ಪ್ರಗತಿ ಪ್ಯಾರಮೆಡಿಕಲ್ ಕಾಲೇಜು ಹಾಗೂ ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ 76ನೇ ವರ್ಷದ ಸ್ವಾತಂತ್ರ್ಯೋತ್ಸವ
ಪುತ್ತೂರು: ಪುತ್ತೂರು ಪ್ರಗತಿ ಪ್ಯಾರಮೆಡಿಕಲ್ ಕಾಲೇಜು ಹಾಗೂ ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ 76ನೇ ವರ್ಷದ ಸ್ವಾತಂತ್ರೋತ್ಸವವನ್ನು ಆಚರಿಸಲಾಯಿತು. ನಿವೃತ್ತ ಭೂಸೇನೆ ಸೈನಿಕ ಸತ್ಯನಾರಾಯಣ ಭಟ್ ಧ್ವಜಾರೋಹಣಗೈದು ಶುಭ ಹಾರೈಸಿದರು. ಸಂಸ್ಥೆಯ ಅಧ್ಯಕ್ಷ ಡಾ.ಯು.ಶ್ರೀಪತಿ ರಾವ್ ಮಾತನಾಡಿ, ಇಂದಿನ ವಿದ್ಯಾರ್ಥಿಗಳು ಮುಂದಿನ ಭಾರತ ದೇಶದ ಉನ್ನತ್ತೀಕರಣಕ್ಕಾಗಿ ಸ್ವಇಚ್ಛೆಯಿಂದ ತಮ್ಮನ್ನು ತೊಡಗಿಸಿಕೊಳ್ಳಬೇಕು. ಅದೇ ರೀತಿ ಆಸ್ಪತ್ರೆಯ ಸಿಬ್ಬಂದಿಗಳು ರೋಗಿಗಳ ಜೊತೆ ಸೇವಾ ಮನೋಭಾವದಿಂದ ಕೆಲಸ ಮಾಡಬೇಕು ಎಂದರು. ಸಂಸ್ಥೆಯ ನಿರ್ಧೇಶಕ ಡಾ.ಸುಧಾ ಎಸ್ ರಾವ್, ಪ್ರಾಂಶುಪಾಲೆ ಪ್ರೀತಾ ಹೆಗ್ಡೆ, […]










