ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟುವುದು ಪ್ರತಿಯೊಬ್ಬರ ಜವಾಬ್ದಾರಿ : ಎಸ್‍ಐ ವಿದ್ಯಾ ಜೆ.ಕೆ. | ಪೋಕ್ಸೋ ಕಾಯ್ದೆ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಮಾಹಿತಿ ಕಾರ್ಯಕ್ರಮ

ಮಾಣಿಲ : ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟುವುದು ಪ್ರತಿಯೊಬ್ಬರ ಜವಾಬ್ದಾರಿ  ಎಂದು ವಿಟ್ಲ ಪೊಲೀಸ್ ಠಾಣೆಯ ಎಸ್ ಐ  ವಿದ್ಯಾ ಜೆ ಕೆ ಹೇಳಿದರು. ಮಾಣಿಲ ಸರಕಾರಿ ಪ್ರೌಢಶಾಲೆಯಲ್ಲಿ ಪೋಕ್ಸೋ ಕಾಯ್ದೆ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಮಾಹಿತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು. ಸಮಾಜದಲ್ಲಿ ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ಉದಾಹರಿಸುತ್ತಾ ಇಂತಹ ಅಮಾನವೀಯ ಕೃತ್ಯಗಳನ್ನು ತಡೆಗಟ್ಟುವಲ್ಲಿ ಸಮಾಜದ ಪ್ರತಿಯೊಬ್ಬರೂ ಸಹಕರಿಸಬೇಕಾದ ಅನಿವಾರ್ಯತೆಯನ್ನು ಒತ್ತಿ ಹೇಳಿದರು. ವಿದ್ಯಾರ್ಥಿಗಳು ಹಾಗೂ ಪೋಷಕರೊಂದಿಗೆ ಸಂವಾದದಲ್ಲಿ ಇವರು ಪೊಲೀಸ್ […]

ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟುವುದು ಪ್ರತಿಯೊಬ್ಬರ ಜವಾಬ್ದಾರಿ : ಎಸ್‍ಐ ವಿದ್ಯಾ ಜೆ.ಕೆ. | ಪೋಕ್ಸೋ ಕಾಯ್ದೆ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಮಾಹಿತಿ ಕಾರ್ಯಕ್ರಮ Read More »

ಅಂಗಡಿ ಮುಂಭಾಗ ಸರಕು ಇಳಿಸುವ ವಾಹನ, ಚಾಲಕರಿಗೆ ದಂಡ ವಿಧಿಸದಂತೆ ಸಂಚಾರಿ ಠಾಣಾಧಿಕಾರಿಗಳಿಗೆ ವರ್ತಕರಿಂದ ಮನವಿ

ಪುತ್ತೂರು: ಪುತ್ತೂರು ಪೇಟೆಯ ಪ್ರಮುಖ ರಸ್ತೆಗಳಲ್ಲಿ ಅಂಗಡಿಯ ಮುಂಭಾಗ ವಾಹನದಲ್ಲಿ ಬಂದಂತಹ ಸರಕು ಸಾಗಣೆ ಸಮಯ ತುರ್ತಾಗಿ ನಿಲ್ಲಿಸಿ ತೆರಳುತ್ತಿರುವ ಸಮಯದಲ್ಲಿ ವರ್ತಕರಲ್ಲಿಗೆ ಬಂದಂತ ವಾಹನಗಳಿಗೆ ಹಾಗೂ ಚಾಲಕರಿಗೆ ದಂಡ ವಿಧಿಸದಂತೆ ಸಂಚಾರಿ ಠಾಣಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಪುತ್ತೂರು  ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಮನವಿ ಸಲ್ಲಿಸಲಾಗಿದ್ದು, ಸಂಘದ ಜಾನ್ ಕುಟಿನ್ಹಾ, ವಾಮನ್ ಪೈ, ಉಲ್ಲಾಸ್ ಪೈ, ಮನೋಜ್ ಟಿವಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮುಖ್ಯ ರಸ್ತೆಯಿಂದ ಕೋರ್ಟ್ ರಸ್ತೆಗೆ ಹೋಗಲು ವ್ಯವಸ್ಥೆ ಮಾಡುವುದರಿಂದ ಮುಖ್ಯ

