ವಿಷ್ಣುಮೂರ್ತಿ ಹೊಳ್ಳ ನಿಧನ

ಪುತ್ತೂರು:  ತಾಲೂಕಿನ ಕುರಿಯ ಗ್ರಾಮದ  ಮಾಪಾಲ ನಿವಾಸಿ, ಪ್ರಗತಿ ಪರ ಕೃಷಿಕ ಮಾಪಾಲ ವಿಷ್ಣುಮೂರ್ತಿ ಹೊಳ್ಳ (86) ಮಂಗಳವಾರ  ಸ್ವಗೃಹದಲ್ಲಿ ನಿಧನರಾದರು. ಅವರು ಕುರಿಯ ವಿಷ್ಣುಮೂರ್ತಿ ದೇವಸ್ಥಾನದ  ಟ್ರಸ್ಟಿಯಾಗಿ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ ರಾಜೀವಿ ಹೊಳ್ಳ, ಪುತ್ರಿ ಕಳಸ ಗ್ರಾಮ ಪಂಚಾಯಿತಿ ಸದಸ್ಯೆ ಅನುರಾಧ, ಪುತ್ರರಾದ ಕೋಲಾರದ ಉದ್ಯಮಿ ಹರೀಶ್ ಹೊಳ್ಳ, ವಿಜಯ ಕರ್ನಾಟಕದ ರೆಸ್ಪಾನ್ಸ್ ವಿಭಾಗದ ಮುಖ್ಯ ಉಪ ಸಂಪಾದಕ ಯೋಗೀಶ ಹೊಳ್ಳ ಅವರನ್ನು ಅಗಲಿದ್ದಾರೆ.

ವಿಷ್ಣುಮೂರ್ತಿ ಹೊಳ್ಳ ನಿಧನ Read More »

ಶೈಕ್ಷಣಿಕ ಸಾಧನೆಯಲ್ಲಿ ಉಡುಪಿ ಜಿಲ್ಲೆ ಕುಸಿತ ಕಂಡಿದೆ | ಸಿ.ಎಂ.ಹೇಳಿಕೆಗೆ ಕರಾವಳಿ ಶಾಸಕರ ತೀವೃ ಆಕ್ರೋಶ

ಮಂಗಳೂರು: ಶೈಕ್ಷಣಿಕ ಸಾಧನೆಯಲ್ಲಿ ಉಡುಪಿ ಜಿಲ್ಲೆ ಕುಸಿತ ಕಂಡಿದೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ರಾಜ್ಯದಲ್ಲಿ ಪರ-ವಿರೋಧ ಚರ್ಚೆಗೆ ಕಾರಣವಾಗಿದ್ದು, ಸಿಎಂ ಹೇಳಿಕೆಗೆ ಕರಾವಳಿ ಶಾಸಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ಮತ್ತಿತರರು ಈ ಬಗ್ಗೆ ಅಂಕಿಅಂಶ ಸಹಿತ ಹೇಳಿಕೆಗಳನ್ನು ನೀಡಿದ್ದಾರೆ. ನಿನ್ನೆ ಉಡುಪಿ ಮತ್ತು ಮಂಗಳೂರು ಪ್ರವಾಸ ಕೈಗೊಂಡಿದ್ದ ಸಿದ್ದರಾಮಯ್ಯ ನಾವು ಈ ಹಿಂದೆ ಅಧಿಕಾರದಲ್ಲಿದ್ದಾಗ ಉಡುಪಿ ಜಿಲ್ಲೆ ಶೈಕ್ಷಣಿಕ ಸೂಚ್ಯಂಕದಲ್ಲಿ

ಶೈಕ್ಷಣಿಕ ಸಾಧನೆಯಲ್ಲಿ ಉಡುಪಿ ಜಿಲ್ಲೆ ಕುಸಿತ ಕಂಡಿದೆ | ಸಿ.ಎಂ.ಹೇಳಿಕೆಗೆ ಕರಾವಳಿ ಶಾಸಕರ ತೀವೃ ಆಕ್ರೋಶ Read More »

ಭಾರೀ ಮಳೆ ಹಿನ್ನಲೆಯಲ್ಲಿ ಶಾಲೆಗಳಿಗೆ ರಜೆ | ಸರಿದೂಗಿಸಲು ನ.4 ರ ವರೆಗೆ ಶನಿವಾರ ದಿನಪೂರ್ತಿ ತರಗತಿ

