಲಂಕಾರು ಶ್ರೀ ಭಾರತಿ ವಿದ್ಯಾ ಸಂಸ್ಥೆಯ ಬಾಲಕಿಯರ ತಂಡ ಅಂತಿಮ ಸುತ್ತಿನಲ್ಲಿ ಮಂಡ್ಯ ಜಿಲ್ಲೆಯನ್ನು ಸೊಲಿಸಿ  ವಿದ್ಯಾ ಭಾರತಿಯ, ಮಧ್ಯಕ್ಷೇತ್ರಿಯ ದಕ್ಷಿಣ ಭಾರತ

ಆಲಂಕಾರು ಶ್ರೀ ಭಾರತಿ ವಿದ್ಯಾಸಂಸ್ಥೆಯ ಬಾಲಕಿಯರ ಕಬಡ್ಡಿ ತಂಡ ದಕ್ಷಿಣ ಭಾರತ ಮಟ್ಟಕ್ಕೆ ಆಯ್ಕೆ Read More »

ಆ.26 : ಸವಣೂರು ರೈತ ಉತ್ಪಾದಕ ಕಂಪೆನಿ ವತಿಯಿಂದ ಷೇರು ಪತ್ರ ವಿತರಣೆ, ಅಡಿಕೆ ಕೃಷಿ ಕುರಿತು ಮಾಹಿತಿ, ಹೊಸ ಸದಸ್ಯರ ನೋಂದಾವಣೆ

ಸವಣೂರು: ಕಾಣಿಯೂರು ಸವಣೂರು ರೈತ ಉತ್ಪಾದಕ ಕಂಪೆನಿ ಲಿ. ಆಶ್ರಯದಲ್ಲಿ ಪಾಲ್ತಾಡಿ ಗ್ರಾಮದ ಸದಸ್ಯರಿಗೆ ಷೇರು ಪತ್ರ ವಿತರಣೆ, ಅಡಿಕೆ ಕೃಷಿಯ ಸಮಗ್ರ ನಿರ್ವಹಣೆ ಕುರಿತು ಮಾಹಿತಿ ಹಾಗೂ ಹೊಸ ಸದಸ್ಯರ ನೋಂದಾವಣೆ ಆ.26 ಶನಿವಾರ ಬೆಳಿಗ್ಗೆ 10.30 ಕ್ಕೆ ಪಾಲ್ತಾಡಿ ಚೆನ್ನಾವರ ಶ್ರೀ ಉಳ್ಳಾಕುಲು ದೈವಸ್ಥಾನದ ವಠಾರದಲ್ಲಿ ನಡೆಯಲಿದೆ. ಕಂಪೆನಿಗೆ ಇನ್ನೂ ಸದಸ್ಯತನ ಪಡೆಯದ 15 ಸೆಂಟ್ಸ್ ಗಿಂತ ಹೆಚ್ಚಿನ ಜಮೀನು ಹೊಂದಿರುವ ಎಲ್ಲಾ ರೈತ ಬಾಂಧವರು ಆರ್ ಟಿಸಿ, ಆಧಾರ್, ಮೂರು ಫೋಟೊ, ಪಾನ್

ಆ.26 : ಸವಣೂರು ರೈತ ಉತ್ಪಾದಕ ಕಂಪೆನಿ ವತಿಯಿಂದ ಷೇರು ಪತ್ರ ವಿತರಣೆ, ಅಡಿಕೆ ಕೃಷಿ ಕುರಿತು ಮಾಹಿತಿ, ಹೊಸ ಸದಸ್ಯರ ನೋಂದಾವಣೆ Read More »

ಚಂದ್ರಯಾನ-3 : ಇಸ್ರೋದಿಂದ ಮಹತ್ವದ ಮಾಹಿತಿ

ಇಸ್ರೋ: ಚಂದ್ರಯಾನ-3 ಯೋಜನೆಯ ಭಾಗವಾಗಿರುವ ವಿಕ್ರಂ ಲ್ಯಾಂಡರ್‌ ಚಂದ್ರನ ನೆಲಕ್ಕಿಳಿದು ಇತಿಹಾಸ ಬರೆಯಲು ಸನ್ನದ್ಧವಾಗಿದ್ದು, ಸಂಜೆ 5.45 ಕ್ಕೆ ಲ್ಯಾಂಡರ್ ಚಂದ್ರನಲ್ಲಿ ಕಾಲೂರಲಿದೆ. ಈ ಮೂಲಕ ಅಲ್ಲಿಗೆ ತಲುಪಿದ ಮೊದಲ ದೇಶ ಎಂಬ ಶ್ರೇಯಕ್ಕೆ ಪಾತ್ರವಾಗಲಿದೆ. ಸಂಜೆ 5.20 ಕ್ಕೆ ಇಸ್ರೋದಿಂದ ನೇರ ಪ್ರಸಾರಗೊಳ್ಳಲಿದೆ.   ಯೋಜನೆಯ ಹೊಣೆ ಹೊತ್ತಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) 140 ಕೋಟಿ ಭಾರತೀಯರ ಜೊತೆ ಈ ರೋಚಕ ಕ್ಷಣಕ್ಕಾಗಿ ಉಸಿರು ಬಿಗಿಹಿಡಿದು ಕಾದಿದ್ದರೆ, ಇಡೀ ವಿಶ್ವ ಭಾರತದತ್ತ ಕುತೂಹಲದ

ಚಂದ್ರಯಾನ-3 : ಇಸ್ರೋದಿಂದ ಮಹತ್ವದ ಮಾಹಿತಿ Read More »

ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕಾರ್ಯಾಲಯ ಉದ್ಘಾಟನೆ

ಕಾಣಿಯೂರು: ಕುದ್ಮಾರು ಗ್ರಾಮದ ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕಾರ್ಯಾಲಯದ ಉದ್ಘಾಟನೆ ಆ.23 ಬುಧವಾರ ನಡೆಯಿತು. ಉದ್ಘಾಟನೆ ಅಂಗವಾಗಿ ದೇವಸ್ಥಾನದ ಅರ್ಚಕರಿಂದ ಗಣಹೋಮ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.

ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕಾರ್ಯಾಲಯ ಉದ್ಘಾಟನೆ Read More »

ಸೌಜನ್ಯ ಹತ್ಯೆ ಆರೋಪಿಗಳಿಗೆ ಶೀಘ್ರ ಶಿಕ್ಷೆಯಾಗುವಂತೆ ಕಾಶ್ಮೀರದ ಅಮರನಾಥದಲ್ಲಿ ಪ್ರಾರ್ಥನೆ

ಪುತ್ತೂರು: ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಜಿಲ್ಲೆಯ ಕಾರ್ಯಕರ್ತರಿಂದ ಸಹೋದರಿ ಸೌಜನ್ಯಳಿಗೆ ನ್ಯಾಯ ಸಿಗಬೇಕೇಂದು ಕಾಶ್ಮೀರದ ಅಮರನಾಥದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ಕಾಶ್ಮೀರದ ಅಮರನಾಥ ಯಾತ್ರೆಯಲ್ಲಿರುವ ವಿಶ್ವ ಹಿಂದೂ ಪರಿಷದ್ ಬಜರಂಗದಳದ ಪುತ್ತೂರು ಜಿಲ್ಲೆಯ ಕಾರ್ಯಕರ್ತರು ಕುಮಾರಿ ಸೌಜನ್ಯಳ ಹತ್ಯೆ ಆರೋಪಿಗಳಿಗೆ ಶೀಘ್ರವಾಗಿ ಶಿಕ್ಷೆ ಸಿಗಬೇಕು ಹಾಗೂ ಸೌಜನ್ಯಳಿಗೆ ನ್ಯಾಯ ಸಿಗಬೇಕು ಎಂದು ಅಮರನಾಥದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ವಿಹಿಂಪ, ಬಜರಂಗದಳ ಕಾರ್ಯಕರ್ತರು ಉಪಸ್ಥಿತರಿದ್ದರು.

ಸೌಜನ್ಯ ಹತ್ಯೆ ಆರೋಪಿಗಳಿಗೆ ಶೀಘ್ರ ಶಿಕ್ಷೆಯಾಗುವಂತೆ ಕಾಶ್ಮೀರದ ಅಮರನಾಥದಲ್ಲಿ ಪ್ರಾರ್ಥನೆ Read More »

ಚಂದ್ರಯಾನ-3 ಯಶಸ್ವಿಗಾಗಿ ಶರವೂರು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಸರ್ವಸೇವೆ

ಕಡಬ: ಕಡಬ ತಾಲೂಕಿನ ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ದಲ್ಲಿ ಚಂದ್ರಯಾನ-3 ಯಶಸ್ವಿಗಾಗಿ ಬುಧವಾರ ಪೂಜೆ ಸಲ್ಲಿಸಲಾಯಿತು. ಚಂದ್ರಯಾನ-3 ಯಶಸ್ವಿಗಾಗಿ ಶ್ರೀ ಕ್ಷೇತ್ರದಲ್ಲಿ ಮದ್ಯಾಹ್ನ ಗಂಟೆ 12.00ಕ್ಕೆ ವಿಶೇಷ ಪ್ರಾರ್ಥನೆ ಹಾಗೂ ಸರ್ವಸೇವೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯವರು, ಭಕ್ತಾದಿಗಳು, ಉಪಸ್ಥಿತರಿದ್ದರು.

ಚಂದ್ರಯಾನ-3 ಯಶಸ್ವಿಗಾಗಿ ಶರವೂರು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಸರ್ವಸೇವೆ Read More »

ಸಂಪ್ಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಸೀತಾರಾಮ ಶೆಟ್ಟಿ ನಿಧನ

ಪುತ್ತೂರು: ಸಂಪ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ, ಸೀತಾರಾಮ ಶೆಟ್ಟಿ ಹೃದಯಾಘಾತದಿಂದ ಬುಧವಾರ ನಿಧನರಾದರು. ಆರ್ಯಾಪು ಗ್ರಾಮದ ಕಂಬಳತ್ತಡ್ಡ ನಾರಾಯಣ ಶೆಟ್ಟಿಯವರ ಪುತ್ರರಾಗಿದ್ದು, ನೈತ್ತಾಡಿಯ ಕಲ್ಲಗುಡ್ಡೆ ಎಂಬಲ್ಲಿ ಬಾರ್ & ರೆಸ್ಟೋರೆಂಟ್ ನ್ನು ನಿರ್ವಹಣೆ ಮಾಡುತ್ತಿದ್ದರು. ಸೀತಾರಾಮ ಶೆಟ್ಟಿ ಅವರು ಎಂದಿನಂತೆ ರೆಸ್ಟೋರೆಂಟ್ ಗೆ ಬಂದಿದ್ದ ವೇಳೆ ಹಠಾತ್ತನೇ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಅವರು ಮೃತಪಟ್ಟಿದ್ದಾರೆ.

ಸಂಪ್ಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಸೀತಾರಾಮ ಶೆಟ್ಟಿ ನಿಧನ Read More »

error: Content is protected !!
Scroll to Top