ಬಂಟ್ವಾಳ ಸಗಟು ಗೋದಾಮಿನಿಂದ ಕೋಟಿಗೂ ಮಿಕ್ಕಿ ಮೌಲ್ಯದ ಅಕ್ಕಿ ನಾಪತ್ತೆ | ತನಿಖೆ ಆರಂಭ

ಬಂಟ್ವಾಳ: ನ್ಯಾಯ ಬೆಲೆ ಅಂಗಡಿ, ಸೊಸೈಟಿಗಳ ಮೂಲಕ ಅರ್ಹರಿಗೆ ವಿತರಣೆ ಆಗಬೇಕಾಗಿದ್ದ ಪಡಿತರ ಅಕ್ಕಿ ದಾಸ್ತಾನು ಮಳಿಗೆಯಲ್ಲಿ ಸುಮಾರು 1.32 ಕೋಟಿ ರೂ ಮೌಲ್ಯದ ಅಕ್ಕಿ ನಾಪತ್ತೆಯಾಗಿದ್ದು, ಈ ಕುರಿತು ತನಿಖೆ ಆರಂಭಗೊಂಡಿದೆ. ಈ ಕುರಿತು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಮಂಗಳೂರು ಕಚೇರಿ ವ್ಯವಸ್ಥಾಪಕ ಶರತ್ ಕುಮಾರ್ ಹೋಂಡಾ ಎಂಬವರು ದೂರು ನೀಡಿದ್ದಾರೆ. ಬಂಟ್ವಾಳ ತಾಲೂಕು ಕಳ್ಳಿಗೆ ಗ್ರಾಮದ ಕೆ.ಎಸ್.ಆರ್.ಟಿ.ಸಿ. ಡಿಪೋ ಎದುರು ಇರುವ ಸಗಟು ಗೋದಾಮಿನಿಂದ ಬಂಟ್ವಾಳ ನಗರಕ್ಕೆ ಪಡಿತರ ಅಕ್ಕಿ […]

ಬಂಟ್ವಾಳ ಸಗಟು ಗೋದಾಮಿನಿಂದ ಕೋಟಿಗೂ ಮಿಕ್ಕಿ ಮೌಲ್ಯದ ಅಕ್ಕಿ ನಾಪತ್ತೆ | ತನಿಖೆ ಆರಂಭ Read More »

ಹಿರೇಬಂಡಾಡಿ ಗ್ರಾಪಂ ಅಧ್ಯಕ್ಷರಾಗಿ ಸದಾನಂದ ಶೆಟ್ಟಿ, ಉಪಾಧ್ಯಕ್ಷರಾಗಿ ಶಾಂಭವಿ

ಉಪ್ಪಿನಂಗಡಿ: ಹಿರೇಬಂಡಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಸದಾನಂದ ಶೆಟ್ಟಿ ಹಾಗೂ ಉಪಾಧ್ಯಕ್ಷರಾಗಿ ಶಾಂಭವಿ ಆಯ್ಕೆಯಾಗಿದ್ದಾರೆ. ಒಟ್ಟು 15 ಸದಸ್ಯ ಬಲವನ್ನು ಹಿರೇಬಂಡಾಡಿ ಗ್ರಾ.ಪಂ.ನಲ್ಲಿ 11 ಮಂದಿ ಬಿಜೆಪಿ ಬೆಂಬಲಿತ ಸದಸ್ಯರಾಗಿದ್ದು, 5 ಮಂದಿ ಕಾಂಗ್ರೆಸ್ ಬೆಂಬಲಿತ ಸದಸ್ಯರು. ಇಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮೀಸಲಾತಿ ಬಂದಿತ್ತು. ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಸದಸ್ಯ ಸದಾನಂದ ಶೆಟ್ಟಿ ಹಾಗೂ ಕಾಂಗ್ರೆಸ್ ಬೆಂಬಲಿತ ಸದಸ್ಯ ಸತೀಶ್ ಶೆಟ್ಟಿ ಎಚ್. ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ

ಹಿರೇಬಂಡಾಡಿ ಗ್ರಾಪಂ ಅಧ್ಯಕ್ಷರಾಗಿ ಸದಾನಂದ ಶೆಟ್ಟಿ, ಉಪಾಧ್ಯಕ್ಷರಾಗಿ ಶಾಂಭವಿ Read More »

