ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯಿಂದ ಸಮಾಲೋಚನಾ ಸಭೆ

ಸುಬ್ರಹ್ಮಣ್ಯ: ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತರಕ್ಷಣಾ ಸಮಿತಿ ಸಮಾಲೋಚನಾ ಸಭೆಯನ್ನು ಏರ್ಪಡಿಸಿದೆ. ಆ.22 ರಂದು ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಬೆಳಿಗ್ಗೆ 11 ಗಂಟೆಗೆ ಸಭೆಯನ್ನು ಆಯೋಜಿಸಲಾಗಿದ್ದು, ಸುಬ್ರಹ್ಮಣ್ಯ ಗ್ರಾಪಂ ಸಭಾಭವನದ ಬಳಿ ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸದೇ ಯಥಾವತ್ತಾಗಿ ಮತ್ತು ಕರ್ನಾಟಕ ರೈತರ ಹಿತಾಶಕ್ತಿಗೆ ವಿರುದ್ಧವಾಗಿ ಕ್ರಮಕೈಗೊಳ್ಳುತ್ತಿದ್ದು, ಇದನ್ನು ವಿರೋಧಿಸಿ ಸಮಾಲೋಚನಾ ಸಭೆ ಕರೆಯಲಾಗಿದೆ. ಸಭೆಯಲ್ಲಿ ಸಮಾನ ಮನಸ್ಕರು, ಮಲೆನಾಡು ಜನಹಿತರಕ್ಷಣಾ ಸಮಿತಿ ಸದಸ್ಯರು, ಸಾರ್ವಜನಿಕರು ಪಾಲ್ಗೊಳ್ಳುವಂತೆ ಮಲೆನಾಡು ಜನಹಿತ ರಕ್ಷಣಾ ಸಮಿತಿ […]

ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯಿಂದ ಸಮಾಲೋಚನಾ ಸಭೆ Read More »

ವಿದ್ಯಾಭಾರತಿ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ತಂಡಕ್ಕೆ ದ್ವಿತೀಯ ಸ್ಥಾನ

ಪುತ್ತೂರು: ಬೆಳಗಾವಿಯ ಸಂತ ಮೀರಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ವಿದ್ಯಾಭಾರತಿ ರಾಜ್ಯಮಟ್ಟದ  ಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ದ್ವಿತೀಯ ಸ್ಥಾನ ಪಡೆದಿದೆ. ತಂಡವನ್ನು ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಧನುಷ್ ಆರ್, ಲಿಖಿತ್ ಗೌಡ ಕೆ, ವಾಣಿಜ್ಯ ವಿಭಾಗದ ನಿರ್ಮಿತ್ ,ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿನಯ್ ಡಿ, ವಿಜ್ಞಾನ ವಿಭಾಗದ ಮೋನಿಷ್ ಪ್ರತಿನಿಧಿಸಿದ್ದರು. ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿನಯ್ ಡಿ ಆರ್ಟಿಸ್ಟಿಕ್‌ನಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ವಿದ್ಯಾರ್ಥಿಗಳು ಕಾಲೇಜಿನ

ವಿದ್ಯಾಭಾರತಿ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ತಂಡಕ್ಕೆ ದ್ವಿತೀಯ ಸ್ಥಾನ Read More »

ಕಾವೇರುತ್ತಿರುವ ಸೌಜನ್ಯ ಕೊಲೆ ಪ್ರಕರಣ | ಜಿಲ್ಲೆಯಾದ್ಯಂತ ಪ್ರತಿಭಟನೆ | ಜವಾಬ್ದಾರಿ ಸ್ಥಾನದಲ್ಲಿರುವ ಸಚಿವ ಜಿ.ಪರಮೇಶ್ವರ್ ಸಾವಿನ ತನಿಖೆ ಮುಗಿದಿದೆ ಎಂದು ಹೇಳಿಕೆ ನೀಡಿರುವುದು ಸರಿಯೇ? | ಹಾಗಾದರೆ ಪ್ರಕರಣದ ನೈಜ ಆರೋಪಿಗಳ ಪತ್ತೆಯಾಗದೇ ಇರುವುದು ತನಿಖಾಧಿಕಾರಿಗಳ ವೈಫಲ್ಯವೇ ? | ಹಾಗಾದರೇ ಸೌಜನ್ಯ ಸಾವಿಗೆ ನ್ಯಾಯ ದೊರಕಿಸಿಕೊಡುವವರು ಯಾರು?