ಅಂಗಡಿ ಮುಂಭಾಗ ಸರಕು ಇಳಿಸುವ ವಾಹನ, ಚಾಲಕರಿಗೆ ದಂಡ ವಿಧಿಸದಂತೆ ಸಂಚಾರಿ ಠಾಣಾಧಿಕಾರಿಗಳಿಗೆ ವರ್ತಕರಿಂದ ಮನವಿ Read More »

ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ, ವಾಣಿಜ್ಯ, ವಿಜ್ಞಾನ, ಸಾಹಿತ್ಯ ಸಂಘಗಳ ಉದ್ಘಾಟನೆ

ಪುತ್ತೂರು: ಪ್ರಜಾಪ್ರಭುತ್ವದ ಅರಿವು ವಿದ್ಯಾರ್ಥಿಗಳಿಗೆ ಆಗಬೇಕಾದರೆ ವಿದ್ಯಾರ್ಥಿ ಸಂಘಗಳು ಸಕ್ರಿಯವಾಗಬೇಕು. ವಿದ್ಯಾರ್ಥಿ ಶಕ್ತಿ ಅನಾವರಣಗೊಳ್ಳಬೇಕಾದರೆ ಸಾಂಘಿಕ ಪ್ರಯತ್ನ ನಡೆಯಬೇಕು. ಕಲಿಕೆಯ ಜೊತೆಗೆ ಸಮಾಜದಲ್ಲಿ ಬೇರೆ ಬೇರೆ ಕ್ಷೇತ್ರದಲ್ಲಿ ಆಸಕ್ತಿಯನ್ನು ಬೆಳೆಸಿದರೆ ಮಾತ್ರ ಯುವ ಸಮಾಜದ ಸದ್ಬಳಕೆಯಾಗುವುದು ಎಂದು ಬೆಂಗಳೂರಿನ ಹೈಕೋರ್ಟ್ ನ್ಯಾಯವಾದಿ ಸುಯೋಗ್ ಹೇರಳೆ. ಇ. ಹೇಳಿದರು. ನರೇಂದ್ರ ಪ.ಪೂ.ಕಾಲೇಜಿನಲ್ಲಿ 2023-24ನೇ ಸಾಲಿನ ವಿದ್ಯಾರ್ಥಿ ಸಂಘ ಮತ್ತು ವಾಣಿಜ್ಯ,ವಿಜ್ಞಾನ,ಸಾಹಿತ್ಯ ಸಂಘವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಾಯಕತ್ವದ ಬೆಳವಣಿಗೆಗೆ ಹಾಗೂ ಆರೋಗ್ಯಯುತ ಪ್ರಜಾಪ್ರಭುತ್ವದ ನಿರ್ಮಾಣಕ್ಕೆ ವಿದ್ಯಾರ್ಥಿ ಸಂಘಗಳು ಮಾರ್ಗಸೂಚಿಗಳಾಗಲಿವೆ.

ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ, ವಾಣಿಜ್ಯ, ವಿಜ್ಞಾನ, ಸಾಹಿತ್ಯ ಸಂಘಗಳ ಉದ್ಘಾಟನೆ Read More »

ಮಣಿಪುರದಲ್ಲಿ ಮತ್ತೆ ಹಿಂಸಾಚಾರ | ಗುಂಡಿನ ದಾಳಿಗೆ ಮೂವರು ಮೃತ್ಯು

ಇಂಫಾಲ್ : ಸ್ವಲ್ಪ ಮಟ್ಟಿಗೆ ಶಾಂತವಾಗಿದ್ದ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಶನಿವಾರ ಮುಂಜಾನೆ ಶಂಕಿತ ವ್ಯಕ್ತಿಗಳು ಬಿಷ್ಣುಪುರದ ಕ್ವಾಕ್ಕಾ ಬಳಿಯ ಉಖಾ ತಂಪಕ್ ಗ್ರಾಮದ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿದ ಪರಿಣಾಮ ತಂದೆ-ಮಗ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ದಾಳಿಕೋರರು ಕೇಂದ್ರ ಭದ್ರತಾ ಪಡೆಯ ನಿಯಂತ್ರಣಲ್ಲಿರುವ ಬೆಟ್ಟ-ಕಣಿವೆಗಳ ನಡುವಿನ ಬಫರ್ ವಲಯದಿಂದ ಕದ್ದುಮುಚ್ಚಿ ಬರುತ್ತಿದ್ದಾರೆ ಎನ್ನಲಾಗಿದ್ದು, ಅಲ್ಲಿಯ ಜನರ ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಘಟನೆ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮಣಿಪುರದಲ್ಲಿ ಮತ್ತೆ ಹಿಂಸಾಚಾರ | ಗುಂಡಿನ ದಾಳಿಗೆ ಮೂವರು ಮೃತ್ಯು Read More »