ಪುತ್ತೂರು: ಭಾರೀ ಮಳೆಯ ಹಿನ್ನಲೆಯಲ್ಲಿ ಈ ಬಾರಿ ಶಾಲೆಗಳಿಗೆ ರಜೆ ನೀಡಲಾಗಿದ್ದು, ಅದನ್ನು ಸರಿದೂಗಿಸಲು ನವೆಂಬರ್ 4 ರ ವರೆಗೆ ಶನಿವಾರ ದಿನಪೂರ್ತಿ ತರಗತಿ ನಡೆಯಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಈ ಬಾರಿ ಮಳೆಯಿಂದ ಶಾಲೆಗಳಿಗೆ 6 ದಿನ ರಜೆ ನೀಡಲಾಗಿತ್ತು. ರಜೆಯನ್ನು ಸರಿದೂಗಿಸುವ ಹಿನ್ನಲೆಯಲ್ಲಿ ಶನಿವಾರ ಮಧ್ಯಾಹ್ನದ ಬಳಿಕವೂ ಪಾಠಗಳನ್ನು ಮಾಡುವ ಮೂಲಕ ದಿನಪೂರ್ತಿ ತರಗತಿ ನಡೆಯಲಿದೆ. ಈ ಕುರಿತು ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಹೊರಡಿಸಿದ್ದು, ನ.4 ರ ವರೆಗೆ ಅಂದರೆ 12 ಶನಿವಾರದಂದು ತರಗತಿ

ಭಾರೀ ಮಳೆ ಹಿನ್ನಲೆಯಲ್ಲಿ ಶಾಲೆಗಳಿಗೆ ರಜೆ | ಸರಿದೂಗಿಸಲು ನ.4 ರ ವರೆಗೆ ಶನಿವಾರ ದಿನಪೂರ್ತಿ ತರಗತಿ Read More »

ದೇವಾಂಗ ಸೇವಾ ಸಮಾಜದ ವತಿಯಿಂದ ಆಟಿಡೊಂಜಿ ದಿನ

ಪುತ್ತೂರು: ಪುತ್ತೂರು ದೇವಾಂಗ ಸೇವಾ ಸಮಾಜ ಬಾಂಧವರಿಂದ ಆಟಿಡೊಂಜಿ ದಿನ ಕಾರ್ಯಕ್ರಮ ಭಾನುವಾರ ಸರಕಾರಿ ನೌಕರರ ಸಭಾಭವನದಲ್ಲಿ ನಡೆಯಿತು. ನಿವೃತ್ತ ಮುಖ್ಯ ಶಿಕ್ಷಕಿ ದೇವಕಿ ಟೀಚರ್ ದೀಪ ಪ್ರಜ್ವಲನೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವೇದಿಕೆಯಲ್ಲಿ ಸುಗುಣ ಎಂ ಶೆಟ್ಟಿ, ಎಮ್ ಎನ್ ಚೆಟ್ಟಿಯಾರು, ಸುರೇಶ್ ಶೆಟ್ಟಿ, ದಿವಾಕರ್ ಶೆಟ್ಟಿ ಕುಂಬ್ರ ಶುಭ ಹಾರೈಸಿದರು. ಎಂ ಎಸ್ ಚೆಟ್ಟಿಯಾರ್ ಆಟಿ ತಿಂಗಳ ಮಹತ್ವವನ್ನು ತಿಳಿಸಿದರು. ವಿವಿಧ ಆಟೋಟ ಸ್ಪರ್ಧೆ ವಿಜೇತರಿಗೆ ಈ ಸಂದರ್ಭದಲ್ಲಿ ಬಹುಮಾನ ವಿತರಿಸಲಾಯಿತು. ಸಮಾಜ

ದೇವಾಂಗ ಸೇವಾ ಸಮಾಜದ ವತಿಯಿಂದ ಆಟಿಡೊಂಜಿ ದಿನ Read More »

ಎಂಡೋ ಸಂತ್ರಸ್ತರಿಗೆ ಉಚಿತ ಬಸ್ ಪಾಸ್ | ಯಾವ ತಾಲೂಕಿನವರಿಗೆ ಎಲ್ಲಿ , ಯಾವಾಗ | ಇಲ್ಲಿದೆ ಡಿಟೈಲ್ಸ್