ವಿಟ್ಲ: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ ಶಾಂತಿನಗರ ವಿಟ್ಟ, ಯುವ ಘಟಕ ಹಾಗೂ ಮಹಿಳಾ ಸಂಘ, ಗೌಡರ ಸ್ವಸಹಾಯ ಸಂಘಗಳ ಒಕ್ಕೂಟ ಬಂಟ್ವಾಳ ವಲಯ ನೇತೃತ್ವದಲ್ಲಿ ಕುಮಾರಿ ಸೌಜನ್ಯಳ ಸಾವಿಗೆ ನ್ಯಾಯ ದೊರಕಿಸಿಕೊಡಲು ಹಕ್ಕೊತ್ತಾಯ ಮಾಡುವ ಬೃಹತ್ ಪ್ರತಿಭಟನಾ ಮೆರವಣಿಗೆಯು ಆ.19 ಬೆಳಿಗ್ಗೆ ವಿಟ್ಲದಲ್ಲಿ ನಡೆಯಿತು. ಧರ್ಮಸ್ಥಳದ ಕುಮಾರಿ ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಮಾಡಿದ ನೈಜ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕೆಂದು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ, ಅಲ್ಲಿಂದ ವಿಟ್ಲ ಜಂಕ್ಷನ್

ಕಾವೇರುತ್ತಿರುವ ಸೌಜನ್ಯ ಕೊಲೆ ಪ್ರಕರಣ | ಜಿಲ್ಲೆಯಾದ್ಯಂತ ಪ್ರತಿಭಟನೆ | ಜವಾಬ್ದಾರಿ ಸ್ಥಾನದಲ್ಲಿರುವ ಸಚಿವ ಜಿ.ಪರಮೇಶ್ವರ್ ಸಾವಿನ ತನಿಖೆ ಮುಗಿದಿದೆ ಎಂದು ಹೇಳಿಕೆ ನೀಡಿರುವುದು ಸರಿಯೇ? | ಹಾಗಾದರೆ ಪ್ರಕರಣದ ನೈಜ ಆರೋಪಿಗಳ ಪತ್ತೆಯಾಗದೇ ಇರುವುದು ತನಿಖಾಧಿಕಾರಿಗಳ ವೈಫಲ್ಯವೇ ? | ಹಾಗಾದರೇ ಸೌಜನ್ಯ ಸಾವಿಗೆ ನ್ಯಾಯ ದೊರಕಿಸಿಕೊಡುವವರು ಯಾರು? Read More »

ಕಾರಣಿಕ ಕ್ಷೇತ್ರ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೋಣ ಶನಿವಾರದಂದು ವಿಶೇಷ ಪೂಜೆ, ಸೋಣ ಶನಿವಾರ ವೃತಧಾರಿಗಳಿಗೆ ಅನ್ನದಾನ | ಆ.21 : ನಾಗರ ಪಂಚಮಿ ಹಬ್ಬ