ಖಾಸಗಿ ಆಂಬುಲೆನ್ಸ್ ವಾಹನ ಪಲ್ಟಿ | ಚಾಲಕ ಮೃತ್ಯು

ಬಿ.ಸಿ.ರೋಡ್ : ರೋಗಿಯೋರ್ವನ್ನು ತುರ್ತಾಗಿ ಮಂಗಳೂರಿಗೆ ಸಾಗಿಸುತ್ತಿದ್ದ ಖಾಸಗಿ ಅಂಬ್ಯುಲೆನ್ಸ್ ವಾಹನವೊಂದು‌ ಅಂಚಿಕಟ್ಟೆ ಎಂಬಲ್ಲಿ ಪಲ್ಟಿಯಾಗಿದ್ದು, ವಾಹನ ಚಾಲಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ,  ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಗುರುವಾಯನಕೆರೆ ನಿವಾಸಿ ಶಬೀರ್ ಮೃತಪಟ್ಟ ಚಾಲಕ. ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಸಾರ ಅಂಬ್ಯುಲೆನ್ಸ್ ವಾಹನ ವಗ್ಗ ಸಮೀಪದ ಕೊಪ್ಪಳ ಅಂಚಿಕಟ್ಟೆ ಎಂಬಲ್ಲಿ ಅಂಬ್ಯುಲೆನ್ಸ್ ವಾಹನ ರಸ್ತೆ ಮಧ್ಯ ಪಲ್ಟಿಯಾಗಿದ್ದು, ಚಾಲಕ ಶಬೀರ್ ಗಂಭೀರವಾಗಿ ಗಾಯಗೊಂಡಿದ್ದಾರೆ, ತಕ್ಷಣ ಆತನನ್ನು ಬೇರೆ

ಖಾಸಗಿ ಆಂಬುಲೆನ್ಸ್ ವಾಹನ ಪಲ್ಟಿ | ಚಾಲಕ ಮೃತ್ಯು Read More »

ನೈತಾಡಿ ಜನನಿ ರೈತ ಉತ್ಪಾದಕರ ಕಂಪೆನಿಯಲ್ಲಿ 77ನೇ ಸ್ವಾತಂತ್ರ್ಯೋತ್ಸವ

ಪುತ್ತೂರು:  ಪುತ್ತೂರು ನೈತಾಡಿ ಜನನಿ ರೈತ ಉತ್ಪಾದಕರ ಕಂಪೆನಿ ನಿಯಮಿತ ವತಿಯಿಂದ 77 ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಕಂಪೆನಿಯ ಆಡಳಿತ ನಿರ್ದೇಶಕ ಅರುಣ್ ಕುಮಾರ್ ಪುತ್ತಿಲ ಧ್ವಜಾರೋಹಣ ನೆರವೇರಿಸಿದರು ಈ ಸಂದರ್ಭದಲ್ಲಿ ಕಂಪೆನಿಯ ನಿರ್ದೇಶಕರು, ಮುಖ್ಯ ಕಾರ್ಯ ನಿರ್ವಹಣ ಅಧಿಕಾರಿ, ಸಿಬ್ಬಂದಿಗಳು ಉಪಸ್ಥಿತರಿದ್ದರು.

ನೈತಾಡಿ ಜನನಿ ರೈತ ಉತ್ಪಾದಕರ ಕಂಪೆನಿಯಲ್ಲಿ 77ನೇ ಸ್ವಾತಂತ್ರ್ಯೋತ್ಸವ Read More »

ಆ.20 : ಮಾಣಿಲ ಕ್ಷೇತ್ರಕ್ಕೆ ಬೃಹತ್ ಹೊರೆಕಾಣಿಕೆ ಮೆರವಣಿಗೆ | ಪುತ್ತೂರಿನಲ್ಲಿ ಹೊರೆಕಾಣಿಕೆ  ಕಾರ್ಯಾಲಯ ಉದ್ಘಾಟನೆ