ಪುತ್ತೂರು: ಪುತ್ತೂರು ವಿಭಾಗ ವ್ಯಾಪ್ತಿಯ ಬರುವ ಸುಳ್ಯ, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ ತಾಲೂಕಿನಲ್ಲಿರುವ ಎಂಡೋ ಸಂತ್ರಸ್ತರಿಗೆ ಅನುಕೂಲವಾಗುವಂತೆ ಉಚಿತ ಎಂಡೋಸಲ್ಫಾನ್ ಬಸ್ ಪಾಸ್‍ ಗಳನ್ನು ವಿತರಿಸಲು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಗಳು ನಡೆಯುವ ದಿನಾಂಕ, ಸ್ಥಳದ ಮಾಹಿತಿ ಹೀಗಿದೆ : ಬೆಳ್ತಂಗಡಿ ತಾಲೂಕಿನ ಕೊಕ್ಕಡ ಎಂಡೋ ಸಂತ್ರಸ್ಥರ ಕೇಂದ್ರದಲ್ಲಿ ಸೆ.9 ರಂದು, ಕಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೆ.10, ಪುತ್ತೂರು ತಾಲೂಕಿನ ಕೊಯಿಲ ಪಂಚಾಯಿತಿ ಕಚೇರಿಯಲ್ಲಿ ಸೆ.11, ಬಂಟ್ವಾಳ ತಾಲೂಕಿನ ವಿಟ್ಲ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೆ.12

ಎಂಡೋ ಸಂತ್ರಸ್ತರಿಗೆ ಉಚಿತ ಬಸ್ ಪಾಸ್ | ಯಾವ ತಾಲೂಕಿನವರಿಗೆ ಎಲ್ಲಿ , ಯಾವಾಗ | ಇಲ್ಲಿದೆ ಡಿಟೈಲ್ಸ್ Read More »

ಆ.6 : ನಲಿಕೆಯವರ ಸಮಾಜ ಸೇವಾ ಸಂಘದಿಂದ ವರ್ಷಾಚರಣೆ ಹಾಗೂ ಆಟಿದಿನ

ಪುತ್ತೂರು: ಪುತ್ತೂರು ನಲಿಕೆಯವರ ಸಮಾಜ ಸೇವಾ ಸಂಘದ ವತಿಯಿಂದ ವರ್ಷಾಚರಣೆ ಹಾಗೂ ಆಟಿ ದಿನ ಕಾರ್ಯಕ್ರಮ ಆ.6 ಭಾನುವಾರ ಇಲ್ಲಿಯ ಟೌನ್ ಬ್ಯಾಂಕ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಘದ ಸ್ಥಾಪಕಾಧ್ಯಕ್ಷ ಚಂದ್ರ ಇಡ್ಪಾಡಿ  ತಿಳಿಸಿದ್ದಾರೆ. ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬೆಳಗ್ಗೆ 10 ಗಂಟೆಗೆ ಕಾರ್ಯಕ್ರವನ್ನು ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟಿಸಲಿದ್ದು, ನಲಿಕೆ ಸಮಾಜ ಸೇವಾ ಸಂಘದ ತಾಲೂಕು ಅಧ್ಯಕ್ಷ ರವಿ ಎಂಡೆಸಾಗು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಬಂಟ್ವಾಳ ಸಂಘದ ಮಾಜಿ ಅಧ್ಯಕ್ಷ ಲೋಕಯ್ಯ

ಆ.6 : ನಲಿಕೆಯವರ ಸಮಾಜ ಸೇವಾ ಸಂಘದಿಂದ ವರ್ಷಾಚರಣೆ ಹಾಗೂ ಆಟಿದಿನ Read More »

ಸೌಜನ್ಯ ಕೊಲೆ ಪ್ರಕರಣ | ದ.ಕ.ಜಿಲ್ಲೆಯಾದ್ಯಂತ ಎಲ್ಲಾ ತಾಲೂಕು ಸಂಘಗಳ ಅಭಿಪ್ರಾಯ ಸಂಗ್ರಹಿಸಿ ಮುಂದಿನ ನಡೆಯ ಕುರಿತು ತೀರ್ಮಾನ | ಒಕ್ಕಲಿಗ ಗೌಡ ಸೇವಾ ಸಂಘದ ಮಹಾಸಭೆ