ಸೌಜನ್ಯ ಕೊಲೆ ಪ್ರಕರಣ ತಕ್ಷಣದಿಂದಲೇ ಮರು ತನಿಖೆ ಆರಂಭಿಸಬೇಕು | ಇಲ್ಲದಿದ್ದಲ್ಲಿ ತೀವ್ರ ಸ್ವರೂಪದ ಹೋರಾಟ | ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘ ಎಚ್ಚರಿಕೆ

ಪುತ್ತೂರು: ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾದ ಆರೋಪಿಯನ್ನು ಈಗಾಗಲೇ ನ್ಯಾಯಾಲಯ ನಿರಪರಾಧಿಯೆಂದು ಘೋಷಿಸಿದ್ದು, ಪ್ರಕರಣವನ್ನು ತಕ್ಷಣದಿಂದಲೇ ಮರು ತನಿಖೆ ನಡೆಸಿ ನೈಜ ಆರೋಪಿಯನ್ನು ಬಂಧಿಸಬೇಕು. ಇಲ್ಲದಿದ್ದರೆ ಪುತ್ತೂರು ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ತೀವ್ರ ಸ್ವರೂಪದ ಹೋರಾಟವನ್ನು ನಡೆಸಲಾಗುವುದು ಎಂದು ಸಂಘ ಅಧ್ಯಕ್ಷ ವಿಶ್ವನಾಥ ಗೌಡ ಕೆಯ್ಯೂರು ತಿಳಿಸಿದ್ದಾರೆ. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ 2011 ರಲ್ಲಿ ಸೌಜನ್ಯರನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ್ದು, 11 ವರ್ಷಗಳು ಕಳೆದಿದೆ.

ಸೌಜನ್ಯ ಕೊಲೆ ಪ್ರಕರಣ ತಕ್ಷಣದಿಂದಲೇ ಮರು ತನಿಖೆ ಆರಂಭಿಸಬೇಕು | ಇಲ್ಲದಿದ್ದಲ್ಲಿ ತೀವ್ರ ಸ್ವರೂಪದ ಹೋರಾಟ | ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘ ಎಚ್ಚರಿಕೆ Read More »

ಠೇವಣಿ ಹಣ ನಿಗದಿತ ಅವಧಿಯಲ್ಲಿ ಹಿಂದಿರುಗಿಸದ ಆರೋಪ : ಸಹಕಾರಿ ಸಂಘದ ಅಧ್ಯಕ್ಷ, ಉಪಾಧ್ಯಕ್ಷ, ಮ್ಯಾನೇಜರ್, ನಿರ್ದೇಶಕರ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಠೇವಣಿ ಅವಧಿ ಮುಗಿದರೂ ಠೇವಣಿ ಹಣವನ್ನು  ನಿಗದಿತ ಸಮಯದಲ್ಲಿ ವಾಪಾಸ್ಸು ನೀಡದೆ ವಂಚನೆ ಮಾಡಿರುವ ಕುರಿತು ಸೌಹಾರ್ದ ಸಹಕಾರಿ ಸಂಘದ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರಿನ ಅಕ್ಷಯ್ ಕಾಂಪ್ಲೆಕ್ಸ್ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ಭಾರತ್ ಒನ್ ಸೌಹಾರ್ದ ಸಹಕಾರಿ ಸಂಘ ಮತ್ತು ಈ ಸಂಸ್ಥೆಯ ಅಡಿಯಲ್ಲಿ ಕಾರ್ಯಾಚರಿಸುತ್ತಿದ್ದ ಟಾರ್ಗೆಟ್ 2 ಸಕ್ಸೆಸ್ ಟ್ರೇಡಿಂಗ್ ಸಂಸ್ಥೆಯ ಅಧ್ಯಕ್ಷ ಗಿರೀಶ್ ರೈ, ಉಪಾಧ್ಯಕ್ಷ ಸುದೇಶ್ ರೈ ಅಲೆಕ್ಕಾಡಿ, ಮ್ಯಾನೇಜರ್ ಸಂದೀಪ್ ಹಾಗೂ ಇತರ ನಿರ್ದೇಶಕರ ವಿರುದ್ಧ