ಪುತ್ತೂರು: ಕಾರಣಿಕ ಕ್ಷೇತ್ರ ಆರ್ಯಾಪು ಗ್ರಾಮದ  ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ19, 26, ಸೆ.2, 9 ಹಾಗೂ ಸೆ.16 ರ ಶನಿವಾರದಂದು ವಿಶೇಷ ಪೂಜೆ ಹಾಗೂ ಸೋಣ ಶನಿವಾರದ ವೃತಧಾರಿಗಳಿಗೆ ಅನ್ನದಾನ ನಡೆಯಲಿದೆ. ಈ ದಿನಗಳಲ್ಲಿ ಸರ್ವಸೇವೆ, ಮಹಾಪೂಜೆ, ಕ್ಷೀರಾಭಿಷೇಕ, ಬಲಿವಾಡು ಸೇವೆ, ಕಲಶಸ್ನಾನ, ಹೂವಿನ ಪೂಜೆ, ಎಳ್ಳೆಣ್ಣೆ ಸೇವೆ, ಕುಂಕುಮಾರ್ಚನೆ ಸೇವೆ ನಡೆಯಲಿದೆ. ಅಲ್ಲದೆ ಪ್ರತಿ ವರ್ಷದಂತೆ ನಾಗರ ಪಂಚಮಿ ಹಬ್ಬ ಆ.21 ಸೋಮವಾರ ನಡೆಯಲಿದ್ದು, ಹಬ್ಬದ ಅಂಗವಾಗಿ ಬೆಳಿಗ್ಗೆ 7.30 ರಿಂದ ಮಧ್ಯಾಹ್ನ

ಕಾರಣಿಕ ಕ್ಷೇತ್ರ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೋಣ ಶನಿವಾರದಂದು ವಿಶೇಷ ಪೂಜೆ, ಸೋಣ ಶನಿವಾರ ವೃತಧಾರಿಗಳಿಗೆ ಅನ್ನದಾನ | ಆ.21 : ನಾಗರ ಪಂಚಮಿ ಹಬ್ಬ Read More »

ವೈದ್ಯರ ನಿರ್ಲ್ಯಕ್ಷದಿಂದ ಯುವಕ ಸಾವು | ಸಾವಿಗೆ ಕಾರಣರಾದವರನ್ನು ತಕ್ಷಣ ಬಂಧಿಸಬೇಕು ಎಂದು ಆಗ್ರಹಿಸಿ ಆ.24 ರಂದು ಪ್ರತಿಭಟನೆ

ಪುತ್ತೂರು: ಪುತ್ತೂರು ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಮೃತಪಟ್ಟ ಹಿನ್ನೆಲೆಯಲ್ಲಿ ವೈದ್ಯರ ನಿರ್ಲಕ್ಷವೆಂದು ಆರೋಪಿಸಿ ವೈದ್ಯರನ್ನು ತಕ್ಷಣ ಬಂಧಿಸಬೇಕು ಮತ್ತು ಸರಕಾರ ನೊಂದ ಕುಟುಂಬಕ್ಕೆ ರೂ. 25ಲಕ್ಷ ಪರಿಹಾರ ಕೊಡಿಸಬೇಕೆಂದು ಆಗ್ರಹಿಸಿ ದ.ಕ.ದಲಿತ್ ಸೇವಾ ಸಮಿತಿಯಿಂದ ಪುತ್ತೂರು ನಗರ ಪೊಲೀಸ್ ಠಾಣೆ ಮುಂದೆ ಆ.24ರಂದು ಪ್ರತಿಭಟನೆ ನಡೆಸುವುದಾಗಿ ದ.ಕ.ಜಿಲ್ಲಾ ದಲಿತ್ ಸೇವಾ ಸಮಿತಿ ಸ್ಥಾಪಕ ಅಧ್ಯಕ್ಷ ಬಿ.ಕೆ.ಸೇಸಪ್ಪ ಬೆದ್ರಕಾಡು ತಿಳಿಸಿದ್ದಾರೆ. ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸುಳ್ಯ ತಾಲೂಕಿನ ಶ್ರೀಜಿತ್ ಎಂಬ ಯುವಕನನ್ನು ಹೊಟ್ಟೆನೋವೆಂದು ಪುತ್ತೂರು ಚೇತನಾ

ವೈದ್ಯರ ನಿರ್ಲ್ಯಕ್ಷದಿಂದ ಯುವಕ ಸಾವು | ಸಾವಿಗೆ ಕಾರಣರಾದವರನ್ನು ತಕ್ಷಣ ಬಂಧಿಸಬೇಕು ಎಂದು ಆಗ್ರಹಿಸಿ ಆ.24 ರಂದು ಪ್ರತಿಭಟನೆ Read More »

ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಿಶೇಷ ಸಾಧನೆಗೆ ಎಸ್‍ಸಿಡಿಸಿಸಿ ಬ್ಯಾಂಕ್‍ನಿಂದ ಪ್ರಶಸ್ತಿ

ಪುತ್ತೂರು: ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ತನ್ನ ವ್ಯವಹಾರ ಕ್ಷೇತ್ರದ ಸಾಧನೆಗಾಗಿ ಸತತ 12 ನೇ ಬಾರಿ ಎಸ್‌ಸಿಡಿಸಿಸಿ ಬ್ಯಾಂಕ್‌ನ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಆ.19 ರಂದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಉತ್ಕೃಷ್ಟ ಸೌಧದಲ್ಲಿ ನಡೆದ ಎಸ್‌ಸಿಡಿಸಿಸಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ರವರು ಸವಣೂರು ಸಿ.ಎ.ಬ್ಯಾಂಕಿನ ಅಧ್ಯಕ್ಷ ಗಣೇಶ್ ನಿಡ್ವಣ್ಣಾಯ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ ಪಿ.ರವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಸವಣೂರು ಸಿ.ಎ. ಬ್ಯಾಂಕಿನ ಉಪಾಧ್ಯಕ್ಷ

ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಿಶೇಷ ಸಾಧನೆಗೆ ಎಸ್‍ಸಿಡಿಸಿಸಿ ಬ್ಯಾಂಕ್‍ನಿಂದ ಪ್ರಶಸ್ತಿ Read More »

ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ವಿಶೇಷ ಸಾಧನೆಗೆ ಎಸ್‍ಸಿಡಿಸಿಸಿ ಬ್ಯಾಂಕ್‍ ನಿಂದ ಪ್ರಶಸ್ತಿ | ಪ್ರಶಸ್ತಿ ಸ್ವೀಕರಿಸಿದ ಅಧ್ಯಕ್ಷ ಚಿದಾನಂದ ಬೈಲಾಡಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಧಾಕರ್

ಪುತ್ತೂರು: ಕಡಬ, ಉಪ್ಪಿನಂಗಡಿ, ನೆಲ್ಯಾಡಿ, ಕುಂಬ್ರ, ಆಲಂಕಾರು, ಕಾಣಿಯೂರು, ಪುತ್ತೂರು ಸೇರಿದಂತೆ 9 ಶಾಖೆಗಳನ್ನು ಹೊಂದಿರುವ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ 2022-23ನೇ ಸಾಲಿನ ಆರ್ಥಿಕ ವರ್ಷದಲ್ಲಿ ಮಾಡಿದ ವಿಶಿಷ್ಟ ಸಾಧನೆಗಾಗಿ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ ನಿಂದ ಆ.19 ರಂದು ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಧಾಕರ್ ಪ್ರಶಸ್ತಿ ಸ್ವೀಕರಿಸಿದರು. ಎಸ್‍ಸಿಡಿಸಿಸಿ ಬ್ಯಾಂಕ್‍ ಅಧ್ಯಕ್ಷ ರಾಜೇಂದ್ರ ಕುಮಾರ್ ಹಾಗೂ ನಿರ್ದೇಶಕರು ಪ್ರಶಸ್ತಿ ಪ್ರದಾನ ಮಾಡಿದರು. ಸತತ ಎರಡನೇ

ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ವಿಶೇಷ ಸಾಧನೆಗೆ ಎಸ್‍ಸಿಡಿಸಿಸಿ ಬ್ಯಾಂಕ್‍ ನಿಂದ ಪ್ರಶಸ್ತಿ | ಪ್ರಶಸ್ತಿ ಸ್ವೀಕರಿಸಿದ ಅಧ್ಯಕ್ಷ ಚಿದಾನಂದ ಬೈಲಾಡಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಧಾಕರ್ Read More »

ಬೆಟ್ಟಂಪಾಡಿಯ ಸ. ಪ. ಕಾಲೇಜಿನಲ್ಲಿ ‘ವಿಶೇಷ ಉಪನ್ಯಾಸ ಕಾರ್ಯಕ್ರಮ’