ಪುತ್ತೂರು: ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತರದಲ್ಲಿ 48 ದಿನಗಳ ಪರ್ಯಂತ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆ ಹಾಗೂ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವೃತಾಚರಣೆ ಅಂಗವಾಗಿ ಪುತ್ತೂರಿನಿಂದ ಆ.20 ರಂದು ಬೃಹತ್ ಹೊರೆಕಾಣಿಕೆ ಮೆರವಣಿಗೆ ನಡೆಯಲಿದ್ದು, ಇದರ ಅಂಗವಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಹೊರೆಕಾಣಿಕೆ ಕಾರ್ಯಾಲಯ ಶುಕ್ರವಾರ ಉದ್ಘಾಟನೆಗೊಂಡಿತು. ಈಗಾಗಲೇ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆ ಜು.16 ರಿಂದ ಆರಂಭಗೊಂಡಿದ್ದು, ಆ.25 ರ ತನಕ ನಡೆಯಲಿದೆ. ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವೃತಾಚರಣೆ ಆ.25 ರಿಂದ ಆರಂಭಗೊಂಡು ಆ.27

ಆ.20 : ಮಾಣಿಲ ಕ್ಷೇತ್ರಕ್ಕೆ ಬೃಹತ್ ಹೊರೆಕಾಣಿಕೆ ಮೆರವಣಿಗೆ | ಪುತ್ತೂರಿನಲ್ಲಿ ಹೊರೆಕಾಣಿಕೆ  ಕಾರ್ಯಾಲಯ ಉದ್ಘಾಟನೆ Read More »

ಧಾರ್ಮಿಕತೆ, ಸಾಂಸ್ಕೃತಿಕತೆ ಹಿರಿಯರ ಉಸಿರಾಗಿತ್ತು: ಕೆ.ಕೆ ಪೇಜಾವರ | ಅಕ್ಷಯ ಕಾಲೇಜಿನಲ್ಲಿ ಸಂಭ್ರಮದ ಆಟಿ ಕೂಟ

ಪುತ್ತೂರು: ವರ್ಷದ ಹನ್ನೆರಡು ತಿಂಗಳುಗಳ ವೈಶಿಷ್ಟ್ಯ ಹಾಗೂ ಕಲ್ಪನೆಯನ್ನು ಹಿಂದಿನ ಕಾಲದ ಹಿರಿಯರು ಅಕ್ಷರಾಭ್ಯಾಸವಿಲ್ಲದಿದ್ದರೂ ತುಳು ಬದುಕನ್ನು ಉಳಿಸಿಕೊಂಡು ಬಂದಿರುತ್ತಾರೆ. ತುಳುನಾಡಿನಲ್ಲಿ ಸಾಕಷ್ಟು ಆಚಾರ ವಿಚಾರಗಳಿವೆ ಅಲ್ಲದೆ ಧಾರ್ಮಿಕತೆ ಮತ್ತು ಸಾಂಸ್ಕೃತಿಕತೆ ನಮ್ಮ ಹಿರಿಯರ ಉಸಿರಾಗಿತ್ತು ಎಂದು ತುಳು ವಿದ್ವಾಂಸಕರಾದ ಕೆ.ಕೆ ಪೇಜಾವರರವರು ಹೇಳಿದರು. ಸಂಪ್ಯದಲ್ಲಿ ಅಕ್ಷಯ ಎಜ್ಯುಕೇಶನಲ್ ಟ್ರಸ್ಟ್‌ನಡಿಯಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜ್ ವತಿಯಿಂದ ಹಮ್ಮಿಕೊಂಡ ‘ಆಟಿ ಕೂಟ’ವನ್ನು ಉದ್ಘಾಟಿಸಿ ಮಾತನಾಡಿದರು. ಆಟಿ ಕಾಲದಲ್ಲಿ ಊರಿನ ಮಾರಿ ಓಡಿಸಲು ಆಟಿ ಕಳೆಂಜ ಬರುವುದಾಗಿತ್ತು. ಹಿಂದಿನ ಬಡತನದ

ಧಾರ್ಮಿಕತೆ, ಸಾಂಸ್ಕೃತಿಕತೆ ಹಿರಿಯರ ಉಸಿರಾಗಿತ್ತು: ಕೆ.ಕೆ ಪೇಜಾವರ | ಅಕ್ಷಯ ಕಾಲೇಜಿನಲ್ಲಿ ಸಂಭ್ರಮದ ಆಟಿ ಕೂಟ Read More »

ಸೌಜನ್ಯ ಕೊಲೆ ಪ್ರಕರಣ : ವಿಟ್ಲದಲ್ಲಿ ಒಕ್ಕಲಿಗರ ಸಂಘದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ

ವಿಟ್ಲ: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ ಶಾಂತಿನಗರ ವಿಟ್ಲ, ಯುವ ಘಟಕ, ಮಹಿಳಾ ಸಂಘ ಹಾಗೂ ಗೌಡರ ಸ್ವಸಹಾಯ ಸಂಘಗಳ ಒಕ್ಕೂಟದ ನೇತೃತ್ವದಲ್ಲಿ ಸೌಜನ್ಯಳ ಸಾವಿಗೆ ನ್ಯಾಯ ದೊರಕಿಸಿಕೊಡಲು ಹಕ್ಕೊತ್ತಾಯದ ಕುರಿತು ಬೃಹತ್ ಪ್ರತಿಭಟನಾ ಮೆರವಣಿಗೆ ಆ.19 ಶನಿವಾರ ಬೆಳಿಗ್ಗೆ 9.30 ಕ್ಕೆ ವಿಟ್ಲದಲ್ಲಿ ನಡೆಯಲಿದೆ. ಸೌಜನ್ಯಳನ್ನು ಕೊಲೆ ಮಾಡಿದ ನೈಜ ಆರೋಪಿಗಳನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆ ಆಗಬೇಕೆಂದು ಬೆಳಿಗ್ಗೆ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಬಳಿಕ ವಿಟ್ಲ ವೃತ್ತದಿಂದ ಖಾಸಗಿ

ಸೌಜನ್ಯ ಕೊಲೆ ಪ್ರಕರಣ : ವಿಟ್ಲದಲ್ಲಿ ಒಕ್ಕಲಿಗರ ಸಂಘದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ Read More »

ತಂದೆಯಿಂದ ಮಗಳ ಮೇಲೆ ಅತ್ಯಾಚಾರ | ಪೋಕ್ಸೋ ಕಾಯ್ದೆಯಡಿ ಬಂಧನ

ನೆಲ್ಯಾಡಿ: ಮಗಳ ಮೇಲೆ ತಂದೆಯೇ ಅತ್ಯಾಚಾರವೆಸಗಿ ಗರ್ಭಿಣಿಯನ್ನಾಗಿಸಿದ ಘಟನೆ ಗೋಳಿತೊಟ್ಟು ಗ್ರಾಪಂ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿ ತಂದೆಯನ್ನು ಪೋಕ್ಸೋ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ. ಗೋಳೀತೊಟ್ಟು ಗ್ರಾಪಂ ವ್ಯಾಪ್ತಿ ನಿವಾಸಿ ತನ್ನ ಮಗಳ ಮೇಲೆ ಕೆಲವು ತಿಂಗಳುಗಳ ಹಿಂದೆ ಅತ್ಯಾಚಾರವೆಸಗಿದ್ದು, ಮಗಳ ಆರೋಗ್ಯದಲ್ಲಿ ಏರುಪೇರು ಉಂಟಾದಾಗ ತಾಯಿ ಮಗಳನ್ನು ಆ.16 ರಂದು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ವೈದ್ಯರು ಪರೀಕ್ಷಿಸಿದಾಗ ಮಗಳು ಗರ್ಭಿ‍ಣಿಯಾಗಿರುವುದು ಬೆಳಕಿಗೆ ಬಂದಿದೆ. ಬಳಿಕ ಸಂತ್ರಸ್ತೆ ನೀಡಿದ ದೂರಿನಂತೆ ಪೋಕ್ಸೋ ಕಾಯ್ದೆಯಡಿ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿ ತಂದೆಯನ್ನು

ತಂದೆಯಿಂದ ಮಗಳ ಮೇಲೆ ಅತ್ಯಾಚಾರ | ಪೋಕ್ಸೋ ಕಾಯ್ದೆಯಡಿ ಬಂಧನ Read More »

ಅರೆಬಿಕ್ ಭಾಷೆಯಲ್ಲಿ ಬಂದ ಲಿಂಕ್ ಒತ್ತಿ ಕಡಬದ ವ್ಯಕ್ತಿ ಜೈಲುಪಾಲು | ಮಗನನ್ನು ಬಿಡಿಸಿಕೊಳ್ಳಲು ಹೆತ್ತವರ ಹರಸಾಹಸ