ಪುತ್ತೂರು: ಸೌಜನ್ಯ ಕೊಲೆ ಪ್ರಕರಣ ರಾಜ್ಯಾದ್ಯಂತ ಚರ್ಚೆಯಾಗುತ್ತಿದ್ದು, ಸಾಮಾಜಿಕ ಜಾಲತಾಣದಲ್ಲೂ ಚರ್ಚೆ ನಡೆಯುತ್ತಿದೆ. ಒಕ್ಕಲಿಗ ಗೌಡ ಸಂಘವೂ ಮೌನವಹಿಸುವುದಿಲ್ಲ. ದ.ಕ.ಜಿಲ್ಲೆಯಾದ್ಯಂತ ಎಲ್ಲಾ ತಾಲೂಕು ಸಂಘಗಳ ಅಭಿಪ್ರಾಯ ಸಂಗ್ರಹಿಸಿ ಜಿಲ್ಲಾ ಮಟ್ಟದಲ್ಲಿ ಮುಂದಿನ ನಡೆಯ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ವಿಶ್ವನಾಥ ಗೌಡ ಕೆಯ್ಯರು ಹೇಳಿದರು. ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆದ ಒಕ್ಕಲಿಗ ಗೌಡ ಸೇವಾ ಸಂಘದ ಮಾತೃ ಸಂಘ, ಯುವ, ಮಹಿಳಾ, ಸ್ವಸಹಾಯ ಸಂಘದ ಮಹಾಸಭೆಯಲ್ಲಿ

ಸೌಜನ್ಯ ಕೊಲೆ ಪ್ರಕರಣ | ದ.ಕ.ಜಿಲ್ಲೆಯಾದ್ಯಂತ ಎಲ್ಲಾ ತಾಲೂಕು ಸಂಘಗಳ ಅಭಿಪ್ರಾಯ ಸಂಗ್ರಹಿಸಿ ಮುಂದಿನ ನಡೆಯ ಕುರಿತು ತೀರ್ಮಾನ | ಒಕ್ಕಲಿಗ ಗೌಡ ಸೇವಾ ಸಂಘದ ಮಹಾಸಭೆ Read More »

ಸೌಜನ್ಯ ಕೊಲೆ ಪ್ರಕರಣ | ಸರಕಾರ ಹಾಗೂ ತನಿಖಾ ಸಂಸ್ಥೆ ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸಿಕೊಂಡುವಂತೆ ಡಾ.ಹೆಗ್ಗಡೆಯವರಿಂದ ಮನವಿ

ಬೆಳ್ತಂಗಡಿ : ಹನ್ನೊಂದು ವರ್ಷಗಳ ಹಿಂದೆ ನಡೆದ ಸೌಜನ್ಯ ಕೊಲೆ ಪ್ರಕರಣ ಸಂಬಂಧಿಸಿ ಸರಕಾರ ಮತ್ತು ತನಿಖಾ ಸಂಸ್ಥೆ ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸಿಕೊಡಬೇಕು ಎಂದು  ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಸರಕಾರವನ್ನು ಒತ್ತಾಯಿಸಿದ್ದಾರೆ. ಪ್ರಸ್ತುತ ಸೌಜನ್ಯ ಸಾವು ಪ್ರಕರಣ ನ್ಯಾಯಾಲಯ, ಸರಕಾರ ಹಾಗೂ ತನಿಖಾ ಸಂಸ್ಥೆಯ ವ್ಯಾಪ್ತಿಯಲ್ಲಿ ಇರುವುದರಿಂದ ಸರಕಾರ ಹಾಗೂ ತನಿಖಾ ಸಂಸ್ಥೆ ಸೂಕ್ತ ನ್ಯಾಯ ಒದಗಿಸಿಕೊಡಬೇಕು ಎಂದು ಒತ್ತಾಯಿಸುತ್ತೇನೆ ಹಾಗೂ ಈ ವಿಚಾರವಾಗಿ ಕ್ಷೇತ್ರದ ಬಗ್ಗೆ ಅವಹೇಳನಕಾರಿ, ಸುಳ್ಳು ಹೇಳಿಕೆ,

ಸೌಜನ್ಯ ಕೊಲೆ ಪ್ರಕರಣ | ಸರಕಾರ ಹಾಗೂ ತನಿಖಾ ಸಂಸ್ಥೆ ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸಿಕೊಂಡುವಂತೆ ಡಾ.ಹೆಗ್ಗಡೆಯವರಿಂದ ಮನವಿ Read More »

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಂಬಿಎ, ಎಂಸಿಎ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