ಪುತ್ತೂರು: ಬೆಟ್ಟಂಪಾಡಿಯ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯ ಕಾಲೇಜಿನ ಕಾನೂನು ಅರಿವು – ನೆರವು ಘಟಕದ ವತಿಯಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆ ಉಪನಿರೀಕ್ಷಕ ಧನಂಜಯ ಬಿ.ಸಿ. ‘ಡ್ರಗ್ಸ್ ಮುಕ್ತ ಸಮಾಜ’ ಎಂಬ ವಿಷಯದ ಬಗ್ಗೆ ಮಾತನಾಡಿ, ಮದ್ಯಪಾನ, ಧೂಮಪಾನ ಮತ್ತು ಡ್ರಗ್ಸ್‌ಗಳಂತಹ ಸಾಮಾಜಿಕ ಪಿಡುಗುಗಳಿಗೆ ಯುವ ಜನಾಂಗ ದಾಸರಾಗಿ ಅನೇಕ ಕಾಯಿಲೆಗಳಿಗೆ ತುತ್ತಾಗುವುದರ ಜತೆಗೆ ದೇಶ ದುರ್ಬಲಗೊಳಿಸುತ್ತಿದ್ದಾರೆ ಎಂದರು. ಇಂತಹ ಪರಿಸ್ಥಿತಿಯನ್ನು ತೊಡೆದು ಹಾಕಿ

ಬೆಟ್ಟಂಪಾಡಿಯ ಸ. ಪ. ಕಾಲೇಜಿನಲ್ಲಿ ‘ವಿಶೇಷ ಉಪನ್ಯಾಸ ಕಾರ್ಯಕ್ರಮ’ Read More »

ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

ಪುಣಚ: ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಆ.19 ಶನಿವಾರ ನಡೆಯಿತು. ಬ್ರಹ್ಮಶ್ರೀ ವರ್ಕಾಡಿ ಗಣೇಶ ತಂತ್ರಿಗಳ ನೇತ್ರತ್ವದಲ್ಲಿ, ವೇದಮೂರ್ತಿ ಶ್ರೀವತ್ಸ ಕೆದಿಲಾಯರವರ ಪೌರೋಹಿತ್ಯದಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು. ಪೂಜೆಯ ಬಳಿಕ ಮಹಾಪೂಜೆ ಪ್ರಸಾದ ವಿತರಣೆ ಅನ್ನ ಸಂತರ್ಪಣೆ ನಡೆಯಿತು. ಕಾರ್ಯಕ್ರಮದಲ್ಲಿ ನೂರಾರು ಭಕ್ತಾಧಿಗಳು  ಭಾಗವಹಿಸಿದ್ದರು.

ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ Read More »

ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ತೀರ್ಥಸ್ಥಾನ

ಕಾಣಿಯೂರು: ಇತಿಹಾಸ ಪ್ರಸಿದ್ಧ ಕುದ್ಮಾರು ಗ್ರಾಮದ ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ಮೊದಲ ಶನಿವಾರದ ವಿಶೇಷ ತೀರ್ಥಸ್ನಾನವು ಆ 19ರಂದು ನಡೆಯಿತು. ಭಕ್ತಾದಿಗಳು ಮುಂಜಾನೆಯಿಂದಲೇ ಶ್ರೀ ದೇವಸ್ಥಾನಕ್ಕೆ ಆಗಮಿಸಿ ತೀರ್ಥಸ್ಥಾನ ಮಾಡಿದರು. ಬಳಿಕ ದೇವರ ದರ್ಶನ ಮಾಡಿದರು. ಮುಂದಿನ ವಿಶೇಷ ತೀರ್ಥಸ್ಥಾನ ಆ.26, ಸೆ.2, ಸೆ.9 ಹಾಗೂ ಸೆ.16 ರಂದು ನಡೆಯಲಿವೆ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.

ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ತೀರ್ಥಸ್ಥಾನ Read More »

error: Content is protected !!
Scroll to Top