ಮಂಗಳೂರು : ಹ್ಯಾಕರ್‌ಗಳ ಮೋಸಕ್ಕೆ ಸಿಲುಕಿ ಸೌದಿ ಅರೆಬಿಯದಲ್ಲಿ ಉದ್ಯೋಗದಲ್ಲಿದ್ದ ಕಡಬದ ವ್ಯಕ್ತಿಯೊಬ್ಬರು ಜೈಲು ಪಾಲಾಗಿದ್ದು, ಅವರ ಮನೆಯವರು ಮಗನ ಬಿಡುಗಡೆಗಾಗಿ ಮೊರೆ ಇಟ್ಟಿದ್ದಾರೆ. ಕಡಬ ತಾಲೂಕಿನ ಊತ್ತೂರು ಗ್ರಾಮದ ಮುಜೂರು ದಿ. ಕೆಂಚಪ್ಪ ಗೌಡ ಹಾಗೂ ಹೇಮಾವತಿ ದಂಪತಿಯ ಪುತ್ರ ಚಂದ್ರಶೇಖರ್ ಎಂ. ಕೆ. ರಿಯಾದ್‌ನಲ್ಲಿರುವ(ಸೌದಿ ಅರೇಬಿಯಾ) ಅಲ್ಪಾನ‌ ಸೆರಾಮಿಕ್ಸ್ ಎಂಬ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು. ಹ್ಯಾಕರ್ ಗಳ ಮೋಸದಾಟಕ್ಕೆ ಸಿಲುಕಿದ ಅವರು ಇದೀಗ ಜೈಲಿನಲ್ಲಿದ್ದಾರೆ. 2022ರ ನವೆಂಬರ್‌ನಿಂದ ರಿಯಾದ್‌ನ ಜೈಲಿನಲ್ಲಿದ್ದು, ಕುಟುಂಬ ಕಣ್ಣೀರಲ್ಲಿ ಕೈತೊಳೆಯುತ್ತಿದೆ. ಚಂದ್ರಶೇಖರ್

ಅರೆಬಿಕ್ ಭಾಷೆಯಲ್ಲಿ ಬಂದ ಲಿಂಕ್ ಒತ್ತಿ ಕಡಬದ ವ್ಯಕ್ತಿ ಜೈಲುಪಾಲು | ಮಗನನ್ನು ಬಿಡಿಸಿಕೊಳ್ಳಲು ಹೆತ್ತವರ ಹರಸಾಹಸ Read More »

ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರತಿಭಾ ಅನಾವರಣ

ಪುತ್ತೂರು: ವಿದ್ಯಾರ್ಥಿಗಳಲ್ಲಿ ಕಲೆ,ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಇಂದಿನ ಯುವಜನತೆಗೆ ಪರಿಚಯಿಸುವ ಈ ಕಾರ್ಯಕ್ರಮ ಅರ್ಥಪೂರ್ಣವಾಗಿದೆ. ಶೈಕ್ಷಣಿಕ ಕಾಲ ಘಟ್ಟದಲ್ಲಿ ಪಠ್ಯದ ಜೊತೆಗೆ ಇನ್ನಿತರ ಚಟುವಟಿಕೆಗಳಲ್ಲಿ ನಮ್ಮನ್ನು ಹೆಚ್ಚು ಸಕ್ರಿಯರಾಗಿಸುವ ಬಗ್ಗೆ ಚಿಂತನೆ ನಡೆಸಬೇಕಾಗಿದೆ. ಇಂತಹ ಕಾರ್‍ಯಕ್ರಮಗಳಲ್ಲಿ ಹೆಚ್ಚು ಭಾಗವಹಿದ್ದಲ್ಲಿ ವಿದ್ಯಾರ್ಥಿಗಳು ಕ್ರಿಯಾತ್ಮಕ ಯೋಚನೆಗಳಿಗೆ ತಮ್ಮನ್ನು ತೆರೆದುಕೊಳ್ಳುತ್ತಾರೆ ಎಂದು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಶಿಕ್ಷಕ ಚಂದ್ರಶೇಖರ್ ಹೇಳಿದರು. ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಾ ಅನಾವರಣ ಕಾರ್ಯಕ್ರಮದ  ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಮುಖ್ಯ ಅತಿಥಿಯಾಗಿ ಭರತನಾಟ್ಯ

ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರತಿಭಾ ಅನಾವರಣ Read More »

error: Content is protected !!
Scroll to Top