ಪುತ್ತೂರು: ನಾವೆಲ್ಲರೂ ಜಗತ್ತಿನಲ್ಲಾಗುತ್ತಿರುವ ತಂತ್ರಜ್ಞಾನದ ವ್ಯಾಪಕ ಬೆಳವಣಿಗೆಗೆ ಒಗ್ಗಿಕೊಳ್ಳುತ್ತಾ, ಸ್ವೀಕರಿಸುತ್ತಾ ಅದನ್ನು ಬಳಸಿಕೊಳ್ಳುತ್ತಾ ಮುನ್ನಡೆಯಬೇಕು ಎಂದು ಮುಳಿಯ ಜುವೆಲ್ಸ್ ಪ್ರೈವೆಟ್ ಲಿಮಿಟೆಡ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ವ್ಯವಸ್ಥಾಪಕ ನಿರ್ದೇಶಕ ಕೃಷ್ಣನಾರಾಯಣ ಮುಳಿಯ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಶ್ರೀರಾಮ ಸಭಾಭವನದಲ್ಲಿ ಸ್ನಾತಕೋತ್ತರ ಎಂಬಿಎ ಮತ್ತು ಎಂಸಿಎ ವಿಭಾಗಗಳ ವಿದ್ಯಾರ್ಥಿಗಳ ಬೀಳ್ಕೊಡುವ ಕಾರ್ಯಕ್ರಮದಲ್ಲಿ ಮಾತಾಡಿದರು. ನಮ್ಮ ಜೀವನದಲ್ಲಿ ತಂತ್ರಜ್ಞಾನದ ಬಳಕೆ ಅದರಲ್ಲೂ ಮುಖ್ಯವಾಗಿ ಕೃತಕ ಬುದ್ದಿಮತ್ತೆಯ ಪ್ರಭಾವದ ಬಗ್ಗೆ ಬೆಳಕು ಚೆಲ್ಲಿದ

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಂಬಿಎ, ಎಂಸಿಎ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ Read More »

ರಸ್ತೆ ಸಮಸ್ಯೆ : ಕ್ರಮ ಕೈಗೊಂಡಿದ್ದರೂ ಮಾಹಿತಿ ನೀಡದ ಕಂದಾಯ ಇಲಾಖೆಯ ಸಾರ್ವಜನಿಕ ಮಾಹಿತಿ ಅಧಿಕಾರಿಗೆ 15 ಸಾವಿರ ರೂ. ದಂಡ

ಪುತ್ತೂರು: ರಸ್ತೆ ಸಮಸ್ಯೆಗೆ ಸಂಬಂಧಿಸಿದ ಕ್ರಮ ಕೈಗೊಂಡಿದ್ದರೂ ಈ ಕುರಿತು ಮಾಹಿತಿ ನೀಡದ ಕಂದಾಯ ಇಲಾಖೆಯ ಸಾರ್ವಜನಿಕ ಮಾಹಿತಿ ಅಧಿಕಾರಿ ಸುಲೋಚನಾ ಅವರಿಗೆ ರಾಜ್ಯ ಮಾಹಿತಿ ಆಯೋಗ 15 ಸಾವಿರ ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ. ರಸ್ತೆ ಸಮಸ್ಯೆಗೆ ಸಂಬಂಧಿಸಿದ ಸೂಕ್ತ ಕ್ರಮ ವಹಿಸಲು ಆಯೋಗದ ಕಾರ್ಯದರ್ಶಿಗಳಿಗೆ ಸೂಚಿಸಿದೆ. ಅಲ್ಲದೇ, ಮೇಲ್ಮನವಿದಾರರ ಪ್ರಕರಣದ ಬಗ್ಗೆ ನಿಯಮಾನುಸಾರ ಕ್ರಮ ಕೈಗೊಂಡು ಇತ್ಯರ್ಥಪಡಿಸಲು ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್ ಅವರಿಗೆ ಸೂಚಿಸಿದೆ.ಕಳೆದ 25 ವರ್ಷಗಳಿಂದ ಬಳಸುತ್ತಿದ್ದ ಸರಕಾರಿ

ರಸ್ತೆ ಸಮಸ್ಯೆ : ಕ್ರಮ ಕೈಗೊಂಡಿದ್ದರೂ ಮಾಹಿತಿ ನೀಡದ ಕಂದಾಯ ಇಲಾಖೆಯ ಸಾರ್ವಜನಿಕ ಮಾಹಿತಿ ಅಧಿಕಾರಿಗೆ 15 ಸಾವಿರ ರೂ. ದಂಡ Read More »

error: Content is protected !!
Scroll to Top