ಠೇವಣಿ ಹಣ ನಿಗದಿತ ಅವಧಿಯಲ್ಲಿ ಹಿಂದಿರುಗಿಸದ ಆರೋಪ : ಸಹಕಾರಿ ಸಂಘದ ಅಧ್ಯಕ್ಷ, ಉಪಾಧ್ಯಕ್ಷ, ಮ್ಯಾನೇಜರ್, ನಿರ್ದೇಶಕರ ವಿರುದ್ಧ ಪ್ರಕರಣ ದಾಖಲು Read More »

ವಿಟ್ಲ ರೋಟರಿ ಕ್ಲಬ್ ವತಿಯಿಂದ “ವನಸಿರಿ, ವಿದ್ಯಾಸಿರಿ” ವಿಶಿಷ್ಟ ಕಾರ್ಯಕ್ರಮ

ಮಾಣಿಲ : ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಯಶಸ್ಸಿನ ಮೂಲಮಂತ್ರ ಎಂದು ವಿಟ್ಲ ರೋಟರಿ ಕ್ಲಬ್ ನ ಯೋಜನಾ ನಿರ್ವಾಹಕ ಡಾ. ವಿ. ಕೆ ಹೆಗ್ಗಡೆ  ಹೇಳಿದರು. ಅವರು ಮಾಣಿಲ ಸರಕಾರಿ ಪ್ರೌಢ ಶಾಲೆಯಲ್ಲಿ  ವಿಟ್ಲ ರೋಟರಿ ಕ್ಲಬ್ ಪ್ರಾಯೋಜಕತ್ವದಲ್ಲಿ ನಡೆದ ‘ವನಸಿರಿ’ ಹಾಗೂ ‘ವಿದ್ಯಾಸಿರಿ’ ವಿಶಿಷ್ಟ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೌಢ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಪುಸ್ತಕಗಳು  ಹಾಗೂ  ಗಿಡಗಳನ್ನು ವಿತರಿಸುವ ಮೂಲಕ ಕಾರ್ಯಕ್ರಮ ನಡೆಯಿತು. ವಿಟ್ಲ ರೋಟರಿ ಕ್ಲಬ್ ಅಧ್ಯಕ್ಷ ಕಿರಣ್ ಕುಮಾರ್ ಅಧ್ಯಕ್ಷತೆ

ವಿಟ್ಲ ರೋಟರಿ ಕ್ಲಬ್ ವತಿಯಿಂದ “ವನಸಿರಿ, ವಿದ್ಯಾಸಿರಿ” ವಿಶಿಷ್ಟ ಕಾರ್ಯಕ್ರಮ Read More »

ಶ್ರೀ ಮಹಾಭಾರತ ಸರಣಿಯಲ್ಲಿ ಧೌಮ್ಯ ಪರಿಗ್ರಹ ಮತ್ತು ದ್ರೌಪದಿ ಸ್ವಯಂವರ

ಉಪ್ಪಿನಂಗಡಿ: ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ ವತಿಯಿಂದ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿ ತಾಳಮದ್ದಳೆ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದಲ್ಲಿ ಜರಗಿತು. ಸರಣಿ ಕಾರ್ಯಕ್ರಮದಲ್ಲಿ ಧೌಮ್ಯ ಪರಿಗ್ರಹ ಮತ್ತು ದ್ರೌಪದೀ ಸ್ವಯಂವರ ತಾಳಮದ್ದಳೆ ಜರಗಿತು. ಭಾಗವತರಾಗಿ ಪದ್ಮನಾಭ ಕುಲಾಲ್, ಸುರೇಶ್ ರಾವ್ ಬನ್ನೆoಗಳ, ಹಿಮ್ಮೇಳದಲ್ಲಿ ಮೋಹನ ಶರವೂರು, ಶ್ರೀಪತಿ ಭಟ್ ಉಪ್ಪಿನಂಗಡಿ ಗುರುಮೂರ್ತಿ ಅಮ್ಮಣ್ಣಾಯ, ದಿವಾಕರ ಆಚಾರ್ಯ  ನೇರೆಂಕಿ ಭಾಗವಹಿಸಿದ್ದರು. ಧೌಮ್ಯ ಮತ್ತು ದೃಪದನಾಗಿ ಹರೀಶ್ ಆಚಾರ್ಯ ಬಾರ್ಯ, ಧರ್ಮರಾಯನಾಗಿ ದಿವಾಕರ ಆಚಾರ್ಯ ನೇರೆಂಕಿ

ಶ್ರೀ ಮಹಾಭಾರತ ಸರಣಿಯಲ್ಲಿ ಧೌಮ್ಯ ಪರಿಗ್ರಹ ಮತ್ತು ದ್ರೌಪದಿ ಸ್ವಯಂವರ Read More »

ಸ್ವಂತ ಕಾರು ಇದ್ದವರ ಬಿಪಿಎಲ್ ಕಾರ್ಡ್ ರದ್ದು | ಸಚಿವ ಕೆ.ಹೆಚ್. ಮುನಿಯಪ್ಪ ಘೊಷಣೆ

ಬೆಂಗಳೂರು: ಸ್ವಂತ ಕಾರು ಇರುವವರಿಗೆ ಬಿಪಿಎಲ್ ಕಾರ್ಡ್ ಇಲ್ಲ. ಹೀಗೆಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಘೋಷಣೆ ಮಾಡಿದ್ದು, ಈ ಮೂಲಕ ಬಿಪಿಎಲ್ ಕಾರ್ಡುದಾರರಿಗೆ ಬಿಸಿ ಸುದ್ದಿಯೊಂದನ್ನು ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಆಹಾರ ಸಚಿವ ಮುನಿಯಪ್ಪ, ಸ್ವಂತ ಕಾರು ಇರುವವರಿಗೆ ಬಿಪಿಎಲ್ ಕಾರ್ಡ್ ನೀಡದಿರಲು ಚಿಂತನೆ ನಡೆಸಲಾಗಿದೆ ಎಂದರು. ವೈಟ್ ಬೋರ್ಡ್ ಕಾರು ಹೊಂದಿರುವ ಕುಟುಂಬದ ಬಿಪಿಎಲ್ ಕಾರ್ಡ್ ನ್ನು ಕೂಡಾ ರದ್ದುಗೊಳಿಸಲಾಗುತ್ತದೆ. ಯಲ್ಲೋ ಬೋರ್ಡ್ ಕಾರು ಹೊಂದಿರುವವರ ಬಿಪಿಎಲ್ ಕಾರ್ಡ್ ರದ್ದನ್ನು ವಾಪಸ್ಸು ಪಡೆಯಲು

ಸ್ವಂತ ಕಾರು ಇದ್ದವರ ಬಿಪಿಎಲ್ ಕಾರ್ಡ್ ರದ್ದು | ಸಚಿವ ಕೆ.ಹೆಚ್. ಮುನಿಯಪ್ಪ ಘೊಷಣೆ Read More »

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸುಶ್ಮಿತಾ.ಟಿ.ರಾವ್ ಚೆಸ್ ಪಂದ್ಯಾಟದಲ್ಲಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆ

ಪುತ್ತೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ದ.ಕ.ಜಿಲ್ಲಾ ಪಂಚಾಯಿತಿ,  ಸುಳ್ಯ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಸಂಯುಕ್ತ ಆಶ್ರಯದಲ್ಲಿ ಗುರುವಾರ  ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಸುಶ್ಮಿತಾ ಟಿ.ರಾವ್ ಭಾಗವಹಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈಕೆ ತ್ರಿವಿಕ್ರಮ್ ರಾವ್ ಮತ್ತು ಶಾರದಾ.ಜಿ ದಂಪತಿ ಪುತ್ರಿ. ಈಕೆಯನ್ನು ಶಾಲಾ ಆಡಳಿತ ಮಂಡಳಿ, ಶಿಕ್ಷಕ ವರ್ಗ, ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸುಶ್ಮಿತಾ.ಟಿ.ರಾವ್ ಚೆಸ್ ಪಂದ್ಯಾಟದಲ್ಲಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆ Read More »

error: Content is protected !!
Scroll